Subscribe to Updates
Get the latest creative news from FooBar about art, design and business.
Author: kannadanewsnow57
ನವದೆಹಲಿ: ಕರ್ನಾಟಕ ರಾಜ್ಯ ರಾಜಕಾರಣದಲ್ಲಿ ಭಾರಿ ಸಂಚಲನ ಮೂಡಿಸುವ ಮಹತ್ವದ ಬೆಳವಣಿಗೆಯೊಂದರಲ್ಲಿ, ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ (KPCC) ನೂತನ ಅಧ್ಯಕ್ಷರಾಗಿ ಹಿರಿಯ ನಾಯಕ ಬಿ. ಕೆ. ಹರಿಪ್ರಸಾದ್ ಅವರನ್ನು ನೇಮಕ ಮಾಡಲಾಗಿದೆ. ಅಖಿಲ ಭಾರತ ಕಾಂಗ್ರೆಸ್ ಸಮಿತಿಯ (AICC) ಪ್ರಧಾನ ಕಾರ್ಯದರ್ಶಿ ಕೆ. ಸಿ. ವೇಣುಗೋಪಾಲ್ ಅವರು ಜೂನ್ 3, 2026 ರಂದು ನವದೆಹಲಿಯ ಅಕ್ಬರ್ ರಸ್ತೆಯಲ್ಲಿರುವ ಪಕ್ಷದ ಕಚೇರಿಯಿಂದ ಅಧಿಕೃತ ಪತ್ರಿಕಾ ಪ್ರಕಟಣೆ ಹೊರಡಿಸುವ ಮೂಲಕ ಈ ಆದೇಶವನ್ನು ತಿಳಿಸಿದ್ದಾರೆ. ಕಾಂಗ್ರೆಸ್ ರಾಷ್ಟ್ರೀಯ ಅಧ್ಯಕ್ಷರ ಸೂಚನೆಯ ಮೇರೆಗೆ ಈ ನೇಮಕಾತಿ ತಕ್ಷಣದಿಂದಲೇ ಜಾರಿಗೆ ಬರುವಂತೆ ಆದೇಶಿಸಲಾಗಿದೆ. ಇಷ್ಟು ದಿನಗಳ ಕಾಲ ಕೆಪಿಸಿಸಿ ಅಧ್ಯಕ್ಷರಾಗಿ ಸೇವೆ ಸಲ್ಲಿಸಿದ ನಿರ್ಗಮಿತ ಅಧ್ಯಕ್ಷ ಶ್ರೀ ಡಿ. ಕೆ. ಶಿವಕುಮಾರ್ ಅವರ ಕೊಡುಗೆ ಮತ್ತು ಪಕ್ಷಕ್ಕಾಗಿ ಅವರು ಮಾಡಿದ ಕಾರ್ಯಗಳನ್ನು ಹೈಕಮಾಂಡ್ ಮುಕ್ತಕಂಠದಿಂದ ಶ್ಲಾಘಿಸಿದೆ ಹಾಗೂ ಧನ್ಯವಾದಗಳನ್ನು ಸಮರ್ಪಿಸಿದೆ. ರಾಜ್ಯದಲ್ಲಿ ಮುಂದಿನ ರಾಜಕೀಯ ಸಮೀಕರಣಗಳ ದೃಷ್ಟಿಯಿಂದ ಕಾಂಗ್ರೆಸ್ ಹೈಕಮಾಂಡ್ ತೆಗೆದುಕೊಂಡಿರುವ ಈ ನಿರ್ಧಾರವು ಅತ್ಯಂತ…
ಮುಂಬೈ: ಟೀಮ್ ಇಂಡಿಯಾದ ರನ್ ಮಷೀನ್, ಸ್ಟಾರ್ ಬ್ಯಾಟರ್ ವಿರಾಟ್ ಕೊಹ್ಲಿ ಮುಂಬರುವ ಅಫ್ಘಾನಿಸ್ತಾನ ವಿರುದ್ಧದ ಮೂರು ಪಂದ್ಯಗಳ ಏಕದಿನ (ODI) ಸರಣಿಯಿಂದ ಹೊರಬಿದ್ದಿದ್ದಾರೆ. ತೀವ್ರ ಸ್ನಾಯು ಸೆಳೆತದ (Hamstring Injury) ಸಮಸ್ಯೆಯಿಂದಾಗಿ ಅವರು ಈ ಸರಣಿಗೆ ಲಭ್ಯವಿರುವುದಿಲ್ಲ ಎಂದು ವರದಿಯಾಗಿದೆ. ಮೂಲಗಳ ಪ್ರಕಾರ, ಇತ್ತೀಚಿನ ಪಂದ್ಯದ ವೇಳೆ ಕೊಹ್ಲಿ ಅವರ ಕಾಲಿನ ಸ್ನಾಯುಗಳಿಗೆ ಗಾಯವಾಗಿದ್ದು, ವೈದ್ಯರ ಸಲಹೆಯ ಮೇರೆಗೆ ಅವರಿಗೆ ಸಂಪೂರ್ಣ ವಿಶ್ರಾಂತಿ ನೀಡಲಾಗಿದೆ. ಮುಂಬರುವ ಪ್ರಮುಖ ಸರಣಿಗಳನ್ನು ದೃಷ್ಟಿಯಲ್ಲಿಟ್ಟುಕೊಂಡು ಬಿಸಿಸಿಐ (BCCI) ಈ ನಿರ್ಧಾರ ಕೈಗೊಂಡಿದೆ ಎನ್ನಲಾಗಿದೆ. ಅಫ್ಘಾನಿಸ್ತಾನ ವಿರುದ್ಧದ ಸರಣಿಗೂ ಮುನ್ನವೇ ಕೊಹ್ಲಿ ಗಾಯಗೊಂಡಿರುವುದು ಭಾರತ ತಂಡಕ್ಕೆ ಭಾರಿ ಆಘಾತ ನೀಡಿದಂತಾಗಿದ್ದು, ಅವರ ಅನುಪಸ್ಥಿತಿಯಲ್ಲಿ ಮೂರನೇ ಕ್ರಮಾಂಕದಲ್ಲಿ ಯಾರು ಬ್ಯಾಟಿಂಗ್ ಮಾಡಲಿದ್ದಾರೆ ಎಂಬುದು ಈಗ ಕುತೂಹಲ ಮೂಡಿಸಿದೆ.
ಕೋಲಾರ: ಪತಿಯ ಅಕಾಲಿಕ ಸಾವಿನ ದುಃಖವನ್ನು ಸಹಿಸಿಕೊಳ್ಳಲಾಗದೆ ಮಾನಸಿಕವಾಗಿ ಕುಗ್ಗಿದ್ದ ಮಹಿಳೆಯೊಬ್ಬರು ತನ್ನ ಇಬ್ಬರು ಚಿಕ್ಕ ಮಕ್ಕಳನ್ನು ಹತ್ಯೆಗೈದಿರುವ ದುರ್ಘಟನೆ ಕೋಲಾರ ಜಿಲ್ಲೆಯ ಮುಳಬಾಗಿಲು ತಾಲೂಕಿನ ಆಲಂಗೂರು ಗ್ರಾಮದಲ್ಲಿ ನಡೆದಿದೆ. ಮೃತ ಮಕ್ಕಳನ್ನು ಸರಸ್ವತಿ (3) ಹಾಗೂ ಹೇಮಾಶ್ರೀ (1) ಎಂದು ಗುರುತಿಸಲಾಗಿದೆ. ಮಕ್ಕಳ ತಾಯಿ ಬುಜ್ಜಮ್ಮ (22) ಈ ಕೃತ್ಯ ಎಸಗಿದ ಬಳಿಕ ತಾನೂ ಆತ್ಮಹತ್ಯೆ ಮಾಡಿಕೊಳ್ಳಲು ಮುಂದಾಗಿದ್ದಳು. ಆದರೆ ಸಮಯಕ್ಕೆ ಸರಿಯಾಗಿ ಸ್ಥಳೀಯರು ಮಧ್ಯಪ್ರವೇಶಿಸಿ ಆಕೆಯನ್ನು ರಕ್ಷಿಸಿದ್ದಾರೆ. ಮೂಲತಃ ಆಂಧ್ರಪ್ರದೇಶದ ವಿನಾಯಕಪುರಂ ನಿವಾಸಿಗಳಾದ ಬಾಬು ಮತ್ತು ಬುಜ್ಜಮ್ಮ ದಂಪತಿ ಕಳೆದ ಒಂದು ವರ್ಷದಿಂದ ಆಲಂಗೂರು ಗ್ರಾಮದ ಮಾವಿನ ತೋಟವೊಂದರಲ್ಲಿ ಕೂಲಿ ಕೆಲಸ ಮಾಡಿಕೊಂಡು ಜೀವನ ಸಾಗಿಸುತ್ತಿದ್ದರು.ಆದರೆ ಸುಮಾರು 20 ದಿನಗಳ ಹಿಂದೆ ಸಂಭವಿಸಿದ ಅಪಘಾತದಲ್ಲಿ ಪತಿ ಬಾಬು ಮೃತಪಟ್ಟಿದ್ದರು. ಪತಿಯ ಸಾವಿನ ಬಳಿಕ ತೀವ್ರ ದುಃಖ ಮತ್ತು ಮಾನಸಿಕ ಒತ್ತಡಕ್ಕೆ ಒಳಗಾಗಿದ್ದ ಬುಜ್ಜಮ್ಮ ನಿಧಾನವಾಗಿ ಖಿನ್ನತೆಗೆ ಜಾರಿದ್ದಳು ಎಂದು ತಿಳಿದುಬಂದಿದೆ. ಪತಿಯ ಅಗಲಿಕೆಯ ನೋವಿನಿಂದ ಜೀವನದ ಮೇಲಿನ ಆಸಕ್ತಿ…
ಕರ್ನಾಟಕ ಸರ್ಕಾರದ ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆ ವತಿಯಿಂದ ಪರಿಶಿಷ್ಟ ಜಾತಿ (ಎಸ್ಸಿ) ಹಾಗೂ ಪರಿಶಿಷ್ಟ ಪಂಗಡ (ಎಸ್ಟಿ) ಸಮುದಾಯದ ನಿರುದ್ಯೋಗಿ ಯುವಕ-ಯುವತಿಯರಿಗೆ ಉಚಿತ ಲಘು ಮತ್ತು ಭಾರಿ ವಾಹನ ಚಾಲನಾ ತರಬೇತಿ ನೀಡಲು ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಜಿಲ್ಲಾ ಕೌಶಲ್ಯಾಭಿವೃದ್ಧಿ ಅಧಿಕಾರಿಗಳ ಕಚೇರಿ ಹಾಗೂ ಜಿಲ್ಲಾ ಕೌಶಲ್ಯ ಮಿಷನ್, ಕೊಪ್ಪಳ ಇವರ ಸಹಯೋಗದಲ್ಲಿ 30 ದಿನಗಳ ತರಬೇತಿ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದ್ದು, ತರಬೇತಿಯೊಂದಿಗೆ ಪ್ರಾದೇಶಿಕ ಸಾರಿಗೆ ಕಚೇರಿಯಿಂದ ಚಾಲನಾ ಪರವಾನಗಿ (ಡಿಎಲ್) ಪಡೆಯಲು ಅಗತ್ಯ ಸೌಲಭ್ಯ ಕಲ್ಪಿಸಲಾಗಿದೆ. ತರಬೇತಿ ಅವಧಿಯಲ್ಲಿ ಉಚಿತ ವಸತಿ ಹಾಗೂ ಊಟದ ವ್ಯವಸ್ಥೆಯೂ ಇರಲಿದೆ. ಶಿಗ್ಗಾಂವಿಯ ಗಂಗಿಬಾವಿ ರಸ್ತೆಯಲ್ಲಿರುವ ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯ ಪ್ರಾದೇಶಿಕ ತರಬೇತಿ ಕೇಂದ್ರ ಹಾಗೂ ಹುಬ್ಬಳ್ಳಿಯ ಗೋಕುಲ ರಸ್ತೆಯಲ್ಲಿರುವ ಪ್ರಾದೇಶಿಕ ತರಬೇತಿ ಕೇಂದ್ರಗಳಲ್ಲಿ ತರಬೇತಿ ನಡೆಯಲಿದೆ. ಭಾರಿ ವಾಹನ ಚಾಲನಾ ತರಬೇತಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು 20 ರಿಂದ 40 ವರ್ಷದೊಳಗಿನವರಾಗಿದ್ದು, ಕನಿಷ್ಠ ಒಂದು ವರ್ಷದ ಅನುಭವವಿರುವ ಲಘು ವಾಹನ…
ಬೆಂಗಳೂರು: ವೇತನ ಪರಿಷ್ಕರಣೆ ಮತ್ತು ಸಂಬಳ ಹೆಚ್ಚಳದ ಬೇಡಿಕೆ ಮುಂದಿಟ್ಟು ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮಗಳ (KSRTC) ನೌಕರರ ಟ್ರೇಡ್ ಯೂನಿಯನ್ ಜಂಟಿ ಕ್ರಿಯಾ ಸಮಿತಿ ಘೋಷಿಸಿದ್ದ ಮುಷ್ಕರಕ್ಕೆ ಸಂಬಂಧಿಸಿದಂತೆ ಹೈಕೋರ್ಟ್ ಮಹತ್ವದ ತೀರ್ಪು ನೀಡಿದೆ. ಮೇ 20ರಿಂದ ಆರಂಭವಾಗಬೇಕಿದ್ದ ಪ್ರತಿಭಟನೆ ಹಾಗೂ ಮುಷ್ಕರದ ವಿರುದ್ಧ ನೀಡಲಾಗಿದ್ದ ಮಧ್ಯಂತರ ನಿಷೇಧಾಜ್ಞೆಯನ್ನು ನ್ಯಾಯಾಲಯ ಇದೀಗ ಜೂನ್ 23ರವರೆಗೆ ವಿಸ್ತರಿಸಿದೆ. ವಿಚಾರಣೆ ವೇಳೆ ರಾಜ್ಯ ಸರ್ಕಾರದ ಪರವಾಗಿ ಹಾಜರಾದ ಅಡ್ವೊಕೇಟ್ ಜನರಲ್, ಸಾರ್ವಜನಿಕ ಸಾರಿಗೆ ಸೇವೆ ‘ಅತ್ಯಗತ್ಯ ಸೇವೆ’ಗಳ ವ್ಯಾಪ್ತಿಗೆ ಒಳಪಡುವುದರಿಂದ ನೌಕರರು ಕಾನೂನಾತ್ಮಕವಾಗಿ ಮುಷ್ಕರ ನಡೆಸುವ ಹಕ್ಕು ಹೊಂದಿದ್ದಾರೆಯೇ ಎಂಬ ಪ್ರಶ್ನೆಯನ್ನು ಜಂಟಿ ಕ್ರಿಯಾ ಸಮಿತಿಯ ಮುಂದೆ ಪ್ರಸ್ತಾಪಿಸಿದರು. ಸಾರ್ವಜನಿಕರ ದಿನನಿತ್ಯದ ಸಂಚಾರಕ್ಕೆ ನೇರವಾಗಿ ಸಂಬಂಧಿಸಿದ ಸೇವೆಯಾಗಿರುವ ಕಾರಣ, ಸಾರಿಗೆ ನಿಗಮಗಳಲ್ಲಿ ಮುಷ್ಕರ ನಡೆದರೆ ಅದರ ಪರಿಣಾಮ ಲಕ್ಷಾಂತರ ಪ್ರಯಾಣಿಕರ ಮೇಲೆ ಬೀಳುವ ಸಾಧ್ಯತೆ ಇದೆ ಎಂದು ಸರ್ಕಾರ ತನ್ನ ವಾದದಲ್ಲಿ ಉಲ್ಲೇಖಿಸಿದೆ. ಈ ಹಿನ್ನೆಲೆಯಲ್ಲಿ, ಮುಷ್ಕರಕ್ಕೆ ಸಂಬಂಧಿಸಿದಂತೆ ಈಗಾಗಲೇ ಜಾರಿಯಲ್ಲಿದ್ದ…
ಬೆಂಗಳೂರು: ಕರ್ನಾಟಕದ ನೂತನ ಮುಖ್ಯಮಂತ್ರಿಯಾಗಿ ಲೋಕಭವನದಲ್ಲಿ ನಡೆದಂತ ಸರಳ ಸಮಾರಂಭದಲ್ಲಿ ಡಿ.ಕೆ ಶಿವಕುಮಾರ್ ಅವರು ಪ್ರಮಾಣವಚನ ಸ್ವೀಕರಿಸಿದ್ದಾರೆ. ಕರ್ನಾಟಕ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರು ಡಿ.ಕೆ ಶಿವಕುಮಾರ್ ಅವರಿಗೆ ಪ್ರತಿಜ್ಞಾ ವಿಧಿಯನ್ನು ಬೋಧಿಸಿದರು. ಪ್ರತಿಜ್ಞಾ ವಿಧಿಯನ್ನು ಸ್ವೀಕರಿಸಿದಂತ ಡಿ.ಕೆ ಶಿವಕುಮಾರ್ ಅವರು ಕರ್ನಾಟಕದ 25ನೇ ಮುಖ್ಯಮಂತ್ರಿಯಾಗಿ ಅಜ್ಜಯ್ಯನ ಹೆಸರಿನಲ್ಲಿ ಪ್ರಮಾಣವಚನ ಸ್ವೀಕರಿಸಿದ್ದಾರೆ. ಆ ಮೂಲಕ ಇಂದಿನಿಂದ ಡಿ.ಕೆ ಶಿವಕುಮಾರ್ ದರ್ಬಾರ್ ಆರಂಭಗೊಂಡಂತೆ ಆಗಿದೆ. ಕರ್ನಾಟಕ ರಾಜಕಾರಣದ ಧ್ರುವತಾರೆ, ಸಂಘಟನಾ ಚತುರ ಮತ್ತು ಪ್ರಸ್ತುತ ರಾಜ್ಯದ ಮುಖ್ಯಮಂತ್ರಿಯಾಗಿ ಜವಾಬ್ದಾರಿ ವಹಿಸಿಕೊಂಡಿರುವ ದೊಡ್ಡಆಲಹಳ್ಳಿ ಕೆಂಪೇಗೌಡ ಶಿವಕುಮಾರ್ (D. K. Shivakumar) ಅವರ ಜೀವನ, ಸಾಧನೆ ಮತ್ತು ರಾಜಕೀಯ ಹಾದಿಯ ಸವಿಸ್ತಾರವಾದ ಪ್ರೊಫೈಲ್ ಇಲ್ಲಿದೆ. ಕರ್ನಾಟಕ ರಾಜಕೀಯ ಇತಿಹಾಸದಲ್ಲಿ ಅತ್ಯಂತ ಪ್ರಭಾವಶಾಲಿ ಮತ್ತು ಧೀಮಂತ ಸಂಘಟನಾ ಚತುರ ಎಂದು ಗುರುತಿಸಿಕೊಂಡಿರುವ ದೊಡ್ಡಾಲಹಳ್ಳಿ ಕೆಂಪೇಗೌಡ ಶಿವಕುಮಾರ್ ಅವರು ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಜವಾಬ್ದಾರಿ ವಹಿಸಿಕೊಳ್ಳುತ್ತಿರುವುದು ಒಂದು ಸುದೀರ್ಘ ರಾಜಕೀಯ ಹೋರಾಟದ ಫಲಶ್ರುತಿಯಾಗಿದೆ. ಕನಕಪುರದ ಬಂಡೆ ಎಂದೇ…
ಬೆಂಗಳೂರು: ರಾಜ್ಯದಲ್ಲಿ ಮದ್ಯ ಮಾರಾಟದ ಪ್ರಮಾಣ ಕಳೆದ ಮೇ ತಿಂಗಳಲ್ಲಿ ಗಮನಾರ್ಹವಾಗಿ ಕಡಿಮೆಯಾಗಿದ್ದು, ಇದರ ನೇರ ಪರಿಣಾಮವಾಗಿ ಅಬಕಾರಿ ಇಲಾಖೆಯ ಆದಾಯದಲ್ಲೂ ದೊಡ್ಡ ಮಟ್ಟದ ಇಳಿಕೆ ದಾಖಲಾಗಿದೆ. ಏಪ್ರಿಲ್ಗೆ ಹೋಲಿಸಿದರೆ ಮೇ ತಿಂಗಳಲ್ಲಿ ಮದ್ಯದ ಬೇಡಿಕೆ ಕುಸಿದಿರುವುದು ಅಧಿಕಾರಿಗಳ ಗಮನ ಸೆಳೆದಿದೆ. ಅಧಿಕೃತ ಅಂಕಿ-ಅಂಶಗಳ ಪ್ರಕಾರ, ಏಪ್ರಿಲ್ ತಿಂಗಳಲ್ಲಿ 68.17 ಲಕ್ಷ ಬಾಕ್ಸ್ ಗಳಷ್ಟು ಮಾರಾಟವಾಗಿದ್ದ ಐಎಂಎಲ್ (Indian Made Liquor) ಮೇ ತಿಂಗಳಲ್ಲಿ 51.17 ಲಕ್ಷ ಬಾಕ್ಸ್ಗಳಿಗೆ ಇಳಿಕೆಯಾಗಿದೆ. ಇದೇ ವೇಳೆ ಬಿಯರ್ ಮಾರಾಟವೂ ಕುಸಿತ ಕಂಡಿದ್ದು, ಏಪ್ರಿಲ್ನ 50.39 ಲಕ್ಷ ಬಾಕ್ಸ್ಗಳಿಂದ ಮೇ ತಿಂಗಳಲ್ಲಿ 48.97 ಲಕ್ಷ ಬಾಕ್ಸ್ಗಳಿಗೆ ತಲುಪಿದೆ. ಮದ್ಯ ಮಾರಾಟದ ಪ್ರಮಾಣ ಕಡಿಮೆಯಾಗಿರುವುದರಿಂದ ರಾಜ್ಯ ಸರ್ಕಾರದ ಅಬಕಾರಿ ಆದಾಯಕ್ಕೂ ಹೊಡೆತ ಬಿದ್ದಿದೆ. ಏಪ್ರಿಲ್ ತಿಂಗಳಲ್ಲಿ ₹3,687 ಕೋಟಿ ಸಂಗ್ರಹವಾಗಿದ್ದ ಆದಾಯ, ಮೇ ತಿಂಗಳಲ್ಲಿ ₹3,232 ಕೋಟಿಗೆ ಇಳಿದಿದೆ. ಅಂದರೆ ಕೇವಲ ಒಂದು ತಿಂಗಳಲ್ಲೇ ಸುಮಾರು ₹455 ಕೋಟಿಯಷ್ಟು ಆದಾಯ ಕಡಿಮೆಯಾಗಿದೆ. ಮದ್ಯ ಮಾರಾಟದಲ್ಲಿ ಏಕಾಏಕಿ ಕಂಡುಬಂದ…
ನಗರ ವ್ಯಾಪ್ತಿಯಲ್ಲಿ ವಾಸವಾಗಿರುವ ಸ್ವಂತ ಮನೆ ಹಾಗೂ ನಿವೇಶನ ರಹಿತ ಕುಟುಂಬಗಳಿಗೆ ಪ್ರಧಾನ ಮಂತ್ರಿ ಆವಾಸ್ ಯೋಜನೆ (ನಗರ 2.0) ಅಡಿಯಲ್ಲಿ ಅರ್ಜಿ ಸಲ್ಲಿಸಲು ಮತ್ತೊಮ್ಮೆ ಅವಕಾಶ ಕಲ್ಪಿಸಲಾಗಿದ್ದು, ಫಲಾನುಭವಿಗಳ ಸಮೀಕ್ಷೆ ಮತ್ತು ಅರ್ಜಿ ಸಲ್ಲಿಕೆ ಅವಧಿಯನ್ನು ಜೂನ್ 30, 2026ರವರೆಗೆ ವಿಸ್ತರಿಸಲಾಗಿದೆ. ರಾಜೀವ್ ಗಾಂಧಿ ವಸತಿ ನಿಗಮ ನಿಯಮಿತ, ಬೆಂಗಳೂರು ವತಿಯಿಂದ ಹೊರಡಿಸಿರುವ ಸೂಚನೆಯಂತೆ, ಭಾರತ ಸರ್ಕಾರದ ಪ್ರಧಾನ ಮಂತ್ರಿ ಆವಾಸ್ ಯೋಜನೆ (ನಗರ 2.0) ಯೋಜನೆಯಡಿ ರಾಜ್ಯದ ನಗರ ಪ್ರದೇಶಗಳಲ್ಲಿರುವ ವಸತಿ ಹಾಗೂ ನಿವೇಶನ ರಹಿತ ಕುಟುಂಬಗಳ ಸಮೀಕ್ಷೆ ಕಾರ್ಯ ನಡೆಯುತ್ತಿದ್ದು. ಕೊಪ್ಪಳ ನಗರ ವ್ಯಾಪ್ತಿಯಲ್ಲಿ ಸ್ವಂತ ಮನೆ ಅಥವಾ ನಿವೇಶನ ಹೊಂದಿರದ ಅರ್ಹ ಫಲಾನುಭವಿಗಳು ನಿಗಮದ ಆನ್ಲೈನ್ ತಂತ್ರಾಂಶದಲ್ಲಿ ಅರ್ಜಿ ಸಲ್ಲಿಸಿ, ಅದರ ಸ್ವೀಕೃತಿ ಪತ್ರದೊಂದಿಗೆ ಅಗತ್ಯ ದಾಖಲಾತಿಗಳನ್ನು ಸಂಬಂಧಿತ ಕಚೇರಿಗೆ ಸಲ್ಲಿಸುವಂತೆ ಅಧಿಕಾರಿಗಳು ಮನವಿ ಮಾಡಿದ್ದಾರೆ. ಅರ್ಜಿ ಸಲ್ಲಿಸಲು ಕುಟುಂಬದ ಪಡಿತರ ಚೀಟಿ, ಕುಟುಂಬದ ಎಲ್ಲಾ ಸದಸ್ಯರ ಆಧಾರ್ ಕಾರ್ಡ್, ಜಾತಿ ಮತ್ತು ಆದಾಯ ಪ್ರಮಾಣ…
ಬೆಂಗಳೂರು: ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ತಂಡ ಸತತ ಎರಡನೇ ಬಾರಿಗೆ ಐಪಿಎಲ್ ಮುಕುಟ ಮುಡಿಗೇರಿಸಿಕೊಂಡು ಹೊಸ ಇತಿಹಾಸ ಸೃಷ್ಟಿಸಿದೆ. ಆದರೆ, ಈ ಐತಿಹಾಸಿಕ ವಿಜಯದ ಮಹೋತ್ಸವದ ನಡುವೆಯೂ ಸಿಲಿಕಾನ್ ಸಿಟಿಯಲ್ಲಿ ಒಂದು ರೀತಿಯ ಮೌನ ಆವರಿಸಿದೆ. ಹೌದು, ಕಪ್ ಗೆದ್ದ ಸಂಭ್ರಮದ ನಡುವೆಯೇ ಇಡೀ ಆರ್ಸಿಬಿ ಬಳಗ ಕರಾಳ ದಿನವೊಂದನ್ನು ನೆನೆದು ಭಾವುಕವಾಗಿದೆ. ಚಿನ್ನಸ್ವಾಮಿ ಸ್ಟೇಡಿಯಂ ಕಾಲ್ತುಳಿತ ದುರಂತಕ್ಕೆ ವರ್ಷ ತುಂಬು: ಕಳೆದ ವರ್ಷ ಆರ್ಸಿಬಿ ತಂಡ ಚೊಚ್ಚಲ ಬಾರಿಗೆ ಟ್ರೋಫಿ ಗೆದ್ದಾಗ ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದ ಹೊರಗೆ ಇತಿಹಾಸವೇ ಕಾಣದಂತಹ ವಿಜಯೋತ್ಸವ ನಡೆದಿತ್ತು. ಈ ವೇಳೆ ಉಂಟಾದ ಭೀಕರ ಜನದಟ್ಟಣೆ ಮತ್ತು ಕಾಲ್ತುಳಿತದ ದುರಂತದಲ್ಲಿ 11 ಜನ ಅಭಿಮಾನಿಗಳು ಉಸಿರು ಚೆಲ್ಲಿದ್ದರು. ಆ ಭೀಕರ ಘಟನೆ ನಡೆದು ಇಂದಿಗೆ ಸರಿಯಾಗಿ ಒಂದು ವರ್ಷ ಸಂದಿದೆ. ರೋಡ್ ಶೋ, ಸಾರ್ವಜನಿಕ ಸಂಭ್ರಮಾಚರಣೆ ರದ್ದು! ಆ ಕರಾಳ ದಿನದ ನೋವಿನ ನೆನಪಿನಲ್ಲಿ ಆರ್ ಸಿಬಿ ಮ್ಯಾನೇಜ್ ಮೆಂಟ್ ಈ ಬಾರಿ ಅತ್ಯಂತ…
ಭೋಪಾಲ್: ದೇಶಾದ್ಯಂತ ಭಾರಿ ವಿವಾದ ಸೃಷ್ಟಿಸಿರುವ ‘ನೀಟ್-ಯುಜಿ’ (NEET-UG) ಪರೀಕ್ಷೆ ಅಕ್ರಮ ಹಾಗೂ ಮರುಪರೀಕ್ಷೆಯ ಆತಂಕಕ್ಕೆ ಮತ್ತೊಂದು ಬಲಿಯಾಗಿದೆ. ಪರೀಕ್ಷಾ ಪತ್ರಿಕೆ ಸೋರಿಕೆ ಹಗರಣದಿಂದಾಗಿ ಪರೀಕ್ಷೆ ರದ್ದಾದ ಬೆನ್ನಲ್ಲೇ ತೀವ್ರ ಖಿನ್ನತೆಗೆ ಒಳಗಾಗಿದ್ದ ಮಧ್ಯಪ್ರದೇಶದ ಮೌಗಂಜ್ ಜಿಲ್ಲೆಯ ವಿದ್ಯಾರ್ಥಿನಿ ಆಕಾಂಕ್ಷಾ ಚತುರ್ವೇದಿ ಆತ್ಮಹತ್ಯೆಗೆ ಶರಣಾಗಿದ್ದಾರೆ. ಡೆತ್ನೋಟ್ ಬರೆದಿಟ್ಟು ಆಕಾಂಕ್ಷಾ ಆತ್ಮಹತ್ಯೆ ಮಾಡಿಕೊಂಡಿದ್ದು, “ನನಗೆ ಮತ್ತೊಮ್ಮೆ ಪರೀಕ್ಷೆ ಬರೆಯುವ ಧೈರ್ಯವಿಲ್ಲ” ಎಂದು ತನ್ನ ಅಳಲನ್ನು ತೋಡಿಕೊಂಡಿದ್ದಾರೆ. ಮೇ 3 ರಂದು ನಡೆದಿದ್ದ ನೀಟ್ ಪರೀಕ್ಷೆಯಲ್ಲಿ ಆಕಾಂಕ್ಷಾ ಭಾಗವಹಿಸಿದ್ದರು. ಪರೀಕ್ಷೆ ಚೆನ್ನಾಗಿ ಆಗಿದ್ದರಿಂದ ಸುಮಾರು 650 ಅಂಕಗಳು ಬರಬಹುದು ಎಂಬ ನಿರೀಕ್ಷೆಯಲ್ಲಿದ್ದರು. ಆಕೆಯ ತಂದೆ ಕೃಷ್ಣ ಕುಮಾರ್ ಚತುರ್ವೇದಿ ವೃತ್ತಿಯಲ್ಲಿ ರೈತರಾಗಿದ್ದು, ಮಗಳನ್ನು ವೈದ್ಯೆಯನ್ನಾಗಿ ಮಾಡಲು ತೀವ್ರ ಆರ್ಥಿಕ ಸಂಕಷ್ಟದ ನಡುವೆಯೂ ಕಿಸಾನ್ ಕ್ರೆಡಿಟ್ ಕಾರ್ಡ್ ಮೂಲಕ 3 ಲಕ್ಷ ರೂಪಾಯಿ ಸಾಲ ಮಾಡಿದ್ದರು. ನಾಗ್ಪುರದಲ್ಲಿ ಮಗಳಿಗೆ ಕೋಚಿಂಗ್ ಕೊಡಿಸಲು ತಂದೆ ಅಲ್ಲಿಯೇ ಅಡುಗೆಯವನಾಗಿಯೂ ಕೆಲಸ ಮಾಡುತ್ತಿದ್ದರು. ಆದರೆ, ಪತ್ರಿಕೆ ಸೋರಿಕೆ ಆರೋಪದ ಹಿನ್ನೆಲೆಯಲ್ಲಿ…














