Author: kannadanewsnow57

ನವದೆಹಲಿ: ಭಾರತದ ಮೊದಲ ಸೌರ ಮಿಷನ್ ಆದಿತ್ಯ -ಎಲ್ 1 ಬಾಹ್ಯಾಕಾಶ ನೌಕೆ ಮಂಗಳವಾರ ಸೂರ್ಯ-ಭೂಮಿಯ ಎಲ್ 1 ಬಿಂದುವಿನ ಸುತ್ತ ತನ್ನ ಮೊದಲ ಹ್ಯಾಲೋ ಕಕ್ಷೆಯನ್ನು ಪೂರ್ಣಗೊಳಿಸಿದೆ ಎಂದು ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ (ಇಸ್ರೋ) ಹೇಳಿಕೆಯಲ್ಲಿ ತಿಳಿಸಿದೆ. ಆದಿತ್ಯ-ಎಲ್ 1 ಮಿಷನ್ ಲಗ್ರಾಂಜಿಯನ್ ಪಾಯಿಂಟ್ ಎಲ್ 1 ನಲ್ಲಿರುವ ಭಾರತೀಯ ಸೌರ ವೀಕ್ಷಣಾಲಯವಾಗಿದ್ದು, ಇದನ್ನು ಕಳೆದ ವರ್ಷ ಸೆಪ್ಟೆಂಬರ್ 2 ರಂದು ಪ್ರಾರಂಭಿಸಲಾಯಿತು ಮತ್ತು ಜನವರಿ 6 ರಂದು ಅದರ ಉದ್ದೇಶಿತ ಹ್ಯಾಲೋ ಕಕ್ಷೆಗೆ ಸೇರಿಸಲಾಯಿತು. ಹ್ಯಾಲೋ ಕಕ್ಷೆಯಲ್ಲಿರುವ ಆದಿತ್ಯ-ಎಲ್ 1 ಬಾಹ್ಯಾಕಾಶ ನೌಕೆಯು ಎಲ್ 1 ಬಿಂದುವಿನ ಸುತ್ತ ಒಂದು ಪರಿಭ್ರಮಣವನ್ನು ಪೂರ್ಣಗೊಳಿಸಲು 178 ದಿನಗಳನ್ನು ತೆಗೆದುಕೊಳ್ಳುತ್ತದೆ. ಹ್ಯಾಲೋ ಕಕ್ಷೆಯಲ್ಲಿ ಪ್ರಯಾಣಿಸುವಾಗ, ಬಾಹ್ಯಾಕಾಶ ನೌಕೆಯು ವಿವಿಧ ತೊಂದರೆಯ ಶಕ್ತಿಗಳಿಗೆ ಒಳಗಾಗುತ್ತದೆ, ಇದು ಉದ್ದೇಶಿತ ಕಕ್ಷೆಯಿಂದ ನಿರ್ಗಮಿಸಲು ಕಾರಣವಾಗುತ್ತದೆ ಎಂದು ಇಸ್ರೋ ತಿಳಿಸಿದೆ. ಇದಲ್ಲದೆ, ಈ ಕಕ್ಷೆಯನ್ನು ಕಾಪಾಡಿಕೊಳ್ಳಲು ಇದು ಕ್ರಮವಾಗಿ ಫೆಬ್ರವರಿ 22 ಮತ್ತು ಜೂನ್ 7…

Read More

ಬೆಂಗಳೂರು : ರಾಜ್ಯದ ಶಾಲಾ ಕಾಲೇಜುಗಳಲ್ಲಿ ಶಾಲಾವಧಿಯಲ್ಲಿ ಮೊಬೈಲ್‌ ಬಳಕೆ ಮಾಡುವುದನ್ನು ನಿಷೇಧಿಸಿ ರಾಜ್ಯ ಸರ್ಕಾರ ಮಹತ್ವದ ಆದೇಶ ಹೊರಡಿಸಿದೆ. ಮೊಬೈಲ್ ಉಪಯೋಗ ಶಾಲಾ ಕಾಲೇಜುಗಳಲ್ಲಿ ದಿನೇ ದಿನೇ ಹೆಚ್ಚುತ್ತಿದ್ದು, ಇದು ಶಾಲಾ ಕಾಲೇಜುಗಳಲ್ಲಿಯ ಶೈಕ್ಷಣಿಕ ವಾತಾವರಣವನ್ನು ಹದಗೆಡಿಸುತ್ತಿದ್ದು, ಇದರ ದುಷ್ಪರಿಣಾಮ ಮಕ್ಕಳ ಮೇಲೆ ಬೀರುತ್ತಿದೆಯಲ್ಲದೇ, ಇದರಿಂದ ಕಲಿಕೆಯ ಅಮೂಲ್ಯ ಸಮಯವನ್ನು ಮೊಬೈಲ್ ಮಾತುಗಾರಿಕೆಯಲ್ಲಿ ವ್ಯಯವಾಗುತ್ತಿದೆಯೆಂಬ ಅಂಶ ಇಲಾಖೆಯ ಗಮನಕ್ಕೆ ಬಂದಿದೆ. ಅಲ್ಲದೇ ವಿದ್ಯಾರ್ಥಿಗಳು ಕ್ಲಾಸಿನಲ್ಲಿ ಮೊಬೈಲ್ ಬಳಸಿ ಸಂಗೀತ ಕೇಳುವುದು ಆಟವಾಡುವು ಹಾಗೂ ಎಸ್‌ಎಂಎಸ್ ಕಳುಹಿಸುವುದು ಮಾಡುತ್ತಿದ್ದು, ಇದರಿಂದ ತರಗತಿಗಳಲ್ಲಿ ಅಹಿತಕರ ವಾತಾವರಣ ಉಂಟಾಗಿ ಶೈಕ್ಷಣಿಕ ಚಟುವಟಿಕೆಗಳಿಗೆ ತೊಂದರೆ ಉಂಟಾಗುತ್ತದೆ. ಇದರೊಂದಿಗೆ ಅನೇಕ ಪಾಲಕ-ಪೋಷಕರು ಕೂಡಾ ಅನೇಕ ಸಂದರ್ಭಗಳಲ್ಲಿ ಆತಂಕ ವ್ಯಕ್ತಪಡಿಸಿರುತ್ತಾರೆಂಬ ಅಂಶ ಸಭೆಯಲ್ಲಿ ಚರ್ಚೆಯಾಗಿ ಮಕ್ಕಳ ಕಲಿಕಾ ಸಮಯದ ರಕ್ಷಣೆಯ ಕ್ರಮವಾಗಿ ಮೊಬೈಲ್ ಉಪಯೋಗವನ್ನು ನಿಷೇದಿಸಬೇಕೆಂಬ ಒಟ್ಟಾರೆ ಅಭಿಪ್ರಾಯ ಈ ಸಭೆಯಲ್ಲಿ ವ್ಯಕ್ತವಾಗಿರುತ್ತದೆ. ಆದ್ದರಿಂದ ಈ ಕೆಳಕಂಡಂತೆ ಆದೇಶಿಸಿದೆ. ಪ್ರಸ್ತಾವನೆಯಲ್ಲಿ ವಿವರಿಸಲಾದ ಅಂಶಗಳ ಹಿನ್ನೆಲೆಯಲ್ಲಿ, ಒಂದನೇ ತರಗತಿಯಿಂದ 12ನೇ…

Read More

ಮೈಸೂರು : ರಾಜ್ಯದಲ್ಲಿ ಶೀಘ್ರ ಪೋಡಿ ಮುಕ್ತ ಗ್ರಾಮ ಅಭಿಯಾನಕ್ಕೆ ಚಾಲನೆ ನೀಡಲಾಗುವುದು ಎಂದು ಸಚಿವ ಕೃಷ್ಣ ಬೈರೇಗೌಡ ಅವರು ತಿಳಿಸಿದರು. ಈ ಬಗ್ಗೆ ಮಾಹಿತಿ ಹಂಚಿಕೊಂಡ ಅವರು, “ರಾಜ್ಯದಲ್ಲಿ 22 ಲಕ್ಷ ಖಾಸಗಿ ಆರ್‌ಟಿಸಿ ಗಳಿಗೆ ಪೋಡಿ ಆಗಿಲ್ಲ. ಪ್ರತಿಯೊಂದು ಆರ್‌ಟಿಸಿಯಲ್ಲಿ ಮೂರು ರಿಂದ ನಾಲ್ಕು ಜನ ಆರ್‌ಟಿಸಿ ಮಾಲೀಕರು ಇರುತ್ತಾರೆ. ಈ ಜಮೀನುಗಳ ಪೋಡಿ ಆಗಿಲ್ಲ. ಇನ್ನೂ ಸರ್ಕಾರಿಂದ ಭೂ ಮಂಜೂರಾದವ ಜಮೀನುಗಳೂ ಪೋಡಿ ಆಗಿಲ್ಲ. ಹೀಗಾಗಿ ಪೋಡಿ ಮುಕ್ತ ಅಭಿಯಾನದ ಅಡಿಯಲ್ಲಿ ಇಂತಹ ಜನರನ್ನು ನಾವೇ ಗುರುತಿಸಿ ಸರ್ಕಾರದಿಂದ ನಾವೇ ಪೋಡಿ ಮಾಡಿಕೊಡಲಿದ್ದೇವೆ ಎಂದು ಹೇಳಿದ್ದಾರೆ. ಕೇಸ್‌ ಬೈ ಕೇಸ್‌ ಮಾಡುವುದರಿಂದ ಬಡವರಿಗೆ ಅನುಕೂಲವಾಗಲ್ಲ. ಹೀಗಾಗಿ ಪೋಡಿ ಮುಕ್ತ ಗ್ರಾಮಗಳ ಉದ್ದೇಶದಿಂದ ಆಯವ್ಯಯದಲ್ಲಿ ಘೋಷಿಸಿದಂತೆ ಪೋಡಿಮುಕ್ತ ಅಭಿಯಾನಕ್ಕೆ ಶೀಘ್ರವೇ ಚಾಲನೇ ನೀಡಲಾಗುವುದು ಎಂದು ತಿಳಿಸಿದ್ದಾರೆ.

Read More

ಬೆಂಗಳೂರು : ರಾಜ್ಯಾದ್ಯಂತ ಡೆಂಗ್ಯೂ ಅಬ್ಬರ ಮುಂದುವರೆದಿದ್ದು, ಈವರೆಗೆ ಒಟ್ಟು 6187 ಡೆಂಗಿ ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿವೆ. ಇದರಲ್ಲಿ 6 ಜನರು ಸಾವಿಗೀಡಾಗಿದ್ದಾರೆ ಎಂದು ಸಚಿವ ದಿನೇಶ್‌ ಗುಂಡೂರಾವ್‌ ಮಾಹಿತಿ ನೀಡಿದ್ದಾರೆ. ಡೆಂಗಿ ನಿಯಂತ್ರಣ ಸಂಬಂಧ ವಿಧಾನಸೌಧದಲ್ಲಿ ಬಿಬಿಎಂಪಿ ಹಾಗು ಆರೋಗ್ಯ ಇಲಾಖೆಯ ಅಧಿಕಾರಿಗಳೊಂದಿಗೆ ಸಭೆ ಬಳಿಕ ಮಾತನಾಡಿದ ಸಚಿವ ದಿನೇಶ್‌ ಗುಂಡೂರಾವ್‌ ಅವರು, ಡೆಂಗಿ ನಿರ್ವಹಣೆಗೆ ಆರೋಗ್ಯ ಇಲಾಖೆಯು ಸರ್ವಸನ್ನದ್ಧವಾಗಿದ್ದು ಪ್ರಕರಣಗಳ ನಿರ್ವಹಣೆಗೆ ರಾಜ್ಯದ ಎಲ್ಲಾ ಆಸ್ಪತ್ರೆಗಳು, ಆರೋಗ್ಯ ಕೇಂದ್ರಗಳಲ್ಲಿ ಅಗತ್ಯ ಸಿದ್ಧತೆ ಮಾಡಿಕೊಳ್ಳುವಂತೆ ಹೇಳಿದ್ದಾರೆ. ರಾಜ್ಯದಲ್ಲಿ ಈವರೆಗೆ ಒಟ್ಟು 6187 ಡೆಂಗಿ ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿವೆ. ಇದರಲ್ಲಿ 6 ಜನರು ಸಾವಿಗೀಡಾಗಿದ್ದಾರೆ. ಕಳೆದಬಾರಿಗೆ ಹೋಲಿಸಿದರೆ ಈ ಬಾರಿ ಡೆಂಗಿ ಟೆಸ್ಟಿಂಗ್ ಶೇ. 40% ರಷ್ಟು ಹೆಚ್ಚಿಸಿದ್ದೇವೆ. ಪಾಸಿಟಿವ್ ಪ್ರಕರಣಗಳನ್ನು ಪತ್ತೆ ಹಚ್ಚಿದಾಗ ಮಾತ್ರ ಸಾವುಗಳನ್ನು ತಡೆಯಲು ಸಾಧ್ಯ. ಈ ನಿಟ್ಟಿನಲ್ಲಿ ನಿಗಾ ವಹಿಸಲು ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ. ಅಲ್ಲದೇ ಡೆಂಗಿ ಬಗ್ಗೆ ಅರಿವು ಮೂಡಿಸಲು ಮನೆ ಮನೆಗೆ ತೆರಳಿ…

Read More

ಬೆಂಗಳೂರು: ಹೊಸ ಎಪಿಎಲ್, ಬಿಪಿಎಲ್ ಕಾರ್ಡ್ ಗೆ ಅರ್ಜಿ ಸಲ್ಲಿಸೋ ನಿರೀಕ್ಷೆಯಲ್ಲಿದ್ದವರಿಗೆ ಗುಡ್ ನ್ಯೂಸ್ ಎನ್ನುವಂತೆ, ಇಂದು ಅರ್ಜಿ ಸಲ್ಲಿಕೆಗೆ ಅವಕಾಶ ನೀಡಲಾಗಿದೆ. ಈ ಬಗ್ಗೆ ಆಹಾರ ಮತ್ತು ನಾಗರೀಕ ಸರಬರಾಜು ಇಲಾಖೆಯಿಂದ ಮಾಹಿತಿ ಹಂಚಿಕೊಂಡಿದ್ದು, ಹೊಸ ರೇಷನ್ ಕಾರ್ಡ್ ಗೆ ಅರ್ಜಿ ಸಲ್ಲಿಸಲು ಅವಕಾಶ ಮಾಡಿಕೊಡಲಾಗಿದೆ ಅಂತ ತಿಳಿಸಿದೆ. ದಿನಾಂಕ 02-07-2024 ರಿಂದ ದಿನಾಂಕ 03-07-2024ರವರೆಗೆ ಹೊಸ ರೇಷನ್ ಕಾರ್ಡ್ ಗೆ ಅರ್ಜಿ ಸಲ್ಲಿಸಲು ಬೆಳಿಗ್ಗೆ 10 ಗಂಟೆಯಿಂದ 12 ಗಂಟೆಯವರೆಗೆ ಅವಕಾಶ ನೀಡಲಾಗಿದೆ ಅಂತ ಮಾಹಿತಿ ನೀಡಿದೆ. ರೇಷನ್ ಕಾರ್ಡ್ ತಿದ್ದುಪಡಿಗೆ ಅರ್ಜಿ ಸಲ್ಲಿಸಲು ಸಂಜೆ 4 ಗಂಟೆಯಿಂದ 6 ಗಂಟೆಯವರೆಗೆ ಅವಕಾಶ ನೀಡಲಾಗಿದೆ. ರಾಜ್ಯದ ಜನರು ಅವಕಾಶವನ್ನು ಬಳಸಿಕೊಳ್ಳುವಂತೆ ತಿಳಿಸಿದೆ. ಹೊಸ ಪಡಿತರ ಚೀಟಿಗಾಗಿ ಈ ಹಂತಗಳನ್ನು ಅನುಸರಿಸಿ, ಅರ್ಜಿ ಸಲ್ಲಿಸಿ www.kar.nic.in ಈ ಅಧಿಕೃತ ವೆಬ್ ಸೈಟ್ ತಾಣಕ್ಕೆ ಭೇಟಿ ನೀಡಬೇಕು. ಈ ಜಾಲತಾಣಕ್ಕೆ ಭೇಟಿ ನೀಡಿದ ಸಂದರ್ಭದಲ್ಲಿ ನೀವು ಮುಖಪುಟದಲ್ಲಿನ ಇ-ಸೇವೆಗಳು ಎಂಬಲ್ಲಿ ಕ್ಲಿಕ್…

Read More

ಮೈಸೂರು : ಬಗರ್‌ ಹುಕುಂ ಅರ್ಜಿಗಳ ವಿಲೇವಾರಿಗೆ ತಹಶೀಲ್ದಾರರಿಗೆ 8 ತಿಂಗಳ ಗಡುವು ನೀಡಲಾಗಿದೆ ಎಂದು ಸಚಿವ ಕೃಷ್ಣ ಬೈರೇಗೌಡ ಅವರು ಮಾಹಿತಿ ನೀಡಿದರು. ಮೈಸೂರಿನ ಪ್ರಾದೇಶಿಕ ಆಯುಕ್ತರ ಕಚೇರಿಯಲ್ಲಿ ಮೈಸೂರು ವಿಭಾಗದ ಕಂದಾಯ ಇಲಾಖೆ ಪ್ರಗತಿ ಪರಿಶೀಲನಾ ಸಭೆಯ ಬಳಿಕ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಬಡ ರೈತರಿಗೆ ಅನುಕೂಲ ಮಾಡಿಕೊಡುವ ನಿಟ್ಟಿನಲ್ಲಿ ಅಕ್ರಮ ಸಾಗುವಳಿಯ ಸಕ್ರಮೀಕರಣಕ್ಕಾಗಿ ಬಗರ್‌ಹುಕುಂ ಅಡಿ ರಾಜ್ಯ ಸರ್ಕಾರ ಅರ್ಜಿ ಸ್ವೀಕರಿಸಿದೆ. ಲಕ್ಷಾಂತರ ಅರ್ಜಿಗಳು ಈಗಾಗಲೇ ಸಲ್ಲಿಕೆಯಾಗಿದ್ದು, ಈ ಎಲ್ಲಾ ಅರ್ಜಿಗಳನ್ನು ಮುಂದಿನ 8 ತಿಂಗಳಲ್ಲಿ ವಿಲೇವಾರಿ ಮಾಡಬೇಕು ಎಂದು ಅಧಿಕಾರಿಗಳಿಗೆ ಸೂಚಿಸಿರುವುದಾಗಿ ಸಚಿವರು ತಿಳಿಸಿದರು. ರಾಜ್ಯಾದ್ಯಂತ 163 ಕ್ಷೇತ್ರಗಳಲ್ಲಿ ಬಗರ್‌ ಹುಕುಂ ಸಾಗುವಳಿ ಸಕ್ರಮೀಕರಣ ಸಮಿತಿ ರಚಿಸಲಾಗಿದೆ. ಜುಲೈ ತಿಂಗಳಿಂದ ಆರಂಭಿಸಿ ಪ್ರತಿ ತಿಂಗಳೂ ತಾಲೂಕವಾರು ತಿಂಗಳಿಗೆ ಇಷ್ಟು ಅರ್ಜಿ ವಿಲೇಗೆ ಜಿಲ್ಲಾಧಿಕಾರಿಗಳು ತಹಶೀಲ್ದಾರ್‌ಗೆ ಸೂಚಿಸಬೇಕು. ಶಾಸಕರ ನೇತೃತ್ವದ ಸಮಿತಿಯಲ್ಲಿ ತಹಶೀಲ್ದಾರರು ಈ ಎಲ್ಲಾ ಅರ್ಜಿಗಳಲ್ಲಿ ರೈತರಿಗೆ ಭೂ ಮಂಜೂರು ಮಾಡುವ ಮುನ್ನ ಅಧಿಕಾರಿಗಳು ಸ್ಥಳ…

Read More

ಬೆಂಗಳೂರು : ತೋಟಗಾರಿಕೆ ಇಲಾಖೆ ವತಿಯಿಂದ 2024-25 ನೇ ಸಾಲಿನಲ್ಲಿ ಮಂಗಾರು ಮತ್ತು ಹಿಂಗಾರು ಹಂಗಾಮುಗಳ ಮುರುವಿನ್ಯಾಸಗೊಳಿಸಲಾದ ಹವಾಮಾನ ಆಧಾರಿತ ಬೆಳೆ ವಿಮೆ ಯೋಜನೆಯ ಅನುಷ್ಟಾನಕ್ಕೆ ಯೋಜನೆವಾರು, ಬೆಳೆವಾರು ರೈತರ ವಿವರವನ್ನು ಆನ್ ಲೈನ್ ಪೊರ್ಟಲ್ (www.samrakshane.karnataka.gov.in) ನಲ್ಲಿ ಮಾತ್ರ ನೊಂದಾಯಿಸಲು ಆದೇಶಿಸಿದ್ದು, ಹವಾಮಾನ ಆಧಾರಿತ ಬೆಳೆಗಳಾದ ಮಾವು ಮತ್ತು ದ್ರಾಕ್ಷಿ ಬೆಳೆಯ ಬೆಳೆ ವಿಮೆ ನೊಂದಣಿಗಾಗಿ ಆರ್ಹ ರೈತರಿಂದ ಅರ್ಜಿ ಆಹ್ವಾನಿಸಲಾಗಿದೆ. ಬೆಳೆ ವಿಮೆ ಪಡೆಯಲಿಚ್ಚಿಸುವ ರೈತರು ಪಹಣಿ, ಬ್ಯಾಂಕ್ ಖಾತೆ ಪುಸ್ತಕ, ಆಧಾರ್ ಸಂಖ್ಯೆ ನಕಲು ಪ್ರತಿ ಮತ್ತು ಸ್ವಯಂ ಘೋಷಿತ ಬೆಳೆ ವಿವರಗಳೊಂದಿಗೆ ರಾಷ್ಟ್ರೀಯ ಬ್ಯಾಂಕ್, ಸಾಮಾನ್ಯ ಸೇವಾ ಕೆಂದ್ರ/ ಗ್ರಾಮ ಒನ್ ಗಳಲ್ಲಿ ವಿಮೆಗೆ ನೊಂದಾಯಿಸಕೊಳ್ಳಬಹುದು. ಬೆಳೆಸಾಲ ಪಡೆದ ಮತ್ತು ಪಡೆಯದ ರೈತರು ಪಾವತಿಸಬೇಕಾದ ವಿಮಾಕಂತಿನ ಮೊತ್ತವು ಒಂದೇ ಆಗಿದ್ದು, ರೈತರ ಪಾಲಿನ ಮೊತ್ತವು ಬೆಳೆ ವಿಮೆ ಮೊತ್ತಕ್ಕೆ ಶೇ. 5 ರಷ್ಟು ( ಪ್ರತಿ ಹೆಕ್ಷೇರ್ ಗೆ ಮಾವು- ರೂ.4000 ಮತ್ತು ದ್ರಾಕ್ಷಿ ರೂ.…

Read More

ಬಳ್ಳಾರಿ : ಜಿಲ್ಲೆಯಲ್ಲಿ ಖಾಲಿ ಇರುವ ಗ್ರಾಮ ಒನ್ ಸೇವಾ ಕೇಂದ್ರಗಳಿಗೆ ಫ್ರಾಂಚೈಸಿಗಳನ್ನು ನೇಮಕ ಮಾಡಲು ಆರ್ಹರಿಂದ ಅರ್ಜಿ ಅಹ್ವಾನಿಸಲಾಗಿದೆ ಎಂದು ಅಪರ ಜಿಲ್ಲಾಧಿಕಾರಿ ಮೊಹಮ್ಮದ್ ಝುಬೇರ್ ಅವರು ತಿಳಿಸಿದ್ದಾರೆ. ಜಿಲ್ಲೆಯಾದ್ಯಂತ 182 ಗ್ರಾಮ ಒನ್ ಕೇಂದ್ರಗಳು ಮಂಜೂರು ಮಾಡಲಾಗಿದ್ದು, ಪ್ರಸ್ತುತ 153 ಕೇಂದ್ರಗಳು ಚಾಲನೆಯಲ್ಲಿವೆ. ಇನ್ನುಳಿದ ಕೇಂದ್ರಗಳಿಗೆ ಆನ್‍ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸಲು ಜುಲೈ 15 ಕೊನೆಯ ದಿನವಾಗಿದೆ ಎಂದು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Read More

ನವದೆಹಲಿ: ಮಂಗಳ ಗ್ರಹದಲ್ಲಿ ಉಸಿರಾಡಲು ಸಾಧ್ಯವಿದೆ. ಹೌದು, ಭವಿಷ್ಯದಲ್ಲಿ, ಕೆಂಪು ಗ್ರಹ ಮಂಗಳ ಮಾನವರಿಗೆ ವಾಸಯೋಗ್ಯವಾಗಬಹುದು. ಅಲ್ಲಿ ಉಸಿರಾಡಲು ಸಾಧ್ಯವಿದೆ. ಇದು ಒಂದು ಅಧ್ಯಯನದಲ್ಲಿ ಬಹಿರಂಗವಾಗಿದೆ, ಇದರ ಆಧಾರದ ಮೇಲೆ ಚೀನಾದ ವಿಜ್ಞಾನಿಗಳು ಕೈಗೆ ಸಿಕ್ಕಿರುವ ವಿಶೇಷ ವಿಷಯವಾಗಿದೆ. ಈ ವಸ್ತುವು ಅಂಟಾರ್ಕ್ಟಿಕಾದ ಮರುಭೂಮಿಯಲ್ಲಿ ಕಂಡುಬಂದಿದೆ. ಈ ವಸ್ತುವು ಒಂದು ರೀತಿಯ ‘ಪಾಚಿ’, ಇದು ಮಂಗಳ ಗ್ರಹದಲ್ಲಿ ಬದುಕಬಲ್ಲದು. ಸಿಂಟ್ರಿಚಿಯಾ ಕೆನೈನೆರೆವಿಸ್ ಎಂದು ಕರೆಯಲ್ಪಡುವ ಪಾಚಿ ಕೆಂಪು ಗ್ರಹದ ಕಠಿಣ ಪರಿಸ್ಥಿತಿಗಳನ್ನು ಬದುಕುಳಿಯುವ ಸಾಮರ್ಥ್ಯವನ್ನು ಹೊಂದಿದೆ ಎಂದು ಚೀನಾದ ತಜ್ಞರು ಹೇಳುತ್ತಾರೆ. ಈ ಪಾಚಿಯನ್ನು ಕಠಿಣ ಪರಿಸ್ಥಿತಿಗಳಲ್ಲಿಯೂ ಕಾಣಬಹುದು. ಇದು ಬಿಸಿ ಮರುಭೂಮಿಯಾಗಿರಲಿ ಅಥವಾ ಹಿಮದಿಂದ ಕೂಡಿರಲಿ, ಅದು ಪಾಚಿಯನ್ನು ಪಡೆಯುತ್ತದೆ. ಈ ಪಾಚಿ ತಿನ್ನಲು ಯೋಗ್ಯವಲ್ಲದಿದ್ದರೂ, ಮಾನವರಿಗೆ ಇದು ಗಾಳಿ ಮತ್ತು ನೀರಿಗೆ ಆಮ್ಲಜನಕವನ್ನು ಉತ್ಪಾದಿಸುವ ಮಾರ್ಗವಾಗಿದೆ. ಅದರ ಸಹಾಯದಿಂದ, ಕೆಂಪು ಗ್ರಹದಲ್ಲಿ ಜೀವದ ಉಗಮ ಸಾಧ್ಯ. ಇದು ಕೆಂಪು ಗ್ರಹವನ್ನು ಮಾನವರಿಗೆ ವಾಸಯೋಗ್ಯವಾಗಿಸುತ್ತದೆ. ಚೀನಾದ ಬಾಹ್ಯಾಕಾಶ ವಿಜ್ಞಾನಿಗಳು ನಡೆಸಿದ…

Read More

ಬೆಂಗಳೂರು : 2024-25ನೇ ಸಾಲಿನ ಆಯವ್ಯಯ ಘೋಷಿತ ‘ನಾವು-ಮನುಜರು’ ಕಾರ್ಯಕ್ರಮವನ್ನು ರಾಜ್ಯದ ಎಲ್ಲಾ ಸರ್ಕಾರಿ, ಅನುದಾನಿತ ಹಾಗೂ ಅನುದಾನ ರಹಿತ ಪ್ರಾಥಮಿಕ ಮತ್ತು ಪ್ರೌಢಶಾಲೆಗಳಲ್ಲಿ ಅನುಷ್ಠಾನಗೊಳಿಸುವ ಕುರಿತು ಶಿಕ್ಷಣ ಇಲಾಖೆ ಆದೇಶ ಹೊರಡಿಸಿದೆ. ಮೇಲಿನ ವಿಷಯ ಮತ್ತು ಉಲ್ಲೇಖಕ್ಕೆ ಸಂಬಂಧಿಸಿದಂತೆ, ರಾಜ್ಯದ ಎಲ್ಲಾ ಶಿಕ್ಷಣ ಸಂಸ್ಥೆಗಳನ್ನು ಸಾಮಾಜಿಕ ಸಾಮರಸ್ಯ, ವೈಜ್ಞಾನಿಕ ಮನೋಭಾವ ಮತ್ತು ಸಹಬಾಳ್ವೆಯ ವಿದ್ಯಾಕೇಂದ್ರಗಳನ್ನಾಗಿ ರೂಪಿಸಲು ‘ನಾವು-ಮನುಜರು’ ಎಂಬ ಹೆಸರಿನಲ್ಲಿ ಎಲ್ಲಾ ಶಾಲಾ ಕಾಲೇಜುಗಳಲ್ಲಿ ವಾರಕ್ಕೆ 2 ಗಂಟೆಗಳ ವಿಚಾರ ವಿಮರ್ಶೆ ಮತ್ತು ಸಂವಾದ ಚಟುವಟಿಕೆಗಳನ್ನು ಒಳಗೊಂಡ ತರಗತಿಗಳನ್ನು ನಡೆಸಲಾಗುವುದು ಎಂದು 2024-25 ನೇ ಸಾಲಿನ ಆಯವ್ಯಯ ಭಾಷಣದಲ್ಲಿ ಘೋಷಿಸಲಾಗಿರುತ್ತದೆ. ರಾಜ್ಯದ ಎಲ್ಲಾ ಸರ್ಕಾರಿ, ಅನುದಾನಿತ ಹಾಗೂ ಅನುದಾನ ರಹಿತ ಪ್ರಾಥಮಿಕ ಮತ್ತು ಪ್ರೌಢಶಾಲೆಗಳಲ್ಲಿ ವಾರಕ್ಕೆ 2 ಗಂಟೆಗಳ (120 ನಿಮಿಷ – 40 ನಿಮಿಷಗಳ 3 ಅವಧಿಗಳು) ವಿಚಾರ ವಿಮರ್ಶೆ ಮತ್ತು ಸಂವಾದ ಚಟುವಟಿಕೆಗಳನ್ನು ಒಳಗೊಂಡ ಕಾರ್ಯಕ್ರಮಗಳನ್ನು ಅನುಷ್ಠಾನಗೊಳಿಸುವ ಸಂಬಂಧ ಉಲ್ಲೇಖ-3 ರ ಸರ್ಕಾರದ ಆದೇಶದಲ್ಲಿ ನಿರ್ದೇಶಿಸಲಾಗಿದೆ. ಸದರಿ…

Read More