Author: kannadanewsnow57

ಬೆಂಗಳೂರು : ಕ್ವಾಂಟಮ್ ಕ್ಷೇತ್ರದಲ್ಲಿ ಕರ್ನಾಟಕವನ್ನು ಏಷ್ಯದ ರಾಜಧಾನಿಯನ್ನಾಗಿಸಲು ಪಣ ತೊಟ್ಟಿರುವ ರಾಜ್ಯ ಸರ್ಕಾರ ಕ್ವಾಂಟಮ್ ಮಿಷನ್ ಗಾಗಿ ₹1,000 ಕೋಟಿ ಮೀಸಲಿಡಲು ನಿರ್ಧರಿಸಿದೆ ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದ್ದಾರೆ. ಕ್ವಾಂಟಮ್ ಮಿಷನ್ ನಿಂದ 10 ಸಾವಿರ ಉದ್ಯೋಗ ಸೃಷ್ಟಿಯಾಗಲಿದೆ, ಸ್ಟಾರ್ಟ್‌ಅಪ್‌ಗಳ ಬೆಳವಣಿಗೆಗೆ ನೆರವು ನೀಡಲು ಕ್ವಾಂಟಮ್ ವೆ೦ಚರ್ ಕ್ಯಾಪಿಟಲ್ ಫ೦ಡ್ ಪ್ರಾರ೦ಭಿಸಲಾಗುವುದು ಮತ್ತು ಅಂತರರಾಷ್ಟ್ರೀಯ ಸಂಸ್ಥೆಗಳ ಸಹಯೋಗದಂತಹ ಕ್ರಮಗಳಿಂದಾಗಿ ಕರ್ನಾಟಕ ರಾಜ್ಯವನ್ನು ಜಾಗತಿಕ ಕ್ವಾಂಟಮ್ ಕೇಂದ್ರ ಮಾಡಲಾಗುವುದು. 2035ರ ವೇಳೆಗೆ 10 ಸಾವಿರ ಉದ್ಯೋಗ ಸೃಷ್ಟಿಸಿ, ಬೆಂಗಳೂರು ಅನ್ನು ಏಷ್ಯಾದ ಕ್ವಾಂಟಮ್ ರಾಜಧಾನಿ ಮಾಡುವ ಗುರಿ ಇದೆ. ₹1.75 ಲಕ್ಷ ಕೋಟಿ ಮೌಲ್ಯದ ಕ್ವಾಂಟಮ್ ಆರ್ಥಿಕತೆ ಸೃಷ್ಟಿಸಲಾಗುವುದು ಎಂದು ಹೇಳಿದ್ದಾರೆ.

Read More

ಬೆಂಗಳೂರು : ಮಾಜಿ ಸಂಸದ ಪ್ರಜ್ವಲ್ ರೇವಣ್ಣ ವಿರುದ್ಧ ಮೈಸೂರಿನ ಕೆ ಆರ್ ನಗರದ ಮಹಿಳೆಯ ಮೇಲೆ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಪಟ್ಟಂತೆ ಶುಕ್ರವಾರ ಬೆಂಗಳೂರಿನ ಜನಪ್ರತಿನಿಧಿಗಳ ನ್ಯಾಯಾಲಯ ಅಂತಿಮ ತೀರ್ಪು ಪ್ರಕಟಿಸಿದ್ದು, ಪ್ರಜ್ವಲ್ ರೇವಣ್ಣ ದೋಷಿ ಎಂದು ತೀರ್ಪು ನೀಡಿದೆ. ಇಂದು ಶಿಕ್ಷೆಯ ಪ್ರಮಾಣ ಪ್ರಕಟವಾಗಲಿದೆ. ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ನ್ಯಾ. ಸಂತೋಷ್ ಗಜಾನನ ಭಟ್ ಕೆ ಆರ್ ನಗರ ಅತ್ಯಾಚಾರ ಪ್ರಕರಣದಲ್ಲಿ ಪ್ರಜ್ವಲ್ ರೇವಣ್ಣ ದೋಷಿ ಎಂದು ತೀರ್ಪು ಪ್ರಕಟಿಸಿದೆ. 4 ಕೇಸ್ ಗಳಿಗೆ ಸಂಬಂಧಿಸಿದಂತೆ ಕೋರ್ಟ್ ಮೊದಲನೇ ಕೇಸಿಗೆ ತೀರ್ಪು ನೀಡಿದ್ದು, ಇಂದು ಪ್ರಜ್ವಲ್ ರೇವಣ್ಣ ಶಿಕ್ಷೆ ಪ್ರಮಾಣ ಪ್ರಕಟವಾಗಲಿದೆ. ಪ್ರಕರಣಕ್ಕೆ ಸಂಬಂಧಪಟ್ಟಂತೆ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದಲ್ಲಿ ವಿಚಾರಣೆ ಆರಂಭವಾಯಿತು. ಎರಡು ಕಡೆಯ ವಕೀಲರಿಂದ ವಾದ ಆಲಿಸಿದ ನ್ಯಾಯಾಧೀಶ ಸಂತೋಷದ ಕ್ಷಣ ಭಟ್ ಅವರು ಕೆಆರ್ ನಗರ ಮಹಿಳೆ ಮೇಲೆ ಅತ್ಯಾಚಾರ ಪ್ರಕರಣದಲ್ಲಿ ಪ್ರಜ್ವಲ್ ರೇವಣ್ಣ ದೋಷಿ ಎಂದು ತೀರ್ಪು ಪ್ರಕಟಿಸಿದರು ಇಂದು ಪ್ರಜ್ವಲ್ ಗೆ ಶಿಕ್ಷೆ ಪ್ರಮಾಣ…

Read More

ಬೆಂಗಳೂರು: ರಾಜ್ಯ ಸರ್ಕಾರಿ ಪಿಯು ಕಾಲೇಜುಗಳಲ್ಲಿ ವಿಜ್ಞಾನ ವಿಭಾಗ ವಿದ್ಯಾರ್ಥಿಗಳಿಗೆ ಸಿಇಟಿ, ನೀಟ್, ಜೆಇಇ ಪರೀಕ್ಷೆಗಳಿಗೆ ಉಚಿತ ತರಬೇತಿ ನೀಡಲು ಕಳೆದ ವರ್ಷ ಜಾರಿಗೆ ತಂದಿದ್ದ ‘ವಿದ್ಯಾವಿಜೇತ’ ಕಾರ್ಯಕ್ರಮವನ್ನು 2025–26ನೇ ಸಾಲಿನಲ್ಲೂ ಮುಂದುವರೆಸಲು ಸರ್ಕಾರ ಆಡಳಿತಾತ್ಮಕ ಅನುಮೋದನೆ ನೀಡಿದೆ. ಮೇಲೆ ಓದಲಾದ ಕ್ರಮಾಂಕ(1)ರಲ್ಲಿನ 2025-26ನೇ ಸಾಲಿನ ಆಯವ್ಯಯ ಭಾಷಣದಲ್ಲಿ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಗೆ ಸಂಬಂಧಿಸಿದಂತೆ ಕಂಡಿಕೆ 111(9)ರಲ್ಲಿ ಈ ಕೆಳಕಂಡಂತೆ ಘೋಷಿಸಲಾಗಿರುತ್ತದೆ.  “ವಿದ್ಯಾ ವಿಜೇತ ಕಾರ್ಯಕ್ರಮದಡಿ ಸರ್ಕಾರಿ ಪದವಿ ಪೂರ್ವ ಕಾಲೇಜುಗಳ 25000 ವಿದ್ಯಾರ್ಥಿಗಳಿಗೆ CET/NEET/JEE ತರಬೇತಿ ನೀಡಲಾಗಿದ್ದು, ಸದರಿ ಕಾರ್ಯಕ್ರಮವನ್ನು ಮುಂದುವರೆಸಲು 5 ಕೋಟಿ ರೂ ಒದಗಿಸಲಾಗುವುದು.” ಮೇಲೆ ಓದಲಾದ ಕ್ರಮಾಂಕ(2)ರಲ್ಲಿನ ಸರ್ಕಾರದ ಆದೇಶದಲ್ಲಿ, 2024-25ನೇ ಸಾಲಿನ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಗೆ ಸಂಬಂಧಿಸಿದ ಆಯವ್ಯಯ ಕಂಡಿಕೆ 101ಕ್ಕೆ ಸಂಬಂಧಿಸಿದಂತೆ, “ರಾಜ್ಯದ ಸರ್ಕಾರಿ ಪದವಿ ಪೂರ್ವ ಕಾಲೇಜುಗಳ ವಿಜ್ಞಾನ ಸಂಯೋಜನೆಯಲ್ಲಿ ಅಭ್ಯಾಸ ಮಾಡುತ್ತಿರುವ ವಿದ್ಯಾರ್ಥಿಗಳಿಗೆ ಆನ್-ಲೈನ್ ತರಗತಿಗಳ ಮೂಲಕ NEET/JEE/CET ಪ್ರವೇಶ ಪರೀಕ್ಷೆಗಳಿಗೆ ತರಬೇತಿಯನ್ನು ನೀಡಲು…

Read More

ಬೆಂಗಳೂರು : ರಾಜ್ಯದ ಜನತೆಗೆ ಸರ್ಕಾರವು ಸಿಹಿಸುದ್ದಿ ನೀಡಿದ್ದು, ಮೂತ್ರಪಿಂಡ, ಹೃದಯ, ಯಕೃತ್ ಮತ್ತು ಬಹುಅಂಗಾಂಗ ವೈಫಲ್ಯಕ್ಕೆ ಬಿಪಿಎಲ್ ಕಾರ್ಡ್ ದಾರರಿಗೆ ಸಿಗಲಿದೆ ಉಚಿತ ಚಿಕಿತ್ಸೆ. ಹೌದು, ಸುವರ್ಣ ಆರೋಗ್ಯ ಸುರಕ್ಷಾ ಟ್ರಸ್ಟ್ ಅಡಿಯಲ್ಲಿ ಮೂತ್ರಪಿಂಡ, ಹೃದಯ, ಯಕೃತ್ ಮತ್ತು ಬಹು ಅಂಗಾಂಗ ವೈಫಲ್ಯಕ್ಕೆ ಬಿಪಿಎಲ್ ಕಾರ್ಡ್ ಹೊಂದಿರುವವರಿಗೆ ಉಚಿತ ಕಸಿ ಚಿಕಿತ್ಸೆ ನೀಡಲಾಗುತ್ತಿದೆ.

Read More

ಬೆಂಗಳೂರು: ರಾಜ್ಯದ ಸಾರ್ವಜನಿಕ ಆಸ್ಪತ್ರೆಗಳಲ್ಲಿ ಔಷಧಗಳ ಕೊರತೆ ಆರೋಪದ ಬೆನ್ನಲ್ಲೇ 2025-26ನೇ ಸಾಲಿನಲ್ಲಿ ಸಾರ್ವಜನಿಕ ಆರೋಗ್ಯ ಸಂಸ್ಥೆಗಳಿಗೆ ಅಗತ್ಯವಿರುವ 883 ರೀತಿಯ ಔಷಧಿ ಖರೀದಿಸಲು 880.68 ಕೋಟಿ ರು. ಮೊತ್ತದ ಔಷಧ ಖರೀದಿ ಪ್ರಕ್ರಿಯೆಗೆ ಸರ್ಕಾರ ಅನುಮೋದನೆ ನೀಡಿದೆ. ರಾಜ್ಯದ ಸಾರ್ವಜನಿಕ ಆಸ್ಪತ್ರೆಯಲ್ಲಿ ಪ್ರಸ್ತುತ ಲಭ್ಯವಿರುವ 564 ರೀತಿಯ ಔಷಧಗಳು ಹಾಗೂ ವಿವಿಧ ಬೇಡಿಕೆಗಳಿಗೆ ಅನುಸಾರವಾಗಿ ಪ್ರಸ್ತುತ ಲಭ್ಯತೆ ಇಲ್ಲದ 319 ರೀತಿಯ ಔಷಧ ಸೇರಿ 883 ಬಗೆಯ ಔಷಧಿಗಳನ್ನು ಕೆಟಿಪಿಪಿ ಕಾಯ್ದೆ 1999 ಹಾಗೂ ಕೆಟಿಪಿಪಿ ನಿಯಮ 2000 ಅನುಸಾರ ಟೆಂಡರ್‌ಮೂಲಕ ಖರೀದಿಸಿ, ಪೂರೈಸುವಂತೆ ಆರೋಗ್ಯ ಇಲಾಖೆ ರಾಜ್ಯ ವೈದ್ಯಕೀಯ ಸರಬರಾಜು ನಿಗಮಕ್ಕೆ ಸೂಚಿಸಿದೆ. ಪ್ರಸ್ತಾವನೆಯಲ್ಲಿ ವಿವರಿಸಿರುವ ಅಂಶಗಳ ಹಿನ್ನೆಲೆಯಲ್ಲಿ 2025-26ನೇ ಸಾಲಿಗೆ ಸಾರ್ವಜನಿಕ ಆರೋಗ್ಯ ಸಂಸ್ಥೆಗಳ ಬೇಡಿಕೆಗಳಿಗನುಸಾರವಾಗಿ ಈ ಆದೇಶದೊಂದಿಗೆ ಲಗತ್ತಿಸಲಾದ ಅನುಬಂಧದಲ್ಲಿರುವ 890 ಔಷಧಗಳು, ಉಪಭೋಗ್ಯ ವಸ್ತುಗಳು ಹಾಗೂ ರಾಸಾಯನಿಕಗಳನ್ನು ಒಟ್ಟು ರೂ.880.68 ಕೋಟಿಗಳ (ಎಂಟು ನೂರ ಎಂಭತ್ತು ಕೋಟಿ ಅರವತ್ತೆಂಟು ಲಕ್ಷ ರೂಪಾಯಿಗಳು ಮಾತ್ರ) ಅಂದಾಜು…

Read More

ಭಾರತ ಸರ್ಕಾರದ ಗೃಹ ಸಚಿವಾಲಯದ ಅಡಿಯಲ್ಲಿ ಬರುವ ಗಡಿ ಭದ್ರತಾ ಪಡೆ (BSF) ಒಟ್ಟು 3588 ಕಾನ್ಸ್‌ಟೇಬಲ್ (ಟ್ರೇಡ್ಸ್‌ಮನ್) ಹುದ್ದೆಗಳಿಗೆ ಭಾರತೀಯ ಪುರುಷ ಮತ್ತು ಮಹಿಳಾ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಿದೆ. ಒಟ್ಟು ಹುದ್ದೆಗಳು 3588 ಕಾನ್‌ಸ್ಟೇಬಲ್ ಪುರುಷ 3406 ಮಹಿಳೆಯರು 182  ಅರ್ಹತೆ ಕಾನ್‌ಸ್ಟೇಬಲ್ (ಕಾರ್ಪೆಂಟರ್), ಕಾನ್ಸ್‌ಟೇಬಲ್ (ಪ್ಲಂಬರ್), ಕಾನ್ಸ್‌ಟೇಬಲ್ (ಪೇಂಟರ್), ಕಾನ್ಸ್‌ಟೇಬಲ್ (ಎಲೆಕ್ಟ್ರಿಷಿಯನ್), ಕಾನ್ಸ್‌ಟೇಬಲ್ (ಪಂಪ್ ಆಪರೇಟರ್) ಮತ್ತು ಕಾನ್ಸ್‌ಟೇಬಲ್ (ಅಪ್ಹೋಲ್ಸ್ಟರ್) ವೃತ್ತಿಗೆ, ಒಬ್ಬರು ಮಾನ್ಯತೆ ಪಡೆದ ಮಂಡಳಿಯಿಂದ ಮೆಟ್ರಿಕ್ಯುಲೇಷನ್ ಅಥವಾ ತತ್ಸಮಾನ ಪರೀಕ್ಷೆಯಲ್ಲಿ ಉತ್ತೀರ್ಣರಾಗಿರಬೇಕು. ಅಲ್ಲದೆ, ಸಂಬಂಧಿತ ವ್ಯಾಪಾರದಲ್ಲಿ ಐಟಿಐನಿಂದ ಎರಡು ವರ್ಷಗಳ ಪ್ರಮಾಣಪತ್ರ ಕೋರ್ಸ್ ಅಥವಾ ಕೈಗಾರಿಕಾ ತರಬೇತಿ ಸಂಸ್ಥೆ ಅಥವಾ ಸರ್ಕಾರಿ ಸಂಯೋಜಿತ ವೃತ್ತಿಪರ ಸಂಸ್ಥೆಯಿಂದ ಒಂದು ವರ್ಷದ ಪ್ರಮಾಣಪತ್ರ ಕೋರ್ಸ್ ಅನ್ನು ಪೂರ್ಣಗೊಳಿಸಿದವರು ಮತ್ತು ಸಂಬಂಧಿತ ವ್ಯಾಪಾರದಲ್ಲಿ ಕನಿಷ್ಠ ಒಂದು ವರ್ಷದ ಕೆಲಸದ ಅನುಭವ ಹೊಂದಿರುವವರು ಅರ್ಜಿ ಸಲ್ಲಿಸಬಹುದು. ನೀಡಿರುವ ಲಿಂಕ್‌ನಿಂದ ಇತರ ಹುದ್ದೆಗಳಿಗೆ ನಿಗದಿತ ಅರ್ಹತೆಯ ವಿವರಗಳನ್ನು ಪಡೆಯಿರಿ. ವಯೋಮಿತಿ ಅರ್ಜಿದಾರರ ವಯಸ್ಸು…

Read More

ಬೆಂಗಳೂರು : ಸ್ಯಾಂಡಲ್ ವುಡ್ ಯುವ ನಟ 34 ವರ್ಷದ ಸಂತೋಷ್‌ ಬಾಲರಾಜ್‌ ಜಾಂಡೀಸ್‌ನಿಂದ ಬಳಲುತ್ತಿದ್ದು, ಅವರ ಪರಿಸ್ಥಿತಿ ತೀರಾ ಗಂಭೀರವಾಗಿದ್ದು, ಕೋಮಾಕ್ಕೆ ಜಾರಿದ್ದಾರೆ ಎನ್ನಲಾಗಿದೆ. ಕನ್ನಡ ಚಿತ್ರರಂಗದ ಯುವ ನಟ ಸಂತೋಷ್ ಬಾಲರಾಜ್ ಅವರು ಕೋಮಾದಲ್ಲಿ ಇದ್ದಾರೆ. ಜಾಂಡಿಸ್ ತಗುಲಿದ್ದರಿಂದ ಅವರನ್ನು ಎರಡು ದಿನಗಳ ಹಿಂದೆ ಆಸ್ಪತ್ರೆಗೆ ದಾಖಲಿಸಲಾಗಿತ್ತು. ‘ಕರಿಯ’ ಸಿನಿಮಾ ನಿರ್ಮಾಪಕ ಆನೇಕಲ್ ಬಾಲರಾಜ್ ಅವರ ಪುತ್ರ ಸಂತೋಷ್ ಬಾಲರಾಜ್ ಕನ್ನಡದ ಹಲವು ಸಿನಿಮಾಗಳಲ್ಲಿ ಅವರು ಅಭಿನಯಿಸಿದ್ದಾರೆ. ಕುಮಾರಸ್ವಾಮಿ ಲೇಔಟ್​​ನಲ್ಲಿರುವ ಖಾಸಗಿ ಆಸ್ಪತ್ರೆಗೆ ಅವರನ್ನು ದಾಖಲಿಸಲಾಗಿದೆ. ‘ಕರಿಯ 2’, ‘ಕೆಂಪ’, ‘ಗಣಪ’, ‘ಬರ್ಕ್ಲಿ’, ‘ಸತ್ಯ’ ಸಿನಿಮಾಗಳಲ್ಲಿ ಸಂತೋಷ್ ಬಾಲರಾಜ್ ಅವರು ಅಭಿನಯಿಸಿದ್ದಾರೆ. ಜಾಂಡೀಸ್‌ ತೀವ್ರವಾಗಿರುವ ಕಾರಣ ಅವರನ್ನು ಕುಮಾರಸ್ವಾಮಿ ಲೇಔಟ್ ನ ಸಾಗರ್ ಅಫೋಲೋ ಆಸ್ಪತ್ರೆಗೆ ದಾಖಲು ಮಾಡಲಾಗಿದೆ.

Read More

ನವದೆಹಲಿ : ದೇಶದ ರೈತರಿಗೆ ಸಿಹಿಸುದ್ದಿಯೊಂದು ಸಿಕ್ಕಿದ್ದು, ಇಂದು PM-Kisan ಯೋಜನೆಯ 20 ನೇ ಕಂತು ಬಿಡುಗಡೆಯಾಗಲಿದ್ದು, ರೈತರು ತಮ್ಮ ಬ್ಯಾಂಕ್ ಖಾತೆಗೆ 2,000 ರೂ.ಗಳನ್ನು ಪಡೆಯಲಿದ್ದಾರೆ. ಹೌದು, PM ಕಿಸಾನ್ ನ 20 ನೇ ಕಂತಿನ ಬಿಡುಗಡೆ ದಿನಾಂಕವನ್ನು ಸರ್ಕಾರ ಅಧಿಕೃತವಾಗಿ ಘೋಷಿಸಿದೆ. ಆಗಸ್ಟ್ 2 ರ ಇಂದು ದೇಶಾದ್ಯಂತ 9.8 ಕೋಟಿಗೂ ಹೆಚ್ಚು ರೈತರಿಗೆ PM ಕಿಸಾನ್ ಸಮ್ಮಾನ್ ನಿಧಿ ಯೋಜನೆಯ 20 ನೇ ಕಂತನ್ನು ಪ್ರಧಾನಿ ಮೋದಿ ಬಿಡುಗಡೆ ಮಾಡಲಿದ್ದಾರೆ. ಕೃಷಿ ಮತ್ತು ರೈತ ಕಲ್ಯಾಣ ಸಚಿವಾಲಯವು ಅಧಿಕೃತ ಪ್ರಕಟಣೆಯಲ್ಲಿ ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ನಿಧಿ (PM-Kisan) ಯೋಜನೆಯ ಮುಂದಿನ (20 ನೇ) ಕಂತನ್ನು ಆಗಸ್ಟ್ 2 ರಂದು ವಾರಣಾಸಿಯಲ್ಲಿ ನಡೆಯುವ ಕಾರ್ಯಕ್ರಮದಲ್ಲಿ ಪ್ರಧಾನಿ ಮೋದಿ ಬಿಡುಗಡೆ ಮಾಡಲಿದ್ದಾರೆ ಎಂದು ತಿಳಿಸಿದೆ. ಪ್ರಧಾನ ಮಂತ್ರಿ ಶ್ರೀ ನರೇಂದ್ರ ಮೋದಿ ಅವರ ನೇತೃತ್ವದಲ್ಲಿ ವಾರಣಾಸಿಯಲ್ಲಿ ನಡೆಯಲಿರುವ ಈ ಕಾರ್ಯಕ್ರಮದ ಸಿದ್ಧತೆಗಳನ್ನು ಪರಿಶೀಲಿಸಲು ಮತ್ತು ಪ್ರಯೋಜನವು ಗರಿಷ್ಠ ಸಂಖ್ಯೆಯ…

Read More

ನವದೆಹಲಿ : ರಿಲಯನ್ಸ್ ಗ್ರೂಪ್ ಅಧ್ಯಕ್ಷ ಅನಿಲ್ ಅಂಬಾನಿ ಅವರ ಸಂಕಷ್ಟ ಕಡಿಮೆಯಾಗುವ ಸಾಧ್ಯತೆ ಕಾಣುತ್ತಿಲ್ಲ. ಯಾಕಂದ್ರೆ, ಜಾರಿ ನಿರ್ದೇಶನಾಲಯ ಶುಕ್ರವಾರ ಅವರ ವಿರುದ್ಧ 3,000 ಕೋಟಿ ರೂ. ಸಾಲ ವಂಚನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಲುಕ್ ಔಟ್ ಸುತ್ತೋಲೆ ಹೊರಡಿಸಿದೆ. ಅನಿಲ್ ಅಂಬಾನಿ ಅವರ ಗ್ರೂಪ್ ಕಂಪನಿಗಳ ವಿರುದ್ಧದ ಬ್ಯಾಂಕ್ ಸಾಲ ವಂಚನೆ ಆರೋಪದ ಹಣ ವರ್ಗಾವಣೆ ಪ್ರಕರಣದಲ್ಲಿ ಆಗಸ್ಟ್ 5ರಂದು ವಿಚಾರಣೆಗೆ ಇಡಿ ಅವರಿಗೆ ಸಮನ್ಸ್ ನೀಡಿತ್ತು ವರದಿಯಾಗಿದೆ. ಅಂಬಾನಿ ಅವರನ್ನ ದೆಹಲಿಯಲ್ಲಿರುವ ಇಡಿ ಪ್ರಧಾನ ಕಚೇರಿಯಲ್ಲಿ ವಿಚಾರಣೆಗೆ ಹಾಜರಾಗುವಂತೆ ಕೇಳಿಕೊಳ್ಳಲಾಗಿದೆ ಮತ್ತು ಹಣ ವರ್ಗಾವಣೆ ತಡೆ ಕಾಯ್ದೆ (PMLA) ಅಡಿಯಲ್ಲಿ ಏಜೆನ್ಸಿ ಅವರ ಹೇಳಿಕೆಯನ್ನು ದಾಖಲಿಸುವ ನಿರೀಕ್ಷೆಯಿದೆ. ಅವರ ಗ್ರೂಪ್ ಕಂಪನಿಗಳ ಕೆಲವು ಕಾರ್ಯನಿರ್ವಾಹಕರಿಗೆ ಸಮನ್ಸ್ ಜಾರಿ ಮಾಡಲಾಗಿದೆ. ಜುಲೈ 24ರಂದು ಇಡಿ ನಡೆಸಿದ ಶೋಧ ಕಾರ್ಯಾಚರಣೆಯ ನಂತರ ಇದು ಸಂಭವಿಸಿದೆ, ಇದು 50 ಕಂಪನಿಗಳ 35 ಆವರಣಗಳು ಮತ್ತು 25 ಜನರಲ್ಲಿ ಮೂರು ದಿನಗಳ ಕಾಲ ನಡೆಯಿತು.

Read More

ಕೊಚ್ಚಿ: ಖ್ಯಾತ ಮಲಯಾಳಂ ನಟ ಕಲಾಭವನ್ (51) ನವಾಸ್ ಇಲ್ಲಿನ ಚೊಟ್ಟನಿಕ್ಕರದಲ್ಲಿರುವ ಹೋಟೆಲ್ ಕೋಣೆಯಲ್ಲಿ ಶವವಾಗಿ ಪತ್ತೆಯಾಗಿದ್ದಾರೆ. ಪ್ರಾಥಮಿಕ ಮಾಹಿತಿಯ ಪ್ರಕಾರ ಅವರಿಗೆ ಹೃದಯಾಘಾತವಾಗಿದೆ. ಖ್ಯಾತ ಮಿಮಿಕ್ರಿ ಕಲಾವಿದ, ಗಾಯಕ ಮತ್ತು ನಟ ನವಾಸ್ ಶೂಟಿಂಗ್ ನಂತರ ತಮ್ಮ ಕೋಣೆಗೆ ತಲುಪಿದ್ದಾರೆ ಎಂದು ತಿಳಿದುಬಂದಿದೆ. ಚೆಕ್ ಔಟ್ ಮಾಡಲು ಸಮಯ ಕಳೆದರೂ ಅವರು ಹೊರಗೆ ಬಾರದಿದ್ದಾಗ, ರೂಮ್ ಬಾಯ್ ಪರಿಶೀಲಿಸಲು ಹೋದಾಗ ಅವರು ಮೃತಪಟ್ಟಿರುವುದು ಕಂಡುಬಂದಿದೆ. ‘ಪ್ರಕಂಬನಂ’ ಚಿತ್ರದ ಚಿತ್ರೀಕರಣಕ್ಕಾಗಿ ಹೋಟೆಲ್ ಕೋಣೆಯನ್ನು ಕಾಯ್ದಿರಿಸಲಾಗಿತ್ತು.

Read More