Subscribe to Updates
Get the latest creative news from FooBar about art, design and business.
Author: kannadanewsnow57
ಹುಬ್ಬಳ್ಳಿ : ರಾಜ್ಯದಲ್ಲಿ ದರೋಡೆ ಪ್ರಕರಣಗಳು ಹೆಚ್ಚಳವಾಗುತ್ತಿದ್ದು, ಬೆಂಗಳೂರಿನಲ್ಲಿ ಆರ್ ಬಿಐ ಹೆಸರಿನಲ್ಲಿ ದರೋಡೆ ನಡೆದಿದ್ದರೆ. ಇತ್ತ ಹುಬ್ಬಳ್ಳಿಯಲ್ಲಿ ಇಡಿ ಹೆಸರಿನಲ್ಲಿ ದರೋಡೆ ನಡೆದಿದೆ. ಹೌದು, ಹುಬ್ಬಳ್ಳಿಯಲ್ಲಿ ಇಡಿ ಅಧಿಕಾರಿಗಳು ಎಂದು ಬೆದರಿಸಿ ಚಿನ್ನಾಭರಣ ದೋಚಲಾಗಿದೆ. ವಿಚಾರಣೆ ನೆಪದಲ್ಲಿ 2 ಕೆಜಿ 942 ಗ್ರಾಂ ಚಿನ್ನಾಭರಣ ಲೂಟಿ ಮಾಡಲಾಗಿದೆ. ಹುಬ್ಬಳ್ಳಿಯ ನೀಲಿಜನ್ ರಸ್ತೆಯಲ್ಲಿ ಈ ಘಟನೆ ನಡೆದಿದ್ದು, 3 ಕೋಟಿಗೂ ಹೆಚ್ಚು ಚಿನ್ನಾಭರಣ ಲೂಟಿ ಮಾಡಲಾಗಿದೆ. ಕೇರಳದ ವ್ಯಾಪಾರಿ ಎಂ.ಆರ್. ಸುಧೀನ್ ಎಂಬುವರಿಗೆ ವಂಚಿಸಲಾಗಿದೆ. ನವೆಂಬರ್ 20 ರಂದು ಘಟನೆ ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ.
ಬೆಂಗಳೂರು : ಆದಾಯ ಮೀರಿ ಆಸ್ತಿ ಗಳಿಕೆ ಸಂಬಂಧ ದಾವಣಗೆರೆ ಸೇರಿದಂತೆ ಹಲವು ಕಡೆ ಇಂದು ಬೆಳ್ಳಂಬೆಳಗ್ಗೆ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಬೆಳ್ಳಂ ಬೆಳಗ್ಗೆ ಭ್ರಷ್ಟ ಅಧಿಕಾರಿಗಳಿಗೆ ಬಿಗ್ ಶಾಕ್ ಎದುರಾಗಿದ್ದು, ದಾಳಿ ನಡೆಸಿದ ಲೋಕಾಯುಕ್ತ ಅಧಿಕಾರಿಗಳು ದಾಖಲೆಗಳ ಪರಿಶೀಲನೆಯಲ್ಲಿ ತೊಡಗಿದ್ದಾರೆ. ದಾವಣಗೆರೆಯಲ್ಲಿ ಎಪಿಎಂಸಿ ಅಧಿಕಾರಿ ಮನೆ, ಕಚೇರಿ ಮೇಲೆ ಲೋಕಾಯಕ್ತ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಎಪಿಎಂಸಿ ಕೃಷಿ ಮಾರಾಟ ವಿಭಾಗದ ಸಹಾಯಕ ನಿರ್ದೇಶಕ ಜೆ. ಪ್ರಭು ಅವರ ನಿವಾಸದ ಮೇಲೆ ದಾಳಿ ನಡೆಸಲಾಗಿದೆ ದಾವಣಗೆರೆ ನಗರದ ಆಂಜನೇಯ ಬಡಾವಣೆಯಲ್ಲಿರುವ ಪ್ರಭು ನಿವಾಸದ ಮೇಲೆ ದಾಳಿ ನಡೆಸಲಾಗಿದೆ.
ಬೆಂಗಳೂರು : ಅಪಘಾತ ಕೇಸ್ ಗಳಲ್ಲಿ ಸರ್ಕಾರ ಸಂತ್ರಸ್ತರಿಗೆ ಹೆಚ್ಚುವರಿ ಪರಿಹಾರ ನೀಡಿದೆ ಎಂಬ ಕಾರಣಕ್ಕೆ ವಿಮಾ ಕಂಪನಿಗಳು ಪರಿಹಾರ ಮೊತ್ತದಲ್ಲಿ ಕಡಿತ ಮಾಡುವಂತಿಲ್ಲ ಎಂದು ಹೈಕೋರ್ಟ್ ಮಹತ್ವದ ತೀರ್ಪು ನೀಡಿದೆ. 2013ರ ಏ.9ರಂದು ದಕ್ಷಿಣ ಕನ್ನಡದ ಉಪ್ಪಿನಂಗಡಿಯ ಪೆರ್ನೆ ಬಳಿ ಸಂಭವಿಸಿದ್ದ ಎಲ್ ಪಿಜಿ ಟ್ಯಾಂಕರ್ ಸ್ಪೋಟದಲ್ಲಿ ಮೃತಪಟ್ಟಿದ್ದ 13 ಮಂದಿಯ ಕುಟುಂಬಗಳಿಗೆ ಸರ್ಕಾರ ಹೆಚ್ಚುವರಿ ಪರಿಹಾರ ನೀಡಿದ್ದು, ಆ ಮೊತ್ತವನ್ನು ಅಪಘಾತ ವಿಮೆಯಲ್ಲಿ ಕಡಿತಗೊಳಿಸಬೇಕು ಎಂದು ಕೋರಿ ದಿ ನ್ಯಾಷನಲ್ ಇನ್ಸೂರೆನ್ಸ್ ಕಂಪನಿ ಅರ್ಜಿ ಸಲ್ಲಿಸಿತ್ತು. ಈ ಅರ್ಜಿಯನ್ನು ನ್ಯಾಯಮೂರ್ತಿ ಪಿ.ಶ್ರೀಸುಧಾ ಅವರಿದ್ದ ಏಕಸದಸ್ಯ ಪೀಠ ವಜಾಗೊಳಿಸಿದ್ದು,ಸರ್ಕಾರ ನೀಡಿರುವ ಪರಿಹಾರ ಸಂತ್ರಸ್ತ ಕುಟುಂಬಗಳಿಗೆ ಸಾಮಾಜಿಕ ಭದ್ರತೆಯಾಗಿದೆ. ಅದಕ್ಕೂ ವಿಮೆ ಪರಿಹಾರಕ್ಕೂ ಸಂಬಂಧ ಇಲ್ಲ ಎಂದು ತೀರ್ಪು ನೀಡಿದೆ. ಅಪಘಾತದ ಪ್ರಕರಣದಲ್ಲಿ ಚಾಲಕನ ನಿರ್ಲಕ್ಷ್ಯದಿಂದ ಅಪಘಾತ ಉಂಟಾಗಿದೆ ಎಂದಿರುವ ಕೋರ್ಟ್, ಮೋಟಾರು ವಾಹನ ಕಾಯ್ದೆ ಅಡಿ ಪರಿಹಾರ ನೀಡಲು ಆದೇಶಿಸಿದ್ದ ಅಪಘಾತ ಪರಿಹಾರ ನ್ಯಾಯಮಂಡಳಿ ಆದೇಶ ಪಾಲಿಸುವಂತೆ ವಿಮಾ ಕಂಪನಿಗೆ…
ಕೆಎನ್ಎನ್ಡಿಜಿಟಲ್ ಡೆಸ್ಕ್ : ಇತ್ತೀಚಿನ ದಿನಗಳಲ್ಲಿ AI ಚಾಟ್ಬಾಟ್’ಗಳ ಬಳಕೆ ತುಂಬಾ ಹೆಚ್ಚಾಗಿದ್ದು, ಬಹುತೇಕ ಎಲ್ಲರೂ ತಮ್ಮ ಜೀವನದಲ್ಲಿ ವಿವಿಧ ಅಗತ್ಯಗಳಿಗಾಗಿ AI ಪ್ರಶ್ನೆಗಳನ್ನ ಕೇಳುತ್ತಿದ್ದಾರೆ. ಇವು ಅವರಿಗೆ ಅಗತ್ಯವಿರುವ ಉತ್ತರಗಳನ್ನ ನೀಡುವ ಮೂಲಕ ಅವರ ಕೆಲಸವನ್ನ ಸುಲಭಗೊಳಿಸುತ್ತಿವೆ. ಹೊಸ ಮಾಹಿತಿಯನ್ನ ಒದಗಿಸುತ್ತಿದೆ. ಆದ್ರೆ, ಈ ಚಾಟ್ಬಾಟ್’ಗಳಿಗೆ ಕೆಲವು ರೀತಿಯ ಪ್ರಶ್ನೆಗಳನ್ನು ಕೇಳುವುದು ಅಪರಾಧ ಎಂದು ನಿಮಗೆ ತಿಳಿದಿದೆಯೇ? ಅಲ್ಲದೆ, ನೀವು AI ಚಾಟ್ಬಾಟ್ಗಳಿಗೆ ಕೆಲವು ಪ್ರಶ್ನೆಗಳನ್ನು ಕೇಳಿದರೆ, ಕಾನೂನು ತೊಂದರೆಗೆ ಸಿಲುಕುವ ಸಾಧ್ಯತೆಯಿದೆ ಎಂದು ಹೇಳಲಾಗುತ್ತದೆ. ಅನೇಕ ದೇಶಗಳಲ್ಲಿ ಸೈಬರ್ ಕಾನೂನು ಅರಿವು ತುಂಬಾ ಕಟ್ಟುನಿಟ್ಟಾಗಿದೆ. ತಪ್ಪು ಪ್ರಶ್ನೆಗಳನ್ನು ಅಥವಾ ತಪ್ಪು ಮಾಹಿತಿಯನ್ನ ಕೇಳುವುದನ್ನ ಸಹ ಅಪರಾಧವೆಂದು ಪರಿಗಣಿಸಲಾಗುತ್ತದೆ. ಅದಕ್ಕಾಗಿಯೇ ಒಂದು ಸಣ್ಣ ತಪ್ಪು ಪ್ರಶ್ನೆ ಕೂಡ ದೊಡ್ಡ ಹಾನಿಯನ್ನುಂಟು ಮಾಡುತ್ತದೆ. ಅಕ್ರಮ ಮಾಹಿತಿ ಅಪರಾಧವೇ.? ಅನೇಕ ಜನರು ಚಾಟ್ಬಾಟ್’ಗಳನ್ನು ವಿನೋದ ಅಥವಾ ಕುತೂಹಲಕ್ಕಾಗಿ ಕಾನೂನಿಗೆ ವಿರುದ್ಧವಾದ ಮಾಹಿತಿಯನ್ನು (AI ದುರುಪಯೋಗ) ಕೇಳುತ್ತಾರೆ. ಉದಾಹರಣೆಗೆ, ಅವರು ಶಸ್ತ್ರಾಸ್ತ್ರಗಳನ್ನ ತಯಾರಿಸುವುದು, ಬ್ಯಾಂಕಿಂಗ್…
ಅಯೋಧ್ಯೆ : ಇಂದು ಅಯೋಧ್ಯೆಯಲ್ಲಿ ಒಂದು ಪ್ರಮುಖ ಮೈಲಿಗಲ್ಲು ನಿರ್ಮಾಣವಾಗಲಿದೆ. ಈ ಸಂದರ್ಭದಲ್ಲಿ ರಾಮ ಮಂದಿರವು ಭವ್ಯ ಧ್ವಜಾರೋಹಣ ಸಮಾರಂಭಕ್ಕೆ ಸಿದ್ಧವಾಗುತ್ತಿದೆ. ಈ ಕಾರ್ಯಕ್ರಮವು ದೇವಾಲಯದ ನಿರ್ಮಾಣ ಪೂರ್ಣಗೊಂಡಿರುವುದನ್ನು ಸೂಚಿಸುತ್ತದೆ. ಪ್ರಧಾನಿ ನರೇಂದ್ರ ಮೋದಿ ಅವರು ಇಂದು ದೇವಾಲಯ ಪಟ್ಟಣಕ್ಕೆ ಭೇಟಿ ನೀಡಲಿದ್ದು, ಗರ್ಭಗುಡಿಯ ಮೇಲೆ ಕೇಸರಿ ಧ್ವಜಾರೋಹಣ ಮಾಡಲಿದ್ದಾರೆ. ಸಮಾರಂಭಕ್ಕೂ ಮುನ್ನವೇ ದೇಶಾದ್ಯಂತದ ಭಕ್ತರು ಅಯೋಧ್ಯೆಗೆ ಆಗಮಿಸಲು ಪ್ರಾರಂಭಿಸಿದ್ದಾರೆ. ದೇಶಾದ್ಯಂತದ ಭಕ್ತರು ನಗರವನ್ನು ತಲುಪಿದ್ದಾರೆ, ದೇವಾಲಯದ ಆವರಣದ ಸುತ್ತಲೂ 100 ಕೆಜಿ ಹೂವುಗಳನ್ನು ಒಳಗೊಂಡಂತೆ ವ್ಯಾಪಕವಾಗಿ ಅಲಂಕರಿಸಲಾಗಿದೆ. ಶಿಖರದ ಮೇಲೆ ಸ್ಥಾಪಿಸಲಾದ 42 ಅಡಿ ಎತ್ತರದ ಧ್ವಜಸ್ತಂಭವನ್ನು 360 ಡಿಗ್ರಿ ತಿರುಗುವಂತೆ ವಿನ್ಯಾಸಗೊಳಿಸಲಾಗಿದೆ. ಧ್ವಜವು ಕೇಸರಿ ಬಣ್ಣ ಹಾಗೂ ತ್ರಿಕೋನಾಕೃತಿಯಲ್ಲಿದೆ. 10 ಅಡಿ ಎತ್ತರ ಮತ್ತು 20 ಅಡಿ ಉದ್ದವಿದೆ. ಇದರ ಮೇಲೆ ಸೂರ್ಯ, ‘ಓಂ’ ಹಾಗೂ ಕೋವಿದಾರ ಮರವನ್ನು ಚಿತ್ರಿಸಲಾಗಿದೆ. ಸೂರ್ಯನ ಚಿತ್ರ ರಾಮನ ವಂಶವಾದ ಸೂರ್ಯವಂಶವನ್ನು ಸೂಚಿಸುತ್ತದೆ. ‘ಓಂ’ ಶುಭಸೂಚಕವಾಗಿದ್ದು, ಕೋವಿದಾರ ಮರವು ಅಯೋ ಧೈಯ ಪ್ರಾಚೀನ…
ಕೆಎನ್ಎನ್ಡಿಜಿಟಲ್ ಡೆಸ್ಕ್ : ಇತ್ತೀಚಿನ ದಿನಗಳಲ್ಲಿ, ಹೊರಗಿನ ಆಹಾರವನ್ನ ತಿನ್ನುವವರ ಸಂಖ್ಯೆ ಅಗಾಧವಾಗಿ ಹೆಚ್ಚಾಗಿದೆ. ಅವರಿಗೆ ಸ್ವಲ್ಪ ಸಮಯ ಸಿಕ್ಕಾಗಲೆಲ್ಲಾ ಅವರು ಸ್ನೇಹಿತರು ಅಥವಾ ಕುಟುಂಬ ಸದಸ್ಯರೊಂದಿಗೆ ಹೊರಗೆ ಹೋಗಿ ಫಾಸ್ಟ್ ಫುಡ್ ತೆಗೆದುಕೊಳ್ಳುತ್ತಾರೆ. ಕೆಲವರು ಹೊರಗೆ ತಿನ್ನುತ್ತಾರೆ, ಇನ್ನು ಕೆಲವರು ಮನೆಯಲ್ಲಿ ಆಹಾರವನ್ನು ಆರ್ಡರ್ ಮಾಡುತ್ತಾರೆ. ಆದಾಗ್ಯೂ, ಫಾಸ್ಟ್ ಫುಡ್, ವಿಶೇಷವಾಗಿ ಫ್ರೈಡ್ ರೈಸ್ ವಾರಕ್ಕೆ ಎರಡು ಅಥವಾ ಮೂರು ಬಾರಿ ತಿನ್ನುವುದರಿಂದ ಅನೇಕ ಆರೋಗ್ಯ ಸಮಸ್ಯೆಗಳು ಉಂಟಾಗಬಹುದು. ಅವು ಈಗ ಏನೆಂದು ನೋಡೋಣ. ಫ್ರೈಡ್ ರೈಸ್ ಆರೋಗ್ಯಕ್ಕೆ ಒಳ್ಳೆಯದಲ್ಲ. ಇದನ್ನು ಬೇಯಿಸಿ, ಮತ್ತೆ ಬಿಸಿ ಮಾಡಿ, ಹುರಿಯುವುದರಿಂದ ಜೀರ್ಣಕ್ರಿಯೆಯ ಸಮಸ್ಯೆಗಳು ಉಂಟಾಗಬಹುದು. ಇದು ಎದೆಯುರಿ, ಅಜೀರ್ಣ, ಗ್ಯಾಸ್, ಉಬ್ಬುವುದು ಮುಂತಾದ ಹೊಟ್ಟೆ ಸಮಸ್ಯೆಗಳ ಸಾಧ್ಯತೆಯನ್ನು ಹೆಚ್ಚಿಸುತ್ತದೆ ಎಂದು ಆರೋಗ್ಯ ತಜ್ಞರು ಹೇಳುತ್ತಾರೆ. ಅದೇ ರೀತಿ, ಫ್ರೈಡ್ ರೈಸ್ನಲ್ಲಿ ಬಳಸುವ ಎಣ್ಣೆಯನ್ನ ಮತ್ತೆ ಮತ್ತೆ ಬಳಸಲಾಗುತ್ತದೆ. ಅದರ ಹೊರತಾಗಿ, ಮಸಾಲೆಗಳು ಮತ್ತು ಹೆಚ್ಚುವರಿ ಎಣ್ಣೆ. ಬಳಸಿದ ಎಣ್ಣೆಯಲ್ಲಿರುವ ಟ್ರಾನ್ಸ್ ಕೊಬ್ಬುಗಳು…
ಬೆಂಗಳೂರು: ಕರ್ನಾಟಕ ರಾಜ್ಯದಲ್ಲಿ ಪೋಲಿಸ್ ಇಲಾಖೆಯವರು ಸಂಚಾರಿ ಇ-ಚಲನ್ ಮೂಲಕ ವಿಧಿಸಿದ ದಂಡದ ಮೊತ್ತದಲ್ಲಿ ರಿಯಾಯಿತಿಯನ್ನು ಮತ್ತೆ ನೀಡಿ ಸರ್ಕಾರ ಆದೇಶಿಸಿದೆ. ಶೇ.50ರಷ್ಟು ರಿಯಾಯಿತಿಯಲ್ಲಿ ಟ್ರಾಫಿಕ್ ದಂಡ ಪಾವತಿಗೆ ಮತ್ತೆ ಕಾಲಾವಕಾಶವನ್ನು ನೀಡಿ ಸರ್ಕಾರ ಅಧಿಕೃತ ಆದೇಶ ಹೊರಡಿಸಿದೆ. ಈ ಕುರಿತಂತೆ ಸಾರಿಗೆ ಇಲಾಖೆಯ ಸರ್ಕಾರದ ಅಧೀನ ಕಾರ್ಯದರ್ಶಿ ನಡವಳಿಯನ್ನು ಹೊರಡಿಸಿದ್ದಾರೆ. ಅದರಲ್ಲಿ ದಿನಾಂಕ:11.02.2023ರ ಒಳಗಾಗಿ ಇತ್ಯರ್ಥಗೊಳ್ಳುವ ಪ್ರಕರಣಗಳಿಗೆ ಮಾತ್ರ ಅನ್ವಯವಾಗುವಂತೆ ಒಂದು ಬಾರಿಯ ಕ್ರಮವಾಗಿ (onetime measure) ಮಾತ್ರ ಪೊಲೀಸ್ ಇಲಾಖೆಯ ಸಂಚಾರಿ ಇ-ಚಲನ್ನಲ್ಲಿ ದಾಖಲಾಗಿರುವ ಬಾಕಿ ಪಕರಣಗಳ ದಂಡದ ಮೊತ್ತದಲ್ಲಿ ಶೇಕಡಾ 50 ರಷ್ಟು ರಿಯಾಯಿತಿ ನೀಡಿ ಆದೇಶಿಸಲಾಗಿತ್ತು ಎಂದಿದ್ದಾರೆ. ಸರ್ಕಾರದ ಆದೇಶದಲ್ಲಿ, ಪೊಲೀಸ್ ಇಲಾಖೆಯಲ್ಲಿ ಸಂಚಾರಿ ಇ-ಚಲನ್ನಲ್ಲಿ ದಿನಾಂಕ:11.02.2023ರೊಳಗೆ ದಾಖಲಾದ ಪ್ರಕರಣಗಳಿಗೆ ಮಾತ್ರ ಅನ್ವಯವಾಗುವಂತೆ, ಪೊಲೀಸ್ ಇಲಾಖೆಯ ಸಂಚಾರಿ ಇ-ಚಲನ್ನಲ್ಲಿ ದಾಖಲಾಗಿರುವ ಬಾಕಿ ಪಕರಣಗಳ ದಂಡದ ಮೊತ್ತದಲ್ಲಿ ಮತ್ತೊಂದು ಬಾರಿಗೆ ಶೇಕಡಾ 50 ರಷ್ಟು ರಿಯಾಯಿತಿ ನೀಡಿ ಆದೇಶಿಸಲಾಗಿತ್ತು ಎಂದು ಹೇಳಿದ್ದಾರೆ. ರಿಯಾಯಿತಿಯೊಂದಿಗೆ ಪಾವತಿ ಮಾಡುವ ವಿಧಾನ:…
ಬೆಂಗಳೂರು: ಬೈಕ್ ನಲ್ಲಿ ಪೋಷಕರ ಜತೆ ಪ್ರಯಾಣಿಸುವ ಮಕ್ಕಳಿಗೂ ಹೆಲ್ಮೆಟ್ ಕಡ್ಡಾಯ ಎಂದು ನಗರ ಸಂಚಾರ ಪೊಲೀಸರು ತಿಳಿಸಿದ್ದಾರೆ. ಮೋಟಾರು ವಾಹನ ಕಾಯಿದೆಯನ್ವಯ ದ್ವಿಚಕ್ರ ವಾಹನದಲ್ಲಿ ಪ್ರಯಾಣಿಸುವ ಹಿಂಬದಿ ಸವಾರರು ಕಡ್ಡಾಯವಾಗಿ ಹೆಲೈಟ್ ಧರಿಸಿರಬೇಕು. ಈ ನಿಟ್ಟಿನಲ್ಲಿ 9 ತಿಂಗಳಿಂದ 4 ವರ್ಷದ ಮಕ್ಕಳು ಹೆಲೈಟ್ ಧರಿಸಬೇಕು ಎಂದು ಪೊಲೀಸರು ತಿಳಿಸಿದ್ದಾರೆ. ಈ ಕುರಿತು ವಿಶೇಷ ಜಾಗೃತಿ ಹಾಗೂ ಕಾರ್ಯಾಚರಣೆಯನ್ನು ಸಂಚಾರ ಪೊಲೀಸರು ಕೈಗೆತ್ತಿಕೊಂಡಿದ್ದಾರೆ. ಮಕ್ಕಳಿಗೆ ಹೆಲೈಟ್ ಹಾಕದೆ ಕರೆದೊಯ್ಯುತ್ತಿರುವ ಪೋಷಕರಿಗೆ ದಂಡ ವಿಧಿಸುತ್ತಿದ್ದಾರೆ. ದ್ವಿಚಕ್ರ ವಾಹನಗಳಲ್ಲಿ ಸಂಚಾರ ಮಾಡುವ ಮಕ್ಕಳಿಗೆ ಹೆಲ್ಮೆಟ್ ಮತ್ತು ಸುರಕ್ಷತಾ ಕ್ರಮಗಳುಳ್ಳ ಕೇಂದ್ರ ಮೋಟಾರು ವಾಹನ ನಿಯಮಗಳು 2022ರ ನಿಯಮ 138ರ ಅನುಷ್ಟಾನಕ್ಕೆ ಸಂಬಂಧಿಸಿದಂತೆ ತಕ್ಷಣ ಕ್ರಮಕ್ಕೆ ಮುಂದಾಗಬೇಕು ಎಂದು ಸರ್ಕಾರಕ್ಕೆ ಹೈಕೋರ್ಟ್ ನಿರ್ದೇಶನ ನೀಡಿದೆ. ಮಕ್ಕಳಿಗಾಗಿ ಸುರಕ್ಷತಾ ಪರಿಕರಗಳನ್ನು ಕೇಂದ್ರ ಮೋಟಾರು ವಾಹನ (ಎರಡನೇ ತಿದ್ದುಪಡಿ) ನಿಯಮಗಳು, 2022ರ ಸೆಕ್ಷನ್ 138(7)ರ ಮೂಲಕ ಪರಿಚಯಿಸಲಾಗಿದೆ, ಇದನ್ನು ಫೆಬ್ರವರಿ 15, 2022ರಂದು ಮೋಟಾರು ವಾಹನ ಕಾಯ್ದೆಯ…
ಬೆಂಗಳೂರು: ಶಾಸಕರುಗಳಿಗೆ ಆಪ್ತ ಸಹಾಯಕರನ್ನು ನಿಯೋಜನೆ, ಒಪ್ಪಂದ ಇಲ್ಲವೇ ಗುತ್ತಿಗೆ ಆಧಾರದ ಮೇಲೆ ನೇಮಕ ಮಾಡಿಕೊಳ್ಳಬಹುದಾಗಿದೆ. ಹಾಗಾದ್ರೆ ಶಾಸಕರ ಪಿಎ ನೇಮಕ ಮಾಡಿಕೊಳ್ಳೋದಕ್ಕೆ ಇರುವಂತ ನಿಯಮಗಳು ಏನು ಎನ್ನುವ ಬಗ್ಗೆ ಮಾಹಿತಿ ಮುಂದಿದೆ ಓದಿ. ವಿಧಾನಸಭೆಯ ಸದಸ್ಯರುಗಳ ಆಪ್ತ ಸಹಾಯಕರುಗಳ ವೇತನವನ್ನು ಸೆಳೆಯುವ ಮತ್ತು ಬಟವಾಡೆ ಮಾಡುವ ಅಧಿಕಾರವನ್ನು ವಿಧಾನಸಭೆ ಕಾರ್ಯದರ್ಶಿಗಳಿಗೆ ಹಂಚಿಕೆ ಮಾಡಿ ಸದರಿಯವರನ್ನು ನಿಯಂತ್ರಣ ಪ್ರಾಧಿಕಾರಿಯನ್ನಾಗಿ ನೇಮಕ ಮಾಡಲಾಗಿರುತ್ತದೆ. ಶಾಸಕರುಗಳ ಆಪ್ತ ಸಹಾಯಕರುಗಳನ್ನು ನಿಯೋಜನೆ/ಒಪ್ಪಂದ/ಗುತ್ತಿಗೆ ಆಧಾರದ ಮೇಲೆ ನೇಮಕ ಮಾಡುವಾಗ ಅನುಸರಿಸಬೇಕಾದ ಕ್ರಮಗಳ ಬಗ್ಗೆ ಸರ್ಕಾರವು ಅನೇಕ ಮಾರ್ಗಸೂಚಿಗಳನ್ನು ಆಗಿಂದ್ದಾಗ್ಗೆ ಹೊರಡಿಸಿದ್ದು, ಈ ಬಗ್ಗೆ ಮೇಲೆ ಉಲ್ಲೇಖಿಸಿರುವ ಆದೇಶಗಳು ಪ್ರಮುಖವಾಗಿವೆ. ಸದರಿ ಆದೇಶಗಳನ್ನು ಕ್ರೂಢೀಕರಿಸಿ ನಿಯೋಜನೆ/ಒಪ್ಪಂದ/ಗುತ್ತಿಗೆ ಆಧಾರದ ಮೇಲೆ ಮಾನ್ಯ ಶಾಸಕರುಗಳು ಇಬ್ಬರು ಆಪ್ತ ಸಹಾಯಕರುಗಳನ್ನು ಮಾತ್ರ ನೇಮಿಸಿಕೊಳ್ಳುವುದಕ್ಕೆ ಅವಕಾಶವಿದ್ದು, ಆ ಸಂಬಂಧ ಪ್ರಸ್ತಾವನೆಗಳನ್ನು ತ್ವರಿತವಾಗಿ ಪರಿಶೀಲಿಸಿ ಸೂಕ್ತ ಆದೇಶ ಹೊರಡಿಸಲು ಅನುವಾಗುವಂತೆ ಕೆಳಕಂಡ ಮಾರ್ಗಸೂಚಿಗಳನ್ನು ತಕ್ಷಣದಿಂದ ಜಾರಿಗೆ ಬರುವಂತೆ ಹೊರಡಿಸಲಾಗಿದೆ. ನಿಯೋಜನೆ/ಒಪ್ಪಂದದ ಸಿಬ್ಬಂದಿಗೆ ಸಂಬಂಧಿಸಿದಂತೆ: 1. ಉಲ್ಲೇಖಿತ…
ಮಧುಮೇಹ, ಬೊಜ್ಜು ಮತ್ತು ಇತರ ಚಯಾಪಚಯ ಅಸ್ವಸ್ಥತೆಗಳಂತಹ ಹಲವಾರು ಕಾಯಿಲೆಗಳ ಅಪಾಯವನ್ನ ಹೆಚ್ಚಿಸಲು ಕೇವಲ ಮೂರು ರಾತ್ರಿ ಪಾಳಿಗಳು ಸಾಕು ಎಂದು ಅಧ್ಯಯನವೊಂದು ಕಂಡುಹಿಡಿದಿದೆ. ಅಮೆರಿಕದ ವಾಷಿಂಗ್ಟನ್ ಸ್ಟೇಟ್ ಯೂನಿವರ್ಸಿಟಿಯ ಸಂಶೋಧಕರು ರಾತ್ರಿ ಪಾಳಿಯಲ್ಲಿ ರಕ್ತದಲ್ಲಿನ ಗ್ಲೂಕೋಸ್ ನಿಯಂತ್ರಣಕ್ಕೆ ಸಂಬಂಧಿಸಿದ ದೇಹದ ಪ್ರೋಟೀನ್ ಲಯಗಳು ಹದಗೆಡಲು ಕಾರಣವಾಗಬಹುದು ಎಂದು ಬಹಿರಂಗಪಡಿಸಿದ್ದಾರೆ. ಇದು ಶಕ್ತಿಯ ಚಯಾಪಚಯ ಮತ್ತು ಉರಿಯೂತವನ್ನ ಸಹ ಅಡ್ಡಿಪಡಿಸುತ್ತದೆ – ದೀರ್ಘಕಾಲದ ಚಯಾಪಚಯ ಪರಿಸ್ಥಿತಿಗಳ ಬೆಳವಣಿಗೆಯ ಮೇಲೆ ಪ್ರಭಾವ ಬೀರುತ್ತದೆ. ಜರ್ನಲ್ ಆಫ್ ಪ್ರೊಟಿಯೋಮ್ ರಿಸರ್ಚ್ನಲ್ಲಿ ಪ್ರಕಟವಾದ ಅಧ್ಯಯನದಲ್ಲಿ, ತಂಡವು “ಮೆದುಳಿನಲ್ಲಿ ಮಾಸ್ಟರ್ ಜೈವಿಕ ಗಡಿಯಾರ” ಬಗ್ಗೆ ವಿವರಿಸಿದೆ, ಇದು ದೇಹವು ಹಗಲು ಮತ್ತು ರಾತ್ರಿ ಲಯಗಳನ್ನ ಅನುಸರಿಸುವಂತೆ ಮಾಡುತ್ತದೆ. ಇದು “ನಿಯಂತ್ರಿತವಾದಾಗ” ಅದು ಒತ್ತಡಕ್ಕೆ ಕಾರಣವಾಗುತ್ತದೆ, ಇದು ದೀರ್ಘಕಾಲೀನ ಆರೋಗ್ಯ ಪರಿಣಾಮಗಳನ್ನ ಉಂಟು ಮಾಡುತ್ತದೆ ಎಂದು ಪ್ರೊಫೆಸರ್ ಹ್ಯಾನ್ಸ್ ವ್ಯಾನ್ ಡಾಂಗನ್ ಹೇಳಿದರು. ಹೆಚ್ಚುವರಿಯಾಗಿ, ಲಯವನ್ನ ಭಂಗಗೊಳಿಸಲು ಮತ್ತು ಆರೋಗ್ಯ ಅಪಾಯಗಳನ್ನ ಹೆಚ್ಚಿಸಲು ಕೇವಲ ಮೂರು-ರಾತ್ರಿ ಪಾಳಿಗಳು ಸಾಕು…














