Subscribe to Updates
Get the latest creative news from FooBar about art, design and business.
Author: kannadanewsnow57
ಬೆಂಗಳೂರು : ರಾಜ್ಯದ ಪೊಲೀಸ್ ಇಲಾಖೆಯು ಹೊಸ ವರ್ಷದ ಸಂಭ್ರಮಾಚರಣೆ ಸಂದರ್ಭದಲ್ಲಿ ಸುರಕ್ಷತೆಯನ್ನು ಕಾಯ್ದುಕೊಳ್ಳುವ ನಿಟ್ಟಿನಲ್ಲಿ ಕೈಗೊಳ್ಳಬೇಕಾದ ಮುನ್ನೆಚ್ಚರಿಕೆ ಮಾರ್ಗಸೂಚಿಗಳನ್ನು ಪ್ರಕಟಿಸಿದೆ. ಹೊಸ ವರ್ಷದ ಸಂಭ್ರಮಾಚರಣೆಯು ಮದ್ಯಪಾನದ ಪರಿಣಾಮವಾಗಿ ಜನಸಮೂಹದ ಮನಸ್ಥಿತಿಯು ತೀವ್ರಗೊಳ್ಳುವ ಸಾಧ್ಯತೆ ಇರುತ್ತದೆ. ಮದ್ಯಪಾನವು ಜನರ ವಿವೇಕಶಕ್ತಿಯನ್ನು ದುರ್ಬಲಗೊಳಿಸುತ್ತದೆ ಹಾಗೂ ಸಂಕೋಚತಾ/ಹಿಂಜರಿಕಾ ಮನೋಭಾವವನ್ನು ಮೀರುವಂತೆ ಮಾಡುತ್ತದೆ. ಕೌಂಟ್ಡೌನ್ಗಳು ಮತ್ತು ಸಂಭ್ರಮದ ಕ್ಷಣಗಳಿಂದ ಉಂಟಾಗುವ ಉಲ್ಲಾಸವು ಜನಸಮೂಹದಲ್ಲಿ ಸಾಮೂಹಿಕ ಪ್ರೇರೇಪಣೆಯನ್ನು ಸೃಷ್ಟಿಸಿ, ದಟ್ಟ ಗುಂಪಿನೊಳಗಿರುವ ಕಾರಣ ಯಾವ ನಡೆಗೂ ಅಪಾಯವಿಲ್ಲವೆಂಬ ತಪ್ಪು ಕಲ್ಪನೆಯನ್ನು ಉಂಟುಮಾಡುತ್ತದೆ. ವೇದಿಕೆಗಳಲ್ಲಿ ಜನಸ್ತೋಮದ ಹರಿವು ಅಥವಾ ಪಟಾಕಿ ಸಿಡಿಸುವಂತಹ ಪ್ರದರ್ಶನಗಳು ಮುಂತಾದ ಹಲವು ಕಾರಣಗಳಿಂದಾಗಿ ಅಪ್ರಜ್ಞಾತ್ಮಕ ವರ್ತನೆಗಳು ಕಂಡುಬರುತ್ತವೆ. ಜನಸಮೂಹದ ಹರಿವನ್ನು ಒಮ್ಮೆಲೇ ಪ್ರೇರೇಪಿಸಿ ಅಪಾಯಕರ ಅಲೆಗಳಂತೆ ರೂಪುಗೊಳ್ಳಬಹುದಾದಂತಹ ಸಂಗೀತದ ತೀವ್ರತೆಯ ಘಟನಾವಳಿಗಳನ್ನು ಪೊಲೀಸ್ ಅಧಿಕಾರಿಗಳು ಗಮನಿಸಬೇಕಿದೆ. ಪಟಾಕಿ ಸಿಡಿಯುವಲ್ಲಿ ವಿಳಂಬವಾದರೆ ನಿರಾಶೆ ಉಂಟಾಗಿ, ಜನಸಮೂಹದ ಸಂಭ್ರಮವು ತಕ್ಷಣವೇ ಅಸಹನೆ ಮತ್ತು ಕೋಪಕ್ಕೆ ತಿರುಗುವ ಸಾಧ್ಯತೆ ಇರುತ್ತದೆ. ಗುಂಪಿನಲ್ಲಿ ವದಂತಿಗಳು ವೇಗವಾಗಿ ಹರಡಿ, ಅಪಾಯದ ಭ್ರಮೆಯು…
ಬೆಂಗಳೂರು: ನಟ, ನಿರ್ದೇಶಕ ಪ್ರೇಮ್ ಗೂ ವಿವಾದಗಳಿಗೂ ಗಳಸ್ಯ ಕಂಠಸ್ಯ ಸಂಬಂಧ ಎನ್ನುವುದು ಹಲವು ಬಾರಿ ಕಂಡು ಬರುತ್ತಿದೆ. ತಮ್ಮ ಹೊಸ ಸಿನಿಮಾ ಕೆಡಿಯ ಜೋಡೆತ್ತು ಸಾಂಗ್ ರಿಲೀಸ್ ಆಗಿದ್ದು, ಹಾಡಿನಲ್ಲಿ ಬಳಕೆ ಮಾಡಿರುವ ಕೆಲವು ಪದಗಳಿಗೆ ಸಾಮಾಜಿಕ ಜಾಲತಾಣದಲ್ಲಿ ಕೆಲವು ಮಂದಿ ಆಕ್ರೋಶವನ್ನು ವ್ಯಕ್ತಪಡಿಸಿದ್ದಾರೆ. ಹಾಡಿನಲ್ಲಿ ಬರುವ ರಂಡೆ-ಮುಂಡೆಯರು ಪದದ ಬಗ್ಗೆ ಹಲವು ಮಂದಿ ವಿರೋಧ ವ್ಯಕ್ತಪಡಿಸಿದ್ದಾರೆ. ಈ ನಡುವೆ ಕಂಟ್ರೋಲ್ ಆಲ್ಟ್ ಡಿಲಿಟ್ ಎನ್ನುವ ಪೇಸ್ಬುಕ್ ಪೇಜಿನಲ್ಲಿ ತಗಡ್ ನನ್ಮಕ್ಕಳಿಗೆ ಅರ್ಥವೇ ಆಗಲ್ಲ ಅದ್ರಲ್ಲೇನ್ ತಪ್ಪದೆ ಅಂತ. ಮುಂಡೆ ಅನ್ನೋದು ತಪ್ಪಾಗಲ್ಲ. ವಿದವೆ ಅನ್ನೋದು ಅಲಂಕಾರಿಕ ಪದ, ಮುಂಡೆ ಅನ್ನೋದು ಆಡುಸೊಗಡು ಅಂತ ಒಪ್ಕೊಳೋಣ. ಅವಳು ಮುಂಡೆ ಎಂಬುದಕ್ಕೂ, ಆ ಮುಂಡೆ ಕಣ್ಣು ಬೀಳಬಾರದು ಎಂಬುದಕ್ಕೂ ವ್ಯತ್ಯಾಸವಿದೆ ಅನ್ನೋದು ಅನೇಕರಿಗೆ ಗೊತ್ತಿಲ್ಲ. ರಂಡೆ-ಮುಂಡೆಯರು ಸಮಾಜದಲ್ಲಿ ಜನರ ನಡುವೆ ಬೆರೆಯಬಾರದು, ಅವರ ಕಣ್ಣು ಯಾರ ಮೇಲೂ ಬೀಳಬಾರದು ಎಂದು ಅವರನ್ನು ದೂರವಿಡುತ್ತಿದ್ದ ಕಾಲದ ಕಿಡಿನುಡಿಗಳನ್ನು ಈ ಕಾಲಕ್ಕೆ ತರಬಾರದು. ‘ಊರು…
ಬೆಂಗಳೂರು : ದೃಷ್ಟಿದೋಷವುಳ್ಳ/ದೃಷ್ಟಿಮಾಂದ್ಯ (Visually Impaired) ವಿದ್ಯಾರ್ಥಿಗಳಿಗೆ 2025-26 ನೇ ಸಾಲಿನಿಂದ ದ್ವಿತೀಯ ಪಿಯುಸಿ ಪರೀಕ್ಷೆಯನ್ನು ಡಿಜಿಟಲ್ ರೂಪದಲ್ಲಿ ಪರೀಕ್ಷೆ ಬರೆಯಲು ಅವಕಾಶ ಕಲ್ಪಿಸಿ ಶಿಕ್ಷಣ ಇಲಾಖೆ ಮಹತ್ವದ ಆದೇಶ ಹೊರಡಿಸಿದೆ. ದೃಷ್ಟಿದೋಷವುಳ್ಳ/ದೃಷ್ಟಿಮಾಂದ್ಯ (Visually Impaired) ವಿದ್ಯಾರ್ಥಿಗಳಿಗೆ ಸಿ.ಬಿ.ಎಸ್.ಇ ಮಂಡಳಿಯಲ್ಲಿ ಕಂಪ್ಯೂಟರ್ಗಳನ್ನು ಬಳಸಿ 12ನೇ ತರಗತಿಯ ಬೋರ್ಡ್ ಪರೀಕ್ಷೆ ಬರೆಯಲು ಅವಕಾಶವಿದ್ದು, ಅದೇ ರೀತಿ ರಾಜ್ಯ ಪಠ್ಯಕ್ರಮದ ದ್ವಿತೀಯ ಪಿಯುಸಿ ಪರೀಕ್ಷೆಗೆ ಹಾಜರಾಗುವ ದೃಷ್ಟಿದೋಷವುಳ್ಳ/ದೃಷ್ಟಿಮಾಂದ್ಯ (Visually Impaired) ವಿದ್ಯಾರ್ಥಿಗಳಿಗೆ 2025-26ನೇ ಸಾಲಿನಿಂದ ಅವಕಾಶ ಕಲ್ಪಿಸಲಾಗಿದೆ. ಈ ಹಿನ್ನೆಲೆಯಲ್ಲಿ ಸದರಿ ವಿದ್ಯಾರ್ಥಿಗಳಿರುವ ಕಾಲೇಜುಗಳ ಪ್ರಾಂಶುಪಾಲರು ಹಾಗೂ ಪರೀಕ್ಷಾ ಕೇಂದ್ರದ ಮುಖ್ಯ ಅಧಿಕ್ಷಕರು ಪರೀಕ್ಷಾ ಪೂರ್ವ ಹಾಗೂ ಪರೀಕ್ಷಾ ದಿನಗಳಂದು ಕೆಳಕಂಡಂತೆ ಕ್ರಮವಹಿಸಲು ತಿಳಿಸಿದೆ. 1. ಪರೀಕ್ಷಾ ಕೇಂದ್ರದಲ್ಲಿ ದೃಷ್ಟಿದೋಷವುಳ್ಳ/ದೃಷ್ಟಿಮಾಂದ್ಯ (Visually Impaired) ವಿದ್ಯಾರ್ಥಿಗಳು ಪರೀಕ್ಷೆ ಬರೆಯಲು ಪ್ರತ್ಯೇಕ ಕೊಠಡಿಯ ವ್ಯವಸ್ಥೆಯನ್ನು ಪರೀಕ್ಷಾ ಕೇಂದ್ರದ ಮುಖ್ಯ ಅಧೀಕ್ಷಕರು ಮಾಡುವುದು. 2. ದೃಷ್ಟಿದೋಷವುಳ್ಳ/ದೃಷ್ಟಿಮಾಂದ್ಯ ಕಾಲೇಜುಗಳಲ್ಲಿ (Visually Impaired) ವಿದ್ಯಾರ್ಥಿಗಳಿರುವ ಕಾರ್ಯನಿರ್ವಹಿಸುವ ಮೇಲ್ವಿಚಾರಕರಾಗಿ ನೇಮಿಸಿಕೊಳ್ಳುವುದು. ವಿಶೇಷ ಉಪನ್ಯಾಸಕರನ್ನು…
ಬೆಂಗಳೂರು : ರಾಜ್ಯ ಸರ್ಕಾರವು ರಾಜ್ಯದ ವಿವಿಧ ವಿಶ್ವವಿದ್ಯಾಲಯಗಳಲ್ಲಿ ಖಾಲಿ ಇರುವ ಹುದ್ದೆಗಳ ವಿವರಗಳನ್ನು ಪ್ರಕಟಿಸಿದೆ. ರಾಜ್ಯದ ವಿವಿಧ ವಿಶ್ವವಿದ್ಯಾಲಯಗಳಲ್ಲಿ 14677 ಹುದ್ದೆಗಳು ಖಾಲಿ ಇವೆ. ಕರ್ನಾಟಕದ ಮೈಸೂರು ವಿಶ್ವವಿದ್ಯಾಲಯದಲ್ಲಿ 747 ಹುದ್ದೆಗಳು ಖಾಲಿ ಇವೆ, ಹಾಸನ ವಿಶ್ವವಿದ್ಯಾಲಯದಲ್ಲಿ 272, ಮಂಡ್ಯ ವಿಶ್ವವಿದ್ಯಾಲಯದಲ್ಲಿ 245 ಹುದ್ದೆಗಳು, ಕರ್ನಾಟಕ ಮುಕ್ತ ವಿಶ್ವವಿದ್ಯಾಲಯದಲ್ಲಿ 598 ಹುದ್ದೆಗಳು ಸೇರಿದಂತೆ ರಾಜ್ಯದ ವಿಶ್ವವಿದ್ಯಾಲಯಗಳಲ್ಲಿ 14,677 ಹುದ್ದೆಗಳು ಖಾಲಿ ಇವೆ. ಇಲ್ಲಿದೆ ರಾಜ್ಯದ ವಿವಿಧ ವಿಶ್ವವಿದ್ಯಾಲಯಗಳಲ್ಲಿ ಖಾಲಿ ಇರುವ ಹುದ್ದೆಗಳ ವಿವರ
ರಾಜಸ್ತಾನ್ : ರಾಜಸ್ಥಾನದ ಉದಯಪುರದಲ್ಲಿ ಚಲಿಸುವ ಕಾರಿನಲ್ಲಿ ಐಟಿ ಕಂಪನಿ ಮ್ಯಾನೇಜರ್ ಮೇಲೆ ಸಾಮೂಹಿಕ ಅತ್ಯಾಚಾರ ನಡೆದ ಘಟನೆ ಬೆಳಕಿಗೆ ಬಂದಿದೆ. ಹುಟ್ಟುಹಬ್ಬದ ಪಾರ್ಟಿ ಮುಗಿಸಿ ಬಂದ ನಂತರ ಸಂತ್ರಸ್ತೆಯನ್ನು ಸುರಕ್ಷಿತವಾಗಿ ಕಾರಿನಲ್ಲಿ ಕರೆದುಕೊಂಡು ಹೋಗುವುದಾಗಿ ಹೇಳಿ ಕಾರಿನೊಳಗೆ ಸೇರಿಸಲಾಗಿತ್ತು. ದಾರಿಯಲ್ಲಿ ಮಾದಕ ದ್ರವ್ಯ ನೀಡಿ ಸಾಮೂಹಿಕ ಅತ್ಯಾಚಾರ ನಡೆಸಲಾಗಿದೆ. ಕಂಪನಿಯ ಸಿಇಒ ಮತ್ತು ಮಹಿಳಾ ಕಾರ್ಯನಿರ್ವಾಹಕ ಮುಖ್ಯಸ್ಥೆ ಸೇರಿದಂತೆ ಮೂವರನ್ನು ಪೊಲೀಸರು ಬಂಧಿಸಿದ್ದಾರೆ. ಪೊಲೀಸರ ಪ್ರಕಾರ, ಈ ಘಟನೆ ಕಳೆದ ಶನಿವಾರ ನಡೆದಿದೆ. ಸಂತ್ರಸ್ತೆ ಉದಯಪುರದ ಖಾಸಗಿ ಐಟಿ ಕಂಪನಿಯಲ್ಲಿ ಮ್ಯಾನೇಜರ್ ಆಗಿ ಕೆಲಸ ಮಾಡುತ್ತಿದ್ದಾರೆ . ಶನಿವಾರ ರಾತ್ರಿ ಕಂಪನಿಗೆ ಸಂಬಂಧಿಸಿದ ಹುಟ್ಟುಹಬ್ಬದ ಪಾರ್ಟಿ ನಡೆಯುತ್ತಿತ್ತು. ಪಾರ್ಟಿ ಮುಗಿದು ಎಲ್ಲಾ ಅತಿಥಿಗಳು ನಿಧಾನವಾಗಿ ಹೊರಟುಹೋದ ನಂತರ, ಸಂತ್ರಸ್ತೆ ಒಬ್ಬಂಟಿಯಾಗಿ ಉಳಿದಿದ್ದಳು. ಆ ಸಮಯದಲ್ಲಿ, ಕಂಪನಿಯ ಮಹಿಳಾ ಕಾರ್ಯನಿರ್ವಾಹಕ ಮುಖ್ಯಸ್ಥರು ಅವಳನ್ನು ತನ್ನ ಕಾರಿನಲ್ಲಿ ಸುರಕ್ಷಿತವಾಗಿ ಮನೆಗೆ ಬಿಡಲು ಮುಂದಾದರು. ಮಹಿಳಾ ಕಾರ್ಯನಿರ್ವಾಹಕ ಮುಖ್ಯಸ್ಥೆ ಕಾರಿನಲ್ಲಿ ತನ್ನ ಪತಿ ಮತ್ತು…
ಬಿಹಾರ : ಬಿಹಾರದಲ್ಲಿ ಒಂದು ದೊಡ್ಡ ರೈಲ್ವೆ ಅಪಘಾತ ಸಂಭವಿಸಿದೆ. ಜಮುಯಿ ಜಿಲ್ಲೆಯ ಬಳಿ ಸಂಭವಿಸಿದ ಈ ಅಪಘಾತವು ಹಲವಾರು ರೈಲುಗಳ ಕಾರ್ಯಾಚರಣೆಯ ಮೇಲೆ ಪರಿಣಾಮ ಬೀರಿದೆ. ಪೂರ್ವ ರೈಲ್ವೆಯ ಅಸನ್ಸೋಲ್ ವಿಭಾಗದ ಜಸಿದಿಹ್-ಝಾಝಾ ಮುಖ್ಯ ಮಾರ್ಗದಲ್ಲಿ ಸಿಮೆಂಟ್ ಸಾಗಿಸುತ್ತಿದ್ದ ಸರಕು ರೈಲು ಹಳಿತಪ್ಪಿತು. ಸರಕು ರೈಲಿನ ಮೂರು ವ್ಯಾಗನ್ ಗಳು ಬತುವಾ ನದಿಗೆ ಬಿದ್ದವು. ವರದಿಗಳ ಪ್ರಕಾರ, ಜಸಿದಿಹ್-ಝಾಝಾ ಮುಖ್ಯ ಮಾರ್ಗದ ತೆಲ್ವಾ ಬಜಾರ್ ಹಾಲ್ಟ್ ಬಳಿಯ ಬತುವಾ ನದಿಯ ಮೇಲಿನ ಸೇತುವೆ ಸಂಖ್ಯೆ 676 ರಲ್ಲಿ ಅಪಘಾತ ಸಂಭವಿಸಿದೆ. ಜಸಿದಿಹ್ನಿಂದ ಮೇಲಿನ ಹಳಿಯಲ್ಲಿ ಚಲಿಸುತ್ತಿದ್ದ ಸಿಮೆಂಟ್ ಸಾಗಿಸುತ್ತಿದ್ದ ಸರಕು ರೈಲು ಇದ್ದಕ್ಕಿದ್ದಂತೆ ರೈಲಿಗೆ ಡಿಕ್ಕಿ ಹೊಡೆದಿದೆ ಎಂದು ವರದಿಯಾಗಿದೆ. ಸರಕು ರೈಲಿನ ಮೂರು ವ್ಯಾಗನ್ಗಳು ಸೇತುವೆಯಿಂದ ನದಿಗೆ ಬಿದ್ದವು, ಆದರೆ ಎರಡು ಸೇತುವೆಯ ಮೇಲೆಯೇ ರೈಲಿನಿಂದ ಬೇರ್ಪಟ್ಟವು. ಸರಕು ರೈಲಿನ ಒಂದು ಡಜನ್ ವ್ಯಾಗನ್ಗಳು ಪರಸ್ಪರ ಡಿಕ್ಕಿ ಹೊಡೆದು ಜಸಿದಿಹ್-ಝಾಝಾ ಮುಖ್ಯ ಮಾರ್ಗದ ಕೆಳಗಿನ ಹಳಿಯಲ್ಲಿ ಕೊನೆಗೊಂಡಿತು. ಅಪಘಾತದ…
ಬಳ್ಳಾರಿ ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿನ ನಾಮಫಲಕ, ಜಾಹೀರಾತುಗಳಲ್ಲಿ ಶೇ.60 ರಷ್ಟು ಕನ್ನಡ ಭಾಷೆ ಕಡ್ಡಾಯವಾಗಿ ಬಳಸಬೇಕು ಎಂದು ಮಹಾನಗರ ಪಾಲಿಕೆ ಆಯುಕ್ತ ಪಿ.ಎಸ್.ಮಂಜುನಾಥ ಅವರು ತಿಳಿಸಿದ್ದಾರೆ. ಪಾಲಿಕೆ ವ್ಯಾಪ್ತಿಯಲ್ಲಿರುವ ಉದ್ದಿಮೆದಾರರ ನಾಮಫಲಕಗಳಲ್ಲಿ ಹಾಗೂ ಜಾಹೀರಾತು ಮಾಲೀಕರು ಮುದ್ರಣ ಮಾಡುವ ಜಾಹೀರಾತುಗಳಲ್ಲಿ ಕಡ್ಡಾಯವಾಗಿ ಶೇ.60 ರಷ್ಟು ಕನ್ನಡ ಭಾಷೆಯನ್ನು ಬಳಸಬೇಕು. ತಪ್ಪಿದಲ್ಲಿ ಉದ್ದಿಮೆಗಳ ಹಾಗೂ ಮುದ್ರಣ ಮಾಡುವ ಜಾಹೀರಾತು ಮಾಲೀಕರ ಪರವಾನಿಗೆಗಳನ್ನು ರದ್ದುಪಡಿಸಿ ಉದ್ದಿಮೆಯನ್ನು ಸ್ಥಗಿತಗೊಳಿಸಲು ಕ್ರಮ ವಹಿಸಲಾಗುವುದು ಎಂದು ಅವರು ಎಚ್ಚರಿಸಿದ್ದಾರೆ. ಕರ್ನಾಟಕ ರಾಜ್ಯದಲ್ಲಿ ಕನ್ನಡವು ಆಡಳಿತ ಭಾಷೆಯಾಗಿದ್ದು, ಎಲ್ಲಾ ಉದ್ದಿಮೆಗಳ ನಾಮಫಲಕಗಳಲ್ಲಿ ಹಾಗೂ ಜಾಹೀರಾತು ಮುದ್ರಣದಾರರು ಜಾಹೀರಾತು ಮುದ್ರಿಸುವ ಸಮಯದಲ್ಲಿ ಶೇಕಡ 60 ರಷ್ಟು ಕನ್ನಡ ಭಾಷೆಯನ್ನು ಕಡ್ಡಾಯವಾಗಿ ಬಳಸಲು ಸರ್ಕಾರದಿಂದ ಕಾಯ್ದೆ ಜಾರಿಯಾಗಿದೆ. ಹಾಗಾಗಿ ಸರ್ಕಾರದ ಆದೇಶದನ್ವಯ ಯಾವುದೇ ಉದ್ದಿಮೆಯ ಹಾಗೂ ಮುದ್ರಣ ಮಾಡುವ ಜಾಹೀರಾತುಗಳಲ್ಲಿ ಮಾಲೀಕರು ಪ್ರಧಾನವಾಗಿ ಶೇಕಡ 60 ರಷ್ಟು ಸ್ಥಳ ಮೀಸಲಿರಿಸಿ ಕನ್ನಡದಲ್ಲಿರತಕ್ಕದ್ದು. ನಾಮಫಲಕದಲ್ಲಿ ಕನ್ನಡ ಭಾಷೆ ನಾಮಫಲಕದ ಮೇಲ್ಭಾಗದಲ್ಲಿ ಪ್ರದರ್ಶಿತವಾಗುವಂತೆ ಹಾಗೂ ಅನ್ಯಭಾಷೆಯ…
ಬೆಂಗಳೂರು : ಬೆಂಗಳೂರಿನಲ್ಲಿ ಯುವತಿಯರಿಗೆ ಬೀದಿ ಪುಂಡರು ಕಿರುಕುಳ ನೀಡಿದ ಘಟನೆಗೆ ಸಂಬಂಧಿಸಿದಂತೆ ಇದೀಗ ಮೂವರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಜಯನಗರದಿಂದ ಬಿಟಿಎಂ ಲೇಔಟ್ ಕಡೆಗೆ ಪ್ರಯಾಣಿಸುತ್ತಿದ್ದ ಯುವತಿಗೆ ಕಿಡಿಗೇಡಿಗಳು ಫಾಲೋ ಮಾಡಿ ಕಿರುಕುಳ ನೀಡಿದ್ದಾರೆ. ಸುಮಾರು 2 ಕಿಲೋಮೀಟರ್ ವರೆಗೂ ಯುವತಿಯನ್ನು ಪುಂಡರು ಫಾಲೋ ಮಾಡಿದ್ದಾರೆ. ಒಂದೇ ಬೈಕ್ ನಲ್ಲಿ ಮೂವರು ಪುಂಡರು ಯುವತಿಯನ್ನು ಫಾಲೋ ಮಾಡಿ ಕಿರುಕುಳ ನೀಡಿದ್ದಾರೆ. ಯುವತಿ ಸ್ಕೂಟಿ ಮೇಲೆ ತೆರಳುತ್ತಿದ್ದರೆ. ಕಾರಿನಲ್ಲಿ ಹಿಂದೆ ಬರುತ್ತಿದ್ದ ವ್ಯಕ್ತಿ ಈ ವಿಡಿಯೋ ಸೆರೆ ಹಿಡಿದು ವಿಡಿಯೋ ಸಮೇತ ಪೊಲೀಸರಿಗೆ ಟ್ಯಾಗ್ ಮಾಡಿದ್ದಾರೆ. ಇದೀಗ ಪ್ರಕರಣಕ್ಕೆ ಸಂಬಂಧಿಸಿದಂತೆ ಬೆಂಗಳೂರು ಆಗ್ನೇಯ ವಿಭಾಗದ ಪೊಲೀಸರು ಅಪ್ರಾಪ್ತ ವಯಸ್ಕ ಸೇರಿ ಮೂವರು ಆರೋಪಿಗಳನ್ನು ಬಂಧಿಸಿದ್ದಾರೆ. ಬೆಂಗಳೂರಿನ ಕೋಳಿ ಅಂಗಡಿಯಲ್ಲಿ ಕೆಲಸ ಮಾಡುತ್ತಿರುವ ರೋಷನ್(19) ಮತ್ತು ಅಯಾನ್ (19) ಮತ್ತು ಸ್ಥಳೀಯ ಗ್ಯಾರೇಜ್ನಲ್ಲಿ ಕೆಲಸ ಮಾಡುವ ಅಪ್ರಾಪ್ತ ವಯಸ್ಕ ಎಂದು ಗುರುತಿಸಲಾಗಿದೆ. ಪ್ರಕರಣ ದಾಖಲಿಸಲಾಗಿದ್ದು, ಆರೋಪಿಗಳನ್ನು ನ್ಯಾಯಾಂಗ ಬಂಧನಕ್ಕೆ ಕಳುಹಿಸಲಾಗಿದೆ.
ಬೆಂಗಳೂರು : ಇತ್ತೀಚಿಗೆ ಮೊಟ್ಟೆಯಲ್ಲಿ ಕ್ಯಾನ್ಸರ್ ಕಾರಕ ಅಂಶ ಪತ್ತೆಯಾಗಿದೆ ಎಂದು ಸಾಮಾಜಿಕ ಜಾಲತಾಣದಲ್ಲಿ ವಿಡಿಯೋ ಒಂದು ಬಾರಿ ವೈರಲ್ ಆಗಿತ್ತು. ಅದರ ಬೆನ್ನಲ್ಲೆ ಅಲರ್ಟ್ ಆದ ಆರೋಗ್ಯ ಇಲಾಖೆ ಮೊಟ್ಟೆ ಟೆಸ್ಟ್ ಮಾಡಲು ಮುಂದಾಗಿದ್ದು, ಸಚಿವ ದಿನೇಶ್ ಗುಂಡೂರಾವ್ ವಿವಿಧ ಮಾದರಿ ಮೊಟ್ಟೆ ಟೆಸ್ಟ್ ನಡೆಸಲು ಅಧಿಕಾರಿಗಳಿಗೆ ಸೂಚನೆ ನೀಡಿದ್ದರು. ಇದೀಗ ಮೊಟ್ಟೆ ಸ್ಯಾಂಪಲ್ ರಿಪೋರ್ಟ್ ಬಹಿರಂಗ ಆಗಿದ್ದು ವರದಿಯಲ್ಲಿ ಮೊಟ್ಟೆ ಸೇವನೆ ಸುರಕ್ಷಿತ ಎಂದು ತಿಳಿದುಬಂದಿದೆ. 27 ಮೊಟ್ಟೆಗಳ ಸ್ಯಾಂಪಲ್ ಟೆಸ್ಟಿಗೆ ಆರೋಗ್ಯ ಇಲಾಖೆ ಒಳಪಡಿಸಿತ್ತು. ಇದೀಗ ವರದಿಯಲ್ಲಿ ಮೊಟ್ಟೆ ಸೇವನೆ ಸುರಕ್ಷಿತ ಎಂದು ವರದಿ ಬಂದಿದೆ. ಸುಮಾರು 60 ಆಯಾಮಗಳಲ್ಲಿ ಮೊಟ್ಟೆ ಟೆಸ್ಟ್ ಮಾಡಲಾಗಿತ್ತು. ಸ್ಯಾಂಪಲ್ ಸಂಗ್ರಹಿಸಿದ್ದ ಆಹಾರ ಸುರಕ್ಷತೆ ಮತ್ತು ಗುಣಮಟ್ಟ ಇಲಾಖೆ ಟೆಸ್ಟ್ ನಡೆಸಿತ್ತು. ಬೆಂಗಳೂರು ಸೇರಿ ರಾಜ್ಯಾದ್ಯಂತ ಸ್ಯಾಂಪಲ್ ಕಲೆಕ್ಟ್ ಮಾಡಲಾಗಿತ್ತು. ರಾಜ್ಯದಲ್ಲಿ 200 ಕ್ಕೂ ಹೆಚ್ಚು ಮೊಟ್ಟೆಗಳ ಸ್ಯಾಂಪಲ್ ಸಂಗ್ರಹಿಸಿದ್ದರು ರಾಜಧಾನಿ ಬೆಂಗಳೂರಿನಲ್ಲಿ 50 ಸ್ಯಾಂಪಲ್ ಕಲೆಕ್ಟ್ ಮಾಡಿದರು. ಇದರಲ್ಲಿ ಇಲಾಖೆಯ…
ಮುಂಬೈ: ಮಹಾರಾಷ್ಟ್ರ ಪೊಲೀಸರು ಬೆಂಗಳೂರಿನಲ್ಲಿ ಭರ್ಜರಿ ಕಾರ್ಯಾಚರಣೆ ನಡೆಸಿದ್ದು, ಬೆಂಗಳೂರಿನ ಮೂರು ಡ್ರಗ್ಸ್ ಫ್ಯಾಕ್ಟರಿಗಳ ಮೇಲೆ ದಾಳಿ ನಡೆಸಿ 56 ಕೋಟಿ ರೂಪಾಯಿ ಮೌಲ್ಯದ ಡ್ರಗ್ಸ್ ವಶಕ್ಕೆ ಪಡೆದುಕೊಂಡಿದ್ದಾರೆ. ಬೆಂಗಳೂರಿನಲ್ಲಿ ಪ್ರಶಾಂತ್ ನಡೆಸುತ್ತಿದ್ದ ಮೂರು ಡ್ರಗ್ಸ್ ಫ್ಯಾಕ್ಟರಿಗಳ ಮೇಲೆ ದಾಳಿ ನಡೆಸಿ 55.88 ಕೋಟಿ ರೂ. ಮೌಲ್ಯದ 17 ಕೆಜಿ ದ್ರವ ಮೆಫೆಡ್ರೋನ್, 4.10 ಕೆಜಿ ಘನ ಮೆಫೆಡ್ರೋನ್ ವಶಕ್ಕೆ ಪಡೆಯಲಾಗಿದೆ. ದಂಧೆ ನಡೆಸುತ್ತಿದ್ದ ಪ್ರಶಾಂತ್ ಪಾಟೀಲ್ ಮತ್ತು ರಾಜಸ್ಥಾನ ಮೂಲದ ಸೂರಜ್ ರಮೇಶ್ ಯಾದವ್, ಮಲ್ಖನ್ ರಾಮಲಾಲ್ ಬಿಷ್ಣೋಯಿನನ್ನು ಬಂಧಿಸಲಾಗಿದೆ. ಡಿಸೆಂಬರ್ 21ರಂದು ಮಹಾರಾಷ್ಟ್ರ ಮಾದಕ ದ್ರವ್ಯ ನಿಗ್ರಹ ಕಾರ್ಯಪಡೆ(ANTF) ಕೊಂಕಣ ವಿಭಾಗದ ಅಧಿಕಾರಿಗಳು ಮುಂಬೈನಲ್ಲಿ ದಾಳಿ ನಡೆಸಿ 1.5 ಕೋಟಿ ರೂಪಾಯಿ ಮೌಲ್ಯದ 1.5 ಕೆಜಿ ಮಾದಕ ದ್ರವ್ಯ ವಶಕ್ಕೆ ಪಡೆದುಕೊಂಡಿದ್ದರು. ಈ ವೇಳೆ ಅಬ್ದುಲ್ ಖಾದಿರ್ ಶೇಖ್ ಎಂಬುವನನ್ನು ಬಂಧಿಸಿದ್ದು, ಆತ ನೀಡಿದ ಮಾಹಿತಿ ಮೇರೆಗೆ ಬೆಳಗಾವಿ ಮೂಲದ ಪ್ರಶಾಂತ್ ಯಲ್ಲಪ್ಪ ಪಾಟೀಲ್ ನನ್ನ ಬಂಧಿಸಲಾಗಿದೆ. ಆತನನ್ನು…














