Subscribe to Updates
Get the latest creative news from FooBar about art, design and business.
Author: kannadanewsnow57
ರಾಷ್ಟ್ರೀಯ ಆಹಾರ ಭದ್ರತಾ ಕಾಯ್ದೆಯಡಿ ಡಿಸೆಂಬರ್-2025 ರ ಮಾಹೆಗೆ ಪ್ರತಿ ಅಂತ್ಯೋದಯ (ಎ.ಎ.ವೈ) ಪಡಿತರ ಚೀಟಿಗೆ 21 ಕೆ.ಜಿ ರಾಗಿಯನ್ನು ಹಾಗೂ 14 ಕೆ.ಜಿ ಸಾರವರ್ಧಿತ Fortified) ಅಕ್ಕಿ ಹಾಗೂ ಪಿ.ಹೆಚ್.ಹೆಚ್ (ಬಿ.ಪಿ.ಎಲ್) ಪಡಿತರ ಚೀಟಿಯಲ್ಲಿನ ಪ್ರತಿ ಫಲಾನುಭವಿಗೆ 3 ಕೆ.ಜಿ ರಾಗಿಯನ್ನು ಹಾಗೂ 02 ಕೆ.ಜಿ ಸಾರವರ್ಧಿತFortified) ಅಕ್ಕಿಯನ್ನು ಉಚಿತವಾಗಿ ವಿತರಿಸಲಾಗುತ್ತಿದೆ. ಇದರ ಜೊತೆಗೆ ಏಕ ಸದಸ್ಯ, ದ್ವಿಸದಸ್ಯ ಮತ್ತು ತ್ರಿಸದಸ್ಯ ಎಎವೈ ಪಡಿತರ ಚೀಟಿಗಳನ್ನು ಹೊರತುಪಡಿಸಿ ನಾಲ್ಕು ಮತ್ತು ನಾಲ್ಕಕ್ಕಿಂತ ಹೆಚ್ಚಿನ ಸದಸ್ಯರುಳ್ಳ ಎಎವೈ ಪಡಿತರ ಚೀಟಿಯ ಪ್ರತಿ ಫಲಾನುಭವಿಗೆ (ಕೇಂದ್ರ ಎನ್ಎಫ್ಎಸ್ಎ ಹಂಚಿಕೆಯ 35 ಕೆಜಿಯನ್ನು ಹೊರತುಪಡಿಸಿ) ಮತ್ತು ಪಿಹೆಚ್ಹೆಚ್ ಪಡಿತರ ಚೀಟಿಯ ಫ್ರತಿ ಫಲಾನುಭವಿಗೆ ಡಿಸೆಂಬರ್ -2025 ರ ಮಾಹೆಗೆ ಅನ್ನಭಾಗ್ಯ ಯೋಜನೆಯಡಿ ನೇರ ನಗದು ವರ್ಗಾವಣೆ ಬದಲಾಗಿ ಹೆಚ್ಚುವರಿ 05 ಕೆಜಿ ಅನ್ನಭಾಗ್ಯ ಅಕ್ಕಿಯನ್ನು ನೀಡಲಾಗುತ್ತದೆ. ಡಿಸೆಂಬರ್-2025 ರ ಮಾಹೆಗೆ ರಾಜ್ಯ ವ್ಯಾಪ್ತಿಯ ಪ್ರತಿ ಪಿ.ಎಚ್.ಎಚ್ ಫಲಾನುಭವಿಗೆ ತಲಾ 5 ಕೆ.ಜಿ ಅಕ್ಕಿಯಂತೆ ಹಂಚಿಕೆ…
ಅಡುಗೆ ಅನಿಲದ ಸಿಲಿಂಡರನ್ನು ಡಿಸೆಂಬರ್-2025 ರ ಮಾಹೆಯಲ್ಲಿ ಮನೆಗೆ ಸರಬರಾಜು ಮಾಡುವ ಡೆಲಿವರಿ ಹುಡುಗರಿಗೆ ಗ್ರಾಹಕರು ಡೆಲಿವರಿಗೆ ಶುಲ್ಕ ನೀಡುವ ಅಗತ್ಯವಿಲ್ಲ. ಬಿಲ್ಲಿನಲ್ಲಿ ನಮೂದಿಸಿರುವ ಮೊತ್ತವನ್ನು ಮಾತ್ರ ನೀಡುವಂತೆ ತಿಳಿಸಿದೆ. ಗ್ಯಾಸ್ ಏಜೆನ್ಸಿಗಳು ಗೃಹ ಬಳಕೆಯ ಅನಿಲ ಸಿಲಿಂಡರನ್ನು ನೇರವಾಗಿ ಗೋದಾಮಿನಿಂದ ಗ್ರಾಹಕರಿಗೆ ಸರಬರಾಜು ಮಾಡತಕ್ಕದ್ದು, ಯಾವುದೇ ಕಾರಣಕ್ಕಾಗಿಯೂ ಅನಿಲ ಸಿಲಿಂಡರನ್ನು ರಸ್ತೆ ಬದಿಯಲ್ಲಿ, ಸಾರ್ವಜನಿಕ ಸ್ಥಳಗಳಲ್ಲಿ, ಮೈದಾನಗಳಲ್ಲಿ ಇಟ್ಟು ಮಾರಾಟ ಮಾಡತಕ್ಕದ್ದಲ್ಲ. ಸರ್ಕಾರದ ಆದೇಶದನ್ವಯ ಈ ಕೆಳಗಿನಂತೆ ಗೃಹೊಪಯೋಗಿ ಗ್ಯಾಸ್ ಸಿಲಿಂಡರ್ ಗೆ ನಾಗರಿಕ ತಿದ್ದುಪಡಿಯಲ್ಲಿ ನಿಗಧಿಪಡಿಸಿರುವಂತೆ Up to 5 kms free (no charges) Beyond 5 kms for every round trip km- Rs.1.60 per cylinder (Rs. One Rupee sixty paise only) ಸಿಲಿಂಡರನ್ನು ಮನೆಗೆ ತಲುಪಿಸುವ ಸಂದರ್ಭದಲ್ಲಿ ಯಾವುದೇ ಡೆಲಿವರಿ ಹುಡುಗ ಬಿಲ್ಲಿನಲ್ಲಿ ನಮೂದಿಸಿದ ಮೊತ್ತಕ್ಕಿಂತ ಹೆಚ್ಚಿನ ಹಣ ಕೇಳಿದಲ್ಲಿ, ಜಂಟಿ ನಿರ್ದೇಶಕರ ಕಚೆÃರಿ ಆಹಾರ, ನಾಗರಿಕ ಸರಬರಾಜು ಮತ್ತು…
ಎಲ್ಲಾ ಪೆಟ್ರೋಲ್ ಬಂಕ್ಗಳಲ್ಲಿ ಈ ಕೆಳಗಿನ 06 ಉಚಿತ ಸೌಲಭ್ಯಗಳನ್ನು ಸಾರ್ವಜನಿಕರಿಗೆ ಕಡ್ಡಾಯವಾಗಿ ಒದಗಿಸಬೇಕಾಗಿರುತ್ತದೆ. ವಾಹನದ ಟೈರ್ಗಳಿಗೆ ಉಚಿತ ಗಾಳಿಯ ಸೌಲಭ್ಯ, ಪೆಟ್ರೋಲ್ ಬಂಕ್ ಆವರಣದಲ್ಲಿ ಸಾರ್ವಜನಿಕರಿಗೆ ಕುಡಿಯುವ ನೀರಿನ ವ್ಯವಸ್ಥೆ,ಗ್ರಾಹಕರು ಮತ್ತು ಸಿಬ್ಬಂದಿ ಇಬ್ಬರಿಗೂ ಶೌಚಾಲಯ ಸೌಲಭ್ಯಗಳು, ತುರ್ತು ಸಂದರ್ಭಗಳಲ್ಲಿ ಪ್ರಥಮ ಚಿಕಿತ್ಸಾ ಕಿಟ್ಗಳ ಸೌಲಭ್ಯಗಳು, ಗ್ರಾಹಕರು ನಿಖರವಾದ ಇಂಧನವನ್ನು ಪಡೆಯುವಲ್ಲಿ ಪೆಟ್ರೋಲ್ ಬಂಕ್ ಸಿಬ್ಬಂದಿ ಸಹಕರಿಸುವುದು ಹಾಗೂ ಪೆಟ್ರೋಲ್ ಮತ್ತು ಡೀಸೆಲ್ನ ಗುಣಮಟ್ಟದ ಕುರಿತು ಗ್ರಾಹಕರಿಗೆ ಮಾಹಿತಿ ಒದಗಿಸುವುದು. ಪೆಟ್ರೋಲ್ ಬಂಕ್ ಆವರಣದಲ್ಲಿ ತುರ್ತು ಸಂಪರ್ಕ ಸಂಖ್ಯೆಗಳನ್ನು ಗ್ರಾಹಕರಿಗೆ ಕಾಣುವಂತೆ ಸ್ಪಷ್ಟ ಪ್ರದರ್ಶನ ಮಾಡುವುದು. ಪೆಟ್ರೋಲ್ ಬಂಕ್ಗಳಲ್ಲಿ ಸದರಿ ಮೂಲ ಸೌಕರ್ಯಗಳ ಕೊರತೆ ಕಂಡುಬAದಲ್ಲಿ ಗ್ರಾಹಕರು ಈ ಕೆಳಕಂಡ ಅಧಿಕಾರಿಗಳಿಗೆ ದೂರು ನೀಡಲು ಕೋರಿದೆ. ದೂರವಾಣಿ ಮತ್ತು ವಿಳಾಸ ಸಂಬAಧಪಟ್ಟ ಪೆಟ್ರೋಲ್/ಡೀಸೆಲ್ ಬಂಕ್ಗಳಲ್ಲಿ ಲಭ್ಯವಿರುತ್ತದೆ. ಸೇಲ್ಸ್ ಆಫೀಸರ್, ಇಂಡಿಯನ್ ಆಯಿಲ್ ಕಾರ್ಪೊರೇಶನ್ ಲಿಮಿಟೆಡ್., ಹಾಸನ 7022945432, ಸೇಲ್ಸ್ ಆಫೀಸರ್, ಭಾರತ್ ಪೆಟ್ರೋಲಿಯಂ ಕಾರ್ಪೊರೇಶನ್ ಲಿಮಿಟೆಡ್, ಹಾಸನ 7033096059, ಸೇಲ್ಸ್…
ಮುಂಬೈ : ಮುಂಬೈನಲ್ಲಿ ಬೆಸ್ಟ್ ಬಸ್ ಡಿಕ್ಕಿ ಹೊಡೆದ ಪರಿಣಾಮ ಐವರು ಸಾವನ್ನಪ್ಪಿ, ಒಂಬತ್ತು ಜನರಿಗೆ ಗಾಯಗಳಾಗಿವೆ. ಬಸ್ ಹಿಂದಕ್ಕೆ ಚಲಿಸುವಾಗ ಈ ಅಪಘಾತ ಸಂಭವಿಸಿದೆ. ಮುಂಬೈನ ನಗರ ಸಾರಿಗೆ ಸಂಸ್ಥೆ ಬೆಸ್ಟ್ ನ ಬನ್ನೊಂದು ರಿವರ್ಸ್ ತೆಗೆದುಕೊಳ್ಳುವಾಗ ಫುಟ್ಪಾತ್ -ಮೇಲೆ ಹತ್ತಿ ಪಾದಚಾರಿಗಳ ಮೇಲೆ ಹರಿದಿದ್ದು, 5 ಜನ ಸಾವನ್ನಪ್ಪಿ 9 ಜನ ಗಾಯಗೊಂಡಿದ್ದಾರೆ. ಸೋಮವಾರ ರಾತ್ರಿ ಈ ಘಟನೆ ಭಾಂಡೂಪ್ ಉಪನಗರದ ಜನನಿಬಿಡ ಸ್ಟೇಷನ್ ರಸ್ತೆಯಲ್ಲಿ ನಡೆದಿದೆ. ವರದಿಗಳ ಪ್ರಕಾರ, ಬಸ್ ಹಿಂದಕ್ಕೆ ಚಲಿಸುತ್ತಿತ್ತು ಮತ್ತು ಬಸ್ ನಿಲ್ದಾಣದಲ್ಲಿ ಕಾಯುತ್ತಿದ್ದ ಜನರನ್ನು ಪುಡಿಪುಡಿ ಮಾಡಲಾಗಿದೆ. ಅಪಘಾತದ ನಂತರ ಪೊಲೀಸರು ಸ್ಥಳಕ್ಕೆ ಆಗಮಿಸಿದರು ಮತ್ತು ಗಾಯಾಳುಗಳನ್ನು ಆಸ್ಪತ್ರೆಗೆ ಕರೆದೊಯ್ಯಲಾಯಿತು. ಅಗ್ನಿಶಾಮಕ ದಳ ಮತ್ತು ಆಂಬ್ಯುಲೆನ್ಸ್ ಅನ್ನು ಸಹ ಕಳುಹಿಸಲಾಯಿತು.
ಚೆನ್ನೈ : ನಟ ಮತ್ತು ರಾಜಕಾರಣಿ ದಳಪತಿ ವಿಜಯ್ ನಟನೆಯಿಂದ ನಿವೃತ್ತಿ ಘೋಷಿಸಿದ್ದಾರೆ. ಚಿತ್ರರಂಗದಲ್ಲಿ 33 ವರ್ಷಗಳ ವೃತ್ತಿಜೀವನದ ನಂತರ, ಅವರು ಈಗ ವಿದಾಯ ಹೇಳಿದ್ದಾರೆ. ಅವರು 10 ನೇ ವಯಸ್ಸಿನಲ್ಲಿ ತಮಿಳು ಚಿತ್ರ “ವೆಟ್ರಿ” ಯಲ್ಲಿ ಬಾಲ ಕಲಾವಿದರಾಗಿ ತಮ್ಮ ವೃತ್ತಿಜೀವನವನ್ನು ಪ್ರಾರಂಭಿಸಿದರು ಮತ್ತು 18 ನೇ ವಯಸ್ಸಿನಲ್ಲಿ “ನಲೈಯ ತೀರ್ಪು” (1992) ನಲ್ಲಿ ಪ್ರಮುಖ ಪಾತ್ರವನ್ನು ನಿರ್ವಹಿಸಿದರು. ಡಿಸೆಂಬರ್ 27, 2025 ರಂದು ಮಲೇಷ್ಯಾದಲ್ಲಿ ನಡೆದ ಎಚ್. ವಿನೋದ್ ಅವರ “ಜನ ನಾಯಕನ್” ಚಿತ್ರದ ಆಡಿಯೋ ಬಿಡುಗಡೆ ಸಮಾರಂಭದಲ್ಲಿ ಅವರು ನಟನೆಯಿಂದ ನಿವೃತ್ತಿ ಹೊಂದುವುದಾಗಿ ಘೋಷಿಸಿದ್ದಾರೆ. ದಳಪತಿ ವಿಜಯ್ ಅವರಿಗೆ 51 ವರ್ಷ, ಮತ್ತು “ಜನ ನಾಯಕನ್” ಅವರ ಕೊನೆಯ ಚಿತ್ರವಾಗಿರುತ್ತದೆ. ಅಭಿಮಾನಿಗಳನ್ನು ಉದ್ದೇಶಿಸಿ ಮಾತನಾಡಿದ ಅವರು, ಈಗ ತಮ್ಮ ರಾಜಕೀಯ ಜೀವನದ ಮೇಲೆ ಕೇಂದ್ರೀಕರಿಸುವುದಾಗಿ ಹೇಳಿದರು. ಕಳೆದ ವರ್ಷ, ಅವರು ತಮ್ಮ ರಾಜಕೀಯ ಪಕ್ಷ “ತಮಿಳಗ ವೆಟ್ಟಿ ಕಳಗಂ” ಅನ್ನು ಪ್ರಾರಂಭಿಸಿದ್ದಾರೆ. ನನಗೆ ಒಂದೇ ಒಂದು ವಿಷಯ…
55 ಇಂಚಿನ ಸ್ಮಾರ್ಟ್ ಎಲ್ಇಡಿ ಟಿವಿಯನ್ನು ಕಡಿಮೆ ಬೆಲೆಗೆ ಖರೀದಿಸಲು ಇದೊಂದು ಉತ್ತಮ ಅವಕಾಶ. ಹೊಸ ವರ್ಷದಿಂದ ಸ್ಮಾರ್ಟ್ ಟಿವಿಗಳು ಸೇರಿದಂತೆ ಎಲೆಕ್ಟ್ರಾನಿಕ್ ಸಾಧನಗಳ ಬೆಲೆಗಳು ಹೆಚ್ಚಾಗುವ ನಿರೀಕ್ಷೆಯಿದೆ. 55 ಇಂಚಿನ ಸ್ಮಾರ್ಟ್ ಟಿವಿಯನ್ನು ಫ್ಲಿಪ್ ಕಾರ್ಟ್ನಲ್ಲಿ 32 ಇಂಚಿನ ಟಿವಿಯಂತೆಯೇ ಖರೀದಿಸಬಹುದು. ಟಿಸಿಎಲ್, ರಿಯಲ್ಮಿ, ಸೋನಿ ಮತ್ತು ಫಾಕ್ಸ್ಸ್ಕಿಯಂತಹ ಬ್ರ್ಯಾಂಡ್ಗಳ ಸ್ಮಾರ್ಟ್ ಟಿವಿಗಳು 74% ವರೆಗೆ ರಿಯಾಯಿತಿಯಲ್ಲಿ ಲಭ್ಯವಿದೆ. ನೀವು ಈ ದೊಡ್ಡ ಪರದೆಯ ಸ್ಮಾರ್ಟ್ ಟಿವಿಗಳನ್ನು ₹25,000 ಕ್ಕಿಂತ ಕಡಿಮೆ ಬೆಲೆಗೆ ಮನೆಗೆ ತರಬಹುದು. 55 ಇಂಚಿನ ಸೋನಿ ಬ್ರಾವಿಯಾ ಎಲ್ಇಡಿ ಸ್ಮಾರ್ಟ್ ಟಿವಿಯನ್ನು 36% ರಿಯಾಯಿತಿಯಲ್ಲಿ ಮಾರಾಟ ಮಾಡಲಾಗುತ್ತಿದೆ. ಈ ಸ್ಮಾರ್ಟ್ ಟಿವಿ ಫ್ಲಿಪ್ಕಾರ್ಟ್ನಲ್ಲಿ ₹57,990 ಗೆ ಲಭ್ಯವಿದೆ. ಈ ಸ್ಮಾರ್ಟ್ ಟಿವಿಯನ್ನು ₹91,900 ಗೆ ಪಟ್ಟಿ ಮಾಡಲಾಗಿದೆ. ಇದರ ವೈಶಿಷ್ಟ್ಯಗಳು 40W ಸ್ಪೀಕರ್ ಅನ್ನು ಒಳಗೊಂಡಿವೆ ಮತ್ತು ಗೂಗಲ್ ಆಂಡ್ರಾಯ್ಡ್ ಪ್ಲಾಟ್ಫಾರ್ಮ್ನಲ್ಲಿ ಕಾರ್ಯನಿರ್ವಹಿಸುತ್ತದೆ. ಟಿಸಿಎಲ್ನ 55 ಇಂಚಿನ ಎಲ್ಇಡಿ ಸ್ಮಾರ್ಟ್ ಟಿವಿಯ ಬೆಲೆಯನ್ನು 64% ರಷ್ಟು…
ಬೆಂಗಳೂರು: ರಾಜ್ಯ ಕಾಂಗ್ರೆಸ್ ಸರ್ಕಾರವು ಮಹಿಳೆಯರಿಗಾಗಿ ಜಾರಿ ಮಾಡಲಾಗಿರುವ ಶಕ್ತಿ ಯೋಜನೆಯನ್ನು ಸರಳೀಕರಿಸಲು ರಾಜ್ಯ ಸರ್ಕಾರ ಮುಂದಾಗಿದೆ. ಶೀಘ್ರದಲ್ಲೇ ಫಲಾನುಭವಿಗಳಿಗೆ ಸ್ಮಾರ್ಟ್ ಕಾರ್ಡ್ ವಿತರಿಸಲಿದೆ. ಇದರಿಂದ ಮಹಿಳೆಯರಿಗೆ ಆಧಾರ್ ಕಾರ್ಡ್ ಇಟ್ಟುಕೊಂಡು ಪ್ರಯಾಣ ಮಾಡುವ ಕಿರಿಕಿರಿ ತಪ್ಪಲಿದೆ. ಸಾರಿಗೆ ಬಸ್ ನಲ್ಲಿ ಪ್ರಯಾಣಿಸುವ ರಾಜ್ಯದ ಮಹಿಳೆಯರು ಇನ್ಮುಂದೆ ಸ್ಮಾರ್ಟ್ ಕಾಡ್೯ ತೋರಿಸಿದ್ರೆ ಸಾಕು, ಆಧಾರ್ ಕಾರ್ಡ್ ತೆಗೆದುಕೊಂಡು ಹೋಗುವ ಅಗತ್ಯವಿಲ್ಲ. ಶೀಘ್ರವೇ ಮಹಿಳೆಯರಿಗೆ ಸ್ಮಾರ್ಟ್ ಕಾರ್ಡ್ ಉಚಿತವಾಗಿ ಕೈಸೇರಲಿದೆ. ರಾಜ್ಯ ಸರ್ಕಾರದ ಶಕ್ತಿ ಯೋಜನೆ ಜಾರಿ ಯಾದ 2.5 ವರ್ಷಗಳ ನಂತರ ಇದೀಗ ಸ್ಮಾರ್ಟ್ ಕಾರ್ಡ್ ನೀಡಲು ಸಾರಿಗೆ ಇಲಾಖೆ ನಿರ್ಧರಿಸಿದೆ. ಸಂಪುಟ ಸಭೆಯಲ್ಲಿ ಅನು ಮೋದನೆ ಅಧಿಕಾರಿಗಳು ಮುಂದಾಗಿದ್ದಾರೆ.ಗ್ಯಾರಂಟಿ ಅರ್ಹರಿಗೆ ಮಾತ್ರ ದೊರಕುವಂತೆ ಸರ್ಕಾರ ಈಗಾಗಲೇ ಹಲವು ಕ್ರಮ ಕೈಗೊಂಡಿದೆ. ಶಕ್ತಿ ಯೋಜನೆ ಲಾಭ ರಾಜ್ಯದ ಮಹಿಳೆಯರು ಮಾತ್ರ ಪಡೆಯುವಂತೆ ಮಾಡಲು ಸ್ಮಾರ್ಟ್ಕಾರ್ಡ್ ನೀಡಲು ಸಾರಿಗೆ ಇಲಾಖೆ ಯೋಜಿಸಿದ್ದು, ಅದಕ್ಕಾಗಿ ಅನುಮತಿ ಕೋರಿ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಲಾಗಿದೆ. ಸ್ಮಾರ್ಟ್ ಕಾರ್ಡ್ಗಾಗಿ…
ಬೆಂಗಳೂರು: ಹೊಸ ವರ್ಷ-2026 ಆಚರಣೆ ಪ್ರಯುಕ್ತ ಆಸ್ಪತ್ರೆಗಳಲ್ಲಿ ಕೊಠಡಿ, ಆಂಬ್ಯುಲೆನ್ಸ್ ವಾಹನ ಸೌಲಭ್ಯ ಮತ್ತು ಸಾರ್ವಜನಿಕರಿಗೆ ವೈದ್ಯಕೀಯ ತುರ್ತು ಚಿಕಿತ್ಸೆ ಸೇವೆಗಳನ್ನು ಒದಗಿಸೋದಕ್ಕೆ ರಾಜ್ಯ ಸರ್ಕಾರ ಖಡಕ್ ಆದೇಶ ಮಾಡಿದೆ. ಈ ಕುರಿತಂತೆ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ನಿರ್ದೇಶಕರು ಆದೇಶ ಮಾಡಿದ್ದು, ದಿನಾಂಕ 31-12-2025 ರಿಂದ 01.01.2026 ರವರೆಗೆ ಹೊಸ ವರ್ಷ-2026 ಆಗಮನದ ಆಚರಣೆ ಸಮಯದಲ್ಲಿ, ಕರ್ನಾಟಕ ರಾಜ್ಯದ ವಿವಿಧ ಸ್ಥಳಗಳಲ್ಲಿ, ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ಹಾಗೂ ಸಾರ್ವಜನಿಕರು ಅಸ್ವಸ್ಥಗೊಳ್ಳುವ ಮತ್ತು ವಿವಿಧ ರೀತಿಯ ಆರೋಗ್ಯ ಸಂಬಂಧಿತ ಸಮಸ್ಯೆಗಳಿಗೆ ಸಿಲುಕುವ ಸಾಧ್ಯತೆಗಳಿರುವುದರಿಂದ, ಉಲ್ಲೇಖಿತ ಪತ್ರದ ಪಕಾರ ತುರ್ತು ಕರ್ತವ್ಯಕ್ಕಾಗಿ, ಜಿಲ್ಲಾ ಮಟ್ಟದ ಎಲ್ಲಾ ಆಸ್ಪತ್ರೆಗಳಲ್ಲಿ ಪುರುಷ ಮತ್ತು ಮಹಿಳೆಯರಿಗೆ ಪ್ರತ್ಯೇಕ ಕೊಠಡಿ ವ್ಯವಸ್ಥೆ ಮಾಡಲು ತಿಳಿಸಿದ್ದಾರೆ. ಸದರಿ ಮಹಿಳೆಯರ ಪ್ರತ್ಯೇಕ ಕೊಠಡಿಗೆ ಮಹಿಳಾ ಸಿಬ್ಬಂದಿಯನ್ನು ಚಿಕಿತ್ಸೆಗೆ ನಿಯೋಜಿಸುವುದು ಹಾಗೂ ಆಂಬ್ಯುಲೆನ್ಸ್ ವಾಹನ ಸೌಲಭ್ಯ ಮತ್ತು ಅಗತ್ಯ ಔಷಧಗಳು ಲಭ್ಯವಿರುವಂತೆ ವ್ಯವಸ್ಥೆಗೊಳಿಸಿ ಸಾರ್ವಜನಿಕರಿಗೆ ವೈದ್ಯಕೀಯ ತುರ್ತು ಚಿಕಿತ್ಸೆ ಸೇವೆಗಳನ್ನು…
ಬೆಂಗಳೂರು : ಸರ್ಕಾರಿ ಹುದ್ದೆ ಆಕಾಂಕ್ಷಿಗಳಿಗೆ ಕೇಂದ್ರ ಸರ್ಕಾರವು ಸಿಹಿಸುದ್ದಿ ನೀಡಿದ್ದು, ಹೊಸ ವರ್ಷಕ್ಕೆ ಬರೋಬ್ಬರಿ 52,000 ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನಿಸಿದೆ. ಹೌದು, ಭಾರತೀಯ ರೈಲ್ವೆ ಇಲಾಖೆಯಲ್ಲಿ 22,000 ಹುದ್ದೆಗಳ ನೇಮಕಾತಿಗೆ ಅಧಿಸೂಚನೆ ಹೊರಡಿಸಲಾಗಿದೆ. ಭಾರತೀಯ ಅಂಚೆ ಇಲಾಖೆಯಲ್ಲಿ 30 ಸಾವಿರ ಹುದ್ದೆಗಳ ನೇಮಕಾತಿಗೆ ಪ್ರಕಟಣೆ ಹೊರಡಿಸಲಾಗಿದೆ. ಭಾರತೀಯ ರೈಲ್ವೆ ಇಲಾಖೆಯಲ್ಲಿ 22000 ಹುದ್ದೆಗಳ ನೇಮಕಾತಿ ಭಾರತೀಯ ರೈಲ್ವೆಯಲ್ಲಿ ಸರ್ಕಾರಿ ಕೆಲಸದ ಕನಸು ಕಾಣುತ್ತಿರುವ ಯುವಕರಿಗೆ ಇಲ್ಲಿದೆ ಒಂದು ಶುಭ ಸುದ್ದಿ. ರೈಲ್ವೆ ನೇಮಕಾತಿ ಮಂಡಳಿ (RRB) ಕೇಂದ್ರೀಕೃತ ಉದ್ಯೋಗ ಸೂಚನೆ (CEN) ಸಂಖ್ಯೆ 09/2025 ರ ಅಡಿಯಲ್ಲಿ ವಿವಿಧ ಲೆವೆಲ್-1 (7ನೇ CPC ಪೇ ಮ್ಯಾಟ್ರಿಕ್ಸ್) ಹುದ್ದೆಗಳಿಗೆ ನೇಮಕಾತಿಗಾಗಿ ಸೂಚಕ ಅಧಿಸೂಚನೆಯನ್ನು ಹೊರಡಿಸಿದೆ. ಈ ನೇಮಕಾತಿ ಪ್ರಕ್ರಿಯೆಯ ಅಡಿಯಲ್ಲಿ ಸುಮಾರು 22,000 ಹುದ್ದೆಗಳಿಗೆ ಅರ್ಹ ಅಭ್ಯರ್ಥಿಗಳಿಂದ ಆನ್ಲೈನ್ ಅರ್ಜಿಗಳನ್ನು ಆಹ್ವಾನಿಸಲಾಗುತ್ತದೆ. ರೈಲ್ವೆ ನೇಮಕಾತಿ ಮಂಡಳಿ (RRB) ಜಾಹೀರಾತು ಸಂಖ್ಯೆ CEN 09/2025 ಅಡಿಯಲ್ಲಿ ಸುಮಾರು 22,000 ಗ್ರೂಪ್ D…
ಬೆಂಗಳೂರು : ಸರಕಾರದ ಪಂಚ ಗ್ಯಾರಂಟಿ ಯೋಜನೆಗಳಲ್ಲಿಗೃಹಲಕ್ಷ್ಮಿಯೋಜನೆ ಪ್ರಮುಖವಾಗಿದ್ದು, ಬಿಪಿಎಲ್ ಕುಟುಂಬದ ಮಹಿಳೆಯರಿಗೆ ಸರಕಾರ ಮಾಸಿಕ 2 ಸಾವಿರ ರೂ.ಗಳನ್ನು ನೇರ ಅವರ ಖಾತೆಗೆ ವರ್ಗಾವಣೆ ಮಾಡುತ್ತದೆ. ಮಹಿಳೆಯರನ್ನು ಆರ್ಥಿಕವಾಗಿ ಸಬಲಗೊಳಿಸುವುದು ಇದರ ಉದ್ದೇಶ.ಆದರೆ ಇತ್ತೀಚಿಗೆ ಗೃಹಲಕ್ಷ್ಮಿ ಹಣ ಖಾತೆಗೆ ಬಂದಿಲ್ಲ ಎಂದು ಯಜಮಾನಿಯರು ದೂರಿದ್ದಾರೆ. ಇದೀಗ ಖಾತೆಗೆ 24ನೇ ಕಂತಿನ ಹಣ ಬಿಡುಗಡೆ ಮಾಡಲಾಗಿದೆ. ಹಾಗಾದ್ರೆ ಹಣ ಜಮೆ ಆಗಿದೆಯೋ ಇಲ್ವೋ ಅನ್ನೋದಕ್ಕೆ ಇಲ್ಲಿದೆ ಮಾಹಿತಿ. ಹೌದು ಗೃಹಲಕ್ಷ್ಮಿ ಯೋಜನೆಯ ಹಣ ಬಂದಿಲ್ಲವೇ? ಯಾವಾಗ ಬರುವುದೋ ಎಂದು ಅಧಿಕಾರಿಗಳ ಬಳಿ ಅಲೆದು ಬೇಸತ್ತಿದ್ದೀರಾ? ಇನ್ನು ಮುಂದೆ ಯಾರ ಬಳಿಯೂ ಹೋಗಬೇಕಿಲ್ಲ. ಇದಕ್ಕಾಗಿ ಬಂದಿದೆ ಸಹಾಯವಾಣಿ! ಹೌದು, ರಾಜ್ಯ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯು ‘181’ ಸಂಖ್ಯೆಯ ಸಹಾಯವಾಣಿಯನ್ನು ತೆರೆದಿದ್ದು, ಇದರಡಿ ಇದೇ ಮೊದಲ ಬಾರಿಗೆ ಗೃಹಲಕ್ಷ್ಮಿಯನ್ನೂ ತರಲಾಗಿದೆ. ಆದರೆ, ಕೆಲವೊಮ್ಮೆ ಎರಡು ತಿಂಗಳು, ಮೂರು ತಿಂಗಳಾದರೂ ಗೃಹಲಕ್ಷ್ಮಿ ಹಣ ಬಂದಿರುವುದಿಲ್ಲ. ಇಂತಹ ಸಂದರ್ಭದಲ್ಲಿಫಲಾನುಭವಿ ಮಾತ್ರವಲ್ಲದೆ, ಮನೆಯ ಬಹುತೇಕ ಸದಸ್ಯರು…














