Subscribe to Updates
Get the latest creative news from FooBar about art, design and business.
Author: kannadanewsnow57
ನವದೆಹಲಿ : ಇಂದು 15 ಸೆಪ್ಟೆಂಬರ್ 2024 ರ ರಾತ್ರಿ, ಬೃಹತ್ ಕ್ಷುದ್ರಗ್ರಹ “ON 2024” ಭೂಮಿಯ ಕಡೆಗೆ ಅತಿ ವೇಗದಲ್ಲಿ ಬರುತ್ತಿದೆ. ನಾಸಾ ಪ್ರಕಾರ, ಈ ಕ್ಷುದ್ರಗ್ರಹವು ಗಂಟೆಗೆ ಸುಮಾರು 25,000 ಮೈಲುಗಳ ವೇಗದಲ್ಲಿ ಭೂಮಿಯ ಸಮೀಪ ಹಾದುಹೋಗುತ್ತದೆ. ಇದರ ಉದ್ದವು ಸರಿಸುಮಾರು 720 ಅಡಿಗಳು, ಇದು ಗಾತ್ರದಲ್ಲಿ ಎರಡು ಕ್ರಿಕೆಟ್ ಪಿಚ್ಗಳಷ್ಟು ದೊಡ್ಡದಾಗಿದೆ. ಈ ಕ್ಷುದ್ರಗ್ರಹವು ಭೂಮಿಯಿಂದ 620,000 ಮೈಲುಗಳಷ್ಟು ದೂರದಲ್ಲಿ ಹಾದುಹೋಗುತ್ತದೆ, ಇದನ್ನು ಬಾಹ್ಯಾಕಾಶ ಜಗತ್ತಿನಲ್ಲಿ ಹೆಚ್ಚು ಪರಿಗಣಿಸಲಾಗಿಲ್ಲ. ಘರ್ಷಣೆಯ ಸಂಭವನೀಯತೆ ಕಡಿಮೆಯಾದರೂ, ಕೆಲವು ಕಾರಣಗಳಿಂದ ದಿಕ್ಕು ಬದಲಾದರೆ, ಭೂಮಿಗೆ ಘರ್ಷಣೆ ಸಂಭವಿಸಬಹುದು, ಇದು ನೈಸರ್ಗಿಕ ವಿಕೋಪಗಳು, ಭೂಕಂಪಗಳು, ಬಿರುಗಾಳಿಗಳಂತಹ ಘಟನೆಗಳಿಗೆ ಕಾರಣವಾಗಬಹುದು. ನಾಸಾ ವಿಜ್ಞಾನಿಗಳು ಕಣ್ಣಿಟ್ಟಿದ್ದಾರೆ ನಾಸಾದ ಭೂಮಿಯ ಸಮೀಪ ವಸ್ತು ವೀಕ್ಷಣಾ ಕಾರ್ಯಕ್ರಮದ ವಿಜ್ಞಾನಿಗಳು ಈ ಕ್ಷುದ್ರಗ್ರಹವನ್ನು ಸೂಕ್ಷ್ಮವಾಗಿ ಗಮನಿಸುತ್ತಿದ್ದಾರೆ. ಕ್ಯಾಲಿಫೋರ್ನಿಯಾದ ಪಸಾಡೆನಾದಲ್ಲಿರುವ ಜೆಟ್ ಪ್ರೊಪಲ್ಷನ್ ಲ್ಯಾಬೊರೇಟರಿ (ಜೆಪಿಎಲ್) ನಲ್ಲಿ ಇದನ್ನು ಪತ್ತೆಹಚ್ಚಲು ರಾಡಾರ್ ಮತ್ತು ಆಪ್ಟಿಕಲ್ ಟೆಲಿಸ್ಕೋಪ್ಗಳನ್ನು ಬಳಸಲಾಗುತ್ತಿದೆ. ವಿಜ್ಞಾನಿಗಳು ಅದರ ವೇಗ…
ಬೆಂಗಳೂರು : ವಿಶ್ವ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ 2500 ಕಿ.ಮೀ. ಉದ್ದದ ಮಾನವ ಸರಪಳಿಗೆ ಬೆಂಗಳೂರಿನ ವಿಧಾನಸೌಧದ ಮುಂಭಾಗದಲ್ಲಿ ಸಿಎಂ ಸಿದ್ದರಾಮಯ್ಯ ಚಾಲನೆ ನೀಡಿದ್ದಾರೆ. ಈ ವೇಳೆ ಯುವಕನೊಬ್ಬ ಹೈಡ್ರಾಮಾ ಮಾಡಿದ್ದು, ಸಿಎಂ ಇದ್ದ ವೇದಿಕೆ ಮೇಲೆ ಜಂಪ್ ಮಾಡಿ ಗಾಬರಿ ಹುಟ್ಟಿಸಿದ್ದಾನೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ವಿಧಾನಸೌಧದ ಮುಂಭಾಗದಲ್ಲಿ ಸಂವಿಧಾನದ ಪೀಠಿಕೆ ಓದುವ ಮೂಲಕ ಚಾಲನೆ ನೀಡಿದ್ದಾರೆ. ಈ ವೇಳೆ ಶಾಲು ಹಿಡಿದ ಯುವಕನೊಬ್ಬ ಸಿದ್ದರಾಮಯ್ಯ ಇದ್ದ ವೇದಿಕೆ ಮೇಲೆ ನುಗ್ಗಿದ್ದಾನೆ. ಈ ವೇಳೆ ಸಿಎಂ ಸಿದ್ದರಾಮಯ್ಯ ಗಾಬರಿಗೊಂಡಿದ್ದಾರೆ. ಸಿಎಂ ಸಿದ್ದರಾಮಯ್ಯ ವೇದಿಕಗೆ ಮೇಲೆ ಕುಳಿತಿದ್ದ ವೇಳೆ ಕೆಳಗಿನಿಂದ ಒಮ್ಮೆಲೇ ವೇದಿಕೆ ಮೇಲೆ ಜಂಪ್ ಮಾಡಿದ ಯುವಕ ಸಿಎಂ ಸಿದ್ದರಾಮಯ್ಯರತ್ತ ಶಾಲು ಎಸೆಯಲು ಮುಂದಾಗಿದ್ದಾನೆ. ಈ ವೇಳೆ ಪೊಲೀಸರು ಯುವಕನ್ನು ವಶಕ್ಕೆ ಪಡೆದಿದ್ದಾರೆ. ಆದರೂ ಯುವಕ ಶಾಲು ಎಸೆಯಲು ಮುಂದಾಗಿದ್ದಾನೆ.
ಬೆಂಗಳೂರು : ವಿಶ್ವ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ 2500 ಕಿ.ಮೀ. ಉದ್ದದ ಮಾನವ ಸರಪಳಿಗೆ ಬೆಂಗಳೂರಿನ ವಿಧಾನಸೌಧದ ಮುಂಭಾಗದಲ್ಲಿ ಸಿಎಂ ಸಿದ್ದರಾಮಯ್ಯ ಚಾಲನೆ ನೀಡಿದ್ದಾರೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ವಿಧಾನಸೌಧದ ಮುಂಭಾಗದಲ್ಲಿ ಸಂವಿಧಾನದ ಪೀಠಿಕೆ ಓದುವ ಮೂಲಕ ಚಾಲನೆ ನೀಡಿದ್ದಾರೆ. ಆನಂತರ ಜಿಲ್ಲೆಗಳಲ್ಲಿ ಜಿಲ್ಲಾಧಿಕಾರಿಗಳ ನೇತೃತ್ವದಲ್ಲಿ ಜಿಲ್ಲೆಗಳ ಸಮಸ್ತ ಜನರು ಸಂವಿಧಾನ ಪೀಠಿಕೆ ಓದಿ ಮಾನವ ಸರಪಳಿ ನಿರ್ಮಿಸುತ್ತಾರೆ. ಆ ಪ್ರದೇಶದಲ್ಲೇ ಗಿಡ ನೆಡುತ್ತಾರೆ. ಹೀಗಾಗಿ ಪ್ರತಿ ಜಿಲ್ಲೆ ತಾಲೂಕುಗಳಲ್ಲೂ ಕಾರ್ಯಕ್ರಮ ನಡೆಯಲಿದ್ದು, ದಕ್ಷಿಣ ಕನ್ನಡದಲ್ಲಿ ಕೆಲವರು ಸಮುದ್ರದಲ್ಲೇ ನಿಂತು ಮನವ ಸರಪಳಿ ರಚಿಸಲಿದ್ದಾರೆ. ವಿಶ್ವ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ 2500 ಕಿ.ಮೀ. ಉದ್ದದ ಮಾನವ ಸರಪಳಿಯನ್ನು ರಾಜ್ಯಾದ್ಯಂತ ನಿರ್ಮಿಸುವ ಮೂಲಕ ವಿಶ್ವ ದಾಖಲೆ ನಿರ್ಮಿಸಲು ಸರಕಾರ ಮುಂದಾಗಿದೆ. ರಾಜ್ಯದ ಗಡಿ ಜಿಲ್ಲೆಗಳಾದ ಬೀದರ್ ಜಿಲ್ಲೆಯಿಂದ ಚಾಮರಾಜನಗರದ ವರೆಗೂ ಸಮಾಜದ ಎಲ್ಲಾ ವರ್ಗದ ಜನರೂ ಸೇರಿದಂತೆ ಸುಮಾರು 25 ಲಕ್ಷ ಮಂದಿ ಕೈಕೈ ಹಿಡಿದು ರಾಜ್ಯದುದ್ದಕ್ಕೂ ವಿಶ್ವದ ಬೃಹತ್ ಮಾನವ ಸರಪಳಿ…
ಮೈಸೂರು : ಜೀವಬೆದರಿಕೆ ಹಾಗೂ ಜಾತಿ ನಿಂದನೆ ಪ್ರಕರಣ ಸಂಬಂಧ ಬಂಧಿತರಾಗಿರುವ ಬಿಜೆಪಿ ಶಾಸಕ ಮುನಿರತ್ನ ವಿರುದ್ಧ ಮತ್ತೊಂದು ಪ್ರಕರಣ ದಾಖಲಾಗಿದೆ. ಮೈಸೂರಿನ ಟಿ. ನರಸೀಪುರ ಪೊಲೀಸ್ ಠಾಣೆಯಲ್ಲಿ ಬಿಜೆಪಿ ಶಾಸಕ ಮುನಿರತ್ನ ವಿರುದ್ಧ ಮತ್ತೊಂದು ದೂರು ದಾಖಲಾಗಿದ್ದು, ಮುನಿರತ್ನ ಅವರು ದಲಿತ ಸಮುದಾಯದ ಬಗ್ಗೆ ಕೀಳಾಗಿ ಮಾತನಾಡಿದ್ದಾರೆ. ಇವರ ವಿರುದ್ಧ ಕಾನೂನು ಕ್ರಮ ಜರುಗಿಸಬೇಕು ಎಂದು ದಲಿತ ಮುಖಂಡರು ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ಇನ್ನು ಬಿಜೆಪಿ ಶಾಸಕ ಮುನಿರತ್ನ ವಿರುದ್ಧ ಜೀವ ಬೆದರಿಕೆ ಹಾಗೂ ಜಾತಿ ನಿಂದನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಎರಡು ದಿನಗಳ ಕಾಲ ಪೊಲೀಸ್ ಕಸ್ಟಡಿಗೆ ನೀಡಿ ಕೋರ್ಟ್ ಆದೇಶ ಹೊರಡಿಸಿದೆ. ಶಾಸಕ ಮುನಿರತ್ನ ವಿರುದ್ದ ಎರಡು FIR ದಾಖಲು ಮಾಡಲಾಗಿದೆ. ಒಂದು ಗುತ್ತಿಗೆದಾರ ಚೆಲುವರಾಜ್ಗೆ ಜೀವ ಬೆದರಿಕೆ ಹಾಕಿರುವುದು ಮತ್ತು ಇನ್ನೊಂದು ಜಾತಿ ನಿಂದನೆ ಅಡಿಯಲ್ಲಿ ದೂರನ್ನು ಬೆಂಗಳೂರಿನ ವೈಯಾಲಿಕಾವಲ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದ್ದು, ಅವರನ್ನು ನಿನ್ನೆಯಷ್ಟೇ ಪೊಲೀಸರು ಬಂಧಿಸಿದ್ದರು. ಇದೀಗ ಒಂದು ವಾರ…
ನವದೆಹಲಿ : ಪ್ರತಿಯೊಬ್ಬರೂ ತಾವು ಕಷ್ಟಪಟ್ಟು ದುಡಿದ ಹಣದ ಮೇಲೆ ತೆರಿಗೆ ಉಳಿಸಲು ಬಯಸುತ್ತಾರೆ. ಇದಕ್ಕಾಗಿ ಜನರು ನಾನಾ ಕ್ರಮಗಳನ್ನೂ ಕೈಗೊಳ್ಳುತ್ತಿದ್ದಾರೆ. ಆದರೆ, ಕೆಲವು ಆದಾಯದ ಮೇಲೆ ತೆರಿಗೆ ಪಾವತಿಸುವ ಅಗತ್ಯವಿಲ್ಲ. ಇದರಲ್ಲಿ ನೀವು ಏನನ್ನೂ ಮಾಡುವ ಅಗತ್ಯವಿಲ್ಲ. ಈ ಆದಾಯವು ತೆರಿಗೆಗೆ ಒಳಪಡುವುದಿಲ್ಲ ಎಂದು ನೀವು ತಿಳಿದಿರಬೇಕು. ನಿಮ್ಮ ಪೋಷಕರಿಂದ ನೀವು ಯಾವುದೇ ಆಸ್ತಿ, ಆಭರಣ ಅಥವಾ ನಗದು ಆನುವಂಶಿಕವಾಗಿ ಪಡೆದರೆ, ನೀವು ಯಾವುದೇ ತೆರಿಗೆಯನ್ನು ಪಾವತಿಸಬೇಕಾಗಿಲ್ಲ. ಉಯಿಲು ನಿಮ್ಮ ಹೆಸರಿನಲ್ಲಿದ್ದರೆ, ಆದಾಯದ ಮೇಲೆ ನೀವು ತೆರಿಗೆ ಪಾವತಿಸಬೇಕಾಗಿಲ್ಲ. ಆದಾಗ್ಯೂ, ನೀವು ಹೊಂದಿರುವ ಆಸ್ತಿಯಿಂದ ನೀವು ಗಳಿಸುವ ಆದಾಯದ ಮೇಲೆ ನೀವು ತೆರಿಗೆಯನ್ನು ಪಾವತಿಸಬೇಕಾಗುತ್ತದೆ. ಮದುವೆಯ ಉಡುಗೊರೆ ನಿಮ್ಮ ಮದುವೆಯಲ್ಲಿ ಸ್ನೇಹಿತರು ಅಥವಾ ಸಂಬಂಧಿಕರಿಂದ ನೀವು ಪಡೆಯುವ ಯಾವುದೇ ಉಡುಗೊರೆಗೆ ನೀವು ಯಾವುದೇ ತೆರಿಗೆಯನ್ನು ಪಾವತಿಸಬೇಕಾಗಿಲ್ಲ. ಆದರೆ, ನಿಮ್ಮ ಮದುವೆಯ ಸಮಯದಲ್ಲಿ ನೀವು ಈ ಉಡುಗೊರೆಯನ್ನು ಸ್ವೀಕರಿಸಬೇಕು. ಇಂದು ನಿಮ್ಮ ಮದುವೆಯ ಬದಲಿಗೆ, ನೀವು ಆರು ತಿಂಗಳ ನಂತರ ಉಡುಗೊರೆಯನ್ನು…
ಬೆಂಗಳೂರು : ಜೈಲಿನಲ್ಲಿ ಇದ್ದುಕೊಂಡೇ ಧಮ್ಕಿ ಹಾಕುತ್ತಿದ್ದ ಆರೋಪದ ಹಿನ್ನೆಲೆಯಲ್ಲಿ ಇಂದು ಬೆಳ್ಳಂಬೆಳಗ್ಗೆ ಸಿಸಿಬಿ ಪೊಲೀಸರು ಬೆಂಗಳೂರಿನ ಪರಪ್ಪನ ಅಗ್ರಹಾರ ಜೈಲಿನ ಮೇಲೆ ದಾಳಿ ಮಾಡಿದ್ದು, ರೌಡಿಶೀಟರ್ ವಿಲ್ಸನ್ ಗಾರ್ಡನ್ ನಾಗ ಸೇರಿದಂತೆ 18 ಜನರ ಮೊಬೈಲ್ ಸೀಜ್ ಮಾಡಿದೆ. ಇಂದು ಪರಪ್ಪನ ಅಗ್ರಹಾರ ಜೈಲಿನ ಮೇಲೆ ದಾಳಿ ನಡೆಸಿರುವ ಸಿಸಿಬಿ ಅಧಿಕಾರಿಗಳು, ಜೈಲಿನಲ್ಲಿ ವಿಲ್ಸನ್ ಗಾರ್ಡ್ ನಾಗ ಸೇರಿದಂತೆ 18 ಸಹಚರರ ಮೊಬೈಲ್ ಗಳು, ಡ್ರಗ್ಸ್ ಹಾಗೂ ಹಣವನ್ನು ವಶಕ್ಕೆ ಪಡೆಯಲಾಗಿದೆ. ಕೆಲ ದಿನಗಳ ಹಿಂದೆ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಜೈಲು ಪಾಲಾಗಿರುವ ನಟ ದರ್ಶನ್ ಜೊತೆಗೆ ವಿಲ್ಸನ್ ಗಾರ್ಡನ್ ಕಾಣಿಸಿಕೊಂಡಿದ್ದ. ಬಳಿಕ ಪ್ರಕರಣ ದಾಖಲಾಗಿದ್ದು, ವಿಚಾರಣೆ ನಡೆಸಲಾಗುತ್ತಿದೆ. ಪರಪ್ಪನ ಅಗ್ರಹಾರ ಜೈಲಿನ ಸ್ಪೆಷಲ್ ಬ್ಯಾರಕ್ ನ ಹೊರಗಡೆ ನಟ ದರ್ಶನ್, ವಿಲ್ಸನ್ ಗಾರ್ಡನ್ ನಾಗ ಹಾಗೂ ದರ್ಶನ್ ಅವರ ಮ್ಯಾನೇಜರ್ ನಾಗರಾಜ್ ಸೇರಿದಂತೆ ಮತ್ತೊಬ್ಬ ವ್ಯಕ್ತಿಯ ಜೊತೆ ದರ್ಶನ್ ಅವರು ಚೇರ್ ಮೇಲೆ ಕುಳಿತುಕೊಂಡು ಒಂದು ಕೈಯಲ್ಲಿ ಕಾಫಿ…
ಮಂಡ್ಯ : ಮಂಡ್ಯ ಜಿಲ್ಲೆಯ ನಾಗಮಂಗಲದಲ್ಲಿ ಗಣೇಶೋತ್ಸವ ಮೆರವಣಿಗೆ ವೇಳೆ ನಡೆದ ಗಲಭೆಗೆ ಸಂಬಂಧಿಸಿದಂತೆ ಬಿಗ್ ಟ್ವಿಸ್ಟ್ ಸಿಕ್ಕಿದ್ದು, ಗಲಭೆ ಹಿಂದೆ ನಿಷೇಧಿತ ಪಿಎಫ್ ಐ ಸಂಘಟನೆ ಕೈವಾಡವಿದೆ ಎಂದು ಶಂಕಿಸಲಾಗಿದೆ. ನಾಗಮಂಗಲದಲ್ಲಿ ಗಣೇಶೋತ್ಸವ ಮೆರವಣಿಗೆ ವೇಳೆ ನಡೆದ ಗಲಭೆ ಪ್ರಕರಣದ ಹಿಂದೆ ಕೇರಳದ ನಿಷೇಧಿದ ಸಂಘಟನೆ ಪಿಎಫ್ ಸಂಘಟನೆ ಕೈವಾಡ ಇರಬಹುದು ಎನ್ನಲಾಗಿದ್ದು, ಗಲಭೆಯಲ್ಲಿ ಪಿಎಫ್ ಐ ಸಂಘಟನೆಯ ಸದಸ್ಯರು ಭಾಗಿಯಾಗಿದ್ದರು ಎಂದು ಹೇಳಲಾಗುತ್ತಿದೆ. ನಾಗಮಂಗಲ ಗಲಭೆ ಪ್ರಕರಣ ಸಂಬಂಧ ಪೊಲೀಸರು ದಾಖಲಿಸಿರುವ ದೂರಿನಲ್ಲಿ ಇಬ್ಬರು ಕೇರಳ ಮೂಲದವರ ಹೆಸರು ಕೇಳಿಬಂದಿದೆ. ನಾಗಮಂಗಲ ಗಲಭೆ ಪ್ರಕರಣ ಸಂಬಂದ ಪೊಲೀಸರು ದಾಖಲಿಸಿರುವ ಎಫ್ ಐಆರ್ ನಲ್ಲಿ ಬಂಧಿತ ಆರೋಪಿಗಳ ಪೈಕಿ ಎ 44 ಯೂಸೂಫ್ ಹಾಗೂ ಎ 61 ನಾಸೀರ್ ಎಂಬುವರು ಇಬ್ಬರು ಕೇರಳದ ಮಲಪ್ಪುರಂ ಮೂಲದವರಾಗಿದ್ದು, ಇವರು ನಿಷೇಧಿತ ಪಿಎಫ್ ಐ ಸಂಘಟನೆಯ ಸದಸ್ಯರಾಗಿದ್ದರು. ನಾಗಮಂಗಲದಲ್ಲಿ ಕೆಲ ದಿನಗಳಿಂದ ವಾಸವಾಗಿದ್ದರು ಎನ್ನಲಾಗಿದೆ. ಈ ಹಿನ್ನೆಲೆಯಲ್ಲಿ ವಿಶ್ವ ಹಿಂದೂ ಪರಿಷತ್ ಸೂಕ್ತ…
ಚಿಕ್ಕೋಡಿ : ಸರ್ಕಾರಿ ಶಾಲೆಯ ವಿದ್ಯಾರ್ಥಿನಿಯರ ಖಾಸಗಿ ಅಂಗ ಮುಟ್ಟಿ ಲೈಂಗಿಕ ಕಿರುಕುಳ ನೀಡಿದ ಆರೋಪದಲ್ಲಿ ಸರ್ಕಾರಿ ಶಾಲೆಯ ಶಿಕ್ಷಕನೊಬ್ಬನನ್ನು ಪೊಲೀಸರು ಬಂಧಿಸಿರುವ ಘಟನೆ ನಡೆದಿದೆ. ಚಿಕ್ಕೋಡಿ ಪೊಲೀಸ್ ಠಾಣಾ ವ್ಯಾಪ್ತಿಯ ಸರ್ಕಾರಿ ಪ್ರಾಥಮಿಕ ಶಾಲೆಯಲ್ಲಿ ವಿದ್ಯಾರ್ಥಿನಿಯರಿಗೆ ಲೈಂಗಿಕ ಕಿರುಕುಳ ನೀಡುತ್ತಿದ್ದ ಶಾಲಾ ಶಿಕ್ಷಕ ಸಾದಿಕ್ ಬೇಗ್ ಎಂಬಾತನನ್ನು ಚಿಕ್ಕೋಡಿ ಪೊಲೀಸರು ಬಂಧಿಸಿದ್ದಾರೆ. ಆರೋಪಿ ಶಿಕ್ಷಕ ವಿದ್ಯಾರ್ಥಿನಿಯರಿಗೆ ಮುಟ್ಟಬಾರದ ಜಾಗದಲ್ಲಿ ಮುಟ್ಟಿ ವಿಕೃತಿ ಮೆರೆದಿದ್ದಾನೆ. ಶೌಚಾಲಯಕ್ಕೆ ಹೋಗಿದ್ದಾಗ ಪ್ರೈವೇಟ್ ಪಾರ್ಟ್ ಫೋಟೋ ತೆಗೆದು ಕೊಂಡು ಬರುವಂತೆ ಒತ್ತಾಯಿಸುತ್ತಿದ್ದ. ಫೋಟೋಗಳನ್ನು ಮೊಬೈಲ್ ನಲ್ಲಿ ಸೇವ್ ಮಾಡಿಕೊಂಡು ವಿಕೃತಿ ಮೆರೆಯುತ್ತಿದ್ದ ಎಂದು ವಿದ್ಯಾರ್ಥಿನಿಯರು ಆರೋಪಿಸಿದ್ದಾರೆ. ಈ ಬಗ್ಗೆ ಓರ್ವ ವಿದ್ಯಾರ್ಥಿನಿಯ ತಾಯಿಯ ಗಮನಕ್ಕೆ ತಂದಾಗ ಪ್ರಕರಣ ಬೆಳಕಿಗೆ ಬಂದಿದೆ. ಸುಮಾರು 30ಕ್ಕೂ ಹೆಚ್ಚು ವಿದ್ಯಾರ್ಥಿನಿಯರ ಮೇಲೆ ಕಳೆದ ಒಂದು ವರ್ಷದಿಂದ ದೌರ್ಜನ್ಯ ಎಸಗಿದ ಆರೋಪ ಕೇಳಿ ಬಂದಿದೆ. ಬಳಿಕ ಬಾಲಕಿಯ ತಂದೆ ಇತರೆ ಪೋಷಕರಿಗೆ ಮಾಹಿತಿ ನೀಡಿ ವಿಚಾರಿಸಿದಾಗ ಅನೇಕ ವಿದ್ಯಾರ್ಥಿನಿಯರಿಗೆ ಶಿಕ್ಷಕ ಲೈಂಗಿಕ…
ನವದೆಹಲಿ : ಸೋಶಿಯಲ್ ಮೀಡಿಯಾದಲ್ಲಿ ಫೋಟೋಗಳನ್ನು ಹಾಕುವವರೇ ಎಚ್ಚರ. ಎಐ ಸೃಷ್ಟಿಸಿರುವ ಅಶ್ಲೀಲ ವಿಡಿಯೋಗಳ ಮೂಲಕ ಹುಡುಗಿಯರನ್ನು ಬ್ಲಾಕ್ ಮೇಲ್ ಮಾಡುತ್ತಿರುವ ಪ್ರಕರಣ ಮಧ್ಯಪ್ರದೇಶದ ಜಬಲ್ ಪುರದಲ್ಲಿ ಬೆಳಕಿಗೆ ಬಂದಿದೆ. ದೂರು ಸ್ವೀಕರಿಸಿದ ಪೊಲೀಸರು ತನಿಖೆ ಆರಂಭಿಸಿದ್ದಾರೆ. ಈ ವಂಚನೆಗೆ ಇದುವರೆಗೆ 50ಕ್ಕೂ ಹೆಚ್ಚು ಮಹಿಳೆಯರು ಬಲಿಯಾಗಿದ್ದಾರೆ ಎಂದು ಪೊಲೀಸರು ನಂಬಿದ್ದಾರೆ. ಪ್ರಕರಣದ ಆರೋಪಿಗಳ ಪತ್ತೆಗೆ ವಿಶೇಷ ತನಿಖಾ ತಂಡ (ಎಸ್ಐಟಿ) ರಚಿಸಲಾಗಿದೆ. ಆರೋಪಿಗಳು ಪೊಲೀಸರಂತೆ ಬಿಂಬಿಸಿ ಮಹಿಳೆಯರಿಗೆ ಬೆದರಿಕೆ ಹಾಕಿ ಹಣಕ್ಕೆ ಬೇಡಿಕೆ ಇಡುತ್ತಿದ್ದರು. ಸುದ್ದಿ ಸಂಸ್ಥೆಯೊಂದರ ಪ್ರಕಾರ, ಸಾಮಾಜಿಕ ಜಾಲತಾಣದಲ್ಲಿ ಜಬಲ್ಪುರದ ಕಾಲೇಜು ವಿದ್ಯಾರ್ಥಿಗಳ ಫೋಟೋಗಳನ್ನು ತೆಗೆದುಕೊಂಡು ಎಐ ರಚಿಸಿದ ವೀಡಿಯೊಗಳ ಮೂಲಕ ಬ್ಲ್ಯಾಕ್ ಮೇಲ್ ಮಾಡಲಾಗುತ್ತಿದೆ. ಅವರನ್ನು ಬೆದರಿಸಿ ಹಣಕ್ಕೆ ಬೇಡಿಕೆಯಿಟ್ಟಿದ್ದಾರೆ. ಘಟನೆಯ ಬಗ್ಗೆ ದೂರು ಸ್ವೀಕರಿಸಿದ ನಂತರ ಪೊಲೀಸ್ ವರಿಷ್ಠಾಧಿಕಾರಿ ಆದಿತ್ಯ ಪ್ರತಾಪ್ ಸಿಂಗ್ ಅವರು ಎಸ್ಐಟಿ ರಚಿಸಿದ್ದಾರೆ. ಆರೋಪಿಗಳು ಸಾಮಾಜಿಕ ಜಾಲತಾಣಗಳಲ್ಲಿ ಅಶ್ಲೀಲ ವಿಡಿಯೋಗಳನ್ನು ಶೇರ್ ಮಾಡುವುದಾಗಿ ಯುವತಿಯರನ್ನು ಬೆದರಿಸಿ ಹಣಕ್ಕೆ ಬೇಡಿಕೆ ಇಟ್ಟಿರುವುದು…
ನವದೆಹಲಿ : ಇಸ್ಲಾಂ ಧರ್ಮವು ಅನುಯಾಯಿಗಳ ಸಂಖ್ಯೆಯಲ್ಲಿ ವಿಶ್ವದ ಎರಡನೇ ಅತಿದೊಡ್ಡ ಧರ್ಮವಾಗಿದೆ ಮತ್ತು ಅದರ ಜನಪ್ರಿಯತೆಯು ವೇಗವಾಗಿ ಹೆಚ್ಚುತ್ತಿದೆ. ಪ್ರಸ್ತುತ, ಕ್ರಿಶ್ಚಿಯನ್ ಧರ್ಮವು ಅತಿದೊಡ್ಡ ಧರ್ಮವಾಗಿದೆ, ಆದರೆ ಭವಿಷ್ಯವಾಣಿಗಳು ಇಸ್ಲಾಂ ಧರ್ಮವು 2035 ರ ವೇಳೆಗೆ ವಿಶ್ವದ ಅತಿ ಹೆಚ್ಚು ಅನುಯಾಯಿಗಳನ್ನು ಹೊಂದಿರುವ ಧರ್ಮವಾಗಿದೆ. ಇದರ ಹೊರತಾಗಿಯೂ, ಕೆಲವು ಮುಸ್ಲಿಂ ರಾಷ್ಟ್ರಗಳಲ್ಲಿ ಆಸಕ್ತಿದಾಯಕ ಬದಲಾವಣೆ ಕಂಡುಬರುತ್ತಿದೆ, ಅಲ್ಲಿ ಜನರು ಇಸ್ಲಾಂ ಧರ್ಮವನ್ನು ತೊರೆದು ಇತರ ಧರ್ಮಗಳತ್ತ ಮುಖ ಮಾಡುತ್ತಿದ್ದಾರೆ ಅಥವಾ ಜಾತ್ಯತೀತತೆಯತ್ತ ಸಾಗುತ್ತಿದ್ದಾರೆ. ಮಧ್ಯಪ್ರಾಚ್ಯ ಮತ್ತು ಉತ್ತರ ಆಫ್ರಿಕಾದ ದೇಶಗಳಲ್ಲಿ ಧಾರ್ಮಿಕ ಸುಧಾರಣೆ ಮತ್ತು ಜಾತ್ಯತೀತತೆಯ ಬೇಡಿಕೆ ಹೆಚ್ಚುತ್ತಿದೆ. ಪ್ರದೇಶದ ಹಲವು ದೇಶಗಳಲ್ಲಿ, ಜನರ ಧಾರ್ಮಿಕ ವರ್ತನೆಗಳು ಬದಲಾಗುತ್ತಿವೆ ಮತ್ತು ಅವರು ಹೆಚ್ಚು ಉದಾರ ಮತ್ತು ಆಧುನಿಕ ಜೀವನಶೈಲಿಯತ್ತ ಸಾಗುತ್ತಿದ್ದಾರೆ. ಇರಾನ್ನಲ್ಲಿ, ಕಳೆದ ಕೆಲವು ವರ್ಷಗಳಿಂದ, ಅನೇಕ ಜನರು ತಮ್ಮನ್ನು ತಾವು ಧಾರ್ಮಿಕ ಎಂದು ಪರಿಗಣಿಸುವುದನ್ನು ಬಿಟ್ಟು ಧರ್ಮೇತರರಾಗಿ ಬದಲಾಗಿದ್ದಾರೆ. ಈ ಬದಲಾವಣೆಯಿಂದಾಗಿ ಅಲ್ಲಿನ ಸಮಾಜಶಾಸ್ತ್ರೀಯ ರಚನೆಯಲ್ಲಿ ಮಹತ್ವದ ಬದಲಾವಣೆ…