Subscribe to Updates
Get the latest creative news from FooBar about art, design and business.
Author: kannadanewsnow57
ಅನೇಕ ಜನರ ಮನೆಯಲ್ಲಿನ ಫ್ರಿಡ್ಜ್ಗಳು ಮತ್ತು ಫ್ರೀಜರ್ಗಳಲ್ಲಿ ಐಸ್ ಸಂಗ್ರಹವಾಗಿರುತ್ತದೆ. ಹಾಗಾದರೆ, ಹಾಗೆ ಹೆಪ್ಪುಗಟ್ಟುವುದನ್ನು ತಪ್ಪಿಸಲು ಏನು ಮಾಡಬೇಕೆಂದು ನೋಡೋಣ… ಇತ್ತೀಚಿನ ದಿನಗಳಲ್ಲಿ, ಫ್ರಿಡ್ಜ್ ದೈನಂದಿನ ಅಗತ್ಯವಾಗಿದೆ. ಅದಕ್ಕಾಗಿಯೇ ಪ್ರತಿಯೊಬ್ಬರ ಮನೆಯಲ್ಲಿಯೂ ಸಣ್ಣದಾಗಲಿ ಅಥವಾ ದೊಡ್ಡದಾಗಲಿ ಫ್ರಿಡ್ಜ್ ಇರುತ್ತದೆ. ಆದರೆ, ಅದನ್ನು ಹೇಗೆ ನಿರ್ವಹಿಸುವುದು ಎಂದು ಅನೇಕರಿಗೆ ತಿಳಿದಿಲ್ಲ. ಅವುಗಳ ಅನುಚಿತ ಬಳಕೆಯಿಂದಾಗಿ, ಫ್ರೀಜರ್ನಲ್ಲಿರುವ ನೀರು ಹೆಪ್ಪುಗಟ್ಟಿ ಮಂಜುಗಡ್ಡೆಯಾಗಿ ಬದಲಾಗುತ್ತದೆ. ಗಮನಿಸದೆ ಬಿಟ್ಟರೆ, ಫ್ರೀಜರ್ ಬಾಗಿಲು ತೆರೆಯಲು ಮತ್ತು ಮುಚ್ಚಲು ಸಹ ಕಷ್ಟವಾಗುತ್ತದೆ. ಅದಾದ ನಂತರ, ರೆಫ್ರಿಜರೇಟರ್ನ ಕಾರ್ಯಕ್ಷಮತೆಯ ಮೇಲೂ ಪರಿಣಾಮ ಬೀರುತ್ತದೆ. ಹಾಗಾದರೆ, ಈ ಫ್ರೀಜರ್ನಲ್ಲಿ ಐಸ್ ಏಕೆ ಹೆಪ್ಪುಗಟ್ಟುತ್ತದೆ? ಈಗ ಅದು ಹೆಪ್ಪುಗಟ್ಟದಂತೆ ತಡೆಯಲು ಏನು ಮಾಡಬೇಕೆಂದು ನೋಡೋಣ. ರೆಫ್ರಿಜರೇಟರ್ನಲ್ಲಿ ಐಸ್ ರಚನೆಗೆ ಕಾರಣಗಳು: 1. ಫ್ರಿಡ್ಜ್ ಬಾಗಿಲು ಅಥವಾ ಗ್ಯಾಸ್ಕೆಟ್ ಹಾನಿಗೊಳಗಾಗಿದ್ದರೆ, ಫ್ರೀಜರ್ನಲ್ಲಿ ಐಸ್ ರೂಪುಗೊಳ್ಳುತ್ತದೆ. ಗಾಳಿಯು ಒಳಗೆ ಹೋಗಿ ಪರಿಚಲನೆಗೊಳ್ಳುತ್ತದೆ. ಆದ್ದರಿಂದ ಫ್ರಿಡ್ಜ್ ಬಾಗಿಲು ಅಥವಾ ಗ್ಯಾಸ್ಕೆಟ್ ಹಾನಿಗೊಳಗಾಗಿದ್ದರೆ, ಅದನ್ನು ತಕ್ಷಣ ಬದಲಾಯಿಸಿ. 2. ಫ್ರಿಡ್ಜ್ನಲ್ಲಿರುವ…
ಬೆಂಗಳೂರು : ಮಾನವ ಹಕ್ಕುಗಳ ಸಂರಕ್ಷಣೆ ಹಾಗೂ ಮಾನವ ಹಕ್ಕುಗಳ ಉಲ್ಲಂಘನೆ ಪ್ರಕರಣಗಳಲ್ಲಿ ನೊಂದವರಿಗೆ ಸೂಕ್ತ ನೆರವನ್ನು ಒದಗಿಸುವ ನಿಟ್ಟಿನಲ್ಲಿ 1993ರ ಮಾನವ ಹಕ್ಕುಗಳ ಸಂರಕ್ಷಣಾ ಅಧಿನಿಯಮದ ಅಡಿಯಲ್ಲಿ ಸ್ಥಾಪಿತವಾಗಿದೆ. ಕರ್ನಾಟಕ ರಾಜ್ಯ ಮಾನವ ಹಕ್ಕುಗಳ ಆಯೋಗವು 2025 ನೇ ನವೆಂಬರ್ 18 ರಿಂದ 20 ರವರೆಗೆ ಶಿವಮೊಗ್ಗ ಮತ್ತು ದಾವಣಗೆರೆ ಜಿಲ್ಲೆಗಳಲ್ಲಿ ಸಿಟ್ಟಿಂಗ್ಸ್ ನಡೆಸಲು ಉದ್ದೇಶಿಸಿರುತ್ತದೆ. ಈ ಸಂದರ್ಭದಲ್ಲಿ ಸದರಿ ಜಿಲ್ಲೆಗಳಿಗೆ ಸಂಬಂಧಿಸಿದಂತೆ ಆಯೋಗದಲ್ಲಿ ನೋಂದಣಿಯಾಗಿರುವ ಪ್ರಕರಣಗಳನ್ನು ಆಯಾಯ ಜಿಲ್ಲೆಗಳಲ್ಲಿ ಇತ್ಯರ್ಥಪಡಿಸಿ, ವಿಲೇ ಮಾಡಿ ಕ್ರಮ ಜರುಗಿಸಲು ಉದ್ದೇಶಿಸಲಾಗಿದೆ. ದೂರುದಾರರು ಹಾಗೂ ಪ್ರತಿವಾದಿ ಪ್ರಾಧಿಕಾರಗಳು ಸದುಪಯೋಗಪಡಿಸಿಕೊಳ್ಳಬಹುದಾಗಿದೆ. ಮಾನವ ಹಕ್ಕು ಉಲ್ಲಂಘನೆ ಪ್ರಕರಣಗಳಿಗೆ ಸಂಬಂಧಿಸಿದಂತೆ ಶಿವಮೊಗ್ಗ ಮತ್ತು ದಾವಣಗೆರೆ ಜಿಲ್ಲೆಗಳಲ್ಲಿನ ಸಾರ್ವಜನಿಕರಿಗೆ ಅನುಕೂಲವಾಗುವ ನಿಟ್ಟಿನಲ್ಲಿ ಆಯಾಯ ಜಿಲ್ಲೆಗಳಲ್ಲಿಯೇ ನಿಗದಿತ ದಿನಾಂಕಗಳಂದು ಸಾರ್ವಜನಿಕರಿಂದ ದೂರುಗಳು ಮತ್ತು ಅಹವಾಲುಗಳನ್ನು ಸಹ ಸ್ವೀಕರಿಸಲು ಉದ್ದೇಶಿಸಲಾಗಿದೆ. ಸಾರ್ವಜನಿಕರು ಆಯಾ ಜಿಲ್ಲೆಗಳಲ್ಲಿ ನಿಗದಿತ ದಿನಾಂಕಗಳಂದು ಆಯೋಗದ ಮಾನ್ಯ ಅಧ್ಯಕ್ಷರು (ಹಂಗಾಮಿ) ಹಾಗೂ ಮಾನ್ಯ ಸದಸ್ಯರನ್ನು ಸಂಪರ್ಕಿಸಿ, ದೂರುಗಳನ್ನು ಸಲ್ಲಿಸಬಹುದಾಗಿದೆ…
ಬೆಂಗಳೂರು : ರಾಜ್ಯದ ಗ್ರಾಮ ಪಂಚಾಯಿತಿ, ತಾಲೂಕು ಪಂಚಾಯಿತಿ ಹಾಗೂ ಜಿಲ್ಲಾ ಪಂಚಾಯಿತಿಗಳಲ್ಲಿ ಈ ಎಲ್ಲ ಕರ್ತವ್ಯಗಳು ಕಡ್ಡಾಯವಾಗಿವೆ. ಕರ್ನಾಟಕ ಗ್ರಾಮ ಸ್ವರಾಜ್ ಮತ್ತು ಪಂಚಾಯತ್ ರಾಜ್ ಅಧಿನಿಯಮ, 1993 (1993ರ ಕರ್ನಾಟಕ ಅಧಿನಿಯಮ ಸಂಖ್ಯೆ 14)ರ ಪ್ರಕರಣ 2ರ (28ಸಿ) ಖಂಡ 58, 145, 146 ಮತ್ತು 184 ರೊಡನೆ ಓದಿಕೊಂಡಂತೆ 311 ರಲ್ಲಿ ಪ್ರದತ್ತವಾದ ಅಧಿಕಾರಗಳನ್ನು ಚಲಾಯಿಸಿ, ಕರ್ನಾಟಕ ಸರ್ಕಾರವು, ಕರ್ನಾಟಕ ಗ್ರಾಮ ಸ್ವರಾಜ್ ಮತ್ತು ಪಂಚಾಯತ್ ರಾಜ್ (ಜವಾಬ್ದಾರಿ ನಕ್ಷೆಯ, ವಿವರ, ವಿವರ, ಮೇಲ್ವಿಚಾರಣೆ) ನಿಯಮಗಳು, 2018ರ ಕರಡನ್ನು ಸದರಿ ಅಧಿನಿಯಮದ 311ನೇ ಪ್ರಕರಣದ ಮೂಲಕ ಅಗತ್ಯಪಡಿಸಲಾದಂತೆ, ಇದರಿಂದ ಬಾಧಿತರಾಗಬಹುದಾದ ಎಲ್ಲಾ ವ್ಯಕ್ತಿಗಳ ಮಾಹಿತಿಗಾಗಿ ಈ ಮೂಲಕ ಪ್ರಕಟಿಸಲಾಗಿದೆ ಮತ್ತು ಸದರಿ ಕರಡನ್ನು, ಸರ್ಕಾರಿ ರಾಜ್ಯ ಪತ್ರದಲ್ಲಿ ಪ್ರಕಟಿಸಿದ ದಿನಾಂಕದಿಂದ ಹದಿನೈದು ದಿನಗಳ ನಂತರ ಪರಿಗಣನೆಗೆ ತೆಗೆದುಕೊಳ್ಳಲಾಗುತ್ತದೆಂದೂ ಈ ಮೂಲಕ ಸೂಚನೆಯನ್ನು ನೀಡಲಾಗಿದೆ. ಮೇಲೆ ನಿರ್ದಿಷ್ಟಪಡಿಸಿದ ಅವಧಿಯು ಮುಕ್ತಾಯವಾಗುವ ಮೊದಲು ಸದರಿ ಕರಡಿಗೆ ಸಂಬಂಧಿಸಿದಂತೆ ಯಾವೊಬ್ಬ ವ್ಯಕ್ತಿಯಿಂದ…
ಈರುಳ್ಳಿಯನ್ನು ಹೆಚ್ಚಾಗಿ ಅವುಗಳ ಸಮೃದ್ಧ ಉತ್ಕರ್ಷಣ ನಿರೋಧಕಗಳು ಮತ್ತು ಗಂಧಕದ ಸಂಯುಕ್ತಗಳಿಂದಾಗಿ ಯಕೃತ್ತಿನ ಆರೋಗ್ಯವನ್ನು ಬೆಂಬಲಿಸುವ ಸೂಪರ್ಫುಡ್ ಎಂದು ಪ್ರಶಂಸಿಸಲಾಗುತ್ತದೆ. ಆದರೆ ಈರುಳ್ಳಿಯೊಳಗೆ ನೀವು ಕೆಲವೊಮ್ಮೆ ಗುರುತಿಸುವ ಆ ಗಾಢ ಕಪ್ಪು ಗೆರೆ ಅಥವಾ ಪದರವು ಎಚ್ಚರಿಕೆಯ ಸಂಕೇತವಾಗಿದೆ. ಇದು ಶಿಲೀಂಧ್ರ ಮಾಲಿನ್ಯವನ್ನು ಸೂಚಿಸಬಹುದು, ಅದು ಪದೇ ಪದೇ ಸೇವಿಸಿದರೆ ನಿಮ್ಮ ಯಕೃತ್ತಿಗೆ ಹಾನಿಯಾಗಬಹುದು. ಈರುಳ್ಳಿ ಕಪ್ಪು ಬಣ್ಣಕ್ಕೆ ತಿರುಗಲು ಕಾರಣವೇನು? ಈರುಳ್ಳಿಯೊಳಗೆ ಕಪ್ಪು ಅಥವಾ ಕಪ್ಪು ತೇಪೆಗಳ ಗೋಚರತೆಯು ಸಾಮಾನ್ಯವಾಗಿ ಶಿಲೀಂಧ್ರಗಳ ಸೋಂಕನ್ನು ಸೂಚಿಸುತ್ತದೆ, ಇದು ಸಾಮಾನ್ಯವಾಗಿ ಆಸ್ಪರ್ಜಿಲಸ್ ನೈಜರ್ ನಿಂದ ಉಂಟಾಗುತ್ತದೆ. ಈ ಶಿಲೀಂಧ್ರವು ಬೆಚ್ಚಗಿನ, ಆರ್ದ್ರ ವಾತಾವರಣದಲ್ಲಿ ಬೆಳೆಯುತ್ತದೆ ಮತ್ತು ಕೃಷಿ, ಸಾಗಣೆ ಅಥವಾ ಸಂಗ್ರಹಣೆಯ ಸಮಯದಲ್ಲಿ ಈರುಳ್ಳಿಯನ್ನು ಆಕ್ರಮಿಸಬಹುದು. ಕಾಲಾನಂತರದಲ್ಲಿ, ಶಿಲೀಂಧ್ರವು ಮೈಕೊಟಾಕ್ಸಿನ್ ಗಳನ್ನು ಉತ್ಪಾದಿಸುತ್ತದೆ, ಯಕೃತ್ತಿನ ಕೋಶಗಳನ್ನು ಹಾನಿಗೊಳಿಸುವ ಮತ್ತು ದೇಹದಲ್ಲಿನ ನಿರ್ವಿಷೀಕರಣ ಪ್ರಕ್ರಿಯೆಗಳನ್ನು ದುರ್ಬಲಗೊಳಿಸುವ ವಿಷಕಾರಿ ಸಂಯುಕ್ತಗಳು. ಕಲುಷಿತ ಈರುಳ್ಳಿಯಿಂದ ಯಕೃತ್ತಿನ ಅಪಾಯಗಳು ಆರೋಗ್ಯ ತಜ್ಞರ ಪ್ರಕಾರ, ಮೈಕೊಟಾಕ್ಸಿನ್-ಕಲುಷಿತ ಆಹಾರಗಳನ್ನು ಸೇವಿಸುವುದರಿಂದ ಕಾಲಾನಂತರದಲ್ಲಿ…
ಬೆಂಗಳೂರು : ಬೆಲೆ ಏರಿಕೆಯಿಂದ ತತ್ತರಿಸಿರುವ ರಾಜ್ಯದ ಜನತೆಗೆ ಮತ್ತೊಂದು ಶಾಕ್ ಎದುರಾಗಿದ್ದು, ರಾಜ್ಯದಲ್ಲಿ ಅಕ್ಕಿ ಬೆಲೆ ಏರಿಕೆಯಾಗುವ ಸಾಧ್ಯತೆ ಇದೆ. ಅತ್ಯಧಿಕ ಭತ್ತ ಬೆಳೆಯುವ ಅಚ್ಚುಕಟ್ಟು ಪ್ರದೇಶವಾದ ತುಂಗಭದ್ರಾ ಜಲಾಶಯ ವ್ಯಾಪ್ತಿಯಲ್ಲಿ ಪ್ರಸಕ್ತ ಸಾಲಿನ ಬೇಸಿಗೆ ಬೆಳಗೆ ನೀರು ಬಿಡುವುದಿಲ್ಲ ಎಂದು ಸರ್ಕಾರ ಅಧಿಕೃತ ಘೋಷಣೆ ಮಾಡಿದೆ. ಇದರ ಪರಿಣಾಮ ಭತ್ತ ಮತ್ತು ಅಕ್ಕಿ ಬೆಲೆ ಏರಿಕೆಯಾಗುವ ಸಾಧ್ಯತೆ ಇದೆ. ತುಂಗಭದ್ರಾ ಜಲಾನಯನ ಪ್ರದೇಶದಲ್ಲಿ ಕರ್ನಾಟಕ, ಆಂಧ್ರಪ್ರದೇಶ, ತೆಲಂಗಾಣ ಸೇರಿ 12.5 ಲಕ್ಷಕ್ಕೂ ಎಕರೆ ಪ್ರದೇಶದಲ್ಲಿ ಭತ್ತ ಬೆಳೆಯಲಾಗುತ್ತದೆ. 2.5 ಕೋಟಿ ಕ್ವಿಂಟಲ್ ಭತ್ತ ಉತ್ಪಾದನೆ ಸಾಮರ್ಥ್ಯ ಹೊಂದಿರುವ ಈ ಪ್ರದೇಶದಲ್ಲಿ ಈ ಬಾರಿ ಬೆಳೆ ಬೆಳೆಯುವುದಿಲ್ಲ. ಇದು ಮಾರುಕಟ್ಟೆಯ ಮೇಲೆ ಪರಿಣಾಮ ಬೀರಲಿದೆ ಎಂದು ಹೇಳಲಾಗಿದೆ. ಬೇಸಿಗೆ ಬೆಳೆಗೆ ನೀರು ಬಿಡುವುದಿಲ್ಲ ಎಂದು ಸರ್ಕಾರ ಹೇಳುತ್ತಿದ್ದಂತೆ ಮಾರುಕಟ್ಟೆಯ ಮೇಲೆ ಪರಿಣಾಮ ಬೀರಿದೆ. ಆರ್.ಎನ್.ಆರ್. ಭತ್ತದ ದರ 75 ಕೆಜಿಗೆ 1950-2000 ರೂ. ವರೆಗೆ ಏರಿಕೆಯಾಗಿದೆ. ಸೋನಾ ಮಸೂರಿ ದರ…
ಇತ್ತಿಚೆಗೆ ಆನ್ಲೈನ್ ವಂಚನೆ ಮಾಡುವ, ಆರ್ಥಿಕ ವಂಚನೆ ಮಾಡುವ ಅಪರಾಧಗಳು ಹೆಚ್ಚುತ್ತಿದ್ದು, ಸಾರ್ವಜನಿಕರು ವಿಶೇಷವಾಗಿ ಸರಕಾರಿ ನೌಕರರು, ಅವರ ಕುಟುಂದವರು ಮತ್ತು ಪಿಂಚಣಿದಾರರು ಜಾಗೃತರಾಗಬೇಕೆಂದು ಜಿಲ್ಲಾಧಿಕಾರಿ ದಿವ್ಯ ಪ್ರಭು ಅವರು ಹೇಳಿದರು. ಅವರು ಜಿಲ್ಲಾ ಪಂಚಾಯತ ಸಭಾಂಗಣದಲ್ಲಿ ಬಾಂಬೆ ಸೆಬಿ (SEBI)ಯಿಂದ ಆಯೋಜಿಸಿದ್ದ ಪ್ರಾದೇಶಿಕ ಹೂಡಿಕೆದಾರರ ಜಾಗೃತಿ ಮತ್ತು ಆನ್ಲೈನ್ ಆರ್ಥಿಕ ವಂಚನೆ, ಸೈಬರ್ ಕ್ರೈಮಗಳ ಬಗ್ಗೆ ಸರಕಾರಿ ನೌಕರರಿಗೆ ಅರಿವು ಮೂಡಿಸುವ ಕಾರ್ಯಕ್ರಮಕ್ಕೆ ಚಾಲನೆ ನೀಡಿ, ಮಾತನಾಡಿದರು. ನಿವೃತ್ತಿ ನಂತರ ಆರ್ಥಿಕ ಅನುಕೂಲತೆಗಳ ಇರಬೇಕು. ನೌಕರರು ಸೇವೆಯಲ್ಲಿದ್ದಾಗ ನಿಯಮಿತವಾಗಿ ಮತ್ತು ಸುರಕ್ಷಿತ ಕ್ಷೇತ್ರಗಳಲ್ಲಿ ಉಳಿತಾಯ ಮಾಡಬೇಕು. ಒಬ್ಬ ಹೂಡಿಕೆದಾರನಾಗಿ ಎನು ಮಾಡಬೇಕು ಮತ್ತು ಎನು ಮಾಡಬಾರದು ಎಂಬುದನ್ನು ತಿಳಿದಿರಬೇಕು. ಲಾಭದ ಆಸೆಯ ಮಾತುಗಳಿಗೆ ಮರುಳಾಗಬಾರದು. ಪ್ರತಿ ಸಂದರ್ಭದಲ್ಲಿಯೂ ಪರಿಶೀಲಿಸಿ, ಹೂಡಿಕೆಗೆ ಮುಂದುವರಿಯಬೇಕು ಎಂದು ಅವರು ಎಚ್ಚರಿಸಿದರು. ಹೂಡಿಕೆದಾರರಿಗೆ ಸುರಕ್ಷಿತ ಹೂಡಿಕೆ ಕ್ರಮಗಳು, ಹೂಡಿಕೆ ಮಾಡುವಾಗ ಪಾಲಿಸಬೇಕಾದ ನಿಯಮಗಳು ಮತ್ತು ವಂಚನೆಗಳಿಂದ ದೂರವಿರುವ ವಿಧಾನಗಳ ಬಗ್ಗೆ ಸರಕಾರಿ ನೌಕರರಿಗೆ ಮತ್ತು ವಿವಿಧ…
ಇ-ಪೌತಿ ಖಾತೆ ಬದಲಾವಣೆಯು ನಡೆಯುತ್ತಿದ್ದು, ಅದರಲ್ಲಿ ವಂಶವೃಕ್ಷ ಮಾಡುವ ಸಂದರ್ಭದಲ್ಲಿ ಖಾತೆದಾರರು ಪೌತಿಯಾದ ವಾರಸುದಾರರ ಹೆಸರನ್ನು ಕೈಬಿಟ್ಟು ವಂಶವೃಕ್ಷ ಪ್ರಮಾಣಪತ್ರಕ್ಕೆ ಅರ್ಜಿ ಸಲ್ಲಿಸುತ್ತಿರುವುದು ಕಂಡುಬಂದಿದೆ. ಈಗಾಗಲೇ ವಾರಸುದಾರರ ಹೆಸರನ್ನು ಕೈಬಿಟ್ಟು ವಂಶವೃಕ್ಷ ಕೋರಿ ಸಲ್ಲಿಸಿರುವ ಅರ್ಜಿದಾರರ ವಿರುದ್ಧ ಭಾರತೀಯ ನಾಗರೀಕ ಸುರಕ್ಷ ಸಂಹಿತ ಕಾಯ್ದೆಯ ಅಡಿಯಲ್ಲಿ ಕ್ರಮ ಕೈಗೊಳ್ಳಲಾಗಿರುತ್ತದೆ. ಇನ್ನು ಮುಂದೆ ಯಾರಾದರೂ ಪೌತಿ ವಾರಸುದಾರರ ಹೆಸರನ್ನು ಕೈಬಿಟ್ಟು ವಂಶವೃಕ್ಷಕ್ಕೆ ಅರ್ಜಿಯನ್ನು ಸಲ್ಲಿಸಿರುವುದು ಹಾಗೂ ಸರ್ಕಾರಕ್ಕೆ ತಪ್ಪು ಮಾಹಿತಿ ನೀಡಿ ದಾಖಲಾತಿಯನ್ನು ಪಡೆಯುವುದು ಕಂಡುಬಂದಲ್ಲಿ ಭಾರತೀಯ ನಾಗರೀಕ ಸುರಕ್ಷಾ ಸಂಹಿತಾ ಕಾಯ್ದೆಯ ಹಾಗೂ ಚಾಲ್ತಿಯಲ್ಲಿರುವ ಇತರೆ ಅಧಿನಿಯಮಗಳ ಅಡಿಯಲ್ಲಿ ಕ್ರಮ ಕೈಗೊಳ್ಳಲಾಗುವುದು ಎಂದು ಶಿವಮೊಗ್ಗ ತಾಲೂಕು ತಹಶೀಲ್ದಾರ್ ರಾಜೀವ್ ವಿ.ಎಸ್. ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.
ಬೆಂಗಳೂರು: ನೀವು ಸಾಮಾಜಿಕ ಜಾಲತಾಣ ಸೇರಿದಂತೆ ವಿವಿಧೆಡೆಗಳಲ್ಲಿ ವೈಯಕ್ತಿಕ ಮಾಹಿತಿ ಹಂಚಿಕೊಳ್ಳುವುದರಿಂದಲೇ ಇಂದು ಡಿಜಿಟಲ್ ಅರೆಸ್ಟ್ ವಂಚನೆ ಪ್ರಕರಣಗಳು ಹೆಚ್ಚಾಗುತ್ತಿವೆ. ಹೀಗಾಗಿ ವೈಯಕ್ತಿಕ ಮಾಹಿತಿಯನ್ನು ಹಂಚಿಕೊಳಅಳೋದು ತಪ್ಪಿಸಿ, ಡಿಜಿಟಲ್ ಅರೆಸ್ಟ್ ನಿಂದ ದೂರಾಗಿ ಎಂಬುದಾಗಿ ಸರ್ಕಾರ ಎಚ್ಚರಿಸಿದೆ. ಈ ಕುರಿತಂತೆ ರಾಜ್ಯ ಸರ್ಕಾರ ಮಾಹಿತಿ ನೀಡಿದ್ದು, ವೈಯಕ್ತಿಕ ಮಾಹಿತಿ ಹಂಚಿಕೊಳ್ಳುವುದಕ್ಕೂ ಮುನ್ನ ಎಚ್ಚರದಿಂದಿರಿ! ಡಿಜಿಟಲ್ ಅರೆಸ್ಟ್ನಂತಹ ವಂಚನೆಗೆ ಬಲಿಯಾಗದಿರಿ ಎಂಬುದಾಗಿ ತಿಳಿಸಿದೆ. ವಂಚಕರು ಸರ್ಕಾರಿ ಅಧಿಕಾರಿಗಳ / ಪೊಲೀಸರ ಸೋಗಿನಲ್ಲಿ ವಾಟ್ಸಾಪ್ ಕರೆ ಮಾಡಿ, ಅಪರಾಧ ಪ್ರಕರಣದಲ್ಲಿ ಬಂಧಿಸುವುದಾಗಿ ಬೆದರಿಸಿ ಹಣ ವಸೂಲಿ ಮಾಡಬಹುದು. ಈ ಬಗ್ಗೆ ಜಾಗರೂಕರಾಗಿರಿ. ಸಂಶಯಾಸ್ಪದ ಕರೆಗಳು ಬಂದಲ್ಲಿ ತಕ್ಷಣವೇ ಸಹಾಯವಾಣಿ ಸಂಖ್ಯೆ 1930 ಅನ್ನು ಸಂಪರ್ಕಿಸಿ ಅಥವಾ ನಿಮ್ಮ ಹತ್ತಿರದ ಪೊಲೀಸ್ ಠಾಣೆಗೂ ಮಾಹಿತಿ ನೀಡಬಹುದು ಎಂದು ತಿಳಿಸಿದೆ. https://twitter.com/KarnatakaVarthe/status/1990395758080922007
ನವದೆಹಲಿ : ದೆಹಲಿಯಲ್ಲಿ ಸೋಮವಾರ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರನ್ನು ಸಿಎಂ ಸಿದ್ದರಾಮಯ್ಯ ಅವರು ಭೇಟಿಯಾಗಿದ್ದು, ರಾಜ್ಯದ ಅಭಿವೃದ್ಧಿ ವಿಚಾರಗಳ ಕುರಿತು ಮಹತ್ವದ ಚರ್ಚೆ ನಡೆಸಿದರು. ರಾಜ್ಯದಲ್ಲಿ ಅತಿವೃಷ್ಟಿಯಿಂದ ಉಂಟಾಗಿರುವ ಬೆಳೆಹಾನಿ, ಕಬ್ಬು ಬೆಳೆಗಾರರ ಸಮಸ್ಯೆ, ನೀರಾವರಿ ಸೇರಿ ಒಟ್ಟು 5 ಪ್ರಮುಖ ವಿಷಯಗಳ ಬಗ್ಗೆ ಅವರು ಪ್ರಧಾನಿಯವರ ಗಮನ ಸೆಳೆದಿದ್ದಾರೆ. ರಾಯಚೂರಿನಲ್ಲಿ ಏಮ್ಸ್ ಸ್ಥಾಪನೆ, ಕಬ್ಬಿನ ಬೆಲೆ ನಿಗದಿ, ₹2,100 ಕೋಟಿ ಪ್ರವಾಹ ಪರಿಹಾರ ಹಾಗೂ ಪ್ರಮುಖ ನೀರಾವರಿ ಯೋಜನೆಗಳಿಗೆ ಸಂಬಂಧಿಸಿದಂತೆ ತೀರುವಳಿಗಳನ್ನು ನೀಡಲು ಮನವಿ ಪತ್ರದಲ್ಲಿ ಒತ್ತಾಯಿಸಿದ್ದಾರೆ. ಮನವಿ ಪತ್ರದ ಪ್ರಮುಖ ಅಂಶಗಳು ಹೀಗಿವೆ; ಪ್ರಮುಖ ನೀರಾವರಿ ಯೋಜನೆಗಳಿಗೆ ಸಂಬಂಧಿಸಿದಂತೆ ರಾಜ್ಯದ ಪ್ರಮುಖ ನೀರಾವರಿ ಹಾಗೂ ಕುಡಿಯುವ ನೀರಿನ ಯೋಜನೆಗಳಿಗೆ ಕೇಂದ್ರದಿಂದ ಬಾಕಿ ರುವ ತೀರುವಳಿಗಳನ್ನು ದೊರಕಿಸಲು ಪ್ರಧಾನಮಂತ್ರಿಗಳು ಮಧ್ಯಪ್ರವೇಶ ಮಾಡಬೇಕು. ಸಮತೋಲನ ಅಣೆಕಟ್ಟು ಯೋಜನೆಗೆ ಸಂಬಂಧಿಸಿದಂತೆ ಬಾಕಿ ಇರುವ ತೀರುವಳಿಗಳನ್ನು ನೀಡುವಂತೆ ಕೇಂದ್ರ ಜಲ ಆಯೋಗಕ್ಕೆ ನಿರ್ದೇಶಿಸಬೇಕು. ಕಳೆದ ಒಂದು ದಶಕದಿಂದ ಕೃಷ್ಣಾ ಜಲ ವಿವಾದ ನ್ಯಾಯಮಂಡಳಿ…
ಬೆಂಗಳೂರು : ನವೆಂಬರ್ 18ರಿಂದ ಬೆಂಗಳೂರು ಅಂತರರಾಷ್ಟ್ರೀಯ ವಸ್ತುಪ್ರದರ್ಶನ ಕೇಂದ್ರದಲ್ಲಿ 3 ದಿನಗಳ ಕಾಲ ಬೆಂಗಳೂರು ತಂತ್ರಜ್ಞಾನ ಶೃಂಗಸಭೆ 2025 ನಡೆಯಲಿದೆ. ಈ ಸಮ್ಮಿಟ್ನಲ್ಲಿ 60 ದೇಶಗಳ ಪ್ರತಿನಿಧಿಗಳು, 10 ಸಾವಿರಕ್ಕೂ ಹೆಚ್ಚು ಯುವ ಅನ್ವೇಷಕರು ಒಟ್ಟುಗೂಡಲಿದ್ದಾರೆ. “FUTURISE” ಎಂಬ ಥೀಮ್ನೊಂದಿಗೆ, ಈ ಜಾಗತಿಕ ವೇದಿಕೆಯು 60+ ದೇಶಗಳಿಂದ 1 ಲಕ್ಷಕ್ಕೂ ಹೆಚ್ಚು ಪ್ರತಿನಿಧಿಗಳು, 600+ ಭಾಷಣಕಾರರು ಮತ್ತು ನಾವೀನ್ಯಕಾರರನ್ನು ಒಟ್ಟುಗೂಡಿಸುತ್ತದೆ. ಭಾರತದ ನಾವೀನ್ಯತೆ ರಾಜಧಾನಿಯಾದ ಬೆಂಗಳೂರಿನಲ್ಲಿ ತಂತ್ರಜ್ಞಾನದ ಭವಿಷ್ಯವನ್ನು ರೂಪಿಸಲು ನಮ್ಮೊಂದಿಗೆ ಸೇರಲು ಉದ್ಯಮದ ಮುಖಂಡರು, ಸಂಶೋಧಕರು, ಉದ್ಯಮಿಗಳು ಮತ್ತು ಹೂಡಿಕೆದಾರರು ಭಾಗಿಯಾಗಲಿದ್ದಾರೆ. https://twitter.com/KarnatakaVarthe/status/1990321096563060897?s=20














