Author: kannadanewsnow57

ಧರ್ಮಸ್ಥಳ : ಧರ್ಮಸ್ಥಳದ ಬಗ್ಗೆ ಅಪಪ್ರಚಾರ ಖಂಡಿಸಿ ವಿವಿಧ ಪಕ್ಷಗಳಿಂದ ಧರ್ಮಸ್ಥಳ ಚಲೋ ಬೆನ್ನಲ್ಲೇ ಇದೀಗ ಧರ್ಮಸ್ಥಳದ ಪರ ಆಂಧ್ರಪ್ರದೇಶ ಡಿಸಿಎಂ ಪವನ್ ಕಲ್ಯಾಣ್ ನಿಂತಿದ್ದಾರೆ. ಹೌದು, ಆಂಧ್ರ ಪ್ರದೇಶದ ಡಿಸಿಎಂ, ನಟ ಪವನ್ ಕಲ್ಯಾಣ್ ಅವರು ಸೆಪ್ಟೆಂಬರ್ 11 ರ ಇಂದು ಧರ್ಮಸ್ಥಳಕ್ಕೆ ಭೇಟಿ ನೀಡಲಿದ್ದಾರೆ. ಇಂದ ಸಂಜೆ 5 ಗಂಟೆ ಪವನ್ ಕಲ್ಯಾಣ್ ನೇತೃತ್ವದಲ್ಲಿ ಅಪಪ್ರಚಾರದ ವಿರುದ್ಧ ಪೂಜೆ ಸಲ್ಲಿಸಲಿದ್ದಾರೆ. ಧರ್ಮಸ್ಥಳದ ಬಗ್ಗೆ ಕೇಳಿಬರುತ್ತಿರುವ ಅಪಪ್ರಚಾರ ಖಂಡಿಸಿ ಧರ್ಮಸ್ಥಳಕ್ಕೆ ಯಾತ್ರೆ ಕೈಗೊಂಡಿದ್ದಾರೆ. ಇಂದು ಧರ್ಮಸ್ಥಳಕ್ಕೆ ಭೇಟಿ ನೀಡಲಿರುವ ಡಿಸಿಎಂ ಪವನ್ ಕಲ್ಯಾಣ್ ಹಾಗೂ ಅವರನ್ನೊಳಗೊಂಡ ತಂಡ ಕ್ಷೇತ್ರದಲ್ಲಿ ವಿಶೇಷ ಆರತಿ ಪೂಜೆ ನೆರವೇರಿಸಲಿದ್ದಾರೆ.

Read More

ಬೆಂಗಳೂರು : ರಾಜ್ಯಾದ್ಯಂತ ಸೆ. 22 ರಿಂದ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆ ನಡೆಯಲಿದ್ದು, ಈ ಕುತಿತು ಸರ್ಕಾರ ಮಹತ್ವದ ಪ್ರಕಟಣೆ ಹೊರಡಿಸಿದೆ. ಕರ್ನಾಟಕ ರಾಜ್ಯ ಹಿಂದುಳಿದ ಆಯೋಗವು ಸೆಪ್ಟೆಂಬರ್ 22 ರಿಂದ ಅಕ್ಟೋಬರ್ 7ರ ವರೆಗೆ ಕೈಗೊಳ್ಳಲಿರುವ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆಗೆ ನಾಗರಿಕರು ಬೆಂಬಲ ಕೊಟ್ಟು ಸಹಕರಿಸಬೇಕು. ಆಯೋಗದ ಸಿಬ್ಬಂದಿಗಳು ರಾಜ್ಯದ ಪ್ರತಿ ಮನೆಗೆ ಭೇಟಿ ನೀಡಿ ಸ್ಟಿಕ್ಕರ್ ಅಂಟಿಸಿದ ಬಳಿಕ, ಶಿಕ್ಷಕರು ಭೇಟಿ ನೀಡಿ ಸಮೀಕ್ಷೆ ನಡೆಸಲಿದ್ದಾರೆ. ಈ ವೇಳೆ ಅವರಿಗೆ ಅಗತ್ಯ ದಾಖಲೆಗಳ ಜೊತೆಗೆ ಸೂಕ್ತ ಮಾಹಿತಿ ಒದಗಿಸಿ ಸಮೀಕ್ಷೆಯನ್ನು ಯಶಸ್ವಿಗೊಳಿಸಬೇಕಾಗಿ ತಮ್ಮಲ್ಲಿ ಕೋರುತ್ತೇವೆ ಎಂದು ಸಿಎಂ ಸಿದ್ದರಾಮಯ್ಯ ಟ್ವೀಟ್ ಮಾಡಿದ್ದಾರೆ. ಕರ್ನಾಟಕ ರಾಜ್ಯ ಹಿಂದುಳಿದ ಆಯೋಗವು ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆಯನ್ನು ಸೆಪ್ಟೆಂಬರ್ 22 ರಿಂದ ಅಕ್ಟೋಬರ್ 7ರ ವರೆಗೆ ಕೈಗೊಳ್ಳಲಿದೆ. ರಾಜ್ಯದ ಪ್ರತಿ ಮನೆಗೆ ಆಯೋಗದ ಸಿಬ್ಬಂದಿಗಳು ಭೇಟಿ ನೀಡಿ ಸ್ಟಿಕ್ಕರ್ ಅಂಟಿಸಿದ ಬಳಿಕ ಶಿಕ್ಷಕರು ಭೇಟಿ ನೀಡಿ ಸಮೀಕ್ಷೆ ನಡೆಸಲಿದ್ದಾರೆ. ಈ…

Read More

ಬೆಂಗಳೂರು : 2025-26ನೇ ಸಾಲಿನ ಆಯವ್ಯಯ ಭಾಷಣದ ಕಂಡಿಕೆ 111(v)ರ ಘೋಷಣೆಯಂತೆ ಅತೀ ಕಡಿಮೆ ಕಲಿಕಾ ಸ್ತರದಲ್ಲಿರುವ 6 ರಿಂದ 10ನೇ ತರಗತಿಯ ವಿದ್ಯಾರ್ಥಿಗಳ ಕಲಿಕಾ ಸಾಮರ್ಥ್ಯ ಹೆಚ್ಚಿಸಲು ‘ಮರು ಸಿಂಚನ’ ಕಾರ್ಯಕ್ರಮವನ್ನು ಅನುಷ್ಠಾನಗೊಳಿಸಲು ಅನುಮೋದನೆ ನೀಡುವ ಕುರಿತು ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಮೇಲೆ ಓದಲಾದ ಕ್ರಮಾಂಕ (1)ರಲ್ಲಿನ 2024-25ನೇ ಸಾಲಿನ ಆಯವ್ಯಯ ಘೋಷಿತ ಕಂಡಿಕೆ 96(c) ರಂತೆ ಕಲಿಕೆಯಲ್ಲಿ ಹಿಂದುಳಿದ 6 ಮತ್ತು 7ನೇ ತರಗತಿ ವಿದ್ಯಾರ್ಥಿಗಳಿಗೆ ಕಲಿಕಾ ಸಾಮರ್ಥ್ಯ ಸುಧಾರಿಸಲು 10 ಕೋಟಿ ರೂ. ಅನುದಾನದಲ್ಲಿ ರಾಜ್ಯದ ಮಹತ್ವಾಕಾಂಕ್ಷಿ ತಾಲ್ಲೂಕುಗಳ ಸರ್ಕಾರಿ ಶಾಲೆಗಳಲ್ಲಿ 6 & 7 ನೇ ತರಗತಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳ ಕಲಿಕಾ ಮಟ್ಟವನ್ನು ಉತ್ತಮಪಡಿಸಲು “ಮರು ಸಿಂಚನ” ಕಾರ್ಯಕ್ರಮವನ್ನು ಅನುಷ್ಠಾನಗೊಳಿಸಲು ಆಡಳಿತಾತ್ಮಕ ಅನುಮೋದನೆ ನೀಡಿ ಆದೇಶಿಸಲಾಗಿರುತ್ತದೆ. ಮೇಲೆ ಓದಲಾದ ಕ್ರಮಾಂಕ (2)ರಲ್ಲಿ 2025-26ನೇ ಸಾಲಿನಲ್ಲಿ ಸರ್ಕಾರವು ಮಂಡಿಸಿರುವ ಆಯವ್ಯಯ ಭಾಷಣದ ಕಂಡಿಕೆ 111 (v)ರಲ್ಲಿ ಈ ಕೆಳಕಂಡಂತೆ ಘೋಷಣೆ ಮಾಡಲಾಗಿದೆ. ಸರ್ಕಾರಿ ಶಾಲೆಗಳಲ್ಲಿ…

Read More

ಕರ್ನಾಟಕ ಆರ್ಯವೈಶ್ಯ ಸಮುದಾಯ ಅಭಿವೃದ್ಧಿ ನಿಗಮ ವತಿಯಿಂದ 2025-26ನೇ ಸಾಲಿನ ಅರಿವು ಶೈಕ್ಷಣಿಕ ಸಾಲ ಯೋಜನೆಯಡಿ ಸಾಲ-ಸೌಲಭ್ಯಕ್ಕಾಗಿ ಆನ್ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಅರ್ಹತೆ: ಈ ಯೋಜನೆಯಲ್ಲಿ ಸಿ.ಇ.ಟಿ./ಎನ್.ಇ.ಇ.ಟಿ ಪ್ರವೇಶ ಪರೀಕ್ಷೆಯಲ್ಲಿ ಉತ್ತೀರ್ಣರಾಗಿ ವೃತ್ತಿಪರ ಕೋರ್ಸ್ ಹಾಗೂ ಪಿ.ಹೆಚ್.ಡಿ ಯಲ್ಲಿ ವ್ಯಾಸಂಗ ಮಾಡುವ ಆರ್ಯ ವೈಶ್ಯ ವಿದ್ಯಾರ್ಥಿಗಳಿಗೆ ವಾರ್ಷಿಕ ಒಂದು ರೂ. 1 ಲಕ್ಷ ಸಾಲವನ್ನು ಶೇ.2ರ ಬಡ್ಡಿದರದಲ್ಲಿ ಶೈಕ್ಷಣಿಕ ಸಾಲ ನೀಡಲಾಗುವುದು. ವ್ಯಾಸಂಗ ಪೂರ್ಣಗೊಂಡ ನಂತರ 04 ತಿಂಗಳ ವಿರಾಮಾವಧಿ ಇರುತ್ತದೆ. ನಂತರ ಸಾಲವನ್ನು 36 ಮಾಸಿಕ ಕಂತುಗಳಲ್ಲಿ ಮರುಪಾವತಿಸಬೇಕು. ಅರ್ಜಿದಾರರು 18 ವರ್ಷ ಮೇಲ್ಪಟ್ಟು 35 ವರ್ಷದ ಒಳಗಿನವರಾಗಿರಬೇಕು. ಅರ್ಜಿದಾರರ ಕುಟುಂಬದ ವಾರ್ಷಿಕ ವರಮಾನ ಗ್ರಾಮಾಂತರ ಮತ್ತು ನಗರ ಪ್ರದೇಶದವರಿಗೆ ರೂ.6 ಲಕ್ಷ ಮಿತಿಯೊಳಗಿರಬೇಕು. ಸಾಮಾನ್ಯ ವರ್ಗದ ಆರ್ಯವೈಶ್ಯ ಸಮುದಾಯಕ್ಕೆ ಸೇರಿರಬೇಕು ಮತ್ತು ನಮೂನೆ-ಜಿ ಯಲ್ಲಿ ಜಾತಿ ಮತ್ತು ಆದಾಯ ಪ್ರಮಾಣ ಪತ್ರವಿರಬೇಕು.ಅರ್ಜಿ ಸಲ್ಲಿಸುವಾಗ ಅರ್ಜಿದಾರರು ತಮ್ಮ ಮೊಬೈಲ್ ಸಂಖ್ಯೆ ಹಾಗೂ ಬ್ಯಾಂಕ್ ಖಾತೆಯನ್ನು ತಮ್ಮ ಆಧಾರ್ ಸಂಖ್ಯೆಗೆ…

Read More

ಬೆಂಗಳೂರು: 2025-26ನೇ ಸಾಲಿನಲ್ಲಿ 984 ಸರ್ಕಾರಿ ಪ್ರಾಥಮಿಕ ಶಾಲೆಗಳಲ್ಲಿ ಪ್ರಸ್ತುತ ಇರುವ ಕನ್ನಡ/ಇತರೆ ಮಾಧ್ಯಮದ ಜೊತೆ ಆಂಗ್ಲ ಮಾಧ್ಯಮ(ದ್ರಿಭಾಷಾ) ತರಗತಿಗಳನ್ನು ಪ್ರಾರಂಭಿಸಲು ಅನುಮತಿ ನೀಡಲಾಗಿದೆ. ಮೇಲೆ ಓದಲಾದ ಕ್ರಮಾಂಕ (1)ರ ಸರ್ಕಾರದ ಆದೇಶದಲ್ಲಿ ರಾಜ್ಯದ 1000 ಸರ್ಕಾರಿ ಶಾಲೆಗಳಲ್ಲಿ 2019-20ನೇ ಸಾಲಿನಿಂದ 1ನೇ ತರಗತಿಯಿಂದ ಪ್ರಸ್ತುತ ಇರುವ ಕನ್ನಡ ಮಾಧ್ಯಮದ ಜೊತೆ ಆಂಗ್ಲ ಮಾಧ್ಯಮ (ದ್ವಿಭಾಷಾ ಮಾಧ್ಯಮ) ತರಗತಿಯನ್ನು ಕೆಲವು ಷರತ್ತುಗಳೊಂದಿಗೆ ಪ್ರಾರಂಭಿಸಲು ಅನುಮತಿ ನೀಡಿ ಆದೇಶಿಸಲಾಗಿರುತ್ತದೆ. ಕ್ರಮಾಂಕ (2)ರ ಸರ್ಕಾರದ ಆದೇಶದಲ್ಲಿ 2024-25ನೇ ಸಾಲಿನ (ಫೆಬ್ರವರಿ) ಆಯವ್ಯಯ ಭಾಷಣದ ಕಂಡಿಕೆ 96(5)ರಲ್ಲಿ “2000 ಸರ್ಕಾರಿ ಪ್ರಾಥಮಿಕ ಶಾಲೆಗಳನ್ನು ದ್ವಿಭಾಷಾ ಮಾಧ್ಯಮ(ಕನ್ನಡ ಮತ್ತು ಇಂಗ್ಲೀಷ್) ಶಾಲೆಗಳಾಗಿ ಪರಿವರ್ತಿಸಲಾಗುವುದು” ಎಂದು ಘೋಷಿಸಲಾಗಿದ್ದು, ಅದರಂತೆ ರಾಜ್ಯದ 1419 ಮತ್ತು 373 ಸರ್ಕಾರಿ ಪ್ರಾಥಮಿಕ ಶಾಲೆಗಳಲ್ಲಿ 2024-25ನೇ ಸಾಲಿನಿಂದ 1ನೇ ತರಗತಿಯಿಂದ ಹಾಲಿ ನಡೆಯುತ್ತಿರುವ ಕನ್ನಡ/ಇತರೆ ಮಾಧ್ಯಮದ ಜೊತೆಗೆ ಹೊಸದಾಗಿ ಆಂಗ್ಲ ಮಾಧ್ಯಮ (ದ್ವಿಭಾಷಾ ಮಾಧ್ಯಮ) ತರಗತಿಗಳನ್ನು ಸ್ಥಳೀಯವಾಗಿ ಲಭ್ಯವಿರುವ ಸಂಪನ್ಮೂಲಗಳನ್ನು ಬಳಸಿಕೊಂಡು ಪ್ರಾರಂಭಿಸಲು ಸರ್ಕಾರದ…

Read More

ಬೆಂಗಳೂರು :2025-26ನೇ ಸಾಲಿನ ಎಸ್.ಎಸ್.ಎಲ್.ಸಿ ಅರ್ಧವಾರ್ಷಿಕ ಪರೀಕ್ಷೆಯ ವೇಳಾಪಟ್ಟಿಯನ್ನು ಪ್ರಕಟಿಸಿದ್ದು, ದಿನಾಂಕ:12-09-2025 ರಿಂದ ದಿನಾಂಕ:19-09-2025 ರವರೆಗೆ ಅರ್ಧವಾರ್ಷಿಕ ಪರೀಕ್ಷೆ ನಡೆಸಲಿದೆ. 2025-26ನೇ ಸಾಲಿನಲ್ಲಿ ರಾಜ್ಯ ಪಠ್ಯಕ್ರಮದಲ್ಲಿ ಹತ್ತನೇ ತರಗತಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳಿಗೆ ಅರ್ಧವಾರ್ಷಿಕ ಪರೀಕ್ಷೆಯನ್ನು ನಡೆಸಲು ಮಂಡಲಿಯಿಂದ ಪ್ರಶ್ನೆಪತ್ರಿಕೆಗಳನ್ನು ಸಿದ್ದಪಡಿಸಿ ನೀಡುವಂತೆ, ಉಲ್ಲೇಖಿತ ಸುತ್ತೋಲೆಯಲ್ಲಿ ಆದೇಶವಾಗಿರುತ್ತದೆ. ಅದರಂತೆ ಎಲ್ಲಾ ವಿಷಯಗಳಿಗೆ ಮಂಡಲಿ ಹಂತದಲ್ಲಿ ಪ್ರಶ್ನೆ ಪತ್ರಿಕೆಗಳನ್ನು ಸಿದ್ಧಪಡಿಸಲಾಗಿದ್ದು, ಪ್ರಶ್ನೆ ಪತ್ರಿಕಗಳನ್ನು ಶಾಲಾ ಮುಖ್ಯ ಶಿಕ್ಷಕರ ಲಾಗಿನ್ಗೆ ಲಭ್ಯಗೊಳಿಸಲಾಗುವುದು. ಅದರಂತೆ, 2025-26 ಸಾಲಿನ 2.2.2. ಅರ್ಧವಾರ್ಷಿಕ ಪರೀಕ್ಷೆಯನ್ನು ದಿನಾಂಕ:12-09-2025 ರಿಂದ ದಿನಾಂಕ:19-09-2025 ರವರೆಗೆ ನಡೆಸಲು ತೀರ್ಮಾನಿಸಿ ವೇಳಾಪಟ್ಟಿಯನ್ನು ಮಂಡಲಿಯ ಜಾಲತಾಣದಲ್ಲಿ ಪ್ರಕಟಿಸಲಾಗಿದೆ. ಸದರಿ ವೇಳಾಪಟ್ಟಿಯನ್ನು ಈ ಪತ್ರಕ್ಕೆ ಲಗತ್ತಿಸಲಾಗಿದೆ. 2025-26ನೇ ಸಾಲಿನ ಎಸ್.ಎಸ್.ಎಲ್.ಸಿ ಅರ್ಧವಾರ್ಷಿಕ ಪರೀಕ್ಷೆಯ ವೇಳಾಪಟ್ಟಿಯನ್ನು ಎಲ್ಲಾ www.kseab.karnataka.gov.in ಪ್ರೌಢಶಾಲಾ ಮುಖ್ಯ ಶಿಕ್ಷಕರು ಮಂಡಲಿಯ ಡೌನ್ಲೋಡ್ ಮಾಡಿಕೊಂಡು ತಮ್ಮ ಶಾಲಾ ಸೂಚನಾ ಫಲಕದಲ್ಲಿ ಪ್ರಕಟಿಸಲು ಹಾಗೂ ಎಲ್ಲಾ ವಿದ್ಯಾರ್ಥಿಗಳಿಗೆ ಮಾಹಿತಿ ನೀಡುವ ಕುರಿತು ಜಿಲ್ಲಾ ಉಪನಿರ್ದೇಶಕರು(ಆಡಳಿತ) ರವರು ಮತ್ತು ಕ್ಷೇತ್ರ…

Read More

ಬೆಂಗಳೂರು : ರಾಷ್ಟ್ರೀಯ ಅರೋಗ್ಯ ಅಭಿಯಾನದಡಿ ಗುತ್ತಿಗೆ / ಹೊರಗುತ್ತಿಗೆ ಮೂಲಕ ಕಾರ್ಯನಿರ್ವಹಿಸುವ ಸಿಬ್ಬಂದಿಗಳು KAMS APP ನಲ್ಲಿ ಕಡ್ಡಾಯವಾಗಿ ಹಾಜರಾತಿ ದಾಖಲಿಸುವ ಕುರಿತು ರಾಜ್ಯ ಸರ್ಕಾರವು ಆದೇಶ ಹೊರಡಿಸಿದೆ. ಮೇಲ್ಕಂಡ ವಿಷಯಕ್ಕೆ ಸಂಬಂಧಿಸಿದಂತೆ ರಾಷ್ಟ್ರೀಯ ಆರೋಗ್ಯ ಅಭಿಯಾನದಡಿ ಗುತ್ತಿಗೆ /ಹೊರಗುತ್ತಿಗೆ ಮೂಲಕ ಕಾರ್ಯನಿರ್ವಹಿಸುವ ಸಿಬ್ಬಂದಿಗಳು ಕಛೇರಿಗೆ ಸರಿಯಾದ ಸಮಯಕ್ಕೆ ಬಾರದ ಬೆಳಿಗ್ಗೆ 10.00 ಗಂಟೆ ನಂತರವೇ ಕಛೇರಿಗೆ ಹಾಜರಾಗುತ್ತಿರುವುದು ಹಾಗೂ ಹಲವು ಸಿಬ್ಬಂದಿಗಳು ಸಂಜೆ 4.00/5.00 ಗಂಟೆಗೆ ಕಛೇರಿಯಿಂದ ಹೊರಡುತ್ತಿರುವುದನ್ನು ಗಮನಿಸಲಾಗಿರುತ್ತದೆ. ನಿಗದಿತ ಸಮಯಕ್ಕೆ ಹಾಜರಾಗದೇ ಇರುವುದು ಹಾಗೂ ಬೇಗನೇ ಕಛೇರಿಯಿಂದ ಹೊರಡುವುದರಿಂದ ದಿನ ನಿತ್ಯದ ಕಛೇರಿ ಕರ್ತವ್ಯಗಳಲ್ಲಿ ವಿಳಂಬತೆ ಉಂಟಾಗಿ ಸರಿಯಾದ ಸಮಯಕ್ಕೆ ಕಛೇರಿ ಕರ್ತವ್ಯಗಳು ಪೂರ್ಣಗೊಳ್ಳುತ್ತಿಲ್ಲ. ರಾಷ್ಟ್ರೀಯ ಆರೋಗ್ಯ ಅಭಿಯಾನದಡಿ ಕರ್ತವ್ಯ ನಿರ್ವಹಿಸುತ್ತಿರುವ ಸಿಬ್ಬಂದಿಗಳು ತಪ್ಪದೇ ಬೆಳಿಗೆ 10 ಗಂಟೆಗೆ ಕಛೇರಿಯ ಕರ್ತವ್ಯಕ್ಕೆ ಹಾಜರಾಗತಕ್ಕದ್ದು ಹಾಗೂ ಕಛೇರಿ ಅವಧಿಯಲ್ಲಿ ಸ್ಥಸ್ಥಾನದಲ್ಲಿರಬೇಕು. KAMS APP ನಲ್ಲಿ ಹಾಜರಾತಿ ದಾಖಲಿಸದ ಹಾಗೂ ಕಛೇರಿಯ ಸಮಯಕ್ಕೆ ಹಾಜರಾಗದ ಸಿಬ್ಬಂದಿಗಳ ವಿರುದ್ಧ ಸಂಬಂಧಪಟ್ಟ…

Read More

ಬೆಂಗಳೂರು: ತಂದೆ-ತಾಯಿಗೆ ಮಕ್ಕಳು ನೀಡಬೇಕಾದ ಜೀವನಾಂಶದ ಮಿತಿ ಹೆಚ್ಚಳಕ್ಕೆ ಕೇಂದ್ರ ಸರ್ಕಾರಕ್ಕೆ ಕರ್ನಾಟಕ ಹೈಕೋರ್ಟ್ ಶಿಫಾರಸ್ಸು ಮಾಡಿದೆ. 2007ರ ಪೋಷಕರ ಕಲ್ಯಾಣ ಕಾಯ್ದೆಯ ಸೆಕ್ಷನ್ 9ರ ಪರಿಶೀಲನೆ ಅಗತ್ಯವಿದೆ. ಮಕ್ಕಳು ನೀಡಬೇಕಾದ ಗರಿಷ್ಠ ಜೀವನಾಂಶದ ಮಿತಿ 10,000 ಇದೆ. 2007ರ ಜೀವನಾಂಶ ನಿರ್ವಹಣಾ ವೆಚ್ಚಕ್ಕೂ 2025ಕ್ಕೂ ವ್ಯತ್ಯಾಸವಿದೆ ಎಂಬುದಾಗಿ ಅಭಿಪ್ರಾಯ ಪಟ್ಟಿದೆ. ಈ ಹಿನ್ನಲೆಯಲ್ಲಿ ಹಣದುಬ್ಬರವನ್ನು ಪರಿಗಣಿಸಿ ಜೀವನಾಂಶದ ಗರಿಷ್ಠ ಮಿತಿ ಹೆಚ್ಚಿಸಬೇಕು ಎಂಬುದಾಗಿ ಕರ್ನಾಟಕ ಹೈಕೋರ್ಟ್ ನ್ಯಾಯಮೂರ್ತಿ ಎಂ ನಾಗಪ್ರಸನ್ನ ಅವರಿದ್ದಂತ ನ್ಯಾಯಪೀಠವು ಅಭಿಪ್ರಾಯ ಪಟ್ಟಿದೆ. ಜೀವನಾಂಶ ವಿಧಿಸಲು 2007ರ ಪೋಷಕರ ಕಲ್ಯಾಣ ಕಾಯ್ದೆಯಲ್ಲಿ ಅವಕಾಶವಿದೆ. ತಂದೆ-ತಾಯಿ ಯೋಗಕ್ಷೇಮ ನಿರ್ಲಕ್ಷಿಸುವ ಮಕ್ಕಳಿಗೆ ವಿಧಿಸುವ ಜೀವನಾಂಶ ಇದಾಗಿದೆ ಎಂದಿದೆ.

Read More

ಬೆಂಗಳೂರು : ಸ್ಯಾಂಡಲ್ ವುಡ್ ನಟ ಧ್ರುವ ಸರ್ಜಾ ಅವರ ವಿರುದ್ಧ ಮುಂಬೈನಲ್ಲಿ ಬಹುಕೋಟಿ ವಂಚನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕೋರ್ಟ್ ನಿಂದ ಧ್ರುವ ಸರ್ಜಾಗೆ ತಾತ್ಕಾಲಿಕ ರಿಲೀಫ್ ನೀಡಿದೆ. ನಿರ್ಮಾಪಕ ರಾಘವೇಂದ್ರ ಹೆಗಡೆ ಎಂಬುವರು ಮುಂಬೈನಲ್ಲಿ ನಟ ಧ್ರುವ ಸರ್ಜಾ ವಿರುದ್ಧ ದೂರು ದಾಖಲಿಸಿದ್ದರು. ಪೊಲೀಸರು ಧ್ರುವ ವಿರುದ್ಧ ಕ್ರಿಮಿನಲ್ ಮೊಕದ್ದಮೆ ದಾಖಲಿಸಿಕೊಂಡಿದ್ದರು. ಧ್ರುವ ಸರ್ಜಾ ಅವರು, ಸಿನಿಮಾ ಮಾಡಿಕೊಡುವುದಾಗಿ ಹೇಳಿ 3.10 ಕೋಟಿ ರೂಪಾಯಿ ಹಣ ಪಡೆದು, ಸಿನಿಮಾ ಮಾಡಲು ಡೇಟ್ಸ್ ನೀಡದೆ ವಂಚನೆ ಮಾಡಿದ್ದಾರೆ ಎಂದು ರಾಘವೇಂದ್ರ ಹೆಗಡೆ ಎಂಬುವರು ಮುಂಬೈನ ಅಂಬೋಲಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದರು. ವಿಚಾರಣೆ ನಡೆಸಿರುವ ಬಾಂಬೆ ಹೈಕೋರ್ಟ್ ಧ್ರುವ ಸರ್ಜಾ ವಿರುದ್ಧ ಆರೋಪ ಪಟ್ಟಿ ಸಲ್ಲಿಸದಂತೆ ಪೊಲೀಸರಿಗೆ ಸೂಚನೆ ನೀಡಿದೆ.  ಇದೊಂದು ಸಿವಿಲ್ ಮೊಕದ್ದಮೆ ಆಗಿದ್ದು ಪೊಲೀಸರು ಕ್ರಿಮಿನಲ್ ಪ್ರಕರಣ ದಾಖಲಿಸಿದ್ದಾರೆ. ಮುಂದಿನ ವಿಚಾರಣೆ ವರೆಗೆ ಮಾತ್ರ ಆರೋಪ ಪಟ್ಟಿ ಸಲ್ಲಿಸದಂತೆ ಪೊಲೀಸರಿಗೆ ಸೂಚನೆ ನೀಡಿದೆ.

Read More

ಕಠ್ಮಂಡು: ನೇಪಾಳದಲ್ಲಿ ಸರ್ಕಾರದ ವಿರುದ್ಧ ಭುಗಿಲೆದ್ದ ಹಿಂಸಾಚಾರದಿಂದಾಗಿ ಪರಿಸ್ಥಿತಿ ಹದಗೆಟ್ಟಿದೆ. ಇಲ್ಲಿಯವರೆಗೆ 20 ಕ್ಕೂ ಹೆಚ್ಚು ಜನರು ಸಾವನ್ನಪ್ಪಿದ್ದಾರೆ ಮತ್ತು ನೂರಾರು ಜನರು ಗಾಯಗೊಂಡಿದ್ದಾರೆ. ಪ್ರಧಾನಿ ಕೆ.ಪಿ. ಶರ್ಮಾ ಓಲಿ ರಾಜೀನಾಮೆ ನೀಡಿದ ನಂತರವೂ, ಪ್ರತಿಭಟನಾಕಾರರ ಕೋಪ ನಿಂತಿಲ್ಲ ಮತ್ತು ಪ್ರತಿಭಟನಾಕಾರರು ತಮ್ಮ ಬೇಡಿಕೆಗಳ ಬಗ್ಗೆ ದೃಢವಾಗಿದ್ದಾರೆ. ನೇಪಾಳದ ಅನೇಕ ಸ್ಥಳಗಳಲ್ಲಿ ಕಟ್ಟಡಗಳು ಸುಟ್ಟುಹೋದ ಸ್ಥಿತಿಯಲ್ಲಿ ಕಂಡುಬರುತ್ತವೆ ಮತ್ತು ಅವುಗಳಿಂದ ಹೊಗೆ ಹೊರಬರುತ್ತಿದೆ. ಪ್ರತಿಭಟನಾಕಾರರು ಎಲ್ಲಾ ಸರ್ಕಾರಿ ಕಚೇರಿಗಳು ಮತ್ತು ಅವುಗಳಲ್ಲಿ ಇರಿಸಲಾಗಿರುವ ಪ್ರಮುಖ ದಾಖಲೆಗಳನ್ನು ನಾಶಪಡಿಸಿದ್ದಾರೆ. ಅಂತಹ ಪರಿಸ್ಥಿತಿಯಲ್ಲಿ, ಈಗ ನೇಪಾಳದಲ್ಲಿ ಸೈನ್ಯವು ತನ್ನ ಕೈಯಲ್ಲಿ ನಿಯಂತ್ರಣವನ್ನು ತೆಗೆದುಕೊಂಡು ಇಡೀ ದೇಶದಲ್ಲಿ ಕರ್ಫ್ಯೂ ವಿಧಿಸಿದೆ. ನೇಪಾಳದಲ್ಲಿನ ಹಿಂಸಾಚಾರದ ನಡುವೆ, ನೇಪಾಳದ 18 ಜಿಲ್ಲೆಗಳ ಜೈಲುಗಳಿಂದ ಸುಮಾರು 6 ಸಾವಿರ ಕೈದಿಗಳು ಪರಾರಿಯಾಗಿದ್ದಾರೆ ಎಂಬುದು ಒಂದು ದೊಡ್ಡ ಸುದ್ದಿ. ಇದರಲ್ಲಿ, ಕಾಸ್ಕಿಯಿಂದ ಮಾತ್ರ 773 ಕೈದಿಗಳು ಮತ್ತು ನವಲ್ಪರಾಸಿ ಜೈಲಿನಿಂದ 500 ಕೈದಿಗಳು ತಪ್ಪಿಸಿಕೊಂಡಿದ್ದಾರೆ. ಚಿತ್ವಾನ್ನಿಂದ 700 ಕೈದಿಗಳು, ಕೈಲಾಲಿಯಿಂದ 612…

Read More