Author: kannadanewsnow57

ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದ 2025-26ರ ಸಾಲಿನ ಜನವರಿ ಆವೃತ್ತಿಗೆ ಯುಜಿಸಿ ಅನುಮೋದಿತ ಶಿಕ್ಷಣಕ್ರಮಗಳ ಪ್ರವೇಶಾತಿಗಾಗಿ ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಬಿ.ಎ, ಬಿ.ಕಾಂ, ಬಿ.ಎಸ್ಸಿ, ಬಿ.ಬಿ.ಎ, ಬಿ.ಸಿ.ಎ, ಬಿ.ಲಿಬ್.ಐ.ಎಸ್ಸಿ, ಬಿ.ಎಸ್.ಡಬ್ಲೂö್ಯ, ಎಂ.ಎ, ಎಂ.ಕಾA, ಎಂ.ಎಸ್ಸಿ, ಎಂ.ಬಿ.ಎ, ಎಂ.ಸಿ.ಎ, ಎಂ.ಎಸ್.ಡಬ್ಲೂö್ಯ, ಎಂ.ಲಿಬ್.ಐ.ಎಸ್ಸಿ, ಪಿಜಿ ಸರ್ಟಿಫಿಕೇಟ್, ಡಿಪ್ಲೋಮಾ ಮತ್ತು ಸರ್ಟಿಫಿಕೇಟ್ ಕೋರ್ಸ್ಗಳಿಗೆ ಬಳ್ಳಾರಿ ಪ್ರಾದೇಶಿಕ ಕೇಂದ್ರದಲ್ಲಿ ಪ್ರವೇಶಾತಿ ಪಡೆಯಲು ಅರ್ಜಿ ಆಹ್ವಾನಿಸಲಾಗಿದೆ. ಬಿಪಿಎಲ್ ಕಾರ್ಡ್ ಹೊಂದಿರುವ ಮಹಿಳಾ ವಿದ್ಯಾರ್ಥಿಗಳಿಗೆ, ಡಿಫೆನ್ಸ್, ಎಕ್ಸ್ ಸರ್ವೀಸ್ ಮನ್ ವಿದ್ಯಾರ್ಥಿಗಳು, ಆಟೋ, ಕ್ಯಾಬ್ ಡ್ರೆöÊವರ್ಸ್ ಮಕ್ಕಳಿಗೆ ಬೋಧನಾ ಶುಲ್ಕದಲ್ಲಿ ವಿಶೇಷ ರಿಯಾಯಿತಿ ಇರಲಿದೆ. ಕೋವಿಡ್‌ನಿಂದ ಮೃತಪಟ್ಟ ಪೋಷಕರ ಮಕ್ಕಳಿಗೆ, ದೃಷ್ಠಿಹೀನ ವಿದ್ಯಾರ್ಥಿಗಳಿಗೆ ಹಾಗೂ ಲಿಂಗತ್ವ ಅಲ್ಪಸಂಖ್ಯಾತರಿಗೆ ಪೂರ್ಣಶುಲ್ಕ ವಿನಾಯಿತಿ ಇರಲಿದೆ. ಮಾ.30 ಪ್ರವೇಶಾತಿ ಪಡೆಯಲು ಕೊನೆಯ ದಿನ. ಮಾಹಿತಿಗಾಗಿ ವಿಶ್ವವಿದ್ಯಾನಿಲಯದ ಅಂತರ್ಜಾಲ www.ksoumysuru.ac.in ನಲ್ಲಿ ಎಲ್ಲಾ ವಿವರಗಳನ್ನು ನೀಡಿದೆ. ವಿದ್ಯಾರ್ಥಿಗಳು ಅದರನ್ವಯ ಆನ್‌ಲೈನ್ ಅಡ್ಮಿಷನ್ ಪೋರ್ಟಲ್ ಮೂಲಕ ಪ್ರವೇಶಾತಿ ಮಾಡಿಕೊಳ್ಳಬಹುದಾಗಿದೆ. ಅರ್ಜಿ ಸಲ್ಲಿಸುವಾಗ ತೊಂದರೆಯಾದಲ್ಲಿ ಆನ್-ಲೈನ್ ಸಹಾಯವಾಣಿ…

Read More

ನೀವು ಥೈರಾಯ್ಡ್ ಔಷಧಿಗಳನ್ನು ತೆಗೆದುಕೊಳ್ಳುತ್ತಿದ್ದರೆ, ಜಾಗರೂಕರಾಗಿರಿ. ಥೈರಾಯ್ಡ್ ಔಷಧಿಗಳಲ್ಲಿ ಬಳಸಲಾಗುವ ಕಾರ್ಬಿಮಜೋಲ್ ಎಂಬ ರಾಸಾಯನಿಕದಲ್ಲಿ ಕೆಲವು ಹೊಸ ಅಡ್ಡಪರಿಣಾಮಗಳು ಪತ್ತೆಯಾಗಿವೆ, ಇದು ಆರೋಗ್ಯಕ್ಕೆ ತುಂಬಾ ಅಪಾಯಕಾರಿ. ಈ ಔಷಧಿಯನ್ನು ತೆಗೆದುಕೊಳ್ಳುವುದರಿಂದ ದೇಹದಲ್ಲಿನ ಬಿಳಿ ರಕ್ತ ಕಣಗಳ ಸಂಖ್ಯೆಯನ್ನು ಗಮನಾರ್ಹವಾಗಿ ಕಡಿಮೆ ಮಾಡಬಹುದು, ಗಂಭೀರ ಸೋಂಕುಗಳ ಅಪಾಯವನ್ನು ಹೆಚ್ಚಿಸುತ್ತದೆ. ಬಿಳಿ ರಕ್ತ ಕಣಗಳಲ್ಲಿನ ಈ ಕಡಿತವು ದೇಹವು ವೈರಸ್ಗಳು, ಶಿಲೀಂಧ್ರಗಳು ಅಥವಾ ಬ್ಯಾಕ್ಟೀರಿಯಾಗಳ ವಿರುದ್ಧ ಹೋರಾಡುವ ಸಾಮರ್ಥ್ಯವನ್ನು ಕಡಿಮೆ ಮಾಡುತ್ತದೆ ಮತ್ತು ಕೆಲವೊಮ್ಮೆ ಮಾರಕವಾಗಬಹುದು. ಇದು ಮಾತ್ರವಲ್ಲದೆ, ಸಾಮಾನ್ಯವಾಗಿ ಬಳಸುವ ಪ್ರತಿಜೀವಕ, ಡಾಕ್ಸಿಸೈಕ್ಲಿನ್ ಬಗ್ಗೆಯೂ ಎಚ್ಚರಿಕೆ ನೀಡಲಾಗಿದೆ, ಈ ಔಷಧಿಯನ್ನು ತೆಗೆದುಕೊಳ್ಳುವುದರಿಂದ ಮಾನಸಿಕ ಅಸ್ವಸ್ಥತೆಯ ಅಪಾಯ ಹೆಚ್ಚಾಗುತ್ತದೆ ಎಂದು ಹೇಳುತ್ತದೆ. ಅಂತಹ ಪರಿಸ್ಥಿತಿಯಲ್ಲಿ, ಭಾರತದ ಔಷಧ ನಿಯಂತ್ರಣ ಪ್ರಾಧಿಕಾರ (CDSCO) ಮತ್ತು ಭಾರತದ ಔಷಧ ನಿಯಂತ್ರಕ ಜನರಲ್ (DCGI) ಎಲ್ಲಾ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಿಗೆ ಔಷಧ ಕಂಪನಿಗಳು ಈ ಪ್ರತಿಕೂಲ ಪರಿಣಾಮಗಳನ್ನು ಈ ಔಷಧಿಗಳ ಪ್ರಿಸ್ಕ್ರಿಪ್ಷನ್ ಮಾಹಿತಿ ಮತ್ತು ಪ್ಯಾಕೇಜಿಂಗ್ನಲ್ಲಿ ಕಟ್ಟುನಿಟ್ಟಾದ…

Read More

ಇತ್ತೀಚಿನ ದಿನಗಳಲ್ಲಿ, ಬ್ಯಾಂಕ್ ಖಾತೆ ಇಲ್ಲದೆ ಯಾರೂ ಇರುವುದಿಲ್ಲ. ಆದರೆ ನಿಮ್ಮ ಡೆಬಿಟ್ ಕಾರ್ಡ್ (ಎಟಿಎಂ) ಮತ್ತು ಬ್ಯಾಂಕ್ ಖಾತೆಯು ನಿಮಗೆ ಒಂದು ಪೈಸೆಯನ್ನೂ ಪಾವತಿಸುವ ಅಗತ್ಯವಿಲ್ಲದ ಕೆಲವು ಗುಪ್ತ ಪ್ರಯೋಜನಗಳೊಂದಿಗೆ ಬರುತ್ತದೆ ಎಂದು ನಿಮಗೆ ತಿಳಿದಿದೆಯೇ? ಇವುಗಳಲ್ಲಿ ಒಂದು ಉಚಿತ ವಿಮಾ ರಕ್ಷಣೆ. ಅದು ಹೇಗೆ ಕಾರ್ಯನಿರ್ವಹಿಸುತ್ತದೆ ಮತ್ತು ಅಗತ್ಯವಿದ್ದರೆ ನಿಮ್ಮ ಕುಟುಂಬವು ಅದನ್ನು ಹೇಗೆ ಪಡೆಯಬಹುದು ಎಂಬುದನ್ನು ವಿವರವಾಗಿ ವಿವರಿಸೋಣ. ಡೆಬಿಟ್ ಕಾರ್ಡ್ಗಳಲ್ಲಿ ಲಭ್ಯವಿರುವ ಅಪಘಾತ ವಿಮೆ (ಪಿಎ ಕವರ್) ಬ್ಯಾಂಕ್ ನಿಮಗೆ ಡೆಬಿಟ್ ಕಾರ್ಡ್ (ಎಟಿಎಂ ಕಾರ್ಡ್) ನೀಡಿದ ತಕ್ಷಣ, ನೀವು ವೈಯಕ್ತಿಕ ಅಪಘಾತ ವಿಮೆಗೆ ಅರ್ಹರಾಗುತ್ತೀರಿ. ಈ ಮೊತ್ತವು ರುಪೇ, ವೀಸಾ, ಪ್ಲಾಟಿನಂ ಅಥವಾ ಕ್ಲಾಸಿಕ್ನಂತಹ ಕಾರ್ಡ್ ಪ್ರಕಾರವನ್ನು ಅವಲಂಬಿಸಿರುತ್ತದೆ. ಇದು ಸಾಮಾನ್ಯವಾಗಿ ₹50,000 ರಿಂದ ₹10 ಲಕ್ಷದವರೆಗೆ ಇರುತ್ತದೆ. ಅಪಘಾತದ ಕೊನೆಯ 30 ರಿಂದ 90 ದಿನಗಳ ಮೊದಲು ಕಾರ್ಡ್ ಬಳಸಿ ಕನಿಷ್ಠ ಒಂದು ಯಶಸ್ವಿ ವಹಿವಾಟು (ಎಟಿಎಂ ಅಥವಾ ಆನ್ಲೈನ್) ಮಾಡಿದ್ದರೆ ಮಾತ್ರ…

Read More

ಮದುವೆಯ ಸಂದರ್ಭದಲ್ಲಿ ವಧುವಿನ ಕುಟುಂಬವು ವರನಿಗೆ ಅಥವಾ ವರನ ಕುಟುಂಬಕ್ಕೆ ಹಣ, ಬಂಗಾರ, ಆಸ್ತಿ ಅಥವಾ ಇತರ ವಸ್ತುಗಳನ್ನು ನೀಡುವುದು ಕಾನೂನಿನ ಪ್ರಕಾರ ಅಪರಾಧ. ವರದಕ್ಷಿಣೆ ನಿಯಂತ್ರಣ ಕಾಯ್ದೆ, 1961 ರ ಪರಿಣಾಮಕಾರಿ ಜಾರಿಗೆ ಗೊಳಿಸಲು ಗ್ರಾಮ ಪಂಚಾಯತಿ, ತಾಲ್ಲೂಕು ಪಂಚಾಯತಿ ಹಾಗೂ ಜಿಲ್ಲಾ ಪಂಚಾಯತಿಗಳ ಜವಾಬ್ದಾರಿಗಳನ್ನು ತಿಳಿಯೋಣ. ಮಹಿಳೆಯರ ವಿರುದ್ಧದ ಹಿಂಸಾಚಾರ, ಕಿರುಕುಳ, ಗೃಹ ಹಿಂಸೆ, ಕಾನೂನು ನೆರವು ಹಾಗೂ ತುರ್ತು ಸಹಾಯಕ್ಕಾಗಿ ವನಿತಾ ಸಹಾಯವಾಣಿ 1091 ಗೆ ಸಂಪರ್ಕಿಸಿ. ಗ್ರಾಮ ಪಂಚಾಯತಿ ಅಭಿವೃದ್ಧಿ ಅಧಿಕಾರಿಗಳು ಕೈಗೊಳ್ಳಬೇಕಾದ ಕ್ರಮಗಳು ಗ್ರಾಮ ಪಂಚಾಯತಿಗಳ ವ್ಯಾಪ್ತಿಯಲ್ಲಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯಿಂದ ನಿಯೋಜಿಸಲಾದ ವರದಕ್ಷಿಣೆ ನಿಷೇಧ ಉಸ್ತುವಾರಿ ಅಧಿಕಾರಿಗಳ ಹೆಸರು, ಹುದ್ದೆ, ಕಚೇರಿ ವಿಳಾಸ ಮತ್ತು ದೂರವಾಣಿ ಸಂಖ್ಯೆಯನ್ನು ಸಾರ್ವಜನಿಕ ಸ್ಥಳಗಳಲ್ಲಿ ಪ್ರಕಟಿಸುವುದು. ಸ್ವಸಹಾಯ ಸಂಘದ ಮಹಿಳೆಯರು, ಸಂಘ/ ಸಂಸ್ಥೆ ಹಾಗೂ ಕೂಲಿ/ಕಾರ್ಮಿಕರ ಸಂಘ ಹಾಗೂ ಸಮುದಾಯದಲ್ಲಿ ವರದಕ್ಷಿಣೆ ನಿಷೇಧ ಕುರಿತು ಅರಿವು ಮೂಡಿಸುವುದು. ಚುನಾಯಿತ ಪ್ರತಿನಿಧಿಗಳು, ಜಿಪಿಎಲ್ಎಫ್ ಮತ್ತು ಸ್ವಸಹಾಯ…

Read More

ನವದೆಹಲಿ : ರಾಷ್ಟ್ರೀಯ ಶೈಕ್ಷಣಿಕ ಸಂಶೋಧನೆ ಮತ್ತು ತರಬೇತಿ ಮಂಡಳಿ (NCERT) ‘ಇ-ಮ್ಯಾಜಿಕ್ ಬಾಕ್ಸ್’ ಅಪ್ಲಿಕೇಶನ್ ಎಂಬ ವಿಶಿಷ್ಟ ಡಿಜಿಟಲ್ ಉಪಕ್ರಮವನ್ನು ಪ್ರಾರಂಭಿಸಿದೆ. ಇಂದಿನ ಡಿಜಿಟಲ್ ಯುಗದಲ್ಲಿ, ಮಕ್ಕಳ ಶಿಕ್ಷಣವು ಇನ್ನು ಮುಂದೆ ಪುಸ್ತಕಗಳಿಗೆ ಸೀಮಿತವಾಗಿಲ್ಲ. ಬದಲಾಗುತ್ತಿರುವ ತಂತ್ರಜ್ಞಾನದೊಂದಿಗೆ, ಶೈಕ್ಷಣಿಕ ವಿಧಾನಗಳು ಸಹ ಬದಲಾಗುತ್ತಿವೆ. ವಿಶೇಷವಾಗಿ ಚಿಕ್ಕ ಮಕ್ಕಳಿಗೆ, ಅವರು ತಮ್ಮ ಆರಂಭಿಕ ಶಿಕ್ಷಣದ ಸಮಯದಲ್ಲಿ ಸರಿಯಾದ ಮಾರ್ಗದರ್ಶನ ಮತ್ತು ಆಕರ್ಷಕ ವಿಷಯವನ್ನು ಪಡೆದರೆ, ಅವರ ಕಲಿಕಾ ಸಾಮರ್ಥ್ಯವು ಘಾತೀಯವಾಗಿ ಹೆಚ್ಚಾಗುತ್ತದೆ. ಈ ದೃಷ್ಟಿಕೋನದೊಂದಿಗೆ, ರಾಷ್ಟ್ರೀಯ ಶೈಕ್ಷಣಿಕ ಸಂಶೋಧನೆ ಮತ್ತು ತರಬೇತಿ ಮಂಡಳಿ (NCERT) ‘ಇ-ಮ್ಯಾಜಿಕ್ ಬಾಕ್ಸ್’ ಅಪ್ಲಿಕೇಶನ್ ಎಂಬ ವಿಶಿಷ್ಟ ಡಿಜಿಟಲ್ ಉಪಕ್ರಮವನ್ನು ಪ್ರಾರಂಭಿಸಿದೆ. ಈ ಅಪ್ಲಿಕೇಶನ್ ಕೃತಕ ಬುದ್ಧಿಮತ್ತೆ (AI) ತಂತ್ರಜ್ಞಾನದಿಂದ ನಡೆಸಲ್ಪಡುತ್ತದೆ ಮತ್ತು ಮಕ್ಕಳು, ಪೋಷಕರು ಮತ್ತು ಶಿಕ್ಷಕರನ್ನು ಗಮನದಲ್ಲಿಟ್ಟುಕೊಂಡು ಅಭಿವೃದ್ಧಿಪಡಿಸಲಾಗಿದೆ. ಮಕ್ಕಳು ಆಟದ ಮೂಲಕ ಕಲಿಯಲು ಮತ್ತು ವಯಸ್ಕರು ತಮ್ಮ ಕಲಿಕಾ ಪ್ರಯಾಣದಲ್ಲಿ ಸಕ್ರಿಯವಾಗಿ ಭಾಗವಹಿಸಲು ಅನುವು ಮಾಡಿಕೊಡುವುದು ಇದರ ಗುರಿಯಾಗಿದೆ. ಇ-ಮ್ಯಾಜಿಕ್ ಬಾಕ್ಸ್ ಅಪ್ಲಿಕೇಶನ್…

Read More

ಹಿಂದುಳಿದ ವರ್ಗಗಳ ಮೀಸಲಾತಿ ಪಟ್ಟಿಯ ಪ್ರವರ್ಗ-3ಬಿ ನಲ್ಲಿ ವೀರಶೈವ ಲಿಂಗಾಯತ ಸಮುದಾಯಕ್ಕೆ ಸೇರಿದ ಜನರ ಅಭಿವೃದ್ದಿಗಾಗಿ 2025-26ನೇ ಸಾಲಿನಲ್ಲಿ ಅನುಷ್ಠಾನಗೊಳಿಸುತ್ತಿರುವ ಆಹಾರ ವಾಹಿನಿ (ಆಹಾರ ಕಿಯೋಸ್ಕ್) ಯೋಜನೆಯಲ್ಲಿ ಸೌಲಭ್ಯಕ್ಕಾಗಿ ಆನ್ಲೈಸನ್ ಮೂಲಕ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಆಹಾರ ವಾಹಿನಿ (ಆಹಾರಕಿಯೋಸ್ಕ್) ಯೋಜನೆಯಡಿ ಸ್ಥಳಾಂತರಿಸಬಹುದಾದ ತಿಂಡಿಮಳಿಗೆಗಳನ್ನು ನಾಲ್ಕು ಚಕ್ರಗಳ ಇಗಿ-ಗೂಡ್ಸ್ ವಾಹನಗಳನ್ನು ಅಗತ್ಯಕ್ಕೆ ತಕ್ಕಂತೆ ನವೀಕರಿಸಿ ಫಲಾನುಭವಿಗಳಿಗೆ ವಿತರಿಸುವಯೋಜನೆಯಾಗಿದೆ. ನಿಗಮದಿಂದ ವಾಹನ ಖರೀದಿಗೆ ರೂ.3 ಲಕ್ಷಗಳ ಸಹಾಯಧನವನ್ನು ಬಿಡುಗಡೆ ಮಾಡಲಾಗುವುದು ಉಳಿಕೆ ಮೊತ್ತವನ್ನು ಬ್ಯಾಂಕುಗಳು, ಹಣಕಾಸು ಸಂಸ್ಥೆಗಳಿಂದ ಸಾಲ ಪಡೆಯಬಹುದಾಗಿರುತ್ತದೆ. ನಗರ ಪ್ರದೇಶದ ವಿಧಾನ ಸಭಾಕ್ಷೇತ್ರಗಳಾದ ಧಾರವಾಡ, ನವಲಗುಂದ, ಕುಂದಗೋಳ, ಕಲಘಟಗಿ, ಹುಬ್ಬಳ್ಳಿ-ಧಾ ಪೂರ್ವ, ಹುಬ್ಬಳ್ಳಿ-ಧಾರವಾಡ ಪಶ್ಚಿಮ, ಹುಬ್ಬಳ್ಳಿ-ಧಾರವಾಡ ಸೆಂಟ್ರಲ್ಗಕಳಲ್ಲಿ ಯೋಜನೆಯ ಸೌಲಭ್ಯ ಪಡೆಯಬಯಸುವವರು ವೀರಶೈವ ಲಿಂಗಾಯತ ಸಮುದಾಯಕ್ಕೆ ಸೇರಿದವರಾಗಿರಬೇಕು. ವೀರಶೈವ ಲಿಂಗಾಯತ ಸಮುದಾಯದ ಅರ್ಜಿದಾರರು ಮಾರ್ಚ 06, 2026 ರೊಳಗಾಗಿ ಸೇವಾಸಿಂಧು ಪೆÇೀರ್ಟಲ್ ಗ್ರಾಮಒನ್, ಕರ್ನಾಟಕ ಒನ್ಗುಳ ಮೂಲಕ ಅರ್ಜಿ ಸಲ್ಲಿಸಬೇಕು. ಹೆಚ್ಚಿನ ಮಾಹಿತಿಗಾಗಿ ನಿಗಮದ ಜಾಲತಾಣ https://kvldcl.karnataka.gov.in ಅಥವಾ ದೂರವಾಣಿ ಸಂಖ್ಯೆ:…

Read More

ಧಾರವಾಡ : ಬೇಸಿಗೆ ಅವಧಿ ಆರಂಭ ಆಗುತ್ತಿರುವದರಿಂದ ಜಿಲ್ಲೆಯಲ್ಲಿ ಕೃಷಿ ಚಟುವಟಿಕೆಗಳಿಗೆ ತೊಂದರೆ ಆಗದಂತೆ ಹೆಸ್ಕಾಂ ಸಂಸ್ಥೆಯವರು ಕ್ರಮವಹಿಸಬೇಕು. ಸರಕಾರದ ನಿಯಮದಂತೆ ಕೃಷಿ ಪಂಪ್ಸೆಟ್ಗಳಿಗೆ ಪ್ರತಿದಿನ 7 ಗಂಟೆ ವಿದ್ಯುತ್ ಪೂರೈಸಿ, ರೈತರಿಗೆ ಅನುಕೂಲವಾಗುವಂತೆ ಆದಷ್ಟು ಹಗಲು ಹೊತ್ತಿನಲ್ಲಿ ಅಥವಾ ಸಂಜೆ ಹೊತ್ತಿನಲ್ಲಿ ವಿದ್ಯುತ್ ಪೂರೈಸಬೇಕು ಎಂದು ಜಿಲ್ಲಾ ಉಸ್ತುವಾರಿ ಸಚಿವ ಸಂತೋಷ ಲಾಡ್ ಅವರು ಹೇಳಿದರು. ಜಿಲ್ಲಾಧಿಕಾರಿಗಳ ಕಚೇರಿ ನೂತನ ಸಭಾಂಗಣದಲ್ಲಿ ಹೆಸ್ಕಾಂ ಸಂಸ್ಥೆಯ ವಿವಿಧ ಕಾಮಗಾರಿಗಳ ಪ್ರಗತಿ ಹಾಗೂ ಬೇಸಿಗೆ ಅವಧಿಯ ವಿದ್ಯುತ್ ಪೂರೈಕೆ ಸಿದ್ದತೆ ಕುರಿತು ಹೆಸ್ಕಾಂ ಅಧಿಕಾರಿಗಳೊಂದಿಗೆ ಸಭೆ ಜರುಗುಸಿ, ಮಾತನಾಡಿದರು ಅವರು, ಜಿಲ್ಲೆಯಲ್ಲಿ 67 ಕೃಷಿ ವಿದ್ಯುತ್ ಫೀಡರ್ಗಳಿವೆ. ಇದರಲ್ಲಿ 41 ಫೀಡರ್ಗಳಿಂದ ಬೆಳಿಗ್ಗೆ 7 ರಿಂದ ಸಂಜೆ 4 ಗಂಟೆಯೊಳಗೆ, 12 ಫೀಡರ್ಗಳಿಗೆ ಸಂಜೆ 6 ರಿಂದ ರಾತ್ರಿ 9 ಗಂಟೆ ಹಾಗೂ ರಾತ್ರಿ 10 ರಿಂದ ಮಧ್ಯರಾತ್ರಿ 1 ಗಂಟೆಯೊಳಗೆ ಮತ್ತು 8 ಫೀಡರ್ಗಳಿಂದ ಬೆಳಿಗ್ಗೆ 6 ರಿಂದ 10 ಗಂಟೆವರೆಗೆ…

Read More

ಪ್ರಯಾಗರಾಜ್ : ಲಿವ್ ಇನ್ ಸಂಬಂಧದಲ್ಲಿ ವಾಸಿಸುವ ಜೋಡಿಗೆ ಜೀವನಾಂಶದ ಕುರಿತು ಅಲಹಾಬಾದ್ ಹೈಕೋರ್ಟ್ ಮಹತ್ವದ ತೀರ್ಪು ನೀಡಿದೆ. ಪುರುಷ ಮತ್ತು ಮಹಿಳೆ ದೀರ್ಘಕಾಲದಿಂದ ಪತಿ ಮತ್ತು ಪತ್ನಿಯಾಗಿ ಒಟ್ಟಿಗೆ ವಾಸಿಸುತ್ತಿದ್ದರೆ, ಅಪರಾಧ ಪ್ರಕ್ರಿಯಾ ಸಂಹಿತೆಯ ಸೆಕ್ಷನ್ 125 ರ ಅಡಿಯಲ್ಲಿ ಮಹಿಳೆ ಬೇರ್ಪಟ್ಟರೆ ಜೀವನಾಂಶಕ್ಕೆ ಅರ್ಹರಾಗಿರುತ್ತಾರೆ ಎಂದು ಹೈಕೋರ್ಟ್ ಹೇಳಿದೆ. ವಿವಾಹದ ಔಪಚಾರಿಕ ಅಥವಾ “ಕಟ್ಟುನಿಟ್ಟಾದ” ಕಾನೂನು ಪುರಾವೆ ಲಭ್ಯವಿಲ್ಲದಿದ್ದರೂ ಸಹ, ಹೆಂಡತಿಗೆ ಜೀವನಾಂಶಕ್ಕೆ ಅರ್ಹತೆ ಇರುತ್ತದೆ. ಮುನೀಶ್ ಕುಮಾರ್ ಸಲ್ಲಿಸಿದ ಕ್ರಿಮಿನಲ್ ಪರಿಷ್ಕರಣಾ ಅರ್ಜಿಯನ್ನು ವಜಾಗೊಳಿಸುತ್ತಾ ನ್ಯಾಯಮೂರ್ತಿ ಮದನ್ ಪಾಲ್ ಸಿಂಗ್ ಅವರ ಏಕ ಪೀಠವು ಈ ಆದೇಶವನ್ನು ಹೊರಡಿಸಿತು. ಪತಿಯ ಮಾಸಿಕ ಆದಾಯ ₹70,000 ಮತ್ತು ನಾಲ್ಕನೇ ಒಂದು ಭಾಗ ₹17,500 ಎಂದು ನ್ಯಾಯಾಲಯ ಹೇಳಿದೆ. ಈ ಪ್ರಕರಣದಲ್ಲಿ, ಮೊರಾದಾಬಾದ್‌ನ ಕುಟುಂಬ ನ್ಯಾಯಾಲಯವು ₹18,000 ಜೀವನಾಂಶವನ್ನು ಆದೇಶಿಸಿದೆ, ಇದು ಅತಿಯಾದದ್ದಲ್ಲ ಆದರೆ ಸೂಕ್ತವಾಗಿದೆ. ಪ್ರಕರಣದ ಹಿನ್ನೆಲೆ ವಾಸ್ತವವಾಗಿ, ಕುಟುಂಬ ನ್ಯಾಯಾಲಯವು ಮಹಿಳೆಗೆ ₹12,000 ಮತ್ತು ಮಗನಿಗೆ ₹6,000,…

Read More

ರಾಜ್ಯ ಸರ್ಕಾರವು ಮಹಿಳೆಯರಿಗೆ ಸಿಹಿಸುದ್ದಿ ನೀಡಿದ್ದು, ಮುಂದಿನ 2-3 ದಿನಗಳಲ್ಲಿ ಗೃಹಲಕ್ಷ್ಮೀ ಯೋಜನೆಯ ಕಂತಿನ ಹಣ ಖಾತೆಗೆ ಜಮೆ ಆಗಲಿದೆ. ಗೃಹಲಕ್ಷ್ಮೀ ಯೋಜನೆಯ ಫಲಾನುಭವಿಗಳಿಗೆ ಗೃಹಲಕ್ಷ್ಮೀ DBT ಪ್ರಕ್ರಿಯೆ ಚಾಲನೆ ನೀಡಲಾಗಿದೆ. ಗೃಹಲಕ್ಷ್ಮೀ ಯೋಜನೆಯಡಿಯಲ್ಲಿ 2025-26ನೇ ಸಾಲಿನ ಫಲಾನುಭವಿಗಳಿಗೆ ನಾಲ್ಕನೇ ಅನುದಾನದಲ್ಲಿ ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳು ರಾಯಚೂರು ರವರ ಮೂಲಕ DBT ಪ್ರಕ್ರಿಯೆ ಚಾಲ್ತಿ ಮಾಡಲಾಗಿದ್ದು, ಮುಂದಿನ ಎರಡು ಮೂರು ದಿನಗಳಲ್ಲಿ ಫಲಾನುಭವಿಗಳ ಖಾತೆಗೆ ಜಮಾವಾಗುತ್ತದೆ ಎಂದು ಜಿಲ್ಲಾ ಮಟ್ಟದ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರ ಸಮಿತಿ ಅಧ್ಯಕ್ಷ ಪಾಮಯ್ಯ ಮುರಾರಿ ತಿಳಿಸಿರುತ್ತಾರೆ.

Read More

ಪಕ್ಕದ ಆಂಧ್ರ ಪ್ರದೇಶದ ಚಿತ್ತೂರು ಜಿಲ್ಲೆಯಲ್ಲಿ ಕೋಳಿ ಶೀತ ಜ್ವರ (ಹಕ್ಕಿ ಜ್ವರ) ಪ್ರಕರಣ ಧೃಡಪಟ್ಟಿರುವ ಹಿನ್ನೆಲೆಯಲ್ಲಿ, ಕೊಪ್ಪಳ ಜಿಲ್ಲೆಯಲ್ಲಿ ಮುಂಜಾಗ್ರತಾ ಕ್ರಮಗಳನ್ನು ಕಟ್ಟುನಿಟ್ಟಾಗಿ ಜಾರಿಗೊಳಿಸಿ. ಕೋಳಿ ಫಾರಂ ಮಾಲೀಕರು ಹಾಗೂ ಸಂಬಂಧಿಸಿದ ಅಧಿಕಾರಿಗಳು ಎಚ್ಚರಿಕೆಯಿಂದ ಕಾರ್ಯನಿರ್ವಹಿಸಿ ಎಂದು ಜಿಲ್ಲಾಧಿಕಾರಿ ಸುರೇಶ ಬಿ. ಇಟ್ನಾಳ್ ಅವರು ಸೂಚನೆ ನೀಡಿದರು. ಶುಕ್ರವಾರದಂದು ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಪಶುಪಾಲನಾ ಮತ್ತು ಪಶುವೈದ್ಯಕೀಯ ಸೇವಾ ಇಲಾಖೆಯಿಂದ ಕೋಳಿ ಶೀತ ಜ್ವರದ ರೋಗೋದ್ರೇಕದ ಕುರಿತು ಮುಂಜಾಗ್ರತೆ ವಹಿಸುವ ಕುರಿತು ಆಯೋಜಿಸಲಾಗಿದ್ದ ಜಿಲ್ಲಾ ಮಟ್ಟದ ಪ್ರಾಣಿ ಜನ್ಯ ರೋಗಗಳ ತುರ್ತು ನಿರ್ವಹಣಾ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಕೊಪ್ಪಳ ಜಿಲ್ಲೆಯಲ್ಲಿ ಒಟ್ಟು 25 ಮೊಟ್ಟೆ ಉತ್ಪಾದನಾ ಕೋಳಿ ಫಾರಂಗಳು ಹಾಗೂ 14 ಮಾಂಸ ಉತ್ಪಾದನಾ ಕೋಳಿ ಫಾರಂಗಳು ಕಾರ್ಯನಿರ್ವಹಿಸುತ್ತಿದ್ದು, ಕೋಳಿ ಶೀತ ಜ್ವರ ಹರಡುವಿಕೆ ತಡೆಯಲು ತೀವ್ರ ನಿಗಾವಹಿಸುವುದು ಅತ್ಯಗತ್ಯವಾಗಿದೆ. ಪಕ್ಕದ ರಾಜ್ಯದಲ್ಲಿ ರೋಗೋದ್ರೇಕ ಕಂಡುಬಂದಿರುವುದರಿಂದ, ಜಿಲ್ಲೆಯ ಪಶುವೈದ್ಯಕೀಯ ಇಲಾಖೆ, ಸ್ಥಳೀಯ ಸಂಸ್ಥೆಗಳು ಹಾಗೂ ಕೋಳಿ…

Read More