Subscribe to Updates
Get the latest creative news from FooBar about art, design and business.
Author: kannadanewsnow57
ಬೆಂಗಳೂರು : ಯುಗಾದಿ, ರಂಜಾನ್ ಹಬ್ಬಕ್ಕೆ ಮಹಿಳೆಯರಿಗೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಭರ್ಜರಿ ಸಿಹಿಸುದ್ದಿ ನೀಡಿದ್ದು, ಗೃಹಲಕ್ಷ್ಮಿ ಯೋಜನೆಯ ಒಂದು ಕಂತಿನ ಹಣ ಬಿಡುಗಡೆ ಮಾಡುವುದಾಗಿ ಹೇಳಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಗೃಹಲಕ್ಷ್ಮಿ ಯೋಜನೆಯಡಿ ನೀಡುವ 2,000 ರೂ. ಸಹಾಧನದ ಒಂದು ಕಂತಿನ ಹಣ ಬಿಡುಗಡೆ ಮಾಡಲಾಗುವುದು, ಈಗಾಗಲೇ ಹಣ ಬಿಡುಗಡೆ ಮಾಡುವಂತೆ ಸೂಚನೆ ನೀಡಲಾಗಿದೆ ಎಂದು ತಿಳಿಸಿದ್ದಾರೆ. ಈ ಮೂಲಕ ಯುಗಾದಿ, ರಂಜಾನ್ ಹಬ್ಬಕ್ಕೆ ಮಹಿಳೆಯರಿಗೆ ಸಿಹಿಸುದ್ದಿ ನೀಡಿದ್ದಾರೆ. ಕಾಂಗ್ರೆಸ್ ಪಕ್ಷ ಬದ್ಧತೆಗೆ ಹೆಸರಾಗಿರುವ ಪಕ್ಷ. ಪಂಚ ಗ್ಯಾರಂಟಿಗಳಲ್ಲಿ ಗೃಹಲಕ್ಷ್ಮಿ ಯೋಜನೆ ಅತಿ ದೊಡ್ಡ ಯೋಜನೆಯಾಗಿದೆ. 1.22 ಕೋಟಿ ಫಲಾನುಭಗಳಿಗೆ ಇದುವರೆಗೂ 34 ಸಾವಿರ ಕೋಟಿ ರೂಪಾಯಿ ಹಣವನ್ನು ಹಾಕಲಾಗಿದೆ. ಈ ಯೋಜನೆಯನ್ನು ಜಾರಿಗೆ ತಂದಿರುವುದಕ್ಕೆ ನನಗೆ ಹೆಮ್ಮೆಯಿದೆ ಎಂದು ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಹೇಳಿದರು.
ತುಂಗಭದ್ರಾ ಯೋಜನೆ ಮತ್ತು ವಿಜಯನಗರ ಕಾಲುವೆಗಳ ಅಚ್ಚುಕಟ್ಟು ಪ್ರದೇಶದಲ್ಲಿ ರೈತರು ಬಿತ್ತನೆ ವಿಳಂಬವಾಗಿ ಮಾಡಿರುವುದರಿಂದ ಹಿಂಗಾರು ಹಂಗಾಮಿಗೆ ನಿಂತಿರುವ ಬೆಳಗಳನ್ನು ಸಂರಕ್ಷಿಸಲು ಜಲಾಶಯದಲ್ಲಿ ಲಭ್ಯವಾಗುವ ನೀರಿನ ಪ್ರಮಾಣವನ್ನು ಅಂದಾಜಿಸಿ ವಿವಿಧ ಕಾಲುವೆಗಳಿಗೆ ಕುಡಿಯುವ ನೀರು ಒಳಗೊಂಡAತೆ ನೀರು ಹರಿಸಲು ನಿರ್ಧರಿಸಲಾಗಿದೆ ಎಂದು ಮುನಿರಾಬಾದ್ ನ ತುಂಗಭದ್ರಾ ಯೋಜನಾ ವೃತ್ತದ ಕನೀನಿನಿ ಅಧೀಕ್ಷಕ ಅಭಿಯಂತರರು ಹಾಗೂ ತುಂಗಭದ್ರಾ ಯೋಜನೆ ಮತ್ತು ವಿಜಯನಗರ ಕಾಲುವೆಗಳ ನೀರಾವರಿ ಸಲಹಾ ಸಮಿತಿಯ ಸದಸ್ಯ ಕಾರ್ಯದರ್ಶಿಗಳಾದ ಎಲ್.ಬಸವರಾಜ ಅವರು ತಿಳಿಸಿದ್ದಾರೆ. ಹಿಂದುಳಿದ ವರ್ಗಗಳ ಕಲ್ಯಾಣ, ಕನ್ನಡ ಮತ್ತು ಸಂಸ್ಕೃತಿ ಸಚಿವರು ಹಾಗೂ ನೀರಾವರಿ ಸಲಹಾ ಸಮಿತಿ ಅಧ್ಯಕ್ಷರಾದ ಶಿವರಾಜ ಎಸ್. ತಂಗಡಗಿ ಅವರ ಅಧ್ಯಕ್ಷತೆಯಲ್ಲಿ ಇತ್ತೀಚೆಗೆ ನಡೆದ 2024-25ನೇ ಸಾಲಿನ 123ನೇ ತುರ್ತು ನೀರಾವರಿ ಸಲಹಾ ಸಮಿತಿ ಸಭೆಯಲ್ಲಿ ನಿರ್ಧರಿಸಲಾಗಿದೆ. ನೀರು ಹರಿಸುವ ಕಾಲಾವಧಿ: ತುಂಗಭದ್ರಾ ಎಡದಂಡೆ ಮುಖ್ಯ ಕಾಲುವೆ: ಎಡದಂಡೆ ಕಾಲುವೆಯಡಿ ಲಭ್ಯವಾಗುವ ನೀರಿನಲ್ಲಿ ಏ.01 ರಿಂದ 10 ರವರೆಗೆ ಕುಡಿಯುವ ನೀರು ಒಳಗೊಂಡAತೆ ಹಾಗೂ ನಿಂತ…
ನವದೆಹಲಿ : ಮುಂದಿನ ಹಣಕಾಸು ವರ್ಷದಿಂದ ಅಂದರೆ ಏಪ್ರಿಲ್ 1, 2025 ರಿಂದ ಅನೇಕ ದೊಡ್ಡ ಬದಲಾವಣೆಗಳು ಸಂಭವಿಸಲಿವೆ, ಇದು ನಿಮ್ಮ ಜೇಬಿನ ಮೇಲೆ ನೇರ ಪರಿಣಾಮ ಬೀರುತ್ತದೆ. ಇದರರ್ಥ ಮನೆಯಲ್ಲಿ ಅಡುಗೆಮನೆಯಿಂದ ಹಿಡಿದು ಬ್ಯಾಂಕ್ ಖಾತೆ ಮತ್ತು ಕ್ರೆಡಿಟ್ ಕಾರ್ಡ್ ಹೊಂದಿರುವವರವರೆಗೆ ಎಲ್ಲರೂ ಪರಿಣಾಮ ಬೀರಲಿದ್ದಾರೆ. ಏಪ್ರಿಲ್ 1 ರಿಂದ, ನಿಗದಿತ ಎಟಿಎಂ ವಿತ್ಡ್ರಾ ಮಿತಿಯನ್ನು ಮೀರಿದರೆ ನೀವು 2 ರಿಂದ 23 ರೂ.ಗಳವರೆಗೆ ಹೆಚ್ಚುವರಿ ಶುಲ್ಕವನ್ನು ಪಾವತಿಸಬೇಕಾಗಬಹುದು. ಈ ನಿಟ್ಟಿನಲ್ಲಿ ಬ್ಯಾಂಕುಗಳಿಗೆ ಭಾರತೀಯ ರಿಸರ್ವ್ ಬ್ಯಾಂಕ್ ಅನುಮೋದನೆ ನೀಡಿದೆ. ಬ್ಯಾಂಕ್ ಗ್ರಾಹಕರು ಪ್ರಸ್ತುತ ಎಲ್ಲಾ ಹಣಕಾಸು ಮತ್ತು ಹಣಕಾಸುೇತರ ವಹಿವಾಟುಗಳಿಗಾಗಿ ಬ್ಯಾಂಕಿನ ಸ್ವಂತ ಎಟಿಎಂಗಳಿಂದ ಐದು ಉಚಿತ ರೀಚಾರ್ಜ್ಗಳನ್ನು ಮಾಡಲು ಅನುಮತಿಸಲಾಗಿದೆ. ಆದರೆ ಈ ವಹಿವಾಟು ಇತರ ಬ್ಯಾಂಕಿನ ಎಟಿಎಂಗಳಿಂದ ಉಚಿತವಾಗಿದೆ. ಈ ಮೊತ್ತಕ್ಕಿಂತ ಹೆಚ್ಚಿನ ವಹಿವಾಟುಗಳಿಗೆ ಬ್ಯಾಂಕ್ 2 ರಿಂದ 23 ರೂ.ಗಳವರೆಗೆ ಶುಲ್ಕ ವಿಧಿಸಬಹುದು ಎಂದು ಆರ್ಬಿಐ ತನ್ನ ಸುತ್ತೋಲೆಯಲ್ಲಿ ತಿಳಿಸಿದೆ. ಕ್ರೆಡಿಟ್ ಕಾರ್ಡ್ಗಳಲ್ಲಿನ ಬದಲಾವಣೆಗಳು…
ಬೆಂಗಳೂರು : ರಾಜ್ಯ ಸರ್ಕಾರವು ಆಡಳಿತ ಯಂತ್ರಕ್ಕೆ ಮೇಜರ್ ಸರ್ಜರಿ ಮಾಡಿದ್ದು, 13 ಮಂದಿ ಕೆಎಎಸ್ ಅಧಿಕಾರಿಗಳನ್ನು ವರ್ಗಾವಣೆ ಮಾಡಿ ಆದೇಶ ಹೊರಡಿಸಿದೆ. ಕರ್ನಾಟಕ ಆಡಳಿತ ಸೇವೆಗೆ ಸೇರಿದ ಈ ಕೆಳಕಂಡ ಅಧಿಕಾರಿಗಳನ್ನು ಸಾರ್ವಜನಿಕ ಹಾಗೂ ಆಡಳಿತಾತ್ಮಕ ಹಿತದೃಷ್ಟಿಯಿಂದ ಈ ಕೂಡಲೇ ಜಾರಿಗೆ ಬರುವಂತೆ ಹಾಗೂ ಮುಂದಿನ ಆದೇಶದವರೆಗೆ ಅವರುಗಳ ಹೆಸರಿನ ಮುಂದೆ ನಮೂದಿಸಿರುವ ಹುದ್ದೆಗಳಿಗೆ ವರ್ಗಾಯಿಸಿ / ಸ್ಥಳನಿಯುಕ್ತಿಗೊಳಿಸಿ ಆದೇಶಿಸಿದೆ. ವರ್ಗಾವಣೆಗೊಂಡ `KAS’ ಅಧಿಕಾರಿಗಳ ಪಟ್ಟಿ
ಮ್ಯಾನ್ಮಾರ್ : ಮ್ಯಾನ್ಮಾರ್ ಮತ್ತು ಥೈಲ್ಯಾಂಡ್ ಅನ್ನು ಅಪ್ಪಳಿಸಿದ ಎರಡು ಪ್ರಮುಖ ಭೂಕಂಪಗಳು ಆ ದೇಶಗಳಲ್ಲಿ ಆಳವಾದ ಗಾಯಗಳನ್ನು ಬಿಟ್ಟಿವೆ. 7.7 ತೀವ್ರತೆಯ ಭೂಕಂಪದಿಂದಾಗಿ ಹಲವು ಕಟ್ಟಡಗಳು ಕುಸಿದವು. ಇಲ್ಲಿಯವರೆಗೆ ಸುಮಾರು 1,700 ಶವಗಳನ್ನು ಗುರುತಿಸಲಾಗಿದ್ದು, ಅವಶೇಷಗಳಡಿಯಲ್ಲಿ ನಜ್ಜುಗುಜ್ಜಾಗಿ ಸಾವನ್ನಪ್ಪಿದ್ದಾರೆ. ರಕ್ಷಣಾ ಕಾರ್ಯಾಚರಣೆ ಮುಂದುವರೆದಿದೆ. 3,400 ಕ್ಕೂ ಹೆಚ್ಚು ಜನರು ಗಾಯಗೊಂಡರು. ಆದಾಗ್ಯೂ, ಸ್ಥಳೀಯ ಭೂವಿಜ್ಞಾನಿ ಜೆಸ್ ಫೀನಿಕ್ಸ್ ಅವರು ಭೂಕಂಪವು 334 ಪರಮಾಣು ಬಾಂಬ್ಗಳಿಗೆ ಸಮಾನವಾದ ಸ್ಫೋಟವನ್ನು ಬಿಡುಗಡೆ ಮಾಡಿತು, ಅದಕ್ಕಾಗಿಯೇ ಅದು ಭಾರಿ ದುರಂತಕ್ಕೆ ಕಾರಣವಾಯಿತು ಎಂದು ಹೇಳಿದರು. ಆ ಪ್ರದೇಶದಲ್ಲಿ ಮತ್ತಷ್ಟು ಕಂಪನಗಳ ಅಪಾಯವಿದೆ ಎಂದು ಅವರು ಎಚ್ಚರಿಸಿದರು. ಭಾರತೀಯ ಟೆಕ್ಟೋನಿಕ್ ಪ್ಲೇಟ್ಗಳು ಯುರೇಷಿಯನ್ ಪ್ಲೇಟ್ಗಳೊಂದಿಗೆ ಡಿಕ್ಕಿ ಹೊಡೆಯುತ್ತಲೇ ಇರುವುದರಿಂದ, ತಿಂಗಳುಗಳ ಕಾಲ ನಂತರದ ಆಘಾತಗಳ ಅಪಾಯವಿದೆ ಎಂದು ಜೆಸ್ ಫೀನಿಕ್ಸ್ ಹೇಳಿದರು. ದೇಶದಲ್ಲಿ ನಡೆಯುತ್ತಿರುವ ಅಂತರ್ಯುದ್ಧದಿಂದಾಗಿ ಮ್ಯಾನ್ಮಾರ್ ವಿಪತ್ತು ಇನ್ನಷ್ಟು ಹದಗೆಡುತ್ತದೆ ಎಂದು ಅವರು ಎಚ್ಚರಿಸಿದರು. ಸಂವಹನದಲ್ಲಿನ ಅಡಚಣೆಯಿಂದಾಗಿ ಹೊರಜಗತ್ತು ಅಲ್ಲಿನ ಪರಿಸ್ಥಿತಿಯನ್ನು ಸಂಪೂರ್ಣವಾಗಿ ಅರ್ಥಮಾಡಿಕೊಳ್ಳಲು…
ಬೆಂಗಳೂರು : 2025-26 ನೇ ಶೈಕ್ಷಣಿಕ ಸಾಲಿನಲ್ಲಿ ಏಪ್ರಿಲ್-2025ರ ಮಾಹೆಯಲ್ಲಿ ಕರ್ನಾಟಕ ರಾಜ್ಯದಾದ್ಯಂತ ಹೊಸದಾಗಿ ಗಣಕಯಂತ್ರ ಶಿಕ್ಷಣ ಸಂಸ್ಥೆಗಳನ್ನು ಯಾವುದೇ ವ್ಯಕ್ತಿ ವೈಯಕ್ತಿಕವಾಗಿ ಪ್ರಾರಂಭಿಸಲು ಹಾಗೂ ಈಗಾಗಲೇ ಅಸ್ತಿತ್ವದಲ್ಲಿರುವ ಮಾನ್ಯತೆ ಪಡೆದಿರುವ ವಾಣಿಜ್ಯ ಶಿಕ್ಷಣ ಸಂಸ್ಥೆಗಳಲ್ಲಿ (ಬೆರಳಚ್ಚು ಮತ್ತು ಶೀಘ್ರಲಿಪಿ) ಗಣಕಯಂತ್ರ ಶಿಕ್ಷಣ ಸಂಸ್ಥೆ ಪ್ರಾರಂಭಿಸಲು ಏಪ್ರಿಲ್-2025ರ ಮಾಹೆಯಲ್ಲಿ ದಿನಾಂಕ: 01-04-2025 ರಿಂದ ದಿನಾಂಕ: 30-04-2025 ರೊಳಗೆ ಬೆಂಗಳೂರು ವಿಭಾಗಕ್ಕೆ ಸಂಬಂಧಪಟ್ಟಂತೆ ಸಹನಿರ್ದೇಶಕರು-1, ಬೆಂಗಳೂರು ವಿಭಾಗ, ಆಯುಕ್ತರ ಕಛೇರಿ, ಶಾಲಾ ಶಿಕ್ಷಣ ಇಲಾಖೆ, ನೃಪತುಂಗ ರಸ್ತೆ, ಕೆ.ಆರ್.ವೃತ್ತ, ಬೆಂಗಳೂರು ಇವರಿಗೆ ಅರ್ಜಿ ಸಲ್ಲಿಸಬಹುದಾಗಿದೆ. ಕಲಬುರ್ಗಿ ವಿಭಾಗಕ್ಕೆ ಸಂಬಂಧಿಸಿದಂತೆ ಸಹನಿರ್ದೇಶಕರು, ಶಾಲಾ ಶಿಕ್ಷಣ ಇಲಾಖೆ, ಅಪರ ಆಯುಕ್ತರ ಕಛೇರಿ, ಕಲಬುರ್ಗಿ ಇವರಿಗೆ, ಮತ್ತು ಬೆಳಗಾವಿ ಹಾಗೂ ಮೈಸೂರು ವಿಭಾಗಗಳಿಗೆ ಸಂಬಂಧಪಟ್ಟಂತೆ, ಶಾಲಾ ಶಿಕ್ಷಣ ಇಲಾಖೆಯ ಆಯಾ ವಿಭಾಗದ ಸಹನಿರ್ದೇಶಕರಿಗೆ ಅರ್ಜಿಯನ್ನು ಸಲ್ಲಿಸುವುದು. ಅರ್ಜಿಯೊಂದಿಗೆ ಈ ಕೆಳಕಂಡ ದಾಖಲೆಗಳನ್ನು ಸಲ್ಲಿಸುವುದು.. 1. ಅರ್ಜಿ ನಮೂನೆ-1 2. ಅಂತರ ದೃಢೀಕರಣ ಪ್ರಮಾಣ ಪತ್ರ: [ಬಿ.ಬಿ.ಎಂ.ಪಿ/ ನಗರಸಭೆ/ಪಟ್ಟಣ…
ನೀವು ಭೂಮಿ ಅಥವಾ ಮನೆ ಖರೀದಿಸಲು ಯೋಜಿಸುತ್ತಿದ್ದರೆ ಜಾಗರೂಕರಾಗಿರುವುದು ಬಹಳ ಮುಖ್ಯ. ಅನೇಕ ಬಾರಿ ಜನರು ಯಾವುದೇ ತನಿಖೆ ನಡೆಸದೆ ಆಸ್ತಿಯನ್ನು ಖರೀದಿಸುತ್ತಾರೆ ಮತ್ತು ನಂತರ ಅವರು ವಂಚನೆಗೆ ಬಲಿಯಾಗುತ್ತಾರೆ. ಇತ್ತೀಚೆಗೆ, ನಕಲಿ ನೋಂದಣಿ ಮೂಲಕ ಆಸ್ತಿಯನ್ನು ಮಾರಾಟ ಮಾಡಿದ ಅನೇಕ ಪ್ರಕರಣಗಳು ಬೆಳಕಿಗೆ ಬಂದಿವೆ. ಅಂತಹ ಪರಿಸ್ಥಿತಿಯಲ್ಲಿ, ನೀವು ಖರೀದಿಸುತ್ತಿರುವ ಭೂಮಿ ಅಥವಾ ಮನೆಯ ನೋಂದಾವಣೆ ನಿಜವೋ ಅಥವಾ ನಕಲಿಯೋ ಎಂದು ತಿಳಿದುಕೊಳ್ಳುವುದು ಬಹಳ ಮುಖ್ಯ. ಈ ಲೇಖನದಲ್ಲಿ, ನೀವು ಭೂಮಿ ಅಥವಾ ಮನೆಯ ನೋಂದಣಿಯನ್ನು ಪರಿಶೀಲಿಸಲು ಕೆಲವು ಸುಲಭ ಮತ್ತು ಪರಿಣಾಮಕಾರಿ ಮಾರ್ಗಗಳನ್ನು ನಾವು ನಿಮಗೆ ತಿಳಿಸುತ್ತೇವೆ. 1. ಆನ್ಲೈನ್ ಪೋರ್ಟಲ್ನಿಂದ ಪರಿಶೀಲಿಸಿ ಇಂದಿನ ಡಿಜಿಟಲ್ ಯುಗದಲ್ಲಿ, ಪ್ರತಿಯೊಂದು ರಾಜ್ಯ ಸರ್ಕಾರವು ಭೂಮಿ ಮತ್ತು ಮನೆ ನೋಂದಣಿಯನ್ನು ಪರಿಶೀಲಿಸಲು ಆನ್ಲೈನ್ ಪೋರ್ಟಲ್ ಅನ್ನು ಒದಗಿಸಿದೆ. ನೀವು ಮನೆಯಲ್ಲಿಯೇ ಕೆಲವು ಸುಲಭ ಹಂತಗಳಲ್ಲಿ ನೋಂದಾವಣೆಯ ಸತ್ಯಾಸತ್ಯತೆಯನ್ನು ಪರಿಶೀಲಿಸಬಹುದು. 2. ಖಾಸ್ರಾ ಸಂಖ್ಯೆಯ ಮೂಲಕ ಪರಿಶೀಲಿಸಿ ಖಾಸ್ರಾ ಸಂಖ್ಯೆಯು ಯಾವುದೇ ಭೂಮಿಯ…
ನವದೆಹಲಿ : ಕೇಂದ್ರ ಸರ್ಕಾರವು ಯುವಕರಿಗಾಗಿ ಪ್ರಾರಂಭಿಸಿರುವ ಮಹತ್ವದ ಯೋಜನೆ “PM ಇಂಟರ್ನ್ಶಿಪ್ ಸ್ಕೀಮ್ 2025” ನ ಎರಡನೇ ಹಂತಕ್ಕೆ ನೋಂದಾಯಿಸಿಕೊಳ್ಳಲು ನಾಳೆ ಅಂದರೆ ಮಾರ್ಚ್ 31, 2025 ಕೊನೆಯ ದಿನಾಂಕವಾಗಿದೆ. ಇಂತಹ ಪರಿಸ್ಥಿತಿಯಲ್ಲಿ, ಈ ಯೋಜನೆಗೆ ಅರ್ಹರಾಗಿರುವ ಮತ್ತು ಯಾವುದೇ ಕಾರಣದಿಂದಾಗಿ ಫಾರ್ಮ್ ಅನ್ನು ಭರ್ತಿ ಮಾಡಲು ಸಾಧ್ಯವಾಗದ ಅಭ್ಯರ್ಥಿಗಳು, ಈಗ ಅಧಿಕೃತ ವೆಬ್ಸೈಟ್ pminternship.mca.gov.in ಗೆ ಭೇಟಿ ನೀಡುವ ಮೂಲಕ ಅಥವಾ ಈ ಪುಟದಲ್ಲಿ ನೀಡಲಾದ ಲಿಂಕ್ ಮೂಲಕ ಅರ್ಜಿ ಪ್ರಕ್ರಿಯೆಯನ್ನು ಯಾವುದೇ ವಿಳಂಬವಿಲ್ಲದೆ ತಕ್ಷಣವೇ ಪೂರ್ಣಗೊಳಿಸಬಹುದು. ನಾಳೆಯ ನಂತರ ಅರ್ಜಿ ವಿಂಡೋ ಮುಚ್ಚಲ್ಪಡುತ್ತದೆ. ಎರಡನೇ ಹಂತದಲ್ಲಿ 1 ಲಕ್ಷ ಯುವಕರಿಗೆ ಶಿಷ್ಯವೃತ್ತಿ ಅವಕಾಶ. ಎರಡನೇ ಹಂತದ ಪಿಎಂ ಇಂಟರ್ನ್ಶಿಪ್ನಲ್ಲಿ ಆಯ್ಕೆಯಾದ 1 ಲಕ್ಷ ಅಭ್ಯರ್ಥಿಗಳಿಗೆ ದೇಶದ ಅಗ್ರ 500 ಕಂಪನಿಗಳಲ್ಲಿ ಇಂಟರ್ನ್ಶಿಪ್ ಮಾಡಲು ಅವಕಾಶ ನೀಡಲಾಗುವುದು. ದೇಶಾದ್ಯಂತ 730 ಜಿಲ್ಲೆಗಳಲ್ಲಿ ಈ ನೇಮಕಾತಿಗಳನ್ನು ಮಾಡಲಾಗುವುದು. ಅರ್ಜಿ ಪ್ರಕ್ರಿಯೆ ನೀವು ಈ ಯೋಜನೆಗೆ ಅರ್ಜಿ ಸಲ್ಲಿಸಲು ಬಯಸಿದರೆ, ಕೆಳಗೆ…
ಬೆಂಗಳೂರು : ಪಡಿತರ ಚೀಟಿದಾರರಿಗೆ ಆಹಾರ ಇಲಾಖೆ ಸಿಹಿಸುದ್ದಿ ನೀಡಿದ್ದು, ಹೆಸರು ಸೇರ್ಪಡೆ/ತಿದ್ದುಪಡಿಗೆ ಮಾರ್ಚ್ 31 ರವರೆಗೆ ಅವಕಾಶ ನೀಡಲಾಗಿದೆ. ಪಡಿತರ ಚೀಟಿದಾರರು ಹೆಸರು ತಿದ್ದುಪಡಿ, ಹೊಸ ಸದಸ್ಯರ ಸೇರ್ಪಡೆ, ವಿಳಾಸ ಬದಲಾವಣೆ,ಹೆಸರು ತೆಗೆಯುವುದಕ್ಕೆ ಅವಕಾಶ ನೀಡಲಾಗಿದೆ. ಮಾರ್ಚ್ 31 ರವರೆಗೆ ಬೆಳಗ್ಗೆ 10 ರಿಂದ ಸಂಜೆ 5 ರವರೆಗೆ ತಿದ್ದುಪಡಿಗೆ ಅವಕಾಶವಿದೆ. ಬೆಂಗಳೂರು ಒನ್, ಸೈಬರ್ ಸೆಂಟರ್ ಗಳಲ್ಲಿ ಹೊಸ ಕಾರ್ಡ್ ಅಥವಾ ಹೆಸರು ಸೇರ್ಪಡೆಗೆ ಅರ್ಜಿ ಸಲ್ಲಿಸಬಹುದು. ವೆಬ್ ಸೈಟ್ ಸ್ವಯಂ ಆಗಿ ಅರ್ಜಿ ಸಲ್ಲಿಸಬಹುದು. ಎಪಿಎಲ್ ಕಾರ್ಡ್ ಪಡೆಯುವವರು ಕೂಡ ಆನ್ನೈನ್ ನಲ್ಲಿ ಅರ್ಜಿ ಸಲ್ಲಿಸಬೇಕಿದೆ. ಈಗಾಗಲೇ ಪಡಿತರ ಚೀಟಿ ಹೊಂದಿದವರು ಹೊಸದಾಗಿ ಮಕ್ಕಳು ಅಥವಾ ತಮ್ಮ ಕುಟುಂಬದ ಇತರೆ ಸದಸ್ಯರ ಸೇರ್ಪಡೆಗೆ ಅವಕಾಶ ನೀಡಲಾಗುವುದು. http://ahara.kar.nic.in ವೆಬ್ಟ್ ಗಮನಿಸಬಹುದಾಗಿದೆ. ಸದಸ್ಯರ ಸೇರ್ಪಡೆ * ಪೋಟೋ ಬದಲಾವಣೆ * ಹೆಸರು ಡಿಲೆಟ್ * ಅಂಗಡಿ. ನಂ. ಬದಲಾವಣೆ * ಹೆಸರು ತಿದ್ದುಪಡಿ * ಮುಖ್ಯಸ್ಥರ ಬದಲಾವಣೆ ಅರ್ಜಿ…
ಬೆಂಗಳೂರು : ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ವ್ಯಾಪ್ತಿಯಲ್ಲಿ ಕಾರ್ಯನಿರ್ವಹಿಸುತ್ತರುವ ಎಲ್ಲಾ ವೃಂದದ ಅಧಿಕಾರಿ/ಸಿಬ್ಬಂದಿಗಳು ಕಡ್ಡಾಯವಾಗಿ ಸಂಬಳ ಖಾತೆಯನ್ನು ಸಂಬಳ ಪ್ಯಾಕೇಜ್ ಖಾತೆಯನ್ನಾಗಿ ಪರಿವರ್ತಿಸಲು/ನೋಂದಾಯಿಸಲು ಸೂಚಿಸಿರುವ ಬಗ್ಗೆ ರಾಜ್ಯ ಸರ್ಕಾರ ಮಹತ್ವದ ಆದೇಶ ಹೊರಡಿಸಿದೆ. ಮೇಲ್ಕಂಡ ವಿಷಯಕ್ಕೆ ಸಂಬಂಧಿಸಿದಂತೆ, ಉಲ್ಲೇಖಿತ (01) ರ ಸರ್ಕಾರಿ ಆದೇಶದನ್ವಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಲ್ಲಿ ಕಾರ್ಯನಿರ್ವಹಿಸುತ್ತಿರುವ ಎಲ್ಲಾ ವೃಂದದ ಅಧಿಕಾರಿ/ಸಿಬ್ಬಂದಿಗಳು ತಪ್ಪದೇ ತಮ್ಮ ಸಂಬಳ ಖಾತೆಯನ್ನು ಕಡ್ಡಾಯವಾಗಿ ಸಂಬಳ ಪ್ಯಾಕೇಜ್ ಖಾತೆಯನ್ನಾಗಿ ಬ್ಯಾಂಕ್ಗಳ ಮೂಲಕ ಪರಿವರ್ತಿಸಿಕೊಳ್ಳಲು/ನೋಂದಾಯಿಸಿಕೊಳ್ಳಲು ಸೂಚಿಸಲಾಗಿರುತ್ತದೆ. ಅದರಂತೆ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ವ್ಯಾಪ್ತಿಯಡಿಯಲ್ಲಿ ಬರುವ ಎಲ್ಲಾ ಹಂತದ ವೇತನ ಸೆಳೆಯುವ ಬಟಾವಡೆ ಅಧಿಕಾರಿಗಳು (ಡಿ ಡಿ ಒ) ತಕ್ಷಣದಿಂದಲೇ ಜಾರಿಗೆ ಬರುವಂತೆ ತಮ್ಮ ಅಧೀನದಲ್ಲಿ ಬರುವ ಕಛೇರಿ/ಆಸ್ಪತ್ರೆ (ಪ್ರಾ.ಆ.ಕೇಂದ್ರ /ಸ.ಆ.ಕೇಂದ್ರ/ ಸಾರ್ವಜನಿಕ ಆಸ್ಪತ್ರೆ/ ಎಂ.ಸಿ.ಹೆಚ್ /ಡಿ.ಹೆಚ್.ಒ/ ಟಿ.ಹೆಚ್.ಓ ಕಛೇರಿಗಳನ್ನೊಳಗೊಂಡಂತೆ) ಗಳಲ್ಲಿ ಕಾರ್ಯ ನಿರ್ವಹಿಸುತ್ತಿರುವ ಎಲ್ಲಾ ಅಧಿಕಾರಿ/ಸಿಬ್ಬಂದಿಗಳ ಪಸ್ತುತ ಚಾಲ್ತಿಯಲ್ಲಿರುವ ಸಂಬಳ ಖಾತೆಗಳನ್ನು ಬ್ಯಾಂಕ್ಗಳ ಮೂಲಕ ಸಂಬಳ ಪ್ಯಾಕೇಜ್…