Subscribe to Updates
Get the latest creative news from FooBar about art, design and business.
Author: kannadanewsnow57
ಬೆಳಗಾವಿ : 2025ನೇ ಸಾಲಿನ ಕರ್ನಾಟಕ ದ್ವೇಷ ಭಾಷಣ ಮತ್ತು ದ್ವೇಷ ಅಪರಾಧಗಳ (ಪ್ರತಿಬಂಧಕ) ವಿಧೇಯಕವು ವಿಧಾನಸಭೆಯಲ್ಲಿ ಅಂಗೀಕಾರವಾಯಿತು. ಗೃಹಸಚಿವ ಡಾ:ಜಿ.ಪರಮೇಶ್ವರ್ ಅವರು ಈ ವಿಧೇಯಕವು ವ್ಯಕ್ತಿ ವ್ಯಕ್ತಿಗಳ ಸಮೂಹ, ಸಂಸ್ಥೆಗಳ ವಿರುದ್ಧ ಸಮಾಜದಲ್ಲಿ ಅಸಾಮರಸ್ಯ ದ್ವೇಷವನ್ನುಂಟು ಮಾಡುವ ದ್ವೇಷಭಾಷಣದ ಪ್ರಸರಣೆ, ಪ್ರಕಟಣೆ ಅಥವಾ ಪ್ರಚಾರವನ್ನು ಹಾಗೂ ಅಪರಾಧಗಳನ್ನು ತಡೆಗಟ್ಟಲು ಮತ್ತು ಪ್ರತಿಬಂಧಿಸಲು, ಅಂತಹ ಅಪರಾಧಗಳಿಗೆ ದಂಡನೆಯನ್ನು ಉಪಬಂದಿಸಲು ಹಾಗೂ ಹಾನಿಗೊಳಗಾದ ಸಂತ್ರಸ್ತರಿಗೆ ತಕ್ಕಷ್ಟು ಪರಿಹಾರವನ್ನು ಒದಗಿಸಲು ಈ ಶಾಸನವನ್ನು ಅಧಿನಿಯಮಿಸುವುದು ಅವಶ್ಯಕವೆಂದು ಪರಿಗಣಿಸಿ ಈ ವಿಧೇಯಕವನ್ನು ತರಲಾಗಿದೆ. ವಿಧೇಯಕವನ್ನು ಪರ್ಯಾಲೋಚಿಸಿ ಅನುಮೋದನೆ ನೀಡುವಂತೆ ಕೋರಿದರು. ವಿಧೇಯಕವು ವಿಧಾನಸಬೆಯಲ್ಲಿ ಅಂಗೀಕಾರವಾಯಿತು. ದ್ವೇಷ ಭಾಷಣ ಹಾಗೂ ದ್ವೇಷ ಅಪರಾಧಗಳ (ಪ್ರತಿಬಂಧಕ) ಮಸೂದೆಯನ್ನು ಗೃಹ ಸಚಿವ ಡಾ.ಜಿ.ಪರಮೇಶ್ವರ್ ಪರ್ಯಾಲೋಚನೆಗೆ ತಂದರು. ಗದ್ದಲದ ನಡುವೆ ಅಂಗೀಕಾರಕ್ಕೆ ಮುನ್ನ, ಪುನರಾವರ್ತಿತ ಅಪರಾಧಕ್ಕೆ ಜೈಲು ಶಿಕ್ಷೆಯನ್ನು 10 ರಿಂದ ಏಳು ವರ್ಷಕ್ಕೆ ಇಳಿಸಲಾಗಿದೆ ಎಂದು ತಿಳಿಸಿದರು.
ಬೆಳಗಾವಿ : ಬ್ರಿವೇರಿಗಳಲ್ಲಿ ಉತ್ಪಾದನೆಯಾಗುವ ಬಿಯರ್ ಗಳಲ್ಲಿ ಇಥೈಲ್ ಆಲ್ಕೋಹಾಲ್ ಇರುವಿಕೆ ಮತ್ತು ಮಿಥೈಲ್ ಆಲ್ಕೋಹಾಲ್, Obnoxious Substance ಮತ್ತು Suspended Sediments ಇಲ್ಲದಿರುವಿಕೆಯನ್ನು ಖಚಿತಪಡಿಸಿಕೊಂಡು ಮಾನವ ಸೇವನೆಗೆ ಯೋಗ್ಯವಾಗಿದೆ ಎಂದು ರಾಸಾಯನಿಕ ವಿಶ್ಲೇಷಣಾ ವರದಿಯನ್ನು ನೀಡಲಾದ ನಂತರವೇ ಬಿಯರ್ನ್ನು ಮಾರಾಟಕ್ಕೆ ಬಿಡುಗಡೆ ಮಾಡಲಾಗುತ್ತಿದೆ ಎಂದು ಅಬಕಾರಿ ಸಚಿವರು ಆರ್.ಜಿ.ತಿಮ್ಮಾಪುರ ತಿಳಿಸಿದ್ದಾರೆ. ಅವರು ವಿಧಾನ ಪರಿಷತ್ ನಲ್ಲಿ ಶಾಸಕ ಶಿವಕುಮಾರ್ ಕೆ ಅವರ ಚುಕ್ಕೆ ಗುರುತಿನ ಪ್ರಶ್ನೆಗೆ ಉತ್ತರಿಸಿದರು. ಅಬಕಾರಿ ಇಲಾಖೆಯಲ್ಲಿ 2 ರಾಸಾಯನಿಕ ಪ್ರಯೋಗಾಲಯಗಳು ಬೆಂಗಳೂರು ಮತ್ತು ಧಾರವಾಡದಲ್ಲಿ ಮಂಜೂರಾಗಿದ್ದು, ಪ್ರಸ್ತುತ ಬೆಂಗಳೂರಿನಲ್ಲಿ ರಾಸಾಯನಿಕ ಪ್ರಯೋಗಾಲಯವು ಕಾರ್ಯನಿರ್ವಹಿಸುತ್ತಿದೆ. ಧಾರವಾಡದಲ್ಲಿನ ಪ್ರಯೋಗಾಲಯ ಪ್ರಾರಂಭಿಸಲು ಪರಿಶೀಲಿಸಲಾಗುತ್ತಿದ್ದು, ಅಬಕಾರಿ ಇಲಾಖೆಯಿಂದ ಖಾಸಗಿ ಪ್ರಯೋಗಾಲದ ಜೊತೆ ಯಾವುದೇ ಒಡಂಬಡಿಕೆ ಮಾಡಿಕೊಂಡಿರುವುದಿಲ್ಲ ಎಂದು ತಿಳಿಸಿದರು. ರಾಜ್ಯದಲ್ಲಿ 2025-26 ನೇ ಸಾಲಿನ ಅಕ್ಟೋಬರ್ 2025 ರ ಅಂತ್ಯಕ್ಕೆ ಸ್ವತಂತ್ರ ಆರ್.ವಿ.ಬಿ (Independent RVB) 64 ಹಾಗೂ ವಿವಿಧ ರೀತಿಯ ಸನ್ನದಿಗೆ ಹೊಂದಿಕೊಂಡಂತಿರುವ ಆರ್.ವಿ.ಬಿ (Attached RVB) 915 ಹೀಗೆ,…
ಬೆಳಗಾವಿ : ಆಯುಷ್ ಇಲಾಖೆಯಲ್ಲಿನ ವೈದ್ಯಾಧಿಕಾರಿಗಳ ಹುದ್ದೆಯಿಂದ ಹಿರಿಯ ವೈದ್ಯಾಧಿಕಾರಿಗಳ ಹುದ್ದೆಗೆ ಮುಂಬಡ್ತಿ ನೀಡುವುದಕ್ಕೆ ಸಂಬಂಧಿಸಿದಂತೆ ವೃಂದ ಮತ್ತು ನೇಮಕಾತಿ ನಿಯಮಗಳನ್ನು ಪರಿಷ್ಕರಿಸಲು ಕ್ರಮ ಕೈಗೊಳ್ಳಲಾಗಿದೆ ಎಂದು ಕೃಷಿ ಸಚಿವ ಚಲುವರಾಯ ಸ್ವಾಮಿ ಹೇಳಿದರು. ಬೆಳಗಾವಿಯ ಸುವರ್ಣ ವಿಧಾನಸೌಧದಲ್ಲಿ ನಡೆಯುತ್ತಿರುವ ಚಳಿಗಾಲದ ಅಧಿವೇಶನದಲ್ಲಿ ವಿಧಾನಸಭೆಯ ಪ್ರಶ್ನೋತ್ತರ ವೇಳೆಯಲ್ಲಿ ಬಸವನಗುಡಿ ಶಾಸಕ ರವಿ ಸುಬ್ರಮಣ್ಯ ಎಲ್.ಎ. ಅವರ ಪ್ರಶ್ನೆಗೆ ಸದನದಲ್ಲಿ ಉತ್ತರಿಸಿದರು. ಆಯುಷ್ ಇಲಾಖೆಯಲ್ಲಿ ವೈದ್ಯಾಧಿಕಾರಿಗಳ ಹುದ್ದೆಯಿಂದ ಹಿರಿಯ ವೈದ್ಯಾಧಿಕಾರಿಗಳ ಹುದ್ದೆಗೆ ಮುಂಬಡ್ತಿ ಮೂಲಕ ಒಟ್ಟು 95 ಹುದ್ದೆಗಳನ್ನು ಭರ್ತಿ ಮಾಡಬೇಕಿದೆ. ಇದರಲ್ಲಿ 65 ಆಯುರ್ವೇದ, 15-ಯುನಾನಿ, 12-ಹೋಮಿಯೋಪಥಿ ಹಾಗೂ ಪ್ರಕೃತಿ ಚಿಕಿತ್ಸೆ ಮತ್ತು ಯೋಗದ 03 ವೈದ್ಯರಿಗೆ ಮುಂಬಡ್ತಿ ನೀಡಬೇಕಿದೆ. ಇಲಾಖೆಯಲ್ಲಿ 116 ಹಿರಿಯ ವೈದ್ಯಾಧಿಕಾರಿಗಳ ಹುದ್ದೆಗಳು ಮಂಜೂರಾಗಿದ್ದು, ಕಳೆದ ಆರೇಳು ವರ್óಗಳಿಂದ ಹಿರಿಯ ವೈದ್ಯಾಧಿಕಾರಿಗಳ ವೃಂದದಲ್ಲಿ ಹುದ್ದೆಗಳು ಖಾಲಿ ಇವೆ. ವೈದ್ಯಾಧಿಕಾರಿಗಳಿಗೆ ಸ್ಥಾನಪನ್ನ ಬಡ್ತಿ ನೀಡುವುದಕ್ಕೆ ಸಂಬಂಧಿಸಿದಂತೆ ವೃಂದ ಮತ್ತು ನೇಮಕಾತಿ ನಿಯಮಗಳನ್ನು ಪರಿಷ್ಕರಿಸಲು ಕ್ರಮ ಕೈಗೊಳ್ಳಲಾಗಿದ್ದು, ಬಳಿಕ ಮುಂಬಡ್ತಿ…
ಬೆಂಗಳೂರು : ಸಾರ್ವಜನಿಕರೇ ಎಚ್ಚರ, ಹೊಸ ವರ್ಷಕ್ಕೆ ನಿಮ್ಮ ವಾಟ್ಸಪ್ ಗೆ ಅಪರಿಚಿತರು ಕಳುಹಿಸುವ `APK’ ಶುಭಾಶಯ ಲಿಂಕ್ಗಳ ಮೇಲೆ ಕ್ಲಿಕ್ ಮಾಡಬೇಡಿ. ಹೌದು, ಅಪರಿಚಿತರು ಲಿಂಕ್ನೊಂದಿಗೆ ಹೊಸ ವರ್ಷದ ಶುಭಾಶಯ ಸಂದೇಶವನ್ನು ಕಳುಹಿಸುತ್ತಾರೆ, ಶುಭಾಶಯ ಪತ್ರಗಳನ್ನು ಕಳುಹಿಸಲು APK ಇನ್ಸಾಲ್ ಮಾಡಲು ನಿಮ್ಮನ್ನು ಕೇಳಲಾಗುತ್ತದೆ. ಒಮ್ಮೆ ಇನ್ಸಾಲ್ ಮಾಡಿದ ನಂತರ, ಸೈಬರ್ ವಂಚಕರು ನಿಮ್ಮ ಫೋಟೋಗಳು, ಸಂಪರ್ಕಗಳು, OTP ಗಳು ಮತ್ತು ಬ್ಯಾಂಕಿಂಗ್ ಡೇಟಾವನ್ನು ಕದಿಯಬಹುದು. ಸುರಕ್ಷಿತವಾಗಿರಲು ಸಲಹೆಗಳು ಲಿಂಕ್ಗಳಿಂದ APK ಗಳನ್ನು ಎಂದಿಗೂ ಇನ್ಸಾಲ್ ಮಾಡದಿರಿ ಅಧಿಕೃತ ಅಪ್ಲಿಕೇಶನ್ ಸ್ಟೋರ್ಗಳನ್ನು ಬಳಸಿ ಕ್ಲಿಕ್ ಮಾಡುವ ಮೊದಲು ಕಳುಹಿಸುವವರೊಂದಿಗೆ ಪರಿಶೀಲಿಸಿ ಸಂದೇಹವಿದ್ದರೆ, ಕ್ಲಿಕ್ ಮಾಡಬೇಡಿ ನಿಮ್ಮ ಕುಟುಂಬ ಮತ್ತು ಸ್ನೇಹಿತರನ್ನು ರಕ್ಷಿಸಲು ಇದನ್ನು ಹಂಚಿಕೊಳ್ಳಿ
ನವದೆಹಲಿ : 2025 ರ ಕೊನೆಯ ತಿಂಗಳಲ್ಲಿ, ಹಲವಾರು ಪ್ರಮುಖ ಹಣಕಾಸು ಮತ್ತು ಆದಾಯ ತೆರಿಗೆಗೆ ಸಂಬಂಧಿಸಿದ ಗಡುವುಗಳು ಸಮೀಪಿಸುತ್ತಿವೆ. ಇವುಗಳನ್ನು ನಿರ್ಲಕ್ಷಿಸುವುದರಿಂದ ಮುಂಬರುವ ತಿಂಗಳುಗಳಲ್ಲಿ ಹೆಚ್ಚಿನ ತೊಂದರೆಗಳು ಉಂಟಾಗಬಹುದು. ಡಿಸೆಂಬರ್ 2025 ಕ್ಕೆ 5 ಪ್ರಮುಖ ಗಡುವುಗಳು ಮತ್ತು ಪ್ರಮುಖ ಬದಲಾವಣೆಗಳನ್ನು ತಿಳಿಯಿರಿ 1. ತೆರಿಗೆ ಲೆಕ್ಕಪರಿಶೋಧನೆಯೊಂದಿಗೆ ತೆರಿಗೆದಾರರಿಗೆ ಹೊಸ ಐಟಿಆರ್ ಸಲ್ಲಿಕೆ ದಿನಾಂಕ ನೇರ ತೆರಿಗೆಗಳ ಕೇಂದ್ರ ಮಂಡಳಿ (ಸಿಬಿಡಿಟಿ) ತೆರಿಗೆ ಲೆಕ್ಕಪರಿಶೋಧನೆ ಪ್ರಕರಣಗಳೊಂದಿಗೆ ತೆರಿಗೆದಾರರಿಗೆ ಐಟಿಆರ್ ಸಲ್ಲಿಕೆ ಗಡುವನ್ನು ಅಕ್ಟೋಬರ್ 31, 2025 ರಿಂದ ಡಿಸೆಂಬರ್ 10, 2025 ರವರೆಗೆ ವಿಸ್ತರಿಸಿದೆ. ಇದು ಆಡಿಟ್ ವರದಿಗಳು, ಹಣಕಾಸು ಹೇಳಿಕೆಗಳು ಮತ್ತು ಇತರ ದಾಖಲೆಗಳನ್ನು ಒಳಗೊಂಡಿರುವ ತೆರಿಗೆದಾರರಿಗೆ ಪರಿಹಾರವಾಗಿದೆ. 2. ಆಧಾರ್-ಪ್ಯಾನ್ ಲಿಂಕ್ ಮಾಡಲು ಕೊನೆಯ ದಿನಾಂಕ: ಡಿಸೆಂಬರ್ 31, 2025 ಅಕ್ಟೋಬರ್ 1, 2024 ರಂದು ಅಥವಾ ಅದಕ್ಕೂ ಮೊದಲು ಆಧಾರ್ ರಚಿಸಲಾದವರು, ಡಿಸೆಂಬರ್ 31, 2025 ರೊಳಗೆ ಅದನ್ನು ತಮ್ಮ ಪ್ಯಾನ್ ಕಾರ್ಡ್ಗೆ ಲಿಂಕ್ ಮಾಡಬೇಕು.…
ನೀವು ಖರೀದಿಸುವ ಬೆಲ್ಲವು ಬಣ್ಣಬಣ್ಣದ್ದಾಗಿದೆಯೇ? ಅಥವಾ ಆಕರ್ಷಕವಾದ ತಿಳಿ ಹಳದಿ ಬಣ್ಣದ್ದಾಗಿದೆಯೇ? ಬೆಲ್ಲದ ಬಣ್ಣ ವ್ಯತ್ಯಾಸದ ಹಿಂದಿನ ರಹಸ್ಯ ಮತ್ತು ಅದರ ತಯಾರಿಕೆಯಲ್ಲಿ ಬಳಸುವ ರಾಸಾಯನಿಕಗಳ ತಿಳಿಯಿರಿ ಪೋಷಕಾಂಶಗಳಿಂದ ತುಂಬಿರುವ ಮೂಲ ಬೆಲ್ಲವನ್ನು ಹೇಗೆ ಗುರುತಿಸುವುದು ಎಂದು ತಿಳಿದುಕೊಳ್ಳುವುದು ಆರೋಗ್ಯಕರ ಜೀವನಕ್ಕೆ ಬಹಳ ಮುಖ್ಯ. ಬಿಳಿ ಬೆಲ್ಲ: ಇದು ಆರೋಗ್ಯಕ್ಕೆ ಹಾನಿಕಾರಕವೇ? ನೋಡಲು ತುಂಬಾ ಆಕರ್ಷಕವಾಗಿರುವ ಬಿಳಿ ಅಥವಾ ತಿಳಿ ಹಳದಿ ಬೆಲ್ಲವನ್ನು ತಯಾರಿಸುವಾಗ ಹೆಚ್ಚಾಗಿ ರಾಸಾಯನಿಕಗಳನ್ನು ಬಳಸಲಾಗುತ್ತದೆ. ರಾಸಾಯನಿಕಗಳ ಬಳಕೆ: ಬೆಲ್ಲಕ್ಕೆ ಮಸುಕಾದ ಬಣ್ಣ ಮತ್ತು ಹೊಳಪನ್ನು ನೀಡಲು ಸೋಡಿಯಂ ಬೈಕಾರ್ಬನೇಟ್ ಮತ್ತು ಕ್ಯಾಲ್ಸಿಯಂ ಕಾರ್ಬೋನೇಟ್ನಂತಹ ರಾಸಾಯನಿಕಗಳನ್ನು ಸೇರಿಸಲಾಗುತ್ತದೆ. ಪರಿಣಾಮ: ಇದು ಬೆಲ್ಲದಲ್ಲಿರುವ ನೈಸರ್ಗಿಕ ಪೋಷಕಾಂಶಗಳನ್ನು ನಾಶಪಡಿಸುವುದಲ್ಲದೆ, ಈ ರಾಸಾಯನಿಕ ಅವಶೇಷಗಳು ದೇಹಕ್ಕೆ ಹಾನಿಕಾರಕವಾಗಬಹುದು. ಅದಕ್ಕಾಗಿಯೇ ಬಿಳಿ ಬೆಲ್ಲವನ್ನು ತಪ್ಪಿಸುವುದು ಒಳ್ಳೆಯದು. ಕೆಂಪು ಅಥವಾ ಗಾಢ ಬೆಲ್ಲ: ಮೂಲ ಗಾಢ ಕಂದು ಅಥವಾ ಕಪ್ಪು ಬಣ್ಣದ ಬೆಲ್ಲವನ್ನು ಮೂಲ ಮತ್ತು ಆರೋಗ್ಯಕರವೆಂದು ಪರಿಗಣಿಸಲಾಗುತ್ತದೆ. ತಯಾರಿಸುವ ವಿಧಾನ: ಯಾವುದೇ ರಾಸಾಯನಿಕಗಳಿಲ್ಲದೆ ನೈಸರ್ಗಿಕವಾಗಿ…
ಬೆಳಗಾವಿ : ರಾಜ್ಯದ ಎಲ್ಲಾ ಪಡಿತರ ಚೀಟಿದಾರರು ತಪ್ಪದೇ ಕಡ್ಡಾಯವಾಗಿ ತಮ್ಮ ಕಾರ್ಡನ್ನು ಇ-ಕೆವೈಸಿ ಮಾಡಿಸಬೇಕು ಎಂದು ಸಚಿವ ಕೆ.ಹೆಚ್.ಮುನಿಯಪ್ಪ ಹೇಳಿದ್ದಾರೆ. ಅಧಿಕಾರಿಗಳು ಮತ್ತು ನ್ಯಾಯಬೆಲೆ ಅಂಗಡಿಗಳ ಮಾಲೀಕರ ಸಂಘದ ಅಧ್ಯಕ್ಷರೊಂದಿಗೆ ಸುವರ್ಣ ವಿಧಾನಸೌಧದ ಸಭಾಂಗಣದಲ್ಲಿ ಪ್ರಗತಿ ಪರಿಶೀಲನೆ ಸಭೆಯಲ್ಲಿ ಮಾತನಾಡಿದ ಅವರು, ಪಡಿತರ ಫಲಾನುಭವಿಗಳು ಕಡ್ಡಾಯವಾಗಿ ತಮ್ಮ ಕಾರ್ಡನ್ನು ಇ-ಕೆವೈಸಿ ಮಾಡಿಸಬೇಕು. ಅರ್ಹರು ಒಂದು ವೇಳೆ ಪರಿಷ್ಕರಣೆ ವೇಳೆ ಎಪಿಎಲ್ಗೆ ಬದಲಾಗಿದ್ದಲ್ಲಿ, ಸಂಬಂಧಪಟ್ಟ ತಾಲ್ಲೂಕಿನ ತಹಶೀಲ್ದಾರರ ಕಚೇರಿಗೆ ಭೇಟಿ ಮಾಡಿ ಮನವಿ ಸಲ್ಲಿಸಬೇಕು. ಅದನ್ನು ಪರಿಶೀಲನೆ ಮಾಡಿ ಪುನಃ ಬಿಪಿಎಲ್ಗೆ ವರ್ಗಾಯಿಸಲಾಗುತ್ತದೆ ಎಂದು ತಿಳಿಸಿದ್ದಾರೆ. 3 ಲಕ್ಷದ 96 ಸಾವಿರ ಪಡಿತರ ಕಾರ್ಡುಗಳನ್ನು ಒಂದು ತಿಂಗ ಳೊಳಗೆ ಪರಿಷ್ಕರಣೆ ಮಾಡಿ, ನೂತನ ಕಾರ್ಡ್ ನೀಡಲು ಕ್ರಮ ವಹಿಸಬೇಕು. ಕನಿಷ್ಠ ಬೆಂಬಲ ಬೆಲೆ ಯೋಜನೆಯಡಿ ಈ ವರ್ಷ ಪ್ರತಿ ಕ್ವಿಂಟಲ್ ರಾಗಿಗೆ 4,886 ರೂ. ಬೆಲೆಯಂತೆ ಖರೀದಿಸಲಾಗುತ್ತಿದೆ. ಈಗಾಗಲೇ 6 ಲಕ್ಷ ಮೆಟ್ರಿಕ್ ಟನ್ ರಾಗಿ ಖರೀದಿಗೆ ರೈತರು ನೋಂದಣಿ ಮಾಡಿಕೊಂಡಿದ್ದಾರೆ.…
ಢಾಕಾ: ಬಾಂಗ್ಲಾದೇಶದಲ್ಲಿ ವಿಪಕ್ಷ ನಾಯಕ ಉಸ್ಮಾನ್ ಹಾದಿ ಹತ್ಯೆ ಬಳಿಕ ಮತ್ತೆ ಹಿಂಸಾಚಾರ ಭುಗಿಲೆದ್ದಿದ್ದು, ಸ್ಟಾರ್ ಹೋಟೆಲ್, ಕಟ್ಟಡಗಳ ಮೇಲೆ ಪ್ರತಿಭಟನಾಕಾರು ದಾಳಿ ನಡೆಸಿದ್ದಾರೆ. ಕಳೆದ ವರ್ಷ ಬಾಂಗ್ಲಾದೇಶದಲ್ಲಿ ಮಾಜಿ ಪ್ರಧಾನಿ ಶೇಖ್ ಹಸೀನಾ ವಿರುದ್ಧ ಹಿಂಸಾತ್ಮಕ ದಂಗೆಯನ್ನು ಹುಟ್ಟುಹಾಕಿದ್ದ ವಿರೋಧ ಪಕ್ಷದ ನಾಯಕ ಓಸ್ಮಾನ್ ಹಾದಿ ಗುರುವಾರ ಸಿಂಗಾಪುರದಲ್ಲಿ ನಿಧನರಾದರು. ಯುವ ನಾಯಕ ಉಸ್ಮಾನ್ ಹಾದಿ ಅವರ ಮರಣದ ನಂತರ, ಗುರುವಾರ ತಡರಾತ್ರಿ ಬಾಂಗ್ಲಾದೇಶದಲ್ಲಿ ಹಿಂಸಾಚಾರ ಭುಗಿಲೆದ್ದಿತು, ಪ್ರತಿಭಟನಾಕಾರರು ಹಿಂಸಾತ್ಮಕವಾಗಿ ಮಾರ್ಪಟ್ಟರು. ಹಾದಿ ಅವರ ಮರಣದ ನಂತರ, ಇಂಕ್ವಿಲಾಬ್ ಮಂಚ್ನ ಪ್ರತಿಭಟನಾಕಾರರು ಬಾಂಗ್ಲಾದೇಶದ ಪತ್ರಿಕೆಗಳಾದ ಪ್ರೋಥೋಮ್ ಅಲೋ ಮತ್ತು ಢಾಕಾದಲ್ಲಿ ಡೈಲಿ ಸ್ಟಾರ್ನ ಕಟ್ಟಡಗಳ ಮೇಲೆ ದಾಳಿ ಮಾಡಿ ಧ್ವಂಸಗೊಳಿಸಿದರು. ಬಾಂಗ್ಲಾದೇಶದ ವಿವಿಧ ಭಾಗಗಳಲ್ಲಿ ದೊಡ್ಡ, ಹಿಂಸಾತ್ಮಕ ಪ್ರತಿಭಟನೆಗಳು ಸಹ ನಡೆಯುತ್ತಿವೆ. ಕಳೆದ ವಾರ ಉಸ್ಮಾನ್ ಹಾದಿಗೆ ಗುಂಡು ಹಾರಿಸಲಾಯಿತು ಮತ್ತು ಆರು ದಿನಗಳ ಕಾಲ ಜೀವನ್ಮರಣ ಹೋರಾಟದ ನಂತರ ಸಿಂಗಾಪುರದ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವಾಗ ಗುರುವಾರ ನಿಧನರಾದರು. ಫೆಬ್ರವರಿ…
ಬೆಂಗಳೂರು : 2025-26ನೇ ಶೈಕ್ಷಣಿಕ ಸಾಲಿನಲ್ಲಿ ಕಲ್ಯಾಣ ಕರ್ನಾಟಕ ಭಾಗದ ಕಲಬುರಗಿ ವಿಭಾಗದ 07 ಜಿಲ್ಲೆಗಳ 1345 ಸರ್ಕಾರಿ ಪ್ರೌಢಶಾಲೆಗಳಲ್ಲಿ ಎಸ್.ಎಸ್.ಎಲ್.ಸಿ ಫಲಿತಾಂಶ ಸುಧಾರಣೆಗಾಗಿ ‘ಪರಿಹಾರ ಬೋಧನೆ” ತರಗತಿಗಳನ್ನು ಹಮ್ಮಿಕೊಳ್ಳಲು ಆಡಳಿತಾತ್ಮಕ ಅನುಮೋದನೆ ಹಾಗೂ ಅನುದಾನ ಬಿಡುಗಡೆ ಮಾಡುವ ಕುರಿತು ರಾಜ್ಯ ಸರ್ಕಾರ ಮಹತ್ವದ ಆದೇಶ ಹೊರಡಿಸಿದೆ. ಮೇಲೆ ಓದಲಾದ ಪ್ರಸ್ತಾವನೆಯಲ್ಲಿ ಕಳೆದ ಹಲವು ವರ್ಷಗಳಿಂದ ಕಲ್ಯಾಣ ಕರ್ನಾಟಕ ಪ್ರದೇಶದ 07 ಜಿಲ್ಲೆಗಳ ಫಲಿತಾಂಶ ರಾಜ್ಯದ ಇತರೆ ಜಿಲ್ಲೆಗಳಿಗಿಂತ ಕಡಿಮೆಯಾಗಿರುವುದು ಗಮನಿಸಬಹುದು. ಪ್ರಸಕ್ತ ಸಾಲಿನ ಫಲಿತಾಂಶ ಉತ್ತಮ ಪಡಿಸಲು ಇಲಾಖೆ ಹಲವು ಕಾರ್ಯಕ್ರಮಗಳನ್ನು ಹಮ್ಮಿಕೊಂಡಿದ್ದು, ಅವುಗಳನ್ನು ಜಾರಿಮಾಡುವುದರ ಜೊತೆಗೆ ಕೆಕೆಆರ್ಡಿಬಿ (ಕಲ್ಯಾಣ ಕರ್ನಾಟಕ ಪ್ರದೇಶಾಭಿವೃದ್ಧಿ ಮಂಡಳಿ) ವತಿಯಿಂದ ಫಲಿತಾಂಶ ಸುಧಾರಣೆಗಾಗಿಯೇ ದೊರೆಯುವ ಅನುದಾನ ಬಳಸಿಕೊಳ್ಳಲು ಕ್ರಿಯಾಯೋಜನೆ ರೂಪಿಸಲಾಗಿದ್ದು, ಅನುಮೋದನೆಗಾಗಿ ಸಲ್ಲಿಸಿರುತ್ತಾರೆ. ಕಲಬುರಗಿ ವಿಭಾಗದ ಎಲ್ಲಾ 1345 ಸರ್ಕಾರಿ ಪ್ರೌಢ ಶಾಲೆಗಳಿದ್ದು, ಈ ಎಲ್ಲಾ ಪ್ರೌಢ ಶಾಲೆಗಳಲ್ಲಿನ 10ನೇ ತರಗತಿ ವಿದ್ಯಾರ್ಥಿಗಳಿಗೆ ಬೆಳಿಗ್ಗೆ ಮತ್ತು ಸಾಯಂಕಾಲ ವಿಶೇಷ ತರಗತಿಗಳನ್ನು ನಡೆಸಿ, ಪರಿಹಾರ ಬೋಧನೆ…
ಬೆಳಗಾವಿ : ಶ್ರವಣಬೆಳಗೊಳ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ 930 ಆದ್ಯತಾ ಪಡಿತರ ಚೀಟಿಗಳನ್ನು ಆದ್ಯತೇತರ ಪಡಿತರ ಚೀಟಿಗಳನ್ನಾಗಿ ಪರಿವರ್ತಿಸಲಾಗಿರುತ್ತದೆ ಎಂದು ಆಹಾರ ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಹಾಗೂ ಕಾನೂನು ಮಾಪನ ಶಾಸ್ತç ಇಲಾಖೆಯ ಸಚಿವರಾದ ಕೆ. ಹೆಚ್ ಮುನಿಯಪ್ಪ ಅವರು ತಿಳಿಸಿದ್ದಾರೆ. ಶ್ರವಣಬೆಳಗೊಳ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ ಎಷ್ಟು ಬಿ.ಪಿ.ಎಲ್ ಪಡಿತರ ಚೀಟಿಗಳು ಎ.ಪಿ.ಎಲ್ ಪಡಿತರ ಚೀಟಿಗಳಾಗಿ ಪರಿವರ್ತನೆಯಾಗಿವೆ ಎಂದು ಶ್ರವಣಬೆಳಗೊಳ ವಿಧಾನಸಭಾ ಕ್ಷೇತ್ರದ ಶಾಸಕರಾದ ಬಾಲಕೃಷ್ಣ ಅವರು ಕೇಳಿದ ಚುಕ್ಕಿ ಗುರುತಿನ ಪ್ರಶ್ನೆಗೆ ಸಚಿವರು ಉತ್ತರಿಸಿದ್ದಾರೆ. ಕೇಂದ್ರ ಸರ್ಕಾರದಿಂದ ರಾಜ್ಯದಲ್ಲಿ ಈ ಕೆಳಕಂಡ ವಿಧಗಳಲ್ಲಿ 7,76,206 ಶಂಕಾಸ್ಪದ ಪಡಿತರ ಫಲಾನುಭವಿಗಳನ್ನು ಗುರುತಿಸಲಾಗಿರುತ್ತದೆ. CBDT Income Group Annual Income > 1,20,000 2. GSTN Gross Turnover >25 Lacs 3. MCA Individual as Director 4. PDS Duplicate RC Inter State 5. PDS Duplicate RC Intra State 6. PDS…














