Author: kannadanewsnow57

ಬೆಂಗಳೂರು : ಬೆಂಗಳೂರು ಸೇರಿದಂತೆ ರಾಜ್ಯಾದ್ಯಂತ ಒಟ್ಟು 600 ಇಂದಿರಾ ಕ್ಯಾಂಟೀನ್‍ಗಳು ತಲೆ ಎತ್ತಲಿವೆ. 188 ಹೊಸ ಇಂದಿರಾ ಕ್ಯಾಂಟೀನ್ ಗಳನ್ನು ಪ್ರಾರಂಭಿಸುತ್ತಿದ್ದೇವೆ ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದ್ದಾರೆ. ಬೆಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಆವರಣದಲ್ಲಿ ನೂತನವಾಗಿ ನಿರ್ಮಿಸಿದ ಇಂದಿರಾ ಕ್ಯಾಂಟೀನ್ ಉದ್ಘಾಟಿಸಿ ಮಾತನಾಡಿದ ಅವರು, ಬೆಂಗಳೂರು ಸೇರಿದಂತೆ ರಾಜ್ಯಾದ್ಯಂತ ಒಟ್ಟು 600 ಇಂದಿರಾ ಕ್ಯಾಂಟೀನ್‍ಗಳು ತಲೆ ಎತ್ತಲಿವೆ. 188 ಹೊಸ ಇಂದಿರಾ ಕ್ಯಾಂಟೀನ್ ಗಳನ್ನು ಪ್ರಾರಂಭಿಸುತ್ತಿದ್ದೇವೆ. ಈ ಪೈಕಿ ಈಗಾಗಲೇ 40 ಸಿದ್ಧವಾಗಿವೆ. ವಿಮಾನನಿಲ್ದಾಣದ ಬಳಿ ಇಂದಿರಾ ಕ್ಯಾಂಟೀನ್ ಪ್ರಾರಂಭ ಮಾಡಬೇಕೆಂದು ಟ್ಯಾಕ್ಸಿ ಚಾಲಕರು ಹಾಗೂ ಇತರೆ ಚಾಲಕರ ಬೇಡಿಕೆಯಿತ್ತು. ಇಲ್ಲಿಗೆ ಇಂದಿರಾ ಕ್ಯಾಂಟೀನ್ ಅಗತ್ಯವಿತ್ತು. ಅದಕ್ಕಾಗಿ ಇಂದು ಒಂದು ಕ್ಯಾಂಟೀನನ್ನು ಉದ್ಘಾಟಿಸಲಾಗಿದೆ. ವಿಮಾನ ನಿಲ್ದಾಣದಲ್ಲಿ ಒಟ್ಟು 2 ಇಂದಿರಾ ಕ್ಯಾಂಟೀನ್ ಸ್ಥಾಪನೆಯಾಗಲಿದೆ ಎಂದು ಹೇಳಿದ್ದಾರೆ. ಬಡವರಿಗೆ ಕಡಿಮೆ ದರಗಳಲ್ಲಿ ಊಟ ತಿಂಡಿ ದೊರೆಯಬೇಕೆನ್ನುವುದು ಇದರ ಉದ್ದೇಶ. ಬೆಳಗಿನ ಉಪಾಹಾರ 5 ರೂ. ಮಧ್ಯಾಹ್ನ ಮತ್ತು ರಾತ್ರಿ ಊಟ 10.…

Read More

ಮೀನುಗಾರಿಕೆ ಇಲಾಖೆಯ ವತಿಯಿಂದ ಪ್ರಧಾನಿ ಮಂತ್ರಿ ಮತ್ಸ್ಯ ಸಂಪದ ಯೋಜನೆಯಡಿ ಪರಿಸರ ಸ್ನೇಹಿ ಕಿಯೋಸ್ಕ್ ಮತ್ಸ್ಯ ವಾಹಿನಿ ಯೋಜನೆಯಡಿ ಅರ್ಹ ಫಲಾನುಭವಿಗಳಿಗೆ ಮತ್ಸ್ಯವಾಹಿನಿ ವಾಹನಗಳನ್ನು ನೀಡಲು ಅರ್ಜಿ ಆಹ್ವಾನಿಸಲಾಗಿದ್ದು, ಮಾ.16ರ ಒಳಗೆ ಅರ್ಜಿ ಸಲ್ಲಿಸಬೇಕು ಎಂದು ಮೀನುಗಾರಿಕೆ ಇಲಾಖೆಯ ಉಪನಿರ್ದೇಶಕರು ತಿಳಿಸಿದ್ದಾರೆ. ಯೋಜನೆಗೆ ಯಾರು ಅರ್ಹರು?: ಮೀನು ಮಾರಾಟಗಾರರು, ಕರ್ನಾಟಕ ಮೀನುಗಾರಿಕೆ ಅಭಿವೃದ್ಧಿ ನಿಗಮ ನಿಯಮಿತ ಮಂಗಳೂರು ಪ್ರಾಂಚೈಸಿಗಳು, ಸರ್ಕಾರದ ವಿವಿಧ ಕೌಶಲ್ಯ ಅಭಿವೃದ್ಧಿ ಯೋಜನೆಯಡಿ ತರಬೇತಿ ಪಡೆದವರು, ಮೀನುಗಾರರ ಉತ್ಪಾದಕ ಸಂಸ್ಥೆಗಳು(ಈಈPಔ), ಮೀನುಗಾರಿಕೆ ಸಹಕಾರ ಸಂಘಗಳು, ಮಹಿಳಾ ಸ್ವಸಹಾಯ ಗುಂಪುಗಳು, ನಿರುದ್ಯೋಗಿ ಯುವಕ-ಯುವತಿಯರು ಅರ್ಹರಾಗಿರುತ್ತಾರೆ. ಪ್ರಧಾನಮಂತ್ರಿ ಮತ್ಸ್ಯಸಂಪದ ಯೋಜನೆಯ ಫಲಾನುಭವಿಗಳಿಂದ ಮಾಹೆಯಾನ ರೂ.3000 ಶುಲ್ಕದಂತೆ ಪರವಾನಗಿ ಮುಖಾಂತರ ಮತ್ಸ್ಯವಾಹಿನಿ ವಾಹನಗಳನ್ನು ನೀಡಲಾಗುತ್ತದೆ. ಅರ್ಜಿದಾರರು ಸಾಮಾನ್ಯ ವರ್ಗ ರೂ.1 ಲಕ್ಷ ಮತ್ತು ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ, ಮಹಿಳಾ ವರ್ಗದವರು ರೂ.50 ಸಾವಿರ ಪ್ರಾರಂಭಿಕ ಭದ್ರತಾ ಠೇವಣಿ ಪಾವತಿಸಬೇಕು. ಹೆಚ್ಚಿನ ಮಾಹಿತಿಗಾಗಿ ಬಳ್ಳಾರಿ ಮೀನುಗಾರಿಕೆ ಸಹಾಯಕ ನಿರ್ದೇಶಕ ಮೊ.8970754167, ಸಂಡೂರು ಮೀನುಗಾರಿಕೆ…

Read More

ನವದೆಹಲಿ: ಜನರು ತಮ್ಮ ಮೇಲ್ಛಾವಣಿಯಲ್ಲಿ ಸೌರ ಫಲಕಗಳನ್ನು ಅಳವಡಿಸಲು ಪ್ರೋತ್ಸಾಹಿಸುವ ತಮ್ಮ ಸರ್ಕಾರದ ಯೋಜನೆಯನ್ನು ಪ್ರಧಾನಿ ನರೇಂದ್ರ ಮೋದಿ ಅವರು ಘೋಷಿಸಿದ್ದಾರೆ. ದೇಶದ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರ ನೇತೃತ್ವದಲ್ಲಿ ಪಿಎಂ ಸೂರ್ಯ ಘರ್ ಯೋಜನೆಯನ್ನು ಪ್ರಾರಂಭಿಸಲಾಗಿದೆ. ಈ ಯೋಜನೆಯ ಮೂಲಕ, ದೇಶದಲ್ಲಿ ಸೌರ ಶಕ್ತಿಯನ್ನು ಉತ್ತೇಜಿಸಲು ಪ್ರಾರಂಭಿಸಲಾಗಿದೆ. ಈ ಯೋಜನೆಯ ಮೂಲಕ ದೇಶದಲ್ಲಿ ವಾಸಿಸುವ ಫಲಾನುಭವಿಗಳಿಗೆ 300 ಯೂನಿಟ್ ವರೆಗೆ ಉಚಿತ ವಿದ್ಯುತ್ ನೀಡಲಾಗುವುದು. ಪಿಎಂ ಸೂರ್ಯ ಘರ್ ಯೋಜನೆ ಮೂಲಕ ದೇಶದ ಕೋಟಿ ಮನೆಗಳಿಗೆ ವಿದ್ಯುತ್ ದೀಪಗಳನ್ನು ಒದಗಿಸಲಾಗುವುದು. ನೀವು ಪಿಎಂ ಸೂರ್ಯ ಘರ್ ಯೋಜನೆಯಲ್ಲಿ ಅರ್ಜಿ ಸಲ್ಲಿಸಲು ಯೋಚಿಸುತ್ತಿದ್ದರೆ ನೀವು ಭಾರತದ ನಿವಾಸಿಯಾಗಿರಬೇಕು. ಈ ಯೋಜನೆಯ ಲಾಭವನ್ನು ಪಡೆಯಲು ಈ ಯೋಜನೆಯ ಬಗ್ಗೆ ತಿಳಿದುಕೊಳ್ಳುವುದು ಬಹಳ ಮುಖ್ಯ. ಪಿಎಂ ಸೂರ್ಯ ಘರ್ ಯೋಜನೆ 2024 ದೇಶದಲ್ಲಿ ವಾಸಿಸುವ ಕೋಟ್ಯಂತರ ಜನರು ವಿದ್ಯುತ್ ಬಿಲ್ ನಿಂದ ಸಮಸ್ಯೆಗಳನ್ನು ಎದುರಿಸಬೇಕಾಗಿದೆ. ಪಿಎಂ ಸೂರ್ಯ ಘರ್ ಯೋಜನೆ ಮೂಲಕ, ಜನರು…

Read More

ಕೆಎನ್‌ಎನ್‌ಡಿಜಿಟಲ್‌ಡೆಸ್ಕ್: ಸೌತೆಕಾಯಿ ಹೆಚ್ಚು ಪೋಷಕಾಂಶಗಳಿರುವ ತರಕಾರಿ. ಇದರಲ್ಲಿ ತಾಮ್ರ, ಮೆಗ್ನೇಶಿಯಮ್‌, ವಿಟಮಿನ್‌ ಸಿ, ಕೆ, ಪೊಟ್ಯಾಶಿಯಂ ಹಾಗು ಮ್ಯಾಂಗನೀಸ್‌ ಅಂಶಗಳಿವೆ. ನೀರಿನಂಶವೂ ಕೂಡ ಹೇರಳವಾಗಿರುತ್ತದೆ. ಬಿಸಿಲಿಗೆ ದಣಿದು ಬಂದು ಒಂದು ಸೌತೆಕಾಯಿ ತಿಂದರೆ ದೇಹಕ್ಕೆ ಬೇಕಾಗುವಷ್ಟು ನೀರಿನ ಅಂಶ ಈ ತರಕಾರಿ ನೀಡುತ್ತದೆ. ಇದನ್ನು ಹೆಚ್ಚಾಗಿ ಸಲಾಡ್‌ಗಳಲ್ಲಿ ಬಳಸುತ್ತಾರೆ ಏಕೆಂದರೆ ಇದರಿಂದ ದೇಹಕ್ಕೆ ಅನೇಕ ಪೋಷಕಾಂಶಗಳು ಒಟ್ಟಿಗೆ ಒದಗುತ್ತವೆ. ಹಸಿ ಸೌತೆಕಾಯಿಯಲ್ಲಿ ಶೇಕಡಾ 95ರಷ್ಟು ನೀರಿನ ಪ್ರಮಾಣವಿದೆ. ಆದರೆ ಒಂದು ಪ್ರಶ್ನೆ ಇದೆ. ಹಸಿ ಸೌತೆಕಾಯಿ ಸೇವಿಸಿದ ಮೇಲೆ ನೀರು ಕುಡಿಯಬಹುದೇ ಅಥವಾ ಕುಡಿಯಬಾರದೇ ಎಂದು. ಆಹಾರ ತಜ್ಞರ ಅಭಿಪ್ರಾಯದಂತೆ ಸೌತೆಕಾಯಿ ತಿಂದ ಮೇಲೆ ಯಾವುದೇ ಕಾರಣಕ್ಕೂ ನೀರು ಸೇವಿಸಬಾರದು. ಇದರಿಂದ ಆರೋಗ್ಯದ ಮೇಲೆ ಭಾರೀ ಕೆಟ್ಟ ಪರಿಣಾಮ ಬೀರಬಹುದು ಎಂದು ಸಹ ಹೇಳುತ್ತಾರೆ. ಸೌತೆಕಾಯಿಯಲ್ಲಿ ಈಗಾಗಲೇ ಹೇರಳ ಪ್ರಮಾಣದ ನೀರಿನ ಅಂಶ ಹಾಗು ಪೋಷಕಾಂಶಗಳು ಇವೆ. ಇದರ ಮೇಲೆಯೂ ನೀರು ಸೇವಿಸಿದರೆ ದೇಹ ಆ ಪೋಷಕಾಂಶಗಳಿಂದ ವಂಚಿತವಾಗುತ್ತದೆ. ಸೌತೆಕಾಯಿ ತಿಂದ…

Read More

ಕೆಎನ್‌ಎನ್‌ಡಿಜಿಟಲ್‌ಡೆಸ್ಕ್‌: ಬೆಳ್ಳುಳ್ಳಿ ಅಡುಗೆಯ ರುಚಿ ಹೆಚ್ಚಿಸುತ್ತದೆ ನಿಜ. ಆದರೆ ಇದೇ ಬೆಳ್ಳುಳ್ಳಿ ದೇಹದ ಆರೋಗ್ಯವನ್ನು ಮತ್ತಷ್ಟು ಹೆಚ್ಚಿಸುತ್ತದೆ. ಅದೆಷ್ಟೋ ರೋಗಗಳಿಗೆ ಬೆಳ್ಳುಳ್ಳಿ ರಾಮಬಾಣವಾಗಿದೆ. ಬೆಳ್ಳುಳ್ಳಿಯನ್ನು ನಿಯಮಿತವಾಗಿ ಪ್ರತಿನಿತ್ಯ ಒಂದೆರಡು ಎಸಳು ಸೇವಿಸಿದರೆ ದೇಹಕ್ಕೆ ರೋಗನಿರೋಧಕ ಶಕ್ತಿ ಹೆಚ್ಚಾಗುತ್ತದೆ. ಇದು ಅನೇಕ ಔಷಧೀಯ ಗುಣವಿರುವ ಅಹಾರ ಪದಾರ್ಥವಾಗಿದೆ. ಬೆಳ್ಳುಳ್ಳಿಯಲ್ಲಿ ಪ್ರೋಟೀನ್‌, ವಿಟಮಿನ್‌ ಎ, ಸಿ, ಬಿ , ಜಿಂಕ್‌, ಕ್ಯಾಲ್ಸಿಯಂ, ಮೆಗ್ನೀಸಿಯಂ ಅಂಶಗಳು ಹೇರಳವಾಗಿವೆ. ಇನ್ನು ಇದರಲ್ಲಿ ಕಡಿಮೆ ಕ್ಯಾಲೋರಿ ಇದೆ. ಇಷ್ಟೆಲ್ಲಾ ಪೋಷಕಾಂಶಗಳನ್ನು ಹೊಂದಿದ ಬೆಳ್ಳುಳ್ಳಿಯಲ್ಲಿ ಸಣ್ಣ ಪುಟ್ಟ ಜ್ವರ ಕೆಮ್ಮಿನಿಂದ ಹಿಡಿದು ಕ್ಯಾನ್ಸರ್‌ಗೆ ಕಾರಣವಾಗುವ ಕೋಶಗಳ ವಿರುದ್ಧವೂ ಹೋರಾಡುವ ಶಕ್ತಿ ಇದೆ. ಅಡುಗೆ ಮಾಡುವಾಗ ಬೆಳ್ಳುಳ್ಳಿ ಬಳಸುವುದ ಸಹಜ. ಇದಲ್ಲದೇ ನಿಯಮಿತವಾಗಿ ಹಸಿ ಬೆಳ್ಳುಳ್ಳಿ ಅಥವಾ ಹುರಿದ ಬೆಳ್ಳುಳ್ಳಿ ತಿಂದರೆ ಆರೋಗ್ಯಕ್ಕೆ ಆಗುವ ಪ್ರಯೋಜನೆಗಳನ್ನು ಒಂದೊಂದಾಗಿ ತಿಳಿದುಕೊಳ್ಳೋಣ. ಬೆಳ್ಳುಳ್ಳಿಯನ್ನು ನಿಯಮಿತವಾಗಿ ಹುರಿದು ತಿಂದರೆ ದೀರ್ಘಕಾಲದವರೆಗೆ ಹೃದಯದ ಆರೋಗ್ಯ ಕ್ಷೇಮವಾಗಿರುತ್ತದೆ. ಹೃದಯ ಸಂಬಂಧಿ ಕಾಯಿಲೆಗಳನ್ನು ಇದು ದೂರ ಮಾಡುತ್ತದೆ. ಬೆಳ್ಳುಳ್ಳಿ ಕೊಲೆಸ್ಟ್ರಾಲ್‌…

Read More

ಕೆಎನ್‌ಎನ್‌ಡಿಜಿಟಲ್‌ಡೆಸ್ಕ್‌: ತಲೆ ಕೂದಲಿನ ಸಮಸ್ಯೆ ಬರೀ ಹೆಣ್ಣು ಮಕ್ಕಳಿಗಷ್ಟೇ ಅಲ್ಲ. ಗಂಡಸರಿಗೂ ತಲೆ ಕೂದಲಿನ ಸಮಸ್ಯೆ ಸರ್ವೇ ಸಾಮಾನ್ಯವಾಗಿಬಿಟ್ಟಿವೆ. ಅಂದರೆ ಕೂದಲು ಉದುರುವುದು, ತಲೆಯಲ್ಲಿ ಹೊಟ್ಟು ತುರಿಕೆ, ಕೂದಲು ತುಂಡಾಗುವುದು, ಬಿಳಿ ಕೂದಲು ಹೀಗೆ ಅನೇಕ ತೊಂದರೆಗಳು. ಹೊರಗಿನ ಕಾರ್ಬನ್‌ ಹೊಗೆ, ಗಡಸು ನೀರು, ಅಥವಾ ಅನಿಯಮಿತವಾದ ಜೀವನ ಶೈಲಿ, ಒತ್ತಡದಿಂದ ಈ ತೊಂದರೆಗಳು ಉಂಟಾಗಬಹುದು. ಆದರೆ ಹೆಂಗಸರಷ್ಟು ಗಂಡು ಮಕ್ಕಳು ತಮ್ಮ ತಲೆ ಕೂದಲು ಅಥವಾ ಚರ್ಮದ ಬಗ್ಗೆ ಅಷ್ಟಾಗಿ ತಲೆ ಕೆಡಿಸಿಕೊಳ್ಳುವುದಿಲ್ಲ. ಇನ್ನು ಕೆಲ ಗಂಡಸರಿಗೆ ತಮ್ಮ ತಲೆ ಕೂದಲಿನ ಆರೈಕೆ ಮಾಡಿಕೊಳ್ಳುವ ಇಚ್ಛೆ ಇರುತ್ತದೆ. ಅಂತವರಿಗೆ ಕೆಲ ಟಿಪ್ಸ್‌ ಇಲ್ಲಿವೆ. ನಾವಿಂದು ಹೇಳುವ ತಲೆ ಕೂದಲಿನ ಆರೈಕೆಯ ಆರ್ಯುವೇದ ಟಿಪ್ಸ್‌ ಹೆಣ್ಣು ಮಕ್ಕಳು ಸೇರಿದಂತೆ ಗಂಡಸರೂ ಫಾಲೋ ಮಾಡಬಹುದು. ಇದರಿಂದ ಯಾವುದೇ ಸೈಡ್‌ ಎಪೆಕ್ಟ್‌ ಇಲ್ಲ. ಒಮ್ಮೆ ನೀವೂ ಟ್ರೈ ಮಾಡಿ ನೋಡಿ. ನಾಲ್ಕು ಚಮಚ ಮೆಂತೆ ಕಾಳುಗಳನ್ನು ಮಿಕ್ಸಿಗೆ ಹಾಕಿ ಪುಡಿ ಮಾಡಿಕೊಳ್ಳಿ. ತೀರಾ ನುಣ್ಣಗೆ…

Read More

ಕೆಎನ್‌ಎನ್‌ಡಿಜಿಟಲ್‌ಡೆಸ್ಕ್‌: ರಾತ್ರಿ ನೆನಸಿಟ್ಟ ಒಣದ್ರಾಕ್ಷಿ ಮರುದಿನ ಸೇವಿಸುವುದ ಆರೋಗ್ಯದ ದೃಷ್ಟಿಯಿಂದ ತುಂಬಾ ಒಳ್ಳೆಯದು. ಇದು ಚಿಕ್ಕ ಮಕ್ಕಳಿಂದ ಹಿಡಿದು ವಯಸ್ಕರೂ ದಿನವೂ ಸೇವಿಸಬಹುದು. ಹೀಗೆ ತಜ್ಞರು ಹೇಳುವ ಪ್ರಕಾರ ಒಣದ್ರಾಕ್ಷಿ ನೀರಿನಲ್ಲಿ ನೆನಸಿಟ್ಟು ಬೆಳಗ್ಗೆ ಸೇವಿಸಿದರೆ ದೇಹಕ್ಕೆ ಆಗುವ ಲಾಭಗಳ ಪಟ್ಟಿ ತಿಳಿದುಕೊಳ್ಳೋಣ. ಬೆಳಗ್ಗೆ ನಿತ್ಯ ಕರ್ಮಗಳನ್ನು ಮುಗಿಸಿಕೊಂಡು ಖಾಲಿ ಹೊಟ್ಟೆಯಲ್ಲಿ ನೆನಸಿಟ್ಟ ಒಣದ್ರಾಕ್ಷಿ ಸೇವಿಸಿದರೆ ಆರೋಗ್ಯಕ್ಕೆ ದುಪ್ಪಟ್ಟು ಒಳ್ಳೆಯದು. ನೀರಿನಲ್ಲಿ ನೆನಸಿಟ್ಟ ಒಣದ್ರಾಕ್ಷಿ ಬೆಳಗ್ಗೆ ಖಾಲಿ ಹೊಟ್ಟೆಯಲ್ಲಿ ಸೇವಿಸಿರೆ ಹೃದಯ ಹಾಗು ಯಕೃತ್‌ನ ಯಾವುದೇ ಸಮಸ್ಯೆಗಳು ಕಾಡುವುದಿಲ್ಲ. ಆಹಾರ ತಜ್ಞರ ಪ್ರಕಾರ ದಿನಂಪ್ರತಿ ನೆನಸಿದ ಒಣದ್ರಾಕ್ಷಿ ಸೇವಿಸಿದರೆ ಕರುಳು ಸ್ವಚ್ಛವಾಗುತ್ತದೆ. ಹಾಗು ಕರುಳಿಗೆ ಸಂಬಂಧಸಿದ ಯಾವುದೇ ತೊಂದರೆಯಾಗುವುದಿಲ್ಲ. ಇದರಿಂದ ಜೀರ್ಣಕ್ರಿಯೆ ಸರಾಗವಾಗಿ ಆಗುತ್ತದೆ. ಹಾಗು ಮಲಬದ್ಧತೆಯಂತಹ ಸಮಸ್ಯೆ ಕೂಡ ಇರುವುದಿಲ್ಲ. ರಕ್ತದಲ್ಲಿನ ಹಿಮೋಗ್ಲೋಬಿನ್‌ ಮಟ್ಟವನ್ನು ಹೆಚ್ಚಿಸುವಲ್ಲಿ ನೆನಸಿಟ್ಟ ಒಣದ್ರಾಕ್ಷಿ ತುಂಬಾ ಸಹಾಯ ಮಾಡುತ್ತದೆ. ಹೀಗೆ ಪ್ರತಿ ದಿನ ನೆನಸಿಟ್ಟ ಒಣದ್ರಾಕ್ಷಿಯನ್ನು ಬೆಳಗ್ಗೆ ಖಾಲಿ ಹೊಟ್ಟೆಯಲ್ಲಿ ಸೇವಿಸಿದರೆ ಹಿಮೋಗ್ಲೋಬಿನ್‌ ಮಟ್ಟ ಸಮಪ್ರಮಾಣದಲ್ಲಿರಿಸಿ…

Read More

ಕೆಎನ್‌ಎನ್‌ಡಿಜಿಟಲ್‌ಡೆಸ್ಕ್‌: ನಿಮ್ಮ ಮುದ್ದಾದ ಮಗುವಿನ ಚರ್ಮದ ಆರೈಕೆಯ ಬಗ್ಗೆ ನಾವಿಂದು ತಿಳಿಸಿಕೊಡಲಿದ್ದೇವೆ. ಚಳಿಗಾಲದಲ್ಲಿ ಸಹಜವಾಗಿ ಚರ್ಮದ ತೇವಾಂಶ ಕಡಿಮೆಯಾಗುತ್ತದೆ. ಚರ್ಮ ಒಡೆಯುವುದು ಬಿರುಕಾಗುವುದು. ಇಂತಹ ಋತುಮಾನದಲ್ಲಿ ಮಗುವಿನ ಆರೈಕೆಯ ಬಗ್ಗೆ ತುಂಬಾ ಕಾಳಜಿ ವಹಿಸಬೇಕು. ಎಳೆಯ ಮೃದುವಾದ ಚರ್ಮದ ಆರೈಕೆ ತುಂಬಾ ನಾಜೂಕಾಗಿರಬೇಕು. ಮಗುವಿನ ಸ್ನಾನ ಸೂರ್ಯ ನೆತ್ತಿಗೆ ಬಂದ ಮೇಲೆ ಆಗಲಿ. ಬೆಳಗ್ಗೆ ಮಗುವಿಗೆ ಸ್ನಾನ ಬೇಡ. ಹೆಚ್ಚು ಹೊತ್ತು ಬಚ್ಚಲು ಮನೆಯಲ್ಲಿ ಮಗುವನ್ನು ಇರಿಸಬೇಡಿ. ಚಳಿ ಇದೆ ಎಂದು ಮಗುವಿಗೆ ತೀವ್ರವಾದ ಬಿಸಿ ನೀರು ಸ್ನಾನ ಮಾಡಿಸಬೇಡಿ. ಆದರೆ ನಮ್ಮ ಹಳೆಯ ಪದ್ಧತಿ ಏನೆಂದರೆ ತುಂಬಾ ಸುಡುವ ನೀರು ಮಗುವಿಗೆ ಹಾಕಿದರೆ ಒಳ್ಳೆಯದು ಅಂತ ಹೇಳುತ್ತಾರೆ. ಆದರೆ ಈಗಿನ ಆಧುನಿಕ ವೈದ್ಯರು ಇದನ್ನು ತಳ್ಳಿ ಹಾಕುತ್ತಾರೆ. ತುಂಬಾ ಸುಡುವ ನೀರು ಚಿಕ್ಕ ಮಕ್ಕಳಿಗೆ ಚರ್ಮದ ಮೇಲೆ ಕೆಂಪು ಕಲೆಗಳು ಅಥವಾ ಅಲರ್ಜಿ ಆಗಬಹುದು ಎಂದು ಹೇಳುತ್ತಾರೆ. ಚಳಿಗಾಲದಲ್ಲಿ ನೀರಿನ ಟಬ್‌ನಲ್ಲಿ ಹೆಚ್ಚು ಹೊತ್ತು ಮಗುವನ್ನು ಬಿಡಬೇಡಿ. ಇದರಿಂದ ಶೀತವಾಗುವ…

Read More

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರು ಮಾರ್ಚ್ 12 ರಂದು ರಾಜಸ್ಥಾನದ ಪೋಖ್ರಾನ್ ನಲ್ಲಿ ತ್ರಿ-ಸೇವೆಗಳ ಉನ್ನತ ಅಧಿಕಾರಿಗಳೊಂದಿಗೆ ಉಪಸ್ಥಿತರಿರಲಿದ್ದಾರೆ. ಸ್ವಾವಲಂಬನೆಗಾಗಿ ಭಾರತದ ಪ್ರಯತ್ನಕ್ಕೆ ಸಾಕ್ಷಿಯಾಗಿರುವ ಯುದ್ಧ ಆಟವು ದೇಶೀಯವಾಗಿ ಅಭಿವೃದ್ಧಿಪಡಿಸಿದ ಶಸ್ತ್ರಾಸ್ತ್ರ ವೇದಿಕೆಗಳು ಮತ್ತು ವ್ಯವಸ್ಥೆಗಳನ್ನು ಪ್ರತ್ಯೇಕವಾಗಿ ಪ್ರದರ್ಶಿಸುತ್ತದೆ. 2024 ರ ಲೋಕಸಭಾ ಚುನಾವಣೆಗೆ ಮುಂಚಿತವಾಗಿ ಮಾರ್ಚ್ 12 ರಂದು ರಾಜಸ್ಥಾನದ ಪೋಖ್ರಾನ್ನಲ್ಲಿ ನಡೆಯಲಿರುವ ಮೆಗಾ ಮಿಲಿಟರಿ ವ್ಯಾಯಾಮದಲ್ಲಿ ಪ್ರಧಾನಿ ನರೇಂದ್ರ ಮೋದಿ ಭಾಗವಹಿಸಲಿದ್ದಾರೆ ಎನ್ನಲಾಗಿದೆ.    https://kannadanewsnow.com/kannada/if-china-doesnt-do-this-job-till-then-there-is-no-room-for-peace-jaishankar-said-on-lac-standoff/ https://kannadanewsnow.com/kannada/if-you-are-not-menstruating-properly-then-eat-these-foods-and-your-menstrual-cycle-will-be-fine/ ದೇಶೀಯವಾಗಿ ಅಭಿವೃದ್ಧಿಪಡಿಸಿದ ಶಸ್ತ್ರಾಸ್ತ್ರ ವೇದಿಕೆಗಳು ಮತ್ತು ವ್ಯವಸ್ಥೆಗಳನ್ನು ಒಳಗೊಂಡಿರುವ ಸ್ವಾವಲಂಬನೆಗಾಗಿ ಭಾರತದ ಪ್ರಯತ್ನಕ್ಕೆ ಸಾಕ್ಷಿಯಾಗಿರುವ ಯುದ್ಧ ಆಟ ‘ಭಾರತ್ ಶಕ್ತಿ’ಯಲ್ಲಿ ಪ್ರಧಾನಿ ಭಾಗವಹಿಸಲಿದ್ದಾರೆ.

Read More

ನವದೆಹಲಿ: ಭಾರತ ಮತ್ತು ಚೀನಾ ನಡುವಿನ ಉದ್ವಿಗ್ನತೆ 2020 ರಿಂದ ಉತ್ತುಂಗದಲ್ಲಿದೆ. ವಾಸ್ತವಿಕ ನಿಯಂತ್ರಣ ರೇಖೆಯ ಉದ್ದಕ್ಕೂ ಶಾಂತಿಗಾಗಿ ಉಭಯ ದೇಶಗಳ ನಡುವಿನ 20 ಕ್ಕೂ ಹೆಚ್ಚು ಮಿಲಿಟರಿ ಮಾತುಕತೆಗಳು ಸಹ ವಿಫಲವಾಗಿವೆ. ಅಂತಹ ಪರಿಸ್ಥಿತಿಯಲ್ಲಿ, ಉಭಯ ದೇಶಗಳ ನಡುವಿನ ಉದ್ವಿಗ್ನತೆ ಉತ್ತುಂಗದಲ್ಲಿದೆ.   https://kannadanewsnow.com/kannada/rameswaram-cafe-blast-case-fsl-probe-reveals-2-chemical-blasts/ https://kannadanewsnow.com/kannada/mission-370-pm-modi-to-visit-12-states-in-next-10-days/ ಏತನ್ಮಧ್ಯೆ, ವಿದೇಶಾಂಗ ಸಚಿವ ಎಸ್ ಜೈಶಂಕರ್ ಪೂರ್ವ ಲಡಾಖ್ನಲ್ಲಿ ದೀರ್ಘಕಾಲದ ಮಿಲಿಟರಿ ಬಿಕ್ಕಟ್ಟಿನ ಬಗ್ಗೆ ದೊಡ್ಡ ಹೇಳಿಕೆ ನೀಡಿದ್ದಾರೆ. ಚೀನಾ ಗಡಿ ನಿರ್ವಹಣಾ ಒಪ್ಪಂದಗಳಿಗೆ ಬದ್ಧವಾಗಿರಬೇಕು ಮತ್ತು ಚೀನಾ-ಭಾರತ ಸಂಬಂಧಗಳನ್ನು ಸುಧಾರಿಸಲು ವಾಸ್ತವಿಕ ನಿಯಂತ್ರಣ ರೇಖೆಯ (ಎಲ್ಎಸಿ) ಉದ್ದಕ್ಕೂ ಶಾಂತಿಯ ವಾತಾವರಣ ಇರಬೇಕು ಎಂದು ಜೈಶಂಕರ್ ಶನಿವಾರ ಹೇಳಿದ್ದಾರೆ. ಚೀನಾ ಈ ಒಪ್ಪಂದವನ್ನು ಅನುಸರಿಸದ ಹೊರತು, ಗಡಿಯಲ್ಲಿ ಶಾಂತಿ ಸಾಧ್ಯವಿಲ್ಲ ಎಂದು ಅವರು ಹೇಳಿದ್ದಾರೆ. ವಿದೇಶಾಂಗ ವ್ಯವಹಾರಗಳ ಸಚಿವ ಎಸ್.ಜೈಶಂಕರ್ ಅವರು ಚಿಂತಕರ ಚಾವಡಿಯ ಸಂವಾದಾತ್ಮಕ ಅಧಿವೇಶನದಲ್ಲಿ, ಮೋದಿ ಸರ್ಕಾರವು ಗಡಿ ಮೂಲಸೌಕರ್ಯಗಳನ್ನು ಹೆಚ್ಚಿಸುವತ್ತ ಗಮನ ಹರಿಸುತ್ತಿದೆ ಎಂದು ಹೇಳಿದರು. ಈ ಸಂದರ್ಭದಲ್ಲಿ, ಭಾರತ…

Read More