Author: kannadanewsnow57

ನವದೆಹಲಿ: ಪಾಕಿಸ್ತಾನದ ಗುಪ್ತಚರ ಸಂಸ್ಥೆ ಐಎಸ್ಐ (ISI) ಮತ್ತು ತಲೆಮರೆಸಿಕೊಂಡಿರುವ ಭೂಗತ ಪಾತಕಿ ದಾವೂದ್ ಇಬ್ರಾಹಿಂ ನಡುವಿನ ರಹಸ್ಯ ಜಾಲವನ್ನು ದೆಹಲಿ ಪೊಲೀಸರ ವಿಶೇಷ ದಳ (Special Cell) ಪತ್ತೆಹಚ್ಚಿದೆ. ದೇಶದಾದ್ಯಂತ ವಿಧ್ವಂಸಕ ಕೃತ್ಯಗಳನ್ನು ಎಸಗಲು ಸಂಚು ರೂಪಿಸಿದ್ದ ನೇಪಾಳ ಮೂಲದ ಪ್ರಜೆಗಳು ಸೇರಿದಂತೆ ಒಂಬತ್ತು ಜನರನ್ನು ಪೊಲೀಸರು ಬಂಧಿಸಿದ್ದಾರೆ ಎಂದು ಐಎಎನ್ಎಸ್ (IANS) ವರದಿ ಮಾಡಿದೆ. ಬಂಧಿತರಿಂದ ಬೃಹತ್ ಪ್ರಮಾಣದ ಶಸ್ತ್ರಾಸ್ತ್ರ ಮತ್ತು ಮದ್ದುಗುಂಡುಗಳನ್ನು ವಶಪಡಿಸಿಕೊಳ್ಳಲಾಗಿದೆ. ಪಾಕಿಸ್ತಾನದ ಗುಪ್ತಚರ ಸಂಸ್ಥೆಯು ಈ ಜಾಲವನ್ನು ಭಾರತದೊಳಗೆ ಕಾನೂನುಬಾಹಿರ ಮತ್ತು ದೇಶದ್ರೋಹಿ ಚಟುವಟಿಕೆಗಳನ್ನು ನಡೆಸುವ ಉದ್ದೇಶದಿಂದಲೇ ದೀರ್ಘಕಾಲದವರೆಗೆ ಸಿದ್ಧಪಡಿಸಿತ್ತು ಎಂದು ಮೂಲಗಳು ತಿಳಿಸಿವೆ. ಸದ್ಯ ತನಿಖಾಧಿಕಾರಿಗಳು ಈ ಜಾಲದ ಕಾರ್ಯವಿಧಾನಗಳು, ಮುಂದಿನ ಕಾರ್ಯಾಚರಣೆಯ ಯೋಜನೆಗಳು ಮತ್ತು ವಶಪಡಿಸಿಕೊಳ್ಳಲಾದ ಶಸ್ತ್ರಾಸ್ತ್ರಗಳ ಮೂಲದ ಬಗ್ಗೆ ತೀವ್ರ ವಿಚಾರಣೆ ನಡೆಸುತ್ತಿದ್ದಾರೆ. ಗಡಿಯಾಚೆಗಿನ ಭಯೋತ್ಪಾದನೆ ಮತ್ತು ಸಂಘಟಿತ ಅಪರಾಧ ಜಾಲಗಳನ್ನು ಮಟ್ಟಹಾಕುವಲ್ಲಿ ಈ ಬಂಧನವು ಭಾರತೀಯ ಭದ್ರತಾ ಪಡೆಗಳಿಗೆ ಸಿಕ್ಕ ದೊಡ್ಡ ಯಶಸ್ಸು ಎಂದು ಪರಿಗಣಿಸಲಾಗಿದೆ. https://twitter.com/ANI/status/2060628397727088907?s=20

Read More

ರಾಮನಗರ: ರಾಜಕೀಯದಲ್ಲಿ ನಾಯಕರಿಗಾಗಿ ಅಭಿಮಾನಿಗಳು ಪ್ರಾಣ ಕೊಡುವುದನ್ನು ಕೇಳಿದ್ದೇವೆ, ಇಲ್ಲವೇ ದೇವಸ್ಥಾನಗಳಿಗೆ ನಡೆದುಕೊಂಡು ಹೋಗಿ ಹರಕೆ ಹೊರುವುದನ್ನು ನೋಡಿದ್ದೇವೆ. ಆದರೆ, ಕನಕಪುರ ಬಂಡೆ, ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರು ಕರ್ನಾಟಕದ ಮುಖ್ಯಮಂತ್ರಿಯಾಗಬೇಕು ಎಂದು ಅವರ ಅಭಿಮಾನಿಯೊಬ್ಬರು ಕಳೆದ ಮೂರು ವರ್ಷಗಳಿಂದ ಕ್ಷೌರವೇ ಮಾಡಿಸಿಕೊಳ್ಳದೆ ವಿಶಿಷ್ಟ ಶಪಥ ಮಾಡಿದ್ದ ರೋಚಕ ಕಥೆಯೊಂದು ಈಗ ಸೋಶಿಯಲ್ ಮೀಡಿಯಾದಲ್ಲಿ ಭಾರಿ ವೈರಲ್ ಆಗುತ್ತಿದೆ. ಇತ್ತೀಚೆಗಷ್ಟೇ ಡಿಕೆಶಿ ಸಿಎಂ ಆಗುವವರೆಗೂ ಕಾಲಿಗೆ ಚಪ್ಪಲಿ ಹಾಕಲ್ಲ ಎಂದು ಹರಕೆ ಹೊತ್ತಿದ್ದ ಅಭಿಮಾನಿಯೊಬ್ಬರ ಸುದ್ದಿ ಸದ್ದು ಮಾಡಿತ್ತು. ಅದರ ಬೆನ್ನಲ್ಲೇ ಈಗ ಮತ್ತೊಬ್ಬ ಅಪ್ಪಟ ಅಭಿಮಾನಿಯ ಅಪರೂಪದ ಭಕ್ತಿ ಮುನ್ನೆಲೆಗೆ ಬಂದಿದೆ. ಯಾರು ಈ ಅಪ್ಪಟ ಅಭಿಮಾನಿ? ಏನಿದು ಶಪಥ? ಬೆಂಗಳೂರು ದಕ್ಷಿಣ ಜಿಲ್ಲೆಯ ಹಾರೋಹಳ್ಳಿ ತಾಲೂಕಿನ ಚಿಕ್ಕಸಾದೇನಹಳ್ಳಿ ಗ್ರಾಮದ ಈಶ್ವರಪ್ಪ ಎಂಬುವವರೇ ಈ ವಿಶಿಷ್ಟ ಅಭಿಮಾನಿ. ತನಗಾಗಿ ಆಸ್ತಿ-ಅಂತಸ್ತು ಮಾಡಿಕೊಳ್ಳುವುದಕ್ಕಿಂತ, ತನ್ನ ನೆಚ್ಚಿನ ನಾಯಕ ಡಿ.ಕೆ.ಶಿವಕುಮಾರ್ ರಾಜ್ಯದ ಮುಖ್ಯಮಂತ್ರಿ ಗಾದಿ ಏರಬೇಕು ಎಂಬುದೇ ಈಶ್ವರಪ್ಪ ಅವರ ಬದುಕಿನ ಏಕೈಕ…

Read More

ಏಲೂರು: ದೃಶ್ಯಂ ಸಿನಿಮಾ ಸ್ಟೈಲ್ನಲ್ಲಿ ಮಹಿಳೆಯೊಬ್ಬಳನ್ನು ಭೀಕರವಾಗಿ ಕೊಲೆ ಮಾಡಿ, ಆಕೆ ಬದುಕಿದ್ದಾಳೆ ಎಂದು ನಂಬಿಸಲು ಆಕೆಯ ಫೋನ್ ನಿಂದಲೇ ಪತಿಗೆ ವಾಟ್ಸಾಪ್ ಮೆಸೇಜ್ ಕಳುಹಿಸುತ್ತಿದ್ದ ಆರೋಪಿಯ ನಾಟಕವನ್ನು ಆಂಧ್ರಪ್ರದೇಶದ ಪೊಲೀಸರು ಬಯಲಿಗೆಳೆದಿದ್ದಾರೆ. ಅಕ್ರಮ ಸಂಬಂಧದಲ್ಲಿ ಉಂಟಾದ ಅನುಮಾನ ಹಾಗೂ ಹಣಕಾಸಿನ ವಿವಾದವೇ ಈ ಭೀಕರ ಕೊಲೆಗೆ ಕಾರಣವಾಗಿದೆ. ನಂಬಿಸಿ ಪ್ರಾಣ ತೆಗೆದು, ಶವವನ್ನು ಹೂತುಹಾಕಿ ಡ್ರಾಮಾ ಮಾಡುತ್ತಿದ್ದ ಆರೋಪಿಯನ್ನು ಏಲೂರು ತ್ರೀ ಟೌನ್ ಪೊಲೀಸರು ಬಂಧಿಸಿದ್ದಾರೆ. ಆಂಧ್ರಪ್ರದೇಶದ ಏಲೂರು ತ್ರೀ ಟೌನ್ ಪೊಲೀಸ್ ಠಾಣಾ ವ್ಯಾಪ್ತಿಯ ಸೌರಿಪುರಂ ಗ್ರಾಮದ ಮಲ್ಲವಲ್ಲಿ ವಿಶಾಲಿ (36) ಎಂಬ ವಿವಾಹಿತೆ, ಏಪ್ರಿಲ್ 18 ರಂದು ಗುಡಿವಾಡದಲ್ಲಿರುವ ತನ್ನ ಸಂಬಂಧಿಕರ ಮನೆಗೆ ಹೋಗುವುದಾಗಿ ಹೇಳಿ ಮನೆಯಿಂದ ಹೊರಟಿದ್ದರು. ಆದರೆ ಆಕೆ ಎಷ್ಟು ದಿನ ಕಳೆದರೂ ಮನೆಗೆ ಮರಳದಿದ್ದಾಗ ಮತ್ತು ಮೊಬೈಲ್ ಫೋನ್ ಸ್ವಿಚ್ ಆಫ್ ಆಗಿದ್ದರಿಂದ ಆತಂಕಗೊಂಡ ಪತಿ ಪೊಲೀಸರಿಗೆ ದೂರು ನೀಡಿದ್ದರು. ಪತಿಯ ದೂರಿನ ಮೇರೆಗೆ ಪೊಲೀಸರು ಮಿಸ್ಸಿಂಗ್ ಕೇಸ್ ದಾಖಲಿಸಿಕೊಂಡು ತನಿಖೆ ಆರಂಭಿಸಿದರು.…

Read More

ನವದೆಹಲಿ: ಶಾಲಾ ಶಿಕ್ಷಕರ ಅರ್ಹತೆಗೆ ಸಂಬಂಧಿಸಿದಂತೆ ದೇಶದ ಅತ್ಯುನ್ನತ ನ್ಯಾಯಾಲಯ ಮಹತ್ವದ ತೀರ್ಪೊಂದನ್ನು ನೀಡಿದೆ. ಪ್ರಸ್ತುತ ಸೇವೆಯಲ್ಲಿರುವ ಎಲ್ಲಾ ಶಿಕ್ಷಕರಿಗೂ ಶಿಕ್ಷಕರ ಅರ್ಹತಾ ಪರೀಕ್ಷೆ (TET) ಕಡ್ಡಾಯ ಎಂದು ಸುಪ್ರೀಂಕೋರ್ಟ್‌ ಮತ್ತೊಮ್ಮೆ ಖಡಕ್ ಆಗಿ ಹೇಳಿದೆ. ಆದರೆ, ಶಿಕ್ಷಕರಿಗೆ ಕೊಂಚ ನಿರಾಳತೆ ತರುವ ಸುದ್ದಿಯೆಂದರೆ, ಪರೀಕ್ಷೆ ಪಾಸ್ ಮಾಡಲು ನೀಡಲಾಗಿದ್ದ ಸಮಯವನ್ನು 2028ರ ಆಗಸ್ಟ್‌ 31ರವರೆಗೆ ವಿಸ್ತರಿಸಲಾಗಿದೆ. ‘ಅಂಜುಮಾನ್‌ ಇಶಾತ್‌ ಇ-ತಲೀಮ್‌ ಟ್ರಸ್ಟ್‌’ ಪ್ರಕರಣದ ಹಳೆಯ ತೀರ್ಪನ್ನು ಪ್ರಶ್ನಿಸಿ ವಿವಿಧ ರಾಜ್ಯ ಸರ್ಕಾರಗಳು, ಶಿಕ್ಷಣ ಸಂಸ್ಥೆಗಳು ಹಾಗೂ ಶಿಕ್ಷಕರ ಸಂಘಟನೆಗಳು ಒಟ್ಟು 65 ಪುನರ್‌ ಪರಿಶೀಲನಾ ಅರ್ಜಿಗಳನ್ನು ಸಲ್ಲಿಸಿದ್ದವು. ಈ ಎಲ್ಲಾ ಅರ್ಜಿಗಳನ್ನು ನ್ಯಾಯಮೂರ್ತಿಗಳಾದ ದೀಪಾಂಕರ್‌ ದತ್ತಾ ಮತ್ತು ಮನಮೋಹನ್‌ ಸಿಂಗ್‌ ಅವರಿದ್ದ ದ್ವಿಸದಸ್ಯ ಪೀಠವು ಸಾರಾಸಗಟಾಗಿ ವಜಾಗೊಳಿಸಿದೆ. ಅಲ್ಲದೆ, ಗುಣಮಟ್ಟದ ಶಿಕ್ಷಣದ ದೃಷ್ಟಿಯಿಂದ ಟಿಇಟಿ ಕಡ್ಡಾಯ ಎಂಬ ತನ್ನ ಹಳೆಯ ಆದೇಶವನ್ನು ಎತ್ತಿ ಹಿಡಿದಿದೆ. 2009ರ ಉಚಿತ ಮತ್ತು ಕಡ್ಡಾಯ ಶಿಕ್ಷಣ ಹಕ್ಕು ಕಾಯ್ದೆ (RTE) ಜಾರಿಗೆ ಬರುವ ಮುನ್ನವೇ…

Read More

ಬೆಂಗಳೂರು: ರಾಜಧಾನಿ ಬೆಂಗಳೂರಿನ ಜನತೆಗೆ ಹವಾಮಾನ ಇಲಾಖೆ ಮಹತ್ವದ ಮುನ್ಸೂಚನೆಯೊಂದನ್ನು ನೀಡಿದೆ. ಮುಂದಿನ 24 ಗಂಟೆಗಳಲ್ಲಿ ನಗರದಾದ್ಯಂತ ಬಿರುಗಾಳಿ ಹಾಗೂ ಗುಡುಗು ಸಹಿತ ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು ಇಲಾಖೆ ಮುಚ್ಚರಿಕೆ ನೀಡಿದೆ. ಹವಾಮಾನ ಇಲಾಖೆಯ ವರದಿಯ ಪ್ರಕಾರ, ನಗರದಲ್ಲಿ ಸಂಜೆ ವೇಳೆಗೆ ಭಾಗಶಃ ಮೋಡ ಕವಿದ ವಾತಾವರಣ ನಿರ್ಮಾಣವಾಗಲಿದ್ದು, ತದನಂತರ ಭಾರಿ ಮಳೆ ಸುರಿಯುವ ಸಾಧ್ಯತೆ ಇದೆ. ಮಳೆಯ ಜೊತೆಗೆ ಬಲವಾದ ಬಿರುಗಾಳಿ ಬೀಸುವ ಹಾಗೂ ಗುಡುಗು ಸಿಡಿಲಿನ ಅಬ್ಬರವೂ ಇರಲಿದೆ ಎಂದು ತಿಳಿಸಲಾಗಿದೆ. ಹಠಾತ್ ಹವಾಮಾನ ಬದಲಾವಣೆ ಮತ್ತು ಭಾರೀ ಮಳೆಯ ಮುನ್ಸೂಚನೆ ಇರುವುದರಿಂದ ಸಾರ್ವಜನಿಕರು ಅಗತ್ಯ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳಬೇಕು ಮತ್ತು ಅನಗತ್ಯ ಪ್ರಯಾಣವನ್ನು ತಪ್ಪಿಸಬೇಕು ಎಂದು ಹವಾಮಾನ ಇಲಾಖೆ ವಿನಂತಿಸಿದೆ.

Read More

ನವದೆಹಲಿ: ಗ್ರಾಹಕರಿಗೆ ಎದುರಾಗಬಹುದಾದ ಇಂಧನ ಬಿಕ್ಕಟ್ಟನ್ನು ತಪ್ಪಿಸಲು ಮತ್ತು ಎಲ್‌ಪಿಜಿ ಸಿಲಿಂಡರ್‌ಗಳ ದುರುಪಯೋಗವನ್ನು ತಡೆಯಲು ಸರ್ಕಾರ ಜೂನ್ 1 ರಿಂದ ಮಹತ್ವದ ಬದಲಾವಣೆಯೊಂದನ್ನು ತರುತ್ತಿದೆ. ಹೊಸ ನಿಯಮಗಳ ಪ್ರಕಾರ, ಪಿಎನ್‌ಜಿ (ಪೈಪ್ಡ್ ನ್ಯಾಚುರಲ್ ಗ್ಯಾಸ್) ಸಂಪರ್ಕ ಹೊಂದಿರುವ ಮನೆಗಳಲ್ಲಿನ ಎಲ್‌ಪಿಜಿ (LPG) ಸಿಲಿಂಡರ್ ಕನೆಕ್ಷನ್‌ಗಳು ರದ್ದಾಗುವ ಸಾಧ್ಯತೆಯಿದೆ. ದೇಶದಲ್ಲಿ ಪಿಎನ್‌ಜಿ ಕನೆಕ್ಷನ್‌ಗಳ ಸಂಖ್ಯೆ ವೇಗವಾಗಿ ಹೆಚ್ಚುತ್ತಿದೆ. ಮಾರ್ಚ್ ತಿಂಗಳವರೆಗೆ ಸುಮಾರು 6.5 ಲಕ್ಷ ಹೊಸ ಪಿಎನ್‌ಜಿ ಸಂಪರ್ಕಗಳನ್ನು ನೀಡಲಾಗಿದೆ. ಆದರೆ, ಸರ್ಕಾರದ ಕಟ್ಟುನಿಟ್ಟಿನ ಸೂಚನೆಯ ಹೊರತಾಗಿಯೂ ಜನರು ಎಲ್‌ಪಿಜಿ ಸಿಲಿಂಡರ್ ಬಳಕೆಯನ್ನು ಕಡಿಮೆ ಮಾಡುತ್ತಿಲ್ಲ. ವಾಸ್ತವವಾಗಿ, ಪಿಎನ್‌ಜಿ ಸಂಪರ್ಕ ಪಡೆದ ನಂತರವೂ ಶೇ. 18 ರಷ್ಟು ಗ್ಯಾಸ್ ಪೂರೈಕೆ ಕಡಿಮೆಯಾಗಿದೆ. ಅಂದರೆ, ಹಲವು ಕುಟುಂಬಗಳು ಪಿಎನ್‌ಜಿ ಸಂಪರ್ಕ ಪಡೆದಿದ್ದರೂ, ಎಲ್‌ಪಿಜಿ ಸಿಲಿಂಡರ್ ಅನ್ನು ಸರೆಂಡರ್ ಮಾಡದೆ ಎರಡನ್ನೂ ಇಟ್ಟುಕೊಂಡಿದ್ದಾರೆ. ‘ಒಂದು ಕುಟುಂಬ, ಒಂದು ಕನೆಕ್ಷನ್’ ನಿಯಮ ಪರಿಷ್ಕೃತ ನಿಯಮಗಳ ಪ್ರಕಾರ, ಈಗಾಗಲೇ ಮನೆಯಲ್ಲಿ ಪಿಎನ್‌ಜಿ (PNG) ಸಂಪರ್ಕ ಹೊಂದಿರುವ ಕುಟುಂಬಗಳು ತಮ್ಮ…

Read More

ಬೆಂಗಳೂರು : ಡಿಕೆ ಶಿವಕುಮಾರ್ ಪಟ್ಟಾಭಿಷೇಕಕ್ಕೆ ಈಗಾಗಲೇ ಭರದ ಸಿದ್ಧತೆ ನಡೆದಿದ್ದು, ಇದೀಗ ರಾಜ್ಯಪಾಲರನ್ನು ಭೇಟಿಯಾಗಿರುವ ಡಿ.ಕೆ.ಶಿವಕುಮಾರ್ ಅವರು ಜೂನ್.1 ಅಥವಾ ಜೂನ್ 5ಕ್ಕೆ ಪ್ರಮಾಣವಚನ ಸ್ವೀಕರಿಸುವ ದಿನಾಂಕ ಕೇಳಿದ್ದಾರೆ. ಶಾಸಕಾಂಗ ಪಕ್ಷದ ಸಭೆಗೂ ಮುನ್ನವೇ ಡಿ.ಕೆ. ಶಿವಕುಮಾರ್ ಲೋಕಭವನಕ್ಕೆ ತೆರಳಿ ರಾಜ್ಯಪಾಲರನ್ನು ಭೇಟಿಯಾಗಿದ್ದಾರೆ. ಪ್ರಮಾಣವಚನ ಸ್ವೀಕಾರಕ್ಕೆ ಸಮಯಾವಕಾಶ ಕೇಳಿದ್ದಾರೆ ಎಂದು ತಿಳಿದುಬಂದಿದೆ. ಸಿಎಲ್ ಪಿ ಸಭೆ ಸಂಜೆ ಇಂದು 4 ಗಂಟೆಗೆ ಆರಂಭವಾಗಲಿದ್ದು, ಸಂಜೆ 6 ಗಂಟೆಯವರೆಗೂ ನಡೆಯಲಿದೆ. ಮಧ್ಯಾಹ್ನ 1 ಗಂಟೆಯ ನಂತರ ರಾಜ್ಯಪಾಲರು ಧರ್ಮಸ್ಥಳಕ್ಕೆ ತೆರಳಲಿರುವ ಕಾರಣ, ಅವರು ಸಿಗುವುದಿಲ್ಲ. ಸಂಜೆ ಕೂಡ ರಾಜ್ಯಪಾಲರು ಅನುಪಸ್ಥಿತರಿರಲಿದ್ದಾರೆ. ಹಾಗಾಗಿ ಡಿ.ಕೆ.ಶಿವಕುಮಾರ್ ಸಿಎಲ್ ಪಿ ಸಭೆಗೂ ಮುನ್ನ ಲೋಕಹವನಕ್ಕೆ ತೆರಳಿ ರಾಜ್ಯಪಾಲರನ್ನು ಭೇಟಿಯಾಗಿ ಚರ್ಚಿಸಿದ್ದಾರೆ. ರಾಜ್ಯಪಾಲರ ಬಳಿ ಎರಡು ದಿನಾಂಕವನ್ನು ಡಿ.ಕೆ.ಶಿವಕುಮಾರ್ ಪ್ರಸ್ತಾಪಿಸಿದ್ದಾರೆ. ಜೂನ್ 1 ಅಥವಾ ಜೂನ್ 5ರಂದು ಪ್ರಮಾಣವಚನ ಸ್ವೀಕರಿಸುವ ಬಗ್ಗೆ ಪ್ರಸ್ತಾಪಿಸಿದ್ದಾರೆ ಎಂದು ತಿಳಿದುಬಂದಿದೆ. ಅಂದುಕೊಂಡಂತೆ ಜೂನ್ 1 ಅಥವಾ ಜೂನ್ 5 ರಂದು ವಿಧಾನಸೌಧದ…

Read More

ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ರಾಜೀನಾಮೆ ಅಧಿಕೃತವಾಗಿ ಅಂಗೀಕಾರಗೊಂಡ ಮರುದಿನವೇ, ಕರ್ನಾಟಕ ರಾಜಕಾರಣದಲ್ಲಿ ಮಹತ್ವದ ನಾಯಕತ್ವ ಬದಲಾವಣೆಗೆ ವೇದಿಕೆ ಸಿದ್ಧವಾಗಿದೆ. ರಾಜ್ಯದ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಜೂನ್ 3 ರಂದು ನೂತನ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸುವ ಸಾಧ್ಯತೆಯಿದೆ ಎಂದು ವರದಿಯಾಗಿದೆ. ಇಂದು ಕಾಂಗ್ರೆಸ್ ಶಾಸಕಾಂಗ ಪಕ್ಷದ (CLP) ಸಭೆ ನೂತನ ನಾಯಕನನ್ನು ಅಧಿಕೃತವಾಗಿ ಆಯ್ಕೆ ಮಾಡಲು ಶನಿವಾರ (ಇಂದು) ಕಾಂಗ್ರೆಸ್ ಶಾಸಕಾಂಗ ಪಕ್ಷದ (ಸಿಎಲ್‌ಪಿ) ಸಭೆಯನ್ನು ಕರೆಯಲಾಗಿದೆ. ಈ ಸಭೆಯಲ್ಲಿ ಡಿ.ಕೆ. ಶಿವಕುಮಾರ್ ಅವರನ್ನು ಶಾಸಕಾಂಗ ಪಕ್ಷದ ನಾಯಕನನ್ನಾಗಿ ಅವಿರೋಧವಾಗಿ ಆಯ್ಕೆ ಮಾಡುವ ಮೂಲಕ, ಅವರು ಮುಖ್ಯಮಂತ್ರಿ ಗದ್ದುಗೆಗೇರಲು ದಾರಿ ಸುಗಮವಾಗಲಿದೆ ಎಂದು ನಿರೀಕ್ಷಿಸಲಾಗಿದೆ. ಸಿದ್ದರಾಮಯ್ಯ ರಾಜೀನಾಮೆ ಅಂಗೀಕಾರ ಪಕ್ಷದ ಹೈಕಮಾಂಡ್ ನಿರ್ಧಾರಕ್ಕೆ ಬದ್ಧರಾಗಿ ಗುರುವಾರವಷ್ಟೇ ಸಿದ್ದರಾಮಯ್ಯ ಅವರು ರಾಜ್ಯಪಾಲರಿಗೆ ತಮ್ಮ ರಾಜೀನಾಮೆ ಪತ್ರವನ್ನು ಸಲ್ಲಿಸಿದ್ದರು. ರಾಜ್ಯಪಾಲರು ಅವರ ರಾಜೀನಾಮೆಯನ್ನು ಅಂಗೀಕರಿಸಿದ್ದು, ಇದರೊಂದಿಗೆ ಕಳೆದ ಕೆಲವು ತಿಂಗಳುಗಳಿಂದ ರಾಜ್ಯ ರಾಜಕೀಯದಲ್ಲಿ ಸೃಷ್ಟಿಯಾಗಿದ್ದ ನಾಯಕತ್ವ ಬದಲಾವಣೆಯ ಎಲ್ಲಾ ಊಹಾಪೋಹಗಳಿಗೆ ತೆರೆ ಬಿದ್ದಂತಾಗಿದೆ.…

Read More

ಬೆಂಗಳೂರು : ಕರ್ನಾಟಕ ರಾಜಕೀಯದಲ್ಲಿ ಈಗ ಭಾರಿ ದೊಡ್ಡ ಸಂಚಲನ ಸೃಷ್ಟಿಯಾಗಿದೆ. ಕೆಪಿಸಿಸಿ ಸಾರಥಿ ಡಿ.ಕೆ. ಶಿವಕುಮಾರ್ ಅವರು ರಾಜ್ಯದ ಮುಂದಿನ ಮುಖ್ಯಮಂತ್ರಿಯಾಗುವುದು ಬಹುತೇಕ ಖಚಿತ ಎನ್ನುವ ಮಾತುಗಳು ಕೇಳಿಬರುತ್ತಿವೆ. ಇದರ ನಡುವೆಯೇ, ಅವರ ದೀರ್ಘಕಾಲದ ಆಪ್ತ ಜ್ಯೋತಿಷಿಯೊಬ್ಬರು ಬಿಚ್ಚಿಟ್ಟಿರುವ ಸತ್ಯವೊಂದು ಸಾಮಾಜಿಕ ಜಾಲತಾಣಗಳಲ್ಲಿ ಸಖತ್ ವೈರಲ್ ಆಗುತ್ತಿದೆ. ಬರೋಬ್ಬರಿ 40 ವರ್ಷಗಳ ಹಿಂದೆಯೇ ತಾವಾಡಿದ ಮಾತು ಈಗ ಅಕ್ಷರಶಃ ನಿಜವಾಗುವ ಕಾಲ ಬಂದಿದೆ ಎಂದು ಅವರು ಹೇಳಿಕೊಂಡಿದ್ದಾರೆ. ‘ಡಿಕೆಶಿ ಒಂದು ದಿನ ರಾಜ್ಯದ ನಾಯಕರಾಗ್ತಾರೆ ಅಂದಿದ್ದೆ’: ಬೆಳ್ಳೂರು ದ್ವಾರಕನಾಥ್ ಭವಿಷ್ಯ! ಖ್ಯಾತ ಜ್ಯೋತಿಷಿ ಬೆಳ್ಳೂರು ದ್ವಾರಕನಾಥ್ ಗುರೂಜಿ ಅವರು ನಾಲ್ಕು ದಶಕಗಳ ಹಿಂದಿನ ಹಳೆಯ ನೆನಪನ್ನು ಮೆಲುಕು ಹಾಕಿದ್ದಾರೆ. ಸುಮಾರು 40 ವರ್ಷಗಳ ಹಿಂದೆ ಯುವಕರಾಗಿದ್ದ ಡಿ.ಕೆ. ಶಿವಕುಮಾರ್ ಅವರು ಜ್ಯೋತಿಷಿಗಳನ್ನು ಭೇಟಿಯಾಗಿದ್ದರಂತೆ. “ಅಂದು ನಾನು ಡಿ.ಕೆ. ಶಿವಕುಮಾರ್ ಅವರ ಜಾತಕವನ್ನು ನೋಡಿದಾಗ ಅತ್ಯಂತ ಶಕ್ತಿಶಾಲಿ ರಾಜಯೋಗ ಇರುವುದು ಕಂಡುಬಂದಿತ್ತು. ಅವರು ಭವಿಷ್ಯದಲ್ಲಿ ಒಂದು ದಿನ ಇಡೀ ಕರ್ನಾಟಕ ರಾಜ್ಯವನ್ನೇ…

Read More

ನವದೆಹಲಿ : ಮುಂಬರುವ ಜೂನ್ ತಿಂಗಳು ತೆರಿಗೆ, ಬ್ಯಾಂಕಿಂಗ್ ಮತ್ತು ಹಸಿರು ಇಂಧನ ವಲಯಕ್ಕೆ ಸಂಬಂಧಿಸಿದಂತೆ ಅತ್ಯಂತ ನಿರ್ಣಾಯಕ ನಿಯಂತ್ರಣ ಬದಲಾವಣೆಗಳನ್ನು ಹೊತ್ತು ತರುತ್ತಿದೆ. ತೆರಿಗೆದಾರರು ಆದಾಯ ತೆರಿಗೆ ಕಾಯ್ದೆ 2025 ರ ಅಡಿಯಲ್ಲಿ ತಮ್ಮ ಮೊದಲ ಮುಂಗಡ ತೆರಿಗೆಯನ್ನು ಜೂನ್ 15 ರೊಳಗೆ ಪಾವತಿಸಬೇಕಾಗಿದೆ. ಇದೇ ವೇಳೆ ವೇತನದಾರರು ಪರಿಷ್ಕೃತ ಭತ್ಯೆಗಳಿಗೆ ಒಗ್ಗಿಕೊಳ್ಳಬೇಕಾಗಿದೆ. ಮತ್ತೊಂದೆಡೆ, ಡಿಜಿಟಲ್ ಹಣಕಾಸು ವಲಯದಲ್ಲಿ ಪರಿಶೀಲಿಸಿದ ಯುಪಿಐ (UPI) ಸ್ವೀಕೃತಿದಾರರ ಹೆಸರುಗಳ ಪ್ರದರ್ಶನದೊಂದಿಗೆ ಕಟ್ಟುನಿಟ್ಟಿನ ಭದ್ರತಾ ಕ್ರಮಗಳನ್ನು ಜಾರಿಗೆ ತರಲಾಗುತ್ತಿದೆ. ಆದರೆ ಸಾಂಪ್ರದಾಯಿಕ ಬ್ಯಾಂಕಿಂಗ್ ಸೇವೆಗಳ ಶುಲ್ಕಗಳು ಹೆಚ್ಚಾಗಲಿವೆ. ಇವುಗಳ ಜೊತೆಗೆ, ಹೊಸ ಸೌರ ಇಂಧನ ಮೂಲಸೌಕರ್ಯ ನಿಯಮಗಳು ಮತ್ತು ಆಸ್ತಿ ವಹಿವಾಟುಗಳಿಗೆ ಪರಿಷ್ಕೃತ ಪ್ಯಾನ್ (PAN) ಮಿತಿಗಳು ಹೂಡಿಕೆದಾರರು ಹಾಗೂ ಸಾಮಾನ್ಯ ನಾಗರಿಕರ ದೈನಂದಿನ ನಿಯಮಾವಳಿಗಳಲ್ಲಿ ಪ್ರಮುಖ ಬದಲಾವಣೆಗಳನ್ನು ತರಲಿವೆ. ತೆರಿಗೆ ಗಡುವುಗಳು ಮತ್ತು ಹೊಸ ರಚನಾತ್ಮಕ ಸುಧಾರಣೆಗಳು ಜೂನ್ ತಿಂಗಳು ಆರಂಭವಾಗುತ್ತಿದ್ದಂತೆ ತೆರಿಗೆದಾರರು ಮತ್ತು ಹೂಡಿಕೆದಾರರು ಹೊಸ ಬದಲಾವಣೆಗಳಿಗೆ ತ್ವರಿತವಾಗಿ ಹೊಂದಿಕೊಳ್ಳಬೇಕಾಗಿದೆ. ಇದರಲ್ಲಿ…

Read More