Subscribe to Updates
Get the latest creative news from FooBar about art, design and business.
Author: kannadanewsnow57
ಧಾರವಾಡ : ಭೀಕರ ರಸ್ತೆ ಅಪಘಾತದಲ್ಲಿ ಐಎಎಸ್ ಅಧಿಕಾರಿ ಮಹಾಂತೇಶ ಬೀಳಗಿ ಮೃತಪಟ್ಟ ಪ್ರಕರಣ ಮಾಸುವ ಮುನ್ನ ಮತ್ತೊಂದು ದುರಂತ ಸಂಭವಿಸಿದ್ದು, ಕಾರು ಅಪಘಾತದಲ್ಲಿ ಲೋಕಾಯುಕ್ತ ಇನ್ಸ್ ಪೆಕ್ಟರ್ ಸಜೀವ ದಹನವಾಗಿದ್ದಾರೆ. ಧಾರವಾಡ ಜಿಲ್ಲೆ ಅಣ್ಣಿಗೇರಿ ಪಟ್ಟಣದ ಹೊರ ವಲಯದಲ್ಲಿ ಕಾರು ಡಿವೈಡರ್ ಗೆ ಡಿಕ್ಕಿಯಾಗಿ ನಡುರಸ್ತೆಯಲ್ಲಿ ಹೊತ್ತಿ ಉರಿದ ಪರಿಣಾಮ ಲೋಕಾಯುಕ್ತ ಇನ್ಸ್ ಪೆಕ್ಟರ್ ಸಜೀವ ದಹನವಾಗಿದ್ದಾರೆ. ಹಾವೇರಿ ಲೋಕಾಯುಕ್ತ ಇನ್ಸ್ ಪೆಕ್ಟರ್ ಪಂಚಾಕ್ಷರಿ ಸಾಲಿಮಠ ಮೃತಪಟ್ಟವರು. ನಿನ್ನೆ i20 ಕಾರ್ ನಲ್ಲಿ ಗದಗ ಕಡೆಗೆ ಪ್ರಯಾಣಿಸುತ್ತಿದ್ದ ವೇಳೆ ನಿಯಂತ್ರಣ ತಪ್ಪಿ ರಸ್ತೆ ವಿಭಜಕಕ್ಕೆ ಕಾರು ಡಿಕ್ಕಿಯಾಗಿದೆ. ಈ ವೇಳೆ ಬೆಂಕಿ ಹೊತ್ತಿಕೊಂಡಿದೆ. ಕ್ಷಣಾರ್ಧದಲ್ಲಿ ಬೆಂಕಿ ವ್ಯಾಪಿಸಿದ್ದರಿಂದ ಪಂಚಾಕ್ಷರಿ ಅವರಿಗೆ ಕಾರು ಲಾಕ್ ತೆಗೆದು ಹೊರಬರಲು ಸಾಧ್ಯವಾಗಿಲ್ಲ. ಪರಿಣಾಮ ಅವರು ಕಾರಿನೊಳಗೆ ಸುಟ್ಟು ಕರಕಲಾಗಿದ್ದಾರೆ. ಸ್ಥಳಕ್ಕೆ ಅಣ್ಣಿಗೇರಿ ಠಾಣೆ ಪೋಲೀಸರು ಹಾಗೂ ಅಗ್ನಿಶಾಮಕ ದಳ ಸಿಬ್ಬಂದಿ ಸ್ಥಳಕ್ಕೆ ಬಂದು ಬೆಂಕಿ ನಂದಿಸಿದ್ದಾರೆ.
ಹಾಸನ : ಸರ್ಕಾರ ಮಾಡಿರುವ ಉತ್ತಮ ಕೆಲಸಗಳು ಜನರಿಗೆ ಕಾಣಬೇಕು ಈ ನಿಟ್ಟಿನಲ್ಲಿ ಇಂದು ಹಾಸನದಲ್ಲಿ ಹಾಸನ ಜಿಲ್ಲಾಡಳಿತ ಮತ್ತು ಜಿಲ್ಲಾ ಪಂಚಾಯಿತಿ ವತಿಯಿಂದ ಸರ್ಕಾರಿ ಸೇವೆಗಳ ಸಮರ್ಪಣಾ ಸಮಾವೇಶ ಆಯೋಜಿಸಲಾಗಿದೆ. 50 ಸಾವಿರ ಕ್ಕೂ ಹೆಚ್ಚು ಕುಟುಂಬಗಳ ಸಂಭ್ರಮದ ಕ್ಷಣ ಇದಾಗಿದ್ದು, ಕಂದಾಯ ಇಲಾಖೆ ದರಖಾಸ್ತು ಪೋಡಿ, ಪೌತಿಖಾತೆ, ಕಂದಾಯ ಗ್ರಾಮ 94 ಸಿ ಹಕ್ಕು ಪತ್ರಗಳ ವಿತರಣೆ ಮತ್ತು ವಿವಿಧ ಇಲಾಖೆಗಳ ಫಲಾನುಭವಿಗಳಿಗೆ ಸವಲತ್ತು ಸಮರ್ಪಣೆ ನಡೆಯಲಿದೆ. ಕಳೆದ ಒಂದು ವರ್ಷದಲ್ಲಿ ಆದಂತಹ ಕೆಲಸಗಳನ್ನು ಜನರಿಗೆ ಸಮರ್ಪಣೆ ಮಾಡಲಾಗುತ್ತಿದೆ ಎಂದ ಅವರು ಕಂದಾಯ ಇಲಾಖೆ ಗಣನೀಯವಾಗಿ ಪ್ರಗತಿ ಸಾಧಿಸಿದೆ ಎಂದ ಅವರು 14 ವರ್ಷದಲ್ಲಿ 2444 ರೈರಿಗೆ ಪೋಡಿ ದುರಸ್ತು ಮಾಡಿಕೊಂಡಲಾಗಿದೆ ಆದರೆ 2025ರ ಜನವರಿಯಿಂದ ಇಲ್ಲಿಯವರೆಗೆ 21,631 ಜಮೀನುಗಳನ್ನು ಅಳತೆ ಮಾಡಲಾಗಿದೆ ಇದರಲ್ಲಿ 10 ಸಾವಿರ ಆರ್.ಟಿ.ಸಿ ಆಗಿದೆ ಉಳಿದವು ಕೂಡ ಮುಂದಿನ ದಿನಗಳಲ್ಲಿ ಆರ್.ಟಿ,ಸಿ ಮಾಡಲಾಗುವುದು. ಪೌತಿ ಖಾತೆ ಆಂದೋಲನ ವೇದಿಕೆಯ ಕಾರ್ಯಕ್ರಮ 11 ಗಂಟೆಗೆ…
ಬೆಂಗಳೂರು : ನಿವೃತ್ತ ಪೊಲೀಸ್ ಅಧಿಕಾರಿ/ಸಿಬ್ಬಂದಿ ರವರುಗಳಿಗೆ ನಿವೃತ್ತ ಆರೋಗ್ಯ ಯೋಜನೆಯಡಿಯಲ್ಲಿ ಆಸ್ಪತ್ರೆಯನ್ನು ಸೇರ್ಪಡೆಗೊಳಿಸುವ ಬಗ್ಗೆ ರಾಜ್ಯ ಸರ್ಕಾರ ಮಹತ್ವದ ಆದೇಶ ಹೊರಡಿಸಿದೆ. ನಿವೃತ್ತ ಪೊಲೀಸ್ ಅಧಿಕಾರಿ/ಸಿಬ್ಬಂದಿಗಳಿಗೆ ಆರೋಗ್ಯ ಯೋಜನೆಯನ್ನು ಜಾರಿಗೆ ತರಲಾಗಿರುತ್ತದೆ, ನಿವೃತ್ತ ಪೊಲೀಸ್ ಅಧಿಕಾರಿ/ಸಿಬ್ಬಂದಿ ಮತ್ತು ಅವರ ಪತಿ/ಪತ್ನಿ ರವರಿಗೆ ಚಿಕಿತ್ಸೆ ಒದಗಿಸುವ ಸಂಬಂಧ ಈ ಕೆಳಕಂಡ ಆಸ್ಪತ್ರೆಯನ್ನು ನಿವೃತ್ತ ಪೊಲೀಸ್ ಆರೋಗ್ಯ ಯೋಜನೆಯಡಿಯಲ್ಲಿ ಸೇರ್ಪಡೆಗೊಳಿಸಲಾಗಿದೆ. ನಯನ ಸೂಪರ್ ಸ್ಪೆಷಾಲಿಟಿ ಕಣ್ಣಿನ ಆಸ್ಪತ್ರೆ ಮತ್ತು ಸಂಶೋಧನಾ ಕೇಂದ್ರ, ದಾವಣಗೆರೆ. ಆರೋಗ್ಯ ಭಾಗ್ಯ ಯೋಜನೆಯಡಿಯಲ್ಲಿ ಸೇವಾನಿರತ ಪೊಲೀಸ್ ಅಧಿಕಾರಿ/ಸಿಬ್ಬಂದಿ ಮತ್ತು ಅವರ ಅವಲಂಬಿತ ಕುಟುಂಬದವರಿಗೆ ಸಿ.ಜಿ.ಹೆಚ್.ಎಸ್ ದರದಲ್ಲಿ ಚಿಕಿತ್ಸೆ ಒದಗಿಸಲು ಒಪ್ಪಿದ್ದು, ಅದೇ ರೀತಿ ನಿವೃತ್ತ ಪೊಲೀಸ್ ಅಧಿಕಾರಿ/ಸಿಬ್ಬಂದಿ ಮತ್ತು ಅವರ ಪತಿ/ಪತ್ನಿ ರವರಿಗೆ ಚಿಕಿತ್ಸೆ ಒದಗಿಸುವ ಬಗ್ಗೆ ಸಾಮಾನ್ಯ ವೈದ್ಯಕೀಯ ಚಿಕಿತ್ಸೆ ಪ್ರಕ್ರಿಯೆಗೆ ಗರಿಷ್ಠ ಮಿತಿ ಒಂದು ವರ್ಷಕ್ಕೆ ರೂ.1.50 ಲಕ್ಷ, ವಿಶೇಷ ಹಾಗೂ ಸಂಕೀರ್ಣ ಶಸ್ತ್ರ ಚಿಕಿತ್ಸೆಗಳಲ್ಲಿ (ಇಂಪ್ಲಾಂಟ್, ಸ್ಟಂಟ್ ಸೇರಿ) ಹೆಚ್ಚಿನ ರೂ.1.50 ಲಕ್ಷ (ಒಟ್ಟಾಗಿ…
ಕರ್ನಾಟಕ ಅರ್ಹತಾ ಪರೀಕ್ಷೆ 2025ರ ಅರ್ಹತಾ ಪರೀಕ್ಷೆಯು ಡಿಸೆಂಬರ್ 07, 2025 ರಂದು ನಡೆಯಲಿದ್ದು, ಪರೀಕ್ಷೆಯು ಎರಡು ಅವಧಿಯಲ್ಲಿ ನಡೆಯುತ್ತದೆ ಬೆಳಿಗ್ಗೆ 9. 30 ರಿಂದ 12 ಗಂಟೆವರೆಗೆ ಮತ್ತು ಮದ್ಯಾಹ್ನದ 2 ರಿಂದ 4.30 ರ ವರೆಗೆ ಪರೀಕ್ಷೆಯು ನಡೆಯುತ್ತದೆ. ಪರೀಕ್ಷಾ ನಿಯಮಗಳನ್ನು ಕಟ್ಟುನಿಟ್ಟಾಗಿ ಪಾಲಿಸಲು ಸೂಚನೆ ನೀಡಲಾಗಿದೆ. ಶಿಕ್ಷಕರ ಅರ್ಹತಾ ಪರೀಕ್ಷೆಯು ಉದ್ಯೋಗ ಪಡೆಯುದಕ್ಕಾಗಿ ಅರ್ಹತಾ ಪರೀಕ್ಷೆಯಾಗಿದೆ. ಅಭ್ಯರ್ಥಿಗಳು ಪರೀಕ್ಷೆಯಲ್ಲಿ ಯಾವುದೇ ರೀತಿಯ ನಕಲು ಹಾಗೂ ಮೊಬೈಲ್, ಬ್ಲೂಟೂತ್, ಸ್ಮಾರ್ಟ್ ವಾಚ್ ಸೇರಿದಂತೆ ಅತ್ಯಾಧುನಿಕ ತಾಂತ್ರಿಕ ಸಾಧನ ಸಲಕರಣೆಗಳನ್ನು ಪರೀಕ್ಷಾ ಕೊಠಡಿಗೆ ತರದಂತೆ ಮತ್ತು ಬಳಸದಂತೆ ಮುಂಜಾಗೃತೆ ವಹಿಸಬೇಕೆಂದು ತಿಳಿಸಲಾಗಿದೆ. ಪರೀಕ್ಷೆಗಾಗಿ ಸೂಕ್ತ ಭದ್ರಯೆ ಇರುವಂತೆ ಹಾಗೂ ನಿಗಧಿತ ಅವಧಿಗೆ ಪರೀಕ್ಷೆಗಳನ್ನು ಆರಂಭಿಸಿ, ನಿಗಧಿತ ಸಮಯಕ್ಕೆ ಮುಕ್ತಾಯಗೊಳಿಸಬೇಕು. ಅಭ್ಯರ್ಥಿಗಳಿಗೆ ಯಾವುದೇ ರೀತಿಯ ಗೊಂದಲ, ಒತ್ತಡಗಳಾಗದಂತೆ ಪರೀಕ್ಷಾ ಪೂರ್ವದಲ್ಲಿಯೆ ಪರೀಕ್ಷಾ ನಿಯಮಗಳನ್ನು ತಿಳಿಸಬೇಕು. ಪರೀಕ್ಷೆಗಳು ಸುಸೂತ್ರವಾಗಿ ಮತ್ತು ಶಾಂತಿಯುತವಾಗಿ ಜರುಗುವಂತೆ ಅಗತ್ಯ ಕ್ರಮಗಳನ್ನು ಕೈಗೊಳ್ಳಬೇಕೆಂದು ತಿಳಿಸಲಾಗಿದೆ. ಟಿಇಟಿ ಪರೀಕ್ಷೆಗೆ ಹಾಜರಾಗುವಂತ…
ಸಾಮಾನ್ಯವಾಗಿ, ನಾವು ಹೊಸ ಸ್ಮಾರ್ಟ್ಫೋನ್ ಖರೀದಿಸುವಾಗ, ಅದು ಹಲವು ವರ್ಷಗಳ ಕಾಲ ಬಾಳಿಕೆ ಬರುತ್ತದೆ ಎಂದು ನಾವು ಭಾವಿಸುತ್ತೇವೆ. ಆದರೆ ಪ್ರತಿಯೊಂದು ಫೋನ್ಗೂ ಅವಧಿ ಮುಗಿಯುವ ದಿನಾಂಕವಿದೆ ಎಂದು ನಿಮಗೆ ತಿಳಿದಿದೆಯೇ? ಹೌದು, ಯಾವುದೇ ಎಲೆಕ್ಟ್ರಾನಿಕ್ ಸಾಧನಕ್ಕೂ ನಿಗದಿತ ಜೀವಿತಾವಧಿ ಇರುವಂತೆ, ನಿಮ್ಮ ಫೋನ್ಗೂ ಸಹ ಜೀವಿತಾವಧಿ ಇರುತ್ತದೆ. ಒಂದೇ ವ್ಯತ್ಯಾಸವೆಂದರೆ ದಿನಾಂಕವನ್ನು ಪೆಟ್ಟಿಗೆಯ ಮೇಲೆ ಬರೆಯಲಾಗಿಲ್ಲ; ಅದನ್ನು ಅರ್ಥಮಾಡಿಕೊಳ್ಳಲು ಮತ್ತು ಲೆಕ್ಕಾಚಾರ ಮಾಡಲು ಕೆಲವು ಮಾರ್ಗಗಳಿವೆ. ಫೋನ್ನ ಮುಕ್ತಾಯ ದಿನಾಂಕದ ಅರ್ಥವೇನು? ಫೋನ್ನ ಮುಕ್ತಾಯ ದಿನಾಂಕ ಎಂದರೆ ಅದು ಇದ್ದಕ್ಕಿದ್ದಂತೆ ಕೆಲಸ ಮಾಡುವುದನ್ನು ನಿಲ್ಲಿಸುತ್ತದೆ ಎಂದಲ್ಲ. ವಾಸ್ತವವಾಗಿ, ಇದು ನಿಮ್ಮ ಫೋನ್ ಅತ್ಯುತ್ತಮ ಕಾರ್ಯಕ್ಷಮತೆ, ಭದ್ರತಾ ನವೀಕರಣಗಳು ಮತ್ತು ಸಾಫ್ಟ್ವೇರ್ ಬೆಂಬಲವನ್ನು ಒದಗಿಸುವ ಅವಧಿಯನ್ನು ಸೂಚಿಸುತ್ತದೆ. ಇದರ ನಂತರ, ಫೋನ್ ಕ್ರಮೇಣ ನಿಧಾನಗೊಳ್ಳುತ್ತದೆ, ಬ್ಯಾಟರಿ ಬಾಳಿಕೆ ಕಡಿಮೆಯಾಗುತ್ತದೆ ಮತ್ತು ಸಿಸ್ಟಮ್ ಭದ್ರತೆ ದುರ್ಬಲವಾಗುತ್ತದೆ. ಫೋನ್ನ ಸರಾಸರಿ ಜೀವಿತಾವಧಿ ಎಷ್ಟು? ಸ್ಮಾರ್ಟ್ಫೋನ್ಗಳನ್ನು ಸಾಮಾನ್ಯವಾಗಿ 3 ರಿಂದ 5 ವರ್ಷಗಳ ನಡುವೆ ಪರಿಗಣಿಸಲಾಗುತ್ತದೆ.…
30 ವರ್ಷ ಮೇಲ್ಪಟ್ಟವರು ಪ್ರತಿ 6 ತಿಂಗಳಿಗೊಮ್ಮೆ ರಕ್ತದೊತ್ತಡ, ಸಕ್ಕರೆ ಕಾಯಿಲೆ ಪರೀಕ್ಷೆ ಮಾಡಿಸುವ ಮೂಲಕ ಸದೃಢ ಆರೋಗ್ಯ ಹೊಂದಬಹುದು ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಯಲ್ಲಾ ರಮೇಶ್ ಬಾಬು ಅವರು ಹೇಳಿದರು. ಶುಕ್ರವಾರ ಸಂಡೂರು ತಾಲ್ಲೂಕಿನ ವಿಠಲಾಪುರÀ ಮತ್ತು ಮೆಟ್ರಿಕಿ ಪ್ರಾಥಮಿಕ ಆರೋಗ್ಯ ಕೇಂದ್ರಗಳಿಗೆ ಭೇಟಿ ನೀಡಿ ಸಾರ್ವಜನಿಕರೊಂದಿಗೆ ಸಂವಾದ ನಡೆಸಿ ಅವರು ಮಾತನಾಡಿದರು. ಯಾರಿಗಾದರೂ ಬಾಯಿ ಒಣಗಿದಂತೆ ಆಗುವುದು ಅಥವಾ ವಿಪರೀತ ಬಾಯಾರಿಕೆ, ಪದೇ ಪದೇ ಮೂತ್ರ ವಿಸರ್ಜನೆ, ಹಸಿವು ಹೆಚ್ಚಾಗುವುದು, ಮಂದದೃಷ್ಟಿ ಕಾರಣವಿಲ್ಲದೇ ಆಯಾಸ ಕಂಡುಬAದಲ್ಲಿ ತಕ್ಷಣ ವೈದ್ಯರ ಬಳಿ ತೆರಳಿ ಪರಿಕ್ಷೀಸಿಕೊಳ್ಳಬೇಕು. 30 ವರ್ಷ ಮೇಲ್ಪಟ್ಟವರು ಪ್ರತಿ 6 ತಿಂಗಳಿಗೊಮ್ಮೆ ರಕ್ತದೊತ್ತಡ, ಸಕ್ಕರೆ ಕಾಯಿಲೆ ಪರೀಕ್ಷೆ ಮಾಡಿಸುವ ಮೂಲಕ ಸದೃಢ ಆರೋಗ್ಯ ಹೊಂದಬಹುದಾಗಿದೆ ಎಂದು ತಿಳಿಸಿದರು. 30 ರಿಂದ 59 ವರ್ಷ ಹೆಚ್ಚಿನ ಸಾವುಗಳಿಗೆ ಅಸಾಂಕ್ರಾಮಿಕ ರೋಗಗಳೇ ಕಾರಣವಾಗಿವೆ. 2026 ರ ಹೊತ್ತಿಗೆ ದೇಶದಲ್ಲಿ 75 ಮಿಲಿಯನ್ ಮಧುಮೇಹಿಗಳು ಕಂಡುಬರುವ ಸಾಧ್ಯತೆಯಿದ್ದು, ಇದರಿಂದ…
ಶಿವಮೊಗ್ಗ : ಅತಿವೃಷ್ಟಿ, ಅನಾವೃಷ್ಟಿ, ತಾಪಮಾನದ ಏರಿಳಿತದಂತಹ ಹವಾಮಾನ ವೈಪರಿತ್ಯಗಳಿಂದ ತೋಟಗಾರಿಕೆ ಬೆಳೆಗಾರರಿಗೆ ಉಂಟಾಗುವ ಬೆಳೆ ನಷ್ಟಕ್ಕೆ ಆರ್ಥಿಕ ಭದ್ರತೆ ನೀಡುವ ಹವಾಮಾನಾಧಾರಿತ ಬೆಳೆ ವಿಮಾ ಯೋಜನೆಯಡಿ ವಿವಿಧ ಕಾರಣಗಳಿಂದಾಗಿ ಸಂತ್ರಸ್ಥರಿಗೆ ಪರಿಹಾರ ಧನ ನೀಡುವಲ್ಲಿ ನ್ಯೂನತೆಗಳುಂಟಾಗಿರುವುದು ಗಮನಕ್ಕೆ ಬಂದಿದ್ದು, ಅದನ್ನು ಸರಿಪಡಿಸುವ ನಿಟ್ಟಿನಲ್ಲಿ ಸಂಬಂಧಿಸಿದ ಇಲಾಖಾ ಅಧಿಕಾರಿಗಳಿಂದ ವರದಿ ಪಡೆದು ತ್ವರಿತ ಕ್ರಮ ಕೈಗೊಳ್ಳಲಾಗುವುದು ಎಂದು ರಾಜ್ಯ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎಸ್. ಮಧು ಬಂಗಾರಪ್ಪ ಅವರು ಹೇಳಿದರು. ಅವರು ಇಂದು ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ತೋಟಗಾರಿಕೆ ಮತ್ತು ಕೃಷಿ ಇಲಾಖೆಯ ಅಧಿಕಾರಿಗಳೊಂದಿಗೆ ಸಮಾಲೋಚನೆ ನಡೆಸಿದ ನಂತರ ಮಾಧ್ಯಮ ಪ್ರತಿನಿಧಿಗಳಿಗೆ ಮಾಹಿತಿ ನೀಡಿ, ಮಳೆಮಾಪಕ ಕೇಂದ್ರಗಳ ಮೂಲಕ ಸಂಗ್ರಹಿಸಿದ ಹವಾಮಾನ ದತ್ತಾಂಶಗಳನ್ನು ಆಧರಿಸಿ ವಿಮಾ ಪರಿಹಾರವನ್ನು ಲೆಕ್ಕಾಚಾರ ಮಾಡಲಾಗುತ್ತದೆ. ಆದರೆ, ಜಿಲ್ಲೆಯಲ್ಲಿರುವ 280ಮಳೆ ಮಾಪನ ಕೇಂದ್ರಗಳಲ್ಲಿ ಕೆಲವು ದುರಸ್ತಿಯಲ್ಲಿದ್ದು, ಸರಿಯಾದ ಮಳೆಮಾಪನ ವರದಿ ಹಾಗೂ ದತ್ತಾಂಶ ದೊರೆಯದಿರುವ ಪ್ರದೇಶಗಳಲ್ಲಿನ ರೈತರ ಬೆಳೆಹಾನಿಯ…
ನವದೆಹಲಿ : ರಷ್ಯಾ ನಾಗರಿಕರಿಗೆ 30 ದಿನ ಉಚಿತ ಟೂರಿಸಂ ವೀಸಾ ನೀಡಲು ನಿರ್ಧಾರಿಸಲಾಗಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ. ಭಾರತ-ರಷ್ಯಾ ಪಾಲುದಾರಿಕೆಯ ಬಲವಾದ ಮತ್ತು ಪ್ರಮುಖ ಆಧಾರಸ್ತಂಭವೆಂದರೆ ಇಂಧನ ಭದ್ರತೆ. ನಾಗರಿಕ ಪರಮಾಣು ಇಂಧನದಲ್ಲಿ ನಮ್ಮ ದಶಕಗಳಷ್ಟು ಹಳೆಯದಾದ ಸಹಕಾರವು ನಮ್ಮ ಹಂಚಿಕೆಯ ಶುದ್ಧ ಇಂಧನ ಆದ್ಯತೆಗಳನ್ನು ಅರಿತುಕೊಳ್ಳುವಲ್ಲಿ ನಿರ್ಣಾಯಕವಾಗಿದೆ. ನಾವು ಈ ಗೆಲುವು-ಗೆಲುವಿನ ಸಹಕಾರವನ್ನು ಮುಂದುವರಿಸುತ್ತೇವೆ. ಪ್ರಪಂಚದಾದ್ಯಂತ ಸುರಕ್ಷಿತ ಮತ್ತು ವೈವಿಧ್ಯಮಯ ಪೂರೈಕೆ ಸರಪಳಿಗಳನ್ನು ಖಚಿತಪಡಿಸಿಕೊಳ್ಳಲು ನಿರ್ಣಾಯಕ ಖನಿಜಗಳಲ್ಲಿನ ನಮ್ಮ ಸಹಕಾರವು ನಿರ್ಣಾಯಕವಾಗಿದೆ. ಇದು ಶುದ್ಧ ಇಂಧನ, ಹೈಟೆಕ್ ಉತ್ಪಾದನೆ ಮತ್ತು ನವಯುಗದ ಕೈಗಾರಿಕೆಗಳಲ್ಲಿ ನಮ್ಮ ಪಾಲುದಾರಿಕೆಗೆ ಬಲವಾದ ಬೆಂಬಲವನ್ನು ನೀಡುತ್ತದೆ” ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ. ಹಡಗು ನಿರ್ಮಾಣದಲ್ಲಿ ನಮ್ಮ ಆಳವಾದ ಸಹಕಾರವು ಮೇಕ್ ಇನ್ ಇಂಡಿಯಾವನ್ನು ಬಲಪಡಿಸುವ ಸಾಮರ್ಥ್ಯವನ್ನು ಹೊಂದಿದೆ. ಇದು ನಮ್ಮ ಗೆಲುವು-ಗೆಲುವಿನ ಸಹಕಾರದ ಮತ್ತೊಂದು ಅತ್ಯುತ್ತಮ ಉದಾಹರಣೆಯಾಗಿದೆ, ಇದು ಉದ್ಯೋಗಗಳು, ಕೌಶಲ್ಯಗಳು ಮತ್ತು ಪ್ರಾದೇಶಿಕ ಸಂಪರ್ಕವನ್ನು ಹೆಚ್ಚಿಸುತ್ತದೆ.” ಕಳೆದ 8…
ಬೆಂಗಳೂರು : ಇಡೀ ದಿನ ರಸ್ತೆಯ ಮೇಲೆ ಕರ್ತವ್ಯ ನಿರ್ವಹಿಸುವ ಸಂಚಾರಿ ಪೊಲೀಸರು ಶೌಚಾಲಯಕ್ಕೆ ಹೋಗಲು ತೀವ್ರ ಪರದಾಟ ಅನುಭವಿಸುವುದು ಎಲ್ಲರಿಗೂ ತಿಳಿಸಿದೆ. ಎಲ್ಲೆಡೆ ಸಾರ್ವಜನಿಕ ಶೌಚಾಲಯಗಳು ಲಭ್ಯವಿಲ್ಲದೆ ಇರುವುದರಿಂದ ಮಹಿಳಾ ಟ್ರಾಫಿಕ್ ಪೊಲೀಸರಂತೂ ಬಹಳ ಕಷ್ಟ ಅನುಭವಿಸುತ್ತಾರೆ. ಇದಕ್ಕೆ ಪರಿಹಾರವೆಂಬಂತೆ ಬೆಂಗಳೂರಿನಲ್ಲಿ ಸಂಚಾರಿ ಪೊಲೀಸರಿಗೆ ಇನ್ನುಮುಂದೆ ‘ಹೈಜೀನ್ ಆನ್ ಗೋ’ ಹೆಸರಿನ ಮೊಬೈಲ್ ಟಾಯ್ಲೆಟ್ಗಳು ನೈಸರ್ಗಿಕ ಬಾಧೆ ಪೂರೈಸಿಕೊಳ್ಳಲು ಲಭ್ಯವಾಗಲಿವೆ. ರೆನಾಲ್ಟ್ ನಿಸಾನ್ ಟೆಕ್ನಾಲಜಿ ಅಂಡ್ ಬಿಸಿನೆಸ್ ಸೆಂಟರ್ ಇಂಡಿಯಾ ಪ್ರೈ.ಲಿ. (ಆರ್ಎನ್ಟಿಬಿಸಿಐ) ಕಂಪನಿಯ ಕಾರ್ಪೊರೇಟ್ ಸಾಮಾಜಿಕ ಹೊಣೆಗಾರಿಕೆ (ಸಿಎಸ್ಆರ್) ಹಣಕಾಸಿನ ನೆರವಿನಡಿ ಹ್ಯಾಂಡ್ ಇನ್ ಹ್ಯಾಂಡ್ ಇಂಡಿಯಾ ಸಂಸ್ಥೆಯು ಸಂಚಾರಿ ಶೌಚಾಲಯಗಳನ್ನು ರೂಪಿಸಿದ್ದು, ಅವುಗಳಿಗೆ ಗೃಹ ಸಚಿವ ಡಾ.ಜಿ.ಪರಮೇಶ್ವರ್ ಶುಕ್ರವಾರ ಚಾಲನೆ ನೀಡಿದರು. ರಾಜ್ಯ ಪೊಲೀಸ್ ಮಹಾನಿರ್ದೇಶಕರ ಕಚೇರಿಯಲ್ಲಿ ನಡೆದ ಸಮಾರಂಭದಲ್ಲಿ ಆರಂಭಿಕವಾಗಿ ಮೂರು ‘ಹೈಜೀನ್ ಆನ್ ಗೋ’ ವಾಹನಗಳನ್ನು ಡಾ.ಪರಮೇಶ್ವರ್ ಅವರು ಉದ್ಘಾಟಿಸಿದರು. ಕರ್ನಾಟಕದ ಪೊಲೀಸ್ ಮಹಾನಿರ್ದೇಶಕ (ಡಿಜಿಪಿ) ಡಾ.ಎಂ.ಎ.ಸಲೀಂ, ಬೆಂಗಳೂರು ನಗರ ಪೊಲೀಸ್ ಆಯುಕ್ತ ಶ್ರೀ…
ದಾವಣಗೆರೆ: ರಾಜ್ಯದಲ್ಲಿ ನಾಯಿ ದಾಳಿಗೆ ಮತ್ತೊಂದು ಬಲಿಯಾಗಿದ್ದು, ದಾವಣಗೆರೆಯಲ್ಲಿ ರಾಟ್ ವೀಲರ್ ನಾಯಿ ಕಚ್ಚಿ ಮಹಿಳೆಯೊಬ್ಬರು ಸಾವನ್ನಪ್ಪಿರುವ ದಾರುಣ ಘಟನೆ ನಡೆದಿದೆ. ದಾವಣಗೆರೆ ಜಿಲ್ಲೆಯ ಹೊನ್ನೂರು ಗೊಲ್ಲರಹಟ್ಟಿ ಗ್ರಾಮದಲ್ಲಿ ರಾಟ್ ವೀಲರ್ ನಾಯಿಗಳ ದಾಳಿಯಿಂದ ಮಹಿಳೆಯೊಬ್ಬರು ಸಾವನ್ನಪ್ಪಿದ್ದಾರೆ. ಅನಿತಾ (38) ಮೃತ ಮಹಿಳೆ. ತಡರಾತ್ರಿ ಜಮೀನಿನಲ್ಲಿ ಮಾಲೀಕ ರಾಟ್ ವೀಲರ್ ನಾಯಿಗಳನ್ನು ಬಿಟ್ಟಿದ್ದರು. ರಸ್ತೆಯಲ್ಲಿ ನಡೆದು ಹೋಗುತ್ತಿದ್ದ ಮಹಿಳೆ ಮೇಲೆ ರಾಟ್ ವೀಲರ್ ನಾಯಿಗಳು ದಾಳಿ ನಡೆಸಿವೆ. ಗಂಭೀರವಾಗಿ ಗಾಯಗೊಂಡಿದ್ದ ಮಹಿಳೆಯನ್ನು ಆಸ್ಪತ್ರೆಗೆ ಕರೆದೊಯ್ಯಲಾಗಿತ್ತು. ಆದರೆ ಮಾರ್ಗ ಮಧ್ಯೆಯೇ ಅನಿತಾ ಸಾವನ್ನಪ್ಪಿದ್ದಾರೆ.














