Author: kannadanewsnow57

ಬೆಂಗಳೂರು : ಪಡಿತರ ಚೀಟಿದಾರರಿಗೆ ಆಹಾರ ಇಲಾಖೆ ಸಿಹಿಸುದ್ದಿ ನೀಡಿದ್ದು, ಹೆಸರು ಸೇರ್ಪಡೆ/ತಿದ್ದುಪಡಿಗೆ ಮತ್ತೆ ಅವಕಾಶ ನೀಡಲಾಗಿದೆ. ಪಡಿತರ ಚೀಟಿದಾರರು ಹೆಸರು ತಿದ್ದುಪಡಿ, ಹೊಸ ಸದಸ್ಯರ ಸೇರ್ಪಡೆ, ವಿಳಾಸ ಬದಲಾವಣೆ,ಹೆಸರು ತೆಗೆಯುವುದಕ್ಕೆ ಮಾರ್ಚ್ 31ರವರೆಗೆ ಅವಕಾಶ ನೀಡಲಾಗಿದೆ. ಬೆಂಗಳೂರು ಒನ್, ಸೈಬರ್ ಸೆಂಟರ್ ಗಳಲ್ಲಿ ಹೊಸ ಕಾರ್ಡ್ ಅಥವಾ ಹೆಸರು ಸೇರ್ಪಡೆಗೆ ಅರ್ಜಿ ಸಲ್ಲಿಸಬಹುದು. ವೆಬ್ ಸೈಟ್ ಸ್ವಯಂ ಆಗಿ ಅರ್ಜಿ ಸಲ್ಲಿಸಬಹುದು. ಎಪಿಎಲ್ ಕಾರ್ಡ್ ಪಡೆಯುವವರು ಕೂಡ ಆನ್ನೈನ್ ನಲ್ಲಿ ಅರ್ಜಿ ಸಲ್ಲಿಸಬೇಕಿದೆ. ಈಗಾಗಲೇ ಪಡಿತರ ಚೀಟಿ ಹೊಂದಿದವರು ಹೊಸದಾಗಿ ಮಕ್ಕಳು ಅಥವಾ ತಮ್ಮ ಕುಟುಂಬದ ಇತರೆ ಸದಸ್ಯರ ಸೇರ್ಪಡೆಗೆ ಅವಕಾಶ ನೀಡಲಾಗುವುದು. http://ahara.kar.nic.in ವೆಬ್ಟ್ ಗಮನಿಸಬಹುದಾಗಿದೆ. ಹೊಸ ಸದಸ್ಯರ ಸೇರ್ಪಡೆ * ಪೋಟೋ ಬದಲಾವಣೆ * ಹೆಸರು ಡಿಲೆಟ್ * ಅಂಗಡಿ. ನಂ. ಬದಲಾವಣೆ * ಹೆಸರು ತಿದ್ದುಪಡಿ * ಮುಖ್ಯಸ್ಥರ ಬದಲಾವಣೆ ಅರ್ಜಿ ಸಲ್ಲಿಸಲು ದಾಖಲಾತಿಗಳು 1. ಸದಸ್ಯರ ಆಧಾರ ಕಾರ್ಡ್ ಕಡ್ಡಾಯ 2. ಸದಸ್ಯರ ಜಾತಿ…

Read More

ಗುಟ್ಕಾ ತಿನ್ನುವವರೇ ಎಚ್ಚರ, ಗುಟ್ಕಾ ಹಾಕುವವರು ಗಂಭೀರ ಕಾಯಿಲೆಗಳಿಗೆ ಬಲಿಯಾಗುತ್ತಾರೆ. ಇದರ ಹೊರತಾಗಿಯೂ, ಗುಟ್ಕಾ ಸೇವಿಸುವ ಮೊದಲು ಅಥವಾ ಅಭ್ಯಾಸವನ್ನು ಬೆಳೆಸಿಕೊಳ್ಳುವ ಮೊದಲು, ಜನರು ಅದರ ಹಾನಿಕಾರಕ ಪರಿಣಾಮಗಳನ್ನು ಮರೆತುಬಿಡುತ್ತಾರೆ. ಮದ್ಯಪಾನ ಅಥವಾ ಸಿಗರೇಟ್ ಸೇದುವುದರಿಂದ ಮಾತ್ರ ಈ ಗಂಭೀರ ಕಾಯಿಲೆಗಳು ಉಂಟಾಗಬಹುದು ಮತ್ತು ಗುಟ್ಕಾ ಅಗಿಯುವುದರಿಂದ ಅಷ್ಟೊಂದು ಹಾನಿಕಾರಕವಲ್ಲ ಎಂದು ಅವರು ಭಾವಿಸುತ್ತಾರೆ. ಆದರೆ ಅಗಿಯುವುದು ಎಷ್ಟು ಅಪಾಯಕಾರಿ ಮತ್ತು ಗುಟ್ಕಾ ತಿನ್ನುವುದರಿಂದ ಯಾವ ಪರಿಣಾಮಗಳು ಉಂಟಾಗಬಹುದು ಎಂಬುದನ್ನು ತಿಳಿಯಿರಿ. ಗುಟ್ಕಾ ತಿನ್ನುವುದರಿಂದಾಗುವ ಹಾನಿಗಳು ಗುಟ್ಕಾ ತಿನ್ನುವುದರಿಂದಾಗುವ ಪರಿಣಾಮಗಳು ರಹಸ್ಯವಲ್ಲ. ಒಬ್ಬ ವ್ಯಕ್ತಿಯು ಯಾವುದೇ ಗುಟ್ಕಾ ಅಗಿಯುವಾಗಲೆಲ್ಲಾ ಅದು ಅವರ ದೇಹಕ್ಕೆ ಎರಡು ರೀತಿಯಲ್ಲಿ ಹಾನಿ ಮಾಡಲು ಪ್ರಾರಂಭಿಸುತ್ತದೆ. ತಕ್ಷಣದ ಹಾನಿಯೆಂದರೆ ಗುಟ್ಕಾದಲ್ಲಿರುವ ನಿಕೋಟಿನ್ ಮಾನವ ದೇಹವನ್ನು ಪ್ರವೇಶಿಸಿದಾಗ, ಅದು ರಕ್ತಪ್ರವಾಹಕ್ಕೆ ಪ್ರವೇಶಿಸಿ ಹೃದಯ ಬಡಿತ ಮತ್ತು ರಕ್ತದೊತ್ತಡವನ್ನು ಹೆಚ್ಚಿಸುತ್ತದೆ. ಗುಟ್ಕಾದಲ್ಲಿರುವ ರಾಸಾಯನಿಕಗಳು ಒಸಡುಗಳು, ನಾಲಿಗೆ ಮತ್ತು ಕೆನ್ನೆಯ ಒಳಭಾಗಕ್ಕೆ ಹೆಚ್ಚು ಆಕ್ರಮಣಕಾರಿಯಾಗಿದ್ದು, ಗಾಯಗಳು ಮತ್ತು ಹುಣ್ಣುಗಳನ್ನು ಉಂಟುಮಾಡುತ್ತವೆ. ದೀರ್ಘಕಾಲೀನ…

Read More

ಬೆಂಗಳೂರು : ರಾಜ್ಯದ ರೈತರೇ ಗಮನಿಸಿ, ಕೃಷಿ ಇಲಾಖೆಯಿಂದ ನಿಮಗೆ ಕೃಷಿ ಯಂತ್ರೋಪಕರಣ, ಬೆಳೆ ವಿಮೆ, ನೀರಾವರಿ, ಮಣ್ಣು ಪರೀಕ್ಷೆ, ಆದಾಯ ಬೆಂಬಲ ಮತ್ತು ಮಾರುಕಟ್ಟೆ ಸಂಪರ್ಕದಂತಹ ವಿವಿಧ 21 ಸೌಲಭ್ಯಗಳು ಸಿಗಲಿವೆ. ರಾಜ್ಯದ ರೈತರಿಗೆ ಕೃಷಿ ಇಲಾಖೆಯಿಂದ ಸಿಗುವ ಸೌಲಭ್ಯಗಳೇನು? ಇಲ್ಲಿದೆ ಸಂಪೂರ್ಣ ಮಾಹಿತಿ 1. ಬೀಜಗಳ ಪೂರೈಕೆ: ಕೃಷಿ ಇಲಾಖೆಯ ಬೀಜಗಳ ಪೂರೈಕೆ ಮತ್ತು ಇತರೆ ಹೂಡುವಳಿ ಯೋಜನೆಯಡಿ ರಾಜ್ಯದ ಎಲ್ಲಾ ವರ್ಗದ ರೈತರಿಗೆ ವಿವಿಧ ಕೃಷಿ ಬೆಳೆಗಳ (ಭತ್ತ, ರಾಗಿ, ಜೋಳ, ಮುಸುಕಿನ ಜೋಳ, ಸಜ್ಜೆ, ತೊಗರಿ, ಕಡಲೆ, ಹೆಸರು, ಉದ್ದು, ಅಲಸಂದೆ, ನೆಲಗಡಲೆ, ಸೂರ್ಯಕಾಂತಿ, ಸೋಯಾ ಅವರೆ, ಹತ್ತಿ ಇತ್ಯಾದಿ) ಪ್ರಮಾಣಿತ/ ನಿಜ ಚೀಟಿ ಬಿತ್ತನೆ ಬೀಜಗಳನ್ನು ಸಾಮಾನ್ಯ ವರ್ಗದ ರೈತರಿಗೆ ಶೇ. 50 ಹಾಗೂ ಪರಿಶಿಷ್ಟ ಜಾತಿ/ ಪಂಗಡದ ರೈತರಿಗೆ ಶೇ.75 ರ ರಿಯಾಯಿತಿ ದರದಲ್ಲಿ ವಿತರಣೆ ಮಾಡಲಾಗುತ್ತಿದೆ. ಒಟ್ಟಾರೆ ಗರಿಷ್ಟ 2.00 ಹೆಕ್ಟೇರ್ ಅಥವಾ ಅವರ ವಾಸ್ತವಿಕ ಹಿಡುವಳಿ (Actual holding) ಯಾವುದು…

Read More

ಜನರು ತಮ್ಮ ತೂಕ ಹೆಚ್ಚಾಗುವುದು ಅಥವಾ ಕಡಿಮೆಯಾಗುವುದರ ಬಗ್ಗೆ ಹೆಚ್ಚಾಗಿ ಚಿಂತೆ ಮಾಡುತ್ತಾರೆ. ಕೆಲವರು ತಮ್ಮನ್ನು ತಾವು ತುಂಬಾ ತೆಳ್ಳಗೆ ಪರಿಗಣಿಸುತ್ತಾರೆ, ಆದರೆ ಇತರರು ತಾವು ತುಂಬಾ ಹೆಚ್ಚಿದ್ದೇವೆ ಎಂದು ಭಾವಿಸುತ್ತಾರೆ. ಆದರೆ ನಿಜವಾದ ಪ್ರಶ್ನೆಯೆಂದರೆ, ನಿಮ್ಮ ತೂಕವು ನಿಮ್ಮ ಎತ್ತರಕ್ಕೆ ಸೂಕ್ತವಾಗಿದೆಯೇ? ಏಕೆಂದರೆ ನಿಮ್ಮ ತೂಕವನ್ನು ನೋಡುವುದು ಸಾಕಾಗುವುದಿಲ್ಲ; ನಿಮ್ಮ ಎತ್ತರಕ್ಕೆ ಸಮತೋಲಿತ ತೂಕವನ್ನು ಹೊಂದಿರುವುದು ಹೆಚ್ಚು ಮುಖ್ಯ. ಇತ್ತೀಚಿನ ಸಂದರ್ಶನದಲ್ಲಿ, ಡಾ. ಸರಿನ್ ನಿಮ್ಮ ಆದರ್ಶ ತೂಕವನ್ನು ತಿಳಿದುಕೊಳ್ಳುವುದು ಆರೋಗ್ಯಕ್ಕೆ ಏಕೆ ಮುಖ್ಯ ಮತ್ತು ಅದನ್ನು ಹೇಗೆ ಅರ್ಥಮಾಡಿಕೊಳ್ಳುವುದು ಎಂಬುದನ್ನು ವಿವರಿಸಿದರು. ಅವರ ಪ್ರಕಾರ, ಆದರ್ಶ ತೂಕವು ನಿಮ್ಮ ಫಿಟ್‌ನೆಸ್ ಅನ್ನು ಸೂಚಿಸುತ್ತದೆ ಮಾತ್ರವಲ್ಲದೆ ಹೃದಯ, ಮಧುಮೇಹ, ರಕ್ತದೊತ್ತಡ ಮತ್ತು ಕೀಲುಗಳ ಆರೋಗ್ಯಕ್ಕೂ ಸಂಬಂಧಿಸಿದೆ. ಎತ್ತರಕ್ಕೆ ಸಂಬಂಧಿಸಿದಂತೆ ತೂಕ ಏಕೆ ಮುಖ್ಯ? ಡಾ. ಸರಿನ್ ಪ್ರಕಾರ, ನಿಮ್ಮ ತೂಕವು ನಿಮ್ಮ ಎತ್ತರಕ್ಕೆ ತುಂಬಾ ಹೆಚ್ಚಿದ್ದರೆ ಅಥವಾ ತುಂಬಾ ಕಡಿಮೆಯಿದ್ದರೆ, ಅದು ದೇಹದ ಮೇಲೆ ನೇರ ಪರಿಣಾಮ ಬೀರುತ್ತದೆ. ಅಧಿಕ…

Read More

ಕಲಬುರಗಿ : ಎಲ್ಲಾ ಜಿಲ್ಲೆಗಳೂ ವೈದ್ಯಕೀಯ ಕಾಲೇಜುಗಳನ್ನು ಸ್ಥಾಪಿಸಲಾಗುವುದು. ದಕ್ಷಿಣ ಕನ್ನಡ, ರಾಮನಗರ ಜಿಲ್ಲೆಯಲ್ಲಿ ವೈದ್ಯಕೀಯ ಕಾಲೇಜುಗಳನ್ನು ಈ ವರ್ಷ ಪ್ರಾರಂಭಿಸಲಾಗುವುದು. ಖಾಸಗಿ ಆಸ್ಪತ್ರೆಗಳಲ್ಲಿ ಚಿಕಿತ್ಸೆ ದುಬಾರಿಯಾಗಿರುವುದರಿಂದ ಸರ್ಕಾರ ಬಡವರಿಗೆ ಅನುಕೂಲ ಕಲ್ಪಿಸಲು ವೈದ್ಯಕೀಯ ಕಾಲೇಜು ಸ್ಥಾಪನೆ ಮಾಡುತ್ತಿದೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ. ಕಲಬುರಗಿ ಜಿಲ್ಲೆಯ ಸೇಡಂನಲ್ಲಿ  ಅಂತರರಾಷ್ಟ್ರೀಯ ಮಟ್ಟದ ಜಿಟಿಟಿಸಿ ಕೇಂದ್ರ ಸೇರಿದಂತೆ ₹680 ಕೋಟಿಗಳ ವಿವಿಧ ಇಲಾಖೆಗಳ ಕಾಮಗಾರಿಗಳ ಶಂಕುಸ್ಥಾಪನೆ ಹಾಗೂ ಉದ್ಘಾಟನೆ, ಫಲಾನುಭವಿಗಳಿಗೆ ಸೌಲಭ್ಯಗಳ ವಿತರಣೆ ಸಮಾರಂಭದಲ್ಲಿ ಮಾತನಾಡಿದ ಸಿಎಂ ಸಿದ್ದರಾಮಯ್ಯ, ಮನರೇಗಾ ಯೋಜನೆಯನ್ನು ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಅವರ ಅಧಿಕಾರಾವಧಿಯಲ್ಲಿ ಜಾರಿಗೆ ತರಲಾಯಿತು. ಆದರೆ ಈಗ ಮಹಾತ್ಮ ಗಾಂಧಿಯವರ ಹೆಸರಿನ ಕಾಯ್ದೆ ಬದಲಾವಣೆ ಮಾಡಿ ವಿಬಿ ಜಿ ರಾಮ್ ಜಿ ಎಂದು ಹೆಸರಿಟ್ಟಿದ್ದಾರೆ. ಈ ಮೂಲಕ ಮಹಾತ್ಮ ಗಾಂಧಿಯವರನ್ನು ಎರಡನೇ ಬಾರಿ ಕೊಲೆ ಮಾಡುತ್ತಿದ್ದಾರೆ. ಈ ಯೋಜನೆಯಡಿ ಕೇಂದ್ರ ಸರ್ಕಾರ 60% ಅನುದಾನ, ರಾಜ್ಯಗಳು 40% ಅನುದಾನ ನೀಡಬೇಕು. ಇದನ್ನು ನಮ್ಮ ಪಕ್ಷ…

Read More

ನಿಷೇಧಿತ ಔಷಧಿಗಳನ್ನು ಯಾವುದೇ ಔಷಧ ಅಂಗಡಿಗಳಲ್ಲಿ ವೈದ್ಯರ ಶಿಫಾರಸ್ಸು ಹಾಗೂ ಅನುಮತಿ ಇಲ್ಲದೆ ಮಾರಾಟ ಮಾಡುವಂತಿಲ್ಲ. ಈ ಬಗ್ಗೆ ಜಿಲ್ಲೆಯ ಎಲ್ಲ ಔಷಧ ಅಂಗಡಿಗಳಿಗೆ ಕಟ್ಟುನಿಟ್ಟಿನ ಆದೇಶ ಹೊರಡಿಸಿ ಎಂದು ಸಂಬಂಧಿಸಿದ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಡಾ.ಸುರೇಶ ಬಿ.ಇಟ್ನಾಳ ಅವರು ಸೂಚನೆ ನೀಡಿದರು. ಸೋಮವಾರದಂದು ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಆಯೋಜಿಸಿದ್ದ ಜಿಲ್ಲೆಯ ಮಾದಕ ವ್ಯಸನ ನಿಯಂತ್ರಣ, ಸಮಸ್ಯೆಗಳ ಪರಿಹಾರ, ಮಾದಕ ವಸ್ತುಗಳ ಸಾಗಾಣಿಕೆ ಎನ್‌ಸಿಒಆರ್‌ಡಿ(ನಾರ್ಕೋ ಕೋ-ಆರ್ಡಿನೇಷನ್ ಸೆಂಟರ್) ಸಮನ್ವಯ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ನಿಷೇಧಿತ ಔಷಧಿಗಳು, ನೋವು ನಿಯಂತ್ರಕ ಔಷಧಿಗಳು, ಖಿನ್ನತೆಗೆ ಸಂಬAಧಿಸಿದ ಔಷಧಿಗಳು, ನೆಗಡಿ, ಕೆಮ್ಮಿನ ಸಿರಪ್‌ಗಳನ್ನು ಯಾವುದೇ ಔಷಧ ಅಂಗಡಿಗಳು ವೈದ್ಯರ ಶಿಫಾರಸ್ಸು ಇಲ್ಲದೇ ಯಾರಿಗೂ ಮಾರಾಟ ಮಾಡುವಂತಿಲ್ಲ. ಈ ರೀತಿಯ ಔಷಧಗಳಲ್ಲಿ ಮತ್ತು ಬರಿಸುವ ಅಂಶಗಳನ್ನು ಸೇರ್ಪಡೆ ಮಾಡಲಾಗಿರುತ್ತದೆ. ನಿಗದಿತ ಪ್ರಮಾಣದ ನಂತರ ಈ ಔಷಧಿಗಳು ಮಾದಕ ವಸ್ತು ರೂಪಕ್ಕೆ ಪರಿವರ್ತನೆಗೊಂಡು ಸೇವನೆ ಮಾಡುವವರಿಗೆ ವ್ಯಸನವಾಗಿ ಬಿಡುತ್ತವೆ. ಆದ್ದರಿಂದ ನಿಷೇಧಿತ ಔಷಧಿಗಳನ್ನು ಮಾರಾಟ ಮಾಡದಂತೆ…

Read More

ಬೆಂಗಳೂರು : ರಾಜ್ಯ ಸರ್ಕಾರದಿಂದ ನೇರವಾಗಿ / ಪರೋಕ್ಷವಾಗಿ ನೇಮಕಗೊಂಡಿರುವ ಎಲ್ಲಾ ” ‘ಬಿ’ ಮತ್ತು ‘ಸಿ’ ಗುಂಪಿನ ಅರ್ಹ ಅಧಿಕಾರಿಗಳು/ನೌಕರರು ಕಡ್ಡಾಯವಾಗಿ ಸಂಬಳ ಪ್ಯಾಕೇಜಿನಲ್ಲಿ ನೋಂದಾಯಿಸಿಕೊಳ್ಳುವುದನ್ನು ಕಾಲಾವಧಿಯನ್ನು ವಿಸ್ತರಿಸುವ ಕುರಿತು ಸರ್ಕಾರ ಮಹತ್ವದ ಆದೇಶ ಹೊರಡಿಸಿದೆ. ಮೇಲ್ಕಂಡ ವಿಷಯಕ್ಕೆ ಸಂಬಂಧಿಸಿದಂತೆ ಉಲ್ಲೇಖಿತ ಪತ್ರದಲ್ಲಿ ಎಲ್ಲಾ ಅರ್ಹ “ಎ”, “ಬಿ” ಮತ್ತು “ಸಿ” ಗುಂಪಿನ ಅಧಿಕಾರಿಗಳು/ನೌಕರರಿಗೆ ಕಡ್ಡಾಯವಾಗಿ ಸಂಬಳ ಪ್ಯಾಕೇಜಿನಲ್ಲಿ ನೋಂದಾಯಿಸಿಕೊಳ್ಳುವುದನ್ನು ಖಚಿತಪಡಿಸಿಕೊಳ್ಳಲು ಹಾಗೂ ದಿನಾಂಕ: 15.12.2025 ರೊಳಗಡೆ ನೋಂದಾಯಿಸಿಕೊಳ್ಳದ ಅಧಿಕಾರಿಗಳ ಸಂಬಳದ ವಿತರಣೆಯನ್ನು ತಡೆಹಿಡಿಯಲು ಕ್ರಮ ಕೈಗೊಳ್ಳಲು ತಿಳಿಸಲಾಗಿತ್ತು. ಆದರೆ, ಹಲವು ಅಧಿಕಾರಿಗಳು/ನೌಕರರು ಸಂಬಳ ಪ್ಯಾಕೇಜಿನಲ್ಲಿ ನೋಂದಾಯಿಸಿಕೊಳ್ಳುವಲ್ಲಿ ಇನ್ನೂ ಹೆಚ್ಚಿನ ಕಾಲಾವಕಾಶ ಕೋರಿದ್ದರಿಂದ, ‘ಎ’ ಮತ್ತು “ಬಿ” ಗುಂಪಿನ ಅಧಿಕಾರಿಗಳಿಗೆ ಹಾಗೂ ‘ಸಿ’ ಗುಂಪಿನ ನೌಕರರಿಗೆ ಸಂಬಳ ಪ್ಯಾಕೇಜಿನಲ್ಲಿ ನೋಂದಾಯಿಸಿಕೊಳ್ಳಲು ದಿನಾಂಕ: 16.01.2026ರ ವರೆಗೆ ಕಾಲಾವಕಾಶವನ್ನು ವಿಸ್ತರಿಸಲಾಗಿದೆ.  

Read More

ತುಮಕೂರು: ಶಾಲೆಗೆ ತಪ್ಪದೇ ಹೋಗು ಎಂದಿದ್ದಕ್ಕೆ ಬಾಲಕನ್ನೊಬ್ಬ ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ಘಟನೆ ತುಮಕೂರು ಜಿಲ್ಲೆಯಲ್ಲಿ ನಡೆದಿದೆ. ತುಮಕೂರು ಜಿಲ್ಲೆಯ ಚಿಕ್ಕನಾಯಕನಹಳ್ಳಿ ತಾಲೂಕು ಚೆನ್ನಕಾಟಯ್ಯನ ಗುಡ್ಲು ಗ್ರಾಮದಲ್ಲಿ ಜಗದೀಶ್ (14) ಎಂಬ ಬಾಲಕ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಜಗದೀಶ್ ಕೆಂಕೆರೆ ಸರ್ಕಾರಿ ಶಾಲೆಯಲ್ಲಿ 8ನೇ ತರಗತಿಯಲ್ಲಿ ಓದುತ್ತಿದ್ದ. ಬಾಲಕನ ತಾಯಿಯ ಕುಟುಂಬ ಅಯ್ಯಪ್ಪ ಮಾಲೆ ಹಾಕಿದ್ದರು. ಈ ಸಂಬಂಧ ಅಲ್ಲಿಗೆ ಹೋಗಿ ಜಗದೀಶ್ ವಾಪಾಸ್ ಬಂದಿದ್ದ. ನಂತರ ಶಾಲೆಗೆ ಹೋಗಲು ನಿರಾಕರಿಸಿದ. ಇದರಿಂದ ತಂದೆ ಬುದ್ದಿವಾದ ಹೇಳಿದ್ದಕ್ಕೆ ಶಾಲೆಗೆ ತೆರಳಿದ್ದ ಬಾಲಕ ಗೆಳೆಯನ ಜೊತೆಗೆ ಮನೆಗೆ ವಾಪಾಸ್ ಬರುವಾಗ ಗೆಳೆಯನನ್ನು ಕಳಿಸಿ ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ.

Read More

ಬೆಂಗಳೂರು : ವ್ಯಕ್ತಿ, ಕುಟುಂಬವನ್ನು ಸಾಮಾಜಿಕವಾಗಿ ಬಹಿಷ್ಕರಿಸುವುದನ್ನು ಅಪರಾಧವೆಂದು ಪರಿಗಣಿಸಿ ಒಂದು ಲಕ್ಷ ರು. ದಂಡ ಹಾಗೂ 3 ವರ್ಷಗಳವರೆಗೆ ಜೈಲುಶಿಕ್ಷೆಗೆ ಗುರಿಯಾಗಿಸುವ ‘ಕರ್ನಾಟಕ ಸಾಮಾಜಿಕ ಬಹಿಷ್ಕಾರ (ಪ್ರತಿಬಂಧ) ಕಾಯ್ದೆ 2025’ರ ರಾಜ್ಯ ಪತ್ರವನ್ನು ಹೊರಡಿಸಲಾಗಿದೆ. ರಾಜ್ಯಪತ್ರದಲ್ಲಿ ಏನಿದೆ? ರಾಜ್ಯದಲ್ಲಿ ಒಬ್ಬ ವ್ಯಕ್ತಿ ಅಥವಾ ಅವನ ಕುಟುಂಬ ಸದಸ್ಯರನ್ನೂ ಒಳಗೊಂಡಂತೆ ವ್ಯಕ್ತಿಗಳ ಗುಂಪಿನ ಸಾಮಾಜಿಕ ಬಹಿಷ್ಕಾರವನ್ನು ನಿಷೇಧಿಸಲು ಮತ್ತು ಅದಕ್ಕೆ ಸಂಬಂಧಪಟ್ಟ ಅಥವಾ ಅದಕ್ಕೆ ಪ್ರಾಸಂಗಿಕವಾದ ವಿಷಯಗಳನ್ನು ಉಪಬಂಧಿಸುವುದಕ್ಕಾಗಿ ಒಂದು ಅಧಿನಿಯಮ; ಭಾರತ ಸಂವಿಧಾನದ ಪ್ರಸ್ತಾವನೆಯಲ್ಲಿ ಒಂದು ಗುರಿಯಾಗಿ ಪ್ರತಿಷ್ಠಾಪಿಸಲಾದ ವ್ಯಕ್ತಿ ಘನತೆಯನ್ನು ಖಾತ್ರಿಪಡಿಸಿ, ನಾಗರೀಕರಲ್ಲಿ ಭಾತೃತ್ವವನ್ನು ಉತ್ತೇಜಿಸಲಾಗಿರುವುದರಿಂದ, ಮತ್ತು ಯಾರೇ ವ್ಯಕ್ತಿ ಅಥವಾ ವ್ಯಕ್ತಿಗಳ ಗುಂಪಿನ ಸಾಮಾಜಿಕ ಬಹಿಷ್ಕಾರವು ಸಂವಿಧಾನದ ಭಾಗ-11ರಲ್ಲಿ ಪ್ರತಿಷ್ಟಾಪಿಸಲಾದ ಮೂಲಭೂತ ಹಕ್ಕುಗಳ ಉಲ್ಲಂಘನೆಯಾಗುವುದರಿಂದ. ಮತ್ತು ರಾಜ್ಯದ ಕೆಲವು ಭಾಗಗಳಲ್ಲಿ ಅವರ ಕುಟುಂಬ ಸದಸ್ಯರನ್ನೂ ಒಳಗೊಂಡಂತೆ ವ್ಯಕ್ತಿ ಅಥವಾ ವ್ಯಕ್ತಿಗಳ ಗುಂಪಿನ ಸಾಮಾಜಿಕ ಬಹಿಷ್ಕಾರದ ಅಮಾನವೀಯ ಪದ್ಧತಿಯು ಇನ್ನೂ ಉಳಿದಿರುವುದನ್ನು ಗಮನಿಸಲಾಗಿರುವುದರಿಂದ; ಮತ್ತು ಅವರ ಕುಟುಂಬ ಸದಸ್ಯರನ್ನೂ…

Read More

ವಿವಿಧ ಕಾರ್ಮಿಕ ಕಾಯ್ದೆಗಳಡಿ ನೋಂದಣಿಯಾಗಿರುವ ಉದ್ದಿಮೆಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಮಹಿಳಾ ನೌಕರರಿಗೆ ಅವರ ಋತು ಚಕ್ರದ ಸಮಯದಲ್ಲಿ ಮಾಸಿಕ ಒಂದು ದಿನ ವೇತನ ಸಹಿತ ರಜೆ ಸೌಲಭ್ಯ ಉದ್ಯೋಗದಾತರು ನೀಡಬೇಕು ಎಂದು ಬಳ್ಳಾರಿ ಉಪವಿಭಾಗದ ಕಾರ್ಮಿಕ ಅಧಿಕಾರಿ ಅವರು ತಿಳಿಸಿದ್ದಾರೆ. ಕಾರ್ಖಾನೆಗಳ ಕಾಯ್ದೆ 1948, ಕರ್ನಾಟಕ ಅಂಗಡಿ ಮತ್ತು ವಾಣಿಜ್ಯ ಸಂಸ್ಥೆಗಳ ಕಾಯ್ದೆ 1961, ತೋಟ ಕಾರ್ಮಿಕರ ಕಾಯ್ದೆ 1951, ಬೀಡಿ ಮತ್ತು ಸಿಗಾರ್ ಕಾರ್ಮಿಕರ ಕಾಯ್ದೆ 1966, ಮತ್ತು ಮೋಟಾರ್ ಸಾರಿಗೆ ಕಾರ್ಮಿಕರ ಕಾಯ್ದೆ 1961 ರಡಿ ನೋಂದಣಿಯಾಗಿರುವ ಎಲ್ಲಾ ಕೈಗಾರಿಕೆಗಳು ಹಾಗೂ ಸಂಸ್ಥೆಗಳಲ್ಲಿ ಕಾರ್ಯನಿರ್ವಹಿಸುತ್ತಿರುವ 18 ರಿಂದ 52 ವರ್ಷದ ವಯೋಮಿತಿಯ ಎಲ್ಲಾ ಖಾಯಂ, ಗುತ್ತಿಗೆ, ಹೊರಗುತ್ತಿಗೆ ಮಹಿಳಾ ಕಾರ್ಮಿಕರಿಗೆ ಅವರ ಋತು ಚಕ್ರದ ಸಮಯದಲ್ಲಿ ಮಾಸಿಕ ಒಂದು ದಿನ ವೇತನ ಸಹಿತ ರಜೆಯಂತೆ ವಾರ್ಷಿಕ 12 ದಿನಗಳ ವೇತನ ಸಹಿತ ರಜೆಯ ಸೌಲಭ್ಯವನ್ನು ಉದ್ಯೋಗದಾತರು ಒದಗಿಸುವಂತೆ ಸರ್ಕಾರವು ಆದೇಶಿಸಿದ್ದು, ಯಾವುದೇ ವೈದ್ಯಕೀಯ ಪ್ರಮಾಣ ಪತ್ರಗಳನ್ನು ಒದಗಿಸುವ ಅವಶ್ಯಕತೆ ಇರುವುದಿಲ್ಲ…

Read More