Author: kannadanewsnow57

ಬೆಂಗಳೂರು : ಯು.ಪಿ.ಎಸ್.ಸಿ ನಾಗರಿಕ ಸೇವೆ ಮತ್ತು ಬ್ಯಾಂಕಿಂಗ್ ಪಿ.ಒ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯಿಂದ 2025-26ನೇ ಸಾಲಿಗೆ ಉಚಿತ ಪರೀಕ್ಷಾ ಪೂರ್ವ ತರಬೇತಿ ನೀಡುತ್ತಿದ್ದು, ರಾಜ್ಯದ ಹಿಂದುಳಿದ ವರ್ಗಗಳ ಪ್ರವರ್ಗ-1, 2(ಎ), 3(ಎ) ಹಾಗೂ 3(ಬಿ) ಗಳಿಗೆ ಸೇರಿದ ಅರ್ಹ ಅಭ್ಯರ್ಥಿಗಳು ಆನ್-ಲೈನ್ ಮೂಲಕ ಮಾತ್ರ ಅರ್ಜಿಗಳನ್ನು ಸಲ್ಲಿಸಬಹುದಾಗಿರುತ್ತದೆ. ಈ ಹಿಂದೆ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯಿಂದ ಯಾವುದೇ ಸ್ಪರ್ಧಾತ್ಮಕ ಪರೀಕ್ಷೆಯ ಪರೀಕ್ಷಾ ಪೂರ್ವ ತರಬೇತಿ ಪಡೆದಿದ್ದಲ್ಲಿ, ಅಂತಹ ಅಭ್ಯರ್ಥಿಗಳು ಪುನಃ ಅರ್ಜಿ ಸಲ್ಲಿಸಲು ಮತ್ತು ತರಬೇತಿ ಪಡೆಯಲು ಅರ್ಹರಿರುವುದಿಲ್ಲ, ಕೇಂದ್ರ/ರಾಜ್ಯ ಸರ್ಕಾರದ/ಅನುದಾನಿತ ಸಂಸ್ಥೆಗಳಸಾರ್ವಜನಿಕ ಸ್ವಾಮತೆಗೆ ಒಳಪಟ್ಟ ಸಂಸ್ಥೆಗಳಲ್ಲಿನ ನೌಕರರು ಸದರಿ ಕಾರ್ಯಕ್ರಮದಡಿ ಅರ್ಜಿ ಸಲ್ಲಿಸಲು ಮತ್ತು ತರಬೇತಿ ಪಡೆಯಲು ಅರ್ಹರಿರುವುದಿಲ್ಲ. ಅಭ್ಯರ್ಥಿಯು ಕರ್ನಾಟಕದ ಖಾಯಂ ನಿವಾಸಿಯಾಗಿರಬೇಕು. ಯು.ಪಿ.ಎಸ್.ಸಿ ನಾಗರಿಕ ಸೇವೆ ಮತ್ತು ಬ್ಯಾಂಕಿಂಗ್ ಪಿ.ಒ ಸ್ಪರ್ಧಾತ್ಮಕ ಪರೀಕ್ಷೆಗಳ ಪರೀಕ್ಷಾ ಪೂರ್ವ ತರಬೇತಿಗೆ ಅಭ್ಯರ್ಥಿಗಳು ಒಂದೇ ಅರ್ಜಿಯನ್ನು ಸಲ್ಲಿಸುವುದು. ಒಬ್ಬ ಅಭ್ಯರ್ಥಿಗೆ ಒಂದು ತರಬೇತಿಯನ್ನು ಮಾತ್ರ ಪಡೆಯಲು”…

Read More

ಬೆಂಗಳೂರು: ಕ್ರಿಮಿನಲ್ ಕೇಸ್ ಗಳನ್ನು ಹಿಂಪಡೆಯಲು ನಿರ್ಧರಿಸಿದ್ದ ರಾಜ್ಯ ಸರ್ಕಾರದ ಕ್ರಮಕ್ಕೆ ಹಿನ್ನಡೆಯಾಗಿದ್ದು, 43 ಕ್ರಿಮಿನಲ್ ಪ್ರಕರಣಗಳನ್ನು ಹಿಂಪಡೆಯಲು ಆದೇಶ ನೀಡಿದ್ದ ರಾಜ್ಯ ಸರ್ಕಾರದ ಆದೇಶವನ್ನು ಹೈಕೋರ್ಟ್ ರದ್ದು ಮಾಡಿದೆ. ಹುಬ್ಬಳ್ಳಿ ಗಲಭೆ ಪ್ರಕರಣದ ಕೇಸ್ ಸೇರಿದಂತೆ 43 ಕ್ರಿಮಿನಲ್ ಕೇಸ್ ಗಳನ್ನು ಹಿಂಪಡೆಯಲು ರಾಜ್ಯ ಸರ್ಕಾರ ಮುಂದಾಗಿ, ಆದೇಶ ಹೊರಡಿಸಿತ್ತು.ಇದೀಗಸರ್ಕಾರದ 2024ರ ಅ.15ರ ಆದೇಶವನ್ನು ರದ್ದುಗೊಳಿಸಿ ಹೈಕೋರ್ಟ್ ಆದೇಶ ಹೊರಡಿಸಿದೆ ಸರ್ಕಾರದ ಕ್ರಮ ಪ್ರಶ್ನಿಸಿ ಗಿರೀಶ್ ಭಾರದ್ವಾಜ್ ಎಂಬುವವರು ಹೈಕೋರ್ಟ್ ನಲ್ಲಿ ಪಿಐಎಲ್ ಸಲ್ಲಿಸಿದ್ದರು. ಅರ್ಜಿ ವಿಚಾರಣೆ ನಡೆಸಿದ ಸಿಜೆ ಎನ್.ವಿ.ಅಂಜಾರಿಯಾ, ನ್ಯಾ.ಕೆ.ವಿ.ಅರವಿಂದ್ ಅವರಿದ್ದ ಪೀಠ, ಸರ್ಕಾರದ ಆದೇಶವನ್ನು ರದ್ದು ಮಾಡಿದೆ.

Read More

ಬೆಂಗಳೂರು : ಕಲಬುರಗಿ ಡಿಸಿ ವಿರುದ್ದ ವಿವಾದಾತ್ಮಕ ಹೇಳಿಕೆ ನೀಡಿದ್ದ ಆರೋಪದ ಹಿನ್ನೆಲೆಯಲ್ಲಿ ಬಿಜೆಪಿ ನಾಯಕರಾದ ಛಲವಾದಿ ನಾರಾಯಣಸ್ವಾಮಿ ಹಾಗೂ ಎನ್. ರವಿಕುಮಾರ್ ವಿರುದ್ಧ ದೂರು ದಾಖಲಾಗಿದೆ. ಕಲಬುರಗಿ ಡಿಸಿ ವಿರುದ್ಧ ಎನ್ ರವಿಕುಮಾರ್ ಅವರು ವಿವಾದಾತ್ಮಕ ಹೇಳಿಕೆ ನೀಡಿದ್ದರು. ಛಲವಾದಿ ನಾರಾಯಣಸ್ವಾಮಿ ಅವರು ಪ್ರಿಯಂಕ್ ಖರ್ಗೆ ವಿರುದ್ಧ ಆಕ್ಷೇಪರ್ಹ ಹೇಳಿಕೆ ನೀಡಿದ್ದರು. ಈ ಹಿನ್ನೆಲೆಯಲ್ಲಿ ಇಬ್ಬರ ವಿರುದ್ಧ ಕಾಂಗ್ರೆಸ್ ನ ಪರಿಷತ್ ಸದಸ್ಯರು ಪ್ರತ್ಯೇಕ ದೂರು ನೀಡಿದ್ದಾರೆ.

Read More

ಬೆಂಗಳೂರು :ಕರ್ನಾಟಕ ರಾಜ್ಯದಲ್ಲಿ ಹೊಸದಾಗಿ ವಿಶೇಷ ಕಾರ್ಯಪಡೆಯನ್ನು (Special Action Force) ಸ್ಥಾಪಿಸಿ ರಾಜ್ಯ ಸರ್ಕಾರ ಮಹತ್ವದ ಆದೇಶ ಹೊರಡಿಸಿದೆ. ಮೇಲೆ ಓದಲಾದ (1)ರ ಆದೇಶದಲ್ಲಿ, ರಾಜ್ಯದಲ್ಲಿ ನಕ್ಸಲೈಟ್ ಚಟುವಟಿಕೆಗಳ ನಿಗ್ರಹಕ್ಕಾಗಿ Anti Naxal Force (ANF) ಅನ್ನು ಸೃಜಿಸಿ ಆದೇಶಿಸಲಾಗಿದೆ. ಮೇಲೆ ಓದಲಾದ (2)ರ ಪತ್ರದಲ್ಲಿ ಮಹಾ ನಿರ್ದೇಶಕರು ಮತ್ತು ಆರಕ್ಷಕ ಮಹಾನಿರೀಕ್ಷಕರು ಇವರು ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಿ, ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳು ತುಳು, ಕೊಂಕಣಿ ಮುಂತಾದ ವಿಶಿಷ್ಟ ಭಾಷೆಗಳು ಮತ್ತು ಅದರ ಸಾಂಸ್ಕೃತಿಕ ಪರಂಪರೆಯಿಂದ ಗುರುತನ್ನು ರೂಪಿಸಿದ್ದು, ಜನರಲ್ಲಿ ಆಳವಾದ ಸಮುದಾಯದ ಪ್ರಜ್ಞೆ ಮತ್ತು ಪ್ರಾದೇಶಿಕ ಹೆಮ್ಮೆಯನ್ನು ಬೆಳೆಸುತ್ತಿದ್ದು, ದಕ್ಷಿಣ ಕನ್ನಡ ಜಿಲ್ಲೆಯು ಸಾಂಪ್ರದಾಯಿಕವಾಗಿ ಉನ್ನತ ಮಟ್ಟದ ಶಿಕ್ಷಣ ಮತ್ತು ಸಾಕ್ಷರತೆಯೊಂದಿಗೆ ಸ್ಥಿರವಾದ ಆರ್ಥಿಕ ಪ್ರಗತಿಯನ್ನು ಕಂಡಿದ್ದು, ಇದರ ಹೊರತಾಗಿಯೂ ದಕ್ಷಿಣ ಕನ್‌ನಡ ಮತ್ತು ಉಡುಪಿ ಜಿಲ್ಲೆಗಳಲ್ಲಿ ಪ್ರಸ್ತುತ ಕೋಮು ಸಂವೇದನೆಗಳು ಹೆಚ್ಚಾಗುತ್ತಿದ್ದು, ಸಣ್ಣ ಘಟನೆಗಳು ಸಹ ಪ್ರಮುಖ ಕಾನೂನು ಮತ್ತು ಸುವ್ಯವಸ್ಥೆಯ ಸವಾಲುಗಳಾಗಿ ತ್ವರಿತವಾಗಿ…

Read More

ನವದೆಹಲಿ : ಚೀನಾದಲ್ಲಿ ಕಂಡುಬರುವ ಕೋವಿಡ್ -19 ನ ಹೊಸ ರೂಪಾಂತರವು ಪ್ರಪಂಚದ ಕೆಲವು ಭಾಗಗಳಲ್ಲಿ ವೇಗವಾಗಿ ಹೆಚ್ಚುತ್ತಿದೆ ಮತ್ತು ಪ್ರಸ್ತುತ ಆಗ್ನೇಯ ಏಷ್ಯಾ, ಪಶ್ಚಿಮ ಪೆಸಿಫಿಕ್ ಪ್ರದೇಶ ಮತ್ತು ಮೆಡಿಟರೇನಿಯನ್ ಪ್ರದೇಶಗಳಲ್ಲಿ ಹರಡುತ್ತಿದೆ ಎಂದು ವಿಶ್ವ ಆರೋಗ್ಯ ಸಂಸ್ಥೆ (WHO) ಜನರನ್ನು ಎಚ್ಚರಿಸಿದೆ. NB.1.8.1 ಎಂಬ ಹೊಸ ರೂಪಾಂತರದಿಂದಾಗಿ ಇತ್ತೀಚಿನ ದಿನಗಳಲ್ಲಿ ಚೀನಾದಲ್ಲಿ ಕರೋನಾ ಹರಡುವಿಕೆ ಮತ್ತೆ ಹೆಚ್ಚಾಗಿದೆ ಎಂದು WHO ಅಧಿಕಾರಿಗಳು ತಿಳಿಸಿದ್ದಾರೆ. ಈ ಹೊಸ ರೂಪಾಂತರವು ಯುಎಸ್‌ನಲ್ಲಿ ಪತ್ತೆಯಾಗಿದೆ ಎಂದು ಯುಎಸ್ ಸೆಂಟರ್ಸ್ ಫಾರ್ ಡಿಸೀಸ್ ಕಂಟ್ರೋಲ್ ಅಂಡ್ ಪ್ರಿವೆನ್ಷನ್ (CDC) ದಿ ಎಪೋಚ್ ಟೈಮ್ಸ್‌ಗೆ ತಿಳಿಸಿದೆ. ಆದಾಗ್ಯೂ, ಇಲ್ಲಿಯವರೆಗೆ ಅದರ ಸುಮಾರು 20 ಅನುಕ್ರಮಗಳು ಕಂಡುಬಂದಿವೆ. WHO ಕಳವಳ ವ್ಯಕ್ತಪಡಿಸಿದೆ ಕೋವಿಡ್ -19 ವೈರಸ್‌ನ ಪ್ರಕರಣಗಳು ಮತ್ತೆ ಹೆಚ್ಚುತ್ತಿರುವ ಬಗ್ಗೆ ವಿಶ್ವ ಆರೋಗ್ಯ ಸಂಸ್ಥೆ ಕಳವಳ ವ್ಯಕ್ತಪಡಿಸಿದೆ. WHO ಪ್ರಕಾರ, ಫೆಬ್ರವರಿ 2025 ರ ಮಧ್ಯಭಾಗದಿಂದ ವಿಶ್ವಾದ್ಯಂತ SARS-CoV-2 ವೈರಸ್‌ನ ಚಟುವಟಿಕೆಯಲ್ಲಿ ಹೆಚ್ಚಳ ಕಂಡುಬಂದಿದೆ. WHO…

Read More

ಬೆಂಗಳೂರು : ರಾಜ್ಯದಲ್ಲಿ ಕೋಮು ಗಲಭೆಯಲ್ಲಿ ಭಾಗಿಯಾಗುವವರು ಎಷ್ಟೇ ಪ್ರಭಾವಿಗಳಾಗಿದ್ದರೂ ಕಠಿಣ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಸಿಎಂ ಸಿದ್ದರಾಮಯ್ಯ ಎಚ್ಚರಿಕೆ ನೀಡಿದ್ದಾರೆ. ಬಿ.ಕೆ.ಹರಿಪ್ರಸಾದ್ ಅವರ ಭೇಟಿಯ ನಂತರ ಮಾಧ್ಯಮಗಳಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರತಿಕ್ರಿಯೆ ನೀಡಿದರು. ವಿಧಾನ ಪರಿಷತ್ ಸದಸ್ಯರಾದ ಬಿ.ಕೆ.ಹರಿಪ್ರಸಾದ್ ಅವರು ಕರಾವಳಿ ಜಿಲ್ಲೆಯವರು, ಅಲ್ಲಿನ ರಾಜಕೀಯ ಮತ್ತು ಸಾಮಾಜಿಕ ಸೂಕ್ಷ್ಮತೆಗಳನ್ನು ಅರಿತವರು. ಕಳೆದ ಕೆಲವು ದಿನಗಳಿಂದ ಕರಾವಳಿ ಜಿಲ್ಲೆಗಳಲ್ಲಿ ಕೋಮು ವೈಷಮ್ಯ ಹೆಚ್ಚಾಗಿರುವ ಹಿನ್ನೆಲೆಯಲ್ಲಿ ಇಂದು ಅವರ ಜೊತೆ ಉಪಹಾರ ಸೇವಿಸುತ್ತಾ, ಕೆಲವು ಸಾಮಾನ್ಯ ವಿಷಯಗಳ ಜೊತೆಗೆ ಕರಾವಳಿ ಜಿಲ್ಲೆಗಳಲ್ಲಿ ದ್ವೇಷ ತೊಡೆದುಹಾಕಿ ಸೌಹಾರ್ದತೆ ನೆಲೆಗೊಳಿಸುವ ಕುರಿತು ಚರ್ಚಿಸಿದ್ದೇನೆ. ರಾಜ್ಯದಲ್ಲಿ ಕೋಮು ಗಲಭೆಗಳನ್ನು ಉಂಟುಮಾಡುವವರು ಎಷ್ಟೇ ಪ್ರಭಾವಿಗಳಾಗಿದ್ದರೂ ಕೂಡ ಕಾನೂನಿನ ರೀತಿ ಕಠಿಣ ಕ್ರಮ ಕೈಗೊಳ್ಳಲಾಗುವುದು. ಯಾರೂ ಕಾನೂನಿಗಿಂತ ದೊಡ್ಡವರಲ್ಲ ಎಂದರು. https://twitter.com/siddaramaiah/status/1927988761796755819?ref_src=twsrc%5Etfw%7Ctwcamp%5Etweetembed%7Ctwterm%5E1927988761796755819%7Ctwgr%5Eb33062d04412693a37bfde29c09a7b4046b0c3b7%7Ctwcon%5Es1_c10&ref_url=https%3A%2F%2Fkannadadunia.com%2Fstrict-legal-action-will-be-taken-against-those-involved-in-communal-riots-in-the-state-no-matter-how-influential-they-are-cm-siddaramaiah-warns%2F

Read More

ಬೇಸಿಗೆ ಕಾಲ ಆರಂಭವಾಗಿದ್ದು, ಹಲವು ಪ್ರದೇಶಗಳಲ್ಲಿ ತೀವ್ರ ಬಿಸಿಲು ಇದೆ. ಮನೆಗಳಲ್ಲಿ ಎಸಿ, ಫ್ಯಾನ್‌ಗಳು ಮತ್ತು ಕೂಲರ್‌ಗಳು ಉರಿಯುತ್ತಿವೆ. ಬೇಸಿಗೆಯಲ್ಲಿ ಶಾರ್ಟ್ ಸರ್ಕ್ಯೂಟ್ ಪ್ರಕರಣಗಳು ಹೆಚ್ಚಾಗುತ್ತವೆ. ಇತ್ತೀಚೆಗೆ, ಹವಾನಿಯಂತ್ರಣಗಳಲ್ಲಿ ಸ್ಫೋಟದ ಪ್ರಕರಣಗಳು ಸಹ ವರದಿಯಾಗಿವೆ. ಬೇಸಿಗೆಯಲ್ಲಿ, ತಾಪಮಾನವು 44 ರಿಂದ 45 ಡಿಗ್ರಿ ಸೆಲ್ಸಿಯಸ್‌ಗೆ ತಲುಪಿದಾಗ, ಎಸಿ, ಫ್ಯಾನ್‌ಗಳು, ಕೂಲರ್‌ಗಳು 18 ರಿಂದ 20 ಗಂಟೆಗಳ ಕಾಲ ಕಾರ್ಯನಿರ್ವಹಿಸುತ್ತವೆ. ಅಂತಹ ಪರಿಸ್ಥಿತಿಯಲ್ಲಿ, ಅವುಗಳ ಶಾರ್ಟ್ ಸರ್ಕ್ಯೂಟ್‌ನ ಸಾಧ್ಯತೆ ಹೆಚ್ಚಾಗುತ್ತದೆ. ಇದು ಅಪಾಯಕಾರಿ. ಅಂತಹ ಪರಿಸ್ಥಿತಿಯಲ್ಲಿ, ಬೇಸಿಗೆಯಲ್ಲಿ ಕೆಲವು ವಿಷಯಗಳನ್ನು ಮನಸ್ಸಿನಲ್ಲಿಟ್ಟುಕೊಳ್ಳಬೇಕು. ಕಂಪ್ರೆಸರ್ ಅತಿಯಾಗಿ ಬಿಸಿಯಾಗುವುದು: ಶಾಖವು ಹೇಗೆ ಹೆಚ್ಚುತ್ತಿದೆಯೋ, ಅದನ್ನು ತಪ್ಪಿಸಲು ಜನರು ಎಸಿಯನ್ನು ಬಳಸುತ್ತಾರೆ. ಅದೇ ಸಮಯದಲ್ಲಿ, ಅನೇಕ ಜನರು ದೀರ್ಘಕಾಲದವರೆಗೆ ಅಂದರೆ ಇಡೀ ದಿನ ಎಸಿಯನ್ನು ಬಳಸುತ್ತಾರೆ. ಅಂತಹ ಪರಿಸ್ಥಿತಿಯಲ್ಲಿ, ಎಸಿಯನ್ನು ದೀರ್ಘಕಾಲದವರೆಗೆ ಚಲಾಯಿಸುವುದರಿಂದ ಕಂಪ್ರೆಸರ್ ಅತಿಯಾಗಿ ಬಿಸಿಯಾಗಬಹುದು, ಇದರಿಂದಾಗಿ ಎಸಿ ಸ್ಫೋಟಗೊಳ್ಳಬಹುದು ಎಂದು ತಿಳಿಯಿರಿ. ಆದ್ದರಿಂದ, ನಡುವೆ ಸ್ವಲ್ಪ ಸಮಯದವರೆಗೆ ಎಸಿಯನ್ನು ಆಫ್ ಮಾಡಬೇಕು.  ಅನಿಲ ಸೋರಿಕೆ:…

Read More

ಬೆಂಗಳೂರು : ರಾಜ್ಯದಲ್ಲಿ ಕೋಮುಗಲಭೆ, ಹತ್ಯೆಗಳು ಹೆಚ್ಚಳವಾಗುತ್ತಿರುವ ಹಿನ್ನೆಲೆಯಲ್ಲಿ ಹೊಸದಾಗಿ ವಿಶೇಷ ಕಾರ್ಯಪಡೆ ರಚನೆಗೆ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಕೋಮುಗಲಭೆ, ಹತ್ಯೆಗಳು ಹೆಚ್ಚಳವಾಗಿರುವ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರವು ಶಿವಮೊಗ್ಗ, ದಕ್ಷಿಣ ಕನ್ನಡ, ಉಡುಪಿಯಲ್ಲಿ ವಿಶೇಷ ಕಾರ್ಯಪಡೆ ರಚನೆಗೆ ಆದೇಶ ಹೊರಡಿಸಿದೆ.

Read More

ಹಾಸನ : ಯುವಜನರಲ್ಲಿ ಹೃದಯಾಘಾತದ ಪ್ರಕರಣಗಳು ಹೆಚ್ಚಳವಾಗುತ್ತಿದ್ದು,ಕಳೆದ ಒಂದು ವಾರದಲ್ಲಿ ರಾಜ್ಯದಲ್ಲಿ ಹೃದಯಾಘಾತಕ್ಕೆ ಮೂವರು ಬಲಿಯಾಗಿದ್ದಾರೆ. 1.ಹಾಸನದಲ್ಲಿ ಪದವಿ ವಿದ್ಯಾರ್ಥಿ ಹೃದಯಾಘಾತದಿಂದ ಸಾವು. ಅಂತಿಮ ವರ್ಷದ ಪದವಿ ವಿದ್ಯಾರ್ಥಿನಿ ಹೃದಯಾಘಾತದಿಂದ ಸಾವನ್ನಪ್ಪಿದ ಘಟನೆ ಹಾಸನ ತಾಲೂಕಿನ ಕೆಲವತ್ತಿ ಗ್ರಾಮದಲ್ಲಿ ನಡೆದಿದೆ. ಕೆಲವತ್ತಿ ಗ್ರಾಮದ ಪಾಪಣ್ಣ ಹಾಗೂ ಗಾಯತ್ರಿ ದಂಪತಿ ಪುತ್ರಿ ಕವನ ಕೆ.ವಿ (21) ಮೃತ ವಿದ್ಯಾರ್ಥಿನಿ. ಮನೆಗೆ ನೀರು ತಂದ ಕವನಗೆ ದಿಢೀರ್ ಎದೆನೋವು ಕಾಣಿಸಿಕೊಂಡಿದೆ. ಈ ವೇಳೆ ಕವನ ತಾಯಿ ಬಳಿ ಕುಡಿಯಲು ನೀರು ಕೇಳಿದ್ದಾಳೆ. ತಾಯಿ ನೀರು ತಂದು ಕೊಡುವಷ್ಟರಲ್ಲಿ ಕವನ ಮನೆಯಲ್ಲಿಯೇ ಕುಸಿದು ಬಿದ್ದಿದ್ದಳು. ಕೂಡಲೇ ಪೋಷಕರು ಆಕೆಯನ್ನು ಹಾಸನದ ಖಾಸಗಿ ಆಸ್ಪತ್ರೆಗೆ ಕರೆತಂದಿದ್ದಾರೆ. ಅಷ್ಟರಲ್ಲಾಗಲೇ ಕವನ ಮೃತಪಟ್ಟಿದ್ದರು. 2.ಹಾಸನದಲ್ಲಿ ಕುಸಿದುಬಿದ್ದು ಯುವತಿ ಸಾವು ಹಾಸನ : ಬಾತ್ ರೂಂನಲ್ಲೇ ಕುಸಿದುಬಿದ್ದು ಹೃದಯಾಘಾತದಿಂದ ಯುವತಿ ಸಾವನ್ನಪ್ಪಿದ ಘಟನೆ ಹೊಳೆನರಸೀಪುರ ಪಟ್ಟಣದಲ್ಲಿ ನಡೆದಿದೆ. ಮೃತಳನ್ನು ಸಂಧ್ಯಾ (19) ಎಂದು ಗುರುತಿಸಲಾಗಿದೆ. ಮಡಿವಾಳ ಬಡಾವಣೆ ನಿವಾಸಿಯಾದ ವೆಂಕಟೇಶ್ ಹಾಗೂ…

Read More

ಬೆಂಗಳೂರು: ಕನ್ನಡ ಹುಟ್ಟಿದ್ದು ತಮಿಳಿನಿಂದ ಎಂದು ಹೇಳಿಕೆ ನೀಡಿರುವ ನಟ ಕಮಲ್ ಹಾಸನ್ ಅವರ ಸಿನಿಮಾಗಳನ್ನು ಕರ್ನಾಟಕದಲ್ಲಿ ನಿಷೇಧಿಸುವಂತೆ ವಾಣಿಜ್ಯ ಮಂಡಳಿಗೆ ಪತ್ರ ಬರೆಯಲಾಗುವುದು ಎಂದು ಸಚಿವ ಶಿವರಾಜ್ ತಂಗಡಗಿ ಹೇಳಿದ್ದಾರೆ. ಈ ಕುರಿತು ಮಾತನಾಡಿರುವ ಅವರು, ಕನ್ನಡದ ನೆಲ, ಜಲ, ಭಾಷೆ ವಿಚಾರದಲ್ಲಿ ಯಾವುದೇ ದೊಡ್ಡ ವ್ಯಕ್ತಿ ಇದ್ದರೂ ಅದನ್ನು ಸಹಿಸುವ ಪ್ರಶ್ನೆಯೇ ಇಲ್ಲ. ಕಮಲ್ ಹಾಸನ್ ಅವರು ಕೂಡಲೇ ರಾಜ್ಯದ ಜನರ ಕ್ಷಮೆಯಾಚಿಸಬೇಕು. ಕನ್ನಡದ ಹಲವು ಚಿತ್ರಗಳಲ್ಲಿ ಕಮಲ್‌ ಹಾಸನ್‌ ಅವರು ನಟನೆ ಮಾಡಿದ್ದಾರೆ.  ಓರ್ವ ಹಿರಿಯ ನಟ ಈ ರೀತಿ ಹೇಳಿಕೆ ನೀಡುವುದು ಸರಿಯಲ್ಲ. ಅವರ ಚಿತ್ರಗಳಿಗೆ ರಾಜ್ಯದಲ್ಲಿ ಬಿಡುಗಡೆಗೆ ನಿಷೇಧ ಏರುವಂತೆ ಚಲನಚಿತ್ರ ವಾಣಿಜ್ಯ ಮಂಡಳಿಗೆ ಪತ್ರ ಬರೆಯಲಾವುದು. ನಟನೆ ಮಾಡಲು ಹಾಗೂ ಹಣ ಸಂಪಾದನೆ ಮಾಡಲು ನಮ್ಮ ಭಾಷೆ ಬೇಕು. ಇದೀಗ ಪುಕ್ಕಟೆ ಪ್ರಚಾರಕ್ಕೆ ಮಾತನಾಡುವುದೇ ? ಈ ಹಿಂದೆ ಸೋನು ನಿಗಮ್‌ಗೆ ಅವರು ಇದೇ ರೀತಿ ಕನ್ನಡಿಗರ ಬಗ್ಗೆ ಮಾತನಾಡಿ, ಬಳಿಕ ಎಚ್ಚೆತ್ತು…

Read More