Subscribe to Updates
Get the latest creative news from FooBar about art, design and business.
Author: kannadanewsnow57
ಬೆಂಗಳೂರು : ಪರಿಶಿಷ್ಟ ಜಾತಿ ಒಳ ಮೀಸಲು ಕಲ್ಪಿಸುವ ಕುರಿತು ಶಿಫಾರಸು ಮಾಡಲು ಸರ್ಕಾರ ರಚಿಸಿರುವ ನ್ಯಾ| ನಾಗಮೋಹನ್ ದಾಸ್ ಆಯೋಗ ಇಂದಿನಿಂದ ಸಮೀಕ್ಷೆಗೆ ಚಾಲನೆ ನೀಡಲಿದ್ದು, ಗಣತಿದಾರರು ಪ್ರತಿ ಮನೆ ಮನೆಗೂ ಆಗಮಿಸಿ ಸಮೀಕ್ಷೆ ನಡೆಸಲಿದ್ದಾರೆ. ಗಣತಿದಾರರು ಕೇವಲ ಪರಿಶಿಷ್ಟ ಜಾತಿಗೆ ಸೇರಿದವರ ಮನೆಗೆ ಮಾತ್ರವಲ್ಲದೆ ಎಲ್ಲ ಮನೆಗಳಿಗೂ ಭೇಟಿ ನೀಡಲಿದ್ದಾರೆ. ಈ ವೇಳೆ ಎಸ್ಸಿ ಅಲ್ಲದ ಕುಟುಂಬಗಳಿಂದ ಮನೆ ಸಂಖ್ಯೆ ಆ್ಯಪ್ ನಲ್ಲಿ ನಮೂದಿಸಿ ಕುಟುಂಬ ಸದಸ್ಯರ ಸಂಖ್ಯೆ ದಾಖಲಿಸಲಿದ್ದಾರೆ. ಮತ್ತಷ್ಟು ಮಾಹಿತಿ: ಸಮೀಕ್ಷೆದಾರರ ಪ್ರಾಮುಖ್ಯತೆ: ಸಮೀಕ್ಷೆದಾರನಾಗಿ ಆಯ್ಕೆಗೊಂಡಿರುವುದು ಶಿಕ್ಷಕರು ಸಮೀಕ್ಷೆದಾರರಾಗಿ ಮಹತ್ವದ ಕರ್ತವ್ಯ ನಿರ್ವಹಿಸಬೇಕಿದೆ. ಸಮೀಕ್ಷೆಯಲ್ಲಿ ಶಿಕ್ಷಕರ ಪಾತ್ರ ಮಹತ್ವದ್ದಾಗಿವೆ. ಸಮೀಕ್ಷೆದಾರರು ನಿಷ್ಠೆಯಿಂದ ಸಕ್ರಿಯವಾಗಿ ಭಾಗವಹಿಸಿ ಸಮೀಕ್ಷೆ ಪೂರ್ಣಗೊಳಿಸಬೇಕಿದೆ. ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆ ಕೈಗೊಳ್ಳುವ ಮೊದಲು ತಮಗೆ ವಹಿಸಿದ ಪ್ರದೇಶದಲ್ಲಿನ ಹಿರಿಯ ಮತ್ತು ಪ್ರಮುಖ ವ್ಯಕ್ತಿಗಳನ್ನು ಭೇಟಿ ಮಾಡಿ ಭೇಟಿಯ ಉದ್ದೇಶವನ್ನು ನಿವಾಸಿಗಳಿಗೆ ವಿವರಿಸುವ ಮೂಲಕ ಅವರೊಂದಿಗೆ ನಿಕಟ ಸೌಹಾರ್ದತೆ ಹೊಂದಬೇಕು. ಸಮೀಕ್ಷೆ ಕಾರ್ಯಕ್ಕೆ ಹೋಗುವ…
ಬೆಂಗಳೂರು: ರಾಜ್ಯದಲ್ಲಿ ಹೊಸ ಪಡಿತರ ಚೀಟಿ ಪಡೆಯಲು ಆಹಾರ ನಾಗರೀಕ ಸರಬರಾಜು ಇಲಾಖೆ ಅರ್ಜಿ ಆಹ್ವಾನಿಸಿದೆ. ಎಪಿಎಲ್ ಮತ್ತು ಬಿಪಿಲ್ ಕಾರ್ಡ್ ಗಳಿಗೆ ಅರ್ಜಿ ಆಹ್ವಾನಿಸಲಾಗಿದ್ದು ಮೇ.5 ರ ಇಂದು ಮಧ್ಯಾಹ್ನ 1 ರಿಂದ 3 ರ ವರೆಗು, ahara.kar.nic.inನಲ್ಲಿ ಅಥವಾ ಸೇವಾಸಿಂಧು ಪೋರ್ಟಲ್ ಮೂಲಕ ಅರ್ಜಿ ಸಲ್ಲಿಸ ಬಹುದಾಗಿದೆ. ವೆಬ್ಸೈಟ್ ahara.kar.nic.in ರಲ್ಲಿ ಅರ್ಜಿ ಸಲ್ಲಿಸಲು ಅವಕಾಶ ನೀಡಿದ್ದು, ಅರ್ಹರು ಮೊಬೈಲ್, ಕಂಪ್ಯೂಟರ್, ಸೇವಾಸಿಂಧು ಪೋರ್ಟಲ್ಗಳಲ್ಲಿ ಹೊಸ ಪಡಿತರ ಚೀಟಿಗಳಿಗೆ ಅರ್ಜಿ ಸಲ್ಲಿಸಬಹುದಾಗಿದೆ. ಬಿಪಿಎಲ್ ಕಾರ್ಡ್ ಅರ್ಜಿಗೆ ಸಮಯ ನಿಗದಿ ಮಾಡಿದ್ದು, ಸಮಯ ಮಧ್ಯಾಹ್ನ 1 ರಿಂದ 3 ರ ವರೆಗೆ ಮಾತ್ರ ಅರ್ಜಿ ಸಲ್ಲಿಸಬಹುದಾಗಿದೆ. APL ಹಾಗೂ BPL ಪಡಿತರ ಚೀಟಿಗೆ ಅರ್ಜಿ ಆಹ್ವಾನಿಸಲಾಗಿದ್ದು, 01-05-2025 ರಿಂದ 05-05-2025 ರವರೆಗೆ ಸಮಯ ಮಧ್ಯಾಹ್ನ 1 ರಿಂದ 3 ರ ವರೆಗೆ ಮಾತ್ರ ಅರ್ಜಿ ಸಲ್ಲಿಸಲು ಅವಕಾಶ ನೀಡಲಾಗಿದೆ. ಹೊಸ ಬಿಪಿಎಲ್, ಎಪಿಎಲ್ ಕಾರ್ಡ್ ಗಾಗಿ ಅರ್ಜಿ ಸಲ್ಲಿಸಲು ಅರ್ಹತೆ…
ಬೆಂಗಳೂರು : ಬೆಂಗಳೂರು ಸೇರಿದಂತೆ ರಾಜ್ಯದ ಹಲವು ಜಿಲ್ಲೆಗಳಲ್ಲಿ ಮುಂದಿನ ಮೂರು ದಿನ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಇಂದಿನಿಂದ ಮೂರು ದಿನ ದಕ್ಷಿಣ ಕನ್ನಡ, ಬೆಳಗಾವಿ, ಧಾರವಾಡ, ಗದಗ, ಕೊಪ್ಪಳ, ರಾಯಚೂರು, , ಚಿಕ್ಕಮಗಳೂರು, ಹಾಸನ, ಕೊಡಗು, ಮಂಡ್ಯ, ಮೈಸೂರು, ತುಮಕೂರು, ವಿಜಯನಗರ, ಯಾದಗಿರಿ, ಬಳ್ಳಾರಿ, , ಚಾಮರಾಜನಗರದಲ್ಲಿ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಬೆಂಗಳೂರು ಮೈಸೂರು, ಚಿಕ್ಕಮಗಳೂರು, ಹಾಸನ ಹಾಗೂ ಕೊಡಗು ಜಿಲ್ಲೆಗಳಲ್ಲಿ ಮುಂದಿನ 24 ಗಂಟೆಯಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದೆ. ದಕ್ಷಿಣ ಒಳನಾಡಿನ ಜಿಲ್ಲೆಗಳಲ್ಲಿ ಮಳೆಯಾಗುವ ಸಾಧ್ಯತೆ ಇದೆ. ಉತ್ತರ ಒಳನಾಡಿನಲ್ಲಿ ಮೊದಲ 3-4 ದಿನ ಕಲಬುರಗಿ, ವಿಜಯಪುರ, ರಾಯಚೂರು, ಗದಗ, ಯಾದಗಿರಿ, ಕೊಪ್ಪಳ, ಹಾವೇರಿ, ಧಾರವಾಡದಲ್ಲಿ ಮಳೆಯಾಗುವ ಸಾಧ್ಯತೆ ಇದೆ ಹವಾಮಾನ ಇಲಾಖೆ ಮಾಹಿತಿ ನೀಡಿದೆ.
ಬೆಂಗಳೂರು : ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಗಳನ್ನು ಪ್ರೌಢಶಾಲೆಗಳನ್ನಾಗಿ ಉನ್ನತೀಕರಿಸುವ ಕುರಿತು ರಾಜ್ಯ ಸರ್ಕಾರವು ಮಹತ್ವದ ಆದೇಶ ಹೊರಡಿಸಿದೆ. ರಾಜ್ಯ ಸರ್ಕಾರದ ಆದೇಶದಲ್ಲಿ ಏನಿದೆ? ಮೇಲೆ ಓದಲಾದ (1)ರ ಏಕಕಡತದಲ್ಲಿ ಕ್ಷೇತ್ರ ಶಿಕ್ಷಣಾಧಿಕಾರಿಗಳು ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಸುಲ್ತಾನಪುರ ಹುಕ್ಕೇರಿ ತಾಲ್ಲೂಕು, ಶಾಲೆಯ ಉನ್ನತೀಕರಿಸಲು ಪ್ರಸ್ತಾವನೆ ಸಲ್ಲಿಸಿದ್ದು ಸದರಿ ಗ್ರಾಮದಿಂದ 5 ಕಿಮೀ ಒಳಗಾಗಿ ಯಾವುದೇ ಪ್ರೌಢ ಶಾಲೆಗಳು ಇರುವುದಿಲ್ಲ. ಸದರಿ ಗ್ರಾಮದಿಂದ ಸಮೀಪದ ಸರಕಾರಿ ಪ್ರೌಢ ಶಾಲೆಗಳಾದ 1) ಸರಕಾರಿ ಪ್ರೌಢ ಶಾಲೆ ಅವರಗೋಳ ರಸ್ತೆ ಮುಖಾಂತರ ಶಾಲೆಗೆ ತಲುಪಲು 7 ಕಿ ಮೀ ದೂರ ಇರುತ್ತದೆ. 2) ಸರಕಾರಿ ಪ್ರೌಢ ರಾ ಶಿರಗಾಂವ ರಸ್ತೆ ಮುಖಾಂತರ ಶಾಲೆಗೆ ತಲುಪಲು 8 ಕಿ ಮೀ ದೂರ ಇರುತ್ತದೆ. 3) ಸರಕಾರಿ ಪ್ರೌಢ ಶಾಲೆ ಬೇಳೆವಾಡ ರಸ್ತೆ ಮುಖಾಂತರ ಶಾಲೆಗೆ ತಲುಪಲು 6 ಕಿ ಮೀ ದೂರ ಇರುತ್ತದೆ. 4) ಸರಕಾರಿ ಪ್ರೌಢ ಶಾಲೆ ಮಸೂರ ಇದು 8 ಕಿ…
ಬೆಂಗಳೂರು : ಪ್ರಸಕ್ತ 2025ನೇ ಸಾಲಿನ ನೀಟ್-ಯುಜಿ ಪರೀಕ್ಷೆಯು ಮೇ 4ರ ಇಂದು ಮಧ್ಯಾಹ್ನ 2ರಿಂದ ಸಂಜೆ 5ರ ವರೆಗೆ ರಾಜ್ಯದ ಒಟ್ಟು 381 ಪರೀಕ್ಷಾ ಕೇಂದ್ರಗಳಲ್ಲಿ ನಡೆಯಲಿದ್ದು, ರಾಜ್ಯದಲ್ಲಿ 1.49 ಲಕ್ಷ ವಿದ್ಯಾರ್ಥಿಗಳು ನೋಂದಾಯಿಸಿಕೊಂಡಿದ್ದಾರೆ. 381 ಪರೀಕ್ಷಾ ಕೇಂದ್ರಗಳಲ್ಲಿ ಮಧ್ಯಾಹ್ನ 2 ಗಂಟೆಯಿಂದ ಸಂಜೆ 5 ಗಂಟೆವರೆಗೆ ಪರೀಕ್ಷೆ ನಡೆಯಲಿದೆ. ಬೆಳಗ್ಗೆ 11 ಗಂಟೆಯಿಂದ ಮಧ್ಯಾಹ್ನ 1.30ರ ಅವಧಿ ಯಲ್ಲಿ ವಿದ್ಯಾರ್ಥಿಗಳ ಹಾಜರಾತಿಗೆ ಅವಕಾಶ ಇರಲಿದೆ. ವಿದ್ಯಾರ್ಥಿಗಳು ಪ್ರವೇಶಾತಿ ಪತ್ರದೊಂದಿಗೆ ಕಾಲೇಜಿನಿಂದ ನೀಡಲ್ಪಟ್ಟಿ ರುವ ಗುರುತಿನ ಚೀಟಿ, ಆಧಾರ್ ಕಾರ್ಡ್, ಪಾನ್ ಕಾರ್ಡ್, ಡಿಎಲ್, ಮತದಾರರ ಗುರುತಿನ ಚೀಟಿ ಅಥವಾ ಇತರೆ ಯಾವುದಾದರೂ ಅಂಗೀಕೃತ ಗುರುತಿನ ಚೀಟಿ, ಎರಡು ಪಾಸ್ ಪೋರ್ಟ್ ಅಳತೆಯ ಫೋಟೊಗ ಳೊಂದಿಗೆ ಪರೀಕ್ಷಾ ಕೇಂದ್ರಕ್ಕೆ ಹಾಜರಾಗ ಬೇಕು. ಪೊಲೀಸ್ ಸಿಬ್ಬಂದಿ ವತಿಯಿಂದ ವಿದ್ಯಾರ್ಥಿಗಳ ತಪಾಸಣೆ ನಡೆಯಲಿದೆ. ವಿದ್ಯಾರ್ಥಿಗಳಿಗೆ ಈ ನಿಯಮಗಳ ಪಾಲನೆ ಕಡ್ಡಾಯ ಹಾಜರಾಗುವ ವಿದ್ಯಾರ್ಥಿಗಳಿಗೆ ಬಯೋ ಮೆಟ್ರಿಕ್ ಹಾಜರಾತಿ ಕಡ್ಡಾಯವಾಗಿದ್ದು, ವಿದ್ಯಾರ್ಥಿಗಳು ಪ್ರವೇಶಾತಿ ಪತ್ರದಲ್ಲಿ…
ಈ ವೇಗದ ಜೀವನದಲ್ಲಿ, ಯಾರಿಗಾದರೂ ಯಾವಾಗ ಯಾವ ಕಾಯಿಲೆ ಬರುತ್ತದೆ ಎಂದು ಹೇಳಲು ಸಾಧ್ಯವಿಲ್ಲ. ಏಕೆಂದರೆ ನಮ್ಮ ಸುತ್ತಲೂ ಕಣ್ಣು ಮಿಟುಕಿಸುವುದರೊಳಗೆ ನಮ್ಮನ್ನು ಬಾಧಿಸುವ ಇಂತಹ ಅನೇಕ ರೋಗಗಳಿವೆ. ಆದ್ದರಿಂದ, ಆರೋಗ್ಯವಾಗಿರಲು, ನಾವು ಪೌಷ್ಟಿಕ ಆಹಾರವನ್ನು ತೆಗೆದುಕೊಳ್ಳಬೇಕು ಮತ್ತು ನಮ್ಮನ್ನು ಸದೃಢವಾಗಿಡಲು ಯೋಗ ಇತ್ಯಾದಿಗಳನ್ನು ಮಾಡಬೇಕು ಎಂದು ಹೇಳಲಾಗುತ್ತದೆ. ಆದಾಗ್ಯೂ, ಅನೇಕ ಜನರು ಇನ್ನೂ ಅನಾರೋಗ್ಯಕ್ಕೆ ಒಳಗಾಗುತ್ತಾರೆ ಮತ್ತು ನಂತರ ವೈದ್ಯರ ಬಳಿಗೆ ಹೋಗಬೇಕಾಗುತ್ತದೆ. ಅಂತಹ ಪರಿಸ್ಥಿತಿಯಲ್ಲಿ, ನೀವು ಗುಣಮುಖರಾಗಲು ವೈದ್ಯರು ಅವರಿಗೆ ಕೆಲವು ಔಷಧಿಗಳನ್ನು ಶಿಫಾರಸು ಮಾಡುತ್ತಾರೆ, ಆದರೆ ನೀವು ಅಥವಾ ನಿಮಗೆ ತಿಳಿದಿರುವ ಯಾರಾದರೂ ಸೇವಿಸುತ್ತಿರುವ ಔಷಧಿಗಳು ನಕಲಿಯೇ ಎಂದು ನೀವು ಎಂದಾದರೂ ಯೋಚಿಸಿದ್ದೀರಾ? ಏಕೆಂದರೆ ಮಾರುಕಟ್ಟೆಯಲ್ಲಿ ಮೂಲದಂತೆ ಕಾಣುವ ನಕಲಿ ಔಷಧಿಗಳು ಸಹ ಲಭ್ಯವಿದೆ. ಆದ್ದರಿಂದ, ನೀವು ಔಷಧಿಯನ್ನು ಖರೀದಿಸುತ್ತಿದ್ದರೆ ಅಥವಾ ಖರೀದಿಸುತ್ತಿದ್ದರೆ, ನೀವು ಕೆಲವು ವಿಷಯಗಳನ್ನು ಮನಸ್ಸಿನಲ್ಲಿಟ್ಟುಕೊಳ್ಳಬೇಕು. ಹಾಗಾದರೆ ನಕಲಿ ಔಷಧಿಗಳನ್ನು ನೀವು ಹೇಗೆ ಗುರುತಿಸಬಹುದು ಎಂದು ತಿಳಿದುಕೊಳ್ಳಿ. ಔಷಧ ಅಸಲಿಯೋ ನಕಲಿಯೋ ಎಂದು ಕಂಡುಹಿಡಿಯುವುದು…
ನವದೆಹಲಿ: ಪಹಲ್ಗಾಮ್ ದಾಳಿಯ ನಂತರ ಪಾಕಿಸ್ತಾನದೊಂದಿಗೆ ಹೆಚ್ಚುತ್ತಿರುವ ಉದ್ವಿಗ್ನತೆಯ ನಡುವೆ, ಭಾರತೀಯ ಸೇನೆಯು ರಷ್ಯಾ ನಿರ್ಮಿತ ಇಗ್ಲಾ-ಎಸ್ ಕ್ಷಿಪಣಿಗಳ ಹೊಸ ಸರಬರಾಜುಗಳನ್ನು ಸ್ವೀಕರಿಸಿದೆ, ಇದು ಅದರ ಸಾಮರ್ಥ್ಯಗಳನ್ನು ಗಮನಾರ್ಹವಾಗಿ ಹೆಚ್ಚಿಸಿದೆ. ಈ ಅತಿ ಕಡಿಮೆ ವ್ಯಾಪ್ತಿಯ ವಾಯು ರಕ್ಷಣಾ ವ್ಯವಸ್ಥೆಗಳು (VSHORADS) ಸೇನೆಯ ವಾಯು ರಕ್ಷಣಾ ಕಾರ್ಯತಂತ್ರದಲ್ಲಿ ನಿರ್ಣಾಯಕ ಪಾತ್ರ ವಹಿಸುತ್ತವೆ. ಸರ್ಕಾರವು ಪಡೆಗಳಿಗೆ ನೀಡಿದ ತುರ್ತು ಖರೀದಿ ಅಧಿಕಾರಗಳ ಅಡಿಯಲ್ಲಿ ಸಹಿ ಹಾಕಲಾದ ಒಪ್ಪಂದದ ಭಾಗವಾಗಿ ಇಗ್ಲಾ-ಎಸ್ ಕ್ಷಿಪಣಿಗಳ ಹೊಸ ಸರಬರಾಜುಗಳನ್ನು ಸ್ವೀಕರಿಸಲಾಗಿದೆ. ಇಗ್ಲಾ-ಎಸ್ ವಾಯು ರಕ್ಷಣಾ ಕ್ಷಿಪಣಿಗಳ ಹೊಸ ಸರಬರಾಜುಗಳನ್ನು ಭಾರತೀಯ ಸೇನೆಯು ಎರಡು ವಾರಗಳ ಹಿಂದೆ ಸ್ವೀಕರಿಸಿದೆ ಮತ್ತು ಗಡಿಗಳಲ್ಲಿ ಶತ್ರು ಯುದ್ಧ ವಿಮಾನಗಳು, ಚಾಪರ್ಗಳು ಮತ್ತು ಡ್ರೋನ್ಗಳಿಂದ ಬರುವ ಬೆದರಿಕೆಯನ್ನು ನಿಭಾಯಿಸಲು ಮುಂಚೂಣಿಯಲ್ಲಿರುವ ರಚನೆಗಳಿಗೆ ಒದಗಿಸಲಾಗುತ್ತಿದೆ ಎಂದು ರಕ್ಷಣಾ ಮೂಲಗಳು ತಿಳಿಸಿವೆ. ಭಾರತೀಯ ಸೇನೆಯ ಬಲವನ್ನು ಹೆಚ್ಚಿಸಲು ಇಗ್ಲಾ-ಎಸ್ ಕ್ಷಿಪಣಿಗಳು ಸರಿಸುಮಾರು 260 ಕೋಟಿ ರೂ. ಮೌಲ್ಯದ ಈ ಒಪ್ಪಂದವು ಭಾರತೀಯ ಪಡೆಗಳ ವಾಯು ರಕ್ಷಣಾ…
ಆಂಧ್ರಪ್ರದೇಶ : ಆಂಧ್ರಪ್ರದೇಶದಲ್ಲಿ ಭಾನುವಾರ ಬೆಳಗಿನ ಜಾವ ಭೀಕರ ರಸ್ತೆ ಅಪಘಾತ ಸಂಭವಿಸಿದೆ. ಪ್ರಕಾಶಂ ಜಿಲ್ಲೆಯಲ್ಲಿ ಮೊಟ್ಟೆಗಳನ್ನು ಹೊತ್ತೊಯ್ಯುತ್ತಿದ್ದ ಲಾರಿಯೊಂದು ಪಲ್ಟಿಯಾಗಿದೆ. ಅಪಘಾತವನ್ನು ಗಮನಿಸಿದ ನಂತರ ಅದರ ಹಿಂದೆ ಕಾರಿನಲ್ಲಿದ್ದ ಜನರು ಇದ್ದಕ್ಕಿದ್ದಂತೆ ನಿಲ್ಲಿಸಿದರು… ಅಪಘಾತದಿಂದ ಪಾರಾಗಿದ್ದೇವೆ ಎಂದು ಅವರು ಭಾವಿಸುತ್ತಿದ್ದಂತೆಯೇ, ಸಾವಿನ ರೂಪದಲ್ಲಿ ಹಿಂದಿನಿಂದ ಮತ್ತೊಂದು ಲಾರಿ ಕಾಣಿಸಿಕೊಂಡಿತು. ವೇಗವಾಗಿ ಬಂದ ಲಾರಿ ನಿಯಂತ್ರಣ ತಪ್ಪಿ ಕಾರಿಗೆ ಡಿಕ್ಕಿ ಹೊಡೆದ ಪರಿಣಾಮ ಕಾರು ಪಲ್ಟಿಯಾಗಿ ಮುಂಭಾಗದಲ್ಲಿದ್ದ ಲಾರಿ ಮತ್ತು ಹಿಂಭಾಗದಲ್ಲಿದ್ದ ಲಾರಿಯ ನಡುವೆ ನಜ್ಜುಗುಜ್ಜಾಯಿತು. ಒಂಗೋಲ್ ಮಂಡಲದ ಕೊಪ್ಪೊಲು ಬಳಿಯ ರಾಷ್ಟ್ರೀಯ ಹೆದ್ದಾರಿಯಲ್ಲಿ ಈ ಅಪಘಾತ ಸಂಭವಿಸಿದೆ. ಈ ಘಟನೆಯಲ್ಲಿ ಪಲ್ಟಿಯಾದ ಲಾರಿ ಮತ್ತು ಕಾರಿನಲ್ಲಿದ್ದವರು ಪ್ರಾಣ ಕಳೆದುಕೊಂಡರು. ಈ ರೀತಿ ಒಟ್ಟು ಆರು ಜನರು ಸಾವನ್ನಪ್ಪಿದ್ದಾರೆಂದು ವರದಿಯಾಗಿದೆ. . ಈ ಅಪಘಾತದಿಂದಾಗಿ ರಾಷ್ಟ್ರೀಯ ಹೆದ್ದಾರಿಯಲ್ಲಿ ವಾಹನ ಸಂಚಾರಕ್ಕೆ ಅಡ್ಡಿಯಾಗಿದ್ದು, ಸಂಚಾರ ದಟ್ಟಣೆ ಉಂಟಾಗಿದೆ. ಈ ಭೀಕರ ರಸ್ತೆ ಅಪಘಾತದ ಬಗ್ಗೆ ಮಾಹಿತಿ ಪಡೆದ ಸ್ಥಳೀಯ ಪೊಲೀಸರು ತಕ್ಷಣ ಸ್ಥಳಕ್ಕೆ…
ಬೆಂಗಳೂರು : 2025 26ನೇ ಸಾಲಿನಲ್ಲಿ ಸರ್ಕಾರಿ ಪ್ರಾಥಮಿಕ, ಪ್ರೌಢಶಾಲೆ ಮತ್ತು ಸರ್ಕಾರಿ ಪದವಿ ಪೂರ್ವ ಕಾಲೇಜು ಮಕ್ಕಳ ದಾಖಲಾತಿ ಹೆಚ್ಚಿಸಲು ‘ನಮ್ಮ ಶಾಲೆ ನಮ್ಮ ಜವಾಬ್ದಾರಿ” ಕಾರ್ಯಕ್ರಮ ಏರ್ಪಡಿಸಿ ಸಮುದಾಯದಲ್ಲಿ ಜಾಗೃತಿ ಮೂಡಿಸುವ ಕುರಿತು ಶಿಕ್ಷಣ ಇಲಾಖೆ ಮಹತ್ವದ ಆದೇಶ ಹೊರಡಿಸಿದೆ. ಶಿಕ್ಷಣ ಇಲಾಖೆ ಆದೇಶದಲ್ಲಿ ಏನಿದೆ? ಮೇಲ್ಕಂಡ ವಿಷಯಕ್ಕೆ ಸಂಬಂಧಿಸಿದಂತೆ, ಕರ್ನಾಟಕ ಸರ್ಕಾರವು ರಾಜ್ಯದಲ್ಲಿ ಶಾಲಾ ಶಿಕ್ಷಣವನ್ನು ಬಲವಡಿಸಲು, ರಾಜ್ಯದ ಎಲ್ಲಾ ಮಕ್ಕಳು ಸಾರ್ವತ್ರಿಕ ಶಿಕ್ಷಣಕ್ಕೆ ಒಳಪಡಿಸುವುದು ಅಗತ್ಯವಾಗಿದೆ ಸರ್ಕಾರಿ ಶಾಲೆಗಳಲ್ಲಿ ಹಾಗೂ ಪದವಿ ಪೂರ್ವ ಕಾಲೇಜುಗಳಲ್ಲಿ ಮಕ್ಕಳ ದಾಖಲಾತಿ, ದಾಖಲಾದ ಮಕ್ಕಳು ಶಾಲೆಯಲ್ಲಿ ಪ್ರತಿನಿತ್ಯ ಹಾಜರಾಗಿ, ನಿರಂತರ ಕಲಿಕೆಯಲ್ಲಿ ಭಾಗವಹಿಸಿ, ಉಳಿಯಲು, ಹಲವಾರು ಶೈಕ್ಷಣಿಕ ಸೌಲಭ್ಯಗಳು ಹಾಗೂ ಪ್ರೋತ್ಸಾಹದಾಯಕ ಕೇಂದ್ರ ಮತ್ತು ರಾಜ್ಯ ಸರ್ಕಾರದ ಆರ್ಥಿಕ ಅನುದಾನದಡಿ ಯಶಸ್ವಿಯಾಗಿ ಕಾರ್ಯಕ್ರಮಗಳನ್ನು ಅನುಷ್ಠಾನ ಮಾಡುತ್ತಿದೆ. ಮಕ್ಕಳ ಕಲಿಕಾ ಗುಣಮಟ್ಟವನ್ನು ಉತ್ತಮಪಡಿಸಲು ಶಾಲಾ ಶಿಕ್ಷಣ ಇಲಾಖೆಯು ಹಲವಾರು ಯೋಜನೆಗಳನ್ನು ರೂಪಿಸಿದೆ. ಆದಾಗ್ಯೂ ಸಹ, ಇತ್ತೀಚಿನ ವರ್ಷಗಳಲ್ಲಿ ಸರ್ಕಾರಿ ಶಾಲೆಗಳಲ್ಲಿ, ಪದ)…
ಅಗ್ರ ಪ್ಯಾರಸಿಟಮಾಲ್ ಮಾತ್ರೆಯಾಗಿರುವ ಡೋಲೋ 650 ಅನ್ನು ಭಾರತೀಯರು ಹೆಚ್ಚಿನ ಸಂಖ್ಯೆಯಲ್ಲಿ ಖರೀದಿಸುತ್ತಾರೆ. ಆದರೆ ಒಂದು ವಿಷಯವೆಂದರೆ ಡೋಲೋ 650 ಮಾತ್ರೆಗಳನ್ನು ಅತಿಯಾಗಿ ಸೇವಿಸುವುದರಿಂದ ಅನೇಕ ರೋಗಗಳಿಗೆ ಆಹ್ವಾನವಿದೆ. ಡೋಲೋ 650 ಟ್ಯಾಬ್ಲೆಟ್ ನೋವನ್ನು ನಿವಾರಿಸಲು ಮತ್ತು ಜ್ವರವನ್ನು ಕಡಿಮೆ ಮಾಡಲು ಬಳಸುವ ಔಷಧಿಯಾಗಿದೆ. ತಲೆನೋವು, ದೇಹದ ನೋವು, ಹಲ್ಲುನೋವು ಮತ್ತು ನೆಗಡಿಯಂತಹ ಇತರ ಸಮಸ್ಯೆಗಳಿಗೆ ಚಿಕಿತ್ಸೆ ನೀಡಲು ಇದನ್ನು ಬಳಸಲಾಗುತ್ತದೆ. ನೋವು ಮತ್ತು ಜ್ವರವನ್ನು ಉಂಟುಮಾಡುವ ಕೆಲವು ರಾಸಾಯನಿಕಗಳ ಬಿಡುಗಡೆಯನ್ನು ತಡೆಯುವ ಮೂಲಕ ಇದು ಕಾರ್ಯನಿರ್ವಹಿಸುತ್ತದೆ. ಡಾಲೋ 650 ಮಾತ್ರೆಗಳನ್ನು ಅದೇ ಅಥವಾ ಇತರ ಔಷಧಿಗಳೊಂದಿಗೆ ತೆಗೆದುಕೊಳ್ಳಲು ವೈದ್ಯರು ಸಲಹೆ ನೀಡುತ್ತಾರೆ. ಆದರೆ ಈ ಮಾತ್ರೆಗಳನ್ನು ನಿಯಮಿತವಾಗಿ ತೆಗೆದುಕೊಳ್ಳಬೇಕು. ಈ ಮಾತ್ರೆ ಆಹಾರದ ನಂತರ ತೆಗೆದುಕೊಳ್ಳಬೇಕು. ಇಲ್ಲದಿದ್ದರೆ ಹೊಟ್ಟೆಯ ಸಮಸ್ಯೆಗಳು ಕಾಣಿಸಿಕೊಳ್ಳಬಹುದು. ಈ ಔಷಧಿಯನ್ನು ಸರಿಯಾಗಿ ಬಳಸಿದರೆ ಅಡ್ಡಪರಿಣಾಮಗಳು ಕಡಿಮೆ. ಈ ಔಷಧಿಯನ್ನು ಸೇವಿಸುವುದರಿಂದ ಕೆಲವರಿಗೆ ಹೊಟ್ಟೆ ನೋವು, ವಾಕರಿಕೆ ಮತ್ತು ವಾಂತಿ ಉಂಟಾಗಬಹುದು. ಈ ರೋಗಲಕ್ಷಣಗಳು ಕಾಣಿಸಿಕೊಂಡರೆ, ನೀವು…