Subscribe to Updates
Get the latest creative news from FooBar about art, design and business.
Author: kannadanewsnow57
ಕೃಷ್ಣಗಿರಿ: ಎದುರು ಮನೆಯ ಮಹಿಳೆಯೊಂದಿಗಿನ ಸಲಿಂಗ ಕಾಮಕ್ಕಾಗಿ ತನ್ನ ಶಿಶುವನ್ನು ಕೊಂದು, ನಂತರ ತನ್ನ ಪತಿಯೊಂದಿಗೆ ನಾಟಕವಾಡಿದ ತಾಯಿಯ ಕ್ರೂರ ಕೃತ್ಯ ಹೊಸೂರು ಪ್ರದೇಶದಲ್ಲಿ ತೀವ್ರ ಆಘಾತ ಮತ್ತು ದುಃಖಕ್ಕೆ ಕಾರಣವಾಗಿದೆ. ಕೃಷ್ಣಗಿರಿ ಜಿಲ್ಲೆಯ ಹೊಸೂರು ಬಳಿಯ ಕೆಲಮಂಗಲಂ ಪೊಲೀಸ್ ಠಾಣೆ ವ್ಯಾಪ್ತಿಯ ಚಿನ್ನಟ್ಟಿ ಗ್ರಾಮದ ಸುರೇಶ್ (30) ಅವರು ಪೇಂಟರ್ ಆಗಿ ಕೆಲಸ ಮಾಡುತ್ತಿದ್ದಾರೆ. ಅವರ ಪತ್ನಿ ಭಾರತಿ (25). ಅವರಿಗೆ ಈಗಾಗಲೇ ಇಬ್ಬರು ಹೆಣ್ಣು ಮಕ್ಕಳಿದ್ದಾರೆ ಮತ್ತು 5 ತಿಂಗಳ ಹಿಂದೆ ಗಂಡು ಮಗು ಜನಿಸಿತ್ತು. ಅವರು ಮಗುವಿಗೆ ಧ್ರುವ ಎಂದು ಹೆಸರಿಸಿದ್ದಾರೆ. ಈ ಪರಿಸ್ಥಿತಿಯಲ್ಲಿ, ಸುರೇಶ್ ಅವರ ಪತ್ನಿ ಭಾರತಿ ಮತ್ತು ಎದುರು ಮನೆಯ ಅವಿವಾಹಿತ ಮಹಿಳೆ ಸುಮಿತ್ರಾ (22) ಸಂಬಂಧವನ್ನು ಪ್ರಾರಂಭಿಸಿದ್ದಾರೆ. ಕಾಲಾನಂತರದಲ್ಲಿ, ಅದು ಸಲಿಂಗಕಾಮಿ ಸಂಬಂಧವಾಗಿ ಮಾರ್ಪಟ್ಟಿದೆ. ಇಬ್ಬರೂ ಪ್ರತಿದಿನ ವಾಟ್ಸಾಪ್ನಲ್ಲಿ ಮಾತನಾಡುತ್ತಿದ್ದರು ಮತ್ತು ಆಗಾಗ್ಗೆ ಖಾಸಗಿಯಾಗಿ ಭೇಟಿಯಾಗುತ್ತಿದ್ದರು. ಒಂದು ಹಂತದಲ್ಲಿ, ಭಾರತಿಗೆ ಸುಮಿತ್ರಾ ಮೇಲಿನ ಅಪರಿಮಿತ ಪ್ರೀತಿ ಅವಳ ಎದೆಯ ಮೇಲೆ “ಸುಮಿ”…
ರಾಜ್ಯ ಸರ್ಕಾರಿ ಕಚೇರಿ ಹಾಗೂ ಖಾಸಗಿ ಸಂಸ್ಥೆಗಳಲ್ಲಿ ಮಹಿಳೆಯರು ಕರ್ತವ್ಯ ನಿರ್ವಹಿಸುವ ಸಂದರ್ಭದಲ್ಲಿ ಲೈಂಗಿಕ ದೌರ್ಜನ್ಯ ತಡೆಯಲು ಸುಪ್ರೀಂ ಕೋರ್ಟ್ ಆದೇಶದಂತೆ ಕಡ್ಡಾಯವಾಗಿ ಆಂತರಿಕಾ ದೂರು ನಿವಾರಣಾ ಸಮಿತಿ ರಚಿಸುವಂತೆ ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷರಾದ ಡಾ. ನಾಗಲಕ್ಷ್ಮೀ ಚೌಧರಿ ಅವರು ಅಧಿಕಾರಿಗಳಿಗೆ ಸೂಚಿಸಿದ್ದಾರೆ. ಜಿಲ್ಲಾ ಪಂಚಾಯಿತಿ ಹೊಯ್ಸಳ ಸಭಾಂಗಣದಲ್ಲಿAದು ಮಹಿಳಾ ಸ್ಪಂದನಾ ಮತ್ತು ಪ್ರಗತಿ ಪರಿಶೀಲನಾ ಸಭೆ ನಡೆಸಿ ಮಾತನಾಡಿದ ಅವರು ತಮ್ಮ ತಮ್ಮ ವ್ಯಾಪ್ತಿಯಲ್ಲಿ ಸ್ವೀಕೃತವಾದ ದೂರುಗಳನ್ನು ಪರಿಹರಿಸಲು ಸೂಕ್ಷö್ಮವಾಗಿ ಗಮನಿಸಿ ಮುಲಾಜಿಲ್ಲದೆ ಸೂಕ್ತವಾದ ನಿರ್ಧಾರ ಕೈಗೊಳ್ಳುವಂತೆ ಅಧಿಕಾರಿಗಳಿಗೆ ಸೂಚಿಸಿದರು. ಜಿಲ್ಲೆಯಲ್ಲಿ ಪ್ರವಾಸದ ಸಂದರ್ಭದಲ್ಲಿ ಸಂಪೂರ್ಣ ಸಹಕಾರ ನೀಡಿದ್ದಾರೆ ಎಂದು ಜಿಲ್ಲಾಡಳಿತಕ್ಕೆ ಧನ್ಯವಾದಗಳನ್ನು ಸಲ್ಲಿಸಿದರು. ಸಂಘ ಸಂಸ್ಥೆಗಳು ಕಾಫಿ ತೋಟಗಳಲ್ಲಿ ಕೆಲಸ ಮಾಡುವ ಮಹಿಳೆಯರ ಸುರಕ್ಷತೆಗಾಗಿ ಸಮಿತಿ ರಚನೆ ಮಾಡಿದ್ದರಾ ಮತ್ತು ಪ್ರತಿ ಮೂರು ತಿಂಗಳಿಗೊಮ್ಮೆ ಸಭೆ ನಡೆಯುತ್ತಿದೆಯಾ ಎಂದು ಪರಿಶೀಲಿಸಬೇಕು ಎಂದು ಕಾರ್ಮಿಕ ಇಲಾಖೆ ಅಧಿಕಾರಿಗಳಿಗೆ ನಿರ್ದೇಶನ ನೀಡಿದರು. ಈ ವರ್ಷದಲ್ಲಿ 279 ಕಾಣೆಯಾದ ಮಹಿಳೆಯರು ಮತ್ತು…
ನವದೆಹಲಿ: ‘ಸಪ್ತಪದಿ’ ತುಳಿದಿಲ್ಲವೆಂದ ಮಾತ್ರಕ್ಕೆ ಹಿಂದೂ ಸಂಪ್ರದಾಯದ ಮದುವೆಯನ್ನು ಅಮಾನ್ಯಗೊಳಿಸಲು ಅಥವಾ ಹಿಂದೂ ವಿವಾಹ ಕಾಯ್ದೆಯಿಂದ ಹೊರಗಿಡಲು ಸಾಧ್ಯವಿಲ್ಲ ಎಂದು ದೆಹಲಿ ಹೈಕೋರ್ಟ್ ಮಹತ್ವದ ತೀರ್ಪು ನೀಡಿದೆ. ಐತಿಹಾಸಿಕ ತೀರ್ಪು ನೀಡಿದ ದೆಹಲಿ ಹೈಕೋರ್ಟ್, ಸಪ್ತಪದಿ (ಬೆಂಕಿಯ ಸುತ್ತ ಏಳು ಸುತ್ತುಗಳು) ಇಲ್ಲದಿರುವುದು ಹಿಂದೂ ಪದ್ಧತಿಗಳ ಪ್ರಕಾರ ನಡೆಯುವ ಮದುವೆಯನ್ನು ಅಮಾನ್ಯಗೊಳಿಸುವುದಿಲ್ಲ ಮತ್ತು ಅದು ಹಿಂದೂ ವಿವಾಹ ಕಾಯ್ದೆ (HMA) ವ್ಯಾಪ್ತಿಯಿಂದ ಹೊರಗುಳಿಯುವುದಿಲ್ಲ ಎಂದು ಅಭಿಪ್ರಾಯಪಟ್ಟಿದೆ. ನ್ಯಾಯಮೂರ್ತಿಗಳಾದ ಅನಿಲ್ ಕ್ಷೇತ್ರಪಾಲ್ ಮತ್ತು ಹರೀಶ್ ವೈದ್ಯನಾಥನ್ ಶಂಕರ್ ಅವರ ಪೀಠವು ಮಂಗಳವಾರ ಪತಿಯ ಅರ್ಜಿಯನ್ನು ವಜಾಗೊಳಿಸಿದ ಕುಟುಂಬ ನ್ಯಾಯಾಲಯದ ಆದೇಶವನ್ನು ಎತ್ತಿಹಿಡಿದಿದೆ. ಲಂಬಾಣಿ (ಬಂಜಾರ) ಬುಡಕಟ್ಟು ಜನಾಂಗದ ಸಂಪ್ರದಾಯಗಳ ಪ್ರಕಾರ ತಮ್ಮ ವಿವಾಹವನ್ನು ನಡೆಸಲಾಗಿದ್ದು, ಇದರಲ್ಲಿ ಸಪ್ತಪದಿ ಸಮಾರಂಭ ಒಳಗೊಂಡಿಲ್ಲ, ಆದ್ದರಿಂದ, HMA ಅನ್ವಯಿಸುವುದಿಲ್ಲ ಎಂದು ವಾದಿಸಿ ಪತಿ ವಿಚ್ಛೇದನ ಅರ್ಜಿಯನ್ನು ಪ್ರಶ್ನಿಸಿದ್ದರು. ದಂಪತಿ ಫೆಬ್ರವರಿ 1998 ರಲ್ಲಿ ವಿವಾಹವಾದರು ಮತ್ತು ಮಗುವನ್ನು ಹೊಂದಿದ್ದಾರೆ. ಪತ್ನಿ ಕೈಬಿಟ್ಟ ಕಾರಣಕ್ಕೆ HMA ಅಡಿಯಲ್ಲಿ ವಿಚ್ಛೇದನ…
ಬೆಂಗಳೂರು : ಕಳೆದ ಕೆಲವು ದಿನಗಳ ಹಿಂದೆ ಬೆಂಗಳೂರು ಸೇರಿದಂತೆ ದೇಶದ ಹಲವು ಭಾಗಗಳಲ್ಲಿ ಶಾಲೆಗಳಿಗೆ ಇ-ಮೇಲ್ ಮೂಲಕ ಬಾಂಬ್ ಬೆದರಿಕೆ ಸಂದೇಶ ಕಳುಹಿಸಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಮಹಿಳಾ ಟೆಕ್ಕಿಯನ್ನು ಅರೆಸ್ಟ್ ಮಾಡಲಾಗಿದೆ. ಯುವಕ ಪ್ರೀತಿ ನಿರಾಕರಿಸಿದ್ದಕ್ಕೆ ಬೆಂಗಳೂರಿನ ಶಾಲಾ-ಕಾಲೇಜುಗಳಿಗೆ ಹುಸಿಬಾಂಬ್ ಬೆದರಿಕೆ ಹಾಕಿದ್ದ ಟೆಕ್ಕಿಯನ್ನು ಪೊಲೀಸರು ಬಂಧಿಸಿದ್ದಾರೆ. ಇ-ಮೇಲ್ ಮೂಲಕ ಬಾಂಬ್ ಬೆದರಿಕೆ ಸಂದೇಶ ಕಳುಹಿಸಿದ್ದ ಗುಜರಾತ್ ಮೂಲದ ಮಹಿಳಾ ಸಾಫ್ಟ್ವೇರ್ ಇಂಜಿನಿಯರ್ ನನ್ನು ಪೊಲೀಸರು ಅರೆಸ್ಟ್ ಮಾಡಿದ್ದಾರೆ. ಬೆಂಗಳೂರಿನ ಉತ್ತರ ವಿಭಾಗದ ಸೈಬರ್ ಕ್ರೈಂ ಪೊಲೀಸರಿಂದ ರೆನೆ ಜೋಶಿಲ್ದಾ ಎನ್ನುವ ಮಹಿಳಾ ಟೆಕ್ಕಿಯನ್ನು ಅರೆಸ್ಟ್ ಮಾಡಿದ್ದಾರೆ. ಬೆಂಗಳೂರಿನ ಮೂಲಕ ಬೆದರಿಕೆ ಸಂದೇಶ ಕಳುಹಿಸಿದಳು. ಚೆನ್ನೈ ಹೈದರಾಬಾದ್ ಹಾಗೂ ಗುಜರಾತಿನ ಶಾಲೆಗಳಿಗೂ ಕೂಡ ಈಕೆ ಬಾಂಬ್ ಬೆದರಿಕೆ ಇ-ಮೇಲ್ ಸಂದೇಶ ಕಳುಹಿಸಿದಳು. ಇ-ಮೇಲ್ ಮೂಲಕ ಬೆದರಿಕೆ ಸಂದೇಶ ಕಳುಹಿಸಿರುವುದು ಪತ್ತೆಯಾಗಿದೆ.
ಶಿವಮೊಗ್ಗ : ರಾಜ್ಯದಲ್ಲಿ ಹೃದಯಾಘಾತಕ್ಕೆ ಮತ್ತೊಂದು ಬಲಿಯಾಗಿದ್ದು, ಶಿವಮೊಗ್ಗ ಜಿಲ್ಲೆಯ ಸಾಗರ ತಾಲೂಕಿನ ಕೆಎಸ್ಆರ್ಟಿಸಿ ಡಿಪೋದ ಭದ್ರತಾ ಸಿಬ್ಬಂದಿಯೊಬ್ಬರು ಕರ್ತವ್ಯ ನಿರತರಾಗಿದ್ದಾಗಲೇ ಹೃದಯಾಘಾತದಿಂದ ಸಾವನ್ನಪ್ಪಿದ್ದಾರೆ. ಸಂದೀಪ್ (41) ಮೃತ ಕೆ ಎಸ್ ಆರ್ ಟಿ ಸಿ ಸಿಬ್ಬಂದಿ. ಸಂದೀಪ್ ಸಾಗರದ ಮಾರಿಕಾಂಬ ದೇವಾಲಯದ ಹಿಂಭಾಗದ ರಸ್ತೆಯ ನಿವಾಸಿಯಾಗಿದ್ದಾರೆ. ಸಂದೀಪ್ ಬುಧವಾರ ರಾತ್ರಿ ಪಾಳಿಯಲ್ಲಿ ಕೆಲಸ ಮಾಡುತ್ತಿದ್ದರು. ಇವರಿಗೆ ಏಕಾಏಕಿ ಎದೆ ನೋವು ಕಾಣಿಸಿಕೊಂಡಿದೆ. ತಕ್ಷಣ ಸಂದೀಪ್ರನ್ನು ಸಹೋದ್ಯೋಗಿಗಳು ಕೆ ಎಸ್ ಆರ್ ಟಿ ಸಿ ಬಸ್ಸಿನಲ್ಲೇ ಆಸ್ಪತ್ರೆಗೆ ಕರೆದುಕೊಂಡು ಹೋಗಿದ್ದರು. ಆದರೆ ಅಷ್ಟರಲ್ಲೇ ಸಂದೀಪ್ ಸಾವನ್ನಪ್ಪಿದ್ದಾರೆ. ಸಾಗರದ ಸರ್ಕಾರಿ ಆಸ್ಪತ್ರೆಯಲ್ಲಿ ಸಂದೀಪ್ ಅವರ ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ಇರಿಸಲಾಗಿದೆ. ಇನ್ನು KSRTC ಭದ್ರತಾ ಸಿಬ್ಬಂದಿ ಸಂದೀಪ್ ಹೃದಯಘಾತದಿಂದ ಸಾವನ್ನಪ್ಪಿರುವ ವಿಚಾರ ತಿಳಿದು, ಸಾಗರ ಶಾಸಕ ಗೋಪಾಲಕೃಷ್ಣ ಬೇಳೂರು ಅವರು ಕೆಎಸ್ಆರ್ಟಿಸಿ ಸಿಬ್ಬಂದಿ ಸಂದೀಪ್ ಅವರ ಅಗಲಿಕೆಗೆ ಸಂತಾಪ ಸೂಚಿಸಿದ್ದಾರೆ.
ದಾವಣಗೆರೆ : ದಾವಣಗೆರೆಯಲ್ಲಿ ಘೋರ ದುರಂತವೊಂದು ಸಂಭವಿಸಿದ್ದು, ನೀರಿನ ತೊಟ್ಟಿಗೆ ಬಿದ್ದು 6 ವರ್ಷದ ಬಾಲಕ ಸಾವನ್ನಪ್ಪಿದ್ದಾನೆ. ದಾವಣಗೆರೆ ಜಿಲ್ಲೆಯ ಚನ್ನಗಿರಿ ತಾಲೂಕಿನ ಸಂತೆಬೆನ್ನೂರಿನಲ್ಲಿ ಆಯತಪ್ಪಿ ನಿರ್ಮಾಣ ಹಂತದ ಕಟ್ಟಡದಲ್ಲಿ ನಿರ್ಮಿಸಿದ್ದ ತೊಟ್ಟಿಯಲ್ಲಿ ಬಿದ್ದು ಅವಾಜ್ ಖಾನ್ ಎಂಬ 6 ವರ್ಷದ ಬಾಲಕ ಮೃತಪಟ್ಟಿದ್ದಾನೆ. ಫುಟ್ ವೇರ್ ಅಂಗಡಿ ಮಾಲೀಕ ಅಫ್ತಾಜ್ ತಮ್ಮ ಪುತ್ರ ಅವಾಜ್ ಖಾನ್ ನನ್ನು ಕರೆದುಕೊಂಡು ಅಂಗಡಿಗೆ ಬಂದಿದ್ದರು. ಮೂತ್ರ ವಿಸರ್ಜನೆಗೆಂದು ಬಾಲಕ ಅಂಗಡಿ ಪಕ್ಕದ ನಿರ್ಮಾಣ ಹಂತದ ಕಟ್ಟಡದೊಳಗೆ ಹೋಗಿದ್ದಾನೆ. ಬಾಲಕ ಎಲ್ಲೂ ಪತ್ತೆಯಾಗದ ಹಿನ್ನೆಲೆ ಪೋಷಕರು ಎಲ್ಲಾ ಕಡೆ ಹುಡುಕಾಟ ನಡೆಸಿದ್ದು, ನಂತರ ನೀರಿನ ತೊಟ್ಟಿಯಲ್ಲಿ ಬಾಲಕನ ಚಪ್ಪಲಿ ತೇಲುತ್ತಿದ್ದಾಗ ಘಟನೆ ಬೆಳಕಿಗೆ ಬಂದಿದೆ. ಈ ಸಂಬಂಧ ಸಂತೆಬೆನ್ನೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಬೆಂಗಳೂರು : ʻಕೆಜಿಎಫ್ʼ ಸಿನಿಮಾದಲ್ಲಿ ʻಕೆಜಿಎಫ್ ಚಾಚಾʼ ಎಂದೇ ಖ್ಯಾತರಾದ ಸ್ಯಾಂಡಲ್ ವುಡ್ ಖ್ಯಾತ ನಟ ಹರೀಶ್ ರಾಯ್ (57) ಇಂದು ನಿಧನರಾಗಿದ್ದಾರೆ. ಅವರು ಥೈರಾಯ್ಡ್ ಕ್ಯಾನ್ಸರ್ ಸಮಸ್ಯೆಯಿಂದ ಬಳಲುತ್ತಿದ್ದರು. ಹೌದು ಕನ್ನಡ ಚಿತ್ರರಂಗದ ಖ್ಯಾತ ಖಳನಟ ಹರೀಶ್ ರಾಯ್ ಬೆಂಗಳೂರಿನ ಕಿದ್ವಾಯಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಇದೀಗ ಚಿಕಿತ್ಸೆ ಫಲಕಾರಿಯಾಗದೆ ಹರೀಶ್ ನಿಧನರಾಗಿದ್ದಾರೆ ಸುಮಾರು ಎರಡು ದಶಕಗಳಿಂದ ಚಿತ್ರರಂಗದಲ್ಲಿರುವ ಇವರು ಕನ್ನಡ ಮಾತ್ರವಲ್ಲದೆ, ತಮಿಳು ಚಿತ್ರಗಳಲ್ಲಿಯೂ ನಟಿಸಿದ್ದಾರೆ. ಶಿವರಾಜ್ ಕುಮಾರ್ ಅಭಿನಯದ ‘ಓಂ’ ಚಿತ್ರದಲ್ಲಿನ ‘ರಾಯ್’ ಪಾತ್ರದಿಂದ ಗಮನ ಸೆಳೆದ ಇವರು, ಸಾಕಷ್ಟು ಚಿತ್ರಗಳಲ್ಲಿ ಖಳನಟನಾಗಿ, ಪೋಷಕ ನಟನಾಗಿ ಕಾರ್ಯ ನಿರ್ವಹಿಸಿದ್ದಾರೆ. ಬೆಂಗಳೂರು ಅಂಡರ್ ವರ್ಲ್ಡ್, ಸಂಜು ವೆಡ್ಸ್ ಗೀತಾ, ಸ್ವಯಂವರ, ಭೂಗತ, ನನ್ನ ಕನಸಿನ ಹೂವೆ, ನಲ್ಲ, ಜಾಫರ್ ಅಲಿಯಾಸ್ ಮುರ್ಗಿ ಜಾಫರ್, ಜೋಡಿ ಹಕ್ಕಿ, ತಾಯವ್ವ, ಓಂ ಹಾಗೂ ಸ್ಯಾಂಡಲ್ವುಡ್ನ ಟಾಪ್ ಸಿನಿಮಾ ಕೆಜಿಎಫ್ ಚಾಪ್ಟರ್ 1 ಹಾಗೂ ಕೆಜಿಎಫ್ ಚಾಪ್ಟರ್ 2ರಲ್ಲಿ ಅಭಿನಯಿಸಿದ್ದಾರೆ. ಕೆಜಿಎಫ್, ಓಂ,…
ಧಾರವಾಡ : ಸರ್ಕಾರಿ ಸ್ಥಳಗಳಲ್ಲಿ ಕಾರ್ಯಕ್ರಮಕ್ಕೆ ಅನುಮತಿ ಕಡ್ಡಾಯ ವಿಚಾರಕ್ಕೆ ಸಂಬಂಧಪಟ್ಟಂತೆ ಸರ್ಕಾರದ ಆದೇಶಕ್ಕೆ ತಡೆಯಾಜ್ಞೆ ತೆರವು ಕೊರಿದ್ದ ಅರ್ಜಿಯ ವಿಚಾರಣೆ ನಡೆಸಿದ ಧಾರವಾಡ ಹೈಕೋರ್ಟ್ ನ ವಿಭಾಗೀಯ ಪೀಠ ರಾಜ್ಯ ಸರ್ಕಾರದ ಮೇಲ್ಮನವಿ ವಜಾಗೊಳಿಸಿದೆ. ಸರ್ಕಾರಿ ಸಂಸ್ಥೆಗಳಲ್ಲಿ ಕಾರ್ಯಕ್ರಮಕ್ಕೆ ಅನುಮತಿ ಕಡ್ಡಾಯ ವಿಚಾರಕ್ಕೆ ಸಂಬಂಧಿಸಿದಂತೆ ಹೈಕೋರ್ಟ್ ಏಕದಸದಸ್ಯ ಪೀಠದ ಆದೇಶಕ್ಕೆ ತಡೆ ನೀಡಲು ವಿಭಾಗೀಯ ಪೀಠ ನಕಾರ, ತಡೆ ತೆರವಿಗೆ ಏಕಸದಸ್ಯ ಪೀಠಕ್ಕೆ ಅರ್ಜಿ ಸಲ್ಲಿಸಲು ಸರ್ಕಾರಕ್ಕೆ ಸೂಚನೆ ನೀಡಿದೆ. ಅಕ್ಟೋಬರ್ 28ರಂದು ಹೈಕೋರ್ಟ್ ಏಕ ಸದಸ್ಯ ಪೀಠ ತಡೆಯಾಜ್ಞೆ ನೀಡಿತ್ತು. ತಡೆಯಾಜ್ಞೆಯನ್ನು ಪ್ರಶ್ನಿಸಿ ರಾಜ್ಯ ಸರ್ಕಾರದ ಪರ ವಕೀಲರು ಅರ್ಜಿ ಸಲ್ಲಿಸಿದ್ದರು. ನವೆಂಬರ್ 4ರಂದು ನಡೆದಿದ್ದ ಅರ್ಜಿಯ ವಿಚಾರಣೆ ವಾದ ಪ್ರತಿವಾದ ಆಲಿಸಿ ಹೈಕೋರ್ಟ್ ತೀರ್ಪು ಕಾಯ್ದಿರಿಸಿತ್ತು ಇಂದು ಹೈಕೋರ್ಟ್ ವಿಭಾಗೀಯ ಪೀಠ ಏಕಸದಸ್ಯ ಪೀಠದ ಆದೇಶಕ್ಕೆ ತಡೆ ನೀಡಲು ನಿರಾಕರಿಸಿದೆ.
ಈ ಆಧುನಿಕ ಕಾರ್ಯನಿರತ ಜೀವನದಲ್ಲಿ ಅನೇಕ ಜನರು ಎದುರಿಸುತ್ತಿರುವ ಪ್ರಮುಖ ಸಮಸ್ಯೆಗಳಲ್ಲಿ ಖಿನ್ನತೆಯೂ ಒಂದು. ಇಂದಿನ ಕಾರ್ಯನಿರತ ಜೀವನಶೈಲಿ, ಸಮಸ್ಯೆಗಳು, ವೃತ್ತಿಜೀವನ, ಸಾಮಾಜಿಕ ಮಾಧ್ಯಮದ ಟ್ರೋಲಿಂಗ್ನಿಂದಾಗಿ ಅನೇಕ ಜನರು ಖಿನ್ನತೆಯಿಂದ ಬಳಲುತ್ತಿದ್ದಾರೆ. ವಾಸ್ತವವಾಗಿ, ಈ ಸಮಸ್ಯೆ ತುಂಬಾ ಗಂಭೀರವಾಗಿದೆ ಎಂದು ತಜ್ಞರು ಹೇಳುತ್ತಾರೆ. ಆದಾಗ್ಯೂ, ಭಾರತದಲ್ಲಿ ಜನರು ಇನ್ನೂ ಖಿನ್ನತೆಯ ಬಗ್ಗೆ ತಿಳಿದಿಲ್ಲ ಮತ್ತು ಅದನ್ನು ತುಂಬಾ ಹಗುರವಾಗಿ ಪರಿಗಣಿಸುತ್ತಾರೆ. ಆದಾಗ್ಯೂ, ಒಬ್ಬ ವ್ಯಕ್ತಿಯು ದೀರ್ಘಕಾಲದವರೆಗೆ ಖಿನ್ನತೆಯಲ್ಲಿದ್ದರೆ, ಅದು ಗಂಭೀರ ಅಪಾಯಕ್ಕೆ ಕಾರಣವಾಗಬಹುದು ಎಂದು ಹೇಳಲಾಗುತ್ತದೆ. ಖಿನ್ನತೆಗೆ ಒಳಗಾದ ನಂತರ, ಈ ಬದಲಾವಣೆಗಳು ವ್ಯಕ್ತಿಯ ವ್ಯಕ್ತಿತ್ವದಲ್ಲಿ ಕಂಡುಬರುತ್ತವೆ. ಕೋಪ ಅನೇಕ ಜನರು ಸುಲಭವಾಗಿ ಕೋಪಗೊಳ್ಳುತ್ತಾರೆ. ಆದಾಗ್ಯೂ, ಕೆಲವೊಮ್ಮೆ ಶಾಂತ ಜನರು ಸಹ ಇದ್ದಕ್ಕಿದ್ದಂತೆ ತಮ್ಮ ವ್ಯಕ್ತಿತ್ವದಲ್ಲಿ ಬದಲಾವಣೆಯನ್ನು ನೋಡುತ್ತಾರೆ. ಕೆಲವೊಮ್ಮೆ ಅವರು ಸಣ್ಣ ವಿಷಯಗಳಿಗೂ ಕೋಪಗೊಳ್ಳುತ್ತಾರೆ. ಅವರು ಬಹಳ ಬೇಗನೆ ಕಿರಿಕಿರಿಗೊಳ್ಳುತ್ತಾರೆ, ನಿರಂತರವಾಗಿ ನಿರಾಶೆಗೊಳ್ಳುತ್ತಾರೆ. ಖಿನ್ನತೆಗೆ ಒಳಗಾದ ನಂತರ ವ್ಯಕ್ತಿಯಲ್ಲಿ ಇದು ಸಾಮಾನ್ಯ ಬದಲಾವಣೆಯಾಗಿದೆ. ಕೆಲವೊಮ್ಮೆ ಈ ಕೋಪವು ತುಂಬಾ ಅಪಾಯಕಾರಿಯಾಗಬಹುದು…
ನವದೆಹಲಿ : ಆಪರೇಷನ್ ಸಿಂಧೂರ್ ಬಳಿಕ ಆರು ತಿಂಗಳ ನಂತರ, ಲಷ್ಕರ್-ಎ-ತೈಬಾ ಮತ್ತು ಜೈಶ್-ಎ-ಮೊಹಮ್ಮದ್ ನಂತಹ ಪಾಕಿಸ್ತಾನಿ ಭಯೋತ್ಪಾದಕ ಸಂಘಟನೆಗಳು ಜಮ್ಮು ಮತ್ತು ಕಾಶ್ಮೀರದಲ್ಲಿ ಹೊಸ ಸರಣಿ ದಾಳಿಗಳಿಗೆ ತಯಾರಿ ನಡೆಸುತ್ತಿವೆ. ಇತ್ತೀಚಿನ ಗುಪ್ತಚರ ಮಾಹಿತಿಯ ಪ್ರಕಾರ, ಈ ಸಂಘಟನೆಗಳು ಸೆಪ್ಟೆಂಬರ್ನಿಂದ ಒಳನುಸುಳುವಿಕೆ, ಬೇಹುಗಾರಿಕೆ ಮತ್ತು ಗಡಿಯಾಚೆಗಿನ ಲಾಜಿಸ್ಟಿಕ್ಸ್ ಅನ್ನು ಹೆಚ್ಚಿಸುತ್ತಿವೆ. ಎನ್ಡಿಟಿವಿಯಲ್ಲಿ ಪ್ರಕಟವಾದ ವರದಿಯ ಪ್ರಕಾರ, ಪಾಕಿಸ್ತಾನದ ವಿಶೇಷ ಸೇವೆಗಳ ಗುಂಪು (ಎಸ್ಎಸ್ಜಿ) ಮತ್ತು ಇಂಟರ್-ಸರ್ವೀಸಸ್ ಇಂಟೆಲಿಜೆನ್ಸ್ (ಐಎಸ್ಐ) ಬೆಂಬಲಿತ ಹಲವಾರು ಲಷ್ಕರ್ ಮತ್ತು ಜೈಶ್ ಘಟಕಗಳು ನಿಯಂತ್ರಣ ರೇಖೆಯ (ಎಲ್ಒಸಿ) ಮೂಲಕ ಜಮ್ಮು ಮತ್ತು ಕಾಶ್ಮೀರಕ್ಕೆ ನುಸುಳಿವೆ. ಭಾರತ ತನ್ನ ಪಶ್ಚಿಮ ಗಡಿಗಳಲ್ಲಿ ಪ್ರಮುಖ ಮಿಲಿಟರಿ ವ್ಯಾಯಾಮವನ್ನು ನಡೆಸುತ್ತಿರುವಾಗ ಇದು ನಡೆಯುತ್ತಿದೆ ಮತ್ತು ಚಳಿಗಾಲ ಸಮೀಪಿಸುತ್ತಿದ್ದಂತೆ ಭಯೋತ್ಪಾದಕ ಚಟುವಟಿಕೆಗಳು ತೀವ್ರಗೊಳ್ಳುವ ನಿರೀಕ್ಷೆಯಿದೆ. ಪಾಕಿಸ್ತಾನ ಸಂಬಂಧಿತ ಭಯೋತ್ಪಾದಕ ಸಂಘಟನೆಗಳು ಜಮ್ಮು ಮತ್ತು ಕಾಶ್ಮೀರದಲ್ಲಿ ತಮ್ಮ ಚಟುವಟಿಕೆಗಳನ್ನು ಹೆಚ್ಚಿಸುತ್ತಿವೆ ಎಂದು ಗುಪ್ತಚರ ವರದಿಗಳು ಬಹಿರಂಗಪಡಿಸಿವೆ. ಭಾರತ ಏಪ್ರಿಲ್ನಲ್ಲಿ ‘ಆಪರೇಷನ್ ಸಿಂಧೂರ್’ ಎಂಬ…














