Author: kannadanewsnow57

ಬ್ರೆಡ್ ಎಂಬುದು ಹೆಚ್ಚಿನ ಜನರು ಒಂದು ಹಂತದಲ್ಲಿ ತಿನ್ನುವ ಆಹಾರವಾಗಿದೆ. ಇದನ್ನು ಹೆಚ್ಚಾಗಿ ಉಪಾಹಾರದಲ್ಲಿ ತಿನ್ನಲಾಗುತ್ತದೆ, ಆದರೆ ಈ ಬ್ರೆಡ್ ಆರೋಗ್ಯಕ್ಕೆ ಅಪಾಯಕಾರಿ ಎಂದು ಸಾಬೀತುಪಡಿಸುತ್ತದೆ. ಇದು ಕ್ಯಾನ್ಸರ್ ಅಪಾಯವನ್ನು ಸಹ ಉಂಟುಮಾಡುತ್ತದೆ. ಬ್ರೆಡ್ ಮಾತ್ರವಲ್ಲ, ವೈನ್ ಮತ್ತು ಸಂಸ್ಕರಿಸಿದ ಮಾಂಸವು ಕ್ಯಾನ್ಸರ್‌ಗೆ ಕಾರಣವಾಗಬಹುದು. ಅವುಗಳನ್ನು ಸೇವಿಸುವುದರಿಂದ ಪ್ರಾಸ್ಟೇಟ್ ಕ್ಯಾನ್ಸರ್‌ನಿಂದ ಸ್ತನ ಕ್ಯಾನ್ಸರ್‌ವರೆಗೆ ಎಲ್ಲದಕ್ಕೂ ಕಾರಣವಾಗಬಹುದು. ಸಿಎನ್‌ಎನ್ ಮತ್ತು ವೈದ್ಯಕೀಯ ಜರ್ನಲ್ ದಿ ಬಿಎಂಜೆಯಲ್ಲಿ ಪ್ರಕಟವಾದ ಎರಡು ಹೊಸ ಫ್ರೆಂಚ್ ಸಂಶೋಧನಾ ಅಧ್ಯಯನಗಳಲ್ಲಿ ಈ ಮಾಹಿತಿಯನ್ನು ಬಹಿರಂಗಪಡಿಸಲಾಗಿದೆ. ಈ ಅಧ್ಯಯನಗಳು 170,000 ಕ್ಕೂ ಹೆಚ್ಚು ಜನರ ಆಹಾರಕ್ರಮವನ್ನು ವಿಶ್ಲೇಷಿಸಿವೆ. ಸಂಶೋಧನೆಯ ನೇತೃತ್ವ ವಹಿಸಿದ್ದ ವಿಜ್ಞಾನಿ ಡಾ. ಮ್ಯಾಥಿಲ್ಡೆ ಟೌವಿಯರ್ ಅವರ ಪ್ರಕಾರ, ಸಂರಕ್ಷಕಗಳು ಮತ್ತು ಕ್ಯಾನ್ಸರ್ ನಡುವಿನ ಸಂಬಂಧವನ್ನು ನೇರವಾಗಿ ಪರೀಕ್ಷಿಸಿದ ವಿಶ್ವದ ಮೊದಲ ಅಧ್ಯಯನ ಇದಾಗಿದೆ. ಬ್ರೆಡ್, ವೈನ್ ಮತ್ತು ಸಂಸ್ಕರಿಸಿದ ಮಾಂಸವು ಕ್ಯಾನ್ಸರ್‌ಗೆ ಕಾರಣವಾಗಬಹುದು ಎಂದು ಸಂಶೋಧನೆ ಸೂಚಿಸುತ್ತದೆ. ಈ ಆಹಾರಗಳನ್ನು ತಾಜಾವಾಗಿಡಲು ಸೇರಿಸಲಾದ ಸಂರಕ್ಷಕಗಳು ಕ್ಯಾನ್ಸರ್ ಕೋಶಗಳ…

Read More

ಶಿವಮೊಗ್ಗ: ಜಿಲ್ಲೆಯಲ್ಲಿ ಹೃದಯಾಘಾತಕ್ಕೆ ಮತ್ತೊಂದು ಬಲಿಯಾಗಿದೆ. ಶಿವಮೊಗ್ಗದ ಪ್ರತಿಷ್ಠಿತ ಕಾಲೇಜೊಂದರಲ್ಲಿ ಇಂಜಿನಿಯರಿಂಗ್ ವ್ಯಾಸಂಗ ಮಾಡುತ್ತಿದ್ದಂತ ವಿದ್ಯಾರ್ಥಿ ಹೃದಯಾಘಾತದಿಂದ ಸಾವನ್ನಪ್ಪಿದ್ದಾನೆ. ಶಿವಮೊಗ್ಗ ನಗರದಲ್ಲಿ ಇಂಜಿನಿಯರಿಂಗ್ ವ್ಯಾಸಂಗ ಮಾಡುತ್ತಿದ್ದಂತ ಬಳ್ಳಾರಿ ಮೂಲದ ವಿದ್ಯಾರ್ಥಿ ಗಣೇಶ್(21) ಹಠಾತ್ ಹೃದಯಾಘಾತದಿಂದ ಸಾವನ್ನಪ್ಪಿದ್ದಾನೆ. ಮೃತ ವಿದ್ಯಾರ್ಥಿ ಶಿವಮೊಗ್ಗದ ಪೆಸಿಟ್ ಕಾಲೇಜಿನಲ್ಲಿ ಕಂಪ್ಯೂಟರ್ ಸೈನ್ಸ್ ವಿಭಾಗದಲ್ಲಿ ಅಂತಿಮ ವರ್ಷದ ಇಂಜಿನಿಯರಿಂಗ್ ವ್ಯಾಸಂಗ ಮಾಡುತ್ತಿದ್ದನು. ಹಾಸ್ಟೆಲ್ ನಲ್ಲಿ ಸ್ನಾನಕ್ಕೆಂದು ತೆರಳಿದಂತ ಸಂದರ್ಭದಲ್ಲಿ ದಿಢೀರ್ ಕುಸಿದು ಬಿದ್ದಿದ್ದನು. ಆತನನ್ನು ಕೂಡಲೇ ಸಹಪಾಠಿಗಳು ಆಸ್ಪತ್ರೆಗೆ ದಾಖಲಿಸಲು ಪ್ರಯತ್ನಿಸಿದರು. ಆದರೇ ದುರಾದೃಷ್ಟವಶಾತ್ ಆಸ್ಪತ್ರೆಗೆ ಸಾಗಿಸೋ ಮಾರ್ಗಮಧ್ಯದಲ್ಲೇ ವಿದ್ಯಾರ್ಥಿ ಗಣೇಶ್ ಸಾವನ್ನಪ್ಪಿದ್ದಾನೆ ಎನ್ನಲಾಗಿದೆ.

Read More

ಬೆಂಗಳೂರು : ದ್ವೇಷಭಾಷಣ ಮತ್ತು ದ್ವೇಷ ಅಪರಾಧಗಳು (ತಡೆಗಟ್ಟುವಿಕೆ) ಮಸೂದೆಗೆ ರಾಜ್ಯಪಾಲ ಥಾವರ್ ಚಂದ್ ಗೆಹ್ಲೊಟ್ ತಡೆ ನೀಡಿದ್ದಾರೆ. ಪ್ರತಿಪಕ್ಷಗಳ ವಿರೋಧದ ನಡುವೆಯೇ ಸರ್ಕಾರ ಕರ್ನಾಟಕ ದ್ವೇಷಭಾಷಣ ಮತ್ತು ದ್ವೇಷ ಅಪರಾಧಗಳು (ತಡೆಗಟ್ಟುವಿಕೆ) ಮಸೂದೆಯನ್ನು ಚಳಿಗಾಲದ ಅಧಿವೇಶನದಲ್ಲಿ ಅಂಗೀಕರಿಸಿ ಲೋಕಭವನಕ್ಕೆ ಕಳುಹಿಸಿತ್ತು. ಬಳಿಕ ಬಿಜೆಪಿ, ಜೆಡಿಎಸ್ ಮುಖಂಡರು, ಸಹಿ ಮಾಡದಂತೆ ರಾಜ್ಯಪಾಲರಿಗೆ ಮನವಿ ಪತ್ರ ಸಲ್ಲಿಸಿದ್ದರು. ಆದ್ದರಿಂದ ರಾಜ್ಯಪಾಲರು ಕೆಲ ಆಕ್ಷೇಪಗಳ ಬಗ್ಗೆ ಸ್ಪಷ್ಟನೆ ನೀಡುವಂತೆ ರಾಜ್ಯ ಸರ್ಕಾರಕ್ಕೆ ಸೂಚನೆ ನೀಡಿದ್ದಾರೆ. ಬೆಳಗಾವಿಯ ವಿಧಾನ ಮಂಡಲದ ಚಳಿಗಾಲದ ಅಧಿವೇಶನದಲ್ಲಿ ದ್ವೇಷ ಭಾಷಣ ತಡೆ ಮಸೂದೆ ಸೇರಿದಂತೆ ಹಲವು ಮಹತ್ವದ ಮಸೂದೆಗಳಿಗೆ ವಿಪಕ್ಷಗಳ ತೀವ್ರ ವಿರೋಧದ ನಡುವೆಯೂ ಅಂಕಿತ ಹಾಕಲಾಗಿತ್ತು. ಈ ಮಸೂದೆಗಳನ್ನು ರಾಜ್ಯಪಾಲರ ಒಪ್ಪಿಗೆಗೆ ಕಳುಹಿಸಲಾಗಿತ್ತು. ಆದರೇ ಇನ್ನೂ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅಂಕಿತ ಹಾಕಿಲ್ಲ. ರಾಜ್ಯಪಾಲರ ಪರಿಶೀಲನೆಯಲ್ಲೇ ದ್ವೇಷ ಭಾಷಣ ತಡೆ ಮಸೂದೆ ಇದೆ. ಇದಲ್ಲದೇ ಎಸ್ಸಿ ಒಳಮೀಸಲಾತಿ ಮಸೂದೆಯನ್ನು ರಾಜ್ಯಪಾಲರು ವಾಪಾಸ್ ಕಳುಹಿಸಿದ್ದಾರೆ. ಮಸೂದೆ ಕುರಿತು ಹೆಚ್ಚಿನ…

Read More

ಬೆಂಗಳೂರು : ಮುಂಬರುವ ಬೇಸಿಗೆಯಲ್ಲಿ ಬೇಡಿಕೆಗೆ ಅನುಸಾರವಾಗಿ ಸಮರ್ಪಕ ವಿದ್ಯುತ್ ಸರಬರಾಜಿಗೆ ಅಗತ್ಯ ಸಿದ್ಧತೆಗಳನ್ನು ಮಾಡಿಕೊಂಡು ಯಾವುದೇ ಕಾರಣಕ್ಕೂ ಲೋಡ್ ಶೆಡ್ಡಿಂಗ್‌ಗೆ ಅವಕಾಶವಾಗದಂತೆ ನೋಡಿಕೊಳ್ಳಬೇಕು ಎಂದು ಇಂಧನ ಸಚಿವ ಕೆ.ಜೆ.ಜಾರ್ಜ್ ಇಂಧನ ಇಲಾಖೆ ಅಧಿಕಾರಿಗಳಿಗೆ ಸೂಚಿಸಿದ್ದಾರೆ. ಬೇಸಿಗೆಯಲ್ಲಿ ಸಮರ್ಪಕ ವಿದ್ಯುತ್ ಪೂರೈಕೆಗೆ ಸಂಬಂಧಿಸಿದಂತೆ ಬೆಸ್ಕಾಂನ ಬೆಳಕು ಭವನದಲ್ಲಿ ಶುಕ್ರವಾರ ಇಲಾಖೆ ಹಿರಿಯ ಅಧಿಕಾರಿಗಳ ಜತೆ ಸಭೆ ನಡೆಸಿದ ಸಚಿವರು, ಇಲಾಖೆ ಕೈಗೊಂಡಿರುವ ಪೂರ್ವ ಸಿದ್ಧತೆಗಳ ಬಗ್ಗೆ ಮಾಹಿತಿ ಪಡೆದರಲ್ಲದೆ, “ಬೇಡಿಕೆ ಮತ್ತು ಪೂರೈಕೆಯಲ್ಲಿ ಸಮನ್ವಯತೆ ಸಾಧಿಸಲು ಅಗತ್ಯವಿರುವ ವಿದ್ಯುತ್ ಉತ್ಪಾದನೆ ಮತ್ತು ಖರೀದಿಗೆ ಕ್ರಮ ಕೈಗೊಳ್ಳಬೇಕು,” ಎಂದು ತಿಳಿಸಿದರು. “ಬೇಸಿಗೆಯಲ್ಲಿ ಅದರಲ್ಲೂ ಮುಖ್ಯವಾಗಿ ಮಾರ್ಚ್‌ನಿಂದ ಮೇ ಅಂತ್ಯದವರೆಗೆ ಮೂರು ತಿಂಗಳಲ್ಲಿ ವಿದ್ಯುತ್ ಬೇಡಿಕೆ ಎಷ್ಟಾಗಬಹುದು ಎಂಬುದನ್ನು ಈಗಲೇ ಲೆಕ್ಕಾಚಾರ ಮಾಡಿ ಅದಕ್ಕೆ ತಕ್ಕಂತೆ ಪೂರೈಸಲು ವಿದ್ಯುತ್ ಬ್ಯಾಂಕಿಂಗ್ ವ್ಯವಸ್ಥೆ ಮಾಡಿಕೊಳ್ಳಬೇಕು. ಹಗಲು ವೇಳೆ ಸೌರ ವಿದ್ಯುತ್ ಹೇರಳವಾಗಿ ಲಭ್ಯವಿರುವುದರಿಂದ ಅದನ್ನು ಬಳಸಿಕೊಂಡು ರಾತ್ರಿ ವೇಳೆ ಜಲ ಮತ್ತು ಕಲ್ಲಿದ್ದಲು ಆಧಾರಿತ ವಿದ್ಯುತ್…

Read More

ಗುಟ್ಕಾ ತಿನ್ನುವವರೇ ಎಚ್ಚರ, ಗುಟ್ಕಾ ಹಾಕುವವರು ಗಂಭೀರ ಕಾಯಿಲೆಗಳಿಗೆ ಬಲಿಯಾಗುತ್ತಾರೆ. ಇದರ ಹೊರತಾಗಿಯೂ, ಗುಟ್ಕಾ ಸೇವಿಸುವ ಮೊದಲು ಅಥವಾ ಅಭ್ಯಾಸವನ್ನು ಬೆಳೆಸಿಕೊಳ್ಳುವ ಮೊದಲು, ಜನರು ಅದರ ಹಾನಿಕಾರಕ ಪರಿಣಾಮಗಳನ್ನು ಮರೆತುಬಿಡುತ್ತಾರೆ. ಮದ್ಯಪಾನ ಅಥವಾ ಸಿಗರೇಟ್ ಸೇದುವುದರಿಂದ ಮಾತ್ರ ಈ ಗಂಭೀರ ಕಾಯಿಲೆಗಳು ಉಂಟಾಗಬಹುದು ಮತ್ತು ಗುಟ್ಕಾ ಅಗಿಯುವುದರಿಂದ ಅಷ್ಟೊಂದು ಹಾನಿಕಾರಕವಲ್ಲ ಎಂದು ಅವರು ಭಾವಿಸುತ್ತಾರೆ. ಆದರೆ ಅಗಿಯುವುದು ಎಷ್ಟು ಅಪಾಯಕಾರಿ ಮತ್ತು ಗುಟ್ಕಾ ತಿನ್ನುವುದರಿಂದ ಯಾವ ಪರಿಣಾಮಗಳು ಉಂಟಾಗಬಹುದು ಎಂಬುದನ್ನು ತಿಳಿಯಿರಿ. ಗುಟ್ಕಾ ತಿನ್ನುವುದರಿಂದಾಗುವ ಹಾನಿಗಳು ಗುಟ್ಕಾ ತಿನ್ನುವುದರಿಂದಾಗುವ ಪರಿಣಾಮಗಳು ರಹಸ್ಯವಲ್ಲ. ಒಬ್ಬ ವ್ಯಕ್ತಿಯು ಯಾವುದೇ ಗುಟ್ಕಾ ಅಗಿಯುವಾಗಲೆಲ್ಲಾ ಅದು ಅವರ ದೇಹಕ್ಕೆ ಎರಡು ರೀತಿಯಲ್ಲಿ ಹಾನಿ ಮಾಡಲು ಪ್ರಾರಂಭಿಸುತ್ತದೆ. ತಕ್ಷಣದ ಹಾನಿಯೆಂದರೆ ಗುಟ್ಕಾದಲ್ಲಿರುವ ನಿಕೋಟಿನ್ ಮಾನವ ದೇಹವನ್ನು ಪ್ರವೇಶಿಸಿದಾಗ, ಅದು ರಕ್ತಪ್ರವಾಹಕ್ಕೆ ಪ್ರವೇಶಿಸಿ ಹೃದಯ ಬಡಿತ ಮತ್ತು ರಕ್ತದೊತ್ತಡವನ್ನು ಹೆಚ್ಚಿಸುತ್ತದೆ. ಗುಟ್ಕಾದಲ್ಲಿರುವ ರಾಸಾಯನಿಕಗಳು ಒಸಡುಗಳು, ನಾಲಿಗೆ ಮತ್ತು ಕೆನ್ನೆಯ ಒಳಭಾಗಕ್ಕೆ ಹೆಚ್ಚು ಆಕ್ರಮಣಕಾರಿಯಾಗಿದ್ದು, ಗಾಯಗಳು ಮತ್ತು ಹುಣ್ಣುಗಳನ್ನು ಉಂಟುಮಾಡುತ್ತವೆ. ದೀರ್ಘಕಾಲೀನ…

Read More

ವಿಜಯಪುರ : ರಾಜ್ಯದಲ್ಲಿ 71 ವೈದ್ಯಕೀಯ ಕಾಲೇಜುಗಳಿದ್ದು ಈ ಪೈಕಿ 22 ಸರ್ಕಾರಿ ವೈದ್ಯಕೀಯ ಕಾಲೇಜುಗಳಿವೆ. ಉಳಿದ ಜಿಲ್ಲೆಗಳಲ್ಲಿಯೂ ಟ್ರಾಮಾ ಸೆಂಟರ್, ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಗಳನ್ನು ಸ್ಥಾಪಿಸಲಾಗುವುದು ಎಂದು ಸಿಎಂ ಸಿದ್ದರಾಮಯ್ಯ ಘೋಷಿಸಿದ್ದಾರೆ. ವಿಜಯಪುರ ಜಿಲ್ಲೆಯಲ್ಲಿ ಇಂದು ನಡೆದ ವಿವಿಧ ಅಭಿವೃದ್ಧಿ ಕಾಮಗಾರಿಗಳ ಉದ್ಘಾಟನೆ ಹಾಗೂ ಶಂಕುಸ್ಥಾಪನೆ ಸಮಾರಂಭದಲ್ಲಿ ಮಾತನಾಡಿದ ಅವರು, ದೇವರಾಜ ಅರಸು ಅವರ 7 ವರ್ಷ 239 ದಿನಗಳ ಸುದೀರ್ಘ ಅವಧಿಗೆ ಮುಖ್ಯಮಂತ್ರಿ ಆಗಿದ್ದ ದಾಖಲೆಯನ್ನು ಮುರಿದು ಕರ್ನಾಟಕದ ದೀರ್ಘಾವಧಿ ಮುಖ್ಯಮಂತ್ರಿ ಎಂಬ ದಾಖಲೆ ಮಾಡಲು ಸಾಧ್ಯವಾಗಿದ್ದು ಜನರ ಆಶೀರ್ವಾದದಿಂದ. ಅದಕ್ಕಾಗಿ ರಾಜ್ಯದ ಜನತೆಗೆ ಕೃತಜ್ಞತೆಗಳನ್ನು ತಿಳಿಸಿದರು. ವಿಜಯಪುರದ ಎಂಟು ವಿಧಾನಸಭಾ ಕ್ಷೇತ್ರಗಳಲ್ಲಿ ಆರು ಕ್ಷೇತ್ರಗಳನ್ನು ಗೆದ್ದಿದ್ದು, ಚುನಾವಣೆಯಲ್ಲಿ 135 ಕ್ಷೇತ್ರಗಳಲ್ಲಿ ಗೆಲ್ಲಬೇಕಾದರೆ ವಿಜಯಪುರ ಜನರ ಆಶೀರ್ವಾದ ಬಹಳ ಮುಖ್ಯ ಪಾತ್ರ ವಹಿಸಿದೆ. 45 ವರ್ಷಗಳಿಂದ ಇಡೀ ರಾಜ್ಯ ಸುತ್ತಾಡಿದ್ದೇನೆ. ವಿಜಯಪುರ ಜಿಲ್ಲೆಯ ಜನ ಆಶೀರ್ವಾದ ನನ್ನ ಮೇಲಿದೆ ಎಂದರು. ವಿಜಯಪುರ ಜಿಲ್ಲೆಯಲ್ಲಿ ₹800 ಕೋಟಿಗೂ ಹೆಚ್ಚು ಮೊತ್ತದ…

Read More

ಕಾರ್ಮಿಕರ ಕಾಯ್ದೆ ಅನ್ವಯ ನೋಂದಣಿಯಾಗಿರುವ ಎಲ್ಲ ಕೈಗಾರಿಕೆಗಳು ಹಾಗೂ ಸಂಸ್ಥೆಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಮಹಿಳಾ ಕಾರ್ಮಿಕರಿಗೆ ಪ್ರತಿ ಮಾಸಿಕ ಋತುಚಕ್ರ ರಜೆಯನ್ನು  ಉದ್ಯೋಗದಾತರು ಒದಗಿಸಬೇಕು. ಕಾರ್ಖಾನೆಗಳ ಕಾಯ್ದೆ-1948, ಕರ್ನಾಟಕ ಅಂಗಡಿ ಮತ್ತು ವಾಣಿಜ್ಯ ಸಂಸ್ಥೆಗಳ ಕಾಯ್ದೆ-1961, ತೋಟ ಕಾರ್ಮಿಕ ಕಾಯ್ದೆ-1951 ಬೀಡಿ ಸಿಗಾರ್ ಕಾರ್ಮಿಕರ ಕಾಯ್ದೆ-1966 ಮತ್ತು ಮೋಟಾರು ಸಾರಿಗೆ ಕಾರ್ಮಿಕರ ಕಾಯ್ದೆ-1961 ರಡಿ ನೋಂದಣಿಯಾಗಿರುವ ಎಲ್ಲಾ ಕೈಗಾರಿಕೆಗಳು ಹಾಗೂ ಸಂಸ್ಥೆಗಳು ಹಾಗೂ ಸಂಸ್ಥೆಗಳಲ್ಲಿ ಕಾರ್ಯನಿರ್ವಹಿಸುತ್ತಿರುವ 18 ರಿಂದ 52 ವರ್ಷದ ವಯೋಮಿತಿಯ ಎಲ್ಲಾ ಖಾಯಂ, ಗುತ್ತಿಗೆ, ಹೊರಗುತ್ತಿಗೆ ಮಹಿಳಾ ಕಾರ್ಮಿಕರಿಗೆ ಅವರ ಋತುಚಕ್ರದ ಸಮಯದಲ್ಲಿ ಪ್ರತಿ ಮಾಸಿಕ ಒಂದು ದಿನದ ರಜೆಯಂತೆ ವಾರ್ಷಿಕ 12 ದಿನಗಳ ವೇತನ ಸಹಿತ ರಜೆಯ ಸೌಲಭ್ಯವನ್ನು ಉದ್ಯೋಗದಾತರು ಒದಗಿಸುವಂತೆ ಸರ್ಕಾರವು ಆದೇಶಿಸಿದೆ. ಮಹಿಳಾ ನೌಕರರು ಆಯಾ ತಿಂಗಳ ಋತುಚಕ್ರ ರಜೆಯನ್ನು ಆಯಾ ತಿಂಗಳಲ್ಲಿಯೇ ಬಳಸಿಕೊಳ್ಳಬೇಕು ಮತ್ತು ಋತುಚಕ್ರ ರಜೆ ಪಡೆಯಲು ಮಹಿಳಾ ನೌಕರರು ಯಾವುದೇ ವೈದ್ಯಕೀಯ ಪ್ರಮಾಣಪತ್ರ ಒದಗಿಸುವ ಅವಶ್ಯಕತೆ ಇರುವುದಿಲ್ಲ ಎಂದು ಜಿಲ್ಲಾ ಕಾರ್ಮಿಕ…

Read More

ನವದೆಹಲಿ : ಭಾರತ ಕೇಂದ್ರ ಸರ್ಕಾರವು ದೇಶದ ಆರ್ಥಿಕವಾಗಿ ದುರ್ಬಲ ಜನರಿಗಾಗಿ ವಿವಿಧ ರೀತಿಯ ಯೋಜನೆಗಳನ್ನು ನಡೆಸುತ್ತಿದೆ, ಈ ಜನರ ಜೀವನವನ್ನು ಉನ್ನತೀಕರಿಸುವುದು ಇದರ ಉದ್ದೇಶವಾಗಿದೆ, ಅಂತಹ ಒಂದು ಯೋಜನೆ ಉಜ್ವಲ ಯೋಜನೆಯಾಗಿದ್ದು, ಇದರ ಅಡಿಯಲ್ಲಿ ಮೋದಿ ಸರ್ಕಾರವು ದೇಶದ ಮಹಿಳೆಯರಿಗೆ ಉಚಿತ ಅನಿಲ ಮತ್ತು ಸಿಲಿಂಡರ್ಗಳನ್ನು ಒದಗಿಸುತ್ತದೆ. ಸರ್ಕಾರವು ಉಜ್ವಲ ಯೋಜನೆ 2.0 ಅನ್ನು ತಂದಿದೆ, ಅದರ ನೋಂದಣಿ ಪ್ರಾರಂಭವಾಗಿದೆ, ಇದರ ಅಡಿಯಲ್ಲಿ ಅರ್ಹ ಕುಟುಂಬಗಳಿಗೆ ಉಚಿತ ದೇಶೀಯ ಅನಿಲ ಸಿಲಿಂಡರ್ಗಳು ಮತ್ತು ಒಲೆಗಳನ್ನು ನೀಡಲಾಗುವುದು. ಹೊಸದಾಗಿ ರೂಪುಗೊಂಡ ಕುಟುಂಬಗಳು: ಈ ಯೋಜನೆಯು ಹೊಸದಾಗಿ ಮದುವೆಯಾದ ಕುಟುಂಬಗಳಿಗೆ ಮತ್ತು ಹೊಸದಾಗಿ ಸೇರಿದ ಕುಟುಂಬಗಳಿಗೆ ವಿಶೇಷವಾಗಿ ಪ್ರಯೋಜನಕಾರಿಯಾಗಿದೆ, ಈ ಕುಟುಂಬಗಳು ಈಗ ಉಜ್ವಲ ಯೋಜನೆ 2.0 ಅಡಿಯಲ್ಲಿ ಉಚಿತ ಗ್ಯಾಸ್ ಸಿಲಿಂಡರ್ ಮತ್ತು ಒಲೆಗಳನ್ನು ಪಡೆಯಲು ನೋಂದಾಯಿಸಿಕೊಳ್ಳಬಹುದು. ಒಂದು ಬಾರಿಯ ಪ್ರಯೋಜನ: ಉಜ್ವಲ ಯೋಜನೆಯ ಲಾಭವನ್ನು ಪ್ರತಿ ಕುಟುಂಬಕ್ಕೆ ಒಮ್ಮೆ ಮಾತ್ರ ಪಡೆಯಬಹುದು. ನಿಮ್ಮ ಕುಟುಂಬದ ಯಾವುದೇ ಸದಸ್ಯರು ಈ ಹಿಂದೆ…

Read More

ಬೆಂಗಳೂರು : ಮಹಾತ್ಮ‌ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆ ಮತ್ತೆ ಜಾರಿಗೆ ತರುವಂತೆ ಒತ್ತಾಯಿಸಿ ನಿರ್ಣಯ ಅಂಗೀಕರಿಸಲು ಶೀಘ್ರವೇ ವಿದಾನ ಮಂಡಲದ ವಿಶೇಷ ಅಧಿವೇಶನ ಕರೆಯಲಾಗುವುದು ಎಂದು ಸಿಎಂ ಸಿದ್ದರಾಮಯ್ಯ ಘೋಷಿಸಿದ್ದಾರೆ. ಮನಮೋಹನ ಸಿಂಗ್ ಅವರು ಪ್ರಧಾನಿ ಆಗಿದ್ದಾಗ ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆ ಜಾರಿಗೆ ತಂದು, ಕೋಟ್ಯಂತರ ಕುಟುಂಬಗಳಿಗೆ ಆರ್ಥಿಕ ಬಲ ನೀಡಿದರು. ಮನರೇಗಾ ಗ್ರಾಮೀಣ ಪ್ರದೇಶದಲ್ಲಿ ಉದ್ಯೋಗ ಸೃಷ್ಟಿಸುವ ಯೋಜನೆ. ದಲಿತರು, ಮಹಿಳೆಯರು, ರೈತರಿಗೆ ಉದ್ಯೋಗ ಒದಗಿಸುವುದು ಯೋಜನೆಯ ಉದ್ದೇಶ. ಇದರಿಂದ ವರ್ಷದಲ್ಲಿ ನೂರು ದಿನ ಕಡ್ಡಾಯವಾಗಿ ಉದ್ಯೋಗ ಸಿಗುತ್ತಿತ್ತು. ಈಗ ಈ ಉದ್ಯೋಗದ ಹಕ್ಕನ್ನೇ ಕಸಿಯುವ ಕೆಲಸಕ್ಕೆ ಕೇಂದ್ರ ಸರ್ಕಾರ ಕೈ ಹಾಕಿದೆ ಎಂದು ಹೇಳಿದ್ದಾರೆ. ಮಹಾತ್ಮ ಗಾಂಧಿಯವರ ಹೆಸರು ತೆಗೆದು ಗೊಂದಲ ಸೃಷ್ಟಿ ಮಾಡುವ ಹುನ್ನಾರ ಇದಾಗಿದೆ. ಈ ಮೂಲಕ ಮತ್ತೆ ಗಾಂಧಿಯವರನ್ನು ಕೊಲೆ ಮಾಡಲಾಗಿದೆ. ಯುಪಿಎ ಜಾರಿಗೆ ತಂದ ಕಾರ್ಯಕ್ರಮವನ್ನು ರದ್ದು ಮಾಡಿ ಉದ್ಯೋಗದ ಹಕ್ಕು ಕಸಿದುಕೊಂಡಿರುವುದು ಸಂವಿಧಾನ…

Read More

ಬೆಂಗಳೂರು: ರಾಜ್ಯದ ಗ್ರಾಮ ಪಂಚಾಯ್ತಿಗಳಲ್ಲಿ ಗ್ರಾಮೀಣ ಜನತೆಗೆ ಅನುಕೂಲ ಕಲ್ಪಿಸುವ ನಿಟ್ಟಿನಲ್ಲಿ ವಿವಿಧ ಸೇವೆಗಳನ್ನು ಒದಗಿಸಲಾಗುತ್ತಿದೆ. ಆ ಮೂಲಕ ಗ್ರಾಮೀಣ ಜನರು ತಾಲ್ಲೂಕು, ಜಿಲ್ಲಾ ಮಟ್ಟಕ್ಕೆ ಅಲೆಯುವುದನ್ನು ಸರ್ಕಾರ ತಪ್ಪಿಸಿದೆ. ಹಾಗಾದ್ರೇ ಸಾರ್ವಜನಿಕರಿಗೆ ಉಪಯುಕ್ತ ಮಾಹಿತಿ ಎನ್ನುವಂತೆ ರಾಜ್ಯದ ಗ್ರಾಮ ಪಂಚಾಯ್ತಿಗಳಲ್ಲಿ ಸಿಗುವಂತ ಸೇವೆಗಳ ಸಂಪೂರ್ಣ ಮಾಹಿತಿ ಮುಂದಿದೆ ಓದಿ ತಿಳಿದುಕೊಳ್ಳಿ. ಬಾಪೂಜಿ ಸೇವಾ ಕೇಂದ್ರ (ಬಿ.ಎಸ್.ಕೆ.)(bsk.karnataka.gov.in) ಗ್ರಾಮೀಣ ಜನತೆಗೆ ತಮ್ಮ ಸಾಮಾಜಿಕ, ಶೈಕ್ಷಣಿಕ, ವಾಣಿಜ್ಯ ಹಾಗೂ ಕೃಷಿ ಚಟುವಟಿಕೆಗಳಗಾಗಿ ವಿವಿಧ ಇಲಾಖೆಗಳಿಂದ ಹಲವಾರು ದಾಖಲೆಗಳು ಬೇಕಾಗುತ್ತವೆ. ಇವುಗಳನ್ನು ತ್ವರಿತವಾಗಿ ಒಂದೇ ಸೂರಿನಡಿ ಪಡೆದುಕೊಳ್ಳಲು ಅನುಕೂಲವಾಗುವಂತೆ ಗ್ರಾಮ ಪಂಚಾಯಿತಿ ಮಟ್ಟದಲ್ಲಿ ಸ್ಥಾಪಿಸಿರುವ ಕೇಂದ್ರವೇ ‘ಬಾಪೂಜಿ ಸೇವಾ ಕೇಂದ್ರ’. ಪಂಚತಂತ್ರ, ನಾಡಕಛೇರಿ ತಂತ್ರಾಂಶ ಹಾಗೂ ಭೂಮಿ ತಂತ್ರಾಂಶಗಳನ್ನು ಸಮ್ಮಿಲನಗೊಳಸಿ ಗ್ರಾಮ ಪಂಚಾಯಿತಿಗಳು ಈ ಸೇವೆಯನ್ನು ನೀಡುತ್ತಿವೆ. ಈಗ ನೀಡುತ್ತಿರುವ 19 ಸೇವೆಗಳ ಜೊತೆಗೆ ಕಂದಾಯ ಇಲಾಖೆಯಿಂದ ಪಹಣಿ ಪತ್ರ ಒಳಗೊಂಡಂತೆ 40 ಸೇವೆಗಳನ್ನು ಒಂದೇ ಸೂರಿನಡಿ ಒದಗಿಸಲಾಗುತ್ತದೆ.ಇದರಿಂದ ಸಾರ್ವಜನಿಕರು ತಮ್ಮ ದಾಖಲೆಗಳಗಾಗಿ ಕಛೇರಿಯಿಂದ…

Read More