Author: kannadanewsnow57

ಬೆಂಗಳೂರು : ಪ್ರಸ್ತಕ ಸಾಲಿನ ಕರ್ನಾಟಕ ರೈತ ಸುರಕ್ಷಾ ಪ್ರಧಾನ ಮಂತ್ರಿ ಫಸಲ್ ಬೀಮಾ ಯೋಜನೆಯ ಮುಂಗಾರು ಹಂಗಾಮಿನ ಬೆಳೆ ವಿಮೆಗೆ ನೋಂದಾಯಿಸಲು ಬೆಳೆ ಸಾಲ ಪಡೆದ ಹಾಗೂ ಬೆಳೆ ಸಾಲ ಪಡೆಯದ ರೈತರು ಬ್ಯಾಂಕುಗಳಲ್ಲಿ ವಿಮೆ ಮಾಡಿಸಿಕೊಳ್ಳವಂತೆ ಕೃಷಿ ಇಲಾಖೆ ಅಧಿಕಾರಿಗಳು ತಿಳಿಸಿದ್ದಾರೆ. ಈ ಯೋಜನೆಯಡಿ ಗ್ರಾಮ ಪಂಚಾಯಿತಿ ಮಟ್ಟದ ಬೆಳೆಗಳಾದ ಭತ್ತ, ಮುಸುಕಿನ ಜೋಳ ಹಾಗೂ ಹೋಬಳಿ ಮಟ್ಟದ ಬೆಳೆಗಳಾದ ಜೋಳ, ರಾಗಿ, ಸಜ್ಜೆ, ನವಣೆ, ತೊಗರಿ, ಹುರುಳಿ, ಸೂರ್ಯಕಾಂತಿ, ಎಳ್ಳು, ಹತ್ತಿ, ನೆಲಗಡಲೆ, ಈರುಳ್ಳಿ, ಭತ್ತ, ಕೆಂಪು ಮೆಣಸಿನಕಾಯಿ ಬೆಳೆಗಳಿಗೆ ವಿಮೆಯನ್ನು ಮಾಡಿಸಿಕೊಳ್ಳಬೇಕು. ಬೆಳೆ ವಿಮೆಯನ್ನು ಮಾಡಿಸಲು ವಿವಿಧ ಬೆಳೆಗಳಿಗೆ ಕೊನೆಯ ದಿನಾಂಕ ಇಂತಿವೆ: ಮುಸುಕಿನ ಜೋಳ, ಜೋಳ, ಸೂರ್ಯಕಾಂತಿ, ತೊಗರಿ, ಹತ್ತಿ, ಕೆಂಪು ಮೆಣಸಿನಕಾಯಿ, ಈರುಳ್ಳಿ ಮತ್ತು ಎಳ್ಳು ಬೆಳೆಗಳಿಗೆ ವಿಮೆ ಮಾಡಿಸಿಕೊಳ್ಳಲು ಜುಲೈ 31 ಕೊನೆಯ ದಿನವಾಗಿದೆ. ಭತ್ತ, ತೊಗರಿ, ರಾಗಿ, ನವಣೆ, ಹುರುಳಿ, ನೆಲಗಡಲೆ ಮತ್ತು ಸಜ್ಜೆ ಬೆಳೆಗಳಿಗೆ ವಿಮೆ ಮಾಡಿಸಲು ಆಗಸ್ಟ್…

Read More

ಅರ್ಜೆಂಟೀನಾದ ವಿಶ್ವಕಪ್ ವಿಜೇತ ಮತ್ತು ಫುಟ್ಬಾಲ್ ದಂತಕಥೆ ಲಿಯೋನೆಲ್ ಮೆಸ್ಸಿ ಅವರು ಇಂಟರ್ ಮಿಯಾಮಿಯಲ್ಲಿ ನಿವೃತ್ತರಾಗುವುದನ್ನು ಖಚಿತಪಡಿಸಿದ್ದಾರೆ, ಫುಟ್ಬಾಲ್ ನಂತರದ ಜೀವನದ ಬಗ್ಗೆ ತಮ್ಮ ಭಯ ಮತ್ತು ಆಲೋಚನೆಗಳ ಬಗ್ಗೆ ತೆರೆದಿಟ್ಟಿದ್ದಾರೆ. ಇಂಟರ್ ಮಿಯಾಮಿಯೊಂದಿಗಿನ ಮೆಸ್ಸಿಯ ಒಪ್ಪಂದವು 2025 ರ ಅಂತ್ಯದವರೆಗೆ ಇರುತ್ತದೆ, ಇದು ಅವರ ವೃತ್ತಿಜೀವನದ ಉಜ್ವಲ ಅಂತ್ಯವನ್ನು ಸೂಚಿಸುತ್ತದೆ, ಇದು ಕ್ರೀಡೆಯಲ್ಲಿ ಪ್ರತಿಯೊಂದು ಪ್ರಮುಖ ಪ್ರಶಂಸೆಯನ್ನು ಸಾಧಿಸಿದೆ. ವಿಶ್ವದ ಅಗ್ರ ಆಟಗಾರರಲ್ಲಿ ಒಬ್ಬರಾಗಿದ್ದರೂ, ಮೆಸ್ಸಿ ತಮ್ಮ ವೃತ್ತಿಜೀವನದ ಅಂತ್ಯವು ಸಮೀಪಿಸುತ್ತಿದೆ ಎಂದು ಒಪ್ಪಿಕೊಂಡರು. ಈ ತಿಂಗಳ ಕೊನೆಯಲ್ಲಿ 37 ನೇ ವರ್ಷಕ್ಕೆ ಕಾಲಿಡಲಿರುವ ಮಾಜಿ ಬಾರ್ಸಿಲೋನಾ ಮತ್ತು ಪ್ಯಾರಿಸ್ ಸೇಂಟ್-ಜರ್ಮೈನ್ ತಾರೆ, ಇಎಸ್ಪಿಎನ್ ಅರ್ಜೆಂಟೀನಾಗೆ ನೀಡಿದ ವಿಶೇಷ ಸಂದರ್ಶನದಲ್ಲಿ ತಮ್ಮ ಭಾವನೆಗಳು ಮತ್ತು ಯೋಜನೆಗಳನ್ನು ಹಂಚಿಕೊಂಡಿದ್ದಾರೆ. “ನಾನು ಫುಟ್ಬಾಲ್ ತೊರೆಯಲು ಸಿದ್ಧನಿಲ್ಲ” ಎಂದು ಮೆಸ್ಸಿ ಇಎಸ್ಪಿಎನ್ ಅರ್ಜೆಂಟೀನಾಗೆ ತಿಳಿಸಿದರು. “ನಾನು ಇದನ್ನು ನನ್ನ ಜೀವನದುದ್ದಕ್ಕೂ ಮಾಡಿದ್ದೇನೆ, ನಾನು ತರಬೇತಿ, ಆಟಗಳನ್ನು ಆನಂದಿಸುತ್ತೇನೆ. ಎಲ್ಲವೂ ಮುಗಿಯುತ್ತದೆ ಎಂಬ ಭಯ, ಅದು…

Read More

ಬೆಂಗಳೂರು : ರಾಜ್ಯ ಸರ್ಕಾರವು ಸರ್ಕಾರಿ ನೌಕರರಿಗೆ ಭರ್ಜರಿ ಸಿಹಿಸುದ್ದಿ ನೀಡಿದ್ದು, 7ನೇ ವೇತನ ಆಯೋಗ ವರದಿ ಜಾರಿಗೆ ರಾಜ್ಯ ಸರ್ಕಾರವು ಸಿದ್ದವಾಗಿದ್ದು, ವೇತನ ಪರಿಷ್ಕರಣೆ ಸಹಿತ ಹಲವು ಸವಲತ್ತುಗಳನ್ನು ನೀಡುವ ಸರಕಾರದ ನಿವೃತ್ತ ಮುಖ್ಯ ಕಾರ್ಯದರ್ಶಿ ಸುಧಾಕರ್ ರಾವ್ ನೇತೃತ್ವದ ಸಮಿತಿ ನೀಡಿರುವ ಶಿಫಾರಸುಗಳನ್ನು ಅನುಷ್ಠಾನಿಸಲು ಮುಂದಾಗಿದೆ. ನೌಕರರ ವೇತನ ಪರಿಷ್ಕರಣೆಗೆ ರಚಿಸಿದ್ದ ಏಳನೇ ವೇತನ ಆಯೋಗದ ಶಿಫಾರಸುಗಳನ್ನು ಜುಲೈ 1ರಿಂದ ಜಾರಿಗೊಳಿಸಲು ರಾಜ್ಯ ಸರ್ಕಾರ ಚಿಂತನೆ ನಡೆಸಿದೆ. ಇಂದು ನಡೆಯುವ ಸಂಪುಟ ಸಭೆಯಲ್ಲಿ ಈ ಕುರಿತು ಚರ್ಚಿಸಿ, ಜುಲೈ 1ರಿಂದ ಅನ್ವಯವಾಗುವಂತೆ ಪರಿಷ್ಕೃತ ವೇತನ ನೀಡಲು ಕ್ರಮಕೈಗೊಳ್ಳಲಾಗುತ್ತದೆ ಎಂದು ಮೂಲಗಳು ಹೇಳಿವೆ. ವೇತನ ಪರಿಷ್ಕರಣೆ ಕುರಿತು ಅಧ್ಯಯನ ಮಾಡಿ, ವರದಿ ಸಲ್ಲಿಸಲು ನಿವೃತ್ತ ಮುಖ್ಯಕಾರ್ಯದರ್ಶಿ ಕೆ.ಸುಧಾಕರ್‌ ರಾವ್ ಅಧ್ಯಕ್ಷತೆಯಲ್ಲಿ 2022ರ ನವೆಂಬರ್‌ 19ರಂದು ಆಯೋಗ ರಚಿಸಲಾಗಿತ್ತು. ಆರು ತಿಂಗಳು ನೀಡಿದ್ದ ಅವಧಿಯನ್ನು ಎರಡು ಬಾರಿ ವಿಸ್ತರಿಸಿದ ನಂತರ ಈ ಮಾರ್ಚ್‌ 16ರಂದು ಆಯೋಗವು ಸರ್ಕಾರಕ್ಕೆ ವರದಿ ಸಲ್ಲಿಸಿತ್ತು. ವರದಿ…

Read More

ಬೆಂಗಳೂರು : ವಿಶೇಷ ಚೇತನ ಸರ್ಕಾರಿ ನೌಕರರ ವರ್ಗಾವಣೆಗಳ ಬಗ್ಗೆ ರಾಜ್ಯ ಸರ್ಕಾರವು ಮಹತ್ವದ ಆದೇಶ ಹೊರಡಿಸಿದ್ದು, ವಿಸ್ತೃತ ಮಾರ್ಗಸೂಚಿ ಪ್ರಕಟಿಸಿದೆ. ಮೇಲೆ ಓದಲಾದ ಉಲ್ಲೇಖ (1)ರ ಸರ್ಕಾರಿ ಆದೇಶದಲ್ಲಿ ಸರ್ಕಾರಿ ನೌಕರರ ವರ್ಗಾವಣೆಗಳ ಕುರಿತಂತೆ ವಿಸ್ತ್ರತ ಮಾರ್ಗಸೂಚಿಗಳನ್ನು ನೀಡಲಾಗಿದೆ. ಸದರಿ ಸರ್ಕಾರಿ ಆದೇಶದಲ್ಲಿ ವಿಶೇಷ ಚೇತನ ಸರ್ಕಾರಿ ನೌಕರರ ವರ್ಗಾವಣೆಗಳನ್ನು ಕೈಗೊಳ್ಳುವ ಬಗ್ಗೆ ತಿಳಿಸಲಾಗಿದೆ. ಅಂಗವಿಕಲ ವ್ಯಕ್ತಿಗಳ ಹಕ್ಕು (ಅಧಿನಿಯಮ) 2016ರ ಸೆಕ್ಷನ್ 20(5)ರನ್ನಯ ವಿಶೇಷ ಚೇತನ ನೌಕರರಿಗೆ ಮತ್ತು ವಿಶೇಷ ಚೇತನ ಅವಲಂಬಿತರ ಪಾಲನ ಪೋಷಣೆಯ ಜವಾಬ್ದಾರಿ ಹೊಂದಿರುವ ನೌಕರರಿಗೆ ಸಾಮಾನ್ಯ ಮತ್ತು ಪುನರಾವರ್ತಿತ ವರ್ಗಾವಣೆಗಳಿಂದ ವಿನಾಯಿತಿ ನೀಡುವುದು, ವರ್ಗಾವಣೆ ಮತ್ತು ಪದೋನ್ನತ್ತಿಯ ನಂತರದಲ್ಲಿ ಸ್ಥಳ ನಿಯುಕ್ತಿಯಲ್ಲಿ ಪ್ರಾಶಸ್ತ್ರ ನೀಡುವುದು, ನೇಮಕಾತಿ ನಂತರದಲ್ಲಿ ನೀಡುವ ಆರಂಭಿಕ ಸ್ಥಳ ನಿಯುಕ್ತಿಯನ್ನು ಅವರ ವಾಸಸ್ಥಳದ ಹತ್ತಿರದ ಸ್ಥಳಕ್ಕೆ ನೀಡುವುದನ್ನು ಒಳಗೊಂಡಂತೆ, ಅವರು ಘನತೆಯಿಂದ ಕರ್ತವ್ಯ ನಿರ್ವಹಿಸಲು ಅನುಕೂಲವಾಗುವಂತೆ ವರ್ಗಾವಣೆ ಮತ್ತು ಸ್ಥಳನಿಯುಕ್ತಿ ನಿಯಮಗಳನ್ನು ರೂಪಿಸುವುದು ಅಗತ್ಯವಾಗಿರುತ್ತದೆ. ಆದ್ದರಿಂದ ವಿಶೇಷ ಚೇತನ ನಿಯಂತ್ರಿಸಲು…

Read More

ಬೆಂಗಳೂರು: ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿಯಿಂದ ಜೂನ್.14 ರ ನಾಳೆಯಿಂದ ಎಸ್ ಎಸ್ ಎಲ್ ಸಿ ಪರೀಕ್ಷೆ-2 ನಡೆಯಲಿದ್ದು, ವಿದ್ಯಾರ್ಥಿಗಳು ಪರೀಕ್ಷೆ ಸಮಯದಲ್ಲಿ ಪ್ರಮುಖ ನಿಯಮ ಪಾಲಿಸುವಂತೆ ಸೂಚನೆ ನೀಡಲಾಗಿದೆ.  ಪ್ರತಿ ಪರೀಕ್ಷಾ ಕೇಂದ್ರಗಳಿಗೆ ಸಿಸಿ ಟಿವಿ ಅಳವಡಿಸುವುದು ಕಡ್ಡಾಯವಾಗಿರುತ್ತದೆ. ಸಿಸಿಟಿವಿ ಗಳು ಪರೀಕ್ಷಾ ಅವಧಿಯಲ್ಲಿ ಕಾರ್ಯ ನಿರ್ವಹಿಸುತ್ತಿರಬೇಕು. ಹಾಗೂ ಜಿಲ್ಲಾ ಪಂಚಾಯ್ತಿಯ ಸಿಇಓ ಕಚೇರಿಯಲ್ಲಿ ಸಿಸಿಟಿವಿ ವ್ಯವಸ್ಥೆಯನ್ನು ಮಾನಿಟರ್ ಮಾಡಲಾಗುತ್ತದೆ ವಿದ್ಯಾರ್ಥಿಗಳಿಗೆ ಈ ನಿಯಮಗಳ ಪಾಲನೆ ಕಡ್ಡಾಯ ವಿದ್ಯಾರ್ಥಿಗಳು, ಸರಳ ಕ್ಯಾಲ್ಕುಲೇಟರ್ಗಳನ್ನು ಮಾತ್ರ ಬಳಸಲು ಅವಕಾಶ ಸ್ಟ್ರಾಟಿಸ್ಟಿಕ್ಸ್ ವಿಷಯದಲ್ಲಿ ಮಾತ್ರ ಸೈಂಟಿಫಿಕ್ ಕ್ಯಾಲ್ಕುಲೇಟರ್ ಬಳಸಲು ಅನುಮತಿ ಪರೀಕ್ಷೆಯ ಅಂತಿಮ ಬೆಲ್ ಹೊಡೆಯುವ ಮುನ್ನ ಪರೀಕ್ಷಾ ಕೊಠಡಿಯಿಂದ ಹೊರಡುವ ವಿದ್ಯಾರ್ಥಿಗಳಿಂದ ಉತ್ತರ ಪತ್ರಿಕೆ ಮತ್ತು ಪ್ರಶ್ನೆ ಪತ್ರಿಕೆಗಳನ್ನು ಕಡ್ಡಾಯವಾಗಿ ಪಡೆಯಲಾಗುತ್ತದೆ. ಗುರುತಿನ ಚೀಟಿ ಹಾಗೂ ಹಾಲ್ ಟಿಕೆಟ್ ಕಡ್ಡಾಯ ಮೊಬೈಲ್ ಫೋನ್ , ಎಲೆಕ್ಟ್ರಿಕಲ್ ಉಪಕರಣಗಳ ಬಳಕೆ ನಿಷೇಧ ಪರೀಕ್ಷಾ ಅವಧಿಗಿಂತ ಮುಂಚೆ ಹೊರಕ್ಕೆ ಹೋಗುವ ವಿದ್ಯಾರ್ಥಿಗಳಿಗೆ…

Read More

ಬೆಂಗಳೂರು: ವಾಹನ ಸವಾರರಿಗೆ ಹೈಕೋರ್ಟ್ ಬಿಗ್‌ ರಿಲೀಫ್‌ ನೀಡಿದ್ದು, ಸೆಪ್ಟೆಂಬರ್ ವರೆಗೆ ಹೆಚ್ ಎಸ್ ಆರ್ ಪಿ ನಂಬರ್ ಪ್ಲೇಟ್ ಅಳವಡಿಕೆಗೆ ಗಡುವು ವಿಸ್ತರಿಸೋದಕ್ಕೆ ಅನುಮತಿ ನೀಡಿದೆ. ಹೀಗಾಗಿ ವಾಹನ ಸವಾರರು ಹೆಚ್ ಎಸ್ ಆರ್ ಪಿ ನಂಬರ್ ಪ್ಲೇಟ್ ಅಳವಡಿಸೋದಕ್ಕೆ ಸೆಪ್ಟೆಂಬರ್ ವರೆಗೆ ಗಡುವು ವಿಸ್ತರಣೆಯಾದಂತೆ ಆಗಿದೆ. ಬಿಎನ್ ಡಿ ಎನರ್ಜಿ ಲಿಮಿಟೆಡ್ ಮತ್ತಿತರರು ಹೈಕೋರ್ಟ್ ಗೆ ಹೆಚ್ ಎಸ್ ಆರ್ ಪಿ ನಂಬರ್ ಪ್ಲೇಟ್ ಅಳವಡಿಕೆಗೆ ಗಡುವು ವಿಸ್ತರಣೆ ಕೋರಿ ಸಲ್ಲಿಸಿದ್ದಂತ ಅರ್ಜಿಯನ್ನು, ಮುಖ್ಯ ನ್ಯಾಯಮೂರ್ತಿ ಎನ್ ವಿ ಅಂಜಾರಿಯಾ ಹಾಗೂ ನ್ಯಾಯಮೂರ್ತಿ ಕೆ.ವಿ ಅರವಿಂದ ಅವರನ್ನೊಳಗೊಂಡಂತ ನ್ಯಾಯಪೀಠವು ವಿಚಾರಣೆ ನಡೆಸಿತು. ಈ ಅರ್ಜಿಯ ವಿಚಾರಣೆಯ ಬಳಿಕ ಹೈಕೋರ್ಟ್ ನ್ಯಾಯಪೀಠವು, ಮೇ 21ರಂದು ಎಚ್‌ಎಸ್‌ಆರ್‌ಪಿ ಅಳವಡಿಸದಿರುವುದಕ್ಕೆ ಅರ್ಜಿದಾರರ ವಿರುದ್ಧ ಯಾವುದೇ ದುರುದ್ದೇಶಿತ ಕ್ರಮಕೈಗೊಳ್ಳಬಾರದು ಎಂದು ರಾಜ್ಯ ಸರ್ಕಾರಕ್ಕೆ ನಿರ್ದೇಶಿಸಿದೆ. ಈಗ ರಾಜ್ಯ ಸರ್ಕಾರವು ಆಗಸ್ಟ್‌-ಸೆಪ್ಟೆಂಬರ್‌ವರೆಗೆ ಎಚ್‌ಎಸ್‌ಆರ್‌ಪಿ ಅಳವಡಿಕೆ ಗಡುವು ವಿಸ್ತರಿಸಲಾಗುವುದು ಎಂದು ತಿಳಿಸಿದೆ. ಹೀಗಾಗಿ, ಮೇ 21ರ ಆದೇಶದಲ್ಲಿ…

Read More

ಬೆಂಗಳೂರು : ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಅವರ ವಿರುದ್ಧ ಲೈಂಗಿಕ ದೌರ್ಜನ ಪ್ರಕರಣಕ್ಕೆ ಸಂಬಂಧಿಸಿದಂತೆ ಇದೀಗ ಸಂತ್ರಸ್ತೆಯ ಸಹೋದರ ಹೈಕೋರ್ಟಿಗೆ ರಿಟ್ ಅರ್ಜಿ ಸಲ್ಲಿಸಿದ್ದು ಯಡಿಯೂರಪ್ಪ ಅವರನ್ನು  ಬಂಧಿಸುವಂತೆ ನಿರ್ದೇಶನ ಕೋರಿ ಹೈಕೋರ್ಟಿಗೆ ರಿಟ್ ಅರ್ಜಿ ಸಲ್ಲಿಸಿದ್ದಾರೆ. ಹೌದು ಬಿಎಸ್ ಯಡಿಯೂರಪ್ಪ ಬಂಧಿಸುವಂತೆ ನಿರ್ದೇಶನ ಕೋರಿ ಸಂತ್ರಸಸ್ತೆಯ ಸಹೋದರ ಇದೀಗ ಹೈಕೋರ್ಟಿಗೆ ಅರ್ಜಿ ಸಲ್ಲಿಸಿದ್ದಾರೆ. ಪೋಕ್ಸೋ ಕೇಸ್ ಸಂತ್ರಸ್ತೆಯ ಸಹೋದರನಿಂದ ಇದೀಗ ಹೈಕೋರ್ಟಿಗೆ ಅರ್ಜಿ ಸಲ್ಲಿಸಲಾಗಿದೆ. ಲೈಂಗಿಕ ದೌರ್ಜನ್ಯ ಘಟನೆ ನಡೆದು ಹಲವು ತಿಂಗಳು ಆದರೂ ಪೊಲೀಸರು ಯಾವುದೇ ಕ್ರಮ ಕೈಗೊಂಡಿಲ್ಲ. ಇದುವರೆಗೂ ಮಾಜಿ ಸಿಎಂ ಯಡಿಯೂರಪ್ಪ ಅವರನ್ನು ಬಂಧಿಸಿ ಪೊಲೀಸರು ವಿಚಾರಣೆಗೆ ಒಳಪಡಿಸಿಲ್ಲ. ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ಅವರ ಮನೆಯ ಸಿಸಿಟಿವಿ ದೃಶ್ಯಾವಳಿ ಸೀಸ್ ಮಾಡಿಲ್ಲ ಕನಿಷ್ಠ 41 ಅಡಿ ನೋಟಿಸ್ ನೀಡಿ ಬಿ ಎಸ್ ವೈ ಅವರನ್ನು ವಿಚಾರಣೆಗೆ ಕರೆಸಬಹುದಾಗಿತ್ತು. ಈ ಮಧ್ಯೆ ದೂರು ನೀಡಿದ ನಂತರ ತಾಯಿ ಕೂಡ ಮೃತಪಟ್ಟಿದ್ದಾರೆ. ಲೈಂಗಿಕ ದೌರ್ಜನ ನಡೆದು…

Read More

ಬೆಂಗಳೂರು : : ರಾಷ್ಟ್ರೀಯ ಆಹಾರ ಭದ್ರತಾ ಕಾಯ್ದೆಯಡಿ ಪಡಿತರ ಚೀಟಿದಾರರಿಗೆ ಜೂನ್ ಮಾಹೆಗೆ ಅನ್ವಯವಾಗುವಂತೆ ಪಡಿತರ ಧಾನ್ಯ ಹಂಚಿಕೆ ಮಾಡಲಾಗಿದೆ. ಅಂತ್ಯೋದಯ ಪಡಿತರ ಚೀಟಿದಾರರಿಗೆ ಪ್ರತಿ ಕಾರ್ಡ್‍ಗೆ 21 ಕೆ.ಜಿ ಅಕ್ಕಿ, ರಾಗಿ ಪ್ರತಿ ಕಾರ್ಡ್‍ಗೆ 14 ಕೆ.ಜಿ, ಆದ್ಯತಾ ಹಾಗೂ ಬಿ.ಪಿ.ಎಲ್ ಪಡಿತರ ಚೀಟಿದಾರರಿಗೆ 3 ಕೆ.ಜಿ ಅಕ್ಕಿ, ರಾಗಿ 2 ಕೆ.ಜಿ ಉಚಿತವಾಗಿ ವಿತರಿಸಲಾಗುತ್ತದೆ. ಸರ್ಕಾರದ ಗ್ಯಾರಂಟಿ ಯೋಜನೆಯಡಿ ಪಡಿತರ ಚೀಟಿದಾರರಿಗೆ ನೇರ ನಗದು ವರ್ಗಾವಣೆ ಮಾಡುತ್ತಿದ್ದು, ಯಾವುದೇ ರೀತಿಯ ತಾಂತ್ರಿಕ ಸಮಸ್ಯೆಗಳಿದ್ದಲ್ಲಿ ಹತ್ತಿರದ ನ್ಯಾಯಬೆಲೆ ಅಂಗಡಿಗೆ ಭೇಟಿ ನೀಡಿ ಪರಿಹರಿಸಿಕೊಳ್ಳಬಹುದೆಂದು ತಹಶೀಲ್ದಾರ್ ಡಾ.ಎಂ.ಬಿ.ಅಶ್ವಥ್ ತಿಳಿಸಿದ್ದಾರೆ.

Read More

ಬೆಂಗಳೂರು : ಮದ್ಯ ಪ್ರಿಯರಿಗೆ ರಾಜ್ಯ ಸರ್ಕಾರ ಶಾಕ್ ನೀಡಿದೆ. ಲೋಕಸಭೆ ಚುನಾವಣೆ ಫಲಿತಾಂಶದ ಬೆನ್ನಲ್ಲೇ ಮದ್ಯದ ಬೆಲೆಯಲ್ಲಿ ಹೆಚ್ಚಳ ಮಾಡಲು ಮುಂದಾಗಿದೆ ಎಂದು ವರದಿಯಾಗಿದೆ. ಉಚಿತ ಗ್ಯಾರಂಟಿ ಯೋಜನೆಗಳಿಗೆ ಆರ್ಥಿಕ ಸಂಪನ್ಮೂಲಗಳ ಸಂಗ್ರಹಕ್ಕಾಗಿ ತೀವ್ರ ಕಸರತ್ತು ನಡೆಸುತ್ತಿರುವ ಸರ್ಕಾರ, ದೇಶಿಯ ಮದ್ಯಗಳ ಬೆಲೆ ಏರಿಕೆಗೆ ನಿರ್ಧರಿಸಿದ್ದು, ಲಿಕ್ಕರ್ ದರ ಏರಿಕೆಗೆ ಅಬಕಾರಿ ಇಲಾಖೆ ಪ್ಲಾನ್ ಮಾಡಿದ್ದು, ಶೀಘ್ರವೇ ಅನುಮೋದನೆ ನೀಡಲು ಮುಂದಾಗಿದೆ. ರಾಜ್ಯದಲ್ಲಿ 2023ರ ಜುಲೈನಲ್ಲಿ ದೇಶೀಯ ಮದ್ಯಗಳ ಬೆಲೆ ಹೆಚ್ಚಿಸಲಾಗಿತ್ತು. ನಂತರ ಲಿಕ್ಕರ್ ಕಂಪನಿಗಳು ಬಿಯರ್ ದರ ಏರಿಕೆ ಮಾಡಿದವು. ಲಿಕ್ಕರ್ ದರವನ್ನ 20 ರೂಪಾಯಿಗೆ ಏರಿಕೆ ಮಾಡಿತ್ತು. ಈಗ ಮತ್ತೆ ಮದ್ಯದ ಬೆಲೆಯಲ್ಲಿ ಹೆಚ್ಚಳ ಮಾಡಲು ಮುಂದಾಗಿದೆ ಎಂದು ವರದಿಯಾಗಿದೆ.

Read More

ಬೆಂಗಳೂರು : ವಿಶೇಷ ಚೇತನ ಸರ್ಕಾರಿ ನೌಕರರ ವರ್ಗಾವಣೆಗಳ ಬಗ್ಗೆ ರಾಜ್ಯ ಸರ್ಕಾರವು ಮಹತ್ವದ ಆದೇಶ ಹೊರಡಿಸಿದ್ದು, ವಿಸ್ತೃತ ಮಾರ್ಗಸೂಚಿ ಪ್ರಕಟಿಸಿದೆ. ಮೇಲೆ ಓದಲಾದ ಉಲ್ಲೇಖ (1)ರ ಸರ್ಕಾರಿ ಆದೇಶದಲ್ಲಿ ಸರ್ಕಾರಿ ನೌಕರರ ವರ್ಗಾವಣೆಗಳ ಕುರಿತಂತೆ ವಿಸ್ತ್ರತ ಮಾರ್ಗಸೂಚಿಗಳನ್ನು ನೀಡಲಾಗಿದೆ. ಸದರಿ ಆದೇಶದ ಕಂಡಿಕೆ 9.ಅ.viiರಲ್ಲಿ ಮತ್ತು ಉಲ್ಲೇಖ(2)ರ ಸರ್ಕಾರಿ ಆದೇಶದಲ್ಲಿ ವಿಶೇಷ ಚೇತನ ಸರ್ಕಾರಿ ನೌಕರರ ವರ್ಗಾವಣೆಗಳನ್ನು ಕೈಗೊಳ್ಳುವ ಬಗ್ಗೆ ತಿಳಿಸಲಾಗಿದೆ. ಅಂಗವಿಕಲ ವ್ಯಕ್ತಿಗಳ ಹಕ್ಕು (ಅಧಿನಿಯಮ) 2016ರ ಸೆಕ್ಷನ್ 20(5)ರನ್ನಯ ವಿಶೇಷ ಚೇತನ ನೌಕರರಿಗೆ ಮತ್ತು ವಿಶೇಷ ಚೇತನ ಅವಲಂಬಿತರ ಪಾಲನ ಪೋಷಣೆಯ ಜವಾಬ್ದಾರಿ ಹೊಂದಿರುವ ನೌಕರರಿಗೆ ಸಾಮಾನ್ಯ ಮತ್ತು ಪುನರಾವರ್ತಿತ ವರ್ಗಾವಣೆಗಳಿಂದ ವಿನಾಯಿತಿ ನೀಡುವುದು, ವರ್ಗಾವಣೆ ಮತ್ತು ಪದೋನ್ನತ್ತಿಯ ನಂತರದಲ್ಲಿ ಸ್ಥಳ ನಿಯುಕ್ತಿಯಲ್ಲಿ ಪ್ರಾಶಸ್ತ್ರ ನೀಡುವುದು, ನೇಮಕಾತಿ ನಂತರದಲ್ಲಿ ನೀಡುವ ಆರಂಭಿಕ ಸ್ಥಳ ನಿಯುಕ್ತಿಯನ್ನು ಅವರ ವಾಸಸ್ಥಳದ ಹತ್ತಿರದ ಸ್ಥಳಕ್ಕೆ ನೀಡುವುದನ್ನು ಒಳಗೊಂಡಂತೆ, ಅವರು ಘನತೆಯಿಂದ ಕರ್ತವ್ಯ ನಿರ್ವಹಿಸಲು ಅನುಕೂಲವಾಗುವಂತೆ ವರ್ಗಾವಣೆ ಮತ್ತು ಸ್ಥಳನಿಯುಕ್ತಿ ನಿಯಮಗಳನ್ನು ರೂಪಿಸುವುದು…

Read More