Subscribe to Updates
Get the latest creative news from FooBar about art, design and business.
Author: kannadanewsnow57
ಚಹಾವನ್ನ ಶಕ್ತಿಯುತ ಪಾನೀಯ ಎಂದು ಹೇಳಬಹುದು. ಚಹಾ ಕುಡಿಯುವುದರಿಂದ ಹಲವಾರು ಪ್ರಯೋಜನಗಳಿವೆ. ಹಾಗಂತ, ಜಾಸ್ತಿ ಕುಡಿದರೆ ಒಳ್ಳೆಯದಲ್ಲ. ಬೆಳಿಗ್ಗೆ ಒಂದು ಕಪ್ ಚಹಾ ಕುಡಿಯುವುದು ತುಂಬಾ ಒಳ್ಳೆಯದು. ಅಂದ್ಹಾಗೆ, ಮನೆಯಲ್ಲಿ ದೊಡ್ಡವರು ಟೀ ಕುಡಿದರೆ ಮಕ್ಕಳೂ ಟೀ ಕುಡಿಯುತ್ತಾರೆ. ಸಹಜವಾಗಿ ಮಕ್ಕಳು ಆಟ ಮಾಡಿದಾಗ ಹಿರಿಯರೂ ಚಹಾ ಕೊಡುತ್ತಾರೆ. ಆದ್ರೆ, ಮಕ್ಕಳು ಟೀ ಕುಡಿಯಬಾರದು ಎಂದು ಆರೋಗ್ಯ ತಜ್ಞರು ಸಲಹೆ ನೀಡುತ್ತಾರೆ. ಅತಿಯಾಗಿ ಟೀ ಕುಡಿಯುವುದರಿಂದ ಸೋಮಾರಿಗಳಾಗುತ್ತಾರೆ. ಇನ್ನು ಅವರಲ್ಲಿ ಅಸಿಡಿಟಿ ಸಮಸ್ಯೆಯೂ ಬರಬಹುದು. ಇದಲ್ಲದೆ, ಮೂತ್ರದ ಸಮಸ್ಯೆಗಳನ್ನ ಸಹ ಎದುರಿಸಬೇಕಾಗುತ್ತದೆ. ಹೀಗಾಗಿ 10 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳಿಗೆ ಚಹಾವನ್ನ ನೀಡಬಾರದು ಎಂದು ಆರೋಗ್ಯ ತಜ್ಞರು ಸೂಚಿಸುತ್ತಾರೆ. ಇದಲ್ಲದೇ ಅವರಿಗೆ ನಿದ್ರೆಯ ಸಮಸ್ಯೆಯೂ ಕಾಡಬಹುದು ಎನ್ನಲಾಗಿದೆ. ಚಿಕ್ಕ ಮಕ್ಕಳೂ ಚಹಾ ಸೇವನೆಯಿಂದ ಹಲ್ಲಿನ ಸಮಸ್ಯೆಗಳಿಗೆ ತುತ್ತಾಗುವ ಅಪಾಯವಿದ್ದು, ಹಲ್ಲುಗಳು ಕೂಡ ಬೇಗನೆ ಸವೆಯುತ್ತವೆ. ಬಾಯಿಯಿಂದಲೂ ದುರ್ವಾಸನೆ ಬರುತ್ತದೆ. ಅಲ್ಲದೇ ಟೀ ಕುಡಿಯುವುದರಿಂದ ಮಕ್ಕಳಲ್ಲಿ ರಕ್ತಹೀನತೆ ಉಂಟಾಗುತ್ತದೆ. ಟೀ ಕುಡಿಯುವುದರಿಂದ ಮಕ್ಕಳ…
ನಗರ ಪ್ರದೇಶಗಳಲ್ಲಿ ಪ್ರಸಕ್ತ ಸಾಲಿನ ಪ್ರಧಾನ ಮಂತ್ರಿ ಆವಾಸ್ (ನಗರ) 2.0 ಯೋಜನೆಯಡಿ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಒಂಟಿ ಮಹಿಳೆಯರು, ಅಂಗವಿಕಲರು, ಹಿರಿಯ ನಾಗರಿಕರು, ತೃತೀಯ ಲಿಂಗಿಗಳು, ಎಸ್.ಸಿ., ಎಸ್.ಟಿ, ಹಿಂದುಳಿದ, ಅಲ್ಪಸಂಖ್ಯಾತ ವರ್ಗದವರು, ಸ್ವಚ್ಛತಾ ಕಾರ್ಮಿಕರು, ಪಿಎಂ.ಅವಾಸ್ ಯೋಜನೆಯಡಿ ಗುರುತಿಸಲ್ಪಟ್ಟ ಬೀದಿ ವ್ಯಾಪಾರಿಗಳು ಮತ್ತು ಪ್ರಧಾನ್ ಮಂತ್ರಿ ವಿಶ್ವಕರ್ಮ ಯೋಜನೆಯಡಿ ಗುರುತಿಸಿದ ಕುಶಲ ಕರ್ಮಿಗಳು, ಅಂಗನವಾಡಿ ಕಾರ್ಯಕರ್ತರು, ಕಟ್ಟಡ ಮತ್ತು ಇತರೆ : ನಿರ್ಮಾಣ ಕಾರ್ಮಿಕರು, ವಲಸೆ ಬಂದ ಕುಟುಂಬದವರು ತಮ್ಮ ಅರ್ಜಿಗಳನ್ನು ವೆಬ್ಸೈಟ್ http://pmayurban.gov.in ನಲ್ಲಿ ಅರ್ಜಿ ಸಲ್ಲಿಸಬಹುದು. ಅರ್ಜಿಗಳ ಸರ್ವೆ ಕಾರ್ಯವನ್ನು ಮಹಾನಗರ ಪಾಲಿಕೆಯ ಕಂದಾಯ ಶಾಖೆಯ ಅಧಿಕಾರಿ, ಸಿಬ್ಬಂದಿಗಳು ಮನೆ ಮನೆಗೆ ಭೇಟಿ ನೀಡಿ ಮಾಹಿತಿ ಸಂಗ್ರಹಿಸುತ್ತಿದ್ದು, ಸರ್ವೆ ಕಾರ್ಯವು ಸಂಪೂರ್ಣ ಪಾರದರ್ಶಕವಾಗಿ ನಡೆಯುತ್ತಿದೆ. ಪಾಲಿಕೆಯ ಅಧಿಕಾರಿ, ಸಿಬ್ಬಂದಿ ಹಾಗೂ ಯಾವುದೇ ಮಧ್ಯವರ್ತಿಗಳು ಹಣ ನೀಡುವಂತೆ ಬೇಡಿಕೆ ಇಟ್ಟರೆ, ಅಂತಹವರ ವಿರುದ್ದ ತಕ್ಷಣ ಮಹಾನಗರ ಪಾಲಿಕೆ ಕಚೇರಿ, ಪೆÇಲೀಸ್ ಠಾಣೆಯಲ್ಲಿ ದೂರು ದಾಖಲಿಸಲು ಸಲಹೆ ನೀಡಿ ಫಲಾನುಭವಿಗಳು…
ಬೆಳಗಾವಿ ಡಿಸಿಸಿ ಬ್ಯಾಂಕ್ ಚುನಾವಣೆ ಸಂಬಂಧ ಹುಕ್ಕೇರಿ ತಾಲೂಕಿನ ಮದಿಹಳ್ಳಿ ಗ್ರಾಮದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಸತೀಶ ಜಾರಕಿಹೊಳಿ ಎದುರೇ, ಅವರನ್ನು ಬೆಂಬಲಿಸಿದ್ದ ಪ್ರಾಥಮಿಕ ಕೃಷಿ ಪತ್ತಿನ ಸಂಘದ ನಿರ್ದೇಶಕನನ್ನು ಆತನ ಪತ್ನಿಯೇ ಕೊರಳಪಟ್ಟಿ ಹಿಡಿದು ಎಳೆದಾಡಿದ ಘಟನೆ ನಡೆದಿದೆ. ಹುಕ್ಕೇರಿ ತಾಲೂಕಿನ ಮದಿಹಳ್ಳಿ ಗ್ರಾಮದಲ್ಲಿ ಸೋಮವಾರ ನಡೆದ ಡಿಸಿಸಿ ಬ್ಯಾಂಕ್ ಚುನಾವಣೆ ಸಂಬಂಧಿತ ಸಭೆಯಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಸತೀಶ ಜಾರಕಿಹೊಳಿ ಎದುರೇ ಪಿಕೆಪಿಎಸ್ ನಿರ್ದೇಶಕನ ಪತ್ನಿಯೇ ಗಂಡನ ಕೊರಳಪಟ್ಟಿ ಹಿಡಿದು ಮನೆಗೆ ಎಳೆದೊಯ್ದಿದ್ದಾರೆ. ಪ್ರಾಥಮಿಕ ಕೃಷಿ ಪತ್ತಿನ ಸಂಘ ಹಾಗೂ ಗ್ರಾಮೀಣ ವಿದ್ಯುತ್ ಸಹಕಾರಿ ಸಂಘದ ಚುನಾವಣಾ ಪ್ರಚಾರಕ್ಕೆಂದು ಸಚಿವ ಸತೀಶ್ ಜಾರಕಿಹೊಳಿ ಅವರು ಹುಕ್ಕೇರಿ ತಾಲೂಕಿನ ಮದಿಹಳ್ಳಿ ಗ್ರಾಮಕ್ಕೆ ತೆರಳಿದ್ದ ವೇಳೆ ಅಲ್ಲಿನ ಪಿಕೆಪಿಎಸ್ ಕಚೇರಿ ಎದುರು ಮದಿಹಳ್ಳಿ ಪಿಕೆಪಿಎಸ್ ಸದಸ್ಯ ಮಾರುತಿ ಸನದಿ ಕೊರಳಪಟ್ಟಿ ಹಿಡಿದು ಪತ್ನಿ ಲಗಮವ್ವ ಮನೆಗೆ ಕರೆದೊಯ್ದಿದ್ದಾರೆ.
ಬೆಂಗಳೂರು: ಬೆಳೆಹಾನಿಗೊಳಗಾದ ರಾಜ್ಯದ ರೈತರಿಗೆ ಸಿಎಂ ಸಿದ್ದರಾಮಯ್ಯ ಸಿಹಿಸುದ್ದಿ ನೀಡಿದ್ದು, ಅತಿವೃಷ್ಟಿಯಿಂದ ಬೆಳೆ ಹಾನಿಗೊಳಗಾದ ರೈತರಿಗೆ ಪರಿಹಾರ ಮೊತ್ತ ಹೆಚ್ಚಳಕ್ಕೆ ಸರ್ಕಾರ ಮುಂದಾಗಿದೆ ಎಂದು ತಿಳಿಸಿದ್ದಾರೆ. ಜಿಲ್ಲಾಧಿಕಾರಿಗಳು ಹಾಗೂ ಜಿಲ್ಲಾ ಮಟ್ಟದ ಅಧಿಕಾರಿಗಳೊಂದಿಗೆ ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರು ಸಭೆ ಬಳಿಕ ಮಾತನಾಡಿದ ಸಿಎಂ ಸಿದ್ದರಾಮಯ್ಯ, ಅತಿವೃಷ್ಟಿಯಿಂದ ಬೆಳೆ ಹಾನಿಗೊಳಗಾದ ರೈತರಿಗೆ ಪರಿಹಾರ ಮೊತ್ತ ಹೆಚ್ಚಳಕ್ಕೆ ಸರ್ಕಾರ ಮುಂದಾಗಿದೆ. ಐದು ವರ್ಷದ ಬಳಿಕ ಪರಿಹಾರಧನ ಪರಿಷ್ಕರಣೆ ಮಾಡಲಿದ್ದು, ಹೆಚ್ಚುವರಿ ಮೊತ್ತವನ್ನು ರಾಜ್ಯ ಸರ್ಕಾರ ಭರಿಸಲಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಈ ಬಗ್ಗೆ ಘೋಷಣೆ ಮಾಡಿದ್ದಾರೆ. ರಾಜ್ಯದಲ್ಲಿ ಅಂದಾಜು 5.20 ಲಕ್ಷ ಹೆಕ್ಟೇರ್ ಪ್ರದೇಶದಲ್ಲಿ ಬೆಳೆ ನಷ್ಟವಾಗಿರುವ ಅಂದಾಜಿದ್ದು, ಎಸ್.ಡಿ.ಆರ್.ಎಫ್. ಮಾರ್ಗಸೂಚಿಯ ಪ್ರಕಾರ ನೀಡುವ ಪರಿಹಾರ ಏನೇನೂ ಸಾಲದು ಎನ್ನುವ ಅಭಿಪ್ರಾಯದ ಹಿನ್ನೆಲೆಯಲ್ಲಿ ಐದು ವರ್ಷದ ನಂತರ ಬೆಳೆ ನಷ್ಟ ಪರಿಹಾರ ಪರಿಷ್ಕರಣೆಗೆ ಸರ್ಕಾರ ಮುಂದಾಗಿದೆ. ಈ ಹಿಂದೆ ಬಿಜೆಪಿ ಸರ್ಕಾರದ ಅವಧಿಯಲ್ಲಿ ರೈತರಿಗೆ ಬೆಳೆ ನಷ್ಟ ಪರಿಹಾರ ಮೊತ್ತ ಹೆಚ್ಚಳ ಮಾಡಲಾಗಿತ್ತು. ಮಳೆಯಿಂದಾಗಿ 683…
ಸಾಮಾಜಿಕ ಮಾಧ್ಯಮಗಳಲ್ಲಿ ಲೈಕ್ಗಳು, ವೀಕ್ಷಣೆಗಳು ಮತ್ತು ಕಾಮೆಂಟ್ಗಳನ್ನು ಪಡೆಯುವ ದುರಾಸೆಯಲ್ಲಿ ಜನರು ಇತ್ತೀಚಿನ ದಿನಗಳಲ್ಲಿ ತಮ್ಮ ಜೀವನದ ಜೊತೆ ಆಟವಾಡುತ್ತಿದ್ದಾರೆ. ಅಂತಹ ಒಂದು ಇತ್ತೀಚಿನ ಪ್ರಕರಣ ಬೆಳಕಿಗೆ ಬಂದಿದೆ, ಅವರ ವೀಡಿಯೊ X ನಲ್ಲಿ ವೈರಲ್ ಆಗುತ್ತಿದೆ. ವೀಡಿಯೊದಲ್ಲಿ ಯುವಕನೊಬ್ಬ ರೈಲು ಬರುವ ಮೊದಲು ಉದ್ದೇಶಪೂರ್ವಕವಾಗಿ ರೈಲ್ವೆ ಹಳಿಯ ಮೇಲೆ ಮಲಗಿ, ತನ್ನ ಜೀವದೊಂದಿಗೆ ಆಟವಾಡುತ್ತಾನೆ. ಇದು ಮಾತ್ರವಲ್ಲದೆ, ರೈಲು ಹೊರಟಾಗಲೂ ಅವನು ಓಡುವುದಿಲ್ಲ, ಬದಲಾಗಿ ಮಲಗಿರುತ್ತಾನೆ. ಈ ವೀಡಿಯೊವನ್ನು ನೋಡಿದ ನಂತರ, ಬಳಕೆದಾರರು ರೋಮಾಂಚನಗೊಂಡರು. ಆದಾಗ್ಯೂ, ಆ ವ್ಯಕ್ತಿಯ ಈ ಹುಚ್ಚುತನಕ್ಕೆ ಜನರು ವಿಭಿನ್ನವಾಗಿ ಪ್ರತಿಕ್ರಿಯಿಸಿದ್ದಾರೆ. ಈ ವೀಡಿಯೊವನ್ನು ಸಾಮಾಜಿಕ ಮಾಧ್ಯಮ ವೇದಿಕೆ X ನಲ್ಲಿ @SaffronSunanda ಎಂಬ ಹ್ಯಾಂಡಲ್ ಹಂಚಿಕೊಂಡಿದ್ದಾರೆ. ವೀಡಿಯೊದ ಶೀರ್ಷಿಕೆ ಹೀಗಿದೆ – ‘ಇಂತಹ ರೀಲ್ ಸೃಷ್ಟಿಕರ್ತರನ್ನು ಜೈಲಿಗೆ ಹಾಕಬೇಕು. ಈ ಜೋಕರ್ಗಳು ತಮ್ಮ ಜೀವವನ್ನು ಪಣಕ್ಕಿಡುತ್ತಿದ್ದಾರೆ ಮತ್ತು ಇತರರನ್ನು ಸಹ ಅದೇ ರೀತಿ ಮಾಡಲು ಪ್ರಚೋದಿಸುತ್ತಿದ್ದಾರೆ. ಇದು ಮೂರ್ಖತನ. ಎಂದು ಬರೆದಿದ್ದಾರೆ. ವೀಡಿಯೊದಲ್ಲಿ, ಆ…
ಬಳ್ಳಾರಿಯಿಂದ ಜೋಗ್ ಫಾಲ್ಸ್ ಮತ್ತು ಗೋಕಾಕ್ ಫಾಲ್ಸ್ ಪ್ರವಾಸಿ ತಾಣಗಳಿಗೆ ಹೋಗುವ ಪ್ರಯಾಣಿಕರ ಅನುಕೂಲಕ್ಕಾಗಿ ವಾರಾಂತ್ಯದ ದಿನಗಳಲ್ಲಿ ವಿಶೇಷ ವೇಗದೂತ ಸಾರಿಗೆ ಸೌಲಭ್ಯವನ್ನು ಬಳ್ಳಾರಿ ವಿಭಾಗದಿಂದ ಕಲ್ಪಿಸಲಾಗಿದೆ. ಬಳ್ಳಾರಿ-ಜೋಗ್ ಫಾಲ್ಸ್: ಬಳ್ಳಾರಿಯಿಂದ ಬೆಳಿಗ್ಗೆ 6 ಗಂಟೆಗೆ ಹೊರಟು, ಮಧ್ಯಾಹ್ನ 2 ಗಂಟೆಗೆ ಜೋಗ್ ಫಾಲ್ಸ್ ಗೆ ತಲುಪಲಿದೆ(ವಯಾ ಬಳ್ಳಾರಿ-ಚಳ್ಳಕೆರೆ- ಚಿತ್ರದುರ್ಗ- ಚನ್ನಗಿರಿ- ಶಿವಮೊಗ್ಗ- ಸಾಗರ-ಜೋಗ್ ಫಾಲ್ಸ್). ಜೋಗ್ ಫಾಲ್ಸ್ ನಿಂದ ರಾತ್ರಿ 8 ಗಂಟೆಗೆ ಅಲ್ಲಿಂದ ಹೊರಟು ಮರುದಿನ ಬೆಳಿಗ್ಗೆ 4 ಗಂಟೆಗೆ ಬಳ್ಳಾರಿಗೆ ತಲುಪಲಿದೆ. ಪ್ರಯಾಣ ದರ- 570 ರೂ. ಈ ಸಾರಿಗೆಯು ಸೆ.13 ರಿಂದ ಪ್ರತಿ ಶನಿವಾರ ಮತ್ತು ಪ್ರತಿ ರವಿವಾರ ಕಾರ್ಯಾಚರಣೆ ಮಾಡಲಾಗುವುದು. ಬಳ್ಳಾರಿ-ಗೋಕಾಕ್ ಫಾಲ್ಸ್: ಬಳ್ಳಾರಿಯಿಂದ ಬೆಳಿಗ್ಗೆ 6 ಗಂಟೆಗೆ ಹೊರಟು ಮಧ್ಯಾಹ್ನ 01.15 ಕ್ಕೆ ಗೋಕಾಕ್ ಫಾಲ್ಸ್ ಗೆ ತಲುಪಲಿದೆ(ವಯಾ ಹೊಸಪೇಟೆ-ಕೊಪ್ಪಳ- ಗದಗ- ನವಲಗುಂದ- ನರಗುಂದ- ಹುಲಿಕಟ್ಟಿ- ಮನೊಳ್ಳಿ- ಯರಗಟ್ಟಿ- ಮಮದಾಪುರ). ಗೋಕಾಕ್ ಫಾಲ್ಸ್ ನಿಂದ ರಾತ್ರಿ 8 ಗಂಟೆಗೆ ಅಲ್ಲಿಂದ ಹೊರಟು ಮರುದಿನ…
ಎದೆ ನೋವು ಬಂದಾಗ ಅನೇಕ ಜನರು ಭಯಪಡುತ್ತಾರೆ. ಅದು ಗ್ಯಾಸ್ ನೋವೋ ಅಥವಾ ಹೃದಯಾಘಾತವೋ ಎಂಬ ಬಗ್ಗೆ ಅನೇಕ ಜನರು ಗೊಂದಲಕ್ಕೊಳಗಾಗುತ್ತಾರೆ. ಎರಡರ ಲಕ್ಷಣಗಳು ಕೆಲವೊಮ್ಮೆ ಹೋಲುತ್ತವೆಯಾದರೂ, ಅವುಗಳ ನಡುವೆ ಸ್ಪಷ್ಟ ವ್ಯತ್ಯಾಸಗಳಿವೆ. ಈ ವ್ಯತ್ಯಾಸಗಳನ್ನು ತಿಳಿದುಕೊಳ್ಳುವುದು ಮುಖ್ಯ. ಗ್ಯಾಸ್ ನೋವಿನ ಲಕ್ಷಣಗಳು ಗ್ಯಾಸ್ ನೋವು ಸಾಮಾನ್ಯವಾಗಿ ಹೊಟ್ಟೆಯ ಮೇಲ್ಭಾಗ ಅಥವಾ ಎದೆಯಲ್ಲಿ ಕಂಡುಬರುತ್ತದೆ. ಈ ನೋವು ಒಂದೇ ಸ್ಥಳದಲ್ಲಿ ಸ್ಥಿರವಾಗಿರುವುದಿಲ್ಲ. ಇದು ಹೃದಯ ಪ್ರದೇಶದಿಂದ ಹೊಟ್ಟೆ ಮತ್ತು ಬೆನ್ನಿಗೆ ಚಲಿಸಬಹುದು. ತಿಂದ ನಂತರ ಅಥವಾ ಅಜೀರ್ಣ ಸಂಭವಿಸಿದಾಗ ಈ ನೋವು ಸಂಭವಿಸುತ್ತದೆ. ಗ್ಯಾಸ್ ವಿಸರ್ಜನೆಯ ನಂತರ ಅಥವಾ ಮಲವಿಸರ್ಜನೆಯ ನಂತರ ಈ ನೋವು ಕಡಿಮೆಯಾಗುತ್ತದೆ. ಈ ನೋವು ತೀವ್ರತೆಯಲ್ಲಿ ಬದಲಾಗುತ್ತದೆ. ಕೆಲವೊಮ್ಮೆ ಇದು ತೀವ್ರವಾಗಿರುತ್ತದೆ, ಇತರ ಬಾರಿ ಅದು ಮಂದವಾಗಿರುತ್ತದೆ. ಹೊಟ್ಟೆಗೆ ಒತ್ತಡ ಹಾಕಿದಾಗ ಅಥವಾ ಚಲಿಸುವಾಗ ನೋವು ಹೆಚ್ಚಾಗಬಹುದು. ಹೃದಯ ನೋವಿನ ಲಕ್ಷಣಗಳು ಹೃದಯ ಸ್ನಾಯುಗಳಿಗೆ ರಕ್ತದ ಹರಿವು ಕಡಿಮೆಯಾದಾಗ ಹೃದಯ ನೋವು ಉಂಟಾಗುತ್ತದೆ. ಈ ನೋವು ಎದೆಯ…
ಕರ್ನಾಟಕ ಸರ್ಕಾರದ ಐದು ಗ್ಯಾರಂಟಿ ಯೋಜನೆಗಳಲ್ಲಿ “ಗೃಹಲಕ್ಷ್ಮಿ” ಯೋಜಯು ಒಂದಾಗಿದ್ದು, ದಿನಾಂಕ:-06-06-2023ರ ಆದೇಶ ಹಾಗೂ ದಿನಾಂಕ:-17-07-2023ರ ಮಾರ್ಗಸೂಚಿ ಯಂತೆ ಅನುಷ್ಠಾನಗೊಳಿಸಲಾಗುತ್ತಿದೆ. ದಿನಾಂಕ:-17-07-2023 ರಂದು ಹೊರಡಿಸಿದ ಮಾರ್ಗಸೂಚಿ ಅನ್ವಯ ಕುಟುಂಬದ ಯಜಮಾನಿ ಅಥವಾ ಯಜಮಾನಿಯ ಪತಿ ಆದಾಯ ತೆರಿಗೆ ಪಾವತಿದಾರರಾಗಿದ್ದಲ್ಲಿ ಹಾಗೂ ಜಿ.ಎಸ್.ಟಿ. ರಿಟನ್ರ್ಸ್ ಸಲ್ಲಿಸುವವರಾಗಿದ್ದಲ್ಲಿ ಯೋಜನೆಗೆ ಅರ್ಹರಿರುವುದಿಲ್ಲ. ಈವರೆಗೆ ರಾಜ್ಯಾದ್ಯಾಂತ ಗೃಹಲಕ್ಷ್ಮಿ ಯೋಜನೆಯಡಿ 2.13 ಲಕ್ಷ ಫಲಾನುಭವಿಗಳು ಐಟಿ/ಜಿಎಸ್ಟಿ ವ್ಯಾಪ್ತಿಗೊಳಪಡುತ್ತಾರೆ ಎಂದು ತಿಳಿದು ಬಂದಿರುತ್ತದೆ. ದಿನಾಂಕ: 15-07-2025ರ ಎಂಪಿಐಸಿ ಸಭೆಯಲ್ಲಿ ಐಟಿ/ಜಿಎಸ್ಟಿ ಟ್ಯಾಕ್ಸ್ ಪೇಯಿ ಎಂದು ಸ್ಟೆಟಸ್ ತೋರಿಸುತ್ತಿರುವ ಫಲಾನುಭವಿಗಳು ಐಟಿ/ಜಿಎಸ್ಟಿ ಟ್ಯಾಕ್ಸ್ ಪೇಯಿ ಗೆ ಒಳಪಡುವುದರಿಂದ ಅರ್ಜಿ ಪರಿಗಣಿಸಲು ಬರುವುದಿಲ್ಲ. ಇನ್ನು ಮುಂದೆ ಗೃಹಲಕ್ಷ್ಮಿ ಯೋಜನೆಯಡಿ ಐಟಿ/ಜಿಎಸ್ಟಿ ಟ್ಯಾಕ್ಸ್ ಪೇಯಿ ಎಂದು ಸ್ಟೆಟಸ್ ತೋರಿಸುತ್ತಿರುವ ಫಲಾನುಭವಿಗಳ ಧನಸಹಾಯ ಪಾವತಿಗಾಗಿ ಮನವಿ ಸಲ್ಲಿಸಿದಲ್ಲಿ ಐಟಿ/ಜಿಎಸ್ಟಿ ಟ್ಯಾಕ್ಸ್ ಪೇಯಿಗಳಾಗಿರುವುದರಿಂದ ಅರ್ಜಿಯನ್ನು ಪರಿಗಣಿಸುವುದಿಲ್ಲ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಶಿಶು ಅಭಿವೃದ್ಧಿ ಯೋಜನೆ, ಸೋಮವಾರಪೇಟೆ ಇವರ ಹಂತದಲ್ಲಿ ಹಿಂಬರಹ ನೀಡುವಂತೆ ಸೂಚಿಸಲಾಗಿದೆ…
ತರಕಾರಿಗಳ ರಾಜ ಬದನೆಕಾಯಿ ಕ್ಯಾಲೋರಿಗಳು, ಕಾರ್ಬೋಹೈಡ್ರೇಟ್ಗಳು, ಫೈಬರ್, ಪ್ರೋಟೀನ್, ಮ್ಯಾಂಗನೀಸ್, ಫೋಲೇಟ್, ಪೊಟ್ಯಾಸಿಯಮ್, ವಿಟಮಿನ್ ಕೆ, ಸಿ ಅನ್ನು ಹೊಂದಿರುತ್ತದೆ. ಇದರಲ್ಲಿ ಕಡಿಮೆ ಪ್ರಮಾಣದಲ್ಲಿ ನಿಯಾಸಿನ್, ಮೆಗ್ನೀಸಿಯಮ್ ಮತ್ತು ತಾಮ್ರವೂ ಇರುತ್ತದೆ. ಬದನೆಕಾಯಿಯಿಂದ ವಿವಿಧ ಅಡುಗೆಗಳನ್ನು ತಯಾರಿಸಲಾಗುತ್ತದೆ. ಬದನೆಕಾಯಿ ಪಕೋಡಾಗಳು ಅಥವಾ ಸ್ಟಫ್ಡ್ ಬದನೆಕಾಯಿ, ಬೈಂಗನ್ ರೈಸ್ನಂತಹ ಅನೇಕ ರೀತಿಯ ಆಹಾರವನ್ನು ತಯಾರಿಸಲಾಗುತ್ತದೆ. ಇವುಗಳ ಬಗ್ಗೆ ಯೋಚಿಸಿದರೆ ನಿಮ್ಮ ಬಾಯಲ್ಲಿ ನೀರು ಬರುತ್ತದೆ. ಆದರೆ ಈ ರುಚಿಕರವಾದ ತರಕಾರಿ ಕೆಲವು ಜನರಿಗೆ ವಿಷಕ್ಕಿಂತ ಕಡಿಮೆಯಿಲ್ಲ ಎಂದು ನಿಮಗೆ ತಿಳಿದಿದೆಯೇ? ಆಯುರ್ವೇದದಲ್ಲಿ, ಬದನೆಕಾಯಿ ಕಫ ಮತ್ತು ಪಿತ್ತರಸವನ್ನು ಹೆಚ್ಚಿಸುತ್ತದೆ ಎಂದು ಉಲ್ಲೇಖಿಸಲಾಗಿದೆ. ಅಂದರೆ ಕೆಲವು ಕಾಯಿಲೆಗಳಿರುವ ಜನರಿಗೆ ಇದು ಸಮಸ್ಯೆಗಳನ್ನು ಉಂಟುಮಾಡುತ್ತದೆ. ನೀವು ಬದನೆಕಾಯಿಯನ್ನು ತುಂಬಾ ಇಷ್ಟಪಡುತ್ತಿದ್ದರೆ.. ಖಂಡಿತವಾಗಿಯೂ ಇಂದು ಈ ಲೇಖನವನ್ನು ಓದಿ. ಏಕೆಂದರೆ ವರ್ಷಗಳಿಂದ ನಿಮ್ಮನ್ನು ಕಾಡುತ್ತಿರುವ ಸಮಸ್ಯೆಗಳು ನಿಮ್ಮ ನೆಚ್ಚಿನ ಬದನೆಕಾಯಿಯಿಂದಾಗಿರಬಹುದು. ಸಂಧಿವಾತ: ನಿಮಗೆ ಕೀಲು ನೋವು ಇದ್ದರೆ, ಬದನೆಕಾಯಿಯಿಂದ ದೂರವಿರಿ. ಬದನೆಕಾಯಿಯಲ್ಲಿ ‘ಸೋಲನೈನ್’ ಎಂಬ ವಿಶೇಷ ಅಂಶವಿದೆ.…
ಮಂಡ್ಯ : ಮಂಡ್ಯ ಜಿಲ್ಲೆಯ ಮದ್ದೂರು ಪಟ್ಟಣದಲ್ಲಿ ಗಣೇಶ ವಿಸರ್ಜನೆ ವೇಳೆ ಕಲ್ಲುತೂರಾಟ ಪ್ರಕರಣಕ್ಕೆ ಸಂಬಂಧಪಟ್ಟಂತೆ ಇಂದು ಮದ್ದೂರು ಬಂದ್ ಗೆ ಹಿಂದೂ ಪರ ಸಂಘಟನೆಗಳು ಕರೆ ನೀಡಿವೆ. ಮಂಡ್ಯ ಜಿಲ್ಲೆಯ ಮದ್ದೂರಿ ಪಟ್ಟಣದಲ್ಲಿ ಗಣೇಶ ವಿಸರ್ಜನೆ ವೇಳೆ ಕೆಲವು ಕಿಡಿಗೇಡಿಗಳು ಮೆರವಣಿಗೆ ಮೇಲೆ ಕಲ್ಲುತೂರಾಟ ನಡೆಸಿದ್ದರು. ಈ ಹಿನ್ನೆಲೆಯಲ್ಲಿ ಇಂದು ಮದ್ದೂರು ಪಟ್ಟಣದಲ್ಲಿ ನಿಷೇಧಜ್ಞೆ ಜಾರಿಗೆ ಇದ್ದರೂ ಸಹ ಮಹಿಳೆಯರು ಮಕ್ಕಳು ಸೇರಿದಂತೆ ಸಾವಿರಾರು ಸಂಖ್ಯೆಯಲ್ಲಿ ಹಿಂದೂ ಕಾರ್ಯಕರ್ತರು ಸೇರಿ ಪ್ರತಿಭಟನೆ ನಡೆಸಿದ್ದರು. ಈ ವೇಳೆ ಪ್ರತಿಭಟನೆ ವೇಳೆ ಕೂಡ ಕೆಲವು ಕಡೆಗೆಗಳು ಕಲ್ಲುತೂರಾಟ ನಡೆಸಿದ್ದಾರೆ ಈ ಹಿನ್ನೆಲೆಯಲ್ಲಿ ಪೊಲೀಸರು ಗುಂಪು ಚದುರಿಸಲು ಲಾಠಿ ಚಾರ್ಜ್ ನಡೆಸಿದರು ಇದೀಗ ಪರಿಸ್ಥಿತಿ ತಿಳಿಕೊಟ್ಟಿದ್ದು ಪ್ರತಿಭಟನೆಯನ್ನು ಹಿಂದೂ ಕಾರ್ಯಕರ್ತರು ಹಿಂಪಡೆದಿದ್ದಾರೆ. ಈಗ ಇಂದು ಮದ್ದೂರು ಪಟ್ಟಣ ಬಂದ್ ಗೆ ಹಿಂದೂ ಸಂಘಟನೆಗಳು ಕರೆ ನೀಡಿವೆ. ಗಣೇಶ ಮೆರವಣಿಗೆ ಸಂದರ್ಭದಲ್ಲಿ ನಡೆಯಬಾರದು ನಡೆದು ಹೋಗಿದ್ದು ಶಾಂತಿಯಿಂದ ನಡೆಯುತ್ತಿದ್ದ ಮೆರವಣಿಗೆಯಲ್ಲಿ ಕಲ್ಲುತೂರಾಟ ನಡೆಸಿ ಗಲಭೆ ನಡೆಸಿದ್ದರಿಂದ…














