Subscribe to Updates
Get the latest creative news from FooBar about art, design and business.
Author: kannadanewsnow57
ಬೆಂಗಳೂರು: ಕರ್ನಾಟಕ ರಾಜ್ಯದಲ್ಲಿ ಪೋಲಿಸ್ ಇಲಾಖೆಯವರು ಸಂಚಾರಿ ಇ-ಚಲನ್ ಮೂಲಕ ವಿಧಿಸಿದ ದಂಡದ ಮೊತ್ತದಲ್ಲಿ ರಿಯಾಯಿತಿಯನ್ನು ಮತ್ತೆ ನೀಡಿ ಸರ್ಕಾರ ಆದೇಶಿಸಿದೆ. ಶೇ.50ರಷ್ಟು ರಿಯಾಯಿತಿಯಲ್ಲಿ ಟ್ರಾಫಿಕ್ ದಂಡ ಪಾವತಿಗೆ ಮತ್ತೆ ಕಾಲಾವಕಾಶವನ್ನು ನೀಡಿ ಸರ್ಕಾರ ಅಧಿಕೃತ ಆದೇಶ ಹೊರಡಿಸಿದೆ. ಈ ಕುರಿತಂತೆ ಸಾರಿಗೆ ಇಲಾಖೆಯ ಸರ್ಕಾರದ ಅಧೀನ ಕಾರ್ಯದರ್ಶಿ ನಡವಳಿಯನ್ನು ಹೊರಡಿಸಿದ್ದಾರೆ. ಅದರಲ್ಲಿ ದಿನಾಂಕ:11.02.2023ರ ಒಳಗಾಗಿ ಇತ್ಯರ್ಥಗೊಳ್ಳುವ ಪ್ರಕರಣಗಳಿಗೆ ಮಾತ್ರ ಅನ್ವಯವಾಗುವಂತೆ ಒಂದು ಬಾರಿಯ ಕ್ರಮವಾಗಿ (onetime measure) ಮಾತ್ರ ಪೊಲೀಸ್ ಇಲಾಖೆಯ ಸಂಚಾರಿ ಇ-ಚಲನ್ನಲ್ಲಿ ದಾಖಲಾಗಿರುವ ಬಾಕಿ ಪಕರಣಗಳ ದಂಡದ ಮೊತ್ತದಲ್ಲಿ ಶೇಕಡಾ 50 ರಷ್ಟು ರಿಯಾಯಿತಿ ನೀಡಿ ಆದೇಶಿಸಲಾಗಿತ್ತು ಎಂದಿದ್ದಾರೆ. ಸರ್ಕಾರದ ಆದೇಶದಲ್ಲಿ, ಪೊಲೀಸ್ ಇಲಾಖೆಯಲ್ಲಿ ಸಂಚಾರಿ ಇ-ಚಲನ್ನಲ್ಲಿ ದಿನಾಂಕ:11.02.2023ರೊಳಗೆ ದಾಖಲಾದ ಪ್ರಕರಣಗಳಿಗೆ ಮಾತ್ರ ಅನ್ವಯವಾಗುವಂತೆ, ಪೊಲೀಸ್ ಇಲಾಖೆಯ ಸಂಚಾರಿ ಇ-ಚಲನ್ನಲ್ಲಿ ದಾಖಲಾಗಿರುವ ಬಾಕಿ ಪಕರಣಗಳ ದಂಡದ ಮೊತ್ತದಲ್ಲಿ ಮತ್ತೊಂದು ಬಾರಿಗೆ ಶೇಕಡಾ 50 ರಷ್ಟು ರಿಯಾಯಿತಿ ನೀಡಿ ಆದೇಶಿಸಲಾಗಿತ್ತು ಎಂದು ಹೇಳಿದ್ದಾರೆ. ಸರ್ಕಾರದ ಆದೇಶದಲ್ಲಿ, ಪೊಲೀಸ್ ಇಲಾಖೆಯಲ್ಲಿ…
ಬೆಂಗಳೂರು : ಬೆಂಗಳೂರು ಟೆಕ್ ಸಮ್ಮಿಟ್ 2025 ರಲ್ಲಿ, ನಾವು ₹2,600 ಕೋಟಿಗೂ ಹೆಚ್ಚು ಮೌಲ್ಯದ ಒಂದು ಒಡಂಬಡಿಕೆ ಮತ್ತು ಆರು LoIಗಳನ್ನು ಔಪಚಾರಿಕಗೊಳಿಸಿದ್ದೇವೆ. ಈ ಬದ್ಧತೆಗಳು ಸುಮಾರು 3,500 ಉದ್ಯೋಗಗಳನ್ನು ಸೃಷ್ಟಿಸಲಿವೆ ಹಾಗೂ ಕರ್ನಾಟಕದ ಸೆಮಿಕಂಡಕ್ಟರ್ಗಳು, ಇವಿ ಮತ್ತು ಕ್ಲೀನ್ ಮೊಬಿಲಿಟಿ, ಬ್ಯಾಟರಿಗಳು, ಬಯೋಟೆಕ್ ಹಾಗೂ ಡೀಪ್ಟೆಕ್ ಉತ್ಪಾದನೆಯಲ್ಲಿ ಬೆಳವಣಿಗೆಯನ್ನು ವೃದ್ಧಿಸಲಿವೆ ಎಂದು ಸಚಿವ ಪ್ರಿಯಾಂಕ್ ಖರ್ಗೆ ತಿಳಿಸಿದ್ದಾರೆ. ಈ ಕುರಿತು ಸಚಿವ ಪ್ರಿಯಾಂಕ್ ಖರ್ಗೆ ಮಾಹಿತಿ ನೀಡಿದ್ದು, ಇಎಸ್ಎಸ್ಸಿಐ ಮತ್ತು ಮಾರ್ವೆಲ್ ನಡುವಿನ ಒಡಂಬಡಿಕೆಯು 90 ಮಹಿಳೆಯರಿಗೆ ವಿಎಲ್ಎಸ್ಐ ಮತ್ತು ಎಂಬೆಡೆಡ್ ಸಿಸ್ಟಮ್ಗಳಲ್ಲಿ ತರಬೇತಿ ನೀಡಲಿದ್ದು, ಮಾರ್ವೆಲ್ ನಮ್ಮ ಟೈರ್ -2 ಮತ್ತು ಟೈರ್ -3 ನಗರಗಳಲ್ಲಿ ಈ ಕಾರ್ಯಕ್ರಮವನ್ನು ಸಂಪೂರ್ಣವಾಗಿ ಪ್ರಾಯೋಜಿಸಲಿದೆ ಎಂದರು. LoIಗಳಲ್ಲಿ, ಡ್ರೋನ್ ಫೆಡರೇಶನ್ ಆಫ್ ಇಂಡಿಯಾ ಭಾರತದ ಮೊದಲ ರೀತಿಯ ರಚನಾತ್ಮಕ ಡ್ರೋನ್ ಪರೀಕ್ಷಾ ಸೌಲಭ್ಯವನ್ನು ಚಿಂತಾಮಣಿಯಲ್ಲಿ ಸ್ಥಾಪಿಸಲಿದೆ; ಗ್ಲೋಬಲ್ ಎಚ್ಡಿಐ ಮತ್ತು ಎಲ್ಲೆವ್ ಪಿಸಿಬಿ, ಸೆಮಿಕಂಡಕ್ಟರ್ ಮತ್ತು ಎಲೆಕ್ಟ್ರಾನಿಕ್ಸ್ ಉತ್ಪಾದನಾ ಸೇವೆಗಳನ್ನು…
2025 ರಲ್ಲಿ ವಿಶ್ವದಾದ್ಯಂತ ಲಕ್ಷಾಂತರ ಜನರು ದುರ್ಬಲ ಮತ್ತು ಊಹಿಸಬಹುದಾದ ಪಾಸ್ ವರ್ಡ್ ಗಳನ್ನು ಬಳಸುವುದನ್ನು ಮುಂದುವರಿಸಿದ್ದಾರೆ ಎಂದು ಹೊಸ ವರದಿಯೊಂದು ಬಹಿರಂಗಪಡಿಸಿದೆ. ಕಾಂಪ್ಯಾರಿಟೆಕ್ ನ ಸೈಬರ್ ಸೆಕ್ಯುರಿಟಿ ಅಧ್ಯಯನವು ಈ ವರ್ಷ ಡೇಟಾ ಉಲ್ಲಂಘನೆಗಳಲ್ಲಿ ಸೋರಿಕೆಯಾದ ಎರಡು ಶತಕೋಟಿಗೂ ಹೆಚ್ಚು ಪಾಸ್ ವರ್ಡ್ ಗಳನ್ನು ವಿಶ್ಲೇಷಿಸಿದೆ, ಸಾಮಾನ್ಯವಾಗಿ ಬಳಸಲಾಗುವ ಪಾಸ್ ವರ್ಡ್ ಗಳು 123456. “123456”, “12345678” ಮತ್ತು “123456789” ಎಂಬ ಮೊದಲ ಮೂರು ಪಾಸ್ ವರ್ಡ್ ಗಳನ್ನು ಜಾಗತಿಕವಾಗಿ ಲಕ್ಷಾಂತರ ಖಾತೆಗಳು ಬಳಸಿವೆ ಎಂದು ವಿಶ್ಲೇಷಣೆಯು ಕಂಡುಹಿಡಿದಿದೆ. “admin”, “ಪಾಸ್ ವರ್ಡ್” ಮತ್ತು “೧೨೩೪೫” ಮತ್ತು “೧೨೩೪” ನಂತಹ ಸರಳ ಸಂಖ್ಯಾ ಸಂಯೋಜನೆಗಳು ಸಹ ಅಗ್ರ ಹತ್ತು ಪಟ್ಟಿಯಲ್ಲಿ ಸೇರಿವೆ. ಕಂಪ್ಯಾರಿಟೆಕ್ ನ ಟಾಪ್ ಟೆನ್ ಹೆಚ್ಚು ಬಳಸಿದ ಪಾಸ್ ವರ್ಡ್ ಗಳು ಈ ಕೆಳಗಿನಂತಿವೆ: 123456 12345678 123456789 admin 1234 Aa123456 12345 ಪಾಸ್ ವರ್ಡ್ 123 1234567890
ಕೇರಳ ರಾಜ್ಯದ ಶಬರಿಮಲೈಗೆ ತೆರಳುವ ಯಾತ್ರಿಕರಿಗೆ ಮಿದುಳು ತಿನ್ನುವ ಅಮೀಬಾ(ನೇಗ್ಲೇರಿಯಾ ಫೌಲೇರಿ) ಕುರಿತು ಮುನ್ನೆಚ್ಚರಿಕೆ ವಹಿಸಲು ಹಾಗೂ ಸೋಂಕು ತಡೆಯಲು ರಾಜ್ಯ ಸರ್ಕಾರದ ಮಾರ್ಗಸೂಚಿಯನ್ವಯ ಈ ಕೆಳಕಂಡಂತೆ ಸುರಕ್ಷತೆ ಕ್ರಮಗಳನ್ನು ಪಾಲಿಸಲು ಸೂಚಿಸಲಾಗಿದೆ. ನೇಗ್ಲೇರಿಯಾ ಫೌಲೇರಿ (Naegleria Fowleri) ಎಂಬುದು ಒಂದು ಸ್ವತಂತ್ರವಾಗಿ ಬದುಕುವ ಅಮೀಬಾ ಆಗಿದ್ದು, ಇದು ಮುಖ್ಯವಾಗಿ ಬೆಚ್ಚಗಿನ ಸಿಹಿನೀರು ಹಾಗೂ ಮಣ್ಣಿನಲ್ಲಿ ಕಂಡುಬರುತ್ತದೆ. ಉದಾಹರಣೆ:- ನಿಂತ ನೀರು, ಕೊಳ/ಈಜುಕೊಳಗಳು ಹಾಗೂ ಕೆರೆ. ಈ ಸೋಂಕು ವ್ಯಕ್ತಿಯಿಂದ ವ್ಯಕ್ತಿಗೆ ಅಥವಾ ಕಲುಷಿತಗೊಂಡ ನೀರನ್ನು ಕುಡಿಯುವುದರಿಂದ ಹರಡುವುದಿಲ್ಲ. ನೇಗ್ಲೇರಿಯಾ ಫೌಲೇರಿ (Naegleria Fowleri) ಅತ್ಯಂತ ವಿಷಕಾರಿ (Virulent) ಸೂಕ್ಷ್ಮಜೀವಿಯಾಗಿದ್ದು, ನೀರಿನಿಂದ ಮೂಗಿಗೆ ಪ್ರವೇಶಿಸಿದಾಗ ಅದು ಮೆದುಳನ್ನು ತಲುಪಿ, ಅಮೀಬಿಕ್ ಮೆನಿಂಗೊಎನ್ಸೆಫಲೈಟಿಸ್ (Amoebic Meningoencephalitis) ಎನ್ನುವ ಅಪರೂಪದ ಗಂಭೀರ/ಮಾರಣಾಂತಿಕ ಕಾಯಿಲೆಯನ್ನು ಉಂಟುಮಾಡುತ್ತದೆ. ಯಾತ್ರೆಯ ಸಂದರ್ಭದಲ್ಲಿ ನಿಂತ ನೀರಿನಲ್ಲಿ ಸ್ನಾನ ಮಾಡುವಾಗ ಮೂಗಿಗೆ ನೀರು ಪ್ರವೇಶಿಸದಂತೆ ಮೂಗಿನ ಕ್ಲಿಪ್ ಗಳನ್ನು ಬಳಸಿ ಅಥವಾ ನಿಮ್ಮ ಮೂಗನ್ನು ಬಿಗಿಯಾಗಿ ಮುಚ್ಚಿ ಹಿಡಿದು, ಮುನ್ನಚ್ಚರಿಕೆ ವಹಿಸುವುದು.…
ಬೇಸಿಗೆಯ ಬಿಸಿಲಿನ ತಾಪಮಾನದಿಂದ ಅಡಿಕೆಯನ್ನು ಬಿಸಿಲಿನಿಂದ ರಕ್ಷಿಸಲು ಸುಣ್ಣವನ್ನು ಬಳಿಯಬೇಕಾಗಿದ್ದು ಪ್ರಸಕ್ತ ಮಾಹೆ ಅಥವಾ ಡಿಸೆಂಬರ್ ಮಾಹೆ ಸೂಕ್ತವಾಗಿರುತ್ತದೆ. ಸುಣ್ಣ 10 ಕೆ ಜಿ, ಮೈದಾಹಿಟ್ಟು 500 ಗ್ರಾಂ ಮತ್ತು ಬೆಲ್ಲ 500 ಗ್ರಾಂ ತೆಗೆದುಕೊಂಡು ಸುಣ್ಣವನ್ನು ಸುಮಾರು 20 ರಿಂದ 25 ಲೀಟರ್ ನೀರಿನಲ್ಲಿ ಹಾಕಿ ಚೆನ್ನಾಗಿ ನೆನೆಸಿ, ಸುಣ್ಣದ ನೀರು ತಯಾರಿಸಬೇಕು. ಸುಣ್ಣವು ಚೆನ್ನಾಗಿ ಕರಗಿ ಪೇಂಟ್ ಮಾಡುವ ಹದಕ್ಕೆ ಬಂದಿರಬೇಕು. ಮೈದಾ ಹಿಟ್ಟು ಮತ್ತು ಬೆಲ್ಲವನ್ನು ಸ್ವಲ್ಪ ನೀರಿನಲ್ಲಿ ಹಾಕಿ ಚೆನ್ನಾಗಿ ಕುದಿಸಬೇಕು ಅಥವಾ ಬಿಸಿ ಮಾಡಿ, ದಪ್ಪ ಅಂಟು ರೀತಿಯ ಮಿಶ್ರಣ ತಯಾರಿಸಿ(ಈ ಅಂಟು ಸುಣ್ಣವನ್ನು ಗಿಡದ ಕಾಂಡಕ್ಕೆ ಗಟ್ಟಿಯಾಗಿ ಹಿಡಿದಿಟ್ಟುಕೊಳ್ಳಲು ಸಹಾಯ ಮಾಡುತ್ತದೆ) ಬೆಲ್ಲ ಮತ್ತು ಮೈದಾಹಿಟ್ಟಿನ ಅಂಟನ್ನು, ಮೊದಲೇ ತಯಾರಿಸಿಕೊಂಡಿರುವ ಸುಣ್ಣದ ನೀರಿಗೆ ಹಾಕಿ ಚೆನ್ನಾಗಿ ಮಿಶ್ರಣ ಮಾಡಿ, ಪೇಂಟ್ ಮಾಡುವ ಹದಕ್ಕೆ ತಂದು, ಅಡಿಕೆ ಗಿಡಗಳ ಕಾಂಡಕ್ಕೆ ನೆಲಮಟ್ಟದಿಂದ ಎಲೆಗಳ ಕೆಳಭಾಗದವರೆಗೆ ಸುಣ್ಣವನ್ನು ಬಳಿಯಬೇಕು ಎಂದು ಶಿಕಾರಿಪುರ ತಾಲ್ಲೂಕು ಹಿರಿಯ ಸಹಾಯಕ…
ವಿಶಾಖಪಟ್ಟಣಂ : ಸಮಾಜದಲ್ಲಿ ಮಾನವೀಯತೆ ದಿನೇ ದಿನೇ ಕ್ಷೀಣಿಸುತ್ತಿದೆ. ಕುಟುಂಬಗಳಲ್ಲಿನ ಭಿನ್ನಾಭಿಪ್ರಾಯಗಳ ಹಿನ್ನೆಲೆಯಲ್ಲಿ, ಜನರು ತಮ್ಮ ಜನರನ್ನು ಕೊಲ್ಲುತ್ತಿದ್ದಾರೆ. ಮಕ್ಕಳು, ಮಹಿಳೆಯರು ಅಥವಾ ವೃದ್ಧರು ಎಂಬ ಯಾವುದೇ ತಾರತಮ್ಯವಿಲ್ಲದೆ ಅವರು ಪರಸ್ಪರ ಕೊಲ್ಲುತ್ತಿದ್ದಾರೆ. ಆಸ್ತಿ ಮತ್ತು ಹಣಕ್ಕಾಗಿ ಅವರು ಯಾವುದೇ ಹಂತಕ್ಕೂ ಹೋಗುತ್ತಾರೆ. ಅವರು ಯಾವುದೇ ವಿವೇಚನೆಯಿಲ್ಲದೆ ಕೊಲೆಗಳನ್ನು ಮಾಡುತ್ತಾರೆ. ಕೆಲವೊಮ್ಮೆ, ಅವರು ವಯಸ್ಕರಿಗೆ ಏನೂ ಮಾಡಲು ಸಾಧ್ಯವಾಗದೆ ಮಕ್ಕಳ ಮೇಲೆ ತಮ್ಮ ರಾಕ್ಷಸಿತನವನ್ನು ತೋರಿಸುತ್ತಾರೆ. ಆಂಧ್ರಪ್ರದೇಶದ ವಿಶಾಖಪಟ್ಟಣಂ ನಗರದ ಕಂಚರಪಲೆಂ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಒಂದು ಭಯಾನಕ ಘಟನೆ ನಡೆದಿದೆ. ತಡಿಚೆಟ್ಲಪಲೆಂನಿಂದ ಕಂಚರಪಲೆಂ ಸರ್ವಿಸ್ ರಸ್ತೆಗೆ ಹೋಗುವ ದಾರಿಯಲ್ಲಿ ಸಂಜೀವಯ್ಯ ಕಾಲೋನಿ -1 ರ ನಿವಾಸಿಗಳ ನಡುವಿನ ಕಾಲುವೆಯಲ್ಲಿ ಮಗುವಿನ ದೇಹದ ಭಾಗಗಳು ಕಂಡುಬಂದಿವೆ. ಕೆಲವು ಅಪರಿಚಿತ ವ್ಯಕ್ತಿಗಳು ಮಗುವನ್ನು ಕೊಂದು ದೇಹದ ಭಾಗಗಳನ್ನು ಛಿದ್ರಗೊಳಿಸಿದ್ದಾರೆ. ನಂತರ, ಅವರು ಭಾಗಗಳನ್ನು ಚರಂಡಿಗೆ ಎಸೆದಿದ್ದಾರೆ. ಬೆಳಿಗ್ಗೆ ಮಗುವಿನ ದೇಹದ ಭಾಗಗಳು ಚರಂಡಿಯಲ್ಲಿ ಬಿದ್ದಿದ್ದನ್ನು ನೋಡಿದ ಸ್ಥಳೀಯರು ಅಲ್ಲಿಗೆ ಹೋಗಿ ಮಗುವಿನ ಕಾಲುಗಳು…
ಚಾಮರಾಜನಗರ : ಬೆಂಗಳೂರಿನಲ್ಲಿ 7.11 ಕೋಟಿ ರೂ. ದರೋಡೆ ಕೇಸ್ ಗೆ ಸಂಬಂಧಿಸಿದಂತೆ ಆರೋಪಿಗಳ ಸುಳಿವು ಸಿಕ್ಕಿದೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪೊಲೀಸರಿಗೆ ದರೋಡೆಕೋರರ ಸುಳಿವು ಸಿಕ್ಕಿದೆ. ದರೋಡೆಕೋರರು ಕೃತ್ಯಕ್ಕೆ ಬಳಸಿದ್ದ ಕಾರು ಪತ್ತೆಯಾಗಿದೆ. ಪೊಲೀಸರು ತನಿಖೆ ಮುಂದುವರೆಸಿದ್ದಾರೆ ಎಂದು ಮಾಹಿತಿ ನೀಡಿದ್ದಾರೆ. ಹೌದು ಇನ್ನೋವಾ ಆಂಧ್ರಪ್ರದೇಶದಾ ಚಿತ್ತೂರು ಬಳಿ ಕೃತ್ಯಕ್ಕೆ ಬಳಸಿದ್ದ ಇನ್ನೋವಾ ಕಾರನ್ನು ಬೆಂಗಳೂರು ಪೊಲೀಸರು ಸದ್ಯ ವಶಕ್ಕೆ ಪಡೆದಿದ್ದಾರೆ. ತಿರುಪತಿ ಕಾರು ಬಿಟ್ಟು ಆರೋಪಿಗಳು ಪರಾರಿ ಆಗಿದ್ದಾರೆ ದರೋಡೆಕೋರರಿಗಾಗಿ ಪೊಲೀಸರು ತೀವ್ರ ಹುಡುಕಾಟ ನಡೆಸುತ್ತಿದ್ದಾರೆ. ದರೋಡೆಕೋರರ ಗ್ಯಾಂಗ್ ತಿರುಪತಿಯಲ್ಲಿರುವ ಬಗ್ಗೆ ಮಾಹಿತಿ ಲಭ್ಯವಾಗಿದ್ದು, ತಿರುಪತಿ ಪೊಲೀಸರ ಜೊತೆ ಬೆಂಗಳೂರಿನ ದಕ್ಷಿಣ ವಿಭಾಗದ ಪೊಲೀಸರು ಶೋಧ ಕಾರ್ಯ ನಡೆಸುತ್ತಿದ್ದಾರೆ. ತಿರುಪತಿಯ ಪ್ರತಿಯೊಂದು ಹೋಟೆಲ್, ಲಾಡ್ಜ್ ಗಳಲ್ಲಿ ಪೊಲೀಸರು ತಪಾಸಣೆ ನಡೆಸುತ್ತಿದ್ದಾರೆ.
ಉಡುಪಿ : ರಾಜ್ಯದಲ್ಲಿ ಹೃದಯಘಾತಕ್ಕೆ ಮತ್ತೊಂದು ಬಲಿಯಾಗಿದ್ದು, ಯಕ್ಷಗಾನ ವೇಷಧಾರಿ ಈಶ್ವರ ಗೌಡ ಹೃದಯಾಘಾತದಿಂದ ನಿಧನರಾಗಿದ್ದಾರೆ. ಈಶ್ವರ ಗೌಡ ಮಂದಾರ್ತಿ ಮೇಳದ ಕಲಾವಿದರಾಗಿದ್ದರು. ಮಂದಾರ್ತಿ ಎರಡನೇ ಮೇಳದಲ್ಲಿ ಮಹಿಷಾಸುರ ಪಾತ್ರ ಮಾಡುತ್ತಿದ್ದರು. ರಾತ್ರಿ ಪಾತ್ರ ಮುಗಿಸಿ ವೇಷ ಕಳಚುತ್ತಿದ್ದಂತೆ ಅಸ್ವಸ್ಥರಾಗಿದ್ದರು. ಆಸ್ಪತ್ರೆಗೆ ದಾಖಲಿಸುವ ವೇಳೆ ಕೊನೆಯುಸಿರೆಳೆದಿದ್ದಾರೆ. ಈಶ್ವರ ಗೌಡ ಹೃದಯಾಘಾತದಿಂದ ನಿಧನರಾಗಿದ್ದಾರೆ. ಮಂದಾರ್ತಿ ಮೇಳದಲ್ಲಿ ಈಶ್ವರ ಗೌಡ ಅವರ ತಂದೆ ಕೂಡ ಹಿರಿಯ ವೇಷಧಾರಿಯಾಗಿದ್ದು, ಪ್ರತಿ ಪ್ರದರ್ಶನದಲ್ಲೂ ಚೌಕಿಯಲ್ಲಿ ತಂದೆಯ ಆಶೀರ್ವಾದ ಪಡೆದು ನಂತರವೇ ಮಗ ಪಾತ್ರ ನಿರ್ವಹಿಸುತ್ತಿದ್ದರು. ನಿನ್ನೆ ಕೂಡ ಪ್ರದರ್ಶನಕ್ಕೂ ಮುನ್ನ ಕೊನೆಯ ತಂದೆಯ ಕಾಲು ಮುಟ್ಟಿ ನಮಸ್ಕರಿಸಿ, ಮಹಿಷಾಸುರನ ಪಾತ್ರ ಪಾತ್ರ ನಿರ್ವಹಿಸಿದ್ದರು.ಆದರೆ ಪಾತ್ರ ಮುಗಿಸಿ, ತಂದೆಯ ಬಳಿ ಮರಳಿ ಬರುವ ಮೊದಲೇ ಈಶ್ವರ ಗೌಡ ಹೃದಯಾಘಾತದಿಂದ ಮೃತಪಟ್ಟಿದ್ದಾರೆ.
ಬೆಂಗಳೂರು : ನಾನು ಹಣಕಾಸು ಮಂತ್ರಿಯಾದಾಗ, “ಈ ಸಿದ್ದರಾಮಯ್ಯಂಗೆ ನೂರು ಕುರಿ ಎಣಿಸೋಕೆ ಬರಲ್ಲ ಬಜೆಟ್ ಮಂಡಿಸ್ತಾರಾ” ಎಂದು ಪತ್ರಿಕೆಯೊಂದರಲ್ಲಿ ಬರೆದಿದ್ದರು. ಇದನ್ನು ನಾನು ಸವಾಲಾಗಿ ಸ್ವೀಕರಿಸಿದೆ. 16 ಬಜೆಟ್ ಮಂಡಿಸಿದೆ. 17ನೇ ಬಜೆಟನ್ನೂ ಮಂಡಿಸುತ್ತೇನೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ. ಬೆಂಗಳೂರಿನ ಜ್ಞಾನಜ್ಯೋತಿ ಸಭಾಂಗಣದಲ್ಲಿ “ಎಲ್.ಜಿ.ಹಾವನೂರು ವರದಿಯ ಸುವರ್ಣ ಮಹೋತ್ಸವ” ಕಾರ್ಯಕ್ರಮದಲ್ಲಿ ಮಾತನಾಡಿದ ಸಿಎಂ ಸಿದ್ದರಾಮಯ್ಯ, ನಾನು ಹಣಕಾಸು ಮಂತ್ರಿಯಾದಾಗ, “ಈ ಸಿದ್ದರಾಮಯ್ಯಂಗೆ ನೂರು ಕುರಿ ಎಣಿಸೋಕೆ ಬರಲ್ಲ ಬಜೆಟ್ ಮಂಡಿಸ್ತಾರಾ” ಎಂದು ಪತ್ರಿಕೆಯೊಂದರಲ್ಲಿ ಬರೆದಿದ್ದರು. ಇದನ್ನು ನಾನು ಸವಾಲಾಗಿ ಸ್ವೀಕರಿಸಿದೆ. 16 ಬಜೆಟ್ ಮಂಡಿಸಿದೆ. 17ನೇ ಬಜೆಟನ್ನೂ ಮಂಡಿಸುತ್ತೇನೆ. ನನಗೆ ಅವಕಾಶ ಸಿಕ್ಕಿದ್ದರಿಂದ ನಾನು ಇಷ್ಟೆಲ್ಲಾ ಮಾಡಲು ಸಾಧ್ಯವಾಯಿತು. ಅವಕಾಶ ಸಿಗದಿದ್ದರೆ ನನ್ನಿಂದ ಇದನ್ನು ಮಾಡಲು ಸಾಧ್ಯವಿರಲಿಲ್ಲ. ಆದ್ದರಿಂದ ದಮನಿತ ಜಾತಿಗಳಿಗೆ ಅವಕಾಶ ಮುಖ್ಯ ಎಂದರು. ಹಿಂದುಳಿದವರು, ದಲಿತರು ಸೇರಿದಂತೆ ಶೂದ್ರ ಸಮುದಾಯದವರು ತಮ್ಮ ವಿರೋಧಿಗಳಾದ ಬಿಜೆಪಿ – ಆರ್.ಎಸ್.ಎಸ್ – ಎಬಿವಿಪಿ ಸೇರುತ್ತಾರಲ್ಲಾ ಇವರಿಗೆ ಏನು ಹೇಳೋದು?…
ಬೆಂಗಳೂರು : ರಾಜ್ಯ ಸರ್ಕಾರಿ ನೌಕರರೇ ಗಮನಿಸಿ. ಕರ್ನಾಟಕ ನಾಗರಿಕ ಸೇವೆ (ವರ್ತನೆ) ನಿಯಮಗಳು 1966ರ ಮುಖ್ಯಾಂಶಗಳು ಉಲ್ಲಂಘನೆಗೆ ವಿಧಿಸಬಹುದಾದ ದಂಡನೆಗಳು ಹಾಗೂ ಕೆ.ಸಿ.ಎಸ್. (ಸಿಸಿಎ) ನಿಯಮಗಳ ಸ್ಕೂಲ ಪರಿಚಯ ಇಲ್ಲಿದೆ. ಈ ನಿಯಮಗಳು ಸರ್ಕಾರಿ ಹುದ್ದೆಗಳಿಗೆ ನೇಮಿಸಿದ ಮತ್ತು ಸರ್ಕಾರಿ ಕಾರ್ಯ ಸಂಬಂಧಕ್ಕೆ ತೈನಾತಿಸಲ್ಪಟ್ಟ ಎಲ್ಲಾ ನೌಕರರಿಗೂ ಅನ್ವಯಿಸುತ್ತದೆ. (ನಿಯಮ 1) ಆದರೆ ಈ ಮುಂದೆ ಕಾಣಿಸಿದ ವರ್ಗಕ್ಕೆ ಸೇರಿದ ನೌಕರರಿಗೆ ಅನ್ವಯವಾಗುವುದಿಲ್ಲ. ಅ) ಅಖಿಲ ಭಾರತ ಸೇವಾ ಸದಸ್ಯರು ಆ) ರಾಜ್ಯಪಾಲರು, ಸಾಮಾನ್ಯ ಅಥವಾ ವಿಶೇಷ ಅಧಿಸೂಚನೆ ಹೊರಡಿಸಿ ಯಾವ ಹುದ್ದೆಯಲಿ ಇರುವಂತಹವರಿಗೆ ಈ ನಿಯಮ ಅನ್ವಯಿಸುವುದಿಲ್ಲ ಎಂದು ತಿಳಿಸಿರುವ ನೌಕರರು. ಇ) ಔದ್ಯಮಿಕ ನಿಯೋಜನೆ (ಸ್ಥಾಯೀ ಆದೇಶಗಳು) ಶಾಸನ 1946 (1946ರ ಕೇಂದ್ರ ಶಾಸನ ಸಂಖ್ಯೆ 20)ರ ಉಪಬಂಧಗಳು ಅನ್ವಯವಾಗುವ ಸರ್ಕಾರದ ಯಾವುದೇ ಕೈಗಾರಿಕಾ ಉದ್ಯಮದ ನೌಕರರು. ಅರ್ಥವಿವರಣೆ : (ನಿಯಮ 2) (ಅ) ಸರ್ಕಾರ ಎಂದರೆ : ಕರ್ನಾಟಕ ಸಕಾರ (ಆ) ಸರ್ಕಾರಿ ನೌಕರ ಎಂದರೆ…














