Author: kannadanewsnow57

ಮ೦ಗನ ಕಾಯಿಲೆ (ಕೆಎಫ್ಡಿ) ಎಂಬುದು ಉಣ್ಣೆಗಳ ಕಡಿತದಿಂದ ಮನುಷ್ಯರಿಗೆ ಹರಡುವ ವೈರಲ್ ಜ್ವರವಾಗಿದೆ. ಹೀಗಾಗಿ ಜನರು ಮಂಗನ ಕಾಯಿಲೆ ಬಗ್ಗೆ ಭಯ ಬೇಡ, ಎಚ್ಚರ ವಹಿಸಿ, ಜಾಗರೂಕರಾಗಿರಿ. ಲಕ್ಷಣಗಳೇನು? ವಾಕರಿಕೆ ಅಥವಾ ವಾಂತಿ ಸ್ನಾಯು ಸೆಳೆತ ಅತಿಸಾರ ಬೇಧಿ ಕೆಲವೊಮ್ಮೆ ನರಸಂಬಂಧಿ ಲಕ್ಷಣಗಳು ಕಾಣಿಸಿಕೊಳ್ಳಬಹುದು ತೀವ್ರ ಜ್ವರ ಮಂಗನ ಕಾಯಿಲೆಯ ನಿಯಂತ್ರಣ ಮತ್ತು ರಕ್ಷಣೆ ಹೇಗೆ? ದೇಹವನ್ನು ಸಂಪೂರ್ಣವಾಗಿ ಮುಚ್ಚುವಂತಹ ಉದ್ದನೆಯ ರಕ್ಷಣಾತ್ಮಕ ಬಟ್ಟೆಗಳನ್ನು ಧರಿಸಿ. ಅರಣ್ಯ ಅಥವಾ ಉಣ್ಣೆ ಬಾಧಿತ ಪ್ರದೇಶಗಳಿಗೆ ಭೇಟಿ ನೀಡುವ ಮೊದಲು DEET ಅಥವಾ DMP ತೈಲದಂತಹ ಕೀಟ ನಿವಾರಕಗಳನ್ನು ಹಚ್ಚಿಕೊಳ್ಳಿ ನಿಮ್ಮ ಸಾಕುಪ್ರಾಣಿಗಳ ಮೇಲಿರುವ ಉಣ್ಣೆಗಳನ್ನು ನಿಯಮಿತವಾಗಿ ತೆಗೆದುಹಾಕಿ. ಪ್ರಾಣಿಗಳ ಕೊಟ್ಟಿಗೆ ಮತ್ತು ಆಶ್ರಯ ತಾಣಗಳಲ್ಲಿ ನಿಯಮಿತವಾಗಿ ಕೀಟನಾಶಕಗಳನ್ನು ಸಿ೦ಪಡಿಸಿ. ಕಾಡಿಗೆ ಹೋದ ಪ್ರಾಣಿಗಳಿಂದ ಉಣ್ಣೆ ಬಾರದಂತೆ ತಡೆಯಲು ನಿಯಮಿತವಾಗಿ ಪ್ರಾಣಿಗಳ ಮೇಲೆ ಉಣ್ಣೆ ನಿವಾರಕಗಳನ್ನು ಬಳಸಿ. ಮನೆಯ ಸುತ್ತಮುತ್ತ ಒಣ ಎಲೆಗಳನ್ನು ರಾಶಿ ಹಾಕಬೇಡಿ. ಅವುಗಳಲ್ಲಿ ಪ್ರಾಣಾಪಾಯ ಉಂಟು ಮಾಡುವ ಉಣ್ಣೆಗಳಿರಬಹುದು. ಮ೦ಗಗಳು…

Read More

ಬೆಂಗಳೂರು : ನಿಮ್ಮ ಜಮೀನಿಗೆ ಇ-ಖಾತಾ ಪಡೆಯುವುದು ಈಗ ಸುಲಭ, ಮನೆಯಲ್ಲೇ ಕುಳಿತು ಆನ್‌ಲೈನ್ ಮೂಲಕ ಕೃಷಿಯೇತರ ಜಮೀನಿನ ಇ-ಖಾತಾ ಪಡೆದುಕೊಳ್ಳಿ. https://eswathu.karnataka.gov.in/ ಪೋರ್ಟಲ್‌ನಲ್ಲಿಯೇ ಸಿಗಲಿದೆ ನಮೂನೆ 9 ಮತ್ತು ನಮೂನೆ 11. ಗ್ರಾಮೀಣ ಜನರು ದಾಖಲೆಗಾಗಿ ಅಲೆದಾಡುವ ಅಗತ್ಯ ಇನ್ನಿಲ್ಲ, ಗ್ರಾಮೀಣ ಪ್ರದೇಶದ ಜನರು https://eswathu.karnataka.gov.in ವೆಬ್‌ಸೈಟ್‌ಗೆ ಲಾಗಿನ್ ಆಗುವ ಮೂಲಕ ಮನೆಯಲ್ಲಿಯೇ ಕುಳಿತು ತಮ್ಮ ಕೃಷಿಯೇತರ ಜಮೀನಿಗೆ ಇ-ಖಾತಾ ಪಡೆಯಲು ಅವಕಾಶ ನೀಡಲಾಗಿದೆ. ಇ-ಸ್ವತ್ತು ಸಹಾಯವಾಣಿ ಸಂಖ್ಯೆ- 9483476000 ಇ-ಸ್ವತ್ತು ತಂತ್ರಾಂಶದಲ್ಲಿನ ಬದಲಾವಣೆಗಳು ಸಾರ್ವಜನಿಕರು ಮನೆಯಲ್ಲಿದ್ದೇ ಆಸ್ತಿ ದಾಖಲೆಗಳನ್ನು ಪಡೆಯಬಹುದು. ಇ-ಸ್ವತ್ತು ನಮೂನೆಗಳನ್ನು ನಿಗದಿತ ಕಾಲಾವಧಿಯೊಳಗೆ ಪಡೆಯಬಹುದು. ನಿಗದಿತ ಅವಧಿಯಲ್ಲಿ ಅಧಿಕಾರಿಗಳು ಅನುಮೋದನೆ ನೀಡದಿದ್ದಲ್ಲಿ ಸ್ವಯಂಚಾಲಿತ ಅನುಮೋದನೆಗೆ ಅವಕಾಶ. ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿ ತೆರಿಗೆಗೆ ಒಳಪಡದ ಎಲ್ಲ ಆಸ್ತಿಗಳನ್ನು ತೆರಿಗೆ ವ್ಯಾಪ್ತಿಗೆ ಒಳಪಡಿಸಲು ಅವಕಾಶ. ಇ-ಖಾತಾ ವಿತರಣೆಯಲ್ಲಿ ಗ್ರಾಮ ಪಂಚಾಯತಿ ಅಧ್ಯಕ್ಷರ ಅನುಮೋದನೆಗೆ ಅವಕಾಶ. ಎಲ್ಲ ಗ್ರಾಮ ಪಂಚಾಯತಿಗಳಲ್ಲಿ ಏಕರೂಪದ/ಮಾದರಿಯ ತೆರಿಗೆ ಹಾಗೂ ಶುಲ್ಕಗಳ ನಿಗದಿ. ಗ್ರಾಮ ಪಂಚಾಯತಿ…

Read More

ಬೆಂಗಳೂರು : 10 ಜಿಲ್ಲೆಗಳಿಗೆ ಸಂಬಂಧಿಸಿದ 12 ತಾಲ್ಲೂಕುಗಳ, ಜಿಲ್ಲಾ ಪಂಚಾಯಿತಿ ಹಾಗೂ ತಾಲ್ಲೂಕು ಪಂಚಾಯಿತಿಗಳ ಪ್ರಾದೇಶಿಕ ಚುನಾವಣಾ ಕ್ಷೇತ್ರಗಳನ್ನು ಈ ಕೂಡಲೇ ಜಾರಿಗೆ ಬರುವಂತೆ ರಾಜ್ಯ ಸರ್ಕಾರ ಹಿಂಪಡೆದಿದೆ. ಮೇಲೆ ಓದಲಾದ 1 ರಿಂದ 20 ರ ಸರ್ಕಾರದ ಅಧಿಸೂಚನೆಗಳಲ್ಲಿ 10 ಜಿಲ್ಲೆಗಳಿಗೆ ಸಂಬಂಧಿಸಿದ 12 ತಾಲ್ಲೂಕುಗಳ, ಜಿಲ್ಲಾ ಪಂಚಾಯಿತಿ ಹಾಗೂ ತಾಲ್ಲೂಕು ಪಂಚಾಯಿತಿಗಳ ಚುನಾಯಿತ ಸದಸ್ಯರ ಸಂಖ್ಯೆಯನ್ನು ಹಾಗೂ ಪ್ರಾದೇಶಿಕ ಚುನಾವಣಾ ಕ್ಷೇತ್ರಗಳ ಸೀಮಾ/ಗಡಿಗಳನ್ನು ಗುರುತಿಸಿ ಅಧಿಸೂಚನೆಗಳನ್ನು, ಸರ್ಕಾರವು ಕರ್ನಾಟಕ ರಾಜ್ಯ ಪತ್ರದಲ್ಲಿ ಪ್ರಕಟಿಸಿದೆ. ಮೇಲೆ ಓದಲಾದ 21 ರಿಂದ 29 ರ ಅಧಿಸೂಚನೆಗಳಲ್ಲಿ ನಗರಾಭಿವೃದ್ಧಿ ಇಲಾಖೆಯು, ಕೆಲವು ಗ್ರಾಮೀಣ ಪ್ರದೇಶಗಳನ್ನು ನಗರ ಸಂಸ್ಥೆಗಳನ್ನಾಗಿ ಪರಿವರ್ತಿಸಿ ಅಧಿಸೂಚನೆಗಳನ್ನು ಕರ್ನಾಟಕ ರಾಜ್ಯ ಪತ್ರದಲ್ಲಿ ಪ್ರಕಟಿಸಿರುತ್ತದೆ. ಮೇಲೆ ಓದಲಾದ 30ರ ಅಧಿಸೂಚನೆಯಲ್ಲಿ ಕಂದಾಯ ಇಲಾಖೆಯು ಬೆಂಗಳೂರು ದಕ್ಷಿಣ ಜಿಲ್ಲೆಯ ಮಾಗಡಿ ತಾಲ್ಲೂಕು ಸೋಲೂರು ಹೋಬಳಿಯ 68 ಗ್ರಾಮಗಳನ್ನು ಬೇರ್ಪಡಿಸಿ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನೆಲಮಂಗಲ ತಾಲ್ಲೂಕಿಗೆ ಸೇರ್ಪಡೆಗೊಳಿಸಿರುತ್ತದೆ. ಈ ಹಿನ್ನೆಲೆಯಲ್ಲಿ ಪರಿವರ್ತನೆಗೊಂಡಿರುವ…

Read More

ಬೆಂಗಳೂರು: ಇನ್ಮುಂದೆ ರಾಜ್ಯದಲ್ಲಿ ಕರ್ತವ್ಯ ನಿರ್ವಹಿಸುತ್ತಿರುವಂತ ಪೊಲೀಸ್ ಅಧಿಕಾರಿ, ಸಿಬ್ಬಂದಿಗಳ ಹುಟ್ಟಿದ ಹಬ್ಬ, ವಿವಾಹ ವಾರ್ಷಿಕೋತ್ಸವಕ್ಕೆ ರಜೆ ನೀಡುವಂತೆ ಸರ್ಕಾರ ಪೊಲೀಸ್ ಮಹಾ ನಿರ್ದೇಶಕರು ಮತ್ತು ಆರಕ್ಷಕ ಮಹಾ ನಿರೀಕ್ಷಕರಿಗೆ ಪತ್ರದಲ್ಲಿ ಸೂಕ್ತ ಕ್ರಮಕ್ಕೆ ಸೂಚಿಸಿದೆ. ಈ ಕುರಿತಂತೆ ರಾಜ್ಯ ಒಳಾಡಳಿತ ಇಲಾಖೆಯ ಸರ್ಕಾರದ ಅಧೀನ ಕಾರ್ಯದರ್ಶಿಯವರು ರಾಜ್ಯದ ಮಹಾ ನಿರ್ದೇಶಕರು ಮತ್ತು ಆರಕ್ಷಕ ಮಹಾ ನಿರ್ದೇಶಕರಿಗೆ ಪತ್ರ ಬರೆದಿದ್ದಾರೆ. ಅದರಲ್ಲಿ ಕರ್ನಾಟಕ ರಾಜ್ಯ ಪೊಲೀಸ್ ದೂರುಗಳ ಪ್ರಾಧಿಕಾರದ ನಾಗರೀಕ ಸಮಾಜದ ಸದಸ್ಯರಾದಂತ ಮೋಹನ್ ಕುಮಾರ್ ದಾನಪ್ಪ ಎಂಬುವರು ಪತ್ರವನ್ನು ಬರೆದಿರುವುದನ್ನು ಉಲ್ಲೇಖಿಸಿದ್ದಾರೆ. ಮೋಹನ್ ಕುಮಾರ್ ದಾನಪ್ಪ ಅವರು ರಾಜ್ಯ ಪೊಲೀಸ್ ಇಲಾಖೆಯಲ್ಲಿ ಕಾರ್ಯನಿರ್ವಹಿಸುತ್ತಿರುವ ಪೊಲೀಸ್ ಕಾನ್ಸ್ ಟೇಬಲ್ ನಿಂದ ಎಎಸ್ಐ ದರ್ಜೆಯವರೆಗಿನ ಸಿಬ್ಬಂದಿಗಳ ಹುಟ್ಟು ಹಬ್ಬ ಮತ್ತು ವಿವಾಹ ವಾರ್ಷಿಕೋತ್ಸವದ ದಿನದಂದು ಕಡ್ಡಾಯ ರಜೆ ನೀಡುವಂತೆ ಕೋರಿರುವುದಾಗಿ ತಿಳಿಸಿದ್ದಾರೆ. ಈ ಪತ್ರದ ಬಗ್ಗೆ ನಿಯಮಾನುಸಾರ ಮುಂದಿನ ಕ್ರಮ ವಹಿಸುವಂತೆ ರಾಜ್ಯದ ಪೊಲೀಸ್ ಮಹಾ ನಿರ್ದೇಶಕರು ಮತ್ತು ಆರಕ್ಷಕ ಮಹಾ ನಿರೀಕ್ಷಕರಿಗೆ…

Read More

ಭಾರತೀಯ ರೈಲ್ವೆಯಲ್ಲಿ ಸರ್ಕಾರಿ ಕೆಲಸದ ಕನಸು ಕಾಣುತ್ತಿರುವ ಯುವಕರಿಗೆ ಇಲ್ಲಿದೆ ಒಂದು ಶುಭ ಸುದ್ದಿ. ರೈಲ್ವೆ ನೇಮಕಾತಿ ಮಂಡಳಿ (RRB) ಕೇಂದ್ರೀಕೃತ ಉದ್ಯೋಗ ಸೂಚನೆ (CEN) ಸಂಖ್ಯೆ 09/2025 ರ ಅಡಿಯಲ್ಲಿ ವಿವಿಧ ಲೆವೆಲ್-1 (7ನೇ CPC ಪೇ ಮ್ಯಾಟ್ರಿಕ್ಸ್) ಹುದ್ದೆಗಳಿಗೆ ನೇಮಕಾತಿಗಾಗಿ ಸೂಚಕ ಅಧಿಸೂಚನೆಯನ್ನು ಹೊರಡಿಸಿದೆ. ಈ ನೇಮಕಾತಿ ಪ್ರಕ್ರಿಯೆಯ ಅಡಿಯಲ್ಲಿ ಸುಮಾರು 22,000 ಹುದ್ದೆಗಳಿಗೆ ಅರ್ಹ ಅಭ್ಯರ್ಥಿಗಳಿಂದ ಆನ್‌ಲೈನ್ ಅರ್ಜಿಗಳನ್ನು ಆಹ್ವಾನಿಸಲಾಗುತ್ತದೆ. ರೈಲ್ವೆ ನೇಮಕಾತಿ ಮಂಡಳಿ (RRB) ಜಾಹೀರಾತು ಸಂಖ್ಯೆ CEN 09/2025 ಅಡಿಯಲ್ಲಿ ಸುಮಾರು 22,000 ಗ್ರೂಪ್ D ಲೆವೆಲ್-1 ಹುದ್ದೆಗಳಿಗೆ ಜಾಹೀರಾತು ಪ್ರಕಟಿಸಿದೆ. ಈ ಉದ್ಯೋಗಗಳು ಎಂಜಿನಿಯರಿಂಗ್, ಎಲೆಕ್ಟ್ರಿಕಲ್, ಮೆಕ್ಯಾನಿಕಲ್ ಮತ್ತು ಸಿಗ್ನಲ್ ಮತ್ತು ದೂರಸಂಪರ್ಕ ಸೇರಿದಂತೆ ಹಲವಾರು ಕ್ಷೇತ್ರಗಳಲ್ಲಿ ವಿವಿಧ ಪಾತ್ರಗಳನ್ನು ಒಳಗೊಂಡಿವೆ. ನೇಮಕಾತಿಯಲ್ಲಿ ಟ್ರ್ಯಾಕ್ ಮೇಂಟೇನರ್ ಗ್ರೇಡ್ IV, ಪಾಯಿಂಟ್‌ಸ್‌ಮನ್, ಸಹಾಯಕರು, ಸಹಾಯಕರು ಮತ್ತು ವಿವಿಧ ಲೆವೆಲ್-1 ಹುದ್ದೆಗಳು ಸೇರಿವೆ. ಅಭ್ಯರ್ಥಿಗಳು ಜನವರಿ 21, 2026 ರಿಂದ www.rrbapply.gov.in ನಲ್ಲಿ ಈ ನೇಮಕಾತಿಗೆ…

Read More

ಬೆಂಗಳೂರು : ಕರ್ನಾಟಕ ರಾಜ್ಯ ಸರ್ಕಾರಿ ಮಹಿಳಾ ನೌಕರರಿಗೆ ಶಿಶುಪಾಲನಾ ರಜೆ ಮಂಜೂರು ಮಾಡುವ ಕುರಿತು ರಾಜ್ಯ ಸರ್ಕಾರ ಮಹತ್ವದ ಆದೇಶ ಹೊರಡಿಸಿದೆ. ಮೇಲೆ ಓದಲಾದ(1)ರ ಆದೇಶದಲ್ಲಿ ಬುದ್ಧಿಮಾಂದ್ಯ/ಅಂಗವಿಕಲ ಮಕ್ಕಳನ್ನು ನೋಡಿಕೊಳ್ಳಲು ರಾಜ್ಯ ಸರ್ಕಾರಿ ಮಹಿಳಾ ನೌಕರರಿಗೆ ವೈದ್ಯಕೀಯ ಮಂಡಳಿಯ ಪ್ರಮಾಣ ಪತ್ರದ ಆಧಾರದ ಮೇಲೆ ಕೆಲವು ಷರತ್ತಿಗೊಳಪಟ್ಟು ಒಂದು ವರ್ಷದಲ್ಲಿ ಮೂರು ಕಂತುಗಳಿಗೆ ಮೀರದಂತೆ ಹಾಗೂ 15 ದಿನಗಳಿಗೆ ಕಡಿಮೆ ಇಲ್ಲದಂತೆ ಇಡೀ ಸೇವಾವಧಿಯಲ್ಲಿ ಎರಡು ವರ್ಷಗಳ ಅವಧಿಗೆ ಅಂದರೆ 730 ದಿನಗಳ ಶಿಶುಪಾಲನಾ ರಜೆಯನ್ನು ಮಂಜೂರು ಮಾಡಲಾಗಿದೆ. ಪ್ರಸಕ್ತ ಸರ್ಕಾರವು 2021-22ನೇ ಸಾಲಿನ ಆಯವ್ಯಯ ಭಾಷಣದ ಕಂಡಿಕೆ-37ರಲ್ಲಿ ರಾಜ್ಯ ಸರ್ಕಾರದ ಮಹಿಳಾ ನೌಕರರಿಗೆ ಚಾಲ್ತಿಯಲ್ಲಿರುವ ಪ್ರಸೂತಿ ರಜೆಯೊಂದಿಗೆ ಒಟ್ಟು ಸೇವಾವಧಿಯಲ್ಲಿ ಆರು ತಿಂಗಳವರೆಗೆ ಅಂದರೆ 180 ದಿನಗಳ ಶಿಶುಪಾಲನಾ ರಜೆಯನ್ನು ಘೋಷಿಸಿದ್ದು, ಈ ಕುರಿತಂತೆ ರಾಜ್ಯ ಸರ್ಕಾರವು ಪರಿಶೀಲಿಸಿ ಈ ಕೆಳಕಂಡಂತೆ ಆದೇಶಿಸಿದೆ. ಕರ್ನಾಟಕ ರಾಜ್ಯ ಸರ್ಕಾರಿ ಮಹಿಳಾ ನೌಕರರಿಗೆ ಈ ಕೆಳಕಂಡ ಷರತ್ತುಗಳ ಮೇರೆಗೆ ಇಡೀ ಸೇವಾವಧಿಯಲ್ಲಿ…

Read More

ಬೆಂಗಳೂರು : ರಾಜ್ಯದಲ್ಲಿ 2026-27ನೇ ಶೈಕ್ಷಣಿಕ ಸಾಲಿನ ವಸತಿ ಶಾಲೆಗಳ 6ನೇ ತರಗತಿ ಪ್ರವೇಶಾತಿ ಅಧಿಸೂಚನೆ ಹೊರಡಿಸಲಾಗಿದ್ದು, ವಸತಿ ಶಾಲೆಗಳ 6ನೇ ತರಗತಿ ಪ್ರವೇಶಕ್ಕೆ ಅರ್ಜಿಯನ್ನು ಸಲ್ಲಿಸಬಹುದಾಗಿರುತ್ತದೆ. ಮೇಲ್ಕಂಡ ವಿಷಯಕ್ಕೆ ಸಂಬಂಧಿಸಿದಂತೆ, ಅಲ್ಪಸಂಖ್ಯಾತರ ನಿರ್ದೇಶನಾಲಯದ ಅಧೀನದ ಡಾ|| ಎ.ಪಿ.ಜೆ ಅಬ್ದುಲ್ ಕಲಾಂ ವಸತಿ ಶಾಲೆಗಳು, ಮೊರಾರ್ಜಿ ದೇಸಾಯಿ ವಸತಿ ಶಾಲೆಗಳು ಮತ್ತು ಸರ್ಕಾರಿ ಮುಸ್ಲಿಂ ವಸತಿ ಶಾಲೆಗಳು ಸೇರಿದಂತೆ ಒಟ್ಟು 173 ವಸತಿ ಶಾಲೆಗಳು ಕಾರ್ಯನಿರ್ವಹಿಸುತ್ತಿವೆ. ಪ್ರಸ್ತುತ 2026-27ನೇ ಶೈಕ್ಷಣಿಕ ಸಾಲಿನಲ್ಲಿ 6ನೇ ತರಗತಿ ಪ್ರವೇಶ ಪ್ರಕ್ರಿಯೆಯನ್ನು ಪ್ರಾರಂಭಿಸಲು ಉದ್ದೇಶಿಸಲಾಗಿದೆ. 2026-27ನೇ ಸಾಲಿನಲ್ಲಿ ಪ್ರವೇಶ ಪ್ರಕ್ರಿಯೆಗಾಗಿ ಅರ್ಹವಿರುವ ವಿದ್ಯಾರ್ಥಿಗಳು ಆನ್‌ಲೈನಲ್ಲಿ ಸೇವಾ ಸಿಂಧು ಪೋರ್ಟಲ್ ಮೂಲಕ ಅಲ್ಪಸಂಖ್ಯಾತರ ನಿರ್ದೇಶನಾಲಯದ ವಿವಿಧ ಮಾದರಿಯ ವಸತಿ ಶಾಲೆಗಳ 6ನೇ ತರಗತಿ ಪ್ರವೇಶಕ್ಕೆ ಅರ್ಜಿಯನ್ನು ಸಲ್ಲಿಸಬಹುದಾಗಿರುತ್ತದೆ. ಎಲ್ಲಾ ಜಿಲ್ಲೆಗಳ ಜಿಲ್ಲಾ ಅಧಿಕಾರಿಗಳು, ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ, ಇವರು ತಮ್ಮ ಅಧೀನದ ವಿವಿಧ ಮಾದರಿಯ ವಸತಿ ಶಾಲೆಗಳಲ್ಲಿ ಶೇ.100 ರಷ್ಟು ದಾಖಲಾತಿಯನ್ನು ಹೊಂದಲು ಜಿಲ್ಲಾ ಹಂತದಲ್ಲಿಯೇ ಪ್ರತ್ಯೇಕ…

Read More

ಬೆಂಗಳೂರು : ದ್ವಿತೀಯ ಪಿಯುಸಿಯಲ್ಲಿ ಡಿಜಿಟಲ್ ಪರೀಕ್ಷೆಗೆ ಅವಕಾಶ ನೀಡುವ ಮೂಲಕ ರಾಜ್ಯ ಸರ್ಕಾರ ಮಹತ್ವದ ಹೆಜ್ಜೆ ಇಟ್ಟಿದೆ.ವಿಶೇಷಚೇತನ ವಿದ್ಯಾರ್ಥಿಗಳಿಗೆ ಅನುಕೂಲವಾಗುವಂತೆ ಲ್ಯಾಪ್ ಟಾಪ್ ಹಾಗೂ ಕಂಪ್ಯೂಟರ್ ಬಳಸಿ ಪರೀಕ್ಷೆ ಬರೆಯಲು ಅವಕಾಶ ಕಲ್ಪಿಸಲಾಗಿದೆ. ದೃಷ್ಟಿದೋಷವುಳ್ಳ/ದೃಷ್ಟಿಮಾಂದ್ಯ (Visually Impaired) ವಿದ್ಯಾರ್ಥಿಗಳಿಗೆ 2025-26 ನೇ ಸಾಲಿನಿಂದ ದ್ವಿತೀಯ ಪಿಯುಸಿ ಪರೀಕ್ಷೆಯನ್ನು ಡಿಜಿಟಲ್ ರೂಪದಲ್ಲಿ ಪರೀಕ್ಷೆ ಬರೆಯಲು ಅವಕಾಶ ಕಲ್ಪಿಸಿ ಮಹತ್ವದ ಆದೇಶ ಹೊರಡಿಸಿದೆ. ದೃಷ್ಟಿದೋಷವುಳ್ಳ/ದೃಷ್ಟಿಮಾಂದ್ಯ (Visually Impaired) ವಿದ್ಯಾರ್ಥಿಗಳಿಗೆ ಸಿ.ಬಿ.ಎಸ್.ಇ ಮಂಡಳಿಯಲ್ಲಿ ಕಂಪ್ಯೂಟರ್ಗಳನ್ನು ಬಳಸಿ 12ನೇ ತರಗತಿಯ ಬೋರ್ಡ್ ಪರೀಕ್ಷೆ ಬರೆಯಲು ಅವಕಾಶವಿದ್ದು, ಅದೇ ರೀತಿ ರಾಜ್ಯ ಪಠ್ಯಕ್ರಮದ ದ್ವಿತೀಯ ಪಿಯುಸಿ ಪರೀಕ್ಷೆಗೆ ಹಾಜರಾಗುವ ದೃಷ್ಟಿದೋಷವುಳ್ಳ/ದೃಷ್ಟಿಮಾಂದ್ಯ (Visually Impaired) ವಿದ್ಯಾರ್ಥಿಗಳಿಗೆ 2025-26ನೇ ಸಾಲಿನಿಂದ ಅವಕಾಶ ಕಲ್ಪಿಸಲಾಗಿದೆ. ಈ ಹಿನ್ನೆಲೆಯಲ್ಲಿ ಸದರಿ ವಿದ್ಯಾರ್ಥಿಗಳಿರುವ ಕಾಲೇಜುಗಳ ಪ್ರಾಂಶುಪಾಲರು ಹಾಗೂ ಪರೀಕ್ಷಾ ಕೇಂದ್ರದ ಮುಖ್ಯ ಅಧಿಕ್ಷಕರು ಪರೀಕ್ಷಾ ಪೂರ್ವ ಹಾಗೂ ಪರೀಕ್ಷಾ ದಿನಗಳಂದು ಕೆಳಕಂಡಂತೆ ಕ್ರಮವಹಿಸಲು ತಿಳಿಸಿದೆ. 1. ಪರೀಕ್ಷಾ ಕೇಂದ್ರದಲ್ಲಿ ದೃಷ್ಟಿದೋಷವುಳ್ಳ/ದೃಷ್ಟಿಮಾಂದ್ಯ (Visually Impaired) ವಿದ್ಯಾರ್ಥಿಗಳು…

Read More

ಬೆಂಗಳೂರು : ರಾಜ್ಯದ ರೈತರೇ ಗಮನಿಸಿ, ಕೃಷಿ ಇಲಾಖೆಯಿಂದ ನಿಮಗೆ ಕೃಷಿ ಯಂತ್ರೋಪಕರಣ, ಬೆಳೆ ವಿಮೆ, ನೀರಾವರಿ, ಮಣ್ಣು ಪರೀಕ್ಷೆ, ಆದಾಯ ಬೆಂಬಲ ಮತ್ತು ಮಾರುಕಟ್ಟೆ ಸಂಪರ್ಕದಂತಹ ವಿವಿಧ 21 ಸೌಲಭ್ಯಗಳು ಸಿಗಲಿವೆ. ರಾಜ್ಯದ ರೈತರಿಗೆ ಕೃಷಿ ಇಲಾಖೆಯಿಂದ ಸಿಗುವ ಸೌಲಭ್ಯಗಳೇನು? ಇಲ್ಲಿದೆ ಸಂಪೂರ್ಣ ಮಾಹಿತಿ 1. ಬೀಜಗಳ ಪೂರೈಕೆ: ಕೃಷಿ ಇಲಾಖೆಯ ಬೀಜಗಳ ಪೂರೈಕೆ ಮತ್ತು ಇತರೆ ಹೂಡುವಳಿ ಯೋಜನೆಯಡಿ ರಾಜ್ಯದ ಎಲ್ಲಾ ವರ್ಗದ ರೈತರಿಗೆ ವಿವಿಧ ಕೃಷಿ ಬೆಳೆಗಳ (ಭತ್ತ, ರಾಗಿ, ಜೋಳ, ಮುಸುಕಿನ ಜೋಳ, ಸಜ್ಜೆ, ತೊಗರಿ, ಕಡಲೆ, ಹೆಸರು, ಉದ್ದು, ಅಲಸಂದೆ, ನೆಲಗಡಲೆ, ಸೂರ್ಯಕಾಂತಿ, ಸೋಯಾ ಅವರೆ, ಹತ್ತಿ ಇತ್ಯಾದಿ) ಪ್ರಮಾಣಿತ/ ನಿಜ ಚೀಟಿ ಬಿತ್ತನೆ ಬೀಜಗಳನ್ನು ಸಾಮಾನ್ಯ ವರ್ಗದ ರೈತರಿಗೆ ಶೇ. 50 ಹಾಗೂ ಪರಿಶಿಷ್ಟ ಜಾತಿ/ ಪಂಗಡದ ರೈತರಿಗೆ ಶೇ.75 ರ ರಿಯಾಯಿತಿ ದರದಲ್ಲಿ ವಿತರಣೆ ಮಾಡಲಾಗುತ್ತಿದೆ. ಒಟ್ಟಾರೆ ಗರಿಷ್ಟ 2.00 ಹೆಕ್ಟೇರ್ ಅಥವಾ ಅವರ ವಾಸ್ತವಿಕ ಹಿಡುವಳಿ (Actual holding) ಯಾವುದು…

Read More

ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ ವತಿಯಿಂದ 2025-26ನೆ ಸಾಲಿನ ಸಾಧನೆ ಯೋಜನೆಯ ಸೌಲಭ್ಯ ಪಡೆಯಲು ಅರ್ಹ ವಿಕಲಚೇತರಿಂದ ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಲು ಜನವರಿ 31, 2026 ರವರೆಗೆ ಅವಧಿಯನ್ನು ವಿಸ್ತರಿಸಲಾಗಿದೆ. ಆಸಕ್ತ ವಿಕಲೇಚತನ ಫಲಾನುಭವಿಗಳು ಗ್ರಾಮ್ ಒನ್, ಕರ್ನಾಟಕ ಒನ್, ಬೆಂಗಳೂರು ಒನ್, ಮತ್ತು ಸೇವಾ ಸಿಂಧು ಪೋರ್ಟಲ್ (https://sevasindhu.karnataka.gov.in/sevasindhu/DepartmentServices) ನಲ್ಲಿ ಅಗತ್ಯ ದಾಖಲೆಗಳೊಂದಿಗೆ ಅರ್ಜಿಗಳನ್ನು ಸಲ್ಲಿಸಬಹುದು. ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಅಂಗವಿಕಲರ ಕಲ್ಯಾಣಾಧಿಕಾರಿಗಳ ಕಛೇರಿ, ಸುಧಾರಣಾ ಸಂಸ್ಥೆಗಳ ಸಂಕೀರ್ಣ ಹೊಸೂರು ರಸ್ತೆ, ಬೆಂಗಳೂರು ನಗರ ಜಿಲ್ಲೆ-560029 ಅಥವಾ ದೂರವಾಣಿ ಸಂಖ್ಯೆ-080-29752324 ಗೆ ಸಂಪರ್ಕಿಸಬಹುದು ಎಂದು ಬೆಂಗಳೂರು ನಗರ ಜಿಲ್ಲಾ ಅಂಗವಿಕಲರ ಕಲ್ಯಾಣಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Read More