Subscribe to Updates
Get the latest creative news from FooBar about art, design and business.
Author: kannadanewsnow57
ಚಿಕ್ಕಮಗಳೂರು : ಚಿಕ್ಕಮಗಳೂರು ಜಿಲ್ಲೆಯ ತರೀಕೆರೆ ತಾಲ್ಲೂಕಿನ ಶಿವಪುರ ಸಮೀಪದ ನವಿಲುಗುಡ್ಡದ ಬಂಡೆಯ ಬಳಿ ತೋಟದ ಮನೆಯ ಎದುರು ಆಟವಾಡುತ್ತಿದ್ದ ಐದು ವರ್ಷದ ಬಾಲಕಿಯನ್ನು ಚಿರತೆ ಹೊತ್ತೊಯ್ದ ಘಟನೆ ನಡೆದಿದೆ. ಬೆಂಗಳೂರಿನ ರಾಮಚಂದ್ರಪ್ಪ ಎಂಬುವರಿಗೆ ಸೇರಿದ ಅಡಿಕೆ ತೋಟದಲ್ಲಿ ಧಾರವಾಡದ ಈ ದಂಪತಿ ಕೆಲಸ ಮಾಡಿಕೊಂಡಿದ್ದಾರೆ. ಮನೆಯ ಹೊರಗೆ ಆಟವಾಡುತ್ತಿದ್ದ ಬಾಲಕಿಯನ್ನು ಎಳೆದೊಯ್ದಿದ್ದು, ಸದ್ಯ ಬಾಲಕಿಯ ಮೃತದೇಹ ಪತ್ತೆಯಾಗಿದೆ. ಬಸವರಾಜ ಮತ್ತು ರೇಣುಕಾ ದಂಪತಿಯ ಪುತ್ರಿ ಸಾನ್ವಿಯನ್ನು ಚಿರತೆ ಹೊತ್ತೊಯ್ದಿದಿತ್ತು. ಇದೀಗ ಪೊಲೀಸರು ಮತ್ತು ಅರಣ್ಯಇಲಾಖೆ ಸಿಬ್ಬಂದಿಗಳು ಬಾಲಕಿಯ ಮೃತದೇಹವನ್ನು ಪತ್ತೆ ಹಚ್ಚಿದ್ದಾರೆ.
ರಾಮನಗರ: ರಾಜ್ಯದಲ್ಲಿ ಮತ್ತೊಂದು ಪೈಶಾಚಿಕ ಕೃತ್ಯ ನಡೆದಿದ್ದು, ಬುದ್ಧಿಮಾಂಧ್ಯ ಪುತ್ರಿ ಮೇಲೆ ತಂದೆಯೇ ಅತ್ಯಾಚಾರ ಎಸಗಿದ ಘಟನೆ ನಡೆದಿದೆ. ಬೆಂಗಳೂರು ಗ್ರಾಮಾಂತರ ಜಿಲ್ಲೆ ಚನ್ನಪಟ್ಟಣ ತಾಲೂಕಿನ ಅಕ್ಕೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ತಂದೆಯೇ ಬುದ್ಧಿಮಾಂಧ್ಯ ಪುತ್ರಿಯ ಮೇಲೆ ಅತ್ಯಾಚಾರ ಎಸಗಿರುವುದಾಗಿ ಆತನ ಪತ್ನಿ ದೂರು ನೀಡಿದ್ದಾರೆ. ಬೆಂಗಳೂರಿನಲ್ಲಿ ಕೆಲಸ ಮಾಡಿಕೊಂಡಿರುವ ಆರೋಪಿ, ಪತ್ನಿ ಕೂಲಿ ಕೆಲಸಕ್ಕೆ ಹೋಗಿದ್ದಾಗ ಮನೆಯಲ್ಲಿ ಯಾರೂ ಇಲ್ಲದ ವೇಳೆ ಕುಡಿದು ಬಂದು ಪುತ್ರಿ ಮೇಲೆ ಅತ್ಯಾಚಾರ ಎಸಗಿದ್ದಾನೆ ಎನ್ನಲಾಗಿದೆ. ಅಕ್ಕೂರು ಠಾಣೆ ಪೊಲೀಸರು ಪ್ರಕರಣ ದಾಖಲಾಗಿದೆ.
ಕೆಲಸದ ಸ್ಥಳದಲ್ಲಿ ಮಹಿಳೆಯರ ಮೇಲೆ ನಡೆಯುವ ಲೈಂಗಿಕ ಕಿರುಕುಳವನ್ನು ತಡೆಯಲು ಸರ್ವೋಚ್ಛ ನ್ಯಾಯಾಲಯವು ನೀಡಿರುವ ನಿರ್ದೇಶನಗಳನ್ವಯ 10 ಮತ್ತು 10 ಕ್ಕಿಂತ ಹೆಚ್ಚಿನ ಕಾರ್ಮಿಕರನ್ನು (ಮಹಿಳಾ ಮತ್ತು ಪುರುಷರು ಒಳಗೊಂಡು) ಹೊಂದಿರುವ ಪ್ರತಿ ಅಂಗಡಿ, ವಾಣಿಜ್ಯ ಸಂಸ್ಥೆ, ಕಾರ್ಖಾನೆ ಮತ್ತು ಇತರೆ ಸಂಸ್ಥೆಗಳ ಮಾಲೀಕರು/ ಪಾಲುದಾರರು/ ನಿರ್ದೇಶಕರು ತಮ್ಮ ತಮ್ಮ ಸಂಸ್ಥೆಗಳಲ್ಲಿ ಆಂತರಿಕ ದೂರು ನಿವಾರಣಾ ಸಮಿತಿಯನ್ನು ರಚಿಸುವುದು ಕಡ್ಡಾಯವಾಗಿದೆ. ಹಲವು ಸಂಸ್ಥೆಗಳು ಇದುವರೆಗೂ ಸಮಿಯನ್ನು ರಚಿಸದಿರುವುದು ಅಥವಾ ರಚಿಸಿರುವ ಬಗ್ಗೆ ಮಾಹಿತಿಯನ್ನು ನೀಡದಿರುವುದು ಕಂಡುಬಂದಿದ್ದು, ನ್ಯಾಯಾಲಯದ ಸೂಚನೆಯನ್ವಯ ಕನಿಷ್ಠ 4 ಸದಸ್ಯರನ್ನೊಳಗೊಂಡ ಆಂತರಿಕ ದೂರು ಸಮಿತಿ ಅಂದರೆ ಆ ಸಮಿತಿಯ ಅಧ್ಯಕ್ಷರು-ಸಂಸ್ಥೆಯ ಹಿರಿಯ ಮಹಿಳಾ ಉದ್ಯೋಗಿಯಾಗಿರಬೇಕು, ಆ ಸಮಿತಿಯಲ್ಲಿ ಮಹಿಳಾ ಸಮಸ್ಯೆಗಳಿಗೆ ಬದ್ಧರಾಗಿರುವ ಸಾಮಾಜಿಕ ಕಾರ್ಯ ಅಥವಾ ಕಾನೂನು ಜ್ಞಾನದಲ್ಲಿ ಅನುಭವ ಹೊಂದಿರುವ ಇಬ್ಬರು ಸಂಸ್ಥೆಯ ನೌಕರರು ಸದಸ್ಯರಿರಬೇಕು ಮತ್ತು ಮಹಿಳಾ ಸಮಸ್ಯೆಗಳಿಗೆ ಬದ್ಧರಾಗಿರುವ ಒಂದು ಸರ್ಕಾರೇತರ ಸಂಸ್ಥೆ ಅಥವಾ ಸಂಘದ ವ್ಯಕ್ತಿಯಾಗಿರುವ ಒಬ್ಬರು ಬಾಹ್ಯ ಸದಸ್ಯರಿರಬೇಕು. ಒಟ್ಟಾರೆ ಆ…
ಚಾಮರಾಜನಗರ : ಪಠ್ಯಗಳಲ್ಲಿ ಸಹಕಾರಿ ತತ್ವದ ಮಹತ್ವವನ್ನು ಅಳವಡಿಸಲಾಗುವುದು. ನಮ್ಮ ಸರ್ಕಾರ ಸಹಕಾರ ರಂಗದ ಬೆಳೆವಣಿಗೆಗೆ ಎಲ್ಲಾ ರೀತಿಯ ನೆರವು ನೀಡಲಿದೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ. ಚಾಮರಾಜನಗರದಲ್ಲಿ ನಡೆದ 72ನೇ ಅಖಿಲ ಭಾರತ ಸಹಕಾರ ಸಪ್ತಾಹದ ಸಮಾರೋಪ ಸಮಾರಂಭದಲ್ಲಿ ಮಾತನಾಡಿದ ಸಿಎಂ ಸಿದ್ದರಾಮಯ್ಯ, ಗ್ರಾಮೀಣ ಭಾರತದ ಆರ್ಥಿಕ ಅಭಿವೃದ್ಧಿಗೆ ಪ್ರತೀ ಗ್ರಾಮದಲ್ಲಿ ಒಂದು ಶಾಲೆ, ಒಂದು ಗ್ರಾಮ ಪಂಚಾಯತಿ, ಒಂದು ಸಹಕಾರ ಸಂಘ ಅತ್ಯಗತ್ಯ ಎನ್ನುವುದು ನೆಹರೂ ಅವರ ದೃಷ್ಟಿಯಾಗಿತ್ತು. ಇವರ ಈ ದೂರದೃಷ್ಟಿಯ ಕಾರಣಕ್ಕೆ ದೇಶದಲ್ಲಿ ಸಹಕಾರ ಚಳವಳಿ ಗಟ್ಟಿಯಾಯಿತು.ನೆಹರೂ ಅವರ ಈ ದೂರದೃಷ್ಟಿ ಕಾರಣಕ್ಕೆ ಅವರ ಜನ್ಮ ದಿನದಂದೇ ಪ್ರತೀ ವರ್ಷ ಸಹಕಾರ ಸಪ್ತಾಹ ಉದ್ಘಾಟನೆಯಾಗುತ್ತದೆ ಎಂದರು. ಇಂದು ರಾಜ್ಯದಲ್ಲಿ ಕೃಷಿ, ಹೈನುಗಾರಿಕೆ, ಕೈಗಾರಿಕೆ, ಬ್ಯಾಂಕಿಂಗ್ ಸೇರಿ ಹಲವಾರು ಕ್ಷೇತ್ರಗಳಲ್ಲಿ ಸಹಕಾರಿ ಚಳವಳಿ, ಸಹಕಾರಿ ಸಂಘಗಳು ಬೆಳೆಯುತ್ತಲೇ ಇವೆ. ಇದು ಆರೋಗ್ಯಕಾರಿ ಬೆಳವಣಿಗೆ ಎಂದರು. ನಾನು ಪಶು ಸಂಗೋಪನಾ ಸಚಿವನಾಗಿದ್ದಾಗ ಹಾಲು ಉತ್ಪಾದಕರ ಸಹಕಾರ ಸಂಘಗಳ ಸ್ವಾಯತ್ತತೆ…
ಬೆಂಗಳೂರು: ಅಕ್ಟೋಬರ್ ಮತ್ತು ನವೆಂಬರ್ ತಿಂಗಳಲ್ಲಿ ಅಧಿಸೂಚನೆ ಹೊರಡಿಸಲಾಗಿದ್ದ ವಿವಿಧ ಇಲಾಖೆ/ನಿಗಮಗಳಲ್ಲಿನ 973 ಖಾಲಿ ಹುದ್ದೆಗಳ ನೇಮಕಾತಿ ಸಂಬಂಧ ಲಿಖಿತ ಪರೀಕ್ಷೆಗಳನ್ನು ನಡೆಸಲು ಕರ್ನಾಟಕ ಪರೀಕ್ಷಾ ಪ್ರಾಧಿಕಾರ ವೇಳಾಪಟ್ಟಿಯನ್ನು ಪ್ರಕಟಿಸಿದೆ. ಹೈದರಾಬಾದ್ ಕರ್ನಾಟಕ (ಹೆಚ್ ಕೆ) ಕೋಟಾ ಕ್ಲೇಮ್ ಮಾಡಿರುವ ಅಭ್ಯರ್ಥಿಗಳಿಗೆ ಡಿ.20, 21, ಜನವರಿ 24 ಮತ್ತು ಫೆಬ್ರುವರಿ 22ರಂದು ಪರೀಕ್ಷೆಗಳು ನಡೆಯಲಿವೆ. ಇದರಲ್ಲಿ 391 ಹುದ್ದೆಗಳ ನೇಮಕಾತಿಗೆ ಪರೀಕ್ಷೆ ನಡೆಯಲಿದೆ ಎಂದು ಪ್ರಾಧಿಕಾರದ ಕಾರ್ಯನಿರ್ವಾಹಕ ನಿರ್ದೇಶಕ ಹೆಚ್.ಪ್ರಸನ್ನ ಪತ್ರಿಕಾ ಹೇಳಿಕೆಯಲ್ಲಿ ತಿಳಿಸಿದ್ದಾರೆ. ಹೈದರಾಬಾದ್ ಕರ್ನಾಟಕ ಕೋಟಾ ಕ್ಲೇಮ್ ಮಾಡದವರಿಗೆ (ನಾನ್ ಹೆಚ್ ಕೆ) ಜನವರಿ 10, 11, 12 ಮತ್ತು 25ರಂದು ವಿವಿಧ ಪರೀಕ್ಷೆಗಳು ನಡೆಯಲಿವೆ. ಇದರಲ್ಲಿ 582 ಹುದ್ದೆಗಳಿಗೆ ಪರೀಕ್ಷೆ ನಡೆಯಲಿದೆ ಎಂದು ಅವರು ತಿಳಿಸಿದ್ದಾರೆ. ಹೆಚ್ ಕೆ ಹಾಗೂ ನಾನ್- ಹೆಚ್ ಕೆ – ಎರಡೂ ಪರೀಕ್ಷೆಗಳಲ್ಲಿ ಋಣಾತ್ಮಕ ಮೌಲ್ಯಮಾಪನ ಇರುತ್ತದೆ. ಪ್ರತಿ ತಪ್ಪು ಉತ್ತರಕ್ಕೆ 1/4 ಅಂಕ ಕಡಿತ ಮಾಡಲಾಗುತ್ತದೆ ಎಂದು ಅವರು ವಿವರಿಸಿದ್ದಾರೆ.…
ಚಾಮರಾಜನಗರ : ಸಹಕಾರ ಸಂಘದ ನೇಮಕಾತಿಗಳಲ್ಲಿ ಸಹಕಾರ ಡಿಪ್ಲೊಮೋ, ಪದವಿ ಪಡೆದವರಿಗೆ ಆದ್ಯತೆ ನೀಡಲಾಗುವುದು. ಪಠ್ಯಗಳಲ್ಲಿ ಸಹಕಾರಿ ತತ್ವದ ಮಹತ್ವವನ್ನು ಅಳವಡಿಸಲಾಗುವುದು. ನಮ್ಮ ಸರ್ಕಾರ ಸಹಕಾರ ರಂಗದ ಬೆಳೆವಣಿಗೆಗೆ ಎಲ್ಲಾ ರೀತಿಯ ನೆರವು ನೀಡಲಿದೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ. ಚಾಮರಾಜನಗರದಲ್ಲಿ ನಡೆದ 72ನೇ ಅಖಿಲ ಭಾರತ ಸಹಕಾರ ಸಪ್ತಾಹದ ಸಮಾರೋಪ ಸಮಾರಂಭದಲ್ಲಿ ಮಾತನಾಡಿದ ಸಿಎಂ ಸಿದ್ದರಾಮಯ್ಯ, ಗ್ರಾಮೀಣ ಭಾರತದ ಆರ್ಥಿಕ ಅಭಿವೃದ್ಧಿಗೆ ಪ್ರತೀ ಗ್ರಾಮದಲ್ಲಿ ಒಂದು ಶಾಲೆ, ಒಂದು ಗ್ರಾಮ ಪಂಚಾಯತಿ, ಒಂದು ಸಹಕಾರ ಸಂಘ ಅತ್ಯಗತ್ಯ ಎನ್ನುವುದು ನೆಹರೂ ಅವರ ದೃಷ್ಟಿಯಾಗಿತ್ತು. ಇವರ ಈ ದೂರದೃಷ್ಟಿಯ ಕಾರಣಕ್ಕೆ ದೇಶದಲ್ಲಿ ಸಹಕಾರ ಚಳವಳಿ ಗಟ್ಟಿಯಾಯಿತು.ನೆಹರೂ ಅವರ ಈ ದೂರದೃಷ್ಟಿ ಕಾರಣಕ್ಕೆ ಅವರ ಜನ್ಮ ದಿನದಂದೇ ಪ್ರತೀ ವರ್ಷ ಸಹಕಾರ ಸಪ್ತಾಹ ಉದ್ಘಾಟನೆಯಾಗುತ್ತದೆ ಎಂದರು. ಇಂದು ರಾಜ್ಯದಲ್ಲಿ ಕೃಷಿ, ಹೈನುಗಾರಿಕೆ, ಕೈಗಾರಿಕೆ, ಬ್ಯಾಂಕಿಂಗ್ ಸೇರಿ ಹಲವಾರು ಕ್ಷೇತ್ರಗಳಲ್ಲಿ ಸಹಕಾರಿ ಚಳವಳಿ, ಸಹಕಾರಿ ಸಂಘಗಳು ಬೆಳೆಯುತ್ತಲೇ ಇವೆ. ಇದು ಆರೋಗ್ಯಕಾರಿ ಬೆಳವಣಿಗೆ ಎಂದರು.…
ನವದೆಹಲಿ : ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವಾಲಯ (MoRTH) ದೇಶಾದ್ಯಂತ ವಾಹನ ಫಿಟ್ನೆಸ್ ಪರೀಕ್ಷಾ ಶುಲ್ಕವನ್ನು ದುಪ್ಪಟ್ಟು ಹೆಚ್ಚಿಸಿದೆ. ಕೇಂದ್ರ ಮೋಟಾರು ವಾಹನ ನಿಯಮಗಳ (ಐದನೇ ತಿದ್ದುಪಡಿ) ಅಡಿಯಲ್ಲಿನ ತಿದ್ದುಪಡಿಗಳು ತಕ್ಷಣದಿಂದ ಜಾರಿಗೆ ಬರಲಿವೆ, ವಾಹನದ ವಯಸ್ಸು ಮತ್ತು ವರ್ಗವನ್ನು ಅವಲಂಬಿಸಿ ಶುಲ್ಕ ರಚನೆಯಲ್ಲಿ ಗಮನಾರ್ಹ ಬದಲಾವಣೆಗಳಿವೆ. ಎಲ್ಲಾ ಪರಿಷ್ಕರಣೆಗಳಲ್ಲಿ ಅತ್ಯಂತ ಗಮನಾರ್ಹ ಬದಲಾವಣೆಯೆಂದರೆ ಹೆಚ್ಚಿನ ಫಿಟ್ನೆಸ್ ಶುಲ್ಕಗಳಿಗೆ ವಯಸ್ಸಿನ ಮಿತಿಯಲ್ಲಿನ ಕಡಿತ. ತಿದ್ದುಪಡಿಗಳ ಮೊದಲು, 15 ವರ್ಷಕ್ಕಿಂತ ಹಳೆಯ ವಾಹನಗಳಿಗೆ ಸ್ಲ್ಯಾಬ್ಗಳು ಅನ್ವಯವಾಗಿದ್ದವು. ಆದಾಗ್ಯೂ, ಕೇಂದ್ರ ಸರ್ಕಾರವು ಈಗ 10 ವರ್ಷಗಳನ್ನು ಪೂರ್ಣಗೊಳಿಸಿದ ವಾಹನಗಳಿಗೆ ಹೆಚ್ಚಿನ ಶುಲ್ಕಗಳನ್ನು ಪರಿಚಯಿಸಿದೆ. ಇದರೊಂದಿಗೆ, ಸರ್ಕಾರವು ವಯಸ್ಸಿನ ವರ್ಗಗಳನ್ನು ಪರಿಚಯಿಸಿದೆ, ಮೊದಲನೆಯದು 10-15 ವರ್ಷಗಳು, ಎರಡನೆಯದು 15-20 ವರ್ಷಗಳು ಮತ್ತು ಮೂರನೇ ವರ್ಗವು 20 ವರ್ಷಕ್ಕಿಂತ ಹಳೆಯ ವಾಹನಗಳು. ವರ್ಗವನ್ನು ಅವಲಂಬಿಸಿ ಶುಲ್ಕಗಳು ಕ್ರಮೇಣ ಹೆಚ್ಚಾಗುತ್ತವೆ, ಇದು 15 ವರ್ಷಕ್ಕಿಂತ ಹಳೆಯ ವಾಹನಗಳಿಗೆ ಅನ್ವಯವಾಗುವ ಹಿಂದಿನ ಸ್ಥಿರ ದರಕ್ಕೆ ವ್ಯತಿರಿಕ್ತವಾಗಿದೆ. ವಯಸ್ಸಿನ ಆಧಾರದ…
ಬೆಂಗಳೂರು : ರಾಜ್ಯದ ಆಸ್ತಿ ಮಾಲೀಕರಿಗೆ ಸರ್ಕಾರವು ಸಿಹಿಸುದ್ದಿ ನೀಡಿದ್ದು, ಎ ಮತ್ತು ಬಿ ಖಾತಾಗೆ ಸಂಬಂಧಿಸಿದಂತೆ ಸರ್ಕಾರು ನಿಮ್ಮ ಪ್ರಶ್ನೆಗಳಿಗೆ ಉತ್ತರ ನೀಡಿದೆ. 1. ನಗರ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿನ ಯಾವೆಲ್ಲಾ ಆಸ್ತಿಗಳನ್ನು ಆಸ್ತಿ ತೆರಿಗೆ ವ್ಯಾಪ್ತಿಗೆ ಒಳಪಡಿಸಬೇಕು? ಕರ್ನಾಟಕ ಪೌರಸಭೆಗಳ ಅಧಿನಿಯಮ 1964 ಪ್ರಕರಣ 94 ಮತ್ತು ಕರ್ನಾಟಕ ಪೌರನಿಗಮಗಳ ಅಧಿನಿಯಮ 1976 ಪ್ರಕರಣ ವಿನಾಯಿತಿಗೊಳಪಟ್ಟ ಆಸ್ತಿಗಳನ್ನು ಹೊರತುಪಡಿಸಿ ಆಸ್ತಿಗಳನ್ನು ಆಸ್ತಿ ತೆರಿಗೆ ವ್ಯಾಪ್ತಿಗೆ ಒಳಪಡಿಸಬೇಕು. 110ರಲ್ಲಿ ಉಳಿದಂತಹ 2. “ಎ” ರಿಜಿಸ್ಟರ್ ನಲ್ಲಿ ನಮೂದಿಸಬೇಕಾದ ಆಸ್ತಿಗಳು ಯಾವುವು? ಕೆಳಕಂಡ ಆಸ್ತಿಗಳನ್ನು ಅಧಿಕೃತ ಪರಿಗಣಿಸಿದ್ದು, ಸದರಿ ಆಸ್ತಿಗಳನ್ನು “ಎ” ರಿಜಿಸ್ಟರ್ ನಲ್ಲಿ ನಮೂದಿಸಬೇಕಾಗಿದೆ; a) ಗ್ರಾಮಠಾಣಾ b) ಸರ್ಕಾರ ಅಥವಾ ಸರ್ಕಾರದ ನಿಗಮ ಮಂಡಳಿಗಳಿಂದ ನೀಡಲಾದ ಹಕ್ಕು ಪತ್ರಗಳು, c) ಕಂದಾಯ ಇಲಾಖೆಯಿಂದ 94 cc ಅಡಿ ನೀಡಲಾದ ಹಕ್ಕು ಪತ್ರ. d) ಸಕ್ಷಮ ಪ್ರಾಧಿಕಾರದಿಂದ ಅನುಮೋದನೆಯಾದ ಬಡಾವಣೆಯಲ್ಲಿನ ಸ್ವತ್ತುಗಳು. 3. “ಬಿ” ರಿಜಿಸ್ಟರ್ ನಲ್ಲಿ ನಮೂದಿಬೇಕಾದ ಆಸ್ತಿಗಳು…
ನವದೆಹಲಿ : ಸುಪ್ರೀಂ ಕೋರ್ಟ್ ಬುಧವಾರ ಒಂದು ಮಹತ್ವದ ಅಭಿಪ್ರಾಯವನ್ನು ನೀಡಿತು. ವಿವಾಹಿತ ಹಿಂದೂ ಮಹಿಳೆಯರು ತಮ್ಮ ಮರಣದ ನಂತರ ತಮ್ಮ ಆಸ್ತಿಯನ್ನು ತಮ್ಮ ಕುಟುಂಬ ಸದಸ್ಯರು ಅಥವಾ ಸಂಬಂಧಿಕರಿಗೆ ವರ್ಗಾಯಿಸಬೇಕೆಂದು ಬಯಸಿದರೆ, ಅವರು ವಿಲ್ ಬರೆಯುವಂತೆ ಸುಪ್ರೀಂ ಕೋರ್ಟ್ ಸಲಹೆ ನೀಡಿದೆ. ಪ್ರಸ್ತುತ ಹಿಂದೂ ಉತ್ತರಾಧಿಕಾರ ಕಾನೂನಿನಡಿಯಲ್ಲಿ, ಮಕ್ಕಳಿಲ್ಲದ ವಿಧವೆಯ ಆಸ್ತಿಯು ಆಕೆಯ ಮರಣದ ನಂತರ ಆಕೆಯ ಗಂಡನ ಕುಟುಂಬಕ್ಕೆ ಹೋಗುತ್ತದೆ. ಉತ್ತರಾಧಿಕಾರ ಕಾನೂನಿನ ಕೆಲವು ನಿಬಂಧನೆಗಳನ್ನು ಪ್ರಶ್ನಿಸಿ ಮಹಿಳಾ ವಕೀಲರು ಸಲ್ಲಿಸಿದ ಅರ್ಜಿಯನ್ನು ಆಲಿಸುವಾಗ ನ್ಯಾಯಮೂರ್ತಿಗಳಾದ ಬಿ.ವಿ. ನಾಗರತ್ನ ಮತ್ತು ಆರ್. ಮಹಾದೇವನ್ ಅವರ ಪೀಠವು ಈ ಅಭಿಪ್ರಾಯವನ್ನು ವ್ಯಕ್ತಪಡಿಸಿತು. ನ್ಯಾಯಾಲಯವು, “ಅರ್ಜಿದಾರರು ಯಾವುದೇ ಆಸ್ತಿಯ ಮೇಲೆ ವೈಯಕ್ತಿಕ ಹಕ್ಕು ಹೊಂದಿಲ್ಲ. ಹಿಂದೂ ಉತ್ತರಾಧಿಕಾರ ಕಾಯ್ದೆ (ಎಚ್ಎಸ್ಎ) ಯ ಸೆಕ್ಷನ್ 15(1)(ಬಿ) ನ ಸಾಂವಿಧಾನಿಕ ಸಿಂಧುತ್ವವನ್ನು ಪರಿಶೀಲಿಸಲು ಅವರು ಸಾರ್ವಜನಿಕ ಹಿತಾಸಕ್ತಿಗಾಗಿ ಈ ಅರ್ಜಿಯನ್ನು ಸಲ್ಲಿಸಿದ್ದಾರೆ. ಅರ್ಜಿದಾರರ ಸಂದರ್ಭದಲ್ಲಿ ಈ ವಿಷಯವನ್ನು ಪರಿಗಣಿಸಲು ನಾವು ಬಯಸುವುದಿಲ್ಲ. ಈ ನಿಬಂಧನೆಯಿಂದ…
ಬೆಂಗಳೂರು : ಬೆಂಗಳೂರು ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿಯ ಉಳಿಕೆ ಮೂಲ ವೃಂದದಲ್ಲಿ ಖಾಲಿ ಇರುವ ವಿವಿಧ ವೃಂದದ ಹುದ್ದೆಗಳಿಗೆ ನೇರ ನೇಮಕಾತಿ ಮಾಡುವ ಸಂಬಂಧ ಕರ್ನಾಟಕ ಪರೀಕ್ಷಾ ಪ್ರಾಧಿಕಾರದಿಂದ ಆನ್ಲೈನ್ ಮೂಲಕ ಮಾತ್ರ ಅರ್ಜಿಗಳನ್ನು ಆಹ್ವಾನಿಸಿದೆ. ಅರ್ಹ ಅಭ್ಯರ್ಥಿಗಳು ಸದರಿ ಹುದ್ದೆಗಳ ನೇಮಕಾತಿಗೆ ಅರ್ಹತೆ ಪಡೆಯಲು ಕರ್ನಾಟಕ ಪರೀಕ್ಷಾ ಪ್ರಾಧಿಕಾರವು ನಡೆಸುವ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಹಾಜರಾಗಬೇಕು. ಹಿಂದಿನ ನೇಮಕಾತಿಯಲ್ಲಿ ಬಾಕಿ ಉಳಿದಿರುವ ಹಿಂಬಾಕಿ ಹುದ್ದೆಗಳು. (ಗಮನಿಸಿ: ಹುದ್ದೆವಾರು ಮತ್ತು ಪ್ರವರ್ಗವಾರು ವಿವರಗಳನ್ನು ಬೆಂಗಳೂರು ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿ ನೀಡಿದಂತೆ ಪ್ರತ್ಯೇಕವಾಗಿ ಪ್ರಕಟಿಸಲಾಗಿದೆ.) ಹುದ್ದೆ ಸಹಾಯಕ ಅಭಿಯಂತರರು(ಸಿವಿಲ್) (ಗ್ರೂಪ್-ಬಿ) ಸಹಾಯಕ ಅಭಿಯಂತರರು(ಎಲೆಕ್ಟಿಕಲ್) (ಗ್ರೂಪ್-ಬಿ) ವಿದ್ಯಾರ್ಹತೆ ಕೇಂದ್ರ ಅಥವಾ ರಾಜ್ಯ ಸರ್ಕಾರದ ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಸಿವಿಲ್ ಎಂಜಿನಿಯರಿಂಗ್ ಅಥವಾ ತಂತ್ರಜ್ಞಾನದಲ್ಲಿ ಪದವಿ ಅಥವಾ ತತ್ಸಮಾನ ಅರ್ಹತೆಯನ್ನು ಹೊಂದಿರಬೇಕು ಮತ್ತು ಕಂಪ್ಯೂಟರ್ ಬೇಸಿಕ್ಸ್ನಲ್ಲಿ ಕನಿಷ್ಠ ಆರು ತಿಂಗಳ ಅವಧಿಯ ಕೋರ್ಸ್ನಲ್ಲಿ ಉತ್ತೀರ್ಣರಾಗಿರಬೇಕು. ಕೇಂದ್ರ ಅಥವಾ ರಾಜ್ಯ ಸರ್ಕಾರದ ಮಾನ್ಯತೆ…














