Subscribe to Updates
Get the latest creative news from FooBar about art, design and business.
Author: kannadanewsnow57
ನವದೆಹಲಿ: ರಾಷ್ಟ್ರೀಯ ಪಿಂಚಣಿ ವ್ಯವಸ್ಥೆ (ಎನ್ಪಿಎಸ್) ಅಡಿಯಲ್ಲಿ ಬರುವ ಕೇಂದ್ರ ಸರ್ಕಾರಿ ನೌಕರರು ಶೀಘ್ರದಲ್ಲೇ ತಮ್ಮ ಕೊನೆಯ ವೇತನದ 50 ಪ್ರತಿಶತವನ್ನು ಪಿಂಚಣಿಯಾಗಿ ಪಡೆಯಬಹುದು ಎಂದು ವರದಿಯಾಗಿದೆ. ಈ ಉಪಕ್ರಮವನ್ನು ಅನ್ವೇಷಿಸಲು ಹಣಕಾಸು ಕಾರ್ಯದರ್ಶಿ ಟಿವಿ ಸೋಮನಾಥನ್ ನೇತೃತ್ವದ ಸಮಿತಿಯನ್ನು ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಘೋಷಿಸಿದ ನಂತರ ಈ ಬೆಳವಣಿಗೆ ನಡೆದಿದೆ. ವೇತನ ಆಯೋಗದ ಶಿಫಾರಸುಗಳಿಗೆ ಅನುಗುಣವಾಗಿ ಆಜೀವ ಪಿಂಚಣಿಯಾಗಿ ಪಡೆದ ಕೊನೆಯ ವೇತನದ ಅರ್ಧದಷ್ಟು ನಿರ್ದಿಷ್ಟ ಪ್ರಯೋಜನವನ್ನು ಖಾತರಿಪಡಿಸುವ ಹಳೆಯ ಪಿಂಚಣಿ ಯೋಜನೆಗೆ (ಒಪಿಎಸ್) ಮರಳುವುದನ್ನು ಸರ್ಕಾರ ತಳ್ಳಿಹಾಕಿದೆ ಎಂದು ವರದಿ ತಿಳಿಸಿದೆ. ಎನ್ಪಿಎಸ್ ಒಂದು ವ್ಯಾಖ್ಯಾನಿತ ಕೊಡುಗೆ ಯೋಜನೆಯಾಗಿದ್ದು, ಇದರಲ್ಲಿ ನೌಕರರು ತಮ್ಮ ಮೂಲ ವೇತನದ ಶೇಕಡಾ 10 ರಷ್ಟು ಕೊಡುಗೆ ನೀಡುತ್ತಾರೆ ಮತ್ತು ಈ ಕೊಡುಗೆಯನ್ನು ಸರ್ಕಾರದಿಂದ 14 ಪ್ರತಿಶತದೊಂದಿಗೆ ಹೊಂದಿಸಲಾಗುತ್ತದೆ. ಸೋಮನಾಥನ್ ಸಮಿತಿಯು ಜಾಗತಿಕ ಅಭ್ಯಾಸಗಳನ್ನು ಪರಿಶೀಲಿಸಿತು ಮತ್ತು ಆಂಧ್ರಪ್ರದೇಶದಂತಹ ರಾಜ್ಯ ಸರ್ಕಾರಗಳು ತಂದ ಬದಲಾವಣೆಗಳಲ್ಲಿನ ಫಲಿತಾಂಶಗಳನ್ನು ಅಧ್ಯಯನ ಮಾಡಿದೆ ಎಂದು ವರದಿ ಹೇಳಿದೆ.…
ಕೊಪ್ಪಳ : ಶೀಘ್ರದಲ್ಲಿ ಹತ್ತು ಸಾವಿರ ಶಿಕ್ಷಕರ ನೇಮಕಕ್ಕೆ ಮುಖ್ಯಮಂತ್ರಿಗೆ ಪ್ರಸ್ತಾವ ಸಲ್ಲಿಸಲಾಗಿದೆ. ಶಾಲಾ-ಕಾಲೇಜುಗಳ ನಿರ್ಮಾಣವಲ್ಲದೆ ಶಿಕ್ಷಕರ ನೇಮಕಕ್ಕೂ ಆದ್ಯತೆ ನೀಡಲಾಗುತ್ತಿದೆ ಎಂದು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವ ಎಸ್. ಮಧು ಬಂಗಾರಪ್ಪ ಹೇಳಿದರು. ಕೊಪ್ಪಳದ ಕುಕನೂರ್ ತಾಲೂಕಿನಲ್ಲಿ ಸುದ್ಧಿಗಾರರೊಂದಿಗೆ ಮಾತನಾಡಿದ ಅವರು, ನಾನು ಶಿಕ್ಷಣ ಇಲಾಖೆ ಸಚಿವನಾದ ವೇಳೆ 53 ಸಾವಿರ ಶಿಕ್ಷಕರ ಕೊರತೆಯಿತ್ತು. ನಮ್ಮ ಸರಕಾರ ಅಧಿಕಾರಕ್ಕೆ ಬಂದ ಹತ್ತು ತಿಂಗಳೊಳಗೆ 12,000 ಶಿಕ್ಷಕರ ನೇಮಕಾತಿ ಮಾಡಿದೆ. ಈಗ ಹತ್ತು ಸಾವಿರ ಶಿಕ್ಷಕರ ನೇಮಕಕ್ಕೆ ಮುಖ್ಯಮಂತ್ರಿಗೆ ಪ್ರಸ್ತಾವ ಸಲ್ಲಿಸಲಾಗಿದೆ ಎಂದು ಅವರು ತಿಳಿಸಿದರು. ಇಂದು ಅವರು, ಕುಕನೂರು ತಾಲೂಕಿನ ಕೋಮಲಾಪೂರ ಗ್ರಾಮದಲ್ಲಿ ಕೆಕೆಆರ್ಡಿಬಿ ಯೋಜನೆಯಡಿ ನಿರ್ಮಿಸಲಾದ ಪ್ರೌಢಶಾಲೆ ಉದ್ಘಾಟನೆ ಕಾರ್ಯಕ್ರಮಕ್ಕೆ ಆಗಮಿಸಿದ್ದ ವೇಳೆ ಮಾತನಾಡಿ, ಬಿಜೆಪಿ ತನ್ನ ಆಡಳಿತಾವಧಿಯಲ್ಲಿ 4,900 ಕಾಯಂ ಶಿಕ್ಷಕರನ್ನು ಮಾತ್ರ ನೇಮಿಸಿಕೊಂಡಿದೆ ಎಂದರು. ಕಳೆದ ಸಾಲಿನ ಎಸ್ಸೆಸ್ಸೆಲ್ಸಿ ವಾರ್ಷಿಕ ಪರೀಕ್ಷೆಯಲ್ಲಿ ಪಾರದರ್ಶಕತೆ ಕಾಪಾಡಿಕೊಳ್ಳಲಾಗಿದೆ. ಹೀಗಾಗಿ ಫಲಿತಾಂಶ ಕುಸಿದಿದೆ. ಮಕ್ಕಳ ಶಿಕ್ಷಣ ಸುಧಾರಿಸಲು ಇಂತಹ ಕ್ರಮ…
ತುಮಕೂರು : ಕರ್ನಾಟಕದಲ್ಲಿ ಇತ್ತೀಚಿನ ದಿನಗಳಲ್ಲು ಸೈಬರ್ ಅಪರಾಧ ಪ್ರಕರಣಗಳು ಹೆಚ್ಚಳವಾಗುತ್ತಿದ್ದು, ರಾಜ್ಯದಲ್ಲಿ ವರ್ಷಕ್ಕೆ 25 ಸಾವಿರಕ್ಕೂ ಹೆಚ್ಚು ಸೈಬರ್ ಅಪರಾಧ ಪ್ರಕರಣಗಳು ದಾಖಲಾಗುತ್ತಿವೆ ಎಂದು ಗೃಹ ಸಚಿವ ಡಾ.ಜಿ. ಪರಮೇಶ್ವರ್ ಮಾಹಿತಿ ನೀಡಿದ್ದಾರೆ. ತುಮಕೂರಿನ ಪೊಲೀಸ್ ಟಾಣೆಯ ನೂತನ ಕಟ್ಟಡ, ಪೊಲೀಸ್ ಸಮುಚ್ಛಯಕ್ಕೆ ಶಿಲಾನ್ಯಾಸ ನೆರವೇರಿಸಿ ಮಾತನಾಡಿದ ಅವರು, ರಾಜ್ಯದಲ್ಲಿ ವರ್ಷಕ್ಕೆ 25 ಸಾವಿರಕ್ಕೂ ಹೆಚ್ಚು ಸೈಬರ್ ಅಪರಾಧ ಪ್ರಕರಣಗಳು ದಾಖಲಾಗುತ್ತಿವೆ, ಪ್ರಜ್ಞಾವಂತರೇ ಅಪರಾಧ ಪ್ರಕರಣಗಳಲ್ಲಿ ಭಾಗಿಯಾಗುತ್ತಿದ್ದಾರೆ. ಆಧುನಿಕ ಜಗತ್ತಿನಲ್ಲಿ ಜನರು ಹೆಚ್ಚು ಪ್ರಜ್ಞಾವಂತರಾಗಿದ್ದರೂ ಸಹ ಕೊಲೆ, ಅಪರಾಧಗಳು ನಡೆಯುತ್ತಲೇ ಇವೆ ಎಂದು ಆತಂಕ ವ್ಯಕ್ತಪಡಿಸಿದರು. ಹಣಕಾಸು ವ್ಯವಹಾರಗಳು ಡಿಜಿಟಲೀಕರಣದ ಮೂಲಕ ನಡೆಯುತ್ತಿದ್ದರೂ ರಾಜ್ಯದಲ್ಲಿ ಸೈಬರ್ ಅಪರಾಧಗಳ ಸಂಖ್ಯೆ ದಿನೇದಿನೆ ಹೆಚ್ಚುತ್ತಿವೆ ಎಂದರು. ರಾಜ್ಯವನ್ನು ಸರ್ವಜನಾಂಗದ ಶಾಂತಿಯ ತೋಟವನ್ನಾಗಿಸಲು ಪೊಲೀಸ್ ಇಲಾಖೆ ನಿರಂತರವಾಗಿ ಶ್ರಮಿಸುತ್ತಿದೆ. ಸಾರ್ವಜನಿಕರಿಗೆ ನ್ಯಾಯ ದೊರಕಿಸಿಕೊಡುವ ನಿಟ್ಟಿನಲ್ಲಿ ಕರ್ನಾಟಕ ಪೊಲೀಸ್ ದೇಶದಲ್ಲೇ ಮುಂಚೂಣಿಯಲ್ಲಿದೆ. ಇಲಾಖೆಯ ಸಿಬ್ಬಂದಿ ಮತ್ತು ಅವರ ಕುಟುಂಬಗಳಿಗೆ ಅನುಕೂಲವಾಗುವ ನಿಟ್ಟಿನಲ್ಲಿ ನಗರದ ಚಿಲುಮೆ ಸಮುದಾಯ…
ಬೀದರ್ : ಎಸ್ ಎಸ್ ಎಲ್ ಸಿ ಪರೀಕ್ಷೆ-2 ಫಲಿತಾಂಶ ನಿನ್ನೆ ಪ್ರಕಟಗೊಂಡಿದ್ದು, ಪರೀಕ್ಷೆಯಲ್ಲಿ ಫೇಲ್ ಆಗಿದ್ದಕ್ಕೆ ಮನನೊಂದು ವಿದ್ಯಾರ್ಥಿನಿಯೊಬ್ಬಳು ಮನೆಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ. ಬೀದರ್ ಜಿಲ್ಲೆಯ ಚಿಟಗುಪ್ಪ ತಾಲೂಕಿನ ವಳಕಿಂಡಿ ಗ್ರಾಮದಲ್ಲಿ ಈ ಘಟನೆ ನಡೆದಿದ್ದು, ಎಸ್ ಎಸ್ ಎಲ್ ಸಿ ಪರೀಕ್ಷೆಯಲ್ಲಿ ಫೇಲ ಆದ ಹಿನ್ನೆಲೆಯಲ್ಲಿ ಮನನೊಂದು ವಳಕಿಂಡಿ ಗ್ರಾಮದ ಪ್ರಕೃತಿ ಅಶೋಕ್ ಮಾನಕಾರ (16) ವಿದ್ಯಾರ್ಥಿನಿ ಮನೆಯಲ್ಲೇ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ.
ಬೆಂಗಳೂರು : ಕರಾವಳಿ ಜಿಲ್ಲೆಗಳು ಸೇರಿದಂತೆ ರಾಜ್ಯದಲ್ಲಿ ಇಂದಿನಿಂದ 3 ದಿನ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾಣ ಇಲಾಖೆ ಮುನ್ಸೂಚನೆ ನೀಡಿದೆ. ಕರಾವಳಿ ಜಿಲ್ಲೆಗಳಾದ ಉತ್ತರ ಕನ್ನಡ, ಉಡುಪಿ ಮತ್ತು ದಕ್ಷಿಣ ಕನ್ನಡ ಜಿಲ್ಲೆಗಳು ಸೇರಿದಂತೆ ಒಳನಾಡಿನಲ್ಲಿ ಮೂರು ದಿನ ಭಾರೀ ಮಳೆಯಾಗುವ ಸಾಧ್ಯತೆ ಇದ್ದು, ಯೆಲ್ಲೋ ಅಲರ್ಟ್ ನೀಡಲಾಗಿದೆ. ಬೆಲಗಾವಿ, ಹಾಸನ, ಕೊಡಗು, ಚಿಕ್ಕಮಗಳೂರು, ಶಿವಮೊಗ್ಗ, ರಾಯಚೂರು, ವಿಜಯಪುರು ಹಾಗೂ ಯಾದಗಿರಿ ಜಿಲ್ಲೆಗಳಲ್ಲೂ ಮಳೆಯ ಅಬ್ಬರ ಮುಂದುವರೆಯಲಿದ್ದು, ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.
ಬೆಂಗಳೂರು: ರಾಜ್ಯದಲ್ಲಿ ದಿನೇ ದಿನೇ ಡೆಂಗ್ಯೂ ಪ್ರಕರಣಗಳ ಸಂಖ್ಯೆ ಹೆಚ್ಚಾಗುತ್ತಿವೆ. ಇಂದು ಒಂದೇ ದಿನ ರಾಜ್ಯಾಧ್ಯಂತ 293 ಮಂದಿಗೆ ಡೆಂಗ್ಯೂ ಪಾಸಿಟಿವ್ ಎಂಬುದಾಗಿ ದೃಢಪಟ್ಟಿದೆ. ಈ ಕುರಿತಂತೆ ಆರೋಗ್ಯ ಇಲಾಖೆಯಿಂದ ಪತ್ರಿಕಾ ಪ್ರಕಟಣೆಯಲ್ಲಿ ಮಾಹಿತಿ ನೀಡಿದ್ದು, ಕಳೆದ 24 ಗಂಟೆಯಲ್ಲಿ 1874 ಮಂದಿಯನ್ನು ಡೆಂಗ್ಯೂ ಪತ್ತೆ ಪರೀಕ್ಷೆಗೆ ಒಳಪಡಿಸಲಾಯಿತು. ಅವರಲ್ಲಿ 293 ಮಂದಿಗೆ ಡೆಂಗ್ಯೂ ಪಾಸಿಟಿವ್ ಅಂತ ದೃಢಪಟ್ಟಿದೆ. ರಾಜ್ಯದಲ್ಲಿ ಕಳೆದ 24 ಗಂಟೆಯಲ್ಲಿ ಸಕ್ರೀಯ ಸೋಂಕಿತರ ಸಂಖ್ಯೆ 100 ಆಗಿದೆ ಅಂತ ತಿಳಿಸಿದೆ. ಬಿಬಿಎಂಪಿ ವ್ಯಾಪ್ತಿಯಲ್ಲಿ 391 ಮಂದಿಯನ್ನು ಪರೀಕ್ಷೆಗೆ ಒಳಪಡಿಸಲಾಗಿದ್ದು, ಅವರಲ್ಲಿ 118 ಮಂದಿಗೆ ಡೆಂಗ್ಯೂ ಪಾಸಿಟಿವ್ ಅಂತ ದೃಢಪಟ್ಟಿದೆ. ಬೆಂಗಳೂರು ಗ್ರಾಮಾಂತರದಲ್ಲಿ ಇಬ್ಬರು, ಕೋಲಾರದಲ್ಲಿ 14, ತುಮಕೂರು 08, ದಾವಣಗೆರೆ 10, ಶಿವಮೊಗ್ಗ 07, ಬಾಗಲಕೋಟೆ 04, ಧಾರವಾಡ 15, ಹಾವೇರಿ 15, ಉತ್ತರ ಕನ್ನಡ 03, ಕಲಬುರ್ಗಿ 08, ಯಾದಗಿರಿ 04, ಬೀದರ್ 06, ಬಳ್ಳಾರಿ 03, ವಿಜಯನಗರ 10, ಕೊಪ್ಪಳ 03 ಮಂದಿಗೆ ಡೆಂಗ್ಯೂ…
ರಾಯಚೂರು : ಇಂಧನ ಇಲಾಖೆಗೆ ಸದ್ಯದಲ್ಲೇ 2000 ಲೈನ್ಮೆನ್ಗಳ ನೇಮಕ ಆಗಲಿದ್ದು, ಈ ಸಂಬಂಧ 15 ದಿನಗಳಲ್ಲಿ ಅಧಿಸೂಚನೆ ಹೊರಡಿಸಲಾಗುವುದು ಎಂದು ಇಂಧನ ಸಚಿವ ಕೆ.ಜೆ. ಜಾರ್ಜ್ ಹೇಳಿದ್ದಾರೆ. ರಾಯಚೂರು ಜಿಲ್ಲಾಧಿಕಾರಿ ಕಚೇರಿಯಲ್ಲಿ ಇಲಾಖೆಗೆ ಸಂಬಂಧಿಸಿದಂತೆ ಜಿಲ್ಲೆಯ ಜನಪ್ರತಿನಿಧಿಗಳೊಂದಿಗೆ ಸಭೆ ನಡೆಸಿದ ನಂತರ ಸುದ್ದಿಗೋಷ್ಠಿ ನಡೆಸಿದ ಇಂಧನ ಸಚಿವರು, “ಲೈನ್ಮೆನಗಳ ಹುದ್ದೆಗೆ ರಾಜ್ಯಾದ್ಯಂತ ಒಂದೇ ದಿನ ನೇಮಕ ಪ್ರಕ್ರಿಯೆ ನಡೆಯಲಿದ್ದು,ಪಾರದರ್ಶಕತೆಗೆ ಒತ್ತು ನೀಡಲಾಗುತ್ತದೆ,” ಎಂದರು. “ವೈಟಿಪಿಎಸ್ ಹುದ್ದೆಗಳನ್ನು ಭರ್ತಿ ಮಾಡುವಾವಾಗ ಸ್ಥಳಿಯರಿಗೆ ಆದ್ಯತೆ ನೀಡಬೇಕು ಮತ್ತು 371 ಜೆ ಅನ್ವಯ ಮೀಸಲು ನೀಡಬೇಕು. ಆದರೆ ನುರಿತ ಕೆಲಸಗಾರರು ಸಿಗುತ್ತಿಲ್ಲ ಎಂಬ ಕಾರಣಕ್ಕೆ ಸ್ಥಳೀಯರ ನೇಮಕ ಆಗುತ್ತಿಲ್ಲ ಎಂಬ ಮಾತು ಕೇಳಿಬಂದಿದೆ. ಆದ್ದರಿಂದ ಎಷ್ಟು ಜನ ಬೇಕು ಅಂತ ನಿರ್ಧರಿಸಿ, ಅವರಿಗೆ ಕೆಪಿಸಿಎಲ್ನಿಂದ ಅಗತ್ಯ ತರಬೇತಿ ಕೊಡಿಸಲು ಅಗತ್ಯ ಕ್ರಮ ವಹಿಸಲಾಗುವುದು. ನಮ್ಮ ರಾಜ್ಯದ ಯುವ ಜನರಿಗೆ ಉದ್ಯೋಗಾವಕಾಶ ಕಲ್ಪಿಸುವ ಜತೆಗೆ, ಆ ಉದ್ಯೋಗಕ್ಕೆ ಪೂರಕವಾದ ಕೌಶಲ್ಯ ತರಬೇತಿ ನೀಡಲು ಮುಖ್ಯಮಂತ್ರಿ ಸಿದ್ದರಾಮಯ್ಯ…
ಬೆಂಗಳೂರು : ರಾಜ್ಯ ಸರಕಾರಿ ನೌಕರರು ಸೇವೆ ಸಲ್ಲಿಸುತ್ತಲೇ ಬೇರೆ ಹುದ್ದೆಗೆ ನೇಮಕಾತಿ ಹೊಂದಲು ಮತ್ತು ಸದರಿ ಹುದ್ದೆಗೆ ಅರ್ಜಿ ಸಲ್ಲಿಸಲು ಮೊದಲೇ ಸೇವೆ ಸಲ್ಲಿಸುತ್ತಿರುವ ಇಲಾಖೆಯ ಮುಖ್ಯಸ್ಥರಿಂದ NOC (No objection Certificate) ನಿರಾಕ್ಷೇಪಣಾ ಪತ್ರ ಪಡೆಯಬೇಕಾಗಿತ್ತು.ಆದರೆ ಇದೀಗ ಆ ನಿಯಮವನ್ನು ತಿದ್ದುಪಡಿ ಮಾಡಿ ಆಯ್ಕೆಯಾದ ನಂತರವೂ ಇಲಾಖೆಯಿಂದ NOC ಪಡೆಯಲು ಅವಕಾಶ ಕಲ್ಪಿಸಲಾಗಿದೆ. ಇದಕ್ಕೆ ಸಂಬಂಧಿಸಿದಂತೆ ರಾಜ್ಯ ಸರ್ಕಾರ ರಾಜ್ಯ ಪತ್ರ ಹೊರಡಿಸಿದೆ. ಕರ್ನಾಟಕ ನಾಗರಿಕ ಸೇವಾ (ಸಾಮಾನ್ಯ ನೇಮಕಾತಿ) ನಿಯಮಗಳು, 1977ಕ್ಕೆ ಮತ್ತಷ್ಟು ತಿದ್ದುಪಡಿ ಮಾಡಲು ಕರ್ನಾಟಕ ರಾಜ್ಯ ಸಿವಿಲ್ ಸೇವಾ ಅಧಿನಿಯಮ, 1978 (1990ರ ಅಧಿನಿಯಮ ಸಂಖ್ಯೆ: 14)ರ 3ನೇ ಪ್ರಕರಣದ 2(ಎ) ಉಪ ಪ್ರಕರಣವನ್ನು ಪ್ರಕರಣ 8ರೊಂದಿಗೆ ಓದಿಕೊಂಡು ಅದರಲ್ಲಿ ಅಗತ್ಯಪಡಿಸಲಾದಂತೆ, ಕರಡು ನಿಯಮಗಳನ್ನು ದಿನಾಂಕ:07.08.2020ರ ರಾಜ್ಯ ಪತ್ರದ ವಿಶೇಷ ಸಂಚಿಕೆಯ ಭಾಗ IV-ಎ(ನಂ-391)ರಲ್ಲಿ ಅಧಿಸೂಚನೆ ಹೊರಡಿಸಿದೆ. 3ನೇ ಪ್ರಕರಣದ 1ನೇ ಉಪ ಪ್ರಕರಣವನ್ನು 8ನೇ ಪ್ರಕರಣದೊಂದಿಗೆ ಓದಿಕೊಂಡಂತೆ ಪ್ರದತ್ತವಾದ ಅಧಿಕಾರವನ್ನು ಚಲಾಯಿಸಿ ಕರ್ನಾಟಕ…
ಬೆಂಗಳೂರು : ವಾಲ್ಮೀಕಿ ನಿಗಮದಲ್ಲಿ ಅಕ್ರಮ ನಡೆದಿದೆ ಎನ್ನಲಾದ ಆರೋಪಕ್ಕೆ ಸಂಬಂಧಿಸಿದಂತೆ ಮಾಜಿ ಸಚಿವ ನಾಗೇಂದ್ರ ಪಿಎ ಹರೀಶ್ ನನ್ನು ಇಡಿ ಅಧಿಕಾರಿಗಳು ವಶಕ್ಕೆ ಪಡೆದಿದ್ದಾರೆ ಎನ್ನಲಾಗಿದೆ. ಬೆಂಗಳೂರಿನಲ್ಲಿ ಇಡಿ ಅಧಿಕಾರಿಗಳು ಮಾಜಿ ಸಚಿವ ನಾಗೇಂದ್ರ ಅವರ ಪಿಎ ಹರೀಶ್ ನನ್ನು ವಶಕ್ಕೆ ಪಡೆದುಕೊಂಡಿದ್ದಾರೆ. ಇದಕ್ಕೂ ಮುನ್ನ ಇಂದು ಬೆಳ್ಳಂ ಬೆಳಗ್ಗೆ ಬೆಂಗಳೂರು ಸೇರಿದಂತೆ ರಾಜ್ಯಾದ್ಯಂತ ಇ.ಡಿ(ಜಾರಿ ನಿರ್ದೇಶನಾಲಯ) ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಬೆಂಗಳೂರಿನ ವಿಜಯನಗರ, ಬಿ.ಇ ಎಲ್ ಸರ್ಕಲ್, ಜಗಜೀವನರಾಮನಗರ, ಕೋರಮಂಗಲ ಸೇರಿ ಹಲವು ಕಡೆ ಇ.ಡಿ ದಾಳಿ ನಡೆದಿದೆ. ಡಾಲರ್ಸ್ ಕಾಲೋನಿಯಲ್ಲಿರುವ ಮಾಜಿ ಸಚಿವ ಬಿ. ನಾಗೇಂದ್ರ ಅವರ ಅಪಾರ್ಟ್ ಮೆಂಟ್ ಮೇಲೆ ದಾಳಿ ನಡೆದಿದೆ. ವಾಲ್ಮೀಕಿ ನಿಗಮ ಅವ್ಯವಹಾರ ಸಂಬಂಧ ಇ.ಡಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಬಳ್ಳಾರಿ ನಗರದ ನೆಹರೂ ಕಾಲೋನಿಯಲ್ಲಿರುವ ನಾಗೇಂದ್ರ ಅವರ ನಿವಾಸದ ಮೇಲೂ ದಾಳಿ ನಡೆದಿದೆ. ವಾಲ್ಮೀಕಿ ನಿಗಮದಲ್ಲಿ 187 ಕೋಟಿ ರೂ. ಅವ್ಯವಹಾರ ನಡೆದಿದೆ ಎನ್ನುವ ಆರೋಪ ಕೇಳಿಬಂದಿದೆ.
ಉಡುಪಿ : ರಾಜ್ಯದಲ್ಲಿ ಮತ್ತೊಬ್ಬ ವಿದ್ಯಾರ್ಥಿನಿ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಬೆಳಕಿಗೆ ಬಂದಿದೆ. ಮಣಿಪಾಲದ ಹೆರ್ಗದಲ್ಲಿ ವಿದ್ಯಾರ್ಥಿನಿಯೊರ್ವಳು ಆತ್ಮಹತ್ಯೆ ಮಾಡಿಕೊಂಡ ದಾರುಣ ಘಟನೆ ನಡೆದಿದೆ. ಚಿಕ್ಕಮಗಳೂರು ಕೊಪ್ಪ ತಾಲೂಕಿನ ಹರಂದೂರು ಗ್ರಾಮದ ಶ್ರೀನಿಧಿ ಶೆಟ್ಟಿ (20) ಆತ್ಮಹತ್ಯೆ ಮಾಡಿಕೊಂಡವರು. ಈ ಯುವತಿ ಮಂಗಳೂರಿನ ಆಳ್ವಾಸ್ ಕಾಲೇಜಿನಲ್ಲಿ ಸಿಎ ವ್ಯಾಸಂಗ ಮಾಡುತ್ತಿದ್ದರು. ಬಾಡಿಗೆ ಮನೆಯ ರೂಮ್ನಲ್ಲಿ ಯಾರು ಇಲ್ಲದ ವೇಳೆ ಶ್ರೀನಿಧಿ ನೇಣು ಬಿಗಿದು ಆತ್ಮಹತ್ಯೆಗೆ ಶರಣಾಗಿದ್ದಾಳೆ. ವಿದ್ಯಾರ್ಥಿನಿ ಆತ್ಮಹತ್ಯೆ ಮಾಡಿಕೊಂಡಿದ್ದಕ್ಕೆ ಇನ್ನೂ ಕಾರಣ ತಿಳಿದು ಬಂದಿಲ್ಲ. ಈ ಕುರಿತು ಮಣಿಪಾಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ಮಾಡುತ್ತಿದ್ದಾರೆ.