Subscribe to Updates
Get the latest creative news from FooBar about art, design and business.
Author: kannadanewsnow57
ಬೆಂಗಳೂರು : ರಾಜ್ಯ ಸರ್ಕಾರವು ಜಮೀನು ಸರ್ವೆ ಕುರಿತಂತೆ ಮಹತ್ವದ ಕ್ರಮ ಕೈಗೊಂಡಿದ್ದು, ಇನ್ಮುಂದೆ ಕೇವಲ 10 ನಿಮಿಷಗಳಲ್ಲೇ ಆಧುನಿಕ ತಂತ್ರಜ್ಞಾನದ ಮೂಲಕ ಜಮೀನು ಸರ್ವೆ ಮಾಡಬಹುದು. ಸರ್ವೇ ಆಯುಕ್ತರ ಕಚೇರಿಯಲ್ಲಿ ನಡೆದ ಕಾರ್ಯಕ್ರಮದಲ್ಲಿ 465 ಭೂ ಮಾಪಕರಿಗೆ ಈ ಆಧುನಿಕ ತಂತ್ರಜ್ಞಾನವುಳ್ಳ ರೋವರ್ ಅನ್ನು ಕಂದಾಯ ಸಚಿವ ಕೃಷ್ಣಬೈರೇಗೌಡ ವಿತರಿಸಿದ್ದಾರೆ. ಈ ಮೂಲಕ ಕಂದಾಯ ಇಲಾಖೆಯು ಜಮೀನು ಸರ್ವೇ ಮಾಡುವ ವಿಧಾನದಲ್ಲಿ ಐತಿಹಾಸಿಕ ಬದಲಾವಣೆ ತಂದಿದ್ದು, ಚೈನ್ ಬದಲಿಗೆ ಆಧುನಿಕ ತಂತ್ರಜ್ಞಾನ ಆಧಾರಿತ ರೋವರ್ ಉಪಕರಣದ ಮೂಲಕ ಸರ್ವೆ ಮಾಡಲಾಗುತ್ತದೆ. ಸರ್ವೇ ಮಾಡಲು ಕನಿಷ್ಟ 70 ನಿಮಿಷ ಅದನ್ನು ನಕ್ಷೆ ಮಾಡಲು 3 ಗಂಟೆ ಸಮಯ ವ್ಯರ್ಥವಾಗುತ್ತಿತ್ತು. ಆದರೆ, ಆಧುನಿಕ ತಂತ್ರಜ್ಞಾನ ಆಧಾರಿತ ರೋವರ್ ಈ ಕೆಲಸವನ್ನು ಕೇವಲ 10 ನಿಮಿಷಕ್ಕೆ ಮುಗಿಸಲಿದೆ. ಕಳೆದ 200 ವರ್ಷದಲ್ಲಿ ಪ್ರಪಂಚ ಇಷ್ಟು ಬದಲಾದರೂ ನಮ್ಮ ವಿಧಿ-ವಿಧಾನ ಹಾಗೆ ಇದೆ. ಆದರೆ ಇದೀಗ ಸರ್ವೇ ಕೆಲಸವನ್ನು ತಾಂತ್ರಿಕಗೊಳಿಸದೆ ಕೆಲಸ ಮಾಡಲು ಜನ ಇದ್ದಾರೆ…
ಹೆಣ್ಣುಮಕ್ಕಳ ಆರ್ಥಿಕ ಭವಿಷ್ಯವನ್ನು ಭದ್ರಪಡಿಸುವ ಗುರಿಯನ್ನು ಹೊಂದಿರುವ ಸರ್ಕಾರಿ ಬೆಂಬಲಿತ ಉಳಿತಾಯ ಯೋಜನೆಯಾದ ಸುಕನ್ಯಾ ಸಮೃದ್ಧಿ ಯೋಜನೆ (SSY) ಗಮನಾರ್ಹ ನಿಯಂತ್ರಕ ಬದಲಾವಣೆಗೆ ಒಳಗಾಗುತ್ತಿದೆ. ಅಕ್ಟೋಬರ್ 1, 2024 ರಿಂದ, ಅಜ್ಜ-ಅಜ್ಜಿ ತೆರೆದ ಸುಕನ್ಯಾ ಸಮೃದ್ಧಿ ಖಾತೆಗಳನ್ನು ಮಕ್ಕಳ ಪೋಷಕರು ಅಥವಾ ಕಾನೂನುಬದ್ಧ ಪೋಷಕರಿಗೆ ವರ್ಗಾಯಿಸುವುದು ಕಡ್ಡಾಯವಾಗಿರುತ್ತದೆ. ಎಸ್ಎಸ್ವೈ ಸೇರಿದಂತೆ ರಾಷ್ಟ್ರೀಯ ಸಣ್ಣ ಉಳಿತಾಯ ಯೋಜನೆಗಳನ್ನು ಸುವ್ಯವಸ್ಥಿತಗೊಳಿಸಲು ಮತ್ತು ಸುವ್ಯವಸ್ಥಿತಗೊಳಿಸಲು ಆರ್ಥಿಕ ವ್ಯವಹಾರಗಳ ಸಚಿವಾಲಯದ ಹೊಸ ಮಾರ್ಗಸೂಚಿಗಳ ಭಾಗವಾಗಿ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ. ಸುಕನ್ಯಾ ಸಮೃದ್ಧಿ ಯೋಜನೆಯಲ್ಲಿ ಈ ಬದಲಾವಣೆಯನ್ನು ಏಕೆ ಜಾರಿಗೆ ತರಲಾಗುತ್ತಿದೆ? ಆರಂಭದಲ್ಲಿ, ಮೊಮ್ಮಕ್ಕಳಿಗೆ ಆರ್ಥಿಕ ಭದ್ರತೆಯನ್ನು ಒದಗಿಸಲು ಅಜ್ಜ-ಅಜ್ಜಿ ಸುಕನ್ಯಾ ಸಮೃದ್ಧಿ ಖಾತೆಗಳನ್ನು ತೆರೆಯಲು ಅವಕಾಶವಿತ್ತು. ಆದಾಗ್ಯೂ, ಖಾತೆಯ ಮಾಲೀಕತ್ವ ಮತ್ತು ನಿರ್ವಹಣೆಯಲ್ಲಿ ಅಸಂಗತತೆಗಳನ್ನು ಸರ್ಕಾರ ಗಮನಿಸಿದೆ. ಸರಿಯಾದ ಆರ್ಥಿಕ ನಿಯಂತ್ರಣ ಮತ್ತು ಪಾಲನೆಯನ್ನು ಖಚಿತಪಡಿಸಿಕೊಳ್ಳಲು, ಪೋಷಕರು ಅಥವಾ ಕಾನೂನುಬದ್ಧ ಪೋಷಕರು ಈ ಖಾತೆಗಳನ್ನು ಹೊಂದಿರುವುದು ಮತ್ತು ನಿರ್ವಹಿಸುವುದು ಈಗ ಕಡ್ಡಾಯವಾಗಿದೆ. ಈ ನಿಯಮದ ಪ್ರಾಥಮಿಕ ಉದ್ದೇಶವೆಂದರೆ…
ನವದೆಹಲಿ : ಉದ್ಯೋಗಾಕಾಂಕ್ಷಿಗಳಿಗೆ ಭಾರತೀಯ ಅಂಚೆ ಇಲಾಖೆ ಭರ್ಜರಿ ಸಿಹಿಸುದ್ದಿ ನೀಡಿದ್ದು, ಇಂಡಿಯಾ ಪೋಸ್ಟ್ನಲ್ಲಿ ಬೃಹತ್ ಉದ್ಯೋಗ ನೇಮಕಾತಿಗಾಗಿ ಅಧಿಸೂಚನೆಯನ್ನು ಬಿಡುಗಡೆ ಮಾಡಲಾಗಿದೆ. ದೇಶಾದ್ಯಂತ 21,413 ಗ್ರಾಮೀಣ ಡಾಕ್ ಸೇವಕ್ (ಜಿಡಿಎಸ್) ಹುದ್ದೆಗಳನ್ನು ಭರ್ತಿ ಮಾಡಲಾಗುವುದು. 10ನೇ ತರಗತಿ ವಿದ್ಯಾರ್ಹತೆ ಮತ್ತು ಕಂಪ್ಯೂಟರ್ ಜ್ಞಾನ ಹೊಂದಿರುವವರು ಆನ್ಲೈನ್ನಲ್ಲಿ ಅರ್ಜಿ ಸಲ್ಲಿಸಬಹುದು. ಸೈಕಲ್ ಅಥವಾ ಸ್ಕೂಟರ್ ಓಡಿಸುವ ಸಾಮರ್ಥ್ಯ ಹೊಂದಿರಬೇಕು. 10 ನೇ ತರಗತಿ ಪರೀಕ್ಷೆಗಳಲ್ಲಿ ಪಡೆದ ಅಂಕಗಳ ಆಧಾರದ ಮೇಲೆ ಹುದ್ದೆಗಳಿಗೆ ಆಯ್ಕೆ ಮಾಡಲಾಗುತ್ತದೆ. ಅರ್ಹ ಅಭ್ಯರ್ಥಿಗಳು ಮಾರ್ಚ್ 3 ರವರೆಗೆ ಆನ್ಲೈನ್ನಲ್ಲಿ ಅರ್ಜಿ ಸಲ್ಲಿಸಬಹುದು. ಗ್ರಾಮೀಣ ಡಾಕ್ ಸೇವಕರ ಅಡಿಯಲ್ಲಿ ಶಾಖಾ ಪೋಸ್ಟ್ ಮಾಸ್ಟರ್, ಸಹಾಯಕ ಶಾಖಾ ಪೋಸ್ಟ್ ಮಾಸ್ಟರ್ ಮತ್ತು ಡಾಕ್ ಸೇವಕರನ್ನು ನೇಮಿಸಲಾಗುವುದು. ಅರ್ಜಿ ಶುಲ್ಕ ಸಾಮಾನ್ಯ, ಒಬಿಸಿ, ಇಡಬ್ಲ್ಯೂಎಸ್ ವರ್ಗಗಳಿಗೆ: ರೂ. 100 (100) SC/ST/PWD/ಮಹಿಳಾ ಅಭ್ಯರ್ಥಿಗಳು/ಟ್ರಾನ್ಸ್ ಮಹಿಳೆಯರು – ಯಾವುದೇ ಶುಲ್ಕವಿಲ್ಲ. ಪ್ರಮುಖ ದಿನಾಂಕಗಳು ಆನ್ಲೈನ್ನಲ್ಲಿ ಅರ್ಜಿ ಸಲ್ಲಿಸಲು ಆರಂಭಿಕ ದಿನಾಂಕ: 10-02-2025 ಆನ್ಲೈನ್ನಲ್ಲಿ…
ಅಮ್ರೋಹಾ : ಉತ್ತರ ಪ್ರದೇಶದ ಅಮ್ರೋಹಾ ಜಿಲ್ಲೆಯಲ್ಲಿ ಒಂದು ಸಂಚಲನಕಾರಿ ಪ್ರಕರಣ ಬೆಳಕಿಗೆ ಬಂದಿದೆ. ಒಬ್ಬ ಮಹಿಳೆ ತನ್ನ ಸಾಕು ಬೆಕ್ಕಿನ ಸಾವಿನಿಂದ ನೊಂದು ಬೆಕ್ಕಿನ ಮೃತ ದೇಹವನ್ನು ಅದು ಮತ್ತೆ ಜೀವಂತವಾಗುತ್ತದೆ ಎಂಬ ಭರವಸೆಯಿಂದ ಎರಡು ದಿನಗಳ ಕಾಲ ತನ್ನ ಬಳಿಯೇ ಇಟ್ಟುಕೊಂಡಿದ್ದಳು. ಬಳಿಕ ಮೂರನೇ ದಿನ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. 32 ವರ್ಷದ ಪೂಜಾ ಅಮ್ರೋಹಾದ ಹಸನ್ಪುರದ ನಿವಾಸಿಯಾಗಿದ್ದರು. ಸುಮಾರು ಎಂಟು ವರ್ಷಗಳ ಹಿಂದೆ, ಪೂಜಾ ದೆಹಲಿಯ ವ್ಯಕ್ತಿಯನ್ನು ವಿವಾಹವಾದರು. ಆದಾಗ್ಯೂ, ಮದುವೆಯು ಕೇವಲ ಎರಡು ವರ್ಷಗಳ ನಂತರ ವಿಚ್ಛೇದನದಲ್ಲಿ ಕೊನೆಗೊಂಡಿತು ಮತ್ತು ಅಂದಿನಿಂದ, ಅವರು ತಮ್ಮ ತಾಯಿ ಗಜ್ರಾ ದೇವಿ ಅವರೊಂದಿಗೆ ತಮ್ಮ ತಾಯಿಯ ಮನೆಯಲ್ಲಿ ವಾಸಿಸುತ್ತಿದ್ದರು. ಒಂಟಿತನವನ್ನು ನಿಭಾಯಿಸಲು, ಪೂಜಾ ಸಾಕು ಬೆಕ್ಕನ್ನು ದತ್ತು ಪಡೆದರು, ಅದು ಗುರುವಾರ ಸತ್ತುಹೋಯಿತು. ಸತ್ತ ಬೆಕ್ಕನ್ನು ಹೂಳಲು ಆಕೆಯ ತಾಯಿ ಸೂಚಿಸಿದಾಗ, ಪೂಜಾ ನಿರಾಕರಿಸಿದಳು. ಬೆಕ್ಕು ಮತ್ತೆ ಜೀವಕ್ಕೆ ಬರುತ್ತದೆ ಎಂದು ಹೇಳಿದ್ದಾಳೆ. ಪೂಜಾ ಬೆಕ್ಕಿನ ಮೃತ ದೇಹವನ್ನು ಬಿಡಲು…
ಮೈಸೂರು: ಬೆಳಗಾವಿಯಲ್ಲಿ ಮರಾಠಿಗರ ಪುಂಡಾಟದ ವಿರುದ್ಧ ಕನ್ನಡಿಗರು ಸಿಡಿದೆದ್ದಿದ್ದಾರೆ. ಮಾರ್ಚ್.3ರಿಂದ 22ರವರೆಗೆ ಸಾಲು ಸಾಲು ಪ್ರತಿಭಟನೆಗೆ ನಿರ್ಧಾರ ಕೈಗೊಳ್ಳಲಾಗಿದೆ. ಅಲ್ಲದೇ ಮಾರ್ಚ್.22ರಂದು ಅಖಂಡ ಕರ್ನಾಟಕ ಬಂದ್ ಮಾಡುವುದಾಗಿ ಕನ್ನಡ ಚಳುವಳಿ ಹೋರಾಟಗಾರ ವಾಟಾಳ್ ನಾಗರಾಜ್ ಮತ್ತೊಮ್ಮೆ ಸ್ಪಷ್ಟಪಡಿಸಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಆಕಾಶ – ಭೂಮಿ ಒಂದಾದರೂ ಸರಿ. ಮಾರ್ಚ್ 22 ರಂದು ಅಖಂಡ ಕರ್ನಾಟಕ ಬಂದ್ ಮಾಡಿಯೇ ತೀರುತ್ತೇವೆ ಎಂದು ಸ್ಪಷ್ಟಪಡಿಸಿದ್ದಾರೆ. ಗಡಿ ನಾಡು, ಕನ್ನಡ, ಕನ್ನಡಿಗರ ಶಕ್ತಿ ಪ್ರದರ್ಶನ ಮಾಡುತ್ತೇವೆ. ಕನ್ನಡಿಗರ ಶಕ್ತಿ ದೇಶಕ್ಕೆ ಗೊತ್ತಾಗಬೇಕು. ಉತ್ತರ ಕರ್ನಾಟಕ, ಹೈದರಾಬಾದ್ ಕರ್ನಾಟಕ ಅಭಿ ವೃದ್ಧಿ ಆಗಬೇಕು. ಕೇಂದ್ರ ರಾಜ್ಯವನ್ನು ಕಡೆಗಣಿಸಿದ್ದನ್ನು ವಿರೋಧಿಸುತ್ತೇವೆ. ಕರ್ನಾಟಕದಲ್ಲಿ ಹಿಂದೆ ಕಂಡಿರದ ಬಂದ್ ಇದಾಗಬೇಕು. 1900 ಕನ್ನಡಪರ ಸಂಘಟನೆಗಳು ಬೆಂಬಲ ಸೂಚಿಸಿವೆ ಎಂದರು. ಮಾರ್ಚ್.22ರಂದು ಅಖಂಡ ಕರ್ನಾಟಕ ಬಂದ್ ಗೆ ನಿರ್ಧರಿಸಲಾಗಿದೆ. ಅಂದು ಹೋಟೆಲ್, ಅಂಗಡಿ ಮುಂಗಟ್ಟುಗಳು, ಸಾರಿಗೆ ಸಂಚಾರ ಬಂದ್ ಆಗಲಿದೆ. ಬೆಳಿಗ್ಗೆ 6ರಿಂದ ಸಂಜೆ 6ರವರೆಗೆ ಕರ್ನಾಟಕ ಬಂದ್ ಇರಲಿದೆ ಎಂದರು.…
ಬೆಂಗಳೂರು : ರಾಜ್ಯದಲ್ಲಿ ಹಕ್ಕಿ ಜ್ವರದ ಭೀತಿ ಹಿನ್ನೆಲೆಯಲ್ಲಿ ಕೆಲವು ಕಡೆಗಳಲ್ಲಿ ಜನರು ಯಾವುದಕ್ಕೂ ಹೆದರದೆ ಚಿಕನ್ ಖರೀದಿಗೆ ಮುಗಿಬಿದ್ದಿದ್ದು ಇನ್ನೂ ಚಿಕ್ಕಬಳ್ಳಾಪುರದಲ್ಲಿ ಚಿಕನ್ ಕಡೆ ಮುಖ ಮಾಡದ ಜನರು, ಮಟನ್ ಖರೀದಿಯಲ್ಲಿ ತೊಡಗಿದ್ದಾರೆ. ಹಾಗಾಗಿ ಚಿಕ್ಕಬಳ್ಳಾಪುರದಲ್ಲಿ 70 ರೂಪಾಯಿ ಚಿಕನ್ ರೇಟ್ ಕಡಿಮೆಯಾಗಿದ್ದು, ಮಟನ್ ಗೆ ಫುಲ್ ಡಿಮ್ಯಾಂಡ್ ಆಗಿದ್ದು ಮಟನ್ ಗೆ ಕೆಜಿಗೆ ರೂ.50 ಏರಿಕೆಯಾಗಿದೆ. ಹೌದು ಹಕ್ಕಿಜ್ವರ ಭೀತಿ ಹಿನ್ನೆಲೆ ಚಿಕನ್ ಬದಲು ಮಟನ್ ಗೆ ಮೊರೆ ಹೋದ ಜನರು. ಮಾಂಸ ಪ್ರೀಯರಿಂದ ಚಿಕನ್ ಬದಲು ಇದೀಗ ಮಟನ್ ಖರೀದಿ ಭರಾಟೆ ಜೋರಾಗಿದೆ. ಚಿಕನ್ ಬಗ್ಗೆ ಕೇಳಿದರೆ ಬೆಚ್ಚಿ ಬೀಳುತ್ತಿದ್ದಾರೆ ಚಿಕ್ಕಬಳ್ಳಾಪುರ ಜನತೆ. ಚಿಕನ್ ರೇಟ್ 70 ರೂ. ಇಳಿಕೆಯಾಗಿದ್ದು, 270 ರೂ. ಇದ್ದ ಚಿಕನ್ ದರ ಇದೀಗ 200 ರೂ. ತಲುಪಿದೆ. ಅದೇ ರೀತಿಯಾಗಿ ಮಟನ್ ಬಲೆ ರೂ.50 ಏರಿಕೆಯಾಗಿದೆ. ಪ್ರತಿ ಕೆಜಿ ಚಿಕನ್ ಗೆ 20 ರೂಪಾಯಿ ಆಗಿದ್ದು ಪ್ರತಿ ಕೆಜಿ ಮಟನ್ ಗೆ…
ಬೆಂಗಳೂರು : ರಾಜ್ಯದಲ್ಲಿ ದಿನದಿಂದ ದಿನಕ್ಕೆ ತಾಪಮಾನ ಏರಿಕೆಯಾಗುತ್ತಿದ್ದು, ಇನ್ನೂ ಎರಡು ದಿನ ಉಷ್ಣ ಮಾರುತ ಎಚ್ಚರಿಕೆ ನೀಡಲಾಗಿದೆ. ಹವಾಮಾನ ಇಲಾಖೆ ಮಾಹಿತಿ ಪ್ರಕಾರ, ರಾಜ್ಯದಲ್ಲಿ ಮುಂದಿನ 2 ದಿನಗಳ ಕಾಲ ಉಷ್ಣ ಮಾರುತ ಎಚ್ಚರಿಕೆ ನೀಡಲಾಗಿದ್ದು, ಕರಾವಳಿ ಜಿಲ್ಲೆಗಳಲ್ಲಿ ಬಿಸಿಲ ತಾಪ ದಿಂದ ಇನ್ನೂ ಎರಡು ದಿನ ಉಷ್ಣ ಅಲೆ ಇರುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನೂಚನೆ ನೀಡಿದೆ. ಬಿಸಿಲ ತಾಪ ಹೆಚ್ಚಾಗುತ್ತಿರು ವುದರಿಂದ ಗರಿಷ್ಠ ಉಷ್ಣಾಂಶ ದಲ್ಲಿ ಹೆಚ್ಚಳವಾಗುತ್ತಿದೆ. 4 -5 ದಿನಗಳಿಂದ ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿಯಲ್ಲಿಉಷ್ಣ ಅಲೆ ಭೀತಿ ಇದ್ದು, ಎರಡು ದಿನ ಇದೇ ಸ್ಥಿತಿ ಇರಲಿದೆ ಎಂದಿದೆ. ಉತ್ತರ ಕನ್ನಡ ಜಿಲ್ಲೆಯ ಕಾರವಾರದಲ್ಲಿ ಅತಿ ಹೆಚ್ಚು 38.2 ಡಿ.ಸೆ. ಗರಿಷ್ಠ ಉಷ್ಣಾಂಶ ದಾಖಲಾಗಿದೆ. ಇದು ವಾಡಿಕೆ ಪ್ರಮಾಣಕ್ಕಿಂತ 4.8 ಡಿ.ಸೆ. ಹೆಚ್ಚಾಗಿದೆ. ಹೊನ್ನಾವರ ದಲ್ಲಿಯೂ 36.6 ಡಿ.ಸೆ. ಗರಿಷ್ಠ ಉಷ್ಣಾಂಶ (ವಾಡಿಕೆಗಿಂತ 3.9 ಹೆಚ್ಚು) ದಾಖಲಾಗಿದೆ. ಮಂಗಳೂರಿನಲ್ಲಿ ಗರಿಷ್ಠ 36.3…
ಬಾಗಲಕೋಟೆ : ಪರೀಕ್ಷೆಯಲ್ಲಿ ಕಾಪಿ ಹೊಡಿಯಬೇಡ ಎಂದಿದ್ದಕ್ಕೆ ಮನನೊಂದು ಪ್ರಥಮ ಪಿಯುಸಿ ವಿದ್ಯಾರ್ಥಿನಿ ಕೆರೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬಾಗಲಕೋಟೆ ಜಿಲ್ಲೆಯಲ್ಲಿ ನಡೆದಿದೆ. ಬಾಗಲಕೋಟೆ ಜಿಲ್ಲೆಯ ಮುಧೋಳದಲ್ಲಿ ಶಾರದಾ ಖಾಸಗಿ ಕಾಲೇಜಿ ನಲ್ಲಿ ಪ್ರಥಮ ಪಿಯು ವಿಜ್ಞಾನ ತರಗತಿಯಲ್ಲಿ ಓದುತ್ತಿರುವ ಹಿರೇಕೇರಿ ಗಲ್ಲಿಯ ನಿವಾಸಿ ತೇಜಸ್ವಿನಿ ದೊಡಮನಿ (17) ಆತ್ಮಹತ್ಯೆಗೆ ಶರಣಾಗಿರುವ ವಿದ್ಯಾರ್ಥಿನಿ. ಫೆ.27ರಂದು ವಾರ್ಷಿಕ ಪರೀಕ್ಷೆಯ ವೇಳೆ ನಕಲು ಮಾಡುವಾಗ ಸಿಕ್ಕಿಬಿದ್ದಿದ್ದು, ಕಾಲೇಜಿನ ಸಿಬ್ಬಂದಿ ಪ್ರಶ್ನಿಸಿ, ವಿಷಯ ಪೋಷಕರಿಗೆ ತಿಳಿಸಿದ್ದು, ಸಿಬ್ಬಂದಿ ಸಿಸಿಟಿವಿ ಪರಿಶೀಲಿಸಲು ಮುಂದಾದಾಗ ವಿದ್ಯಾರ್ಥಿನಿ ಕೆರೆಗೆ ಹಾರಿ ಆತ್ಮಹತ್ಯೆಗೆ ಶರಣಾಗಿದ್ದಾರೆ ಎನ್ನಲಾಗಿದೆ. ಶವ ನಗರದ ಮಹಾರಾಣಿ ಕೆರೆಯಲ್ಲಿ ಭಾನುವಾರ ಪತ್ತೆಯಾಗಿದೆ. ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಶಿವಮೊಗ್ಗ : ರಾಜ್ಯ ಸರ್ಕಾರವು ಅನ್ನಭಾಗ್ಯ ಯೋಜನೆ ಫಲಾನುಭವಿಗಳಿಗೆ ಸಿಹಿಸುದ್ದಿ ನೀಡಿದ್ದು, ಬಿಪಿಎಲ್ ಮತ್ತು ಅಂತ್ಯೋದಯ ಕಾರ್ಡ್ಸ್ ಫಲಾನುಭವಿಗಳಿಗೆ ಮಾರ್ಚ್ ತಿಂಗಳಿನಲ್ಲಿ ಫೆಬ್ರವರಿ ಮತ್ತು ಮಾರ್ಚ್ ಎರಡು ತಿಂಗಳನದು ಸೇರಿಸಿ 10 ಕೇಜಿ ಹೆಚ್ಚುವರಿ ಅಕ್ಕಿ ಕೊಡುತ್ತೇವೆ ಎಂದು ಆಹಾರ ಸಚಿವ ಮುನಿಯಪ್ಪ ಹೇಳಿದ್ದಾರೆ. ಈ ಕುರಿತು ಸಚಿವರು ಮಾಹಿತಿ ನೀಡಿದ್ದು, ಬಿಪಿಎಲ್ ಮತ್ತು ಅಂತ್ಯೋದಯ ಕಾರ್ಡ್ ಫಲಾನುಭವಿಗಳಿಗೆ ಮಾರ್ಚ್ ತಿಂಗಳಿನಲ್ಲಿ ಫೆಬ್ರವರಿ ಮತ್ತು ಮಾರ್ಚ್ ಎರಡು ತಿಂಗಳನದು ಸೇರಿಸಿ ಅಕ್ಕಿ ಕೊಡುತ್ತೇವೆ ರಾಜ್ಯದಲ್ಲಿ 2.90 ಲಕ್ಷ ಪಡಿತರ ಕಾರ್ಡ್ಗಳನ್ನು ಪರೀಕ್ಷರಣೆ ಮಾಡಲಾಗಿದ್ದು, ಆ ಪೈಕಿ 1.65 ಲಕ್ಷಕ್ಕೂ ಹೆಚ್ಚು ಎಪಿಎಲ್ ಕಾರ್ಡ್ಗಳನ್ನು ಬಿಪಿಎಲ್ಗೆ ಸೇರಿಸಲಾಗಿದೆ. ಉಳಿದ ಕಾರ್ಡ್ ಗಳನ್ನು ಎಪಿಎಲ್ನಲ್ಲಿ ಇಟ್ಟಿದ್ದೇವೆ ಎಂದರು. 10 ಕೆಜಿ ಅಕ್ಕಿ ಕೊಡುವುದಾಗಿ ಕಾಂಗ್ರೆಸ್ ಪ್ರಣಾಳಿಕೆಯಲ್ಲಿ ಹೇಳಿತ್ತು. ಆಗ ಕೇಂದ್ರ ಸರ್ಕಾರ ಮತ್ತು ಪುಡ್ ಕಾರ್ಪೊರೇಷನ್ ಅಕ್ಕಿ ಕೊಡಲಿಲ್ಲ. ಇದೀಗ ಅಕ್ಕಿ ಕೊಡುವುದಾಗಿ ಮುಂದೆ ಬಂದಿದ್ದಾರೆ. ಹೀಗಾಗಿ ಫೆಬ್ರವರಿ ತಿಂಗಳಿನಿಂದಲೇ ಹಣದ ಬದಲು ಅಕ್ಕಿ…
ಬೆಂಗಳೂರು : ಕರ್ನಾಟಕ ಗ್ರಾಮ ಸ್ವರಾಜ್ ಹಾಗೂ ಪಂಚಾಯತ್ ಅಧಿನಿಯಮ 1993 ರ ಪ್ರಕರಣ 241 ಉಪ ಪ್ರಕರಣ (1) ರಡಿ ಗ್ರಾಮ ಪಂಚಾಯಿತಿಗಳು ತಮಗೆ ಮುಂದಿನ ಆರ್ಥಿಕ ವರ್ಷದಲ್ಲಿ ವಿವಿಧ ಬಾಬ್ತುಗಳಡಿ ಲಭ್ಯವಾಗುವ ಅನುದಾನ ಹಾಗೂ ಕೈಗೊಳ್ಳಬೇಕಾದ ಅಭಿವೃದ್ಧಿ ಯೋಜನೆಗಳನ್ನೊಳಗೊಂಡಂತೆ ಆಯವ್ಯಯ ತಯಾರಿಸಿ ಮಾರ್ಚ್ 10 ನೇ ತಾರೀಖಿನ ಒಳಗೆ ಗ್ರಾಮ ಪಂಚಾಯಿತಿಯ ಸಭೆಯಲ್ಲಿ ಮಂಡಿಸಿ ಅನುಮೋದನೆ ಪಡೆದುಕೊಳ್ಳುವಂತೆ ಸಚಿವ ಪ್ರಿಯಾಂಕ್ ಖರ್ಗೆ ನಿರ್ದೇಶಿಸಿದ್ದಾರೆ. ಗ್ರಾಮ ಪಂಚಾಯಿತಿಗಳಿಗೆ ರಾಜ್ಯ ಹಾಗೂ ಕೇಂದ್ರ ಸರ್ಕಾರ ನೀಡುವ ಶಾಸನಬದ್ಧ ಅನುದಾನ, ವಿವಿಧ ಯೋಜನೆಗಳಡಿ ರಾಜ್ಯ ಸರ್ಕಾರ ನೀಡುತ್ತಿರುವ ಆರ್ಥಿಕ ನೆರವು ಮಾತ್ರವಲ್ಲದೆ ಪಂಚಾಯತಿಗಳು ಸ್ವಂತ ಸಂಪನ್ಮೂಲ ಸಂಗ್ರಹಿಸಲು ಅವಕಾಶವಿರುವುದರಿಂದ, ಗ್ರಾಮ ಪಂಚಾಯತಿಗಳು ತಮ್ಮ ಆಯವ್ಯಗಳನ್ನು ತಾವೇ ತಯಾರಿಸಿಕೊಂಡು ಅನುಮೋದನೆ ಪಡೆಯಲು ಎಲ್ಲಾ ಗ್ರಾಮ ಪಂಚಾಯತಿಗಳಿಗೆ ಸೂಚಿಸುವಂತೆ ಪಂಚಾಯತ್ ರಾಜ್ ಅಪರ ಮುಖ್ಯ ಕಾರ್ಯದರ್ಶಿಗಳಿಗೆ ತಿಳಿಸಿದ್ದಾರೆ. ವಿಕೇಂದ್ರೀಕರಣ ವ್ಯವಸ್ಥೆಯಲ್ಲಿ ಗ್ರಾಮ ಪಂಚಾಯತಿಗಳಿಗೆ ವಿಶೇಷವಾದ ಮಹತ್ವವಿದೆ. ಗ್ರಾಮ ಪಂಚಾಯತಿಗಳು ಗ್ರಾಮ ಮಟ್ಟದಲ್ಲಿ ಸ್ಥಳೀಯ ಸರ್ಕಾರಗಳಂತೆ ಕಾರ್ಯ…