Subscribe to Updates
Get the latest creative news from FooBar about art, design and business.
Author: kannadanewsnow57
ಬೆಂಗಳೂರು: ಇತ್ತೀಚಿನ ದಿನಗಳಲ್ಲಿ ಸೈಬರ್ ಅಪರಾಧಿಗಳು ಸಾರ್ವಜನಿಕರನ್ನು ವಂಚಿಸಲು ಹೊಸ ಹೊಸ ಮಾರ್ಗಗಳನ್ನು ಕಂಡುಕೊಳ್ಳುತ್ತಿದ್ದಾರೆ. ಇದೀಗ “ಡಿಜಿಟಲ್ ಅರೆಸ್ಟ್” (Digital Arrest) ಹೆಸರಿನಲ್ಲಿ ಜನರನ್ನು ಭಯಭೀತಿಗೊಳಿಸಿ ಹಣ ಲೂಟಿ ಮಾಡುವ ದಂಧೆ ಹೆಚ್ಚಾಗುತ್ತಿದೆ. ಈ ಹಿನ್ನೆಲೆಯಲ್ಲಿ ಭಾರತೀಯ ರಿಸರ್ವ್ ಬ್ಯಾಂಕ್ (RBI) ಮತ್ತು ಸೈಬರ್ ಪೊಲೀಸರು ಸಾರ್ವಜನಿಕರಿಗೆ ಎಚ್ಚರಿಕೆ ನೀಡಿದ್ದಾರೆ. ನೈಜವಾಗಿ “ಡಿಜಿಟಲ್ ಅರೆಸ್ಟ್” ಎನ್ನುವುದೇ ಇಲ್ಲ! ಯಾರನ್ನಾದರೂ ಆನ್ಲೈನ್ನಲ್ಲಿ ವಿಡಿಯೋ ಕರೆ ಮೂಲಕ ಬಂಧಿಸಲು ಕಾನೂನಿನಲ್ಲಿ ಅವಕಾಶವಿಲ್ಲ. “ಡಿಜಿಟಲ್ ಅರೆಸ್ಟ್” ಎನ್ನುವುದು ಕೇವಲ ಸ್ಕ್ಯಾಮರ್ಗಳು ಸೃಷ್ಟಿಸಿರುವ ಸುಳ್ಳು ಭಯವಷ್ಟೇ. ವಂಚಕರು ಆರ್ಬಿಐ (RBI), ಸಿಬಿಐ (CBI), ಅಥವಾ ಪೊಲೀಸ್ ಅಧಿಕಾರಿಗಳಂತೆ ಸೋಗು ಹಾಕಿ ವಿಡಿಯೋ ಕರೆ ಮಾಡುತ್ತಾರೆ. “ನಿಮ್ಮ ಹೆಸರಿನಲ್ಲಿ ಅಕ್ರಮ ಪಾರ್ಸೆಲ್ ಬಂದಿದೆ” ಅಥವಾ “ನಿಮ್ಮ ಬ್ಯಾಂಕ್ ಖಾತೆ ಅಕ್ರಮ ಚಟುವಟಿಕೆಗೆ ಬಳಕೆಯಾಗಿದೆ” ಎಂದು ಹೆದರಿಸಿ, ಪ್ರಕರಣದಿಂದ ಹೊರಬರಲು ಹಣ ಪಾವತಿಸುವಂತೆ ಒತ್ತಾಯಿಸುತ್ತಾರೆ. ವಂಚಕರು ಬಳಸುವ ತಂತ್ರಗಳು: ನಕಲಿ ಐಡಿ ಕಾರ್ಡ್ಗಳು: ಸರ್ಕಾರಿ ಸಂಸ್ಥೆಗಳ ಲೋಗೋ ಇರುವ ನಕಲಿ…
ಬೆಂಗಳೂರು: ಗ್ರೇಟರ್ ಬೆಂಗಳೂರು ಆಡಳಿತ ಅಧಿನಿಯಮ, 2024ರ ಅಡಿಯಲ್ಲಿ ಹೊಸದಾಗಿ ಅಸ್ತಿತ್ವಕ್ಕೆ ಬಂದಿರುವ ಬೆಂಗಳೂರು ಪಶ್ಚಿಮ ನಗರ ಪಾಲಿಕೆಯ 112 ವಾರ್ಡ್ ಗಳ ಅಂತಿಮ ಮೀಸಲಾತಿ ಪಟ್ಟಿಯನ್ನು ನಗರಾಭಿವೃದ್ಧಿ ಇಲಾಖೆ ಬಿಡುಗಡೆ ಮಾಡಿದೆ. ಪ್ರಮುಖ ಅಂಕಿ-ಅಂಶಗಳು ಪಾಲಿಕೆಯ ಒಟ್ಟು 112 ವಾರ್ಡ್ಗಳಲ್ಲಿ ವಿವಿಧ ವರ್ಗಗಳಿಗೆ ಹಂಚಿಕೆಯಾಗಿರುವ ಸ್ಥಾನಗಳ ವಿವರ ಹೀಗಿದೆ: ವರ್ಗ ಒಟ್ಟು ಸ್ಥಾನಗಳು ಮಹಿಳಾ ಮೀಸಲಾತಿ (ಒಟ್ಟು ಸ್ಥಾನಗಳ ಪೈಕಿ) ಸಾಮಾನ್ಯ ವರ್ಗ 64 32 ಹಿಂದುಳಿದ ವರ್ಗ ‘ಅ’ 30 15 ಹಿಂದುಳಿದ ವರ್ಗ ‘ಬ’ 07 03 ಅನುಸೂಚಿತ ಜಾತಿ (SC) 09 04 ಅನುಸೂಚಿತ ಪಂಗಡ (ST) 02 01 ಒಟ್ಟು 112 55 ಸರ್ಕಾರವು ಜನವರಿ 08, 2026 ರಂದು ಕರಡು ಮೀಸಲಾತಿ ಪಟ್ಟಿಯನ್ನು ಪ್ರಕಟಿಸಿ ಸಾರ್ವಜನಿಕರಿಂದ ಸಲಹೆ ಹಾಗೂ ಆಕ್ಷೇಪಣೆಗಳನ್ನು ಆಹ್ವಾನಿಸಿತ್ತು. ನಗರಾಭಿವೃದ್ಧಿ ಇಲಾಖೆಯ ಅಪರ ಮುಖ್ಯ ಕಾರ್ಯದರ್ಶಿಗಳ ಅಧ್ಯಕ್ಷತೆಯ ಪರಿಶೀಲನಾ ಸಮಿತಿಯು ಸ್ವೀಕೃತವಾದ ಎಲ್ಲಾ ಆಕ್ಷೇಪಣೆಗಳನ್ನು ಕೂಲಂಕಷವಾಗಿ ಪರಿಶೀಲಿಸಿ, ಅಗತ್ಯವಿದ್ದ ಕೆಲವು…
ಬೆಂಗಳೂರು: ರಾಜ್ಯದ ಎಲ್ಲಾ ಹಂತದ ಪೊಲೀಸ್ ಅಧಿಕಾರಿಗಳು ಇನ್ಮುಂದೆ ಜನಪ್ರತಿನಿಧಿಗಳ ಕರೆಗಳನ್ನು ಕಡ್ಡಾಯವಾಗಿ ಸ್ವೀಕರಿಸಬೇಕು ಹಾಗೂ ಅವರ ಸಮಸ್ಯೆಗಳಿಗೆ ಸ್ಪಂದಿಸಬೇಕು ಎಂದು ಪೊಲೀಸ್ ಮಹಾನಿರ್ದೇಶಕರು (DGP) ಕಟ್ಟುನಿಟ್ಟಿನ ಆದೇಶ ಹೊರಡಿಸಿದ್ದಾರೆ. ಇತ್ತೀಚೆಗೆ ನಡೆದ ಬೆಳವಣಿಗೆಗಳ ಹಿನ್ನೆಲೆಯಲ್ಲಿ, ಪೊಲೀಸ್ ಇಲಾಖೆಯು ಈ ಮಹತ್ವದ ಸುತ್ತೋಲೆಯನ್ನು ಹೊರಡಿಸಿದೆ. ಇದರ ಪ್ರಮುಖ ಅಂಶಗಳು ಈ ಕೆಳಗಿನಂತಿವೆ: ಸುತ್ತೋಲೆಯಲ್ಲಿ ಏನಿದೆ ? ಸಂಪರ್ಕ ಸಂಖ್ಯೆ ಇಟ್ಟುಕೊಳ್ಳುವುದು ಕಡ್ಡಾಯ: ಎಲ್ಲಾ ಹಿರಿಯ ಅಧಿಕಾರಿಗಳು ತಮ್ಮ ವ್ಯಾಪ್ತಿಯ ವಿಧಾನಸಭಾ ಸದಸ್ಯರು (MLA), ವಿಧಾನ ಪರಿಷತ್ ಸದಸ್ಯರು (MLC), ಲೋಕಸಭಾ ಸದಸ್ಯರು (MP) ಮತ್ತು ರಾಜ್ಯಸಭಾ ಸದಸ್ಯರ ಅಧಿಕೃತ ದೂರವಾಣಿ ಸಂಖ್ಯೆಗಳನ್ನು ಕಡ್ಡಾಯವಾಗಿ ತಮ್ಮ ಬಳಿ ಇಟ್ಟುಕೊಂಡಿರಬೇಕು. ಕರೆ ಸ್ವೀಕರಿಸಲು ಸೂಚನೆ: ಜನಪ್ರತಿನಿಧಿಗಳು ಕರೆ ಮಾಡಿದಾಗ ಅಧಿಕಾರಿಗಳು ತಕ್ಷಣ ಸ್ಪಂದಿಸಬೇಕು. ಒಂದು ವೇಳೆ ಕರ್ತವ್ಯದ ನಿಮಿತ್ತ ಅಥವಾ ತುರ್ತು ಕೆಲಸದ ನಡುವೆ ಕರೆ ಸ್ವೀಕರಿಸಲು ಸಾಧ್ಯವಾಗದಿದ್ದರೆ, ಆ ಕೆಲಸ ಮುಗಿದ ತಕ್ಷಣವೇ ಅವರಿಗೆ ಮರಳಿ ಕರೆ (Call Back) ಮಾಡುವುದು ಕಡ್ಡಾಯ.…
ಬೀಜಿಂಗ್: ‘ಬಂಗಾರದ ಮೊಟ್ಟೆ ಇಡುವ ಬಾತುಕೋಳಿ’ಯ ಕಥೆಯನ್ನು ನಾವು ಕೇಳಿದ್ದೇವೆ. ಆದರೆ ಚೀನಾದಲ್ಲಿ ನಿಜವಾಗಿಯೂ ಬಾತುಕೋಳಿಯ ಹೊಟ್ಟೆಯಲ್ಲಿ ಭಾರಿ ಪ್ರಮಾಣದ ಚಿನ್ನ ಪತ್ತೆಯಾಗಿರುವ ಅಚ್ಚರಿಯ ಘಟನೆಯೊಂದು ನಡೆದಿದೆ. ಚೀನಾದ ಹುನಾನ್ ಪ್ರಾಂತ್ಯದ ಲಾಂಗ್ವಿ ಕೌಂಟಿಯ ನಿವಾಸಿ ಲಿಯು ಎಂಬುವವರು ಅಡುಗೆಗಾಗಿ ಬಾತುಕೋಳಿಯನ್ನು ಕತ್ತರಿಸಿದಾಗ ಅದರ ಹೊಟ್ಟೆಯಲ್ಲಿ ಚಿನ್ನದ ತುಣುಕುಗಳು ಪತ್ತೆಯಾಗಿವೆ. ಈ ಚಿನ್ನವನ್ನು ಪರೀಕ್ಷಿಸಿದಾಗ ಅದು ಸುಮಾರು 10 ಗ್ರಾಂ ತೂಕವಿದ್ದು, ಅದರ ಮಾರುಕಟ್ಟೆ ಮೌಲ್ಯ ಅಂದಾಜು 1.62 ಲಕ್ಷ ರೂಪಾಯಿ ಎಂದು ತಿಳಿದುಬಂದಿದೆ. ಹೊಟ್ಟೆಗೆ ಚಿನ್ನ ಸೇರಿದ್ದು ಹೇಗೆ? ಲಿಯು ಅವರ ತಂದೆಯ ಪ್ರಕಾರ, ಅವರು ವಾಸಿಸುವ ಪ್ರದೇಶದ ಸಮೀಪದಲ್ಲೇ ಹಿಂದೆ ಒಂದು ಚಿನ್ನದ ಗಣಿ ಇತ್ತು. ಬಾತುಕೋಳಿಯು ಅಲ್ಲಿನ ಮಣ್ಣನ್ನು ತಿನ್ನುವಾಗ ಅದರೊಂದಿಗೆ ಚಿನ್ನದ ತುಣುಕುಗಳು ಹೊಟ್ಟೆ ಸೇರಿರಬಹುದು ಎಂದು ಅಂದಾಜಿಸಲಾಗಿದೆ. ಚಿನ್ನವು ಜೀರ್ಣವಾಗದ ಕಾರಣ ಅದು ಹೊಟ್ಟೆಯಲ್ಲೇ ಉಳಿದುಕೊಂಡಿತ್ತು. ವಿಶೇಷತೆ: ಈ ಹಿಂದೆ ಕೂಡ ಈ ಭಾಗದ ಬಾತುಕೋಳಿಗಳಲ್ಲಿ ಚಿನ್ನ ಸಿಕ್ಕ ಉದಾಹರಣೆಗಳಿವೆ, ಆದರೆ ಇಷ್ಟು ದೊಡ್ಡ…
ಬೆಂಗಳೂರು: ಸರ್ಕಾರಿ ಆಸ್ಪತ್ರೆಗಳಲ್ಲಿ ಔಷಧಿಗಳ ಕೊರತೆಯಾಗದಂತೆ ನೋಡಿಕೊಳ್ಳಲು ಮತ್ತು ತುರ್ತು ಸಂದರ್ಭಗಳಲ್ಲಿ ಸ್ಥಳೀಯವಾಗಿ ಔಷಧಿ ಖರೀದಿಸಲು ನಿರಾಕರಿಸುವ ವೈದ್ಯಾಧಿಕಾರಿಗಳ ವಿರುದ್ಧ ಕಠಿಣ ಶಿಸ್ತು ಕ್ರಮ ಕೈಗೊಳ್ಳಲು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಆದೇಶ ಹೊರಡಿಸಿದೆ. ಸ್ಥಳೀಯ ಖರೀದಿಗೆ ಅಧಿಕಾರ: ಆಯುಷ್ಮಾನ್ ಭಾರತ್ ಆರೋಗ್ಯ ಕರ್ನಾಟಕ (ABArK) ಯೋಜನೆ ಹಾಗೂ ಆರೋಗ್ಯ ರಕ್ಷಾ ಸಮಿತಿ (ARS) ನಿಧಿಯನ್ನು ಬಳಸಿ ಆಸ್ಪತ್ರೆಗೆ ಅಗತ್ಯವಿರುವ ಔಷಧಿಗಳನ್ನು ಸ್ಥಳೀಯವಾಗಿ ಖರೀದಿಸಲು ಆಡಳಿತ ವೈದ್ಯಾಧಿಕಾರಿಗಳಿಗೆ ಈಗಾಗಲೇ ಅಧಿಕಾರ ನೀಡಲಾಗಿದೆ. ಸಂಘದ ಪತ್ರಕ್ಕೆ ಸರ್ಕಾರದ ಆಕ್ಷೇಪ: ಇತ್ತೀಚೆಗೆ ಸರ್ಕಾರಿ ವೈದ್ಯಾಧಿಕಾರಿಗಳ ಸಂಘವು “ಸರ್ಕಾರ ಪೂರೈಸುವ ಔಷಧಿಗಳನ್ನು ಮಾತ್ರ ಬಳಸಬೇಕು, ಸ್ಥಳೀಯವಾಗಿ ಖರೀದಿ ಮಾಡಬಾರದು” ಎಂದು ಸೂಚನೆ ನೀಡಿತ್ತು. ಇದನ್ನು ಸರ್ಕಾರವು ‘ನಿಯಮಬಾಹಿರ’ ಮತ್ತು ‘ಏಕಪಕ್ಷೀಯ ನಿರ್ಧಾರ’ ಎಂದು ಕರೆದಿದೆ. ದುರ್ನಡತೆ ಎಂದು ಪರಿಗಣನೆ: ಒಂದು ವೇಳೆ ವೈದ್ಯಾಧಿಕಾರಿಗಳ ಸಂಘದ ತೀರ್ಮಾನಕ್ಕೆ ಕಟ್ಟುಬಿದ್ದು, ಯಾವುದೇ ಆಸ್ಪತ್ರೆಯ ವೈದ್ಯಾಧಿಕಾರಿಗಳು ಅಗತ್ಯ ಔಷಧಿಗಳ ಖರೀದಿಗೆ ನಿರಾಕರಿಸಿದರೆ, ಅದನ್ನು KCSR ನಿಯಮಗಳಡಿ ‘ದುರ್ನಡತೆ’ ಎಂದು…
ಬೆಂಗಳೂರು: ರಾಜ್ಯದ ಶಾಲಾ-ಕಾಲೇಜುಗಳಲ್ಲಿ ಖಾಲಿ ಇರುವ 15 ಸಾವಿರ ಶಿಕ್ಷಕರ ಹುದ್ದೆಗಳನ್ನು ಬಜೆಟ್ನಲ್ಲಿ ಘೋಷಿಸಿದಂತೆ ಶೀಘ್ರದಲ್ಲೇ ಭರ್ತಿ ಮಾಡಲಾಗುವುದು ಎಂದು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವ ಮಧು ಬಂಗಾರಪ್ಪ ಅವರು ವಿಧಾನ ಪರಿಷತ್ತಿನಲ್ಲಿ ತಿಳಿಸಿದ್ದಾರೆ. ಬಿಜೆಪಿಯ ಎಚ್.ಎಸ್. ಗೋಪಿನಾಥ್ ಅವರ ಪ್ರಶ್ನೆಗೆ ಉತ್ತರಿಸಿದ ಸಚಿವರು, ಈ ನೇಮಕಾತಿ ಪ್ರಕ್ರಿಯೆಯ ಪ್ರಮುಖ ಅಂಶಗಳನ್ನು ಹಂಚಿಕೊಂಡಿದ್ದಾರೆ. ಶಾಲೆಗಳಲ್ಲಿ ಇಂಗ್ಲಿಷ್ ಶಿಕ್ಷಕರ ಕೊರತೆ ಇರುವುದನ್ನು ಗಮನಿಸಿ, ಈ ನೇಮಕಾತಿ ಪ್ರಕ್ರಿಯೆಯಲ್ಲಿ ಇಂಗ್ಲಿಷ್ ಶಿಕ್ಷಕರಿಗೂ ಹೆಚ್ಚಿನ ಆದ್ಯತೆ ನೀಡಲಾಗುವುದು. ಪ್ರಾಂಶುಪಾಲರ ಹುದ್ದೆಗೆ ಬಡ್ತಿ: ಸದ್ಯ ಖಾಲಿ ಇರುವ ಹಾಗೂ ಮುಂದಿನ ಆರು ತಿಂಗಳಲ್ಲಿ ಖಾಲಿಯಾಗಲಿರುವ ಪ್ರಾಂಶುಪಾಲರ ಹುದ್ದೆಗಳನ್ನು ಬಡ್ತಿಯ ಮೂಲಕ ಭರ್ತಿ ಮಾಡಲು ಕ್ರಮ ಕೈಗೊಳ್ಳಲಾಗಿದೆ. ಜೇಷ್ಟತಾ ಪಟ್ಟಿ: ಉಪನ್ಯಾಸಕರ ವೃಂದದ ಕರಡು ಜೇಷ್ಟತಾ ಪಟ್ಟಿಯನ್ನು ಈಗಾಗಲೇ ಪ್ರಕಟಿಸಲಾಗಿದ್ದು, ಆಕ್ಷೇಪಣೆಗಳನ್ನು ಪರಿಶೀಲಿಸಿದ ನಂತರ ಅಂತಿಮ ಪಟ್ಟಿ ಬಿಡುಗಡೆ ಮಾಡಿ ಬಡ್ತಿ ಪ್ರಕ್ರಿಯೆ ಪೂರ್ಣಗೊಳಿಸಲಾಗುವುದು ಎಂದು ಕಾಂಗ್ರೆಸ್ನ ಡಿ.ಟಿ. ಶ್ರೀನಿವಾಸ್ ಅವರ ಪ್ರಶ್ನೆಗೆ ಸಚಿವರು ಉತ್ತರಿಸಿದರು.
ಬೆಂಗಳೂರು: ರಾಜ್ಯದಲ್ಲಿ ಹೆಣ್ಣು ಭ್ರೂಣ ಹತ್ಯೆಯನ್ನು ತಡೆಗಟ್ಟುವ ನಿಟ್ಟಿನಲ್ಲಿ ಸರ್ಕಾರ ಮಹತ್ವದ ನಿರ್ಧಾರ ಕೈಗೊಂಡಿದೆ. ಭ್ರೂಣ ಹತ್ಯೆ ಕುರಿತು ಮಾಹಿತಿ ನೀಡುವ ಸಾರ್ವಜನಿಕರಿಗೆ ನೀಡಲಾಗುತ್ತಿದ್ದ ಬಹುಮಾನದ ಮೊತ್ತವನ್ನು ₹50 ಸಾವಿರದಿಂದ ₹1 ಲಕ್ಷಕ್ಕೆ ಏರಿಕೆ ಮಾಡಲಾಗಿದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ದಿನೇಶ್ ಗುಂಡೂರಾವ್ ತಿಳಿಸಿದ್ದಾರೆ. ವಿಧಾನ ಪರಿಷತ್ನಲ್ಲಿ ಕಾಂಗ್ರೆಸ್ ಸದಸ್ಯರಾದ ಉಮಾಶ್ರೀ ಅವರ ಪರವಾಗಿ ಐವನ್ ಡಿಸೋಜಾ ಕೇಳಿದ ಪ್ರಶ್ನೆಗೆ ಉತ್ತರಿಸಿದ ಸಚಿವರು, ಈ ಕೆಳಗಿನ ಪ್ರಮುಖ ಅಂಕಿಅಂಶಗಳನ್ನು ಹಂಚಿಕೊಂಡಿದ್ದಾರೆ. ರಾಜ್ಯದಲ್ಲಿ ಈವರೆಗೆ ಭ್ರೂಣ ಹತ್ಯೆಗೆ ಸಂಬಂಧಿಸಿದಂತೆ ಒಟ್ಟು 13 ಪ್ರಕರಣಗಳು ದಾಖಲಾಗಿವೆ. ಕಾನೂನು ಕ್ರಮ: ಕಳೆದ ಮೂರು ವರ್ಷಗಳಲ್ಲಿ ನಿಯಮ ಉಲ್ಲಂಘಿಸಿದ ಸ್ಕ್ಯಾನಿಂಗ್ ಸೆಂಟರ್ಗಳ ಮಾಲೀಕರು ಮತ್ತು ವೈದ್ಯರ ವಿರುದ್ಧ ಒಟ್ಟು 150 ಪ್ರಕರಣಗಳನ್ನು ನ್ಯಾಯಾಲಯದಲ್ಲಿ ಹೂಡಲಾಗಿದೆ. ಶಿಕ್ಷೆ ಮತ್ತು ದಂಡ: ಈ ಪೈಕಿ 80 ಪ್ರಕರಣಗಳಲ್ಲಿ ದಂಡ ವಿಧಿಸಲಾಗಿದ್ದು, ಇನ್ನುಳಿದ 70 ಪ್ರಕರಣಗಳು ನ್ಯಾಯಾಲಯದ ವಿವಿಧ ಹಂತಗಳಲ್ಲಿ ವಿಚಾರಣೆಯಲ್ಲಿವೆ. ಭ್ರೂಣ ಹತ್ಯೆಯಂತಹ ಸಾಮಾಜಿಕ ಪಿಡುಗನ್ನು…
ನವದೆಹಲಿ: ದೇಶದ ಜನಸಾಮಾನ್ಯರಿಗೆ, ಅದರಲ್ಲೂ ವಿಶೇಷವಾಗಿ ಆರ್ಥಿಕವಾಗಿ ಹಿಂದುಳಿದವರಿಗೆ ಕೇಂದ್ರ ಸರ್ಕಾರ ಸಿಹಿ ಸುದ್ದಿ ನೀಡಿದೆ. ಪ್ರಧಾನ ಮಂತ್ರಿ ಜನಧನ್ ಯೋಜನೆ (PMJDY) ಸೇರಿದಂತೆ ಸುಮಾರು 72 ಕೋಟಿ ‘ಮೂಲ ಉಳಿತಾಯ ಬ್ಯಾಂಕ್ ಠೇವಣಿ’ (BSBDA) ಖಾತೆಗಳಿಗೆ ಕನಿಷ್ಠ ಬ್ಯಾಲೆನ್ಸ್ ಕಾಯ್ದುಕೊಳ್ಳದಿದ್ದಲ್ಲಿ ಯಾವುದೇ ದಂಡ ವಿಧಿಸಲಾಗುವುದಿಲ್ಲ ಎಂದು ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಸ್ಪಷ್ಟಪಡಿಸಿದ್ದಾರೆ. ಸೋಮವಾರ ಲೋಕಸಭೆಯಲ್ಲಿ ಕೇಳಲಾದ ಪ್ರಶ್ನೆಯೊಂದಕ್ಕೆ ಲಿಖಿತ ಉತ್ತರ ನೀಡಿದ ಅವರು, ಬ್ಯಾಂಕಿಂಗ್ ವ್ಯವಸ್ಥೆಯಿಂದ ಹೊರಗುಳಿದಿರುವ ಮತ್ತು ಸಣ್ಣ ಉಳಿತಾಯಗಾರರನ್ನು ತಲುಪುವ ಉದ್ದೇಶದಿಂದ ಈ ಕ್ರಮ ಕೈಗೊಳ್ಳಲಾಗಿದೆ ಎಂದು ತಿಳಿಸಿದರು. 72 ಕೋಟಿ ಖಾತೆದಾರರಿಗೆ ಲಾಭ: ಜನಧನ್ ಖಾತೆಗಳು ಸೇರಿದಂತೆ ದೇಶದ ಒಟ್ಟು 72 ಕೋಟಿ ಬಿಎಸ್ಬಿಡಿಎ (BSBDA) ಖಾತೆಗಳಿಗೆ ಶೂನ್ಯ ಬ್ಯಾಲೆನ್ಸ್ (Zero Balance) ಸೌಲಭ್ಯವಿದೆ. ಇವಕ್ಕೆ ಯಾವುದೇ ಕನಿಷ್ಠ ಮೊತ್ತದ ಮಿತಿ ಇರುವುದಿಲ್ಲ. ಉಚಿತ ಸೇವೆಗಳು: ಈ ಖಾತೆದಾರರು ಹಣ ಜಮಾ ಮಾಡುವುದು, ಹಿಂಪಡೆಯುವುದು ಮತ್ತು ಎಟಿಎಂ ಸೇವೆಯನ್ನು ಯಾವುದೇ ದಂಡ ಅಥವಾ ಶುಲ್ಕವಿಲ್ಲದೆ…
BIG NEWS: ರಾಜ್ಯದಲ್ಲಿ ಟ್ರಾಕ್ಟರ್ ಗಳಲ್ಲಿ ಅಬ್ಬರಿಸುವ ‘ಡಿಜೆ ಸೌಂಡ್’ಗೆ ಬ್ರೇಕ್: ‘ಸಿಸ್ಟಂ ತೆರವಿ’ಗೆ ಸರ್ಕಾರ ಆದೇಶ
ಬೆಂಗಳೂರು: ಉತ್ತರ ಕರ್ನಾಟಕದ ಜಿಲ್ಲೆಗಳಲ್ಲಿ ಟ್ರಾಕ್ಟರ್ ಹಾಗೂ ಇತರ ವಾಹನಗಳಲ್ಲಿ ಅಕ್ರಮವಾಗಿ ಅಳವಡಿಸಲಾಗಿರುವ ಅಬ್ಬರದ ಡಿಜೆ ಸೌಂಡ್ ಸಿಸ್ಟಮ್ಗಳ ವಿರುದ್ಧ ಕ್ರಮ ಕೈಗೊಳ್ಳಲು ರಾಜ್ಯ ಸಾರಿಗೆ ಇಲಾಖೆ ಆದೇಶ ಹೊರಡಿಸಿದೆ. ಬೆಳಗಾವಿ, ಬಾಗಲಕೋಟೆ ಮತ್ತು ವಿಜಯಪುರ ಸೇರಿದಂತೆ ಉತ್ತರ ಕರ್ನಾಟಕದ ವಿವಿಧ ಜಿಲ್ಲೆಗಳಲ್ಲಿ ಟ್ರಾಕ್ಟರ್ಗಳಲ್ಲಿ ದೊಡ್ಡ ಮಟ್ಟದ ಶಬ್ದ ಮಾಡುವ ಧ್ವನಿವರ್ಧಕಗಳನ್ನು ಅಳವಡಿಸಿ, ಅಶ್ಲೀಲ ಹಾಡುಗಳನ್ನು ಹಾಕಲಾಗುತ್ತಿದೆ. ಇದರಿಂದ ಸಾರ್ವಜನಿಕ ನೆಮ್ಮದಿಗೆ ಭಂಗ ಉಂಟಾಗುತ್ತಿದೆ ಎಂದು ಸಾಮಾಜಿಕ ಹೋರಾಟಗಾರರಾದ ಶ್ರೀನಿವಾಸಗೌಡ ಬಾ. ಪಾಟೀಲ ಅವರು ನೀಡಿದ್ದ ದೂರಿಗೆ ಸ್ಪಂದಿಸಿ ಸರ್ಕಾರ ಈ ಕ್ರಮ ಕೈಗೊಂಡಿದೆ. ಆದೇಶದಲ್ಲಿ ಏನಿದೆ? ಸಾರಿಗೆ ಇಲಾಖೆಯ ಸರ್ಕಾರದ ಅಧೀನ ಕಾರ್ಯದರ್ಶಿಗಳಾದ ಪುಷ್ಪ ವಿ.ಎಸ್. ಅವರು ಹೊರಡಿಸಿರುವ ಆದೇಶದಲ್ಲಿ ಈ ಕೆಳಗಿನ ಪ್ರಮುಖ ಅಂಶಗಳನ್ನು ಉಲ್ಲೇಖಿಸಲಾಗಿದೆ. ಅತಿಯಾದ ಶಬ್ದ ಮಾಲಿನ್ಯದಿಂದ ಶಾಲಾ ಮಕ್ಕಳು, ಹಸುಗೂಸುಗಳು, ಹಿರಿಯ ನಾಗರಿಕರು ಮತ್ತು ಗರ್ಭಿಣಿಯರ ಆರೋಗ್ಯದ ಮೇಲೆ ಗಂಭೀರ ಪರಿಣಾಮ ಬೀರುತ್ತಿದೆ. ಅಕ್ರಮ ಅಳವಡಿಕೆ: ಕಾನೂನು ಬಾಹಿರವಾಗಿ ವಾಹನಗಳಲ್ಲಿ ಡಿಜೆ ಸೌಂಡ್ ಬಾಕ್ಸ್ಗಳನ್ನು…
ಬೆಂಗಳೂರು: ರಾಜ್ಯ ಸರ್ಕಾರದಿಂದ ಈಗಾಗಲೇ ದ್ವಿತೀಯ ಪಿಯುಸಿ ಉತ್ತೀರ್ಣಕ್ಕೆ ಶೇಕಡಾ ಪ್ರಮಾಣವನ್ನು ನಿಗದಿ ಪಡಿಸಲಾಗಿದೆ. ಇದೀಗ ಮುಂದುವರೆದು ಪ್ರಥಮ ಪಿಯುಸಿಗೂ ಉತ್ತೀರ್ಣತಾ ಪ್ರಮಾಣವನ್ನು ನಿಗದಿ ಪಡಿಸಿದೆ. ಇನ್ಮುಂದೆ ಶೇ.33ರಷ್ಟು ಅಂಕ ಬಂದ್ರು ಪ್ರಥಮ ಪಿಯುಸಿಯಲ್ಲಿ ಪಾಸ್ ಎಂಬುದಾಗಿ ಅಧಿಕೃತ ಆದೇಶದಲ್ಲಿ ತಿಳಿಸಲಾಗಿದೆ. ಈ ಕುರಿತಂತೆ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯ ಸರ್ಕಾರದ ಅಧೀನ ಕಾರ್ಯದರ್ಶಿ ನಡವಳಿಯನ್ನು ಹೊರಡಿಸಿದ್ದು, ನಿರ್ದೇಶಕರು (ಪದವಿಪೂರ್ವ), ಶಾಲಾ ಶಿಕ್ಷಣ ಇಲಾಖೆ, ಬೆಂಗಳೂರು, ಇವರು ಓದಲಾದ (1)ರ ಅಧಿಸೂಚನೆಯನ್ವಯ ಕರ್ನಾಟಕ ಪದವಿ ಪೂರ್ವ ಪರೀಕ್ಷೆ (ಮೌಲ್ಯಮಾಪನ ವಿಧಾನ) ನಿಯಮಗಳು, 2025ನ್ನು ಜಾರಿಗೆ ತರುವುದರ ಮೂಲಕ ದ್ವಿತೀಯ ಪಿಯುಸಿ ಪರೀಕ್ಷೆಯ ಉತ್ತೀರ್ಣತಾ ಮಟ್ಟವನ್ನು ಪರಿಮಾಣಾತ್ಮಕವಾಗಿ ಹೆಚ್ಚಿಸುವ ದೃಷ್ಟಿಯಿಂದ ಹಾಲಿ ಇರುವ ನಿಯಮಕ್ಕೆ ತಿದ್ದುಪಡಿ ತಂದು ಉತ್ತೀರ್ಣತಾ ಪುಮಾಣವನ್ನು ಪ್ರತಿಶತ 33 ನಿಗದಿಪಡಿಸಿ ಅಧಿಸೂಚನೆ ಹೊರಡಿಸಿರುವುದು ಗಮನಾರ್ಹವಾಗಿದ್ದು, ಪದವಿ ಪೂರ್ವ ಶಿಕ್ಷಣವು ಎರಡು ವರ್ಷಗಳ ಸಂಯುಕ್ತ ಕೋರ್ಸ್ ಆಗಿರುವುದರಿಂದ, ಪ್ರಥಮ ಪಿಯುಸಿ ಮತ್ತು ದ್ವಿತೀಯ ಪಿಯುಸಿ ಎರಡೂ ತರಗತಿಗಳು ಪರಸ್ಪರ…














