Author: kannadanewsnow57

ನಾವು ಪ್ರತಿದಿನ ಬಳಸುವ ನೀರಿನ ಬಾಟಲಿಗಳು ನಮ್ಮ ಆರೋಗ್ಯದ ಮೇಲೆ ಗಂಭೀರ ಪರಿಣಾಮ ಬೀರುತ್ತವೆ ಎಂದು ತಜ್ಞರು ಹೇಳುತ್ತಾರೆ. ಜಿಮ್ ಬ್ಯಾಗ್‌ ಗಳಿಂದ ಹಿಡಿದು ಆಫೀಸ್ ಡೆಸ್ಕ್‌ ಗಳವರೆಗೆ ಮತ್ತು ಹಾಸಿಗೆಯ ಪಕ್ಕದ ಟೇಬಲ್‌ ಗಳವರೆಗೆ ಅವು ನಮ್ಮ ದೈನಂದಿನ ಜೀವನದ ಅವಿಭಾಜ್ಯ ಅಂಗವಾಗಿವೆ. ಜನರು ಬಾಟಲಿಗಳನ್ನು ಖರೀದಿಸುವಾಗ ಅವುಗಳ ಬಗ್ಗೆ ಹೆಚ್ಚು ಯೋಚಿಸುವುದಿಲ್ಲ. ಅವು ಸುಲಭವಾಗಿ ಸಾಗಿಸಲು, ಚೆನ್ನಾಗಿ ಕಾಣಲು ಮತ್ತು ಉತ್ತಮ ಹಿಡಿತವನ್ನು ಹೊಂದಿವೆ ಎಂದು ಮಾತ್ರ ಅವರು ಖಚಿತಪಡಿಸಿಕೊಳ್ಳುತ್ತಾರೆ. ಬಾಟಲಿಯನ್ನು ಯಾವ ವಸ್ತುವಿನಿಂದ ತಯಾರಿಸಲಾಗುತ್ತದೆ ಅಥವಾ ಅದು ದೀರ್ಘಕಾಲೀನ ಶೇಖರಣೆಗೆ ಸುರಕ್ಷಿತವಾಗಿದೆಯೇ ಎಂದು ಬಹಳ ಕಡಿಮೆ ಜನರು ಪರಿಗಣಿಸುತ್ತಾರೆ. ಜನರು ಕುಡಿಯುವ ನೀರು ತಮ್ಮ ಆರೋಗ್ಯದ ಮೇಲೆ ಬೀರುವ ಗಂಭೀರ ನಕಾರಾತ್ಮಕ ಪರಿಣಾಮದ ಬಗ್ಗೆ ವಿರಳವಾಗಿ ಯೋಚಿಸುತ್ತಾರೆ. ಏಕೆಂದರೆ ಬಾಟಲಿಗಳನ್ನು ತಯಾರಿಸಲು ಬಳಸುವ ವಸ್ತುಗಳು ಹಾನಿಕಾರಕ ರಾಸಾಯನಿಕಗಳನ್ನು ಹೊರಹಾಕಬಹುದು. ಅವು ನೀರಿನ ರುಚಿಯನ್ನು ಬದಲಾಯಿಸಬಹುದು ಅಥವಾ ಸರಿಯಾಗಿ ಸ್ವಚ್ಛಗೊಳಿಸದಿದ್ದರೆ ಬ್ಯಾಕ್ಟೀರಿಯಾವನ್ನು ಸಹ ಆಶ್ರಯಿಸಬಹುದು. ಆದ್ದರಿಂದ, ಯಾವ ಬಾಟಲಿ…

Read More

ಬೆಂಗಳೂರು : 2025-26 ನೇ ಸಾಲಿನ ರಾಜ್ಯ ಮಟ್ಟದ “ಪ್ರತಿಭಾ ಕಾರಂಜಿ ಸ್ಪರ್ಧೆ” ಕಾರ್ಯಕ್ರಮ ಆಯೋಜಿಸುವ ಬಗ್ಗೆ ಶಾಲಾ ಶಿಕ್ಷಣ ಇಲಾಖೆ ಮಹತ್ವದ ಆದೇಶ ಹೊರಡಿಸಿದೆ. ವಿಷಯಕ್ಕೆ ಸಂಬಂಧಿಸಿದಂತೆ, 2025-26ನೇ ಸಾಲಿನಲ್ಲಿ ರಾಜ್ಯ ಮಟ್ಟದ ‘ಪ್ರತಿಭಾ ಕಾರಂಜಿ ಸ್ಪರ್ಧೆ” ಕಾರ್ಯಕ್ರಮವನ್ನು ಕೊಪ್ಪಳ ಜಿಲ್ಲೆಯಲ್ಲಿ ಫೆಬ್ರವರಿ ಮೊದಲನೇ ವಾರದಲ್ಲಿ ನಡೆಸಲು ಉಲ್ಲೇಖ(1)ರಂತೆ ಸೂಚಿಸಿರುತ್ತಾರೆ. ರಾಜ್ಯ ಮಟ್ಟದ “ಪ್ರತಿಭಾ ಕಾರಂಜಿ ಸ್ಪರ್ಧೆ” ಕಾರ್ಯಕ್ರಮವನ್ನು ಆಯೋಜನೆಗೊಳಿಸುವ ಸಂಬಂಧ ಎಲ್ಲಾ ಜಿಲ್ಲೆಗಳ ಜಿಲ್ಲಾ ಮಟ್ಟದಲ್ಲಿ ಆಯ್ಕೆಯಾದ ವಿದ್ಯಾರ್ಥಿಗಳ ವಿವರವನ್ನು ಉಪನಿರ್ದೇಶಕರು (ಆಡಳಿತ), ಶಾಲಾ ಶಿಕ್ಷಣ ಇಲಾಖೆ, ಕೊಪ್ಪಳ ಜಿಲ್ಲೆ. ರವರಿಗೆ ಕೂಡಲೇ ಸಲ್ಲಿಸುವಂತೆ ರಾಜ್ಯದ ಎಲ್ಲಾ ಜಿಲ್ಲೆಗಳ ಉಪನಿರ್ದೇಶಕರು (ಆಡಳಿತ), ಶಾಲಾ ಶಿಕ್ಷಣ ಇಲಾಖೆ, ರವರಿಗೆ ತಿಳಿಸಿದೆ. ಈ ಸಂಬಂಧ ಉಪನಿರ್ದೇಶಕರು (ಆಡಳಿತ), ಶಾಲಾ ಶಿಕ್ಷಣ ಇಲಾಖೆ, ಕೊಪ್ಪಳ ಜಿಲ್ಲೆ ರವರು ಮಾನ್ಯ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಸಚಿವರ ಅಪ್ತ ಕಾರ್ಯದರ್ಶಿರವರನ್ನು ಖುದ್ದು ಭೇಟಿ ಮಾಡಿ ಚರ್ಚಿಸಿ ದಿನಾಂಕವನ್ನು ನಿಗಧಿಪಡಿಸಿಕೊಂಡು ತುರ್ತು ಅಗತ್ಯ ಕ್ರಮಕೈಗೊಳ್ಳಲು…

Read More

ಬೆಂಗಳೂರು : 2025-26 ನೇ ಸಾಲಿನ ಎಸ್‌ಎಸ್‌ಎಲ್‌ಸಿ ಪೂರ್ವ ಸಿದ್ಧತಾ ಪರೀಕ್ಷೆ-2,3ರ ವೇಳಾಪಟ್ಟಿಯನ್ನು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಲಿ ಪ್ರಕಟಿಸಿದೆ. ಈ ವೇಳಾಪಟ್ಟಿಯ ಪ್ರಕಾರ ಜನವರಿ 27 ರಿಂದ ಎಸ್‌ಎಸ್‌ಎಲ್‌ಸಿ ಪೂರ್ವ ಸಿದ್ಧತಾ ಪರೀಕ್ಷೆ-2, ಫೆಬ್ರವರಿ 23 ರಿಂದ ಎಸ್‌ಎಸ್‌ಎಲ್‌ಸಿ ಪೂರ್ವ ಸಿದ್ಧತಾ ಪರೀಕ್ಷೆ-3 ಆರಂಭವಾಗಲಿವೆ. ಇಲ್ಲಿದೆ ಎಸ್‌ಎಸ್‌ಎಲ್‌ಸಿ ಪೂರ್ವ ಸಿದ್ಧತಾ ಪರೀಕ್ಷೆ-2,3ರ ವೇಳಾಪಟ್ಟಿ

Read More

ಬೆಂಗಳೂರು : ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯಲ್ಲಿನ ಅಧಿಕಾರಿ/ನೌಕರರನ್ನು ದಿ: 24.01.2024ರ ಸರ್ಕಾರಿ ಆದೇಶದನ್ವಯ ಎನ್.ಪಿ.ಎಸ್.ನಿಂದ ಒ.ಪಿ.ಎಸ್.ಗೆ ಒಳಪಡಿಸುವ ಕುರಿತು ರಾಜ್ಯ ಸರ್ಕಾರ ಮಹತ್ವದ ಆದೇಶ ಹೊರಡಿಸಿದೆ. ರಾಜ್ಯ ಸರ್ಕಾರದ ಆದೇಶದಲ್ಲಿ ಏನಿದೆ? ದಿನಾಂಕ: 01.04.2006ರ ಪೂರ್ವದಲ್ಲಿ ರಾಜ್ಯ ಸಿವಿಲ್ ಸೇವೆಗಳಲ್ಲಿನ ಖಾಲಿ ಹುದ್ದೆಗಳ ಭರ್ತಿಗಾಗಿ ಹೊರಡಿಸಿದ ನೇಮಕಾತಿ ಅಧಿಸೂಚನೆಗಳ ಮೇರೆಗೆ ಆಯ್ಕೆ ಹೊಂದಿ ದಿನಾಂಕ: 01.04.2006ರಂದು ಅಥವಾ ಆ ದಿನಾಂಕದ ನಂತರ ಸೇವೆಗೆ ಸೇರಿರುವ ಕಾರಣದಿಂದ ನೂತನ ಅಂಶದಾಯಿ ಕೊಡುಗೆ ಯೋಜನೆಯ (ರಾಷ್ಟ್ರೀಯ ಪಿಂಚಣಿ ಯೋಜನೆ) ವ್ಯಾಪ್ತಿಗೊಳಪಟ್ಟು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಈ ಕೆಳಕಂಡ ಅಧಿಕಾರಿ/ನೌಕರರುಗಳು ದಿನಾಂಕ: 01.04.2006ರ ಪೂರ್ವದಲ್ಲಿ ಅಧಿಸೂಚಿಸಲಾದ ಹುದ್ದೆಗಳಿಗೆ ನಡೆದ ನೇಮಕಾತಿ ಪ್ರಕ್ರಿಯೆಯಲ್ಲಿ ನೇರ ನೇಮಕಾತಿ ಹೊಂದಿ ದಿನಾಂಕ:01.04.2006ರ ನಂತರ ನೇಮಕಾತಿ ಆದೇಶವನ್ನು ಪಡೆದು ಕರ್ತವ್ಯಕ್ಕೆ ಹಾಜರಾಗಿರುವುದರಿಂದ ಅವರನ್ನು ಸರ್ಕಾರದ ಆದೇಶ ಸಂಖ್ಯೆ: ಆಇ-ಪಿಇಎನ್/99/2023, ದಿನಾಂಕ: 24.01.2024ರನ್ವಯ ರಾಷ್ಟ್ರೀಯ ಪಿಂಚಣಿ ಯೋಜನೆಯಿಂದ ಡಿಫೈನ್ ಪಿಂಚಣಿ ಯೋಜನೆಗೆ ಒಳಪಡಿಸಲು ಸಹಮತಿ…

Read More

ಹುಬ್ಬಳ್ಳಿ : ಮುಖ್ಯಮಂತ್ರಿಯವರ ವಿಶೇಷ ಅನುದಾನದಲ್ಲಿ ಪೂರ್ಣಗೊಂಡಿರುವ ಪ್ರಧಾನ ಮಂತ್ರಿ ಆವಾಸ್ ಯೋಜನೆ (ನ) ಯಡಿ ಮಂಡಳಿ ವತಿಯಿಂದ ರಾಜ್ಯಾದ್ಯಂತ ನಿರ್ಮಾಣಗೊಳ್ಳುತ್ತಿರುವ 1,80,253 ಮನೆಗಳ ಪೈಕಿ 2ನೇ ಹಂತದ 42,345 ಮನೆಗಳ ಲೋಕಾರ್ಪಣೆ ಕಾರ್ಯಕ್ರಮ ಜನವರಿ 24 ರಂದು ನಡೆಯಲಿದೆ. ಕರ್ನಾಟಕ ಕೊಳಗೇರಿ ಅಭಿವೃದ್ಧಿ ಮಂಡಳಿಯು ವಸತಿ ಇಲಾಖೆಯಡಿ ಕಾರ್ಯ ನಿರ್ವಹಿಸುತ್ತಿದ್ದು, ಮಂಡಳಿಯು ರಾಜ್ಯಾದ್ಯಂತ ಬರುವ ಮಹಾನಗರ, ನಗರ, ಪಟ್ಟಣಗಳ ವ್ಯಾಪ್ತಿಯಲ್ಲಿ ಬರುವ ಕೊಳಗೇರಿ ಪ್ರದೇಶಗಳನ್ನು ಗುರುತಿಸಿ ಮಂಡಳಿಯ ಕಾಯ್ದೆಯನ್ವಯ ಘೋಷಣೆ ಹೊರಡಿಸಲಾಗುತ್ತಿದೆ. ಇಲ್ಲಿಯವರೆಗೆ ಒಟ್ಟು 3025 ಕೊಳಗೇರಿ ಪ್ರದೇಶಗಳನ್ನು ಗುರುತಿಸಲಾಗಿದ್ದು, ಅವುಗಳಲ್ಲಿ 2866 ಪ್ರದೇಶಗಳನ್ನು ಕೊಳಗೇರಿ ಪ್ರದೇಶವೆಂದು ಘೋಷಿಸಲಾಗಿದ್ದು, ಸದರಿ ಕೊಳಗೇರಿ ಪ್ರದೇಶಗಳಲ್ಲಿ ಮಂಡಳಿ ವತಿಯಿಂದ ಕೊಳಗೇರಿ ಸುಧಾರಣೆ ಯೋಜನೆಯಡಿ ಮೂಲಭೂತ ಸೌಲಭ್ಯ & ವಸತಿ ಯೋಜನೆಯಡಿ ಮನೆಗಳ ನಿರ್ಮಾಣ ಕೈಗೊಳ್ಳಲಾಗುತ್ತಿದೆ. ಕೊಳಗೇರಿ ಸುಧಾರಣೆ ಯೋಜನೆ: ರಾಜ್ಯದಲ್ಲಿನ ಘೋಷಿತ ಕೊಳಗೇರಿ ಪ್ರದೇಶಗಳಿಗೆ ಮೂಲಭೂತ ಸೌಲಭ್ಯ ಕಲ್ಪಿಸಲು ಸರ್ಕಾರವು ಆಯವ್ಯಯದಲ್ಲಿ ಕೊಳಗೇರಿ ಸುಧಾರಣೆ ಯೋಜನೆಯಡಿ ಒದಗಿಸುವ ಅನುದಾನಕ್ಕನುಗುಣವಾಗಿ ಕ್ರಿಯಾ ಯೋಜನೆ ತಯಾರಿಸಿ…

Read More

ಬೆಂಗಳೂರು : ಗರ್ಭಕಂಠದ ಕ್ಯಾನ್ಸರ್ ತಡೆಗೆ ರಾಜ್ಯ ಸರ್ಕಾರವು ಮಹತ್ವದ ಕ್ರಮ ಕೈಗೊಂಡಿದ್ದು, ಶಾಲೆಗಳಲ್ಲಿ ಓದುತ್ತಿರುವ ಒಂದು ಲಕ್ಷಕ್ಕೂ ಅಧಿಕ 14 ವರ್ಷದ ಹೆಣ್ಣುಮಕ್ಕಳಿಗೆ HPV ಲಸಿಕೆ ನೀಡಲಾಗುತ್ತದೆ ಎಂದು ಸಚಿವ ದಿನೇಶ್ ಗುಂಡೂರಾವ್ ಹೇಳಿದ್ದಾರೆ. ಗರ್ಭಕಂಠದ ಕಾನ್ಸರ್ ವಿರುದ್ಧ ಆರೋಗ್ಯ ಇಲಾಖೆ ಸಮರೋಪಾದಿಯಲ್ಲಿ ಕೆಲಸ ಮಾಡುತ್ತಿದ್ದು, ಕಲ್ಯಾಣ ಕರ್ನಾಟಕ ಮತ್ತು ಸುತ್ತಮುತ್ತಲ ಭಾಗದ ಸರ್ಕಾರಿ ಮತ್ತು ಅನುದಾನಿತ ಶಾಲೆಗಳಲ್ಲಿ ಓದುತ್ತಿರುವ ಒಂದು ಲಕ್ಷಕ್ಕೂ ಅಧಿಕ 14 ವರ್ಷದ ಹೆಣ್ಣುಮಕ್ಕಳಿಗೆ HPV ಲಸಿಕೆ ನೀಡಲಾಗುತ್ತದೆ. ಈ ಯೋಜನೆಯನ್ನು ಸದ್ಯದಲ್ಲೇ ರಾಜ್ಯಾದ್ಯಂತ ವಿಸ್ತರಿಸಲಾಗುವುದು. ಗರ್ಭಕಂಠ ಕಾನ್ಸರ್ ನಿರ್ಮೂಲನೆ ಮಾಡುವುದು ನಮ್ಮ ಆದ್ಯತೆಯ ಕಾರ್ಯಕ್ರಮಗಳಲ್ಲೊಂದಾಗಿದೆ ಎಂದು ಆರೋಗ್ಯ ಸಚಿವರಾದ ದಿನೇಶ್‌ ಗುಂಡೂರಾವ್‌ ಅವರು ತಿಳಿಸಿದ್ದಾರೆ. ರಾಷ್ಟ್ರೀಯ ಬಾಲ ಸ್ವಾಸ್ಥ್ಯ (RBSK)ಕಾರ್ಯಕ್ರಮದಡಿಯಲ್ಲಿ 6 ವರ್ಷದೊಳಗಿನ ಅಂಗನವಾಡಿ ಕೇಂದ್ರಗಳಲ್ಲಿನ ಮಕ್ಕಳು ಹಾಗೂ ಸರ್ಕಾರಿ ಮತ್ತು ಸರ್ಕಾರಿ ಅನುದಾನಿತ ಶಾಲಾ-ಕಾಲೇಜುಗಳಲ್ಲಿ 1 ರಿಂದ 12ನೇ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿರುವ ಮಕ್ಕಳಿಗೆ ಆರ್‌ಬಿಎಸ್‌ಕೆ ಮೊಬೈಲ್‌ ಹೆಲ್ತ್‌ ತಂಡಗಳ ಮುಖಾಂತರ ಉಚಿತವಾಗಿ…

Read More

ನವದೆಹಲಿ : ಉದ್ಯೋಗಾಕಾಂಕ್ಷಿಗಳಿಗೆ ಸರ್ಕಾರವು ಸಿಹಿಸುದ್ದಿ ನೀಡಿದ್ದು, ಭಾರತೀಯ ಅಂಚೆ ಇಲಾಖೆ, ರೈಲ್ವೆ ಇಲಾಖೆಯಲ್ಲಿ ಬರೋಬ್ಬರಿ 50 ಸಾವಿರಕ್ಕೂ ಹೆಚ್ಚು ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನಿಸಿದ್ದು, ಜನವರಿ 31 ರಿಂದ ಆಸ್ತಕ ಆಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು. ಭಾರತೀಯ ಅಂಚೆ ಇಲಾಖೆಯಲ್ಲಿ 28,740 ಹುದ್ದೆಗಳ ನೇಮಕಾತಿ ಭಾರತೀಯ ಅಂಚೆ ಇಲಾಖೆ (ಇಂಡಿಯಾ ಪೋಸ್ಟ್) ದೇಶಾದ್ಯಂತ ಗ್ರಾಮೀಣ ಡಾಕ್ ಸೇವಕ್ (ಜಿಡಿಎಸ್) ಹುದ್ದೆಗಳ ನೇಮಕಾತಿಗಾಗಿ ಬೃಹತ್ ಅಧಿಸೂಚನೆಯನ್ನು ಬಿಡುಗಡೆ ಮಾಡಲು ಸಜ್ಜಾಗಿದೆ. ಒಟ್ಟು 28,740 (ನಿರೀಕ್ಷಿತ) ಹುದ್ದೆಗಳ ಭರ್ತಿಗೆ ಜನವರಿ 31 ರಂದು ಅಧಿಸೂಚನೆಯನ್ನು ಬಿಡುಗಡೆ ಮಾಡಲಾಗುವುದು ಎಂದು ಅದು ಪ್ರಕಟಿಸಿದೆ. ಒಟ್ಟು ಹುದ್ದೆಗಳು: 28,740 (ಅಂದಾಜು) ಹುದ್ದೆಗಳ ಹೆಸರು: ಗ್ರಾಮೀಣ ಡಾಕ್ ಸೇವಕ್ (ಜಿಡಿಎಸ್), ಬ್ರಾಂಚ್ ಪೋಸ್ಟ್ ಮಾಸ್ಟರ್ (ಬಿಪಿಎಂ), ಅಸಿಸ್ಟೆಂಟ್ ಬ್ರಾಂಚ್ ಪೋಸ್ಟ್ ಮಾಸ್ಟರ್ (ಎಬಿಪಿಎಂ). ಆಯ್ಕೆ ಪ್ರಕ್ರಿಯೆ: ಯಾವುದೇ ಲಿಖಿತ ಪರೀಕ್ಷೆ ಇರುವುದಿಲ್ಲ. 10 ನೇ ತರಗತಿಯಲ್ಲಿ ಪಡೆದ ಅಂಕಗಳ (ಮೆರಿಟ್) ಆಧಾರದ ಮೇಲೆ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುತ್ತದೆ. ಶೈಕ್ಷಣಿಕ…

Read More

ಬೆಂಗಳೂರು : 2025-26ನೇ ಸಾಲಿನಲ್ಲಿ 2026-27ನೇ ಶೈಕ್ಷಣಿಕ ವರ್ಷಕ್ಕೆ 74 ಆದರ್ಶ ವಿದ್ಯಾಲಯಗಳಿಗೆ 6ನೇ ತರಗತಿಗೆ ನಡೆಸುವ ಪ್ರವೇಶ ಪರೀಕ್ಷೆ ಹಾಗೂ ದಾಖಲಾತಿಯ ಬಗ್ಗೆ ಮಾರ್ಗಸೂಚಿ ಪ್ರಕಟಿಸಲಾಗಿದೆ. 2026-27ನೇ ಸಾಲಿನಲ್ಲಿ ಪ್ರತಿ ಆದರ್ಶ ವಿದ್ಯಾಲಯದ 6ನೇ ತರಗತಿಗೆ 120 ವಿದ್ಯಾರ್ಥಿಗಳನ್ನು ದಾಖಲಾತಿ ಮಾಡಿಕೊಳ್ಳಲು ಆಯ್ಕೆ ಪರೀಕ್ಷೆ ನಡೆಸಬೇಕಾಗಿರುತ್ತದೆ. ಈ ಪ್ರವೇಶ ಪರೀಕ್ಷೆಯ ಪ್ರಕ್ರಿಯೆಯನ್ನು ಸಮಗ್ರ ಶಿಕ್ಷಣ-ಕರ್ನಾಟಕ ಹಾಗೂ ಕರ್ನಾಟಕ ಶಾಲಾ ಗುಣಮಟ್ಟ ಮೌಲ್ಯಾಂಕನ ಮತ್ತು ಅಂಗೀಕರಣ ಪರಿಷತ್ತಿನ ವತಿಯಿಂದ ಜಂಟಿಯಾಗಿ ನಡೆಸಲು ತೀರ್ಮಾನಿಸಲಾಗಿದ್ದು, ಆಯ್ಕೆ ಪರೀಕ್ಷೆಯನ್ನು ನಡೆಸಲು ಜಿಲ್ಲಾ ಉಪನಿರ್ದೇಶಕರು (ಆಡಳಿತ), ಉಪನಿರ್ದೇಶಕರು (ಅಭಿವೃದ್ಧಿ), ಸಂಬಂಧಿಸಿದ ಕ್ಷೇತ್ರ ಶಿಕ್ಷಣಾಧಿಕಾರಿಗಳು, ಆದರ್ಶ ವಿದ್ಯಾಲಯಗಳ ಮುಖ್ಯ ಶಿಕ್ಷಕರು ಮತ್ತು ಐದನೆಯ ತರಗತಿಗಳು ನಡೆಯುತ್ತಿರುವ ಎಲ್ಲಾ ಶಾಲೆಗಳ ಮುಖ್ಯೋಪಾಧ್ಯಾಯರು ಅಗತ್ಯ ಕ್ರಮವಹಿಸಬೇಕಾಗುತ್ತದೆ. ಪ್ರಸಕ್ತ ಸಾಲಿನ ಪರೀಕ್ಷಾ ನೊಂದಣಿ ಬಗ್ಗೆ ಸ್ಥಳೀಯವಾಗಿ ಸಾಕಷ್ಟು ಪ್ರಚಾರ ನೀಡಲು ತಿಳಿಸಿದೆ ಹಾಗೂ ಜನಪತಿನಿದಿಗಳಿಗೆ ಮಾಹಿತಿ ನೀಡಲು ಕ್‌ರಮ ಕೈಗೊಳ್ಳುವುದು, ದಾಖಲಾತಿ ಪ್ರಕ್ರಿಯೆಯನ್ನು Online ಮೂಲಕ ನಡೆಸುತ್ತಿರುವುದರಿಂದ, ಎಲ್ಲಾ ಹಂತದ ಅಧಿಕಾರಿಗಳು…

Read More

ನವದೆಹಲಿ : ಬ್ಯಾಂಕ್ ನೌಕರರು ಐದು ದಿನಗಳ ಕೆಲಸದ ವಾರವನ್ನು ಒತ್ತಾಯಿಸಿ ಜನವರಿ 27 ರಂದು ಮತ್ತೊಂದು ಮುಷ್ಕರವನ್ನು ಘೋಷಿಸಿದ್ದಾರೆ. ಹೀಗಾಗಿ ಇಂದಿನಿಂದ ಬ್ಯಾಂಕ್ ಗಳು ಇಂದಿನಿಂದ ಸತತ 4 ದಿನ ಬಂದ್ ಇರಲಿದೆ. ಜನವರಿ 24 (ನಾಲ್ಕನೇ ಶನಿವಾರ), ಜನವರಿ 25 (ಭಾನುವಾರ) ಮತ್ತು ಜನವರಿ 26 (ಗಣರಾಜ್ಯೋತ್ಸವ) ಈಗಾಗಲೇ ರಜಾದಿನಗಳಾಗಿದ್ದು, ಮುಷ್ಕರ ಮುಂದುವರಿದರೆ ಬ್ಯಾಂಕುಗಳು ಸತತ ನಾಲ್ಕು ದಿನಗಳವರೆಗೆ ಮುಚ್ಚಲ್ಪಡುತ್ತವೆ. ಐದು ದಿನಗಳ ಬ್ಯಾಂಕಿಂಗ್ ವಾರವನ್ನು ಘೋಷಿಸುವಂತೆ ಒತ್ತಾಯಿಸಿ ಜನವರಿ 27 ರಂದು ನಡೆಯಲಿರುವ ಮುಷ್ಕರಕ್ಕೆ ಗ್ರಾಹಕರು ಮತ್ತು ಸಾರ್ವಜನಿಕರ ಬೆಂಬಲ ಕೋರಲಾಗಿದೆ. ಐದು ದಿನಗಳ ಬ್ಯಾಂಕಿಂಗ್ ವಾರ ಮತ್ತು ಇತರ ಬೇಡಿಕೆಗಳನ್ನು ಜಾರಿಗೆ ತರಲು ಬ್ಯಾಂಕ್ ನೌಕರರು ಜನವರಿ 27 ರಂದು ರಾಷ್ಟ್ರವ್ಯಾಪಿ ಮುಷ್ಕರ ನಡೆಸುತ್ತಿದ್ದಾರೆ. ಈ ಮುಷ್ಕರವು ಸಾರ್ವಜನಿಕ ವಲಯದ ಬ್ಯಾಂಕುಗಳು, ಖಾಸಗಿ ವಲಯದ ಬ್ಯಾಂಕುಗಳು, ಗ್ರಾಮೀಣ ಬ್ಯಾಂಕುಗಳು ಮತ್ತು ಸಹಕಾರಿ ಬ್ಯಾಂಕುಗಳ ಕಾರ್ಯಾಚರಣೆಯ ಮೇಲೆ ಪರಿಣಾಮ ಬೀರುತ್ತದೆ. ಜನವರಿ 26 (ಗಣರಾಜ್ಯೋತ್ಸವ) ಮತ್ತು ವಾರಾಂತ್ಯದ…

Read More

ಪುರುಷರಲ್ಲಿ ಕೂದಲು ಉದುರುವಿಕೆಗೆ ಹೆಚ್ಚಾಗಿ ತಳಿಶಾಸ್ತ್ರ, ವಯಸ್ಸು ಅಥವಾ ಒತ್ತಡ ಕಾರಣ ಎಂದು ಹೇಳಲಾಗುತ್ತದೆ. ಆದರೆ ಜೀವನಶೈಲಿಗೆ ಸಂಬಂಧಿಸಿದ ಆರೋಗ್ಯ ಸಮಸ್ಯೆಗಳು ಬೆಳೆದಂತೆ, ವೈದ್ಯರು ದೈನಂದಿನ ಆಹಾರ ಪದ್ಧತಿಗಳನ್ನು ಸೂಕ್ಷ್ಮವಾಗಿ ಪರಿಶೀಲಿಸುತ್ತಿದ್ದಾರೆ, ಇದರಲ್ಲಿ ಸಕ್ಕರೆ-ಸಿಹಿಗೊಳಿಸಿದ ಪಾನೀಯಗಳ ನಿಯಮಿತ ಸೇವನೆಯೂ ಸೇರಿದೆ.  ಹೌದು, ಈ ಪಾನೀಯಗಳು ಬೋಳುತನಕ್ಕೆ ನೇರ ಕಾರಣವಲ್ಲದಿದ್ದರೂ, ಈಗಾಗಲೇ ತಳೀಯವಾಗಿ ಪ್ರವೃತ್ತಿಯನ್ನು ಹೊಂದಿರುವ ಪುರುಷರಲ್ಲಿ ಕೂದಲು ಉದುರುವಿಕೆಯನ್ನು ಸದ್ದಿಲ್ಲದೆ ಇನ್ನಷ್ಟು ಹದಗೆಡಿಸಬಹುದು ಎಂದು ಹೊರಹೊಮ್ಮುತ್ತಿರುವ ಪುರಾವೆಗಳು ಸೂಚಿಸುತ್ತವೆ. ಕೂದಲು ಉದುರುವಿಕೆ ವಿರಳವಾಗಿ ಒಂದೇ ಅಂಶದಿಂದ ಉಂಟಾಗುತ್ತದೆ” ಎಂದು ವಿಎನ್‌ಎ ಆಸ್ಪತ್ರೆಯ ಮೂತ್ರಶಾಸ್ತ್ರದ ಮುಖ್ಯಸ್ಥ ಮತ್ತು ನಿರ್ದೇಶಕ ಡಾ. ವಿನೀತ್ ಮಲ್ಹೋತ್ರಾ ಹೇಳುತ್ತಾರೆ. “ಆದರೆ ಅತಿಯಾದ ಸಕ್ಕರೆ ಸೇವನೆಯು ಪ್ರಮುಖ ಪ್ರಚೋದಕವಾಗಿ ಕಾರ್ಯನಿರ್ವಹಿಸುತ್ತದೆ, ವಿಶೇಷವಾಗಿ ಆಂಡ್ರೊಜೆನೆಟಿಕ್ ಅಲೋಪೆಸಿಯಾಕ್ಕೆ ಒಳಗಾಗುವ ಪುರುಷರಲ್ಲಿ.”ಸಕ್ಕರೆ ಪಾನೀಯಗಳು ಕೂದಲು ಉದುರುವಿಕೆಗೆ ಸಂಬಂಧಿಸಿದ ಹಾರ್ಮೋನುಗಳನ್ನು ಹೇಗೆ ಅಡ್ಡಿಪಡಿಸುತ್ತವೆ ಎಂದು ಹೇಳಿದ್ದಾರೆ. ಸೋಡಾಗಳು, ಪ್ಯಾಕ್ ಮಾಡಿದ ಹಣ್ಣಿನ ರಸಗಳು, ಎನರ್ಜಿ ಡ್ರಿಂಕ್ಸ್ ಮತ್ತು ಸಿಹಿಗೊಳಿಸಿದ ಚಹಾಗಳಂತಹ ಸಕ್ಕರೆ-ಸಿಹಿಗೊಳಿಸಿದ ಪಾನೀಯಗಳು ರಕ್ತದಲ್ಲಿನ…

Read More