Author: kannadanewsnow57

ಬೆಂಗಳೂರು: ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತದ ಪರಿಣಾಮ ರಾಜ್ಯದ 12 ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಇಂದು ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ನಿನ್ನೆ ಮಂಡ್ಯ, ಮೈಸೂರು, ಕೊಗಡು, ಹಾಸನ ಜಿಲ್ಲೆಗಳ ಕೆಲವೆಡೆ ಅಕಾಲಿಕವಾಗಿ ಮಳೆ ಸುರಿದಿದೆ. ಬೆಂಗಳೂರು ನಗರ, ಬೆಂ. ಗ್ರಾಮಾಂತರ, ಬೆಂ.ದಕ್ಷಿಣ, ಮಂಡ್ಯ, ಮೈಸೂರು, ಚಾಮರಾಜನಗರ, ಚಿಕ್ಕಮಗಳೂರು, ಹಾಸನ, ಕೊಡಗು, ಕೋಲಾರ, ದಕ್ಷಿಣ ಕನ್ನಡ, ಉಡುಪಿಯಲ್ಲಿ ಇಂದು ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ರಾಜ್ಯದಲ್ಲಿ ಈಗಾಗಲೇ ಬಿಸಿಲಿನ ತೀವ್ರತೆ ಶುರುವಾಗಿದೆ. ಕರಾವಳಿ ವ್ಯಾಪ್ತಿಯ ಜಿಲ್ಲೆಗಳಲ್ಲಿ ಕನಿಷ್ಠ ಮತ್ತು ಗರಿಷ್ಠ ತಾಪಮಾನವು ವಾಡಿಕೆಗಿಂತ 3ರಿಂದ 5 ಡಿ.ಸೆ.ವರೆಗೆ ಹೆಚ್ಚಾಗಿದೆ. ಕಲಬುರಗಿಯಲ್ಲಿ ಭಾನುವಾರ 36.6 ಡಿ.ಸೆ.ಉಷ್ಣಾಂಶ ದಾಖಲಾಗಿದೆ.

Read More

ನವದೆಹಲಿ : ಹಲವು ವರ್ಷಗಳಿಂದ ರೈಲ್ವೆ ಉದ್ಯೋಗವನ್ನು ಹುಡುಕುತ್ತಿರುವ ನಿರುದ್ಯೋಗಿಗಳಿಗೆ ಇದು ಬಂಪರ್ ಒಳ್ಳೆಯ ಸುದ್ದಿ. ರೈಲ್ವೆ 11,127 ಸಹಾಯಕ ಲೋಕೋ ಪೈಲಟ್ ಹುದ್ದೆಗಳನ್ನು ಭರ್ತಿ ಮಾಡಲು ಪ್ರಾರಂಭಿಸಿದೆ. ಈ ನೇಮಕಾತಿಗೆ ಸಂಬಂಧಿಸಿದ ಪೂರ್ಣ ಅಧಿಸೂಚನೆಯು ಈ ತಿಂಗಳ ಅಂತ್ಯದ ವೇಳೆಗೆ ಹೊರಬರುವ ಸಾಧ್ಯತೆಯಿದೆ. ಹತ್ತನೇ ತರಗತಿ, ಐಟಿಐ, ಡಿಪ್ಲೊಮಾ ಉತ್ತೀರ್ಣರಾದವರು ಇದಕ್ಕೆ ಅರ್ಹರು. ಇದಲ್ಲದೆ, ಅವರ ವಯಸ್ಸಿನ ಮಿತಿ 18 ರಿಂದ 30 ವರ್ಷಗಳು. ಅಭ್ಯರ್ಥಿಗಳನ್ನು CBT1, CBT2, ದಾಖಲೆಗಳ ಪರಿಶೀಲನೆ ಮತ್ತು ವೈದ್ಯಕೀಯ ಪರೀಕ್ಷೆಯ ಆಧಾರದ ಮೇಲೆ ಆಯ್ಕೆ ಮಾಡಲಾಗುತ್ತದೆ. ಅಧಿಕೃತ ವೆಬ್‌ಸೈಟ್ https://indianrailways.gov.in. ರೈಲ್ವೆ ನೇಮಕಾತಿ ಮಂಡಳಿಯು 2027 ರ ALP ಹುದ್ದೆಗಳನ್ನು ಭರ್ತಿ ಮಾಡಲು ಪ್ರಾರಂಭಿಸಿದೆ. ಈ ಪ್ರಕ್ರಿಯೆಯು ದೇಶಾದ್ಯಂತ ಮುಂದುವರಿಯುತ್ತದೆ. ಫೆಬ್ರವರಿ 19, 2026 ರಂದು ದೆಹಲಿಯಲ್ಲಿ ಅನುಮೋದನೆ ನೀಡಲಾಯಿತು. ಈ ಸಂದರ್ಭದಲ್ಲಿ, ರೈಲ್ವೆ ಮಂಡಳಿಯು ಆದೇಶಗಳನ್ನು ಸಹ ಹೊರಡಿಸಿದೆ. ಮುಖ್ಯವಾಗಿ, ಈ ಹುದ್ದೆಗಳನ್ನು ಕೇಂದ್ರ ಉದ್ಯೋಗ ವಿನಿಮಯ ಕೇಂದ್ರದ ಮೂಲಕ ಜಾಹೀರಾತು ಮಾಡಲಾಗುತ್ತದೆ.…

Read More

ರೈಲ್ವೆ ಸಚಿವಾಲಯದ ಒಂದು ವಿಭಾಗವಾದ ಪಶ್ಚಿಮ ರೈಲ್ವೆಯ ರೈಲ್ವೆ ನೇಮಕಾತಿ ಕೋಶ (RRC), 2025-26ನೇ ಸಾಲಿಗೆ ವಿಭಾಗಗಳು ಮತ್ತು ಕಾರ್ಯಾಗಾರಗಳಲ್ಲಿ ಅಪ್ರೆಂಟಿಸ್ ಹುದ್ದೆಗಳ ನೇಮಕಾತಿಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸುವ ಅಧಿಸೂಚನೆಯನ್ನು ಹೊರಡಿಸಿದೆ. ಈ ಅಧಿಸೂಚನೆಯ ಅಡಿಯಲ್ಲಿ ಒಟ್ಟು 5,349 ಅಪ್ರೆಂಟಿಸ್ ಹುದ್ದೆಗಳನ್ನು ಭರ್ತಿ ಮಾಡಲಾಗುತ್ತದೆ. 10 ನೇ ತರಗತಿ ಅರ್ಹತೆ ಹೊಂದಿರುವ ಯಾವುದೇ ಅಭ್ಯರ್ಥಿ ಅರ್ಜಿ ಸಲ್ಲಿಸಬಹುದು. ಅಪ್ರೆಂಟಿಸ್‌ಶಿಪ್ ತರಬೇತಿಯನ್ನು ಪೂರ್ಣಗೊಳಿಸಿದವರು ಭವಿಷ್ಯದ ರೈಲ್ವೆ ಹಂತ 1 ಉದ್ಯೋಗಗಳಲ್ಲಿ ಶೇಕಡಾ 20 ರಷ್ಟು ಮೀಸಲಾತಿ ಹೊಂದಿರುತ್ತಾರೆ. ಅರ್ಹ ಅಭ್ಯರ್ಥಿಗಳು ಮಾರ್ಚ್ 23, 2026 ರೊಳಗೆ ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಬಹುದು. ವರ್ಗವಾರು ಅಪ್ರೆಂಟಿಸ್ ಹುದ್ದೆಗಳು.. ಫಿಟ್ಟರ್ ವಿಭಾಗದಲ್ಲಿ ಖಾಲಿ ಹುದ್ದೆಗಳು: 1614 ಎಲೆಕ್ಟ್ರಿಷಿಯನ್ ವಿಭಾಗದಲ್ಲಿ ಖಾಲಿ ಹುದ್ದೆಗಳು: 1217 ವೆಲ್ಡರ್ ವಿಭಾಗದಲ್ಲಿ ಖಾಲಿ ಹುದ್ದೆಗಳು: 532 PASAA ವಿಭಾಗದಲ್ಲಿ ಖಾಲಿ ಹುದ್ದೆಗಳು: 280 ಎಲೆಕ್ಟ್ರಾನಿಕ್ ಮೆಕ್ಯಾನಿಕ್ ವಿಭಾಗದಲ್ಲಿ ಖಾಲಿ ಹುದ್ದೆಗಳು: 236 ಮೆಕ್ಯಾನಿಕ್ (ಡೀಸೆಲ್) ವಿಭಾಗದಲ್ಲಿ ಖಾಲಿ ಹುದ್ದೆಗಳು: 207 ಪೇಂಟರ್…

Read More

ಬೆಂಗಳೂರು : ಈ ಬಾರಿಯ ಬೇಸಿಗೆಯಲ್ಲಿ ರಾಜ್ಯಾದ್ಯಂತ ವಾಡಿಕೆಗಿಂತ ಅಧಿಕ ಉಷ್ಣಾಂಶ ದಾಖಲಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ರಾಜ್ಯಾದ್ಯಂತ ಮಾರ್ಚ್ನಿಂದ ಮೇವರೆಗೆ ತಾಪಮಾನ ಸಾಮಾನ್ಯಕ್ಕಿಂತ ಕಠಿಣವಾಗಿರಲಿದೆ. ಕಡಿಮೆ ಶಾಖದ ಅಲೆ ಮತ್ತು ಬೆಚ್ಚಗಿನ ರಾತ್ರಿ ಇರಲಿದೆ. ಮಾರ್ಚ್ ಆರಂಭದಲ್ಲೇ ಬಿಸಿಲಿನ ತೀವ್ರತೆ ಹೆಚ್ಚಳವಾಗಲಿದ್ದು, ಕರಾವಳಿ ಕರ್ನಾಟಕದಲ್ಲಿ ಗರಿಷ್ಠ ತಾಪಮಾನವು ಶೇ.65 ಹೆಚ್ಚಲಿದೆ. ಬೆಂಗಳೂರು, ವಿಜಯಪುರು, ಬೀದರ್, ಬಳ್ಳಾರಿ, ರಾಯಚೂರು, ಕೊಪ್ಪಳ, ಹಾವೇರಿ, ಧಾರವಾಡ, ಯಾದಗಿರಿ, ಚಿತ್ರದುರ್ಗ, ದಾವಣಗೆರೆ ಸೇರಿ ಉ.ಕರ್ನಾಟಕದ ಜಿಲ್ಲೆಗಳಲ್ಲಿ 43 ಡಿ.ಸೆ., ಮೈಸೂರು, ಮಂಡ್ಯ, ಹಾಸನ, ಚಾಮರಾಜ ನಗರ, ತುಮಕೂರು, ಬೆಂ.ದಕ್ಷಿಣ, ಬೆಂ. ಗ್ರಾಮಾಂತರದಲ್ಲಿ 40 ಡಿ.ಸೆ.ವರೆಗೆ ಉಷ್ಣಾಂಶ ದಾಖಲಾಗುವ ಸಾಧ್ಯತೆ ಇದೆ. ಸಾರ್ವಜನಿಕರು ಬಿಸಿಲಿನ ತಾಪಮಾನದಿಂದ ಹೇಗೆ ರಕ್ಷಿಸಿಕೊಳ್ಳಬೇಕು ಮತ್ತು ಬಿಸಿಲಿನ ಬೇಗೆಯಿಂದ ಮನುಷ್ಯ ಶಾಖಾಘಾತಕ್ಕೊಳಗಾದಾಗ ಕೈಗೊಳ್ಳಬೇಕಾದ ಕ್ರಮಗಳ ಬಗ್ಗೆ ಇಲ್ಲಿದೆ ಮಾಹಿತಿ ಏನು ಮಾಡಬೇಕು ಸಡಿಲವಾದ, ತೆಳು ಬಣ್ಣದ ಹತ್ತಿಯ ಬಟ್ಟೆ ಧರಿಸಬೇಕು. ಕೈಗೆಟುಕುವಂತೆ ಕುಡಿಯುವ ನೀರನ್ನು ಇಟ್ಟುಕೊಳ್ಳಿ. ಆಗಾಗ್ಗೆ…

Read More

ಬೆಂಗಳೂರು: ಭೂಮಿಗೆ ಸಂಬಂಧಿಸಿದ ಸರ್ಕಾರದ ಎಲ್ಲಾ ಸೇವೆಗಳನ್ನು ಒಂದೇ ವ್ಯವಸ್ಥೆಯ ಅಡಿಯಲ್ಲಿ ತರುವ ಮಹಾತ್ವಕಾಂಕ್ಷಿ ULMS (Unified Land Management System) ಯೋಜನೆಯ ಅನುಷ್ಠಾನಕ್ಕೆ ಸರ್ಕಾರದ ದೃಢ ಹೆಜ್ಜೆಯನ್ನು ಇಟ್ಟಿದೆ ಎಂಬುದಾಗಿ ಕಂದಾಯ ಸಚಿವ ಕೃಷ್ಣಭೈರೇಗೌಡ ತಿಳಿಸಿದ್ದಾರೆ. ಈ ಕುರಿತಂತೆ ಎಲ್ಲಾ ಸಂಬಂಧಿಸಿದ (ಕಂದಾಯ, ನಗರಾಭಿವೃದ್ಧಿ, ನೋಂದಣಿ, ಲೋಕೋಪಯೋಗಿ, ನೀರಾವರಿ, ವಸತಿ, ಬೃಹತ್‌ ಮತ್ತು ಮಧ್ಯಮ ಕೈಗಾರಿಕಾ ಹಾಗೂ ಇತ್ಯಾದಿ ಇಲಾಖೆಗಳ) ಹಿರಿಯ ಅಧಿಕಾರಿಗಳ ಸಭೆಯನ್ನು ಮಾನ್ಯ ಕಂದಾಯ ಸಚಿವರ ಅಧ್ಯಕ್ಷತೆಯಲ್ಲಿ ನಡೆಸಲಾಯಿತು. ULMS ಗಣಕೀಕೃತ ಏಕ ವ್ಯವಸ್ಥೆಯಡಿ ಸರ್ವೆ, ಭೂ ಪರಿವರ್ತನೆ, ಬಡಾವಣೆ ಪ್ಲಾನ್‌ ಮಂಜೂರಿ, ಮನೆ ಪ್ಲಾನ್‌ ಮಂಜೂರಿ, ನಿವೇಶನ ಮಾರಾಟ, ಇ-ಖಾತಾ ಸೃಜನೆ (ಸ್ಥಳೀಯ ಸಂಸ್ಥೆಯಲ್ಲಿ), ಆಸ್ತಿ ತೆರಿಗೆ ಸಂಗ್ರಹ, ಭೂಸ್ವಾಧೀನ ಹಾಗೂ ಇನ್ನೂ ಅನೇಕ ಭೂ ಸಂಬಂಧಿತ ಚಟುವಟಿಕೆಗಳನ್ನು ಸರಾಗ, ಸುಲಭ, ಪಾರದರ್ಶಕ ಮತ್ತು ಜನಸ್ನೇಹಿಯಾದ ಒಂದೇ ಆನ್‌ಲೈನ್‌ ವ್ಯವಸ್ಥೆಗೆ ತರುವ ಯೋಜನೆಯಾಗಿದೆ. ಇದರಿಂದ ಜನರಿಗೆ ಬೇರೆ ಬೇರೆ ಕಛೇರಿಗಳಿಗೆ ಅಲೆದಾಡುವುದನ್ನು ತಪ್ಪಿಸಿ ಭೂಮಿಗೆ ಸಂಬಂಧಿಸಿದ ಸೇವೆಗಳನ್ನು…

Read More

ಬೆಂಗಳೂರು : ಮಕ್ಕಳನ್ನು ಖಾಸಗಿ ಶಾಲೆಗೆ ಸೇರಿಸುವ ಪೋಷಕರಿಗೆ ಗುಡ್ ನ್ಯೂಸ್, ಶಿಕ್ಷಣ ಹಕ್ಕು ಕಾಯ್ದೆ(ಆರ್‌ಟಿಇ) ಅಡಿ ಖಾಸಗಿ ಶಾಲೆಗಳಲ್ಲಿ ಶೇಕಡ 25 ರಷ್ಟು ಉಚಿತ ಸೀಟು ಪಡೆಯಲು ಶಾಲಾ ಶಿಕ್ಷಣ ಇಲಾಖೆ 2026- 27 ನೇ ಸಾಲಿನ ಅರ್ಜಿ ಸಲ್ಲಿಕೆ ಮತ್ತು ಆಯ್ಕೆ ಪ್ರಕ್ರಿಯೆಗೆ ವೇಳಾಪಟ್ಟಿ ಪ್ರಕಟಿಸಿದೆ. ಮಾರ್ಚ್ 10ರಂದು ನೆರೆಹೊರೆ ಶಾಲೆಗಳ ಅಂತಿಮ ಪಟ್ಟಿ, ಎಲ್‌ಕೆಜಿ ಮತ್ತು ಒಂದನೇ ತರಗತಿಗೆ ಅನುದಾನ ರಹಿತ ಶಾಲೆಗಳಲ್ಲಿ ಶೇಕಡ 25ರ ಪ್ರಮಾಣದಲ್ಲಿ ಲಭ್ಯವಿರುವ ಸೀಟು ಹಾಗೂ ಅನುದಾನಿತ ಶಾಲೆಗಳಲ್ಲಿ ಲಭ್ಯವಿರುವ ಶಾಲಾವಾರು ಸೀಟುಗಳ ಸಂಖ್ಯೆಯನ್ನು ಜಿಲ್ಲೆಯ ಅಧಿಕೃತ ವೆಬ್ಸೈಟ್ ನಲ್ಲಿ ಪ್ರಕಟಿಸಲಾಗುವುದು. ಮಾರ್ಚ್ 11ರಿಂದ 12ರವರೆಗೆ ಅರ್ಜಿ ಸಲ್ಲಿಸಲು ಪ್ರಯೋಗಾರ್ಥ ಅವಧಿ ಇರಲಿದೆ. ಮಾರ್ಚ್ 16 ರಿಂದ ಏಪ್ರಿಲ್ 15 ರವರೆಗೆ ಆರ್‌.ಟಿ.ಇ. ಆಡಿ ದಾಖಲಾತಿ ಕೋರಿ ಪೋಷಕರು ಆನ್ ಲೈನ್ ನಲ್ಲಿ ಅರ್ಜಿ ಸಲ್ಲಿಸಲು ಅವಕಾಶ ನೀಡಲಾಗಿದೆ. ಏಪ್ರಿಲ್ 21ರಂದು ಲಾಟರಿ ಪ್ರಕ್ರಿಯೆಗೆ ಅರ್ಹ ಅಭ್ಯರ್ಥಿಗಳ ಅಂತಿಮ ಪಟ್ಟಿ ಪ್ರಕಟಿಸಲಾಗುವುದು.…

Read More

ದಕ್ಷಿಣಕನ್ನಡ : ಲೂಡೋ ಬೋರ್ಡ್ ಕಾಯಿನ್ ನುಂಗಿ ಬಾಲಕಿ ಸಾವನಪ್ಪಿರುವ ಹೃದಯವಿದ್ರಾವಕ ಘಟನೆ ನಡೆದಿದೆ. ಪ್ಲಾಸ್ಟಿಕ್ ಕಾಯಿನ್ ನುಂಗಿ 8 ವರ್ಷದ ತನುಷ್ಕ ಸಾವನ್ನಪ್ಪಿದ್ದಾಳೆ ಸಹೋದರರ ಜೊತೆ ಲೂಡೋ ಆಡುವಾಗ ಈ ಒಂದು ಘಟನೆ ನಡೆದಿದೆ.ದಕ್ಷಿಣ ಕನ್ನಡ ಜಿಲ್ಲೆಯ ಗ್ರಾಮದಲ್ಲಿ ಈ ಒಂದು ಘೋರ ದುರಂತ ಸಂಭವಿಸಿದೆ. ಕೇರಳದ ಕಾಸರಗೋಡು ಜಿಲ್ಲೆಯ ನಿವಾಸಿಯಾಗಿರುವ ತನುಷ್ಕ ಗಂಟಲಲ್ಲಿ ಲೂಡೋ ಕಾಯಿನ್ ಸಿಲುಕಿ ಸಾವನ್ನಪ್ಪಿದ್ದಾಳೆ. ಆಟ ಆಡುವ ಸಂದರ್ಭದಲ್ಲಿ ಲೂಡೋ ಕಾಯಿನ್ ಬಾಯಲ್ಲಿ ಇಟ್ಟುಕೊಂಡಿರುತ್ತಾಳೆ. 20 ನಿಮಿಷಗಳ ಕಾಲ ಗಂಟಲಲ್ಲಿ ಸಿಲುಕಿ ಉಸಿರಾಡಲು ಸಾಧ್ಯವಾಗದೆ ನರಳಾಡಿದ್ದಾಳೆ. ತಕ್ಷಣ ಪೋಷಕರು ಆಕೆಯನ್ನು ಆಸ್ಪತ್ರೆಗೆ ದಾಖಲಿಸಿದ್ದಾರೆ. ಆದರೆ ಅಷ್ಟರಲ್ಲಿ ಆಗಲಿ ಆಕೆಯ ಪ್ರಾಣ ಪಕ್ಷಿ ಹಾರಿ ಹೋಗಿದೆ. ಮಗು ಯಾವುದಾದ್ರೂ ವಸ್ತು ನುಂಗಿದರೆ ತಕ್ಷಣ ಏನು ಮಾಡಬೇಕು? ಪೋಷಕರು ತಿಳಿಯಲೇಬೇಕಾದ ವಿಷಯಗಳಿವು.! ಮನೆಯಲ್ಲಿ ಆಟವಾಡುವಾಗ ಚಿಕ್ಕ ಮಕ್ಕಳು ಏನು ಮಾಡುತ್ತಿದ್ದಾರೆ ಎಂಬುದರ ಬಗ್ಗೆ ಒಂದು ಕ್ಷಣ ಗಮನ ಹರಿಸದಿರುವುದು ಕೂಡ ದೊಡ್ಡ ಅಪಘಾತಕ್ಕೆ ಕಾರಣವಾಗಬಹುದು. ವಿಶೇಷವಾಗಿ ಒಂದು…

Read More

ಬೆಂಗಳೂರು : HRMS ತಂತ್ರಾಂಶದಲ್ಲಿ ಕರ್ನಾಟಕ ಆರೋಗ್ಯ ಸಂಜೀವಿನಿ ಯೋಜನೆ (KASS) ಗೆ ಹೊರ ಉಳಿಯಲು ಇಚ್ಛಿಸುವ ಸರ್ಕಾರಿ ನೌಕರರಿಗೆ/ ಡಿಡಿಒ ಗಳಿಗೆ ಸರಳೀಕರಿಸಿಲಾದ ನೂತನ ಮಾರ್ಗಸೂಚಿ ಪ್ರಕಟಿಸಲಾಗಿದೆ.  ಮೇಲ್ಕಂಡ ವಿಷಯಕ್ಕೆ ಸಂಬಂಧಿಸಿದಂತೆ ಹಾಗೂ ಉಲ್ಲೇಖಿತ ಪತ್ರದಲ್ಲಿ ಸರ್ಕಾರದ ಆದೇಶದನ್ವಯ ಕರ್ನಾಟಕ ಆರೋಗ್ಯ ಸಂಜೀವಿನಿ ಯೋಜನೆ (KASS) ಯಿಂದ ಸರ್ಕಾರಿ ನೌಕರರು ಹೊರಗುಳಿಯಲು ಇಚ್ಚಿಸಿದ್ದಲ್ಲಿ, ಹೊರಗುಳಿಯಲು ಫೆಬ್ರವರಿ ಮಾಹೆಯ ಅಂತ್ಯದವರೆವಿಗೂ ಮಾತ್ರವೇ HRMS-1 KASS ತಂತ್ರಾಂಶದಲ್ಲಿ ಈ ಅವಕಾಶ ಕಲ್ಪಿಸಿಕೊಡಲಾಗಿವುದರಿಂದ ಸದರಿ DDO ರವರುಗಳು ತಮ್ಮ ಕಛೇರಿಯ ಅಧೀನದಲ್ಲಿ ಕಾರ್ಯನಿರ್ವಹಿಸುತ್ತಿರುವ ನೌಕರರ/ ಅಧಿಕಾರಿಗಳ ಫಬ್ರವರಿ ವೇತನದ ಬಿಲ್ಲುಗಳನ್ನು HRMS-2 ತಂತ್ರಾಂಶದಲ್ಲಿ ಸೃಜಿಸುವ ಮೊದಲೇ ಈ ಕೆಳಕಂಡ ಮಾರ್ಗಸೂಚಿಯನ್ನು ಅನುಸರಿಸುವುದು. HRMS-1 (KASS) KASS ಆಯ್ಕೆ-ಹೊರಗು (KASS ವೆಬ್ ಅಪ್ಲಿಕೇಶನ್ ಯೋಜನೆಯಿಂದ ಹೊರಗುಳಿಯಲು) ಅನುಮೋದನೆ ಪ್ರಕ್ರಿಯೆ: 1. ಲಾಗಿನ್ ಮತ್ತು ಸಂಚರಣೆ HRMS & 2: https://hrms.karnataka.gov.in DDO ತನ್ನ ಲಾಗಿನ್ ವಿವರಗಳನ್ನು ಬಳಸಿ HRMS-1 ಗೆ ಲಾಗಿನ್ ಮಾಡುತ್ತಾರೆ. : ಸೇವಾ…

Read More

ಬೆಂಗಳೂರು : ಕರ್ನಾಟಕ ರಾಜ್ಯ ಮಹಿಳಾ ಸರ್ಕಾರಿ ನೌಕರರಿಗೆ ಋತುಚಕ್ರ ರಜೆ ಸೌಲಭ್ಯವನ್ನು ಕಲ್ಪಿಸಿರುವ ರಾಜ್ಯ ಸರ್ಕಾರವು ಇದೀಗ ಋತುಚಕ್ರ ರಜೆ ಪಡೆಯಲು ಮಹಿಳಾ ನೌಕರರು ಈ ಷರತ್ತುಗಳ ಪಾಲನೆ ಕಡ್ಡಾಯವಾಗಿದೆ. ರಾಜ್ಯದ ವಿವಿಧ ಇಲಾಖೆಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಮಹಿಳಾ ನೌಕರರ ಕಾರ್ಯದಕ್ಷತೆ ಮತ್ತು ಕಾರ್ಯಕ್ಷಮತೆ ಹೆಚ್ಚಿಸಿ ಅವರ ಮನೋಸ್ಥೆರ್ಯವನ್ನು ಹೆಚ್ಚಿಸಲು ಮಾಸಿಕ ಋತುಚಕ್ರದ ಸಂದರ್ಭದಲ್ಲಿ ಪ್ರತಿ ಮಾಸಿಕ ಒಂದು ದಿನದ ರಜೆಯಂತೆ ವಾರ್ಷಿಕ 12 ದಿನಗಳ ವೇತನ ಸಹಿತ ರಜೆಯನ್ನು ಪಡೆದುಕೊಳ್ಳಲು ಇರುವ ನಿಬಂಧನೆಗಳು ಉಲ್ಲೇಖ (2) ರ ಮತ್ತು ಸರ್ಕಾರದ ಆದೇಶ ದಿನಾಂಕ:12.11.2025ರಲ್ಲಿ ಪ್ರಸ್ತಾಪಿಸಿರುವಂತೆ ಇರುತ್ತದೆ. ಷರತ್ತುಗಳು: 1. ಮಹಿಳಾ ನೌಕರರು ಆಯಾ ತಿಂಗಳ “ಋತುಚಕ್ರ ರಜೆ”ಯನ್ನು ಆಯಾ ತಿಂಗಳಿನಲ್ಲಿಯೇ ಬಳಸಿಕೊಳ್ಳುವುದು. ಹಿಂದಿನ ತಿಂಗಳ “ಋತುಚಕ್ರ ರಜೆ”ಯನ್ನು ಮುಂದಿನ ತಿಂಗಳಿಗೆ ವಿಸ್ತರಿಸಲು (CARRY OVER) ಅವಕಾಶವಿರುವುದಿಲ್ಲ. 2. ಪ್ರತಿ ತಿಂಗಳು ಒಂದು ದಿನದ “ಋತುಚಕ್ರ ರಜೆ” ಪಡೆಯಲು ಮಹಿಳಾ ನೌಕರರು ಯಾವುದೇ ವೈದ್ಯಕೀಯ ಪ್ರಮಾಣ ಪತ್ರವನ್ನು ಒದಗಿಸುವ ಅವಶ್ಯಕತೆ ಇರುವುದಿಲ್ಲ”.…

Read More

ಯಾದಗಿರಿ : ಗಾಂಧೀಜಿ ನಮ್ಮ ಭಾರತದ ರಾಷ್ಟ್ರಪಿತ ಅಲ್ಲ, ಪಾಕಿಸ್ತಾನದ ರಾಷ್ಟ್ರಪಿತ ಎಂದು ವಿಜಯಪುರ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ. ಗುರುಮಠಕಲ್ ನಲ್ಲಿ ಆಯೋಜಿಸಲಾಗಿದ್ದ ಛತ್ರಪತಿ ಶಿವಾಜಿ ಜಯಂತಿ ಕಾರ್ಯಕ್ರಮದ ಬಹಿರಂಗ ಸಭೆಯಲ್ಲಿ ಮಾತನಾಡಿದ ಅವರು, ಗಾಂಧಿ ನಮ್ಮ ದೇಶದ ರಾಷ್ಟ್ರಪಿತ ಎಂದು ನಾನು ಒಪ್ಪುವುದೇ ಇಲ್ಲ, ನೆಹರು ನಮ್ಮ ದೇಶದ ಮೊದಲ ಪ್ರಧಾನಮಂತ್ರಿ ಎಂದು ನಾನು ಒಪ್ಪುವುದೇ ಇಲ್ಲ, ಇವರೆಲ್ಲ ತಮ್ಮ ತಮ್ಮ ಚಟಕ್ಕೆ ದೇಶ ಹಾಳು ಮಾಡಿದವರು ಎಂದರು. ಗಾಂಧಿಯನ್ನು ನಾನು ನಮ್ಮ ಭಾರತದ ರಾಷ್ಟ್ರಪಿತ ಎಂದು ಎಂದಿಗೂ ಒಪ್ಪಲ್ಲ, ನೆಹರು ಮೊದಲ ಪ್ರಧಾನಿ ಅಲ್ಲ. ನಮ್ಮ ದೇಶದ ಮೊದಲ ಪ್ರಧಾನಿ ನೇತಾಜಿ ಸುಭಾಶ್ಚಂದ್ರ ಬೋಸ್. ಆಜಾದ್, ತಾತ್ಯಾ ಟೋಪಿ, ಸಾವರ್ಕರ್, ಲಾಲಾ ಲಜಪತ ರಾಯ್, ತಿಲಕ್, ಅಂಬೇಡ್ಕ‌ರ್ ರಂಥವರು ಸ್ವಾತಂತ್ರ್ಯಕ್ಕಾಗಿ ಕಷ್ಟಪಟ್ಟವರು ಎಂದು ಹೇಳಿದ್ದಾರೆ.

Read More