Subscribe to Updates
Get the latest creative news from FooBar about art, design and business.
Author: kannadanewsnow57
ನವದೆಹಲಿ : ಫ್ರಾನ್ಸ್ನ ಆಹಾರ ಸುರಕ್ಷತಾ ಸಂಸ್ಥೆ ANSES ಬಿಡುಗಡೆ ಮಾಡಿದ ಅಧ್ಯಯನವು, ಗಾಜಿನ ಬಾಟಲಿಗಳು ಪ್ಲಾಸ್ಟಿಕ್ ಬಾಟಲಿಗಳಿಗಿಂತ ಗಮನಾರ್ಹವಾಗಿ ಹೆಚ್ಚು ಮೈಕ್ರೋಪ್ಲಾಸ್ಟಿಕ್ಗಳನ್ನು ಹೊಂದಿವೆ ಎಂದು ಹೇಳಿಕೊಂಡಿದೆ, ಇದು ದೀರ್ಘಕಾಲದ ಊಹೆಗಳಿಗೆ ವಿರುದ್ಧವಾಗಿದೆ.ಸರಾಸರಿ, ತಂಪು ಪಾನೀಯಗಳು, ನಿಂಬೆ ಪಾನಕ, ಐಸ್ಡ್ ಟೀ ಮತ್ತು ಬಿಯರ್ಗಳ ಗಾಜಿನ ಬಾಟಲಿಗಳು ಪ್ರತಿ ಲೀಟರ್ಗೆ ಸುಮಾರು 100 ಮೈಕ್ರೋಪ್ಲಾಸ್ಟಿಕ್ ಕಣಗಳನ್ನು ಹೊಂದಿರುತ್ತವೆ, ಇದು ಪ್ಲಾಸ್ಟಿಕ್ ಅಥವಾ ಲೋಹದ ಪಾತ್ರೆಗಳಿಗಿಂತ 50 ಪಟ್ಟು ಹೆಚ್ಚು. ಜರ್ನಲ್ ಆಫ್ ಫುಡ್ ಕಾಂಪೊಸಿಷನ್ ಅಂಡ್ ಅನಾಲಿಸಿಸ್ನಲ್ಲಿ ಪ್ರಕಟವಾದ ಸಂಶೋಧನೆಗಳ ಪ್ರಕಾರ, ಗಾಜಿನ ಬಾಟಲಿಗಳು ಪ್ಲಾಸ್ಟಿಕ್ ಬಾಟಲಿಗಳಿಗಿಂತ ತುಲನಾತ್ಮಕವಾಗಿ ಸುರಕ್ಷಿತವಾಗಿರುತ್ತವೆ ಎಂದು ಸಂಶೋಧಕರು ಆರಂಭದಲ್ಲಿ ನಿರೀಕ್ಷಿಸಿದ್ದರು, ಆದರೆ ಫಲಿತಾಂಶಗಳು ಅವರನ್ನು ಆಶ್ಚರ್ಯಗೊಳಿಸಿದವು. ನಾವು ವಿರುದ್ಧ ಫಲಿತಾಂಶವನ್ನು ನಿರೀಕ್ಷಿಸಿದ್ದೇವೆ” ಎಂದು ಸಂಶೋಧನೆಯ ನೇತೃತ್ವ ವಹಿಸಿದ್ದ ಪಿಎಚ್ಡಿ ವಿದ್ಯಾರ್ಥಿನಿ ಐಸೆಲಿನ್ ಚೈಬ್ ಹೇಳಿದರು.ಪಾನೀಯಗಳಲ್ಲಿ ಪ್ರತ್ಯೇಕಿಸಲಾದ ಹೆಚ್ಚಿನ ಕಣಗಳು ಕ್ಯಾಪ್ಗಳ ಬಣ್ಣಕ್ಕೆ ಹೋಲುತ್ತವೆ ಮತ್ತು ಹೊರಗಿನ ಬಣ್ಣದ ಸಂಯೋಜನೆಯನ್ನು ಹಂಚಿಕೊಂಡಿರುವುದರಿಂದ ಕ್ಯಾಪ್ಗಳು ಮಾಲಿನ್ಯದ ಮುಖ್ಯ ಮೂಲವೆಂದು…
ಚಿಕ್ಕಮಗಳೂರು: ಕಳೆದ ವಾರ ಸುರಿದ ಭಾರೀ ಮಳೆ ಮತ್ತು ಗಾಳಿಗೆ ಮರದ ಕೊಂಬೆ ಬಿದ್ದು ಮೃತಪಟ್ಟ ಚಿಕ್ಕಮಗಳೂರು ತಾಲೂಕು ಖಾಂಡ್ಯ ಹೋಬಳಿ ಬಿಳುಕೊಪ್ಪದ ಅನಿಲ್ ಪಾಯ್ಸ್ ಅವರ ಕುಟುಂಬಕ್ಕೆ ಜಿಲ್ಲಾ ಉಸ್ತುವಾರಿಯೂ ಆಗಿರುವ ಇಂಧನ ಸಚಿವ ಕೆ.ಜೆ.ಜಾರ್ಜ್ ಅವರು 5 ಲಕ್ಷ ರೂ. ಪರಿಹಾರದ ಚೆಕ್ ಅನ್ನು ವಿತರಿಸಿದರು. ಮಳೆ ಅನಾಹುತ ಸಂಭವಿಸಿದ ಖಾಂಡ್ಯ ಹೋಬಳ ಬಿಳುಕೊಪ್ಪ ಗ್ರಾಮಕ್ಕೆ ಭೇಟಿ ನೀಡಿ ಮೃತರ ಕುಟುಬ ಸದಸ್ಯರನ್ನು ಭೇಟಿ ಮಾಡಿ ಸಾಂತ್ವನ ಹೇಳಿದ ಸಚಿವರು ಬಳಿಕ ಪರಿಹಾರದ ಚೆಕ್ ಅನ್ನು ವಿತರಿಸಿದರು. ಬಳಿಕಮಾತನಾಡಿ ಹಣದಿಂದ ಕಾರಣಕ್ಕೆ ಬೆಲೆ ಕಟ್ಟಲು ಸಾಧ್ಯವಿಲ್ಲ. ಮಾನವೀಯತೆಯಿದ ಪರಿಹಾರ ವಿತರಿಸಲಾಗುತ್ತಿದ್ದು, ಮೃತರ ಕುಟುಂಕ್ಕೆ ಆತ್ಮಸ್ಥೈರ್ಯ ತುಂಬುವ ಕೆಲವಾಗಬೇಕಿದೆ ಎಂದರು. ಪ್ರಸ್ತುತ ಜಿಲ್ಲಾಧಿಕಾರಿಗಳ ಕಡೆಯಿಂದ ಐದು ಲಕ್ಷ ರೂ. ಪರಿಹಾರ ನೀಡಲಾಗುತ್ತಿದೆ. ಮೃತ ಅನಿಲ್ ಪಾಯ್ಸ್ ಅವರ ಮನೆ ನಿರ್ಮಾಣ ಕಾಮಗಾರಿ ಅರ್ಧಕ್ಕೆ ನಿಂತಿದ್ದು, ಈ ಹಿಂದೆ ಮನೆ ನಿರ್ಮಾಣಕ್ಕೆ ಗ್ರಾಮ ಪಂಚಾಯಿತಿಯಂದ ಹಣ ನೀಡಲಾಗಿತ್ತು. ಇದೀಗ ಮನೆಯನ್ನು ಶಾಸಕ…
ಕರ್ನಾಟಕ ಆರ್ಯ ವೈಶ್ಯ ಸಮುದಾಯ ಅಭಿವೃದ್ದಿ ನಿಗಮದಿಂದ 2025-26 ನೇ ಸಾಲಿಗೆ ಸಾಲ-ಸೌಲಭ್ಯ ಒದಗಿಸಲು ಅರ್ಜಿ ಆಹ್ವಾನಿಸಲಾಗಿದೆ.ಸ್ವಯಂ ಉದ್ಯೋಗ ನೇರ ಸಾಲ ಯೋಜನೆ, ಬ್ಯಾಂಕ್ಗಳ ಸಹಯೋಗದೊಂದಿಗೆ ಆರ್ಯ ವೈಶ್ಯ ಆಹಾರ ವಾಹಿನಿ/ವಾಹಿನಿ ಯೋಜನೆ, ವಾಸತಿ ಜಲಶಕ್ತಿ ಯೋಜನೆ. ಅರಿವು ಶೈಕ್ಷಣಿಕ ಸಾಲ ಯೋಜನೆ-ಸಿಇಟಿ, ಎನ್ಇಇಟಿ ಕೌನ್ಸಲಿಂಗ್ ಮುಗಿದ ನಂತರ ಅರ್ಜಿ ಆಹ್ವಾನಿಸಲಾಗುವುದು. ಅರ್ಜಿ ಸಲ್ಲಿಸಲು ಸಾಮಾನ್ಯ ವರ್ಗದಲ್ಲಿ ಆರ್ಯ ವೈಶ್ಯ ಸಮುದಾಯಕ್ಕೆ ಸೇರಿದವರಾಗಿರಬೆಕು ಮತ್ತು ನಮೂನೆ-ಜಿ ಯಲ್ಲಿ ಜಾತಿ ಮತ್ತು ಆದಾಯ ಪ್ರಮಾಣ ಪತ್ರ ಪಡೆದಿರಬೇಕು. ಅರ್ಜಿದಾರರು ಕರ್ನಾಟಕ ರಾಜ್ಯದವರಾಗಿದ್ದು ಅವರ ಖಾಯಂ ವಿಳಾಸವು ಕರ್ನಾಟಕ ರಾಜ್ಯದಲ್ಲಿರಬೇಕು. ಅರ್ಜಿದಾರರ ಮೊಬೈಲ್ ಸಂಖ್ಯೆಯು ಆಧಾರ್ ಸಂಖ್ಯೆಗೆ ಜೋಡಣೆಯಾಗಿರಬೇಕು ಮತ್ತು ಬ್ಯಾಂಕ್ ಖಾತೆಗೆ ಆಧಾರ್ ಸೀಡಿಂಗ್ ಆಗಿರಬೇಕು. ಅರ್ಹ ಅರ್ಜಿದಾರರುಗಳನ್ನು ಮುಖ್ಯ ಕಾರ್ಯ ನಿರ್ವಹಣಾಧಿಕಾರಿಗಳ ಅಧ್ಯಕ್ಷತೆಯಲ್ಲಿ ರಚಿಸಿರುವ ಜಿಲ್ಲಾ ಮಟ್ಟದ ಆಯ್ಕೆ ಸಮಿತಿಯ ಮೂಲಕ ಆಯ್ಕೆ ಮಾಡಲಾಗುವುದು. 2019-20 ನೇ ಸಾಲಿನಿಂದ 2021-22 ನೇ ಸಾಲಿನವರೆಗೆ ಸ್ವಯಂ ಉದ್ಯೋಗ ನೇರ ಸಾಲ ಯೋಜನೆಯಡಿ ಸಾಲ…
ಕೇಂದ್ರ ಸರ್ಕಾರದ ಸಿಬ್ಬಂದಿ ನೇಮಕಾತಿ ಆಯೋಗ (ಕರ್ನಾಟಕ-ಕೇರಳ ಪ್ರದೇಶ, ಭಾರತ ಸರ್ಕಾರ) ಬೆಂಗಳೂರು, ಇವರು ವಿವಿಧ ನಾನ್ ಗೆಜೆಟೆಡ್ ಗ್ರೂಪ್ ‘ಬಿ’ ಮತ್ತು ಗ್ರೂಪ್ ‘ಸಿ’ 14,582 ಹುದ್ದೆಗಳ ನೇಮಕಾತಿಗಾಗಿ ಸಂಯೋಜಿತ ಪದವಿ ಮಟ್ಟದ ಪರೀಕ್ಷೆ (ಅಉಐಇ) ಸ್ಪರ್ಧಾತ್ಮಕ ಪರೀಕ್ಷೆ ನಡೆಸುತ್ತಿದ್ದು, ಆಸಕ್ತ ಅರ್ಹ ಅಭ್ಯರ್ಥಿಗಳು ಆನ್ಲೈನ್ನಲ್ಲಿ ಅರ್ಜಿ ಸಲ್ಲಿಸಬಹುದು. ಮಾನ್ಯತೆ ಪಡೆದ ವಿಶ್ವ ವಿದ್ಯಾಲಯದಿಂದ ಪದವಿ ಅಥವಾ ತತ್ಸಮಾನ, ನಿರ್ದಿಷ್ಟ ಹುದ್ದೆಗಳ ಅಪೇಕ್ಷಣೀಯ ಅರ್ಹತೆಯ ವಿವರಗಳಿಗೆ ಎಸ್ಎಸ್ಸಿ ಅಧಿಸೂಚನೆಯ ಪ್ಯಾರಾ-8 ಅನ್ನು ಪರಿಶೀಲಿಸಬಹುದು. 18 ರಿಂದ 32 ವರ್ಷದೊಳಗಿರಬೇಕು. ನಿರ್ದಿಷ್ಟ ವರ್ಗದವರಿಗೆ ವಯೋಮಿತಿ ಸಡಿಲಿಕೆ ಇರುತ್ತದೆ. ಅಧಿಸೂಚನೆಯ ಪ್ಯಾರಾ-5 ಅನ್ನು ಪರಿಶೀಲಿಸಬಹುದು. ಪರೀಕ್ಷೆಯ ಸಂಭವನೀಯ ದಿನಾಂಕ 2025 ರ ಆಗಸ್ಟ್, 13 ರಿಂದ 30 ರವರೆಗೆ, ಶುಲ್ಕ ರೂ.100, (ಎಸ್ಸಿ/ಎಸ್ಟಿ/ಮಹಿಳೆ/ದಿವ್ಯಾಂಗರು/ಮಾಜಿ ಸೈನಿಕರಿಗೆ ಶುಲ್ಕವಿಲ್ಲ). ಅರ್ಜಿ ಸಲ್ಲಿಸಲು ಜುಲೈ, 04 ರ ಮಧ್ಯಾಹ್ನ 11 ಗಂಟೆಗೆ ಕೊನೆಯ ದಿನವಾಗಿದೆ. ಹೆಚ್ಚಿನ ಮಾಹಿತಿಗೆ ಉದ್ಯೋಗ ವಿನಿಮಯ ಕಚೇರಿ, ಮಡಿಕೇರಿ ಹಾಗೂ ದೂರವಾಣಿ ಸಂಖ್ಯೆ…
ಆಘಾತಕಾರಿ ಘಟನೆಯೊಂದರಲ್ಲಿ, ಎಲ್ಪಿಜಿ ಸಿಲಿಂಡರ್ ಅನಿಲ ಸೋರಿಕೆಯಿಂದಾಗಿ ಮನೆಯೊಳಗೆ ಬೆಂಕಿ ಕಾಣಿಸಿಕೊಂಡಾಗ, ಮಹಿಳೆ ಮತ್ತು ಪುರುಷ ಕೂದಲೆಳೆಯ ಅಂತರದಲ್ಲಿ ಪಾರಾಗಿರುವ ವೀಡಿಯೊ ಸಾಮಾಜಿಕ ಮಾಧ್ಯಮಗಳಲ್ಲಿ ಕಾಣಿಸಿಕೊಂಡಿದೆ. ಪವಾಡಸದೃಶವಾಗಿ ತಪ್ಪಿಸಿಕೊಳ್ಳುವ ವೀಡಿಯೊ ಅಂತರ್ಜಾಲದಲ್ಲಿ ಕಾಣಿಸಿಕೊಂಡಿದ್ದು, ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗುತ್ತಿದೆ. ಸೋರಿಕೆಯಿಂದಾಗಿ ಭಾರೀ ಬೆಂಕಿಯಿಂದ ತುಂಬಿದ್ದ ಮನೆಯಿಂದ ಅವರು ಹೊರಗೆ ಓಡಿಹೋಗಿದ್ದಾರೆ ಎಂದು ವೀಡಿಯೊ ತೋರಿಸುತ್ತದೆ. ಘಟನೆಯ ನಿಖರವಾದ ಸ್ಥಳ ತಿಳಿದಿಲ್ಲ, ಆದಾಗ್ಯೂ, ಸಿಸಿಟಿವಿ ದೃಶ್ಯಾವಳಿಗಳು ಬುಧವಾರ (ಜೂನ್ 18) ಮಧ್ಯಾಹ್ನ 3 ಗಂಟೆ ಸುಮಾರಿಗೆ ಘಟನೆ ಸಂಭವಿಸಿದೆ ಎಂದು ತೋರಿಸುತ್ತದೆ. ಪೈಪ್ ಮೇಲೆ ಎಲ್ಪಿಜಿ ಸಿಲಿಂಡರ್ ಸೋರಿಕೆಯಾಗುತ್ತಿರುವುದನ್ನು ವೀಡಿಯೊದಲ್ಲಿ ಕಾಣಬಹುದು. ಮಧ್ಯವಯಸ್ಕ ಮಹಿಳೆಯೊಬ್ಬರು ಅನಿಲ ಸೋರಿಕೆಯನ್ನು ನಿಯಂತ್ರಿಸಲು ಮತ್ತು ನಿಲ್ಲಿಸಲು ಪ್ರಯತ್ನಿಸುತ್ತಿರುವುದನ್ನು ವೀಡಿಯೊದಲ್ಲಿ ಕಾಣಬಹುದು. ಆದಾಗ್ಯೂ, ಮಹಿಳೆಗೆ ಭಾರೀ ಸೋರಿಕೆಯನ್ನು ತಡೆಯಲು ಸಾಧ್ಯವಾಗುತ್ತಿಲ್ಲ. https://twitter.com/Satyamraj_in/status/1936753730353004829?ref_src=twsrc%5Etfw%7Ctwcamp%5Etweetembed%7Ctwterm%5E1936753730353004829%7Ctwgr%5E2af85a2a8a0dc55db71744ae2f5f08b64f11b12c%7Ctwcon%5Es1_c10&ref_url=https%3A%2F%2Fm.dailyhunt.in%2Fnews%2Findia%2Ftelugu%2Fforyou%3Fmode%3Dpwalangchange%3Dtruelaunch%3Dtrue
ಉತ್ತರ ಕನ್ನಡ : ಜೋಗನ ಹಕ್ಕಲು ಫಾಲ್ಸ್ ನೋಡಲು ಹೋಗಿ ಕಾಲು ಜಾರಿ ಬಿದ್ದು ಯುವಕನೊಬ್ಬ ನಾಪತ್ತೆಯಾಗಿರುವ ಘಟನೆ ನಡೆದಿದೆ. ಉತ್ತರ ಕನ್ನಡ ಜಿಲ್ಲೆಯ ಶಿರಸಿಯ ಮತ್ತಿಘಟ್ಟ ಬಳಿಯ ಜೋಗನ ಹಕ್ಕಲು ಜಲಪಾತ ನೋಡಲು ಹೋಗಿದ್ದ ಯುವಕ ನಾಪತ್ತೆಯಾಗಿದ್ದಾನೆ. ಸೋಮನಳ್ಳಿ ಗ್ರಾಮದ ಪವನ್ ಗಣಪತಿ ಜೋಗಿ (24) ನಾಪತ್ತೆಯಾಗಿದ್ದಾನೆ. ಸ್ನೇಹಿತ ವಾಸುದೇವ್ ಜೊತೆ ಫಾಲ್ಸ್ ನೋಡಲು ಹೋಗಿದ್ದ ಪವನ್ ಹಳ್ಳ ದಾಟುವಾಗ ಕಾಲು ಜಾರಿ ಬಿದ್ದು ಕೊಚ್ಚಿ ಹೋಗಿದ್ದಾನೆ. ನಿನ್ನೆ ಸಂಜೆ ಈ ಘಟನೆ ನಡೆದಿದೆ. ಶಿರಸಿ ಗ್ರಾಮೀಣ ಠಾಣೆ ಪೊಲೀಸರು ಶೋಧ ಕಾರ್ಯಾಚರಣೆ ನಡೆಸುತ್ತಿದ್ದಾರೆ.
ಶಿವಮೊಗ್ಗ: ರಾಜ್ಯ ಸರ್ಕಾರ ಮತ್ತೊಮ್ಮೆ ನಡೆಸಲು ಮುಂದಾಗಿರುವ ಶೈಕ್ಷಣಿಕ, ಆರ್ಥಿಕ ಮರು ಸಮೀಕ್ಷೆ( ಜತಿಗಣತಿ)ಗೆ ಸರ್ಕಾರಿ ಶಿಕ್ಷಕರನ್ನು ಬಳಕೆ ಮಾಡಲ್ಲ ಎಂದು ಶಿಕ್ಷಣ ಸಚಿವ ಮಧು ಬಂಗಾರಪ್ಪ ತಿಳಿಸಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯ ಸರ್ಕಾರದ ಮರು ಜಾತಿಗಣತಿಗೆ ಶಿಕ್ಷರನ್ನು ಬಳಸಿಕೊಳ್ಳಲ್ಲ.ಆದರೆ ಗಣತಿ ಜವಾಬ್ದಾರಿ ಹೊರಗುತ್ತಿಗೆ ನೀಡಲು ನಿರ್ಧರಿಸಲಾಗಿದೆ ಎಂದು ತಿಳಿಸಿದರು. ಸಮೀಕ್ಷೆ ಕಾರ್ಯಕ್ಕೆ ಶಿಕ್ಷಕರನ್ನು ನೇಮಕ ಮಾಡಿದರೆ ವಾರಗಟ್ಟಲೇ ಶಾಲೆಗಳಲ್ಲಿ ಮಕ್ಕಳಿಗೆ ಪಾಠಕ್ಕೆ ತೊಂದರೆಯಾಗುತ್ತದೆ. ಈ ಬಗ್ಗೆ ಸರ್ಕಾರಕ್ಕೆ ಈಗಾಗಲೇ ಸ್ಪಷ್ಟಪಡಿಸಲಾಗಿದೆ. ಹೀಗಾಗಿ ಗಣತಿ ಸಮೀಕ್ಷೆಗೆ ಸರ್ಕಾರಿ ಶಿಕ್ಷಕರನ್ನು ಬಳಕೆ ಮಾಡುತ್ತಿಲ್ಲ ಎಂದು ಹೇಳಿದರು.
ಸಿರಿಯಾದ ಡಮಾಸ್ಕಸ್ನ ದ್ವೇಲಾ ಪ್ರದೇಶದಲ್ಲಿ ಭಾನುವಾರ ಜನರಿಂದ ತುಂಬಿದ್ದ ಚರ್ಚ್ನೊಳಗೆ ಇಸ್ಲಾಮಿಕ್ ಸ್ಟೇಟ್ ಆತ್ಮಹತ್ಯಾ ಬಾಂಬರ್ ಸ್ವತಃ ಸ್ಫೋಟಿಸಿಕೊಂಡ ಪರಿಣಾಮ ಕನಿಷ್ಠ 20 ಜನರು ಸಾವನ್ನಪ್ಪಿದ್ದಾರೆ. ಮಾರ್ ಎಲಿಯಾಸ್ ಚರ್ಚ್ ಒಳಗೆ ಜನರು ಪ್ರಾರ್ಥನೆ ಸಲ್ಲಿಸುತ್ತಿದ್ದಾಗ ಈ ಸ್ಫೋಟ ಸಂಭವಿಸಿದೆ. ಡಮಾಸ್ಕಸ್ನ ದ್ವೇಲಾ ಪ್ರದೇಶದಲ್ಲಿರುವ ಸೇಂಟ್ ಎಲಿಯಾಸ್ ಚರ್ಚ್ ಒಳಗೆ ಆತ್ಮಹತ್ಯಾ ದಾಳಿಕೋರನೊಬ್ಬ ಸ್ಫೋಟಕ ಪಟ್ಟಿಯನ್ನು ಸ್ಫೋಟಿಸಿದ್ದಾನೆ” ಎಂದು ರಾಜ್ಯ ಟಿವಿ ವರದಿ ಮಾಡಿದೆ. ದಾಳಿಯಲ್ಲಿ “ಪ್ರಾಥಮಿಕ ಸಂಖ್ಯೆಯ ಪ್ರಕಾರ 20 ಕ್ಕೂ ಹೆಚ್ಚು ಜನರು ಸಾವನ್ನಪ್ಪಿದ್ದಾರೆ ಮತ್ತು ಹಲವಾರು ಜನರು ಗಾಯಗೊಂಡಿದ್ದಾರೆ” ಎಂದು ಸಿರಿಯನ್ ನಾಗರಿಕ ರಕ್ಷಣಾ ಹೇಳಿಕೆಯಲ್ಲಿ ತಿಳಿಸಿದೆ. ಡಮಾಸ್ಕಸ್ ಚರ್ಚ್ನಲ್ಲಿ ತನ್ನನ್ನು ತಾನು ಸ್ಫೋಟಿಸಿಕೊಂಡ ಆತ್ಮಹತ್ಯಾ ಬಾಂಬರ್ ಇಸ್ಲಾಮಿಕ್ ಸ್ಟೇಟ್ ಸದಸ್ಯ ಎಂದು ಸಿರಿಯಾದ ಆಂತರಿಕ ಸಚಿವಾಲಯ ತಿಳಿಸಿದೆ, ಡಾಯೇಶ್ (IS) ಭಯೋತ್ಪಾದಕ ಗುಂಪಿನೊಂದಿಗೆ ಸಂಬಂಧ ಹೊಂದಿರುವ ಆತ್ಮಹತ್ಯಾ ದಾಳಿಕೋರನೊಬ್ಬ ಸೇಂಟ್ ಎಲಿಯಾಸ್ ಚರ್ಚ್ಗೆ ಪ್ರವೇಶಿಸಿದನು… ಗುಂಡು ಹಾರಿಸಿದ ನಂತರ ಸ್ಫೋಟಕ ಪಟ್ಟಿಯಿಂದ ತನ್ನನ್ನು ತಾನು ಸ್ಫೋಟಿಸಿಕೊಂಡನು”…
ರಾಜ್ಯ ಯುವನೀತಿ-2012ರ ಅನುಷ್ಟಾನದಡಿ “ನಮ್ಮೂರ ಶಾಲೆಗೆ ನಮ್ಮ ಯುವಜನರು” ಯೋಜನೆಯನ್ನು 2017-18ನೇ ಸಾಲಿನಿಂದ ಅನ್ವಯವಾಗುವಂತೆ ಸರ್ಕಾರದ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಶಿಕ್ಷಣ ಇಲಾಖೆ ಹಾಗೂ ಮಾನ್ಯತೆ ಪಡೆದಿರುವ ಕ್ರೀಡಾ ಸಂಸ್ಥೆಗಳು ಆಯೋಜಿಸುವ ತಾಲ್ಲೂಕು, ಜಿಲ್ಲೆ, ರಾಜ್ಯ ಮತ್ತು ರಾಷ್ಟ್ರ ಮಟ್ಟದ ಕ್ರೀಡಾಕೂಟಗಳಲ್ಲಿ ಉತ್ತಮ ಸಾಧನೆ ತೋರಿದ ಕ್ರೀಡಾಪಟುಗಳನ್ನು ಹೊಂದಿರುವ ಸರ್ಕಾರಿ ಶಾಲೆಗಳನ್ನು ಗುರುತಿಸಿ ಆಯ್ಕೆಯಾದ ಪ್ರತಿ ಶಾಲೆಗೆ ಸರ್ಕಾರದಿಂದ ಪ್ರೋತ್ಸಾಹವಾಗಿ ತಲಾ 1 ಲಕ್ಷ ರೂ. ಪ್ರೋತ್ಸಾಹಧನ ನೀಡಲಾಗುವುದು. ಪ್ರೋತ್ಸಾಹಧನದಲ್ಲಿ 10 ಸಾವಿರ ರೂ. ಆಯ್ಕೆಯಾದ ಶಾಲೆಯ ದೈಹಿಕ ಶಿಕ್ಷಕರಿಗೆ ಮತ್ತು 90 ಸಾವಿರ ರೂ. ಶಾಲೆಯ ಎಸ್.ಡಿ.ಎಂ.ಸಿ.ಗೆ ಅಗತ್ಯ ಕ್ರೀಡಾ ಸಾಮಾಗ್ರಿಗಳ ಖರೀದಿ ಮಾಡಲು ನೀಡಲಾಗುತ್ತದೆ. ಇದರಡಿ ಪ್ರೋತ್ಸಾಹಧನ ಪಡೆಯ ಬಯಸುವ ಸರ್ಕಾರಿ ಶಾಲೆಗಳು ಆಯಾ ಜಿಲ್ಲೆಯ 2024-25ನೇ ಸಾಲಿನ ಕ್ರೀಡೆಯಲ್ಲಿ ಉತ್ತಮ ಸಾಧನೆ ತೋರಿರುವ ಹೆಚ್ಚಿನ ಸಂಖ್ಯೆಯ ಕ್ರೀಡಾಪಟುಗಳನ್ನು ಹೊಂದಿದ ಜಿಲ್ಲೆಯ ಒಂದು ಸರ್ಕಾರಿ ಶಾಲೆಯನ್ನು ಆಯ್ಕೆ ಮಾಡಲಾಗುವುದು. ಈ ಸಂಬಂಧ ದಾವಣಗೆರೆ ಜಿಲ್ಲೆಯ ಸರ್ಕಾರಿ…
ನವದೆಹಲಿ : ಪ್ರತಿ ವರ್ಷ ಭಾರತದಲ್ಲಿ ಬ್ಯಾಂಕಿಂಗ್, ರೈಲ್ವೆ ಮತ್ತು ತೆರಿಗೆ ವ್ಯವಸ್ಥೆಯಲ್ಲಿ ಕೆಲವು ಬದಲಾವಣೆಗಳಾಗುತ್ತವೆ, ಇದು ಸಾಮಾನ್ಯ ಜನರ ದೈನಂದಿನ ಜೀವನದ ಮೇಲೆ ನೇರ ಪರಿಣಾಮ ಬೀರುತ್ತದೆ. 2025 ರ ಜುಲೈ 1 ರಿಂದಲೂ ಅನೇಕ ಹೊಸ ನಿಯಮಗಳನ್ನು ಜಾರಿಗೆ ತರಲಾಗುವುದು, ಇದರಲ್ಲಿ ಎಟಿಎಂ ಹಿಂಪಡೆಯುವಿಕೆ ಶುಲ್ಕಗಳು, ಡೆಬಿಟ್ ಕಾರ್ಡ್ ಶುಲ್ಕಗಳು, ಬ್ಯಾಂಕ್ ಖಾತೆಗೆ ಸಂಬಂಧಿಸಿದ ಕೆವೈಸಿ ನವೀಕರಣಗಳು, ರೈಲ್ವೆ ಟಿಕೆಟ್ ಬುಕಿಂಗ್ ಮತ್ತು ಪ್ರಯಾಣ ನಿಯಮಗಳು ಮತ್ತು ಜಿಎಸ್ಟಿ ರಿಟರ್ನ್ ಫೈಲಿಂಗ್ ವಿಧಾನಗಳು ಸೇರಿವೆ. ನೀವು ಬ್ಯಾಂಕಿಂಗ್ ಸೇವೆಗಳನ್ನು ಬಳಸುತ್ತಿದ್ದರೆ, ರೈಲಿನಲ್ಲಿ ಪ್ರಯಾಣಿಸುತ್ತಿದ್ದರೆ ಅಥವಾ ವ್ಯಾಪಾರ ಮಾಡುತ್ತಿದ್ದರೆ, ಈ ಹೊಸ ನಿಯಮಗಳನ್ನು ತಿಳಿದುಕೊಳ್ಳುವುದು ನಿಮಗೆ ಮುಖ್ಯವಾಗಿದೆ. ಜುಲೈ 1 ರಿಂದ ಬದಲಾಗಲಿವೆ ಈ ಎಲ್ಲಾ ನಿಯಮಗಳು 1. ಭಾರತದಲ್ಲಿ ATM ವಹಿವಾಟು ಹೊಸ ನಿಯಮಗಳು 2025 ಜುಲೈ 1, 2025 ರಿಂದ, ಬ್ಯಾಂಕಿಂಗ್ ವ್ಯವಸ್ಥೆಯಲ್ಲಿ ATM ನಿಂದ ಹಣವನ್ನು ಹಿಂಪಡೆಯಲು ಮತ್ತು ಡೆಬಿಟ್ ಕಾರ್ಡ್ಗಳನ್ನು ಬಳಸುವ ನಿಯಮಗಳು ಬದಲಾಗುತ್ತಿವೆ.…














