Subscribe to Updates
Get the latest creative news from FooBar about art, design and business.
Author: kannadanewsnow57
ಉಡುಪಿ : ಉಡುಪಿ ಜಿಲ್ಲೆಯಲ್ಲಿ ಇದೇ ಮೊದಲ ಬಾರಿಗೆ ಭಾರೀ ಸುಂಟರಗಾಳಿ ಬೀಸಿದ್ದು, ಸುಂಟರಗಾಳಿಗೆ ಜನರು ಕಂಗಾಲಾಗಿರುವ ಘಟನೆ ನಡೆದಿದೆ. ಉಡುಪಿ ಜಿಲ್ಲೆಯ ಕುಂದಾಪುರ ತಾಲೂಕಿನ ಅಮವಾಸ್ಯೆಬೈಲಿ ಗ್ರಾಮಪಂಚಾಯತಿಯ ರಟ್ಟಾಡಿ ಗ್ರಾಮದಲ್ಲಿ ಭೀಕರ ಸುಂಟರಗಾಳಿ ಬೀಸಿದ ಪರಿಣಾಮ ಬೃಹತ್ ಮರಗಳು, ವಿದ್ಯುತ್ ಕಂಬಗಳು ನೆಲಕ್ಕುರಳಿದ್ದು, ಮನೆಗಳಿಗೂ ಹಾನಿಯಾಗಿದೆ. ಗ್ರಾಮದಲ್ಲಿ ಇದೇ ಮೊದಲ ಬಾರಿಗೆ ಇಂತಹ ಅನುಭವಕ್ಕೆ ಗ್ರಾಮಸ್ಥರು ಕಂಗಾಲಾಗಿದ್ದು, ಸುಂಟರಗಾಳಿ ಹೊಡೆತಕ್ಕೆ ಜನಜೀವನ ಅಸ್ತವ್ಯಸ್ಥವಾಗಿದ್ದು, ಜನರಲ್ಲಿ ಆತಂಕಕ್ಕೆ ಕಾರಣವಾಗಿದೆ.
ನವದೆಹಲಿ : ದೇಶೀಯ ಷೇರು ಮಾರುಕಟ್ಟೆ ಕೂಡ ಗುರುವಾರ ಉತ್ಸಾಹವನ್ನು ತೋರಿಸಿತು. ರಾಷ್ಟ್ರೀಯ ಷೇರುಪೇಟೆ ಸೂಚ್ಯಂಕ (ಎನ್ ಎಸ್ ಇ) ನಿಫ್ಟಿ ಶೇ 0.20ರಷ್ಟು ಏರಿಕೆ ಕಂಡು 24,334.15 ಅಂಶಗಳಿಗೆ ತಲುಪಿದೆ. ಬಿಎಸ್ ಇ ಸೆನ್ಸೆಕ್ಸ್ ಶೇ 0.21ರಷ್ಟು ಏರಿಕೆ ಕಂಡು 80,151.30ಕ್ಕೆ ತಲುಪಿದೆ. ಟಾಟಾ ಮೋಟಾರ್ಸ್, ಐಸಿಐಸಿಐ ಬ್ಯಾಂಕ್, ಇನ್ಫೋಸಿಸ್, ಹಿಂಡಾಲ್ಕೊ ಮತ್ತು ಎಚ್ಸಿಎಲ್ ಟೆಕ್ ನಿಫ್ಟಿ 50 ರಲ್ಲಿ ಪ್ರಮುಖ ಲಾಭ ಗಳಿಸಿದವು. ಎಚ್ಡಿಎಫ್ಸಿ ಬ್ಯಾಂಕ್, ಸಿಪ್ಲಾ, ಡಾ.ರೆಡ್ಡೀಸ್ ಲ್ಯಾಬೊರೇಟರೀಸ್, ಅದಾನಿ ಎಂಟರ್ಪ್ರೈಸಸ್ ಮತ್ತು ಇಂಡಸ್ಇಂಡ್ ಬ್ಯಾಂಕ್ ನಿಫ್ಟಿ 50 ರಲ್ಲಿ ಅತಿ ಹೆಚ್ಚು ನಷ್ಟ ಅನುಭವಿಸಿದ ಷೇರುಗಳಾಗಿವೆ.
ಬೆಂಗಳೂರು : ಪ್ರಸ್ತಕ ಸಾಲಿನ ಮುಂಗಾರು ಹಂಗಾಮಿನ ಬೆಳೆ ಸಮೀಕ್ಷೆ ಆರಂಭವಾಗಿದ್ದು, ಕಳೆದ ಬಾರಿಯಂತೆ ಈ ಬಾರಿಯೂ ಬೆಳೆ ಸಮೀಕ್ಷೆ ಕಾರ್ಯದಲ್ಲಿ ರೈತರು ಸ್ವತ: ತಮ್ಮ ಜಮೀನಿನಲ್ಲಿ ತಾವು ಬೆಳೆದ ಬೆಳೆಯ ವಿವರ ದಾಖಲಿಸಲು “ಮುಂಗಾರು ರೈತರ ಬೆಳೆ ಸಮೀಕ್ಷೆ 2024” ಆಪ್ ಬಳಸಿಕೊಳ್ಳಬಹುದು ಎಂದು ಸಹಾಯಕ ಕೃಷಿ ನಿರ್ದೇಶಕ ದಯಾನಂದ ಅವರು ತಿಳಿಸಿದ್ದಾರೆ. ಜಿಲ್ಲೆಯ ಬಳ್ಳಾರಿ ಮತ್ತು ಕುರುಗೋಡು ತಾಲ್ಲೂಕಿನ ರೈತರು ತಮ್ಮ ಜಮೀನಿನಲ್ಲಿ ಬೆಳೆದ ಬೆಳೆ ವಿವರ ದಾಖಲಿಸಲು “ಮುಂಗಾರು ರೈತರ ಬೆಳೆ ಸಮೀಕ್ಷೆ 2024” ಎಂಬ ಹೆಸರಿನ ಮೊಬೈಲ್ ಆಪ್ ಅನ್ನು ಗೂಗಲ್ ಪ್ಲೇ-ಸ್ಟೋರ್ನಿಂದ ಡೌನ್ಲೋಡ್ ಮಾಡಿಕೊಳ್ಳಬಹುದಾಗಿದೆ. ಮೊಬೈಲ್ ಆಪ್ ಬಳಕೆ ಮಾಡುವ ರೀತಿಯನ್ನು ರೈತರಿಗೆ ತಿಳಿಸಲು ಪ್ರತಿ ಗ್ರಾಮದಲ್ಲಿ ನುರಿತ ಖಾಸಗಿ ನಿವಾಸಿಗಳನ್ನು ನೇಮಿಸಲಾಗಿದೆ. ರೈತರು ಬೆಳೆ ಸಮೀಕ್ಷೆಗೆ ಮೊಬೈಲ್ ಆಪ್ ಬಳಸಲು ಈ ರೀತಿ ಅನುಸರಿಸಿ: ಗೂಗಲ್ ಪ್ಲೇ-ಸ್ಟೋರ್ನಲ್ಲಿ “ಮುಂಗಾರು ರೈತರ ಬೆಳೆ ಸಮೀಕ್ಷೆ 2024” ಎಂದು ಹುಡುಕಿ ಡೌನ್ಲೋಡ್ ಮಾಡಿಕೊಂಡು ಆಧಾರ್ ವಿವರ…
ನವದೆಹಲಿ: ಲೋಕಸಭಾ ಸಂಸದೆ ಬಾನ್ಸುರಿ ಸ್ವರಾಜ್ ಅವರನ್ನು ನವದೆಹಲಿ ಮುನ್ಸಿಪಲ್ ಕೌನ್ಸಿಲ್ ಸದಸ್ಯರನ್ನಾಗಿ ನೇಮಕ ಮಾಡಿ ಕೇಂದ್ರ ಗೃಹ ಸಚಿವಾಲಯ ಅಧಿಸೂಚನೆ ಹೊರಡಿಸಿದೆ. ನವದೆಹಲಿ ಮುನ್ಸಿಪಲ್ ಕೌನ್ಸಿಲ್ ಕಾಯ್ದೆ, 1994 (1994 ರ 44) ರ ಸೆಕ್ಷನ್ 4 ರ ಉಪ-ವಿಭಾಗ (1) ರ ಅಡಿಯಲ್ಲಿ ನೀಡಲಾದ ಅಧಿಕಾರಗಳನ್ನು ಚಲಾಯಿಸಲು, ಕೇಂದ್ರ ಸರ್ಕಾರವು ಈ ಮೂಲಕ ಭಾರತ ಸರ್ಕಾರದ ಗೃಹ ವ್ಯವಹಾರಗಳ ಸಚಿವಾಲಯದಲ್ಲಿ, ಅಧಿಸೂಚನೆ ಸಂಖ್ಯೆ ಎಸ್ಒ.3190 (ಇ), ದಿನಾಂಕ 3 ಸೆಪ್ಟೆಂಬರ್, 2019 ರಂದು ಈ ಅಧಿಸೂಚನೆಯನ್ನು ಅಧಿಕೃತ ಗೆಜೆಟ್ನಲ್ಲಿ ಪ್ರಕಟಿಸಿದ ದಿನಾಂಕದಿಂದ ಜಾರಿಗೆ ಬರುವಂತೆ ಲೋಕಸಭಾ ಸಂಸದೆ ಬಾನ್ಸುರಿ ಸ್ವರಾಜ್ ಅವರನ್ನು ನವದೆಹಲಿ ಮುನ್ಸಿಪಲ್ ಕೌನ್ಸಿಲ್ ಸದಸ್ಯರನ್ನಾಗಿ ನೇಮಕ ಮಾಡಿ ಆದೇಶ ಹೊರಡಿಸಿದೆ. ಸದರಿ ಅಧಿಸೂಚನೆಯಲ್ಲಿ, ಕಲಮು (ಇ)ಯಲ್ಲಿ, ಐಟಂ ಸಂಖ್ಯೆಗಳು (i) ಮತ್ತು ಅದಕ್ಕೆ ಸಂಬಂಧಿಸಿದ ನಮೂದುಗಳಿಗೆ, ಈ ಕೆಳಗಿನ ಐಟಂ ಸಂಖ್ಯೆಗಳು ಮತ್ತು ನಮೂದನ್ನು ಬದಲಿಯಾಗಿ ಸೇರಿಸಲಾಗುವುದು, ಅವುಗಳೆಂದರೆ:-
ಬೆಂಗಳೂರು : ಸ್ಯಾಂಡಲ್ ವುಡ್ ಗೆ ಇಂದು ಮಹತ್ವದ ದಿನವಾಗಿದ್ದು, ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ನಟ ದರ್ಶನ್ ಹಾಗೂ ಯುವರಾಜ್ ಕುಮಾರ್-ಶ್ರೀದೇವಿ ದಾಂಪತ್ಯ ಕಲಹದ ಬಗ್ಗೆ ಇಂದು ಕೋರ್ಟ್ ನಲ್ಲಿ ವಿಚಾರಣೆ ನಡೆಯಲಿದ್ದು, ಇಬ್ಬರು ನಟರ ಭವಿಷ್ಯ ಇಂದು ನಿರ್ಧಾರವಾಗಲಿದೆ. ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ನಟ ದರ್ಶನ್ ಪವಿತ್ರಾ ಗೌಡ ಹಾಗೂ ಸಹಚರರ ನ್ಯಾಯಾಂಗ ಬಂಧನ ಇಂದು ಅಂತ್ಯವಾಗಲಿದ್ದು, ನ್ಯಾಯಾಲಯದಲ್ಲಿ ವಿಚಾರಣೆ ನಡೆಯಲಿದ್ದು, ಇಂದು ನಟ ದರ್ಶನ್ ಭವಿಷ್ಯ ನಿರ್ಧಾರವಾಗಲಿದೆ ಎನ್ನಲಾಗಿದೆ. ಮತ್ತೊಂದಡೆ ರಾಘವೇಂದ್ರ ರಾಜ್ ಕುಮಾರ್ ಅವರ ಕಿರಿಯ ಪುತ್ರ ಯುವ ರಾಜ್ ಕುಮಾರ್ ಅವರು ಪತ್ನಿ ಶ್ರೀದೇವಿ ಭೈರಪ್ಪ ಅವರಿಗೆ ವಿಚ್ಛೇದನ ಕೊಡಲು ಮುಂದಾಗಿದ್ದಾರೆ. ಯುವ ರಾಜ್ ಕುಮಾರ್ ವಿಚ್ಛೇದನ ಕೋರಿ ಕೌಟುಂಬಿಕ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದಾರೆ. ಯುವ ರಾಜ್ ಕುಮಾರ್ ಪತ್ನಿ ಶ್ರೀದೇವಿ ವಿರುದ್ಧ ಕ್ರೌರ್ಯ, ಅಗೌರವದಿಂದ ನೋಡಿಕೊಂಡಿದ್ದಾರೆ ಎಂದು ಗಂಭೀರ ಆರೋಪ ಮಾಡಿದ್ದು, ಈ ಬಗ್ಗೆ ಇಂದು ಕೋರ್ಟ್ ಮಹತ್ವದ ತೀರ್ಪು ಪ್ರಕಟಿಸಲಿದೆ.
ದಾವಣಗೆರೆ : ದಾವಣಗೆರೆ ರಾಮನಗರದ ಎಸ್ಒಜಿ ಕಾಲೋನಿ ಮನೆಯಲ್ಲಿ ಮಂಗಳವಾರ ಅಡುಗೆ ಅನಿಲದ ಸಿಲಿಂಡರ್ ಸ್ಫೋಟದಿಂದ ಗಾಯಗೊಂಡಿದ್ದ ಮಹಿಳೆ ಚಿಕಿತ್ಸೆ ಫಲಕಾರಿಯಾಗದೇ ಸಾವನ್ನಪ್ಪಿದ್ದಾರೆ. ಸಿಲಿಂಡರ್ ಸ್ಪೋಟದಲ್ಲಿ ಐವರು ಗಂಭೀರವಾಗಿ ಗಾಯಗೊಂಡಿದ್ದು ಎಸ್.ಎಸ್.ಹೈಟೆಕ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಆದರೆ ಚಿಕಿತ್ಸೆ ಫಲಕಾರಿಯಾಗದೇ ಪಾವರ್ತಮ್ಮ ಎಂಬುವರು ಸಾವನ್ನಪ್ಪಿದ್ದಾರೆ. ಉಳಿದ ನಾಲ್ವರಿಗೆ ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಒಟ್ಟು ಐದು ಜನರಲ್ಲಿ ಲಲಿತಮ್ಮ ಇವರಿಗೆ ಹೆಚ್ಚಿನ ಗಾಯವಾಗಿದೆ, ಸೌಭಾಗ್ಯ ಇವರಿಗೆ ಶೇ 50 ಕ್ಕಿಂತ ಹೆಚ್ಚು ಗಾಯವಾಗಿದ್ದು, ಉಳಿದ ಇಬ್ಬರಿಗೆ ಶೇ 50 ಕ್ಕಿಂತ ಕಡಿಮೆ ಇದೆ.
ಉಡುಪಿ : ಉಡುಪಿ, ದಕ್ಷಿಣ ಕನ್ನಡ ಸೇರಿದಂತೆ ಕರಾವಳಿಯಲ್ಲಿ ಇಂದು ಭಾರೀ ಮಳೆಯಾಗುವ ಸಾಧ್ಯತೆ ಹಿನ್ನೆಲೆಯಲ್ಲಿ ಇಂದು ಬೆಳ್ತಂಗಡಿ, ಬಂಟ್ವಾಳ ತಾಲೂಕಿನ ಶಾಲೆಗಳಿಗೆ ರಜೆ ಘೋಷಿಸಿ ಆದೇಶಿಸಲಾಗಿದೆ. ಭಾರಿ ಮಳೆಯಾಗುತ್ತಿರುವ ಹಿನ್ನೆಲೆ ಬೆಳ್ತಂಗಡಿ ಹಾಗೂ ಬಂಟ್ವಾಳ ಶಾಲೆಗಳಿಗೆ ಜು.4ರ ಇಂದು ತಹಶೀಲ್ದಾರ್ ರಜೆ ಘೋಷಿಸಿದ್ದಾರೆ. ಬೆಳ್ತಂಗಡಿ ತಾಲೂಕಿನ ಎಲ್ಲಾ ಸರಕಾರಿ, ಅನುದಾನಿತ, ಅನುದಾನ ರಹಿತ, ಪ್ರಾಥಮಿಕ, ಪ್ರೌಢಶಾಲೆಗಳಿಗೆ ರಜೆ ಘೋಷಿಸಲಾಗಿದೆ. ಇನ್ನು ಬಂಟ್ವಾಳ ತಾಲೂಕಿನ ಎಲ್ಲ ಶಾಲೆಗಳಿಗೆ ತಹಶೀಲ್ದಾರ್ ರಜೆ ಘೋಷಿಸಿದ್ದಾರೆ. ರಾಜ್ಯದ ಹಲವು ಕರಾವಳಿ ಜಿಲ್ಲೆಗಳಲ್ಲಿ ಇಂದು ಭಾರೀ ಮಳೆಯ ಮುನ್ಸೂಚನೆ ನೀಡಲಾಗಿದೆ. ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಗಳಲ್ಲಿ ಇಂದು ಭಾರೀ ಮಳೆಯಾಗುವ ಸಾಧ್ಯತೆ ಇದ್ದು, ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.
ಬೆಂಗಳೂರು : ಕೆಲವು ದಿನಗಳ ಹಿಂದಿನ ಸುಳ್ಳಿನ ಸರಮಾಲೆಗೆ ಬಲಿಯಾದದ್ದು ತೀರ ದುರದೃಷ್ಟಕರ ಎಂದು ನಟ ಯುವರಾಜ್ ಕುಮಾರ್ ಪತ್ನಿ ಶ್ರೀದೇವಿ ಬೈರಪ್ಪ ಸಾಮಾಜಿಕ ಮಾಧ್ಯಮದಲ್ಲಿ ಪೋಸ್ಟ್ ಹಾಕಿದ್ದಾರೆ. ಈ ಕುರಿತು ಸಾಮಾಜಿಕ ಮಾಧ್ಯಮದಲ್ಲಿ ಪೋಸ್ಟ್ ಮಾಡಿರುವ ಅವರು, ಕಳೆದ 15 ದಿನದಿಂದ ನಾನು ಕರ್ನಾಟಕದಲ್ಲಿ ನನ್ನ ಕುಟುಂಬದ ಜೊತೆ ಇದ್ದಾಗ, ನನ್ನ ಖಾಸಗಿ ಬದುಕನ್ನು ಗೌರವಿಸಿ, ನನ್ನ ಘನತೆಯನ್ನು ಕಾಪಾಡುವಲ್ಲಿ, ಅತ್ಯಂತ ಸೂಕ್ಷ್ಮ ಮತ್ತು ಜವಾಬ್ದಾರಿಯುತ ನಡೆ ತೋರಿದ ಮಾಧ್ಯಮದ ಪ್ರತಿಯೊಬ್ಬರಿಗೂ ನಾನು ಪ್ರಾಮಾಣಿಕವಾಗಿ ನನ್ನ ಹೃದಾಯಾಂತರಾಳದಿಂದ ಧನ್ಯವಾದ ಹೇಳಲು ಬಯಸುತ್ತೇನೆ. ಕಳೆದ ದಶಕಗಳಿಂದ ನನ್ನ ಜೊತೆಯಾಗಿದ್ದ ನನ್ನ ಸ್ನೇಹಿತರ ಬಳಗ, ಕೆಲವು ದಿನಗಳ ಹಿಂದಿನ ಸುಳ್ಳಿನ ಸರಮಾಲೆಗೆ ಬಲಿಯಾದದ್ದು ತೀರ ದುರದೃಷ್ಟಕರ. ಆದರೂ ಸಹ, ನಿಮ್ಮ ತಾಳ್ಮೆಗೆ, ಸತ್ಯದ ಪರ ಧೃತಿಗೆಡದೆ ನಿಲ್ಲುವ ನಿಮ್ಮ ಹಾಗೂ ನಿಮ್ಮ ಕುಟುಂಬದ ಧೈರ್ಯಕ್ಕೆ, ಸಹಕಾರಕ್ಕೆ ನಾನು ಆಭಾರಿಯಾಗಿದ್ದೇನೆ. ಈ ವಿಚಾರದಲ್ಲಿ ನಿಮಗಾದ ನೋವಿಗೆ ನಾನು ವಿನಮ್ರತೆಯಿಂದ ಕ್ಷಮೆಯಾಚಿಸುತ್ತೇನೆ. ಎಲ್ಲರಿಗೂ ನಿಮ್ಮಂಥ ಸಹೃದಯಿ…
ವೆಸ್ಟ್ ಇಂಡೀಸ್ನಲ್ಲಿ ನಡೆದ ಐಸಿಸಿ ಪುರುಷರ ಟಿ 20 ವಿಶ್ವಕಪ್ 2024 ಪ್ರಶಸ್ತಿಯನ್ನು ಗೆದ್ದ ನಂತರ ರೋಹಿತ್ ಶರ್ಮಾ ನೇತೃತ್ವದ ಭಾರತೀಯ ಪುರುಷರ ಕ್ರಿಕೆಟ್ ತಂಡ ಗುರುವಾರ (ಜುಲೈ 4) ಬೆಳಿಗ್ಗೆ ದೆಹಲಿಗೆ ಬಂದಿಳಿದಿದೆ. ಭಾರತೀಯ ತಂಡದ ಸದಸ್ಯರು ಮುಂಜಾನೆ ದೆಹಲಿಯ ಐಜಿಐ ವಿಮಾನ ನಿಲ್ದಾಣಕ್ಕೆ ಆಗಮಿಸಿದರು. ಎರಡನೇ ಟಿ 20 ವಿಶ್ವಕಪ್ ಟ್ರೋಫಿಗಾಗಿ 17 ವರ್ಷಗಳ ಕಾಯುವಿಕೆಯನ್ನು ಕೊನೆಗೊಳಿಸಿದ ನಂತರ ಭಾರತೀಯ ಆಟಗಾರರನ್ನು ಸ್ವಾಗತಿಸಲು ಅಭಿಮಾನಿಗಳು ಭಾರಿ ಸಂಖ್ಯೆಯಲ್ಲಿ ಜಮಾಯಿಸಿದ್ದರು. ದೆಹಲಿಗೆ ಬಂದಿಳಿದ ನಂತರ ಭಾರತ ತಂಡದ ನಾಯಕ ರೋಹಿತ್ ಶರ್ಮಾ ವಿಮಾನ ನಿಲ್ದಾಣದಿಂದ ಹೊರಬಂದು ಅಭಿಮಾನಿಗಳ ಹರ್ಷೋದ್ಗಾರದ ನಡುವೆ ಟಿ 20 ವಿಶ್ವಕಪ್ ಟ್ರೋಫಿಯನ್ನು ಪ್ರದರ್ಶಿಸಿದರು. ಭಾರತಕ್ಕೆ ಬಂದಿಳಿದ ರೋಹಿತ್ ಶರ್ಮಾ 2024 ರ ಟಿ 20 ವಿಶ್ವಕಪ್ ಟ್ರೋಫಿಯನ್ನು ಪ್ರದರ್ಶಿಸುವ ವೀಡಿಯೊ ಈಗ ಅಂತರ್ಜಾಲದಲ್ಲಿ ವೈರಲ್ ಆಗುತ್ತಿದೆ. https://twitter.com/i/status/1808676087280353280 https://twitter.com/ANI/status/1808676394013966836?ref_src=twsrc%5Etfw%7Ctwcamp%5Etweetembed%7Ctwterm%5E1808676394013966836%7Ctwgr%5E1d2fddac81794020a3268b9ffdb311c4f7ad11c9%7Ctwcon%5Es1_c10&ref_url=https%3A%2F%2Fapi-news.dailyhunt.in%2F
ಮೈಸೂರು : ಅಕ್ರಮ ಜಮೀನು ಮಾರಾಟಕ್ಕೆ ರಾಜ್ಯ ಸರ್ಕಾರ ಮಹತ್ವದ ಕ್ರಮ ಕೈಗೊಂಡಿದ್ದು, ಆರ್ ಟಿಸಿಗಳನ್ನು ಆಧಾರ್ ಗೆ ಲಿಂಕ್ ಮಾಡುವಂತೆ ಕಂದಾಯ ಸಚಿವ ಕೃಷ್ಣಬೈರೇಗೌಡ ಸೂಚಿಸಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯದಾದ್ಯಂತ ಸುಮಾರು 4 ಕೋಟಿ ಆರ್ಟಿಸಿ ಮಾಲೀಕರಿದ್ದಾರೆ. ಈ ಪೈಕಿ 1.92 ಕೋಟಿ ಆರ್ಟಿಸಿದಾರರನ್ನು ಸಂಪರ್ಕಿಸಿ ಆ ಪೈಕಿ 1.20 ಕೋಟಿ ಆರ್ಟಿಸಿಗಳ್ನು ಒಟಿಪಿ (One Time Password) ಮೂಲಕ ಇಕೆವೈಸಿ ಮಾಡಲಾಗಿದೆ. ಇನ್ನೂ ಮೈಸೂರು ವಿಭಾಗದಲ್ಲಿ 1.37 ಕೋಟಿ ಆರ್ಟಿಸಿ ಮಾಲೀಕರಿದ್ದು ಈ ಪೈಕಿ 36 ಲಕ್ಷ ಆರ್ಟಿಸಿಗಳನ್ನು ಮಾತ್ರ ಆಧಾರ್ ಜೊತೆಗೆ ಜೋಡಿಸಲಾಗಿದೆ. ಅಂದರೆ ಶೇ. 35 ರಷ್ಟು ಕೆಲಸ ಮಾತ್ರ ಆಗಿದ್ದು, ಇದು ಸಾಲದು. ಇದೇ ಜುಲೈ ತಿಂಗಳ ಒಳಗಾಗಿ ಆಧಾರ್ ಸೀಡಿಂಗ್ ವಿಚಾರದಲ್ಲಿ ಶೇ. 90 ರಷ್ಟು ಪ್ರಗತಿ ಸಾಧಿಸಬೇಕು” ಎಂದು ಅಧಿಕಾರಿಗಳಿಗೆ ತಾಕೀತು ಮಾಡಲಾಗಿದೆ ಎಂದು ಸಚಿವ ಕೃಷ್ಣ ಬೈರೇಗೌಡ ಅವರು ತಿಳಿಸಿದರು. ಆರ್ಟಿಸಿಗಳನ್ನು ಆಧಾರ್ಗೆ ಲಿಂಕ್ ಮಾಡುವ ಮೂಲಕ ಯಾರದ್ದೋ…