Subscribe to Updates
Get the latest creative news from FooBar about art, design and business.
Author: kannadanewsnow57
ಬೆಂಗಳೂರು : ಸ್ವಯಂಘೋಷಿತ ಆರ್ಥಿಕ ತಜ್ಞ ಸಿಎಂ ಸಿದ್ದರಾಮಯ್ಯನವರ ದುರಾಡಳಿತದಲ್ಲಿ ಗೃಹಲಕ್ಷ್ಮಿ ಹಣ ಬರುತ್ತಿಲ್ಲ. ರೈತರಿಗೆ ಪ್ರೋತ್ಸಾಹಧನವಿಲ್ಲ ಎಂದು ವಿಪಕ್ಷ ನಾಯಕ ಆರ್. ಅಶೋಕ್ ವಾಗ್ದಾಳಿ ನಡೆಸಿದ್ದಾರೆ. ಈ ಕುರಿತು ಟ್ವೀಟ್ ಮಾಡಿರುವ ಆರ್. ಅಶೋಕ್, ಸ್ವಯಂಘೋಷಿತ ಆರ್ಥಿಕ ತಜ್ಞ ಸಿಎಂ ಸಿದ್ದರಾಮಯ್ಯನವರ ದುರಾಡಳಿತದಲ್ಲಿ, ಗುತ್ತಿಗೆದಾರರ ಬಾಕಿ ಹಣ ಪಾವತಿಗೆ ದುಡ್ಡಿಲ್ಲ, ಸರ್ಕಾರಿ ನೌಕರರ ವೇತನ ಹೆಚ್ಚಳವಿಲ್ಲ, ಗೃಹಲಕ್ಷಿ ಹಣ ಬರುತ್ತಿಲ್ಲ, ರೈತರಿಗೆ ಪ್ರೋತ್ಸಾಹಧನವಿಲ್ಲ, Outgoing CM Siddaramaiah CM Of Karnataka ನವರ ಏಕೈಕ ಸಾಧನೆ ಅಂದರೆ ಅದು ಕರ್ನಾಟಕದ ಆರ್ಥಿಕ ಪರಿಸ್ಥಿತಿಯನ್ನ ಅಧೋಗತಿಗೆ ತಳ್ಳಿರುವುದು ಎಂದು ಕಿಡಿಕಾರಿದ್ದಾರೆ. ಕರ್ನಾಟಕದ ಇತಿಹಾಸದಲ್ಲಿಯೇ ಅತಿ ಭಂಡ ಸರ್ಕಾರವೆಂದರೆ ಅದು ರೈತ ವಿರೋಧಿ, ರೈತ ಹಂತಕ ಸಿದ್ದರಾಮಯ್ಯ ಸರ್ಕಾರ. ರೈತ ಹಂತಕ Indian National Congress – Karnataka ಸರ್ಕಾರದ ಒಂದು ವರ್ಷದ ಅವಧಿಯಲ್ಲಿ ರಾಜ್ಯದ 1,182 ರೈತರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಇದು ಕಾಂಗ್ರೆಸ್ನ ರೈತ ವಿರೋಧಿ ನೀತಿಯ ಜ್ವಲಂತ ನಿದರ್ಶನ. ಪರಿಹರಕ್ಕಾಗಿಯೇ…
ನವದೆಹಲಿ : ವಿಶ್ವವಿದ್ಯಾಲಯ ಧನಸಹಾಯ ಆಯೋಗ (ಯುಜಿಸಿ ನೆಟ್) ಜೂನ್ 2024 ರ ಮರು ಪರೀಕ್ಷೆ ಆಗಸ್ಟ್ 21 ರಿಂದ ಸೆಪ್ಟೆಂಬರ್ 4 ರವರೆಗೆ ನಡೆಯಲಿದೆ. ಮಹತ್ವದ ಬದಲಾವಣೆಯಲ್ಲಿ, ಎನ್ಟಿಎ ಯುಜಿಸಿ ನೆಟ್ ಮರು ಪರೀಕ್ಷೆಯನ್ನು ಕಂಪ್ಯೂಟರ್ ಆಧಾರಿತ ಪರೀಕ್ಷೆ (ಸಿಬಿಟಿ) ಸ್ವರೂಪದಲ್ಲಿ ನಡೆಸಲು ಆಯ್ಕೆ ಮಾಡಿದೆ, ಪರೀಕ್ಷೆಯ ಜೂನ್ ಆವೃತ್ತಿಯಲ್ಲಿ ಮೊದಲ ಬಾರಿಗೆ ಬಳಸಿದ ಪೆನ್ ಮತ್ತು ಪೇಪರ್ ಮೋಡ್ನಿಂದ ದೂರ ಸರಿದಿದೆ. ಯುಜಿಸಿ ನೆಟ್ ಪರೀಕ್ಷೆ ನಡೆದ ಒಂದು ದಿನದ ನಂತರ ಜೂನ್ 18 ರಂದು ಅದನ್ನು ರದ್ದುಗೊಳಿಸಲಾಯಿತು. “ಪರೀಕ್ಷೆಯ ಸಮಗ್ರತೆಗೆ ಧಕ್ಕೆಯಾಗಿರಬಹುದು” ಎಂಬ ಆತಂಕದ ನಡುವೆ ರದ್ದತಿ ಬಂದಿದೆ. ಯುಜಿಸಿ ನೆಟ್ ಜೂನ್ 2024 ಅನ್ನು ದೇಶಾದ್ಯಂತ 317 ನಗರಗಳಲ್ಲಿ 1205 ಪರೀಕ್ಷಾ ಕೇಂದ್ರಗಳಲ್ಲಿ ನಡೆಸಲಾಗಿದ್ದು, ಒಟ್ಟು 11,21,225 ಅಭ್ಯರ್ಥಿಗಳಿಗೆ ಅವಕಾಶ ಕಲ್ಪಿಸಲಾಗಿದೆ. ಅವರಲ್ಲಿ 6,35,587 ಮಹಿಳೆಯರು, 4,85,579 ಪುರುಷರು ಮತ್ತು 59 ತೃತೀಯ ಲಿಂಗಿಗಳು ಎಂದು ಗುರುತಿಸಲಾಗಿದೆ. ಇದಕ್ಕೆ ಹೋಲಿಸಿದರೆ, 2023 ರ ಡಿಸೆಂಬರ್ನಲ್ಲಿ ಯುಜಿಸಿ…
ಹಾವೇರಿ : ರಾಜ್ಯದಲ್ಲಿ ಡೆಂಗ್ಯೂ ಜ್ವರದ ಅಬ್ಬರ ಹೆಚ್ಚಳವಾಗಿದ್ದು, ಹಾವೇರಿ ಜಿಲ್ಲೆಯಲ್ಲಿ ಡೆಂಗ್ಯೂ ಜ್ವರಕ್ಕೆ 13 ವರ್ಷದ ಬಾಲಕ ಸಾವನ್ನಪ್ಪಿರುವ ಘಟನೆ ನಡೆದಿದೆ. ಹಾವೇರಿ ಜಿಲ್ಲೆಯ ರಾಣೆಬೆನ್ನೂರು ತಾಲೂಕಿನ ಚಳಗೇರಿ ಗ್ರಾಮದ 13 ವರ್ಷದ ಬಾಲಕ ಪ್ರೇಮ್ ಕುಮಾರ್ ಚಕಿತ್ಸೆ ಫಲಕಾರಿಯಾಗದೇ ಸಾವನ್ನಪ್ಪಿದ್ದಾನೆ. ಕಳೆದ ಒಂದು ವಾರದಿಂದ ಪ್ರೇಮ್ ಕುಮಾರ್ ಜ್ವರದಿಂದ ಬಳಲುತ್ತಿದ್ದ. ಬಳಿಕ ಬಾಲಕನನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೇ ಪ್ರೇಮ್ ಕುಮಾರ್ ಸಾವನ್ನಪ್ಪಿದ್ದಾನೆ. ಸ್ಥಳಕ್ಕೆ ರಾಣೆಬೆನ್ನೂರು ಟಿಹೆಚ್ ಒ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ರಾಜ್ಯದಲ್ಲಿ ಡೆಂಘಿ ಪ್ರಕರಣಗಳು ಹೆಚ್ಚುತ್ತಿದ್ದು, ಜನರು ಆರೋಗ್ಯದ ಬಗ್ಗೆ ಹೆಚ್ಚು ಕಾಳಜಿ ವಹಿಸಬೇಕು. ಮನೆಯ ಸುತ್ತಮುತ್ತ ನೀರು ನಿಲ್ಲದಂತೆ ನೋಡಿಕೊಳ್ಳುವುದರೊಂದಿಗೆ, ಪರಿಸರವನ್ನು ಸ್ವಚ್ಛವಾಗಿಟ್ಟುಕೊಳ್ಳುವ ಮೂಲಕ ಡೆಂಘಿ ಬಾರದಂತೆ ಜಾಗ್ರತೆ ವಹಿಸಿ. ಡೆಂಘಿ ಲಕ್ಷಣಗಳು ಕಂಡುಬಂದಲ್ಲಿ ನಿರ್ಲಕ್ಷಿಸದಿರಿ. ಕೂಡಲೇ ಆಸ್ಪತ್ರೆಗೆ ತೆರಳಿ ಡೆಂಘಿ ಪರೀಕ್ಷೆ ಮಾಡಿಸಿ, ಚಿಕಿತ್ಸೆ ಪಡೆಯಿರಿ.
ಬೆಂಗಳೂರು : ರೇಣುಕಾಸ್ವಾಮಿ ಹತ್ಯೆ ಪ್ರಕರಣದ A17 ಆರೋಪಿ ನಿಖಿಲ್ ನಾಯಕ್ ಸಲ್ಲಿಸಿದ್ದ ಜಾಮೀನು ಅರ್ಜಿ ಹಿಂಪಡೆದಿದ್ದಾನೆ. ಎಫ್ ಎಸ್ ಎಲ್ ವರದಿ ಬಾರದ ಕಾರಣ ನೀಡಿ ನಿಖಿಲ್ ನಾಯಕ್ ಜಾಮೀನು ಅರ್ಜಿ ಹಿಂಪಡೆದಿದ್ದಾನೆ. ಜಾರ್ಮಿನು ಅರ್ಜಿಗೆ ಎಸ್ ಪಿಪಿ ಪ್ರಸನ್ನ ಕುಮಾರ್ ಅವರು ದಾಖಲೆ ಸಹಿತ ೬೦ ಪುಟಗಳ ಆಕ್ಷೇಪಣೆ ಸಲ್ಲಿಸಿದ್ದರು. ಹೀಗಾಗಿ ಜಾಮೀನು ಅರ್ಜಿಯನ್ನು ನಿಖಿಲ್ ನಾಯಕ್ ಪರ ವಕೀಲರು ಹಿಂಪಡೆದಿದ್ದಾರೆ. ಆರೋಪಿ ನಿಖಿಲ್ ನಾಯಕ್ ಗೆ ಜಾಮೀನು ಅರ್ಜಿ ತಿರಸ್ಕರಿಸುವಂತೆ ವಾದ ಮಂಡಿಸಿದ್ದರು. ಹೀಗಾಗಿ ಎಫ್ ಎಸ್ ಎಲ್ ವರದಿ ಬಾರದ ಕಾರಣ ನೀಡಿ ಜಾಮೀನು ಅರ್ಜಿ ವಾಪಸ್ ಪಡೆಯಲಾಗಿದೆ.
ಬೆಗಳೂರು : ರಾಜ್ಯ ಸರ್ಕಾರದ ಪ್ರಮುಖ ಯೋಜನೆಗಳಲ್ಲಿ ಒಂದಾದ ಗೃಹಲಕ್ಷ್ಮಿ ಯೋಜನೆ ಇಷ್ಟು ದಿನ ಮಹಿಳೆಯರಿಗೆ 2000 ನೀಡುತ್ತಾ ಬಂದಿತ್ತು. ಇದೀಗ ರಾಜ್ಯ ಸರ್ಕಾರ ಮತ್ತೊಂದು ಮಹತ್ವದ ನಿರ್ಧಾರ ತೆಗೆದುಕೊಂಡಿದ್ದು ಲಿಂಗತ್ವ ಅಲ್ಪಸಂಖ್ಯಾತರಿಗೂ ಕೂಡ ಇನ್ನು ಮುಂದೆ ಅವರ ಖಾತೆಗೆ 2,000 ಹಣ ಬರಲಿದೆ. ಲಿಂಗತ್ವ ಅಲ್ಪಸಂಖ್ಯಾತರಿಗೆ ಗೃಹಲಕ್ಷ್ಮಿ ಯೋಜನೆಗೆ ಅರ್ಜಿ ಸಲ್ಲಿಸಲು ಇಂದಿನಿಂದ ಅವಕಾಶ ನೀಡಲಾಗಿದ್ದು, ರಾಜ್ಯ ಸರ್ಕಾರ ಲಿಂಗತ್ವ ಅಲ್ಪಸಂಖ್ಯಾತರ ಗುರುತಿನ ಚೀಟಿಯನ್ನು ಪರಿಗಣಿಸಲು ಸರ್ಕಾರವು ಅನುಮೋದನೆ ನೀಡಿ ತಂತ್ರಾಂಶದಲ್ಲಿ ಮಾರ್ಪಾಡು ಮಾಡಿದೆ. ಅದರಂತೆ ಇನ್ನು ಮುಂದೆ ಮಹಿಳೆಯರ ಜೊತೆಗೆ ಲಿಂಗತ್ವ ಅಲ್ಪಸಂಖ್ಯಾತರಿಗೂ ಕೂಡ ರಾಜ್ಯ ಸರ್ಕಾರದಿಂದ ಗೃಹಲಕ್ಷ್ಮಿ ಯೋಜನೆ ಅಡಿ ಅವರ ಖಾತೆಗೆ 2000 ಹಣ ಬಂದು ಬೀಳಲಿದೆ. ಅದರಿಂದ ಸಹಜವಾಗಿ ಲಿಂಗತ ಅಲ್ಪಸಂಖ್ಯಾತರ ಆರ್ಥಿಕ ಮಟ್ಟ ಸುಧಾರಿಸುತ್ತದೆ ಎಂದು ಹೇಳಲಾಗುತ್ತಿದೆ. ಅರ್ಜಿ ಸಲ್ಲಿಸುವುದು ಹೇಗೆ? ಲಿಂಗತ್ವ ಅಲ್ಪಸಂಖ್ಯಾತ ಯೋಜನೆಯಡಿ ಪ್ರಯೋಜನ ಪಡೆಯಲು ಅನುವಾಗುವಂತೆ ಗೃಹಲಕ್ಷ್ಮೀ ಯೋಜನೆಯ ತಂತ್ರಾಂಶದಲ್ಲಿ ಅರ್ಜಿ ಸಲ್ಲಿಸುವಾಗ Na- tional Portal For…
ನವದೆಹಲಿ: ಭಾರತದ ಮಾಜಿ ನಾಯಕ ಮತ್ತು ಮುಖ್ಯ ಕೋಚ್ ರಾಹುಲ್ ದ್ರಾವಿಡ್ ಭಾರತ ರತ್ನ ಪ್ರಶಸ್ತಿಗೆ ಅರ್ಹರು ಎಂದು ಭಾರತದ ಮಾಜಿ ನಾಯಕ ಸುನಿಲ್ ಗವಾಸ್ಕರ್ ಅಭಿಪ್ರಾಯಪಟ್ಟಿದ್ದಾರೆ. 51 ವರ್ಷದ ದ್ರಾವಿಡ್ ತಮ್ಮ 16 ವರ್ಷಗಳ ಸುದೀರ್ಘ ಅಂತರರಾಷ್ಟ್ರೀಯ ವೃತ್ತಿಜೀವನದಲ್ಲಿ ಭಾರತಕ್ಕಾಗಿ 164 ಟೆಸ್ಟ್, 344 ಏಕದಿನ ಮತ್ತು 1 ಟಿ 20 ಐ ಪಂದ್ಯಗಳನ್ನು ಆಡಿದ್ದಾರೆ, ನವೆಂಬರ್ 2021 ರಿಂದ ಜೂನ್ 2024 ರವರೆಗೆ ಭಾರತದ ಮುಖ್ಯ ಕೋಚ್ ಆಗಿ ಸೇವೆ ಸಲ್ಲಿಸಿದ್ದಾರೆ. ಅವರ ಮಾರ್ಗದರ್ಶನದಲ್ಲಿ ಭಾರತವು ಕಳೆದ ತಿಂಗಳು ವೆಸ್ಟ್ ಇಂಡೀಸ್ನಲ್ಲಿ ಟಿ 20 ವಿಶ್ವಕಪ್ ಪ್ರಶಸ್ತಿಯನ್ನು ಗೆಲ್ಲುವ ಮೂಲಕ ಐಸಿಸಿ ಟ್ರೋಫಿಗಾಗಿ 11 ವರ್ಷಗಳ ಕಾಯುವಿಕೆಯನ್ನು ಕೊನೆಗೊಳಿಸಿತು. ಕಳೆದ 30 ವರ್ಷಗಳಲ್ಲಿ ಭಾರತೀಯ ಕ್ರಿಕೆಟ್ಗೆ ದ್ರಾವಿಡ್ ಅವರ ಕೊಡುಗೆಯಿಂದ ಪ್ರಭಾವಿತರಾದ ಗವಾಸ್ಕರ್, ಮೊದಲು ಆಟಗಾರನಾಗಿ ಮತ್ತು ನಂತರ ಭಾರತದ ಅಂಡರ್ -19 ಮತ್ತು ಹಿರಿಯ ಪುರುಷರ ಕ್ರಿಕೆಟ್ ತಂಡಗಳ ಮುಖ್ಯ ತರಬೇತುದಾರರಾಗಿ ಭಾರತದ ಮಾಜಿ ನಾಯಕ ಭಾರತದ…
ನವದೆಹಲಿ: ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರು ತಮ್ಮ ವಕೀಲರೊಂದಿಗೆ ಹೆಚ್ಚುವರಿ ಸಭೆಗಳನ್ನು ಕೋರಿ ಸಲ್ಲಿಸಿದ್ದ ಅರ್ಜಿಯನ್ನು ದೆಹಲಿ ಹೈಕೋರ್ಟ್ ಸೋಮವಾರ ವಿಚಾರಣೆ ನಡೆಸಿತು. ಈ ಸಂದರ್ಭದಲ್ಲಿ, ಅರವಿಂದ್ ಕೇಜ್ರಿವಾಲ್ ಅವರು ಪೂರ್ಣ ನ್ಯಾಯಾಲಯದಲ್ಲಿ ತಮ್ಮ ವಕೀಲರೊಂದಿಗೆ ಕಾನೂನು ಸಭೆಗಳ ಸಂಖ್ಯೆಯನ್ನು ನಾಲ್ಕಕ್ಕೆ ಹೆಚ್ಚಿಸಬೇಕೆಂದು ಒತ್ತಾಯಿಸಿದರು. ಅರವಿಂದ್ ಕೇಜ್ರಿವಾಲ್ ಅವರ ಈ ಬೇಡಿಕೆಯ ಬಗ್ಗೆ ದೆಹಲಿ ಹೈಕೋರ್ಟ್ ನೋಟಿಸ್ ನೀಡಿದೆ. ದೆಹಲಿ ಹೈಕೋರ್ಟ್ ತಿಹಾರ್ ಜೈಲು ಪ್ರಾಧಿಕಾರ ಮತ್ತು ಜಾರಿ ನಿರ್ದೇಶನಾಲಯಕ್ಕೆ ನೋಟಿಸ್ ಜಾರಿ ಮಾಡಿದೆ. ಈ ವಿಷಯವು ಈಗ ಜುಲೈ 15 ರಂದು ದೆಹಲಿ ಹೈಕೋರ್ಟ್ ನಲ್ಲಿ ವಿಚಾರಣೆಗೆ ಬರಲಿದೆ. ಅರವಿಂದ್ ಕೇಜ್ರಿವಾಲ್ ಅವರ ಅರ್ಜಿಗೆ ಇಡಿ ಮತ್ತು ತಿಹಾರ್ ಆಡಳಿತವು ಜುಲೈ 15 ರೊಳಗೆ ತಮ್ಮ ಉತ್ತರವನ್ನು ಸಲ್ಲಿಸಬೇಕಾಗಿದೆ. ಪ್ರಸ್ತುತ, ಕೇಜ್ರಿವಾಲ್ ವಾರಕ್ಕೆ ಎರಡು ಬಾರಿ ತಮ್ಮ ವಕೀಲರನ್ನು ಭೇಟಿ ಮಾಡಲು ಅವಕಾಶವಿದೆ. ಈಗ ಅವರು ವಕೀಲರನ್ನು ನಾಲ್ಕು ಬಾರಿ ಭೇಟಿಯಾಗಲು ಬಯಸುತ್ತಾರೆ. ಜುಲೈ 1ರ ಆದೇಶಕ್ಕೆ ಸವಾಲು…
ಬೆಂಗಳೂರು : ಯಜಮಾನಿಯರಿಗೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಸಿಹಿಸುದ್ದಿ ನೀಡಿದ್ದು, ಜೂನ್ ತಿಂಗಳ ಗೃಹಲಕ್ಷ್ಮಿ ಹಣ ಈ ವಾರವೇ ಖಾತೆಗೆ ಜಮಾ ಆಗಲಿದೆ ಎಂದು ಸಚಿವೆ ಲಕ್ಷ್ಮಿ ಹೆಬ್ಬಾಲ್ಕರ್ ಮಾಹಿತಿ ನೀಡಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಗೃಹಲಕ್ಷ್ಮಿ ಯೋಜನೆಗೆ ಒಟ್ಟು ಶೇ.98 ರಷ್ಟು ಮಹಿಳೆಯರು ನೋಂದಾಯಿಸಿಕೊಂಡಿದ್ದು, ಇಲ್ಲಿಯವರೆಗೆ ಎಲ್ಲಾ ತಿಂಗಳ ಹಣ ಜಮೆಯಾಗುತ್ತಿದೆ. ಜೂನ್ ತಿಂಗಳ ಹಣವು ವಾರದಲ್ಲಿಯೇ ತಮ್ಮ ಖಾತೆಗಳಿಗೆ ಜಮೆಯಾಗಲಿದೆ. ಪ್ರಸ್ತಕ ತಿಂಗಳಿನ ಹಣವು ತದನಂತರ ಪಾವತಿಯಾಗಲಿದ್ದು, ಎಲ್ಲಾ ಮಹಿಳೆಯರಿಗೂ ತಲುಪಲಿದೆ ಎಂದರು. ಇದೀಗ 11 ನೇ ಕಂತಿನ ಹಣ ಯಜಮಾನಿಯರ ಖಾತೆಗೆ ಜಮೆ ಆಗಿದ್ದು, ಇನ್ನೂ ಹಣ ಬಾರದೇ ಇರುವ ಫಲಾನುಭವಿಗಳು ತಪ್ಪದೇ ಈ ಕೆಲಸ ಮಾಡಿದ್ರೆ ಖಾತೆಗೆ ಒಟ್ಟಿಗೆ ಹಣ ಜಮಾ ಆಗಲಿದೆ. ರಾಜ್ಯ ಸರ್ಕಾರವು ಮೊದಲಿಗೆ ಪೆಂಡಿಂಗ್(Gruhalakshmi Pending Money)ಇರುವ ಎಲ್ಲಾ ಹಣವನ್ನು ಫಲಾನುಭವಿಗಳಿಗೆ ಬಿಡುಗಡೆ ಮಾಡಿದ ಬಳಿಕ ಜೂನ್ ತಿಂಗಳ ಕಂತಿನ ಹಣವನ್ನ ಬಿಡುಗಡೆ ಮಾಡಲಾಗುವುದು ಎನ್ನಲಾಗಿದೆ. ಇನ್ನೂ ಸಾಕಷ್ಟು ಜನ ಬ್ಯಾಂಕ್…
ಬೆಂಗಳೂರು : ಗ್ಯಾರಂಟಿ ಯೋಜನೆಗಳ ರದ್ದತಿಗೆ ಆಗ್ರಹಿಸಿ ಬಿಜೆಪಿ ಶಾಸಕ ಬಸವನಗೌಡ ಪಾಟೀಲ್ ಯತ್ನಾಳ್ ಕೇಂದ್ರಕ್ಕೆ ಪತ್ರ ಬರೆದಿರುವ ವಿಚಾರಕ್ಕೆ ಸಂಬಂಧಿಸಿದಂತೆ ಗೃಹ ಸಚಿವ ಡಾ.ಜಿ. ಪರಮೇಶ್ವರ್ ಪ್ರತಿಕ್ರಿಯೆ ನೀಡಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯದ ಆಡಳಿತ ನಡೆಸಲು ಜನರು ನಮ್ಮನ್ನು ಆರಿಸಿದ್ದಾರೆ. ಅವರನ್ನಲ್ಲ. ಕೇಂದ್ರದಲ್ಲಿ ಆಡಳಿತ ನಡೆಸಲು ಅವರಿಗೆ ಅವಕಾಶ ಮಾಡಿಕೊಟ್ಟಿದ್ದಾರೆ. ಬಿಜೆಪಿಯವರು ಕೇಂದ್ರದಲ್ಲಿ ಆಡಳಿತ ನಡೆಸುತ್ತಿದೆ. ನಾವು ರಾಜ್ಯದಲ್ಲಿ ಆಡಳಿತ ನಡೆಸುತ್ತಿದ್ದೇವೆ. ಗ್ಯಾರಂಟಿ ಯೋಜನೆಗಳ ಬಗ್ಗೆ ಬಿಜೆಪಿಯವರು ಸಮಸ್ಯೆಗೆ ಯತ್ನಿಸುತ್ತಿದ್ದಾರೆ ಎಂದು ವಾಗ್ದಾಳಿ ನಡೆಸಿದ್ದಾರೆ. ಗ್ಯಾರಂಟಿ ಯೋಜನೆಗಳಿಂದ ಸಮಸ್ಯೆ ಏನಾದ್ರೂ ಆದ್ರೆ ನಾವೇ ಪರಿಹರಿಸುತ್ತೇವೆ. ಗ್ಯಾರಂಟಿ ಯೋಜನೆಗಳಿಗೆ ೫೮ ಸಾವಿರ ಕೋಟಿ ರೂ. ಖರ್ಚು ಮಾಡುತ್ತಿದ್ದೇವೆ. ಗ್ಯಾರಂಟಿ ಯೋಜೆನಗಳ ಸಾಧಕ-ಬಾಧಕ ನಾವೇ ನೋಡಿಕೊಳ್ಳುತ್ತೇವೆ. ಇದರಲ್ಲಿ ಬಿಜೆಪಿಯವರ ಸೂಚನೆ ಬೇಕಾಗಿಲ್ಲ ಎಂದು ಕಿಡಿಕಾರಿದ್ದಾರೆ.
ಶಿವಮೊಗ್ಗ : ಮುಡಾ ಹಗರಣದಲ್ಲಿ ಸಿಎಂ ಸಿದ್ದರಾಮಯ್ಯ ಕುಟುಂಬದವರು ಭಾಗಿಯಾಗಿದೆ ಎಂದು ಮಾಜಿ ಸಚಿವ ಕೆ.ಎಸ್. ಈಶ್ವರಪ್ಪ ಆರೋಪಿಸಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮುಡಾ ಹಗರಣದಲ್ಲಿ ಸಿಎಂ ಸಿದ್ದರಾಮಯ್ಯ ಕುಟುಂಬದವರು ಭಾಗಿಯಾಗಿದ್ದಾರೆ. ಮನೆಯಲ್ಲಿದ್ದ ಹೆಣ್ಣು ಮಕ್ಕಳನ್ನು ಬೀದಿಗೆ ತಂದಿದ್ದಾರೆ. ಮುಡಾ ಹಗರಣವನ್ನು ಸಿಬಿಐ ತನಿಖೆಗೆ ನೀಡಬೇಕು ಎಂದು ಆಗ್ರಹಿಸಿದ್ದಾರೆ. ಮುಡಾ ಹಗರಣದಲ್ಲಿ ಸಿಎಂ ಕುಟುಂಬದವರು ಭಾಗಿಯಾಗಿದ್ದು, ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆ ನೀಡಬೇಕು, ವಾಲ್ಮೀಕಿ ಹಗರಣ ದೇಶದ ಗಮನ ಸೆಳೆದಿದೆ. ವಾಲ್ಮೀಕಿ ಅಭಿವೃದ್ಧಿ ನಿಗಮದ ಅಧ್ಯಕ್ಷರೂ ಈವರೆಗೂ ರಾಜೀನಾಮೆ ನೀಡಿಲ್ಲ ಎಂದರು.