Subscribe to Updates
Get the latest creative news from FooBar about art, design and business.
Author: kannadanewsnow57
ನವದೆಹಲಿ : ಜೂನ್ ತಿಂಗಳು ಸಾಮಾನ್ಯ ಜನರಿಗೆ ಹಲವು ದೊಡ್ಡ ಬದಲಾವಣೆಗಳನ್ನು ತರುತ್ತಿದೆ. ಜೂನ್ 1, 2025 ರಿಂದ, ಬ್ಯಾಂಕುಗಳು, ಪಿಎಫ್, ಎಲ್ಪಿಜಿ, ಕ್ರೆಡಿಟ್ ಕಾರ್ಡ್, ಆಧಾರ್ ಮತ್ತು ಯುಪಿಐಗೆ ಸಂಬಂಧಿಸಿದ ಹಲವು ನಿಯಮಗಳು ಬದಲಾಗಲಿವೆ. ಈ ನಿಯಮಗಳು ನಿಮ್ಮ ದೈನಂದಿನ ಜೀವನ ಮತ್ತು ಹಣ ಯೋಜನೆಗೆ ನೇರವಾಗಿ ಪರಿಣಾಮ ಬೀರುತ್ತವೆ. ಜೂನ್ 1 ರಿಂದ ಬದಲಾಗಲಿವೆ ಈ ಎಲ್ಲಾ ನಿಯಮಗಳು ಇಪಿಎಫ್ಒ 3.0 ಬಿಡುಗಡೆ – ಪಿಎಫ್ ಹಿಂಪಡೆಯುವಿಕೆ ಈಗ ಸುಲಭ ಇಪಿಎಫ್ಒ (ನೌಕರರ ಭವಿಷ್ಯ ನಿಧಿ ಸಂಸ್ಥೆ) ತನ್ನ ಹೊಸ ವೇದಿಕೆ ಇಪಿಎಫ್ಒ 3.0 ಅನ್ನು ಪ್ರಾರಂಭಿಸಲಿದೆ. ಇದರೊಂದಿಗೆ, ಪಿಎಫ್ ಹಿಂಪಡೆಯುವುದು, ಕೆವೈಸಿ ನವೀಕರಿಸುವುದು ಮತ್ತು ಕ್ಲೈಮ್ ಮಾಡುವುದು ಈಗ ಮೊದಲಿಗಿಂತ ವೇಗವಾಗಿ ಮತ್ತು ಸುಲಭವಾಗಿರುತ್ತದೆ. ಅಲ್ಲದೆ, ಎಟಿಎಂ ನಂತಹ ಇಪಿಎಫ್ ಕಾರ್ಡ್ನಿಂದ ಹಣವನ್ನು ಹಿಂಪಡೆಯಬಹುದು. ಎಫ್ಡಿ ಬಡ್ಡಿದರಗಳಲ್ಲಿ ಬದಲಾವಣೆ ಸಾಧ್ಯ ಬ್ಯಾಂಕ್ಗಳ ಸ್ಥಿರ ಠೇವಣಿ (ಎಫ್ಡಿ) ಬಡ್ಡಿದರಗಳು ಕಡಿಮೆಯಾಗಬಹುದು. ಆರ್ಬಿಐನ ರೆಪೊ ದರದಲ್ಲಿ ಸಂಭವನೀಯ ಕಡಿತದಿಂದಾಗಿ ಬ್ಯಾಂಕುಗಳು…
ವೈದ್ಯಕೀಯ ವಿಜ್ಞಾನದ ಪ್ರಕಾರ ವಯಸ್ಸಿನ ವ್ಯಕ್ತಿಗೆ ಸಾಕಷ್ಟು ನಿದ್ರೆ ಮಾಡುವುದು ಮುಖ್ಯ. ಏಕೆಂದರೆ ಸಾಕಷ್ಟು ನಿದ್ದೆ ಮಾಡುವುದರಿಂದ ವ್ಯಕ್ತಿಯು ಒತ್ತಡ ಮತ್ತು ಖಿನ್ನತೆಯಿಂದ ಬಳಲುವುದಿಲ್ಲ ಮತ್ತು ಮೆದುಳಿನ ಕಾರ್ಯನಿರ್ವಹಣೆಯು ಉತ್ತಮವಾಗಿ ಉಳಿಯುತ್ತದೆ. ಇಂದು ಈ ವಿಷಯದಲ್ಲಿ ನಾವು ವಯಸ್ಸಿಗೆ ಅನುಗುಣವಾಗಿ ಎಷ್ಟು ಗಂಟೆಗಳ ನಿದ್ರೆ ಆರೋಗ್ಯಕ್ಕೆ ಪ್ರಯೋಜನಕಾರಿ ಎಂದು ತಿಳಿಯಲು ಪ್ರಯತ್ನಿಸುತ್ತೇವೆ. ಆದ್ದರಿಂದ ಅದರ ಬಗ್ಗೆ ವಿವರವಾಗಿ ತಿಳಿದುಕೊಳ್ಳೋಣ. 1. ನವಜಾತ ಶಿಶುವಿನ. ವೈದ್ಯಕೀಯ ವಿಜ್ಞಾನದ ಪ್ರಕಾರ, ನವಜಾತ ಶಿಶುಗಳು ಸರಿಸುಮಾರು 14-17 ಗಂಟೆಗಳ ನಿದ್ದೆ ತೆಗೆದುಕೊಳ್ಳಬೇಕು. ಇದು ಆರೋಗ್ಯಕ್ಕೆ ಪ್ರಯೋಜನಕಾರಿ. 2. 3-5 ವರ್ಷ ವಯಸ್ಸು. ತಜ್ಞರ ಪ್ರಕಾರ, ಈ ವಯಸ್ಸಿನ ಮಕ್ಕಳಿಗೆ 10-13 ಗಂಟೆಗಳ ನಿದ್ರೆ ಸಾಕಷ್ಟು ನಿದ್ರೆ ಎಂದು ಪರಿಗಣಿಸಲಾಗುತ್ತದೆ. ಇದು ಆರೋಗ್ಯಕ್ಕೆ ಪ್ರಯೋಜನಕಾರಿ. 3. 6-13 ವರ್ಷ ವಯಸ್ಸು. ವೈದ್ಯರ ಪ್ರಕಾರ, ನ್ಯಾಷನಲ್ ಸ್ಲೀಪ್ ಫೌಂಡೇಶನ್ (ಎನ್ಎಸ್ಎಫ್) ಈ ಮಕ್ಕಳಿಗೆ 9 ರಿಂದ 11 ಗಂಟೆಗಳ ನಿದ್ರೆಯನ್ನು ಶಿಫಾರಸು ಮಾಡುತ್ತದೆ. ಎಷ್ಟೋ ಗಂಟೆಗಳ ನಿದ್ದೆ ಅವರನ್ನು…
ಶಿವಮೊಗ್ಗ: ವಿಶ್ವ ಹಾಲು ದಿನಾಚರಣೆ ಪ್ರಯುಕ್ತ ಕರ್ನಾಟಕ ಸಹಕಾರ ಹಾಲು ಮಹಾಮಂಡಳ ಹಾಗೂ ಶಿಮುಲ್ ವತಿಯಿಂದ ಜೂ.1 ರಂದು 18 ವಿವಿಧ ಮಾದರಿ ನಂದಿನಿ ಕೇಕ್ ಹಾಗೂ ಮಫಿನ್ಗಳನ್ನು ಮಾರುಕಟ್ಟೆಗೆ ಬಿಡುಗಡೆ ಮಾಡಲಾಗುತ್ತಿದ್ದು, ಮಾರುಕಟ್ಟೆಯಲ್ಲಿ ದೊರೆಯುವ ಬೇರೆ ಖಾಸಗಿ ಬ್ರಾಂಡ್ನ ಕೇಕ್ ಹಾಗೂ ಮಫಿನ್ಗಳಿಗಿಂತ ನಂದಿನಿ ಕೇಕ್ ಹಾಗೂ ಮಫಿನ್ಗಳು ಉತ್ತಮ ಗುಣಮಟ್ಟದಲ್ಲಿ ಹಾಗೂ ಸ್ಪರ್ಧಾತ್ಮಕ ಬೆಲೆಗಳಲ್ಲಿ ನೀಡಲಾಗುತ್ತಿದೆ. ಒಕ್ಕೂಟವು ಶಿವಮೊಗ್ಗ, ದಾವಣಗೆರೆ ಮತ್ತು ಚಿತ್ರದಾರ್ಗ ಜಿಲ್ಲೆಗಳ ಕಾರ್ಯ ವ್ಯಾಪ್ತಿಯನ್ನು ಹೊಂದಿದ್ದು, ಕಾರ್ಯವ್ಯಾಪ್ತಿಯ ಜಿಲ್ಲೆಗಳ 1325 ಉತ್ಪಾದಕರ ಸಹಕಾರ ಸಂಘಗಳಿAದ ಪ್ರತಿನಿತ್ಯ 02 ಸರತಿಗಳಲ್ಲಿ ಸರಾಸರಿ 8 ಲಕ್ಷ ಕೆ.ಜಿ ಹಾಲನ್ನು ಸಂಗ್ರಹಿಸಲಾಗುತ್ತಿದೆ. ಸದರಿ ಹಾಲನ್ನು ಅತ್ಯಾಧುನಿಕ ಯಂತ್ರಗಳಲ್ಲಿ ಸಂಸ್ಕರಿಸಿ ಹಾಲು ಮತ್ತು ಹಾಲಿನ ಉತ್ಪನ್ನಗಳನ್ನು ತಯಾರಿಸಲಾಗುತ್ತಿದೆ. ಒಕ್ಕೂಟದ ವ್ಯಾಪ್ತಿಯಲ್ಲಿರುವ 1836 ಹಾಲಿನ ಡೀಲರ್, 147 ಫ್ರಾಂಚೈಸಿ ಪಾರ್ಲರ್ ಹಾಗೂ 49 ಸ್ವಂತ ಪಾರ್ಲರ್ಗಳ ಮೂಲಕ ಪ್ರತಿನಿತ್ಯ 2.85 ಲಕ್ಷ ಲೀಟರ್ ಹಾಲು ಮತ್ತು ಸರಾಸರಿ 65 ಸಾವಿರ ಕೆ.ಜಿ. ಮೊಸರನ್ನು…
ಬೆಂಗಳೂರು : ಜನರಿಗೆ ಸುಗಮ ಆಡಳಿತ ನೀಡುವ ಭಾಗವಾಗಿ ಜೂನ್ 1 ರಿಂದ ನೋಂದಣಿ ಕಚೇರಿಗಳು ಶನಿವಾರ-ಭಾನುವಾರದ ರಜೆ ದಿನಗಳಲ್ಲೂ ಕಾರ್ಯನಿರ್ವಹಿಸಲಿವೆ. ನೋಂದಣಿ ಮತ್ತು ಮುದ್ರಾಂಕ ಇಲಾಖೆ ಆಯುಕ್ತರಾದ ಕೆ.ಎ. ದಯಾನಂದ ಈ ಬಗ್ಗೆ ಮಾಹಿತಿ ನೀಡಿದ್ದು, ನೋಂದಣಿ ಮತ್ತು ಮುದ್ರಾಂಕ ಇಲಾಖೆ ಜೂನ್ 1ರಿಂದಲೇ ರಜಾ ದಿನಗಳಲ್ಲಿಯೂ ಸಬ್ ರಿಜಿಸ್ಟರ್ ಕಚೇರಿಗಳನ್ನು ತೆರೆಯಲು ನಿರ್ಧರಿಸಿವೆ. ರಾಜ್ಯದ ಜಿಲ್ಲಾ ನೋಂದಣಿ ಕಚೇರಿ ವ್ಯಾಪ್ತಿಯಲ್ಲಿ ಬರುವ ಸಬ್ ರಿಜಿಸ್ಟ್ರಾರ್ ಕಚೇರಿಯಲ್ಲಿ ಒಂದು ಕಚೇರಿ ಮಾತ್ರ ಕಾರ್ಯನಿರ್ವಹಿಸಲಿದೆ. ಪ್ರತಿ ಸಬ್ ರಿಜಿಸ್ಟ್ರಾರ್ ಕಚೇರಿಗಳು ಸರದಿ ಆಧಾರದ ಮೇಲೆ ಎರಡನೇ ಮತ್ತು ನಾಲ್ಕನೇ ಶನಿವಾರ ಹಾಗೂ ಭಾನುವಾರ ರಜಾ ದಿನದಂದು ಕಾರ್ಯ ನಿರ್ವಹಿಸಬೇಕು.ರಜಾ ದಿನ ಕಾರ್ಯನಿರ್ವಹಿಸಿದ ಸಬ್ ರಿಜಿಸ್ಟ್ರಾರ್ ಕಚೇರಿ ಅಧಿಕಾರಿ, ಸಿಬ್ಬಂದಿಗೆ ಮಂಗಳವಾರ ರಜಾ ದಿನವೆಂದು ಘೋಷಣೆ ಮಾಡಲಾಗಿದೆ. ರಾಜ್ಯದಲ್ಲಿರುವ ಎಲ್ಲಾ ಸಬ್ ರಿಜಿಸ್ಟ್ರಾರ್ ಕಚೇರಿಗಳ ರಜಾ ದಿನ ಕರ್ತವ್ಯ ನಿರ್ವಹಿಸುವ ವೇಳಾಪಟ್ಟಿಯನ್ನು ಕಾವೇರಿ 2.0 ತಂತ್ರಾಂಶದಲ್ಲಿ ಪ್ರಕಟಿಸಲಾಗಿದೆ. ಸಬ್ ರಿಜಿಸ್ಟ್ರಾರ್ ಕಚೇರಿಯಲ್ಲಿ ಏನಾದರೂ…
ಬ್ಯಾಂಕಿನಿಂದ ಸಾಲ ಪಡೆಯಲು ಹಲವು ಕಾರಣಗಳಿವೆ. ಶಿಕ್ಷಣ, ಉದ್ಯೋಗ, ವ್ಯವಹಾರ, ಕಾರು, ಮನೆ ಮುಂತಾದ ವಿವಿಧ ಅಗತ್ಯಗಳಿಗಾಗಿ ಅನೇಕ ಜನರು ಬ್ಯಾಂಕಿನಿಂದ ಸಾಲ ಪಡೆಯುತ್ತಾರೆ.. ಇದನ್ನು ಇಎಂಐ ರೂಪದಲ್ಲಿ ಮಾಡಲಾಗುತ್ತದೆ. ಯಾವುದೇ ಅನಿರೀಕ್ಷಿತ ಹಣ ಬಂದರೆ.. ಅಥವಾ ಇಎಂಐಗಳು ಪೂರ್ಣಗೊಂಡರೂ ಸಹ, ಸಾಲವನ್ನು ಮುಕ್ತಾಯಗೊಳಿಸಲಾಗುತ್ತದೆ. ಆ ಸಮಯದಲ್ಲಿ ನೀವು ಬ್ಯಾಂಕಿನಿಂದ ಕೆಲವು ದಾಖಲೆಗಳನ್ನು ತೆಗೆದುಕೊಳ್ಳಬೇಕು ಎಂದು ತಜ್ಞರು ಸೂಚಿಸುತ್ತಾರೆ. ನೀವು ಈಗ ಅವುಗಳನ್ನು ಏಕೆ ತೆಗೆದುಕೊಳ್ಳಬೇಕು ಎಂದು ತಿಳಿಯಿರಿ. ಕೆಲವು ಸಂದರ್ಭಗಳಲ್ಲಿ, ಅಥವಾ ಸರಿಯಾದ ತಿಳುವಳಿಕೆಯ ಕೊರತೆಯಿಂದಾಗಿ, ನೀವು ಬ್ಯಾಂಕಿನಿಂದ ಸಾಲವನ್ನು ಮುಕ್ತಾಯಗೊಳಿಸಲು ಸಂಬಂಧಿಸಿದ ದಾಖಲೆಗಳನ್ನು ತೆಗೆದುಕೊಳ್ಳಲು ಮರೆತುಬಿಡುತ್ತೀರಿ. ನೀವು ಕೆಲವು ಪ್ರಮುಖ ದಾಖಲೆಗಳನ್ನು ತೆಗೆದುಕೊಳ್ಳದಿದ್ದರೆ, ಭವಿಷ್ಯದಲ್ಲಿ ನೀವು ಸಮಸ್ಯೆಗಳನ್ನು ಎದುರಿಸಬೇಕಾಗುತ್ತದೆ. ಸಾಲ ಪೂರ್ಣಗೊಂಡ ನಂತರ ನೀವು ಬ್ಯಾಂಕಿನಿಂದ ಯಾವ ದಾಖಲೆಗಳನ್ನು ತೆಗೆದುಕೊಳ್ಳಬೇಕು ಎಂದು ನೋಡೋಣ. ನಿರಾಕ್ಷೇಪಣಾ ಪ್ರಮಾಣಪತ್ರ (NOC) No Objection Certificate (NOC) ಯಾವುದೇ ಕಾರಣಕ್ಕಾಗಿ ನೀವು ಯಾವುದೇ ಬ್ಯಾಂಕಿನಿಂದ ಸಾಲ ಪಡೆದಾಗ.. ಅದನ್ನು ಮುಚ್ಚುವಾಗ ನೀವು ತೆಗೆದುಕೊಳ್ಳಬೇಕಾದ…
ಬೆಂಗಳೂರು : ಕುರಿಗಾಹಿಗಳಿಗೆ ಕುರಿಗಳ ಮತ್ತು ತಮ್ಮ ಜೀವದ ರಕ್ಷಣೆಗೆ ಬಂದೂಕು ಪರವಾನಗಿ ಕೊಡಬೇಕು ಎಂದು ಸಿಎಂ ಸಿದ್ದರಾಮಯ್ಯ ಸೂಚಿಸಿದ್ದಾರೆ. DC, CEO ಗಳ ಸಭೆಯಲ್ಲಿ ನಾನಾ ಇಲಾಖೆಗಳ ಪ್ರಗತಿ ಪರಿಶೀಲನೆ ವೇಳೆ ಮಾತನಾಡಿದ ಸಿಎಂ ಸಿದ್ದರಾಮಯ್ಯ, ಕುರಿಗಳ್ಳರು ಕುರಿಗಳನ್ನು ಕದಿಯುವ ಜೊತೆಗೆ, ಕುರಿಗಾಹಿಗಳನ್ನು ಕೊಲೆ ಮಾಡಿರುವ ಘಟನೆಗಳೂ ಕೂಡ ನಡೆದಿವೆ. ಹೀಗಾಗಿ ಬಂದೂಕು ಪರವಾನಗಿ ಕೊಡುವುದನ್ನು ಸಮರ್ಪಗೊಳಿಸಬೇಕು ಎನ್ನುವ ಸೂಚನೆ ನೀಡಿದರು. ಈ ವೇಳೆ ಸರ್ಕಾರದ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್ ಅವರು, ಕುರಿಗಾಹಿಗಳಿಗೆ ಬಂದೂಕು ನೀಡುವ ಕಾರ್ಯದ ಬಗ್ಗೆ ನಿಗಾ ಇಡಲು ಹಿರಿಯ ಅಧಿಕಾರಿಯೊಬ್ಬರನ್ನು ನಿಯೋಜಿಸುವುದಾಗಿ ತಿಳಿಸಿದರು. ಕುರಿಗಾಹಿಗಳ ಮೇಲೆ ಅರಣ್ಯ ಇಲಾಖೆಯವರು ಅವೈಜ್ಞಾನಿಕವಾಗಿ ಕೇಸು ದಾಖಲಿಸುವುದು ಮತ್ತು ಅನಗತ್ಯ ತೊಂದರೆ ಕೊಡುವ ಬಗ್ಗೆ ವರದಿಗಳು, ದೂರುಗಳು ಬಂದಿವೆ. ಇದನ್ನು ನಿಲ್ಲಿಸಬೇಕು. ಕುರಿಗಳು ತಲೆ ಎತ್ತಿ ಮೇಯುವುದಿಲ್ಲ. ಅವು ತಲೆ ಬಗ್ಗಿಸಿಕೊಂಡು ಮೇಯುವುದರಿಂದ ಅರಣ್ಯ ಸಿಬ್ಬಂದಿಯ ತಪ್ಪು ಗ್ರಹಿಕೆಯಿಂದ ಕುರಿಗಾಹಿಗಳಿಗೆ ತೊಂದರೆ ಆಗುತ್ತಿದೆ ಇದನ್ನು ತಪ್ಪಿಸಿ ಎಂದರು. ನೀವೆಲ್ಲಾ…
ಬೆಂಗಳೂರು : ಕರ್ನಾಟಕ ಸರ್ಕಾರವು ಹುಕ್ಕಾ ಬಾರ್ಗಳನ್ನು ನಿಷೇಧಿಸುವ, ತಂಬಾಕು ಉತ್ಪನ್ನಗಳನ್ನು ಖರೀದಿಸುವ ಕಾನೂನುಬದ್ಧ ವಯಸ್ಸನ್ನು 18 ರಿಂದ 21 ವರ್ಷಕ್ಕೆ ಹೆಚ್ಚಿಸುವ ಮತ್ತು ಉಲ್ಲಂಘನೆಗಳಿಗೆ ದಂಡವನ್ನು ಹೆಚ್ಚಿಸುವ ಶಾಸನವನ್ನು ಪ್ರಕಟಿಸಿದೆ. ಸಿಗರೇಟ್ ಮತ್ತು ಇತರ ತಂಬಾಕು ಉತ್ಪನ್ನಗಳು (ಜಾಹೀರಾತು ನಿಷೇಧ ಮತ್ತು ವ್ಯಾಪಾರ ಮತ್ತು ವಾಣಿಜ್ಯ, ಉತ್ಪಾದನೆ, ಪೂರೈಕೆ ಮತ್ತು ವಿತರಣೆಯ ನಿಯಂತ್ರಣ) (ಕರ್ನಾಟಕ ತಿದ್ದುಪಡಿ) ಮಸೂದೆ, 2024 ರ ನಂತರ ಮೇ 30 ರಂದು ಅಧಿಸೂಚನೆಯನ್ನು ಹೊರಡಿಸಲಾಯಿತು, ಇದಕ್ಕೆ ಮೇ 23 ರಂದು ರಾಷ್ಟ್ರಪತಿಗಳು ಒಪ್ಪಿಗೆ ಸೂಚಿಸಿದರು. ಸಾರ್ವಜನಿಕ ಸ್ಥಳಗಳಲ್ಲಿ ತಂಬಾಕು ಉತ್ಪನ್ನಗಳ ಬಳಕೆಯನ್ನು ನಿಷೇಧಿಸುವ ಕಾಯ್ದೆಯ ಪ್ರಕಾರ, ಯಾವುದೇ ವ್ಯಕ್ತಿಯು ಯಾವುದೇ ಸಾರ್ವಜನಿಕ ಸ್ಥಳದಲ್ಲಿ ತಂಬಾಕು ಉತ್ಪನ್ನಗಳನ್ನು ಬಳಸಬಾರದು. “ಬಳಕೆ” ಎಂದರೆ ಧೂಮಪಾನ ಮತ್ತು ತಂಬಾಕನ್ನು ಉಗುಳುವುದು ಎಂದರ್ಥ. ಆದಾಗ್ಯೂ, ಮೂವತ್ತು ಕೊಠಡಿಗಳನ್ನು ಹೊಂದಿರುವ ಹೋಟೆಲ್ ಅಥವಾ ಮೂವತ್ತು ಅಥವಾ ಅದಕ್ಕಿಂತ ಹೆಚ್ಚು ಜನರು ಕುಳಿತುಕೊಳ್ಳುವ ಸಾಮರ್ಥ್ಯವಿರುವ ರೆಸ್ಟೋರೆಂಟ್ ಮತ್ತು ವಿಮಾನ ನಿಲ್ದಾಣಗಳಲ್ಲಿ, ಧೂಮಪಾನ ಪ್ರದೇಶ ಅಥವಾ…
ಬೆಂಗಳೂರು : ಬೆಂಗಳೂರಿನಲ್ಲಿ ತಡರಾತ್ರಿ 1 ಗಂಟೆ ಸುಮಾರಿಗೆ ಮತ್ತೊಂದು ಅಗ್ನಿ ಅವಘಡ ಸಂಭವಿಸಿದ್ದು, ಆಟೋ ಮೊಬೈಲ್ ಅಂಗಡಿಯೊಂದು ಹೊತ್ತಿ ಉರಿದಿದೆ. ಬೆಂಗಳೂರಿನ ಜೆಸಿ ರಸ್ತೆಯಲ್ಲಿರುವ ಆಟೋ ಮೊಬೈಲ್ ಅಂಗಡಿ ಹೊತ್ತಿ ಉರಿದಿದೆ. ಅಗ್ನಿ ಶಾಮಕ ಸಿಬ್ಬಂದಿ ಸರಿಯಾದ ಸಮಯಕ್ಕೆ ಆಗಮಿಸಿ ಭಾರೀ ಅನಾಹುತ ತಪ್ಪಿಸಿದ್ದಾರೆ. ಈ ಮೂಲಕ ಸುತ್ತಮುತ್ತಲಿನ ಅಂಗಡಿಗಳು ಬೆಂಕಿಯಿಂದ ಬಚಾವ್ ಆಗಿದ್ದಾವೆ. ಆಟೋ ಮೊಬೈಲ್ ಅಂಗಡಿಯಲ್ಲಿ ಅಗ್ನಿ ಅವಘಡದಿಂದ ಬರೋಬ್ಬರಿ 4 ಕೋಟಿ ರೂ. ಮೌಲ್ಯದ ವಸ್ತುಗಳು ಸುಟ್ಟು ಕರಕಲಾಗಿವೆ.
ಬೆಂಗಳೂರು : ಹಿಂದುಳಿದವರು, ದಲಿತರು, ಅಶಿಕ್ಷಿತರು ಇರುವ ಕಡೆ ಬಾಲ್ಯವಿವಾಹ ಮತ್ತು ಬಾಲಗರ್ಭಿಣಿ ಪ್ರಕರಣಗಳು ಇರುತ್ತವೆ. ಇದನ್ನು ಸಮರ್ಪಕವಾಗಿ ತಡೆಯಬೇಕು ಎಂದು ನಿಮಗೆ ಅನ್ನಿಸಲ್ವಾ ಎಂದು ಸಿಎಂ ಸಿದ್ದರಾಮಯ್ಯ ಅಧಿಕಾರಿಗಳಿಗೆ ಪ್ರಶ್ನಿಸಿದರು. ಸಿಎಂ ಸಿದ್ದರಾಮಯ್ಯ ಅವರು ರಾಜ್ಯದ ಎಲ್ಲಾ ಡಿಸಿ, ಎಸ್ಪಿ ಮತ್ತು ಸಿಇಒಗಳೊಂದಿಗೆ ಪ್ರಗತಿ ಪರಿಶೀಲನಾ ಸಭೆ ನಡೆಸಿ ಮಾತನಾಡಿದರು, ರಾಜ್ಯದಲ್ಲಿ ಬಾಲ್ಯ ವಿವಾಹ, ಬಾಲಗರ್ಭಿಣಿ ಪ್ರಕರಣ ತಡಿಬೇಕು, ಸರಿಯಾಗಿ ನಿಗಾ ವಹಿಸಿ, ವರದಿ ನೀಡದ PDO ಗಳು ರೆವಿನ್ಯೂ ಸಿಬ್ಬಂದಿ ವಿರುದ್ಧ ಕ್ರಮ ಕೈಗೊಳ್ಳಿ. ಅಗತ್ಯ ಇರುವ ಕಡೆ ತಪ್ಪಿತಸ್ಥರ ವಿರುದ್ಧ ಕ್ರಿಮಿನಲ್ ಕೇಸು ಹಾಕಿ ಕಾನೂನು ಕ್ರಮ ಕೈಗೊಳ್ಳಿ ಎಂದು ಸಿಎಂ ಸೂಚಿಸಿದರು. ಯುವನಿಧಿ ಫಲಾನುಭವಿ ನಿರುದ್ಯೋಗಿಗಳಿಗೆ ಉದ್ಯೋಗ, ತರಬೇತಿ ಸಿಗಬೇಕು. ಮಾರುಕಟ್ಟೆಯ ಬೇಡಿಕೆಗೆ ತಕ್ಕಂತೆ ತರಬೇತಿ ನೀಡಿ, ಉದ್ಯೋಗ ಕೈಗೆ ಸಿಗುವಂತಾಗಬೇಕು. ತರಬೇತಿ ಪಡೆದವರೆಲ್ಲರಿಗೂ ಉದ್ಯೋಗ ಸಿಗದೇ ಹೋಗಬಹುದು. ಆದರೆ ತರಬೇತಿ ಮಾತ್ರ ಹೆಚ್ಚೆಚ್ಚು ನಿರುದ್ಯೋಗಿ ಮತ್ತು ಯುವನಿಧಿ ಫಲಾನುಭವಿಗಳಿಗೆ ನೀಡಬೇಕು ಎಂದು ಸಿಎಂ ಸೂಚನೆ…
ಬೆಂಗಳೂರು: ರಾಜ್ಯದಲ್ಲಿ ಏಪ್ರಿಲ್.1ರಿಂದ ಮೇ.31ರವರೆಗೆ ಸುರಿದಂತ ಪೂರ್ವ ಮುಂಗಾರು ಮಳೆಯಿಂದಾಗಿ 71 ಮಂದಿ ಸಾವನ್ನಪ್ಪಿದ್ದಾರೆ. ಅಲ್ಲದೇ 15378.32 ಹೆಕ್ಟೇರ್ ಬೆಳೆಹಾನಿಯಾಗಿದೆ. ಈ ಬಗ್ಗೆ ಸಿಎಂ ಸಿದ್ಧರಾಮಯ್ಯ ಅವರು ಮಾಹಿತಿ ನೀಡಿದ್ದು, ರಾಜ್ಯದಲ್ಲಿ ಪೂರ್ವ ಮುಂಗಾರು ಹಂಗಾಮು 1901 ರಿಂದ ಇಲ್ಲಿಯವರೆಗಿನ ಮಳೆ ಅಂಕಿಅಂಶಗಳನ್ನು ಗಮನಿಸಿದಾಗ 2025ರ ಪೂರ್ವ ಮುಂಗಾರು ಅವಧಿಯಲ್ಲಿ ದಾಖಲೆ ಪ್ರಮಾಣದ ಮಳೆಯಾಗಿದ್ದು, ಕಳೆದ 125 ವರ್ಷಗಳಲ್ಲೇ ಪೂರ್ವ ಮುಂಗಾರು ಮತ್ತು ಮೇ ಮಾಹೆಯಲ್ಲಿ ಕಂಡುಬಂದ ಗರಿಷ್ಟ ಪ್ರಮಾಣದ ಮಳೆಯಾಗಿದೆ ಎಂದಿದ್ದಾರೆ. ಪ್ರಮುಖವಾಗಿ ರಾಜ್ಯದಲ್ಲಿ 2025ರ ಮೇ ಮಾಹೆಗೆ ವಾಡಿಕೆಯಾಗಿ 74 ಮಿ.ಮೀ ಮಳೆಯಾಗಬೇಕಿದ್ದು, ವಾಸ್ತವಿಕ 219 ಮಿ.ಮೀ ಮಳೆಯಾಗಿದ್ದು ಸರಾಸರಿ ವಾಡಿಕೆ ಮಳೆಗೆ ಹೋಲಿಸಿದಾಗ ಶೇ.197ರಷ್ಟು ಅತ್ಯಧಿಕ ಮಳೆಯಾಗಿದೆ. 2025ರ ಪೂರ್ವ ಮುಂಗಾರು (1ನೇ ಮಾರ್ಚ್ ರಿಂದ 31ನೇ ಮೇ) ಅವಧಿಯಲ್ಲಿ ವಾಡಿಕೆಯಾಗಿ 115ಮಿ.ಮೀ ಮಳೆಯಾಗಬೇಕಿದ್ದು, ವಾಸ್ತವಿಕ 286 ಮಿ.ಮೀ ಮಳೆಯಾಗಿದ್ದು, ಸರಾಸರಿ ವಾಡಿಕೆ ಮಳೆಗೆ ಹೋಲಿಸಿದಾಗ ಶೇ.149ರಷ್ಟು ಅತ್ಯಧಿಕ ಮಳೆಯಾಗಿದೆ. ಒಟ್ಟಾರೆ, 2025ರ ಪೂರ್ವ ಮುಂಗಾರು (1ನೇ…