Subscribe to Updates
Get the latest creative news from FooBar about art, design and business.
Author: kannadanewsnow57
ಬೆಂಗಳೂರು : 2025-26ನೇ ಸಾಲಿಗೆ ರಾಜ್ಯದಲ್ಲಿನ ಸರ್ಕಾರಿ ಶಾಲೆಗಳಲ್ಲಿ 1 ರಿಂದ 10ನೇ ತರಗತಿ ವ್ಯಾಸಂಗ ಮಾಡುತ್ತಿರುವ ಎಲ್ಲಾ ಮಕ್ಕಳಿಗೆ ಉಚಿತವಾಗಿ ಒದಗಿಸಲಾಗುತ್ತಿರುವ ಶೂ ಮತ್ತು ಸಾಕ್ಸ್ ಖರೀದಿ ಮಾಡುವ ಬಗ್ಗೆ ಹಣ ಬಿಡುಗಡೆ ಮಾಡಲಾಗಿದೆ. 2025-26ನೇ ಶೈಕ್ಷಣಿಕ ಸಾಲಿಗೆ ರಾಜ್ಯದಲ್ಲಿನ ಶಿಕ್ಷಣ ಇಲಾಖೆಯ ವತಿಯಿಂದ ನಡೆಸಲ್ಪಡುತ್ತಿರುವ ಸರ್ಕಾರಿ ಶಾಲೆಗಳಲ್ಲಿ 1 ರಿಂದ 10ನೇ ತರಗತಿಗಳಲ್ಲಿ ವ್ಯಾಸಂಗ ಮಾಡುತ್ತಿರುವ ಅಂದಾಜು 40.68 ಲಕ್ಷ ವಿದ್ಯಾರ್ಥಿ/ ವಿದ್ಯಾರ್ಥಿನಿಯರಿಗೆ ಒಟ್ಟು ರೂ.11188.00 ಲಕ್ಷಗಳ ವೆಚ್ಚದಲ್ಲಿ ಉಚಿತವಾಗಿ ಒಂದು ಜೊತೆ ಶೂ ಮತ್ತು ಎರಡು ಜೊತೆ ಸಾಕ್ಸ್ ಗಳನ್ನು ಅಥವಾ ಸ್ಯಾಂಡಲ್ಗಳನ್ನು ವಿತರಿಸಬೇಕಾಗಿದೆ. ವಿದ್ಯಾರ್ಥಿಗಳ ಸ್ಯಾಂಡಲ್ಗಳ ಅಳತೆ ದಾಖಲಿಸಿ, ಉತ್ತಮ ಗುಣಮಟ್ಟದ ಸ್ಯಾಂಡಲ್ಗಳನ್ನು ಸ್ಥಳೀಯವಾಗಿ ಖರೀGood news for all government school children in the state: Government releases funds for distribution of free pairs of shoes and socksದಿಸಿ, ವಿತರಣೆ ಮಾಡುವ ಜವಾಬ್ದಾರಿಯನ್ನು ಸಂಬಂಧಿಸಿದ ಶಾಲೆಯ ಶಾಲಾಭಿವೃದ್ಧಿ ಹಾಗೂ…
ಪಡಿತರ ಚೀಟಿದಾರರು ನ್ಯಾಯಬೆಲೆ ಅಂಗಡಿ ಹಂತದಲ್ಲಿ ಆಧಾರ್ ದೃಢೀಕರಣ (ಇ-ಕೆವೈಸಿ) ಯನ್ನು ಉಚಿತವಾಗಿ ಮಾಡಲು ಜೂನ್ 30ರವರೆಗೆ ಅವಕಾಶ ಕಲ್ಪಿಸಿಕೊಡಲಾಗಿದೆ. ಪಡಿತರ ಚೀಟಿದಾರರು ಆಧಾರ್ ದೃಢೀಕರಣ (ಇ-ಕೆವೈಸಿ) ಯನ್ನು ತಮ್ಮ ಹತ್ತಿರದ ನ್ಯಾಯಬೆಲೆ ಅಂಗಡಿಗಳಿಗೆ ಭೇಟಿ ನೀಡಿ, ಬೆರಳಚ್ಚು ಮೂಲಕ ತಮ್ಮ ಗುರುತು, ನೋಂದಣಿ ಅಥವಾ ಮರು ನೋಂದಣಿ ಮಾಡಿಸದೆ ಇರುವ ಎಲ್ಲಾ ಸದಸ್ಯರು ಜೂನ್ 30ರೊಳಗೆ ಬಯೋಮೆಟ್ರಿಕ್ ಸಂಗ್ರಹಣೆ (ಇ-ಕೆವೈಸಿ) ಮಾಡಿಸಿಕೊಳ್ಳಲು ಅಂತಿಮ ಅವಕಾಶವನ್ನು ನೀಡಲಾಗಿದ್ದು, ಇದಕ್ಕೆ ಯಾವುದೇ ಹಣ ನೀಡುವಂತಿಲ್ಲ. ಇ-ಕೆವೈಸಿ ಮಾಡಿಸಿಕೊಳ್ಳದೇ ಇರುವ ಪಡಿತರ ಚೀಟಿದಾರರಿಗೆ ಮುಂದಿನ ತಿಂಗಳು ಆಹಾರ ಧಾನ್ಯ ವಿತರಣೆಯನ್ನು ಸ್ಥಗಿತಗೊಳಿಸಲಾಗುವುದು ಮತ್ತು ಆಧಾರ್ ದೃಢೀಕರಣ (ಇ-ಕೆವೈಸಿ)ಯನ್ನು ಮಾಡದೇ ಇರುವ ಫಲಾನುಭವಿಗಳಿಗೆ ಜುಲೈ ಮಾಹೆಯಲ್ಲಿ ಪಡಿತರ ಹಂಚಿಕೆಯನ್ನು ಸ್ಥಗಿತಗೊಳಿಸಲು ಕ್ರಮವಹಿಸಲಾಗುವುದು ಎಂದು ಆಹಾರ ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆಯು ಪ್ರಕಟಣೆಯಲ್ಲಿ ತಿಳಿಸಿದೆ. ಇ-ಕೆವೈಸಿ ಮಾಡುವುದು ನಿಮ್ಮ ಸ್ಥಳೀಯ ಪಡಿತರ ಅಥವಾ ಪಿಡಿಎಸ್ ಡೀಲರ್ಗೆ ಭೇಟಿ ನೀಡಿ ಕುಟುಂಬದ ಮುಖ್ಯಸ್ಥರ ಆಧಾರ್ ಸಂಖ್ಯೆಯನ್ನು…
ನವದೆಹಲಿ : ಪ್ರತಿ ತಿಂಗಳ ಮೊದಲ ದಿನ ಹಲವು ನಿಯಮಗಳು ಬದಲಾಗುತ್ತವೆ. ಜುಲೈ 1 ರಿಂದ ಹಲವಾರು ನಿಯಮಗಳು ಬದಲಾಗಲಿವೆ. ತ್ವರಿತ ಟಿಕೆಟ್ ಬುಕಿಂಗ್, ಪ್ಯಾನ್ ಕಾರ್ಡ್ ಅರ್ಜಿಗಳು ಮತ್ತು ಕ್ರೆಡಿಟ್ ಕಾರ್ಡ್ ಬಿಲ್ ಪಾವತಿಗಳಿಗೆ ಸಂಬಂಧಿಸಿದ ಹೊಸ ನಿಯಮಗಳು ಜುಲೈ 1 ರಿಂದ ಜಾರಿಗೆ ಬರಲಿವೆ. ಈ ಬದಲಾವಣೆಗಳು ಸಾಮಾನ್ಯ ವ್ಯಕ್ತಿಯ ಹಣಕಾಸಿನ ಮೇಲೆ ನೇರವಾಗಿ ಪರಿಣಾಮ ಬೀರುತ್ತವೆ. ಜುಲೈ 1 ರಿಂದ ಸಾಮಾನ್ಯ ನಾಗರಿಕರಿಗೆ ಯಾವ ಬದಲಾವಣೆಗಳು ಜಾರಿಗೆ ಬರುತ್ತಿವೆ ಎಂಬುದನ್ನು ಅರ್ಥಮಾಡಿಕೊಳ್ಳೋಣ. LPG ಬೆಲೆಯಲ್ಲಿ ಬದಲಾವಣೆ ಜುಲೈ 1 2025 ರಿಂದ ಅಡುಗೆ ಅನಿಲವಾಗಿ ಬಳಸುವ LPG ಸಿಲಿಂಡರ್ಗಳ ಬೆಲೆಯಲ್ಲಿ ಬದಲಾವಣೆಯಾಗಲಿದೆ. ದೇಶದ ಪೆಟ್ರೋಲಿಯಂ ಕಂಪನಿಗಳು ಪ್ರತಿ ತಿಂಗಳ ಆರಂಭದಲ್ಲಿ ಎಲ್ಪಿಜಿ ಸಿಲಿಂಡರ್ಗಳ ಬೆಲೆಯನ್ನು ಬದಲಾಯಿಸುತ್ತವೆ. ಇತ್ತೀಚೆಗೆ 19 ಕೆಜಿ ವಾಣಿಜ್ಯ ಸಿಲಿಂಡರ್ ಬೆಲೆಯಲ್ಲಿ ಏರಿಳಿತ ಕಂಡುಬಂದಿದ್ದು, 14 ಕೆಜಿ ಸಬ್ಸಿಡಿ ಸಿಲಿಂಡರ್ ಬೆಲೆಯಲ್ಲಿ ಯಾವುದೇ ಬದಲಾವಣೆಯಾಗಿಲ್ಲ. ತ್ವರಿತ ಟಿಕೆಟ್ ಬುಕಿಂಗ್ ನಿಯಮಗಳು ಜುಲೈ 1 ರಿಂದ,…
ಬೆಂಗಳುರು : 2025-26ನೇ ಸಾಲಿನ ಆಯವ್ಯಯ ಭಾಷಣ ಕಂಡಿಕೆ ಸಂಖ್ಯೆ: 111(vii) ‘ಜ್ಞಾನಸೇತು’ ಕಾರ್ಯಕ್ರಮವನ್ನು ಖಾನ್ ಅಕಾಡೆಮಿ ಸಹಯೋಗದಲ್ಲಿ ಅನುಷ್ಠಾನಗೊಳಿಸಲು ಅನುಮೋದನೆ ನೀಡುವ ಕುರಿತು. ಖಾನ್ ಅಕಾಡೆಮಿ ಇಂಡಿಯಾ ಒಂದು ಲಾಭರಹಿತ ಸಂಸ್ಥೆಯಾಗಿದ್ದು, ಕಲಿಕೆಯಲ್ಲಿ ಆಸಕ್ತಿ ಉಳ್ಳವರಿಗೆ ವಿಶ್ವದರ್ಜೆಯ ಶಿಕ್ಷಣವನ್ನು ಒದಗಿಸುವ ಧೈಯವನ್ನು ಹೊಂದಿರುತ್ತದೆ. ಹಾಗೂ ಕಲಿಯುವವರಿಗೆಲ್ಲರಿಗೂ ಇದು ಉಚಿತವಾಗಿದೆ. ಭಾರತೀಯ ಶಿಕ್ಷಣಕ್ಕೆ ಅನುಗುಣವಾಗಿ NCERT ಪಠ್ಯಕ್ರಮ ಆಧಾರಿತ 1 ರಿಂದ 10ನೇ ತರಗತಿ ಹಾಗೂ ಪ್ರಥಮ ಮತ್ತು ದ್ವಿತೀಯ ಪಿಯುಸಿ ಸೇರಿದಂತೆ ಆಯ್ಕೆ ವಿಷಯಗಳು ಸಂಪೂರ್ಣ ಉಚಿತವಾಗಿ ಲಭ್ಯವಿದೆ. ಈ ವಿಷಯಗಳನ್ನು ಈಗಾಗಲೇ ಕರ್ನಾಟಕದಲ್ಲಿ NCERT ಪಠ್ಯಕ್ರಮದ ಮೂಲಕ ವಿದ್ಯಾರ್ಥಿಗಳಿಗೆ ತರಗತಿಗಳಲ್ಲಿ ಬೋಧನೆ ಮಾಡಲಾಗುತ್ತಿದೆ. ಖಾನ್ ಅಕಾಡೆಮಿ.ಇಂಡಿಯಾದ ಉಚಿತ ಸಂಪನ್ಮೂಲಗಳೊಂದಿಗೆ ವಿದ್ಯಾರ್ಥಿಗಳ ಕಲಿಕೆಯನ್ನು ಬೆಂಬಲಿಸಿ ಮತ್ತು ಆನ್ಲೈನ್ ಕಲಿಕೆಯನ್ನು ಸಂತಸದಾಯಕ ಮತ್ತು ಪರಿಣಾಮಕಾರಿಯಾಗಿಸಿ ತ್ವರಿತ ಪ್ರಾರಂಭಿಕ ಮಾರ್ಗದರ್ಶಿಗಳು, ವೆಬಿನಾರ್ಳು ಮತ್ತು ಕಲಿಕಾ ಯೋಜನೆಗಳಿಗೆ ಪ್ರವೇಶ ಒದಗಿಸುತ್ತದೆ. ಎಲ್ಲಾ ವಿದ್ಯಾರ್ಥಿಗಳಿಗೆ ತರಗತಿಯ ಹೊರಗಡೆಯು ಸಹ ಕಲಿಕೆಯ ಪುನರ್ಬಲನ ಹಾಗೂ ಶಿಕ್ಷಕರಿಗೆ ಖಾನ್…
ಬೆಂಗಳೂರು : ರಾಜ್ಯದ ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳಲ್ಲಿ 2025-26ನೇ ಶೈಕ್ಷಣಿಕ ಸಾಲಿಗೆ ಅತಿಥಿ ಉಪನ್ಯಾಸಕರನ್ನು ಆಯ್ಕೆ ಮಾಡಿಕೊಳ್ಳುವ ಬಗ್ಗೆ ರಾಜ್ಯ ಸರ್ಕಾರ ಮಹತ್ವದ ಆದೇಶ ಹೊರಡಿಸಿದೆ. 2025-26ನೇ ಶೈಕ್ಷಣಿಕ ಸಾಲಿನಲ್ಲಿ ಇಲಾಖಾ ವ್ಯಾಪ್ತಿಯ ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳಲ್ಲಿ (ಸರ್ಕಾರಿ ಸಂಸ್ಕೃತ ಹಾಗೂ ಚಿತ್ರಕಲಾ ಕಾಲೇಜುಗಳೂ ಒಳಗೊಂಡಂತೆ) ಖಾಯಂ ಉಪನ್ಯಾಸಕರಿಗೆ ಕಾರ್ಯಭಾರ ಹಂಚಿಕೆ ಮಾಡಿದ ನಂತರ ಉಳಿಕೆಯಾಗುವ ಬೋಧನಾ ಕಾರ್ಯಭಾರಕ್ಕನುಗುಣವಾಗಿ ಅತಿಥಿ ಉಪನ್ಯಾಸಕರನ್ನು (ಅತಿಥಿ ಗ್ರಂಥಪಾಲಕರು ಹಾಗೂ ಅತಿಥಿ ದೈಹಿಕ ಶಿಕ್ಷಣ ಅತಿಥಿ ಉಪನ್ಯಾಸಕರು ಸೇರಿದಂತೆ) ಉಲ್ಲೇಖ-(3) ರಲ್ಲಿ ಸರ್ಕಾರವು ನೀಡಿರುವ ಅನುಮತಿ ಮೇರೆಗೆ ಆನ್ಲೈನ್ ಕೌನ್ಸಿಲಿಂಗ್ ಮೂಲಕ ಆಯ್ಕೆ ಮಾಡಿಕೊಳ್ಳಲು ಉದ್ದೇಶಿಸಲಾಗಿದೆ. ಸರ್ಕಾರದ ಆದೇಶ ಸಂಖ್ಯೆ: ಇಡಿ 242 ಡಿಸಿಇ 2021, ದಿನಾಂಕ:14.01.2022 ರ ಕಂಡಿಕೆ (6) ರಲ್ಲಿ “ಯುಜಿಸಿನಿಗಧಿಪಡಿಸಿದ ವಿದ್ಯಾರ್ಹತೆ ಹೊಂದಿಲ್ಲದ ಅತಿಥಿ ಉಪನ್ಯಾಸಕರಿಗೆ ನಿಗಧಿತ ವಿದ್ಯಾರ್ಹತೆಯನ್ನು ಹೊಂದಲು 3 ವರ್ಷಗಳ ಕಾಲಾವಧಿ ನೀಡುವುದು, 3 ವರ್ಷಗಳ ನಂತರ ಯುಜಿಸಿ ನಿಗಧಿಪಡಿಸಿದ ವಿದ್ಯಾರ್ಹತೆ ಹೊಂದಿಲ್ಲದ ಅತಿಥಿ ಉಪನ್ಯಾಸಕರ…
ನವದೆಹಲಿ : ಸಂಬಳ ಪಡೆಯುವ ವ್ಯಕ್ತಿಗೆ ಪ್ರತಿ ತಿಂಗಳು ಸಂಬಳ ಸಿಗುವುದಲ್ಲದೆ, ಅವರ ಪಿಎಫ್ (ಪಿಎಫ್ ನಿಯಮಗಳು 2025) ಅನ್ನು ಅವರ ಸಂಬಳದಿಂದ ಕಡಿತಗೊಳಿಸಿದರೆ, ಅವರು ಇನ್ನೂ ಅನೇಕ ಪ್ರಯೋಜನಗಳನ್ನು ಪಡೆಯುತ್ತಾರೆ. ಆಶ್ಚರ್ಯಕರ ಸಂಗತಿಯೆಂದರೆ, ಹೆಚ್ಚಿನ ಉದ್ಯೋಗಿಗಳಿಗೆ ಪಿಎಫ್ನ ಈ 7 ಪ್ರಯೋಜನಗಳ ಬಗ್ಗೆ ತಿಳಿದಿಲ್ಲ. ಪ್ರತಿ ತಿಂಗಳು ನಿಮ್ಮ ಸಂಬಳದಿಂದ ಪಿಎಫ್ ಅನ್ನು ಕಡಿತಗೊಳಿಸಿದರೆ, ಈ ಪ್ರಯೋಜನಗಳನ್ನು ತ್ವರಿತವಾಗಿ ಗಮನಿಸಿ.ಪ್ರತಿ ಉದ್ಯೋಗಿಯ ಪಿಎಫ್ (ಪಿಎಫ್ ಖಾತೆ ಕೆ ಫಾಯ್ಡೆ) ಅನ್ನು ನೌಕರರ ಭವಿಷ್ಯ ನಿಧಿ ಸಂಸ್ಥೆಯು ಪ್ರತಿ ತಿಂಗಳು ಠೇವಣಿ ಮಾಡುತ್ತದೆ. ಇದನ್ನು ಉದ್ಯೋಗಿಯ ಸಂಬಳದಿಂದಲೇ ನೀಡಲಾಗುತ್ತದೆ. ಇದರ ನಂತರ, ಈ ಠೇವಣಿ ಮಾಡಿದ ಪಿಎಫ್ ಮೊತ್ತದ ಮೇಲೆ ಇಪಿಎಫ್ಒ (ನೌಕರರ ಭವಿಷ್ಯ ನಿಧಿ ಸಂಸ್ಥೆ) 7 ದೊಡ್ಡ ಪ್ರಯೋಜನಗಳನ್ನು ನೀಡುತ್ತದೆ. ಅನೇಕ ಜನರಿಗೆ ಈ ಪ್ರಯೋಜನಗಳ ಬಗ್ಗೆ ತಿಳಿದಿಲ್ಲ. ಪ್ರತಿಯೊಬ್ಬ ಉದ್ಯೋಗಿ ವ್ಯಕ್ತಿಯು ಈ ಪ್ರಯೋಜನಗಳನ್ನು (ಪಿಎಫ್ ಪ್ರಯೋಜನಗಳು) ತಿಳಿದಿರಬೇಕು ಇದರಿಂದ ಅವರು ಅಗತ್ಯವಿದ್ದಾಗ ಈ ಪ್ರಯೋಜನಗಳ ಲಾಭವನ್ನು…
ಮತದಾರರ ಪಟ್ಟಿಯಲ್ಲಿ ನವೀಕರಣಗೊಂಡ 15 ದಿನಗಳ ಒಳಗೆ ಮತದಾರರಿಗೆ ಮತದಾರರ ಫೋಟೋ ಗುರುತಿನ ಚೀಟಿಗಳನ್ನು (EPIC ಗಳು) ತಲುಪಿಸಲಾಗುವುದು ಎಂದು ಭಾರತ ಚುನಾವಣಾ ಆಯೋಗ ಬುಧವಾರ ಘೋಷಿಸಿದೆ. ಸೇವೆಗಳ ವಿತರಣೆಯಲ್ಲಿ ಅನುಕೂಲತೆ ಮತ್ತು ದಕ್ಷತೆಯನ್ನು ಹಾಗೂ ನೈಜ-ಸಮಯದ ಟ್ರ್ಯಾಕಿಂಗ್ ಅನ್ನು ಸುಗಮಗೊಳಿಸುವ ಗುರಿಯನ್ನು ಈ ಕ್ರಮ ಹೊಂದಿದೆ. ಹೊಸ ವ್ಯವಸ್ಥೆಯು ಚುನಾವಣಾ ನೋಂದಣಿ ಅಧಿಕಾರಿ (ERO) EPIC ಉತ್ಪಾದನೆಯಿಂದ ಅಂಚೆ ಇಲಾಖೆ (DoP) ಮೂಲಕ ಮತದಾರರಿಗೆ EPIC ತಲುಪಿಸುವವರೆಗೆ ಪ್ರತಿ ಹಂತದ ನೈಜ-ಸಮಯದ ಟ್ರ್ಯಾಕಿಂಗ್ ಅನ್ನು ಖಚಿತಪಡಿಸುತ್ತದೆ” ಎಂದು ಚುನಾವಣಾ ಆಯೋಗ ಹೇಳಿಕೆಯಲ್ಲಿ ತಿಳಿಸಿದೆ. ಮತದಾರರು ಪ್ರತಿ ಹಂತದಲ್ಲಿಯೂ SMS ಮೂಲಕ ಅಧಿಸೂಚನೆಗಳನ್ನು ಸ್ವೀಕರಿಸುತ್ತಾರೆ, ಅವರ EPIC ಗಳ ಸ್ಥಿತಿಯ ಬಗ್ಗೆ ಅವರಿಗೆ ತಿಳಿಸುತ್ತಾರೆ. ಹೊಸ ವ್ಯವಸ್ಥೆಯನ್ನು ಕಾರ್ಯಗತಗೊಳಿಸಲು, ಚುನಾವಣಾ ಆಯೋಗವು ಇತ್ತೀಚೆಗೆ ಪ್ರಾರಂಭಿಸಲಾದ ECINet ವೇದಿಕೆಯಲ್ಲಿ ಮೀಸಲಾದ IT ಮಾಡ್ಯೂಲ್ ಅನ್ನು ಸಹ ಪರಿಚಯಿಸಿದೆ. “ಹೊಸ IT ವೇದಿಕೆಯು ಪ್ರಸ್ತುತ ವ್ಯವಸ್ಥೆಯನ್ನು ಮರು-ಎಂಜಿನಿಯರಿಂಗ್ ಮಾಡುವ ಮೂಲಕ ಮತ್ತು ಕೆಲಸದ ಹರಿವನ್ನು…
ಬೆಂಗಳೂರು : ಡ್ರಗ್ಸ್ ಮಾರಾಟ, ಸೇವನೆ ಕಂಡುಬಂದಲ್ಲಿ ತಕ್ಷಣವೇ ಸಮೀಪದ ಪೊಲೀಸ್ ಠಾಣೆಗೆ ಮಾಹಿತಿ ನೀಡಿ ಎಂದು ಸಿಎಂ ಸಿದ್ದರಾಮಯ್ಯ ಸಾರ್ವಜನಿಕರಿಗೆ ಸೂಚನೆ ನೀಡಿದ್ದಾರೆ. ಈ ಕುರಿತು ಟ್ವೀಟ್ ಮಾಡಿರುವ ಸಿಎಂ ಸಿದ್ದರಾಮಯ್ಯ, ಮಾದಕ ದ್ರವ್ಯ ಸಮಾಜಕ್ಕಂಟಿದ ಕ್ಯಾನ್ಸರ್. ಇದನ್ನು ಬುಡಸಮೇತ ಕಿತ್ತೆಸೆಯದೆ ಇದ್ದರೆ ವ್ಯಸನಿಗಳ ಬದುಕು – ಭವಿಷ್ಯವನ್ನು ಕಸಿಯುವುದು ಮಾತ್ರವಲ್ಲ, ಅನೈತಿಕ, ಕಾನೂನು ಬಾಹಿರ ಚಟುವಟಿಕೆಗಳಿಗೆ ಪ್ರೇರಣೆಯನ್ನು ನೀಡುತ್ತದೆ. ಆ ಮೂಲಕ ಶಾಂತಿ, ಸುವ್ಯವಸ್ಥೆ, ಸಾರ್ವಜನಿಕರ ನೆಮ್ಮದಿಗೆ ಮಾರಕವಾಗಿದೆ. ಈ ಕಾರಣಕ್ಕಾಗಿ ಡ್ರಗ್ಸ್ ಮಾರಾಟ ಅಥವಾ ಸೇವನೆ ಕಂಡುಬಂದಲ್ಲಿ ತಕ್ಷಣವೇ ಸಮೀಪದ ಪೊಲೀಸ್ ಠಾಣೆಗೆ ಮಾಹಿತಿ ನೀಡಿ, ಸ್ವಸ್ಥ ಸಮಾಜ ನಿರ್ಮಾಣಕ್ಕೆ ಎಲ್ಲರೂ ಬೆಂಬಲವಾಗಿ ನಿಲ್ಲಬೇಕಿದೆ ಎಂದರು. ಡ್ರಗ್ಸ್ ಮುಕ್ತ ಸಮಾಜಕ್ಕಾಗಿ ನಾವು ಇನ್ನಿಲ್ಲದಂತೆ ಶ್ರಮಿಸುತ್ತಿದ್ದೇವೆ. ಮಾದಕ ವಸ್ತುಗಳ ಪೆಡ್ಲರ್ಗಳಿಗೆ ಕಠಿಣ ಶಿಕ್ಷೆ ವಿಧಿಸಲು ಅವಕಾಶ ಸೇರಿದಂತೆ ಈಗಿರುವ ಕಾಯ್ದೆಯನ್ನು ಇನ್ನಷ್ಟು ಬಲಪಡಿಸಲು ನಿರ್ಧಾರ ಕೈಗೊಳ್ಳಲಾಗಿದೆ ಎಂದು ಹೇಳಿದ್ದಾರೆ. ಮಾದಕ ವಸ್ತುಗಳ ಹಾವಳಿ ಸಂಪೂರ್ಣ ಮಟ್ಟ ಹಾಕಲು ಗೃಹ…
ಬೆಂಗಳೂರು : ಮಾಜಿ ಪ್ರಧಾನಿ ಇಂದಿರಾ ಗಾಂಧಿ ಅವರನ್ನು ಅಡಾಲ್ಫ್ ಹಿಟ್ಲರ್ಗೆ ಹೋಲಿಸಿ ಸಾಮಾಜಿಕ ಮಾಧ್ಯಮದಲ್ಲಿ ವಿವಾದಾತ್ಮಕ ಪೋಸ್ಟ್ ಮಾಡಿದ ಬಿಜೆಪಿ ವಿರುದ್ಧ ಕಾಂಗ್ರೆಸ್ ಕಾರ್ಯಕರ್ತರು ಪ್ರತಿಭಟನೆ ನಡೆಸಿದ್ದಾರೆ. ಮಾಜಿ ಪ್ರಧಾನಿ ಇಂದಿರಾ ಗಾಂಧಿಯವರ ಬಗ್ಗೆ ಅವಹೇಳನಕಾರಿ ಪೋಸ್ಟ್ ಖಂಡಿಸಿ ಕರ್ನಾಟಕ ಕಾಂಗ್ರೆಸ್ ಕಾರ್ಯಕರ್ತರು ಬಿಜೆಪಿಯ ವಿರುದ್ಧ ಪ್ರತಿಭಟನೆ ನಡೆಸಿದರು. ನಂತರ ಪೊಲೀಸರು ಪ್ರತಿಭಟನಾಕಾರರನ್ನು ಬಂಧಿಸಿದರು. https://twitter.com/ANI/status/1938131241846362609?ref_src=twsrc%5Egoogle%7Ctwcamp%5Eserp%7Ctwgr%5Etweet
ಬೆಂಗಳೂರು : ರಾಜ್ಯದ ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳಲ್ಲಿ 2025-26ನೇ ಶೈಕ್ಷಣಿಕ ಸಾಲಿಗೆ ಅತಿಥಿ ಉಪನ್ಯಾಸಕರನ್ನು ಆಯ್ಕೆ ಮಾಡಿಕೊಳ್ಳುವ ಬಗ್ಗೆ ರಾಜ್ಯ ಸರ್ಕಾರ ಮಹತ್ವದ ಆದೇಶ ಹೊರಡಿಸಿದೆ. 2025-26ನೇ ಶೈಕ್ಷಣಿಕ ಸಾಲಿನಲ್ಲಿ ಇಲಾಖಾ ವ್ಯಾಪ್ತಿಯ ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳಲ್ಲಿ (ಸರ್ಕಾರಿ ಸಂಸ್ಕೃತ ಹಾಗೂ ಚಿತ್ರಕಲಾ ಕಾಲೇಜುಗಳೂ ಒಳಗೊಂಡಂತೆ) ಖಾಯಂ ಉಪನ್ಯಾಸಕರಿಗೆ ಕಾರ್ಯಭಾರ ಹಂಚಿಕೆ ಮಾಡಿದ ನಂತರ ಉಳಿಕೆಯಾಗುವ ಬೋಧನಾ ಕಾರ್ಯಭಾರಕ್ಕನುಗುಣವಾಗಿ ಅತಿಥಿ ಉಪನ್ಯಾಸಕರನ್ನು (ಅತಿಥಿ ಗ್ರಂಥಪಾಲಕರು ಹಾಗೂ ಅತಿಥಿ ದೈಹಿಕ ಶಿಕ್ಷಣ ಅತಿಥಿ ಉಪನ್ಯಾಸಕರು ಸೇರಿದಂತೆ) ಉಲ್ಲೇಖ-(3) ರಲ್ಲಿ ಸರ್ಕಾರವು ನೀಡಿರುವ ಅನುಮತಿ ಮೇರೆಗೆ ಆನ್ಲೈನ್ ಕೌನ್ಸಿಲಿಂಗ್ ಮೂಲಕ ಆಯ್ಕೆ ಮಾಡಿಕೊಳ್ಳಲು ಉದ್ದೇಶಿಸಲಾಗಿದೆ. ಸರ್ಕಾರದ ಆದೇಶ ಸಂಖ್ಯೆ: ಇಡಿ 242 ಡಿಸಿಇ 2021, ದಿನಾಂಕ:14.01.2022 ರ ಕಂಡಿಕೆ (6) ರಲ್ಲಿ “ಯುಜಿಸಿನಿಗಧಿಪಡಿಸಿದ ವಿದ್ಯಾರ್ಹತೆ ಹೊಂದಿಲ್ಲದ ಅತಿಥಿ ಉಪನ್ಯಾಸಕರಿಗೆ ನಿಗಧಿತ ವಿದ್ಯಾರ್ಹತೆಯನ್ನು ಹೊಂದಲು 3 ವರ್ಷಗಳ ಕಾಲಾವಧಿ ನೀಡುವುದು, 3 ವರ್ಷಗಳ ನಂತರ ಯುಜಿಸಿ ನಿಗಧಿಪಡಿಸಿದ ವಿದ್ಯಾರ್ಹತೆ ಹೊಂದಿಲ್ಲದ ಅತಿಥಿ ಉಪನ್ಯಾಸಕರ…












