Author: kannadanewsnow57

ಬೆಂಗಳೂರು : ಬಹುಕಾಲದಿಂದ ತಾಂಡ, ಹಟ್ಟಿ ಗೊಲ್ಲರಹಟ್ಟಿಗಳಲ್ಲಿ ವಾಸ ಮಾಡುತ್ತಿದ್ದ ನಿವಾಸಿಗಳಿಗೆ ದಾಖಲೆ ಇಲ್ಲದೆ ನೆಮ್ಮದಿಯ ಜೀವನ ಅಸಾಧ್ಯವಾಗಿತ್ತು. ಇಂತಹವರಿಗೆ ಹಕ್ಕುಪತ್ರ ಮತ್ತು ದಾಖಲೆಯನ್ನು ಒದಗಿಸಿಕೊಡಲು ಕರ್ನಾಟಕ ಭೂ ಸುಧಾರಣಾ ಕಾಯ್ದೆಗೆ 2017ರಲ್ಲಿ ಕಾನೂನು ತಿದ್ದುಪಡಿ ಮಾಡಲಾಗಿದೆ. ಇದರ ಮುಖಾಂತರ ಕಾಲಾನುಕಾಲದಿಂದ ಅತಂತ್ರದಲ್ಲಿ ಬದುಕುತ್ತಿದ್ದ ಕುಟುಂಬಗಳ ಸೂರಿಗೆ ದಾಖಲೆಗಳ ಗ್ಯಾರಂಟಿ ನೀಡುವ ಕೆಲಸ ಪ್ರಗತಿಯಲ್ಲಿದೆ. ಈ ಕಾನೂನು 2017ರಲ್ಲಿ ತಿದ್ದುಪಡಿ ಆದ ನಂತರ 2023ರ ಮೇ ವರೆಗೆ 6 ವರ್ಷಗಳಲ್ಲಿ 1.08 ಲಕ್ಷ ನಿವಾಸಿಗಳಿಗೆ ಹಕ್ಕುಪತ್ರಗಳನ್ನು ನೀಡಲಾಗಿತ್ತು. ಮೇ 2023 ರಿಂದ 2025ರವರೆಗೆ 1.11 ಲಕ್ಷ ಹಕ್ಕುಪತ್ರಗಳನ್ನು ನೀಡಲಾಗಿದೆ. ಮೇ 2025ರ ನಂತರ 1.10 ಲಕ್ಷ ಹಕ್ಕುಪತ್ರಗಳನ್ನು ನೀಡುವ ಪ್ರಕ್ರಿಯೆ ಕೂಡಲೇ ಪೂರ್ಣಗೊಳಿಸಿ, 2026ರ ಫೆಬ್ರವರಿ ತಿಂಗಳ ಒಳಗಾಗಿ 1.10 ಲಕ್ಷ ಕುಟುಂಬಗಳಿಗೆ ಹಕ್ಕುಪತ್ರ ನೀಡಲು ಸರ್ಕಾರ ತೀರ್ಮಾನಿಸಿದೆ. ದಶಕಗಳ ಸಮಸ್ಯೆಗೆ ಪರಿಹಾರ ನೀಡುವ ಕಾರ್ಯ ಕಂದಾಯ ಗ್ರಾಮ ರಚನೆ ಅಭಿಯಾನದ ಮುಖಾಂತರ ನಡೆಯುತ್ತಿದೆ. ದಾಖಲೆ ರಹಿತ ವಸತಿ ಪ್ರದೇಶ ಮತ್ತು…

Read More

ಸರಕಾರವು ಮನೆಯಲ್ಲಿಯೇ ಅತಿ ಸರಳವಾಗಿ ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಿ, ನಿಗದಿತ ಕಾಲಾವಧಿಯಲ್ಲಿ ಇ-ಖಾತಾ ಸೇವೆಯನ್ನು ಪಡೆಯಲು ತಂತ್ರಾಂಶ ರೂಪಿಸಿದ್ದು, ಅದರಂತೆ ಆಸ್ತಿ ಕಣಜದಲ್ಲಿನ ಮಾಹಿತಿ ಆಧಾರದ ಮೇಲೆ ಕರಡು ಇ-ಖಾತಾವನ್ನು ಪ್ರಕಟಿಸಲಾಗಿರುತ್ತದೆ. ಸಾರ್ವಜನಿಕರು ಈ ಮಾಹಿತಿಯನ್ನು ನೇರವಾಗಿ ವೀಕ್ಷಿಸಬಹುದಾಗಿದೆ.  ಮಾಹಿತಿಗಳ ಬಗ್ಗೆ ತಕರಾರು ಇದ್ದಲ್ಲಿ ಸಾರ್ವಜನಿಕರು ಇ-ಆಸ್ತಿ ತಂತ್ರಾಂಶದಲ್ಲಿನ ಹೆಚ್ಚಿನ ಮಾಹಿತಿಯನ್ನು ನೇರವಾಗಿ ನಮೂದಿಸಬಹುದಾಗಿದೆ. ನಮೂದಿಸಿದ ಮಾಹಿತಿಯ ನಿಖರತೆಯನ್ನು ನಗರಸಭೆಯು ಪರಿಶೀಲಿಸಿ ಅನುಮೋದಿಸಲಾಗುವುದು. ಅಂತಿಮ ಇ-ಖಾತಾವನ್ನು ಸಾರ್ವಜನಿಕರು ತಮ್ಮ ಮನೆಗಳಲ್ಲಿ ಕುಳಿತು ಪಡೆಯಬಹುದಾಗಿದೆ.  ಈ-ಖಾತಾ ಪಡೆಯಲು ಮಾಲೀಕರ ಭಾವಚಿತ್ರ , ಆಸ್ತಿ ತೆರಿಗೆ ಹಾಗೂ ನೀರಿನ ಕರದ ಚಲನ್, ಸ್ವತ್ತಿನ ದಾಖಲೆಗಳು ಕ್ರಯಪತ್ರ, ದಾನಪತ್ರ, ಹಕ್ಕು ಬಿಡುಗಡೆ ಪತ್ರ, ವಾರಸಾ ಪ್ರಮಾಣ ಪತ್ರ, ವಿದ್ಯುತ್ ಆರ್.ಆರ್. ನಂಬರ್, ಸ್ವತ್ತಿನ ಛಾಯಾಚಿತ್ರ, ಋಣಭಾರ ನಮೂನೆ-15/16 (ಇಆ), ಆಧಾರ್ ಕಾರ್ಡ ಪ್ರತಿ, ಪಹಣಿ ಪತ್ರಿಕೆ, ಮ್ಯುಟೇಶನ ಪ್ರತಿ, ಸರ್ವೆ ನಕ್ಷೆ ಹಾಗೂ ಸ್ವತ್ತಿಗೆ ಸಂಬಂಧಿಸಿದ ಇತರೆ ಪೂರಕ ಅಗತ್ಯ ದಾಖಲೆಗಳನ್ನು ಸಲ್ಲಿಸಬೇಕು. ಕರ್ನಾಟಕ-1 ಕೇಂದ್ರಗಳಲ್ಲಿ…

Read More

ರೂ. 250 ಬಜೆಟ್, 100GB ಡೇಟಾ, BiTV ಮೂಲಕ ಟಿವಿ ಚಾನೆಲ್ಗಳು, OTT ಸೇವೆಗಳು, ಉಚಿತ ಧ್ವನಿ ಕರೆಗಳು ಮತ್ತು SMS.. ಈ ಎಲ್ಲಾ ಪ್ರಯೋಜನಗಳನ್ನು ನೀವು ಒಂದೇ ಪ್ಯಾಕೇಜ್ನಲ್ಲಿ ಪಡೆದರೆ, ದುಬಾರಿ ಕೇಬಲ್ ಟಿವಿ ಸಂಪರ್ಕ ಅಥವಾ ದುಬಾರಿ ಪ್ರಿಪೇಯ್ಡ್ ರೀಚಾರ್ಜ್ಗಳು ಯಾರಿಗೆ ಬೇಕು? ಸರ್ಕಾರಿ ಸ್ವಾಮ್ಯದ ಟೆಲಿಕಾಂ ಕಂಪನಿ BSNL ನಿಖರವಾಗಿ ಈ ಪ್ರಯೋಜನಗಳೊಂದಿಗೆ ಅದ್ಭುತ ಯೋಜನೆಯನ್ನು ತಂದಿದೆ. BSNL ರೂ. 251 ಯೋಜನೆಯ ವಿವರಗಳು ಭಾರತ್ ಸಂಚಾರ್ ನಿಗಮ್ ಲಿಮಿಟೆಡ್ (BSNL) ತನ್ನ ಗ್ರಾಹಕರಿಗೆ ಕೇವಲ ರೂ. 251 ಕ್ಕೆ ಹೊಸ ಪ್ರಿಪೇಯ್ಡ್ ಯೋಜನೆಯನ್ನು ಮತ್ತೆ ಪರಿಚಯಿಸಿದೆ. ಇದು ಮೊದಲು ಅದೇ ಬೆಲೆಯಲ್ಲಿ ವಿಭಿನ್ನ ಪ್ರಯೋಜನಗಳನ್ನು ಹೊಂದಿದ್ದರೂ, ಅದು ಈಗ ಅದನ್ನು ಹೆಚ್ಚು ಆಕರ್ಷಕವಾಗಿಸಿದೆ. ಈ ಯೋಜನೆಯ ಮೂಲಕ ಲಭ್ಯವಿರುವ ಪ್ರಯೋಜನಗಳು: ಡೇಟಾ: 100GB ಹೈ-ಸ್ಪೀಡ್ ಡೇಟಾ ಲಭ್ಯವಿದೆ. ಮನರಂಜನೆ (BiTV): BSNL ನ ಸ್ವಂತ OTT ಪ್ಲಾಟ್ಫಾರ್ಮ್ BiTV ಗೆ ಪ್ರವೇಶ. ಇದರ ಮೂಲಕ, ನೀವು…

Read More

ಬೆಂಗಳೂರು : ರಾಜ್ಯ ಸರ್ಕಾರವು ಕೆಲವು ಇಲಾಖೆಗಳ ಟ್ಯಾಕ್ಸ್ ಡಿಡಕ್ಷೆಡ್ ಅಟ್ ಸೋರ್ಸ್ (TDS) ಪಾವತಿ ಬಗ್ಗೆ ರಾಜ್ಯ ಸರ್ಕಾರವು ಮಹತ್ವದ ಆದೇಶ ಹೊರಡಿಸಿದೆ. ಸರ್ಕಾರದ ಕೆಲವು ಇಲಾಖೆಗಳಲ್ಲಿ ಟ್ಯಾಕ್ಸ್ ಡಿಡಕ್ಷೆಡ್ ಅಟ್ ಸೋರ್ಸ್ (TDS) ಮೊತ್ತವನ್ನು ಆದಾಯ ತೆರಿಗೆ ಇಲಾಖೆಗೆ ವಿಳಂಬವಾಗಿ ಪಾವತಿಸುತ್ತಿರುವುದು ಸರ್ಕಾರದ ಗಮನಕ್ಕೆ ಬಂದಿರುತ್ತದೆ. ಇಂತಹುದೆ ಪ್ರಕರಣವಾದ ಆಹಾರ, ನಾಗರೀಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆಯ ಮುಖ್ಯ ಲೆಕ್ಕಾಧಿಕಾರಿಗಳ ಕಛೇರಿಯಲ್ಲಿ 2010-11ರವರೆಗಿನ ಅವಧಿಯಲ್ಲಿ ಟ್ಯಾಕ್ಸ್ ಡಿಡಕ್ಷೆಡ್ ಅಟ್ ಸೋರ್ಸ್ (TDS) ಮೊತ್ತವನ್ನು ಆದಾಯ ತೆರಿಗೆ ಇಲಾಖೆಗೆ ಪಾವತಿಸಿ ಫೈಲ್ ಮಾಡಲು ವಿಳಂಬಿಸಿದ್ದರಿಂದ ಸರ್ಕಾರಕ್ಕೆ ಆರ್ಥಿಕ ನಷ್ಟ ಉಂಟಾಗಿದ್ದು, ಈ ವಿಷಯವನ್ನು ಸಾರ್ವಜನಿಕ ಲೆಕ್ಕಪತ್ರ ಸಮಿತಿಯು ಗಂಭೀರವಾಗಿ ಪರಿಗಣಿಸಿರುತ್ತದೆ. ಆದ್ದರಿಂದ, ಕರ್ನಾಟಕ ರಾಜ್ಯ ಲೆಕ್ಕಪರಿಶೋಧನೆ ಮತ್ತು ಲೆಕ್ಕಪತ್ರ ಇಲಾಖೆಯ ಅಧಿಕಾರಿ /ಸಿಬ್ಬಂದಿಗಳು ಇನ್ನು ಮುಂದೆ ಇಂತಹ ಸನ್ನಿವೇಶಗಳಿಗೆ ಆಸ್ಪದೇ ನೀಡದೇ, ಟ್ಯಾಕ್ಸ್ ಡಿಡಕ್ಷೆಡ್ ಅಟ್ ಸೋರ್ಸ್ (TDS) ಮೊತ್ತವನ್ನು ಆದಾಯ ತೆರಿಗೆ ಇಲಾಖೆಗೆ ಸಕಾಲದಲ್ಲಿ ಪಾವತಿಸಲು ಕ್ರಮವಹಿಸತಕ್ಕದ್ದು.…

Read More

ಬೆಂಗಳೂರು : ರಾಜ್ಯ ಸರ್ಕಾರವು ಸರ್ಕಾರಿ ಪ್ರಾಥಮಿಕ ಶಾಲೆಗಳ ಶಿಕ್ಷಕರಿಗೆ ಸಿಹಿಸುದ್ದಿ ನೀಡಿದ್ದು, ಜೇಷ್ಠತಾ ಪಟ್ಟಿಗೆ ಅನುಗುಣವಾಗಿ ಖಾಲಿ ಇರುವ ಹಿರಿಯ ಮುಖ್ಯ ಶಿಕ್ಷಕರ ಹುದ್ದೆಗಳಿಗೆ ಬಡ್ತಿ ನೀಡಲು ರಾಜ್ಯಾದ್ಯಂತ ಏಕಕಾಲಕ್ಕೆ ಕೌನ್ಸಿಲಿಂಗ್ ನಡೆಸಲು ಮಹತ್ವದ ಆದೇಶ ಹೊರಡಿಸಲಾಗಿದೆ.  ಹೌದು, ಸರ್ಕಾರಿ ಪ್ರಾಥಮಿಕ ಶಾಲಾ ಮುಖ್ಯ ಶಿಕ್ಷಕರಿಗೆ ಹಿರಿಯ ಮುಖ್ಯ ಶಿಕ್ಷಕರಾಗಿ ಬಡ್ತಿ ನೀಡುವ ಪ್ರಕ್ರಿಯೆಯನ್ನು ಜನವರಿ 1ರಿಂದ ಆರಂಭಿಸಲು ಶಿಕ್ಷಣ ಇಲಾಖೆ ಮುಂದಾಗಿದೆ. ಮುಖ್ಯ ಶಿಕ್ಷಕರ ಜೇಷ್ಠತಾ ಪಟ್ಟಿಯನ್ನು ಪ್ರಕಟಿಸಿದ ಬಳಿಕ ವಿವಿಧ ಹಂತದ ಪ್ರಕ್ರಿಯೆ ಪೂರ್ಣಗೊಳಿಸಿ ಕೌನ್ಸೆಲಿಂಗ್ ಮೂಲಕ ಬಡ್ತಿ ನೀಡಿ ಸ್ಥಳ ನಿಯೋಜನೆ ಮಾಡಲಾಗುವುದು. ರಾಜ್ಯದ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ನಿರಂತರ ಪ್ರಯತ್ನದ ಫಲವಾಗಿ ಮೂರು ವರ್ಷಗಳಿಂದ ನನೆಗುದಿಗೆ ಬಿದ್ದಿದ್ದ ಪ್ರಕ್ರಿಯೆಗೆ ಮರು ಚಾಲನೆ ನೀಡಲು ಶಾಲಾ ಶಿಕ್ಷಣ ಇಲಾಖೆ ನಿರ್ಧರಿಸಿದ್ದು, ಸುಮಾರು 2000ಕ್ಕೂ ಹೆಚ್ಚು ಮುಖ್ಯ ಶಿಕ್ಷಕರಿಗೆ ಬಡ್ತಿ ಭಾಗ್ಯ ಸಿಗುವ ಸಾಧ್ಯತೆ ಇದೆ. ಜ. 31ರೊಳಗೆ ಎಲ್ಲಾ ಪ್ರಕ್ರಿಯೆ ಪೂರ್ಣಗೊಳಿಸಲಾಗುವುದು ಎಂದು ಶಾಲಾ…

Read More

ಕಡಿಮೆ ಮೈಲೇಜ್ ಹೊಂದಿರುವ ಕಾರು ದೊಡ್ಡ ಸಮಸ್ಯೆಯನ್ನು ಸೂಚಿಸುತ್ತದೆ ಎಂದು ಜನರು ಸಾಮಾನ್ಯವಾಗಿ ಭಾವಿಸುತ್ತಾರೆ. ಆದರೆ ಅದು ಯಾವಾಗಲೂ ಹಾಗಲ್ಲ. ಕೆಲವೊಮ್ಮೆ, ಸಣ್ಣ ತಪ್ಪುಗಳು ಅಥವಾ ಪ್ರಮುಖ ವಿಷಯಗಳನ್ನು ನಿರ್ಲಕ್ಷಿಸುವುದರಿಂದ ಕಾರಿನ ಮೈಲೇಜ್ ಕಡಿಮೆಯಾಗುತ್ತದೆ. ಆದ್ದರಿಂದ, ನಿಮ್ಮ ಕಾರಿನ ಮೈಲೇಜ್ ಅನ್ನು ಸುಧಾರಿಸಲು, ಈ ಐದು ವಿಷಯಗಳಿಗೆ ಗಮನ ಕೊಡುವುದು ಮುಖ್ಯ, ಇದು ಪ್ರತಿ ತಿಂಗಳು ಸಾವಿರಾರು ರೂಪಾಯಿಗಳನ್ನು ಉಳಿಸಬಹುದು. ಜನರು ತಮ್ಮ ಕಾರಿನ ಸರಾಸರಿ ಸರಾಸರಿ ಕಡಿಮೆಯಾದಾಗ ಕಾರಿನ ಎಂಜಿನ್ನಲ್ಲಿ ಏನೋ ದೋಷ ಅಥವಾ ಇನ್ನಾವುದೇ ಸಮಸ್ಯೆ ಇದೆ ಎಂದು ಭಾವಿಸುತ್ತಾರೆ. ಆದರೆ ಅವರು ತಮ್ಮ ಚಾಲನಾ ಅಭ್ಯಾಸವನ್ನು ನಿರ್ಲಕ್ಷಿಸುತ್ತಾರೆ. ಚಾಲನಾ ನಡವಳಿಕೆಯು ಮೈಲೇಜ್ ಮೇಲೆ ದೊಡ್ಡ ಪರಿಣಾಮ ಬೀರುತ್ತದೆ. ನೀವು ಕಾರನ್ನು ಕಠಿಣವಾಗಿ ಮತ್ತು ಹೆಚ್ಚಿನ ವೇಗದಲ್ಲಿ ಓಡಿಸಿದರೆ ಹೆಚ್ಚಿನ ಮೈಲೇಜ್ ಅನ್ನು ನಿರೀಕ್ಷಿಸಬೇಡಿ. ವೇಗದ ವೇಗವರ್ಧನೆ, ಹಾರ್ಡ್ ಬ್ರೇಕಿಂಗ್ ಎಂಜಿನ್ ಮೇಲೆ ಅನಗತ್ಯ ಒತ್ತಡವನ್ನು ಉಂಟುಮಾಡುತ್ತದೆ. ಅವು ಹೆಚ್ಚಿನ ಇಂಧನ ಬಳಕೆಗೆ ಕಾರಣವಾಗುತ್ತವೆ. ಟ್ರಾಫಿಕ್ನಲ್ಲಿ ಅಥವಾ ಸಿಗ್ನಲ್ಗಳಲ್ಲಿ…

Read More

ಧಾರವಾಡ : ಹುಬ್ಬಳ್ಳಿಯ ಗಾಮನಗಟ್ಟಿ ಕೈಗಾರಿಕಾ ಪ್ರದೇಶ ಹಾಗೂ ವಿಮಾನ ನಿಲ್ದಾಣದ ಸುತ್ತಮುತ್ತಲಿನ ಪ್ರದೇಶದಲ್ಲಿ ಚಿರತೆಯು ಕಾಣಿಸಿಕೊಂಡ ಬಗ್ಗೆ ವರದಿಯಾಗಿದ್ದು, ಡಿಸೆಂಬರ್ 24, 2025 ರಂದು ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿ ವಸಂತರೆಡ್ಡಿ ಕೆ. ವಿ, ಉಪ ಅರಣ್ಯ ಸಂರಕ್ಷಣಾಧಿಕಾರಿ ವಿವೇಕ ಕವರಿ, ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ ಪರಿಮಳ ವಿ. ಎಚ್, ವಲಯ ಅರಣ್ಯ ಅಧಿಕಾರಿ, ಆರ್. ಎಸ್. ಉಪ್ಪಾರ, ಹುಬ್ಬಳ್ಳಿ ವಿಮಾನ ನಿಲ್ದಾಣದ ನಿರ್ದೇಶಕ ರೂಪೇಶ ಕುಮಾರ ಕೇಂದ್ರೀಯ ಕೈಗಾರಿಕಾ ಭದ್ರತಾ ಪಡೆಯ (CISF) ಸಿಬ್ಬಂದಿಗಳು ಮತ್ತು ಅರಣ್ಯ ಇಲಾಖೆಯ ಮುಂಚೂಣಿ ಸಿಬ್ಬಂದಿಗಳು ಹುಬ್ಬಳ್ಳಿಯ ಗಾಮನಗಟ್ಟಿ ಹಾಗೂ ವಿಮಾನ ನಿಲ್ದಾಣದ ಸುತ್ತಮುತ್ತಲಿನ ಪ್ರದೇಶದ ಸ್ಥಳ ಪರಿಶೀಲನೆ ಮಾಡಿದರು. ಹುಬ್ಬಳ್ಳಿ ವಿಮಾನ ನಿಲ್ದಾಣದಲ್ಲಿ ಚಿರತೆಯನ್ನು ಸೆರೆಹಿಡಿಯಲು ಈಗಾಗಲೇ ಬೋನ್ ಅನ್ನು ಇಡಲು ವ್ಯವಸ್ಥೆ ಮಾಡಲಾಗಿದೆ ಹಾಗೂ ಚಿರತೆಯ ಚಲನವಲನವನ್ನು ಗುರುತಿಸಿ ಸರೆಹಿಡಿಯಲು ಕ್ಯಾಮೆರಾ ಟ್ರಾಪ್‌ಗಳನ್ನು ಸಹ ಅಳವಡಿಸಲಾಗಿದೆ. ಅರಣ್ಯ ಮುಂಚೂಣಿ ಸಿಬ್ಬಂದಿಗಳು ಹಗಲು ಮತ್ತು ರಾತ್ರಿಗಸ್ತು ತಿರುಗುತ್ತಿದ್ದಾರೆ. ಆದ್ದರಿಂದ ಸಾರ್ವಜನಿಕರ ಹಿತದೃಷ್ಟಿಯಿಂದ ಹಾಗೂ…

Read More

ತೆಲಂಗಾಣ : ವಿವಾಹಿತ ಮಹಿಳೆಗೆ ಲೈಂಗಿಕ ಕಿರುಕುಳ ನೀಡುತ್ತಿದ್ದ ಕಾಮುಕನನ್ನು ಸಾರ್ವಜನಿಕರು ಹಿಡಿದು ಹಿಗ್ಗಾಮುಗ್ಗ ಥಳಿಸಿರುವ ಘಟನೆ ತೆಲಂಗಾಣದ ಕಾಮರೆಡ್ಡಿ ಜಿಲ್ಲೆಯ ಬನ್ಸ್ವಾಡ ಪಟ್ಟಣದಲ್ಲಿ ನಡೆದಿದೆ. ಜಿಲ್ಲೆಯ ಹಿರಿಯ ಕಾಂಗ್ರೆಸ್ ನಾಯಕರೊಬ್ಬರ ಮುಖ್ಯ ಅನುಯಾಯಿ ಎಂದು ಕರೆಯಲ್ಪಡುವ ದೇವೇಂದರ್ ರೆಡ್ಡಿ ಎಂಬ ವ್ಯಕ್ತಿ ಕಳೆದ ಒಂದು ತಿಂಗಳಿನಿಂದ ವಿವಾಹಿತ ಮಹಿಳೆಗೆ ಲೈಂಗಿಕ ಕಿರುಕುಳ ನೀಡುತ್ತಿದ್ದಾನೆ. ಬನ್ಸ್ವಾಡದ ಖಾಸಗಿ ಆಸ್ಪತ್ರೆಯಲ್ಲಿ ಕೆಲಸ ಮಾಡುತ್ತಿರುವ ಮಹಿಳೆ ಕಿರುಕುಳ ಸಹಿಸಲಾರದೆ ತನ್ನ ಪತಿಗೆ ಈ ಬಗ್ಗೆ ತಿಳಿಸಿದ್ದಾಳೆ. ಇದರಿಂದ ಗುರುವಾರ ಆಸ್ಪತ್ರೆಯಲ್ಲಿ ದೇವೇಂದರ್ ರೆಡ್ಡಿ ತನ್ನ ಪತ್ನಿಗೆ ಕಿರುಕುಳ ನೀಡುತ್ತಿದ್ದಾಗ ಪತಿ ಎಚ್ಚರಿಕೆಯಿಂದ ಯೋಜನೆ ರೂಪಿಸಿ ರೆಡ್ ಹ್ಯಾಂಡ್ ಆಗಿ ಹಿಡಿದಿದ್ದಾನೆ. ನಂತರ, ತೀವ್ರ ಕೋಪಗೊಂಡ ಮಹಿಳೆ ಪತಿ ತನ್ನ ಆಪ್ತರೊಂದಿಗೆ ದೇವೇಂದರ್ ರೆಡ್ಡಿಯನ್ನು ಆಸ್ಪತ್ರೆಯಿಂದ ಹೊರಗೆ ಕರೆತಂದು ರಸ್ತೆಯಲ್ಲಿ ಚಪ್ಪಲಿಯಿಂದ ಹೊಡೆದಿದ್ದಾನೆ. ಬಳಿಕ ಕಾಮುಕನನ್ನು ಪೊಲೀಸ್ ಠಾಣೆಗೆ ಕರೆದೊಯ್ದು ಒಪ್ಪಿಸಿದ್ದಾನೆ. ಈ ಘಟನೆ ಬನ್ಸ್ವಾಡ ಪಟ್ಟಣದಲ್ಲಿ ದೊಡ್ಡ ಸಂಚಲನ ಮೂಡಿಸಿದೆ. ಕೆಲವು ರಾಜಕೀಯ ನಾಯಕರ…

Read More

ಬೆಂಗಳೂರು : ಕಾರ್ಮಿಕರು ಮಂಡಳಿ ನೀಡುವ ಸೌಲಭ್ಯಗಳನ್ನು ಪಡೆದುಕೊಳ್ಳಲು ಕಾರ್ಮಿಕ ಕಾರ್ಡ್ ಹೊಂದಿರುವುದು ಕಡ್ಡಾಯ. ನಕಲಿ ದಾಖಲೆಗಳನ್ನು ನೀಡಿ ಕಾರ್ಮಿಕ ಕಾರ್ಡ್ ಪಡೆದರೆ ಅವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗುವುದು. ಸುಳ್ಳು ದಾಖಲೆಗಳನ್ನು ಸಲ್ಲಿಸಿ ಮ೦ಡಳಿಯ ಕಾರ್ಮಿಕ ಕಾರ್ಡ್ ಪಡೆದು ಸೌಲಭ್ಯಗಳನ್ನು ಪಡೆಯುವುದು ಶಿಕ್ಷಾರ್ಹ ಅಪರಾಧ ಇಂತಹ ಕಾರ್ಡ್‌ಗಳನ್ನು ತಪ್ಪದೇ ಸ೦ಬ೦ಧಿಸಿದ ಕಚೇರಿಗಳಿಗೆ ವಾಪಸ್ ನೀಡಿ. ಅರ್ಹ ಫಲಾನುಭವಿಗಳಿಗೆ ಮಾತ್ರವೇ ಮ೦ಡಳಿಯ ಸೌಲಭ್ಯ ಸಿಗಲು ಸಹಕರಿಸಿ. ಈ ಕುರಿತು ಇತರ ಕಾರ್ಮಿಕರಿಗೆ ಮಾಹಿತಿ ನೀಡಿ.

Read More

ಮಧ್ಯಪ್ರದೇಶದ ಮೌಗಂಜ್ ಜಿಲ್ಲೆಯಲ್ಲಿ ಮಾನವೀಯತೆಯನ್ನು ಪ್ರಶ್ನಿಸುವ ಅತ್ಯಂತ ಭಯಾನಕ ಘಟನೆ ಬೆಳಕಿಗೆ ಬಂದಿದೆ. ಕೈಗಳ ಮೇಲಿನ ಮೆಹಂದಿ ಬಣ್ಣ ಸಂಪೂರ್ಣವಾಗಿ ಮಸುಕಾಗುವ ಮೊದಲೇ, 24 ವರ್ಷದ ನವವಿವಾಹಿತರೊಬ್ಬರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಮಧ್ಯಪ್ರದೇಶದ ಹನುಮಾನ ಪೊಲೀಸ್ ಠಾಣೆ ವ್ಯಾಪ್ತಿಯ ಪಂಥಿ ವಿಶ್ರಾಮ್ ಗ್ರಾಮದಲ್ಲಿರುವ ತನ್ನ ತವರು ಮನೆಯಲ್ಲಿ ಕರುಣಾ ದ್ವಿವೇದಿ ಎಂಬ ಯುವತಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಆದಾಗ್ಯೂ, ಇದು ಕೇವಲ ಆತ್ಮಹತ್ಯೆಯಲ್ಲ, ಅವರು ಬರೆದಿರುವ 10 ಪುಟಗಳ ಆತ್ಮಹತ್ಯೆ ಪತ್ರವು ಅವರ ಪತಿಯ ಕ್ರೌರ್ಯದಿಂದ ತುಂಬಿದೆ. ಕರುಣಾ ಅವರ ಮದುವೆ ಕಳೆದ ವರ್ಷ ಮೇ 8 ರಂದು ನಡೆಯಿತು. ಆದರೆ ಅವರು ಬರೆದ ಪತ್ರದಿಂದ ಅವರ ಮದುವೆಯ ನಂತರ ಅವರ ಅತ್ತೆ-ಮಾವನ ಮನೆ ಅವರಿಗೆ ಜೀವಂತ ನರಕವಾಗಿದೆ ಎಂದು ಸ್ಪಷ್ಟವಾಗುತ್ತದೆ. ಅವರ ಪತಿ ಮತ್ತು ಅತ್ತೆ ನಿರಂತರವಾಗಿ ಕಿರುಕುಳ ನೀಡುತ್ತಿದ್ದರು ಎಂದು ಅವರು ಆರೋಪಿಸಿದ್ದಾರೆ. ಕರುಣಾ ತಮ್ಮ ಪತ್ರದಲ್ಲಿ ಭಯಾನಕ ಸತ್ಯವನ್ನು ಬರೆದಿದ್ದಾರೆ. ತನ್ನ ಗಂಡ ತನ್ನ ಋತುಚಕ್ರದ ಸಮಯದಲ್ಲಿ…

Read More