Subscribe to Updates
Get the latest creative news from FooBar about art, design and business.
Author: kannadanewsnow57
ಮೈಸೂರು : ವಿಬಿ ಗ್ರಾಮ್ ಜಿ ಕಾಯ್ದೆ ರದ್ದಾಗಿ ಮನರೇಗಾ ಪುನಃ ಸ್ಥಾಪನೆಯಾಗುವವರೆಗೆ ನಮ್ಮ ಹೋರಾಟಕ್ಕೆ ಎಲ್ಲರೂ ಬೆಂಬಲಿಸಬೇಕು ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ. ಮೈಸೂರು ಜಿಲ್ಲೆಯ ಟಿ. ನರಸೀಪುರ ತಾಲೂಕಿನ ಕುಪ್ಯಾ ಗ್ರಾಮದಲ್ಲಿ ಆಯೋಜಿಸಿದ್ದ “ವರುಣಾ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ವಿವಿಧ ಇಲಾಖೆಗಳ ಅಭಿವೃದ್ಧಿ ಕಾಮಗಾರಿಗಳ ಶಂಕುಸ್ಥಾಪನೆ ಮತ್ತು ಉದ್ಘಾಟನೆ” ಸಮಾರಂಭದಲ್ಲಿ ಮಾತನಾಡಿದ ಸಿಎಂ ಸಿದ್ದರಾಮಯ್ಯ,2005 ರಲ್ಲಿ ಮನಮೋಹನ್ ಸಿಂಗ್ ಅವರು ಪ್ರಧಾನಿಗಳಾಗಿದ್ದಾಗ ಮನರೇಗಾ ಕಾನೂನು ಜಾರಿ ಮಾಡಿದರು. ಆ ಮೂಲಕ ಕೆಲಸದ ಹಕ್ಕು ಕೊಟ್ಟರು. ಮೋದಿ ಸರ್ಕಾರ ಅದನ್ನು ಕಿತ್ತುಹಾಕುತ್ತಿದೆ. ಬಿಜೆಪಿಯವರು ಬಡವರು, ಹೆಣ್ಣುಮಕ್ಕಳು, ಕಾರ್ಮಿಕರಿಗೆ ಕೆಲಸ ಕೊಡಲು ಬಿಡುತ್ತಿಲ್ಲ. ನೀವು ಯಾವಾಗ ಕೇಳಿದರೂ ಉದ್ಯೋಗ ಕೊಡುವ ಕಾಯಿದೆಯನ್ನು ಜಾರಿ ಮಾಡಲಾಗಿತ್ತು. ಈಗ ಕೇಂದ್ರ ಸರ್ಕಾರ ಅದನ್ನು ತೀರ್ಮಾನಿಸಲಿದೆ. ವಿಬಿ ಗ್ರಾಮ್ ಜಿ ರದ್ದಾಗಬೇಕು. ಜನರನ್ನು ತಪ್ಪು ದಾರಿ ಎಳೆಯಲು ರಾಮ್ ಜಿ ಸೇರಿಸಿದ್ದಾರೆ. ಎಲ್ಲರೂ ಚಳುವಳಿಗೆ ತಯಾರಾಗಿ ಎಂದರು. ದೇಶದಲ್ಲಿ ಇನ್ನು ಮುಂದೆ ಮನರೇಗಾ ಯೋಜನೆ ಇರುವುದಿಲ್ಲ.…
ಬೆಂಗಳೂರು : ಯಾರೇ ಸರ್ಕಾರಿ ನೌಕರನು, ಯಾವುದೇ ರಾಜಕೀಯ ಪಕ್ಷದ ಅಥವಾ ರಾಜಕಾರಣದಲ್ಲಿ ಭಾಗವಹಿಸುವಂಥ ಯಾವುದೇ ಸಂಘ ಸಂಸ್ಥೆಯ ಸದಸ್ಯನಾಗಿರತಕ್ಕದ್ದಲ್ಲ ಅಥವಾ ಅವುಗಳೊಂದಿಗೆ ಅನ್ಯಥಾ ಸಂಬಂಧ ಹೊಂದಿರತಕ್ಕದ್ದಲ್ಲ ಅಥವಾ ಯಾವುದೇ ರಾಜಕೀಯ ಚಳುವಳಿ ಅಥವಾ ಚಟುವಟಿಕೆಯಲ್ಲಿ ಭಾಗವಹಿಸತಕ್ಕದ್ದಲ್ಲ, ಅದರ ಸಹಾಯಾರ್ಥ ವಂತಿಗೆ ನೀಡತಕ್ಕದ್ದಲ್ಲ ಅಥವಾ ಅದಕ್ಕೆ ಯಾವುದೇ ರೀತಿಯ ನೆರವು ನೀಡತಕ್ಕದ್ದಲ್ಲ. (2) ಕಾನೂನಿನ ಮೂಲಕ ಸ್ಥಾಪಿತವಾದ ಸರ್ಕಾರವನ್ನು ಪ್ರತ್ಯಕ್ಷವಾಗಿ ಅಥವಾ ಪರೋಕ್ಷವಾಗಿ ಉರುಳಿಸುವಂಥದ್ದಾಗಿರುವ ಅಥವಾ ಉರುಳಿಸುವ ಉದ್ದೇಶ ಹೊಂದಿರುವ ಯಾವುದೇ ಚಳುವಳಿಯಲ್ಲಿ ಅಥವಾ ಚಟುವಟಿಕೆಯಲ್ಲಿ ಅವನ ಕುಟುಂಬದ ಯಾರೇ ಸದಸ್ಯನೂ ಭಾಗವಹಿಸದಂತೆ, ಅದರ ಸಹಾಯಾರ್ಥ ವಂತಿಗೆ ನೀಡದಂತೆ ಅಥವಾ ಇನ್ನಾವುದೇ ರೀತಿಯಿಂದ ನೆರವಾಗುವುದನ್ನು ತಡೆಗಟ್ಟಲು ಪ್ರಯತ್ನಿಸುವುದು ಪ್ರತಿಯೊಬ್ಬ ಸರ್ಕಾರಿ ನೌಕರನ ಕರ್ತವ್ಯವಾಗಿರತಕ್ಕದ್ದು ಮತ್ತು ಅಂಥ ಯಾವುದೇ ಚಳುವಳಿಯಲ್ಲಿ ಅಥವಾ ಚಟುವಟಿಕೆಯಲ್ಲಿ ಅವನ ಕುಟುಂಬದ ಸದಸ್ಯರು ಭಾಗವಹಿಸುವುದನ್ನು, ವಂತಿಗೆ ನೀಡುವುದನ್ನು ಅಥವಾ ಬೇರೆ ರೀತಿಯಿಂದ ನೆರವು ನೀಡುವುದನ್ನು ತಡೆಗಟ್ಟಲು ಸರ್ಕಾರಿ ನೌಕರನಿಗೆ ಸಾಧ್ಯವಾಗದಿದ್ದರೆ, ಅವನು ಆ ವಿಷಯವನ್ನು ಸರ್ಕಾರಕ್ಕೆ ವರದಿ ಮಾಡತಕ್ಕದ್ದು.…
BIG NEWS : `B.Ed’ ವಿದ್ಯಾರ್ಹತೆ ಇಲ್ಲದವರನ್ನು ಸಹಾಯಕ ಪ್ರಾಧ್ಯಾಪಕರಾಗಿ ನೇಮಿಸುವಂತಿಲ್ಲ: ಹೈಕೋರ್ಟ್ ಮಹತ್ವದ ತೀರ್ಪು
ನವದೆಹಲಿ : ಬಿ.ಇಡಿ. ಅರ್ಹತೆ ಇಲ್ಲದ ಯಾವುದೇ ವ್ಯಕ್ತಿಯನ್ನು ಸಹಾಯಕ ಪ್ರಾಧ್ಯಾಪಕ\ತರಬೇತಿ ಪಡೆದ ಪದವೀಧರ ಶಿಕ್ಷಕ (ಕಲೆ) ಹುದ್ದೆಗೆ ನೇಮಿಸಬಾರದು ಎಂದು ಅಲಹಾಬಾದ್ ಹೈಕೋರ್ಟ್ ನಿರ್ದೇಶಿಸಿದೆ. ಉತ್ತರ ಪ್ರದೇಶ ಸಾರ್ವಜನಿಕ ಸೇವಾ ಆಯೋಗವು ಸಹಾಯಕ ಶಿಕ್ಷಕ/ತರಬೇತಿ ಪಡೆದ ಪದವೀಧರ ಶಿಕ್ಷಕ (ಕಲೆ) ಪರೀಕ್ಷೆ-2014 ರ ಹುದ್ದೆಗೆ ಜಾಹೀರಾತು ನೀಡಿತ್ತು. ಆದಾಗ್ಯೂ, ನ್ಯಾಯಾಲಯವು ಪ್ರತಿವಾದಿಗಳು ಆಯ್ಕೆ ಪ್ರಕ್ರಿಯೆಯನ್ನು ಮುಂದುವರಿಸುವಂತೆ ನಿರ್ದೇಶಿಸಿತು. ವಿನೋದಕುಮಾರ್ ಯಾದವ್ ಮತ್ತು ಇತರ ನಾಲ್ವರು ಸಲ್ಲಿಸಿದ ರಿಟ್ ಅರ್ಜಿಯನ್ನು ವಿಚಾರಣೆ ನಡೆಸುವಾಗ ನ್ಯಾಯಮೂರ್ತಿ ಸರಳ್ ಶ್ರೀವಾಸ್ತವ ಮತ್ತು ನ್ಯಾಯಮೂರ್ತಿ ಸುಧಾಂಶು ಚೌಹಾಣ್ ಅವರ ಪೀಠವು ಶುಕ್ರವಾರ ಈ ಆದೇಶವನ್ನು ನೀಡಿತು. ನ್ಯಾಯಾಲಯವು ರಾಜ್ಯದ ಅಡ್ವೊಕೇಟ್ ಜನರಲ್ಗೆ ನೋಟಿಸ್ ಜಾರಿ ಮಾಡಿ, ರಾಜ್ಯ ಸರ್ಕಾರ, ಉತ್ತರ ಪ್ರದೇಶ ಸಾರ್ವಜನಿಕ ಸೇವಾ ಆಯೋಗ ಮತ್ತು ಇತರರಿಗೆ ಈ ವಿಷಯದಲ್ಲಿ ತಮ್ಮ ಉತ್ತರಗಳನ್ನು ಸಲ್ಲಿಸುವಂತೆ ನಿರ್ದೇಶಿಸಿತು ಮತ್ತು ಮಾರ್ಚ್ 13, 2026 ಅನ್ನು ಮುಂದಿನ ವಿಚಾರಣೆಯ ದಿನಾಂಕವಾಗಿ ನಿಗದಿಪಡಿಸಿತು.
ಬೆಂಗಳೂರು: ರಾಜ್ಯದಲ್ಲಿ ಶಾಲಾ ದಾಖಲಾತಿಯಲ್ಲಿ ಜಾತಿ ತಿದ್ದುಪಡಿ ಕುರಿತಂತೆ ಶಿಕ್ಷಣ ಇಲಾಖೆಯಿಂದ ಮಹತ್ವದ ಆದೇಶವನ್ನು ಹೊರಡಿಸಲಾಗಿದೆ. ಈ ಕುರಿತಂತೆ ಶಾಲಾ ಶಿಕ್ಷಣ ಇಲಾಖೆಯಿಂದ ಸುತ್ತೋಲೆ ಹೊರಡಿಸಲಾಗಿದ್ದು, ಶಾಲಾ ದಾಖಲಾತಿಯಲ್ಲಿ ಜಾತಿಯನ್ನು ತಿದ್ದುಪಡಿ ಮಾಡುವ ಬಗ್ಗೆ ಪರಿಶಿಷ್ಟ ಜಾತಿ ಮತ್ತು ಪರಿಶಿಷ ಪಂಗಡದ ಜಾತಿಗಳ ಬಗ್ಗೆ ಸಮಾಜ ಕಲ್ಯಾಣ ಇಲಾಖೆಯು ಆಡಳಿತ ಇಲಾಖೆಯಾಗಿದ್ದು ಮತ್ತು ಕರ್ನಾಟಕ ಅನುಸೂಚಿತ ಜಾತಿಗಳು ಮತ್ತು ಅನುಸೂಚಿತ ಬುಡಕಟ್ಟುಗಳ ಹಾಗೂ ಇತರ ಹಿಂದುಳಿದ ವರ್ಗಗಳ ವರ್ಗಗಳ (ನೇಮಕಾತಿ ಮುಂತಾದವುಗಳ ಮೀಸಲಾತಿ) ಅಧಿನಿಯಮ ಕಾಯ್ದೆಯಂತೆ ಜಾತಿ ಪಮಾಣ ಪತ್ರಗಳನ್ನು ನೀಡಲಾಗುತ್ತಿರುವುದರಿಂದ ಈ ಬಗ್ಗೆ ಸ್ಪಷ್ಟಿಕರಣ. ನೀಡಲು ಸಮಾಜ ಕಲ್ಯಾಣ ಇಲಾಖೆ ಸೂಕ್ತ ಪ್ರಾಧಿಕಾರವಾಗಿರುತ್ತದೆ ಎಂದು ತಿಳಿಸಿ ಮಾರ್ಗದರ್ಶನ ಹಾಗೂ ಸ್ಪಷ್ಟಿಕರಣ ನೀಡುವಂತೆ ಕೋರಲಾಗಿರುತ್ತದೆ ಎಂದು ಆಯುಕ್ತರು, ಸಮಾಜ ಕಲ್ಯಾಣ ಇಲಾಖೆ ರವರು ತಿಳಿಸಿರುತ್ತಾರೆ ಎಂದಿದ್ದಾರೆ. ಮುಂದುವರೆದಂತೆ, ಈ ಕೆಳಕಂಡ ಆದೇಶ ಮತ್ತು ಸುತ್ತೋಲೆಗಳಲ್ಲಿ ಜಾತಿ ತಿದ್ದುಪಡಿ ಕುರಿತು ಮಾರ್ಗದರ್ಶನ ನೀಡಿರುವ ಕುರಿತು ತಿಳಿಸಿರುತ್ತಾರೆ. ಕರ್ನಾಟಕ ಸರ್ಕಾರದ ಸುತ್ತೋಲೆ ಸಂಖ್ಯೆ:- ಇಡಿ…
ಗದಗ: ಐತಿಹಾಸಿಕ ಲಕ್ಕುಂಡಿ ಗ್ರಾಮದ 44 ತಾಣಗಳನ್ನು ಸಂರಕ್ಷಿತ ಸ್ಮಾರಕಗಳ ಪಟ್ಟಿಗೆ ಸೇರ್ಪಡೆಮಾಡಲಾಗುತ್ತಿದ್ದು, ಈತಾಣಗಳುಸರ್ಕಾರದನೇರಉಸ್ತುವಾರಿಗೆ ಒಳಪಡಲಿವೆ. ಇವುಗಳ ಅಭಿವೃದ್ಧಿ ಮತ್ತು ರಕ್ಷಣೆಗೆ ಹೆಚ್ಚಿನ ಅನುದಾನ ಲಭ್ಯವಾಗಲಿದೆ ಎಂದು ಪ್ರವಾಸೋದ್ಯಮ ಸಚಿವ ಎಚ್.ಕೆ.ಪಾಟೀಲ ತಿಳಿಸಿದರು. ಲಕ್ಕುಂಡಿ ಅಭಿವೃದ್ಧಿ ಪ್ರಾಧಿಕಾರ, ಉತ್ಖನನ ಪ್ರಗತಿ ಬಗ್ಗೆ ಸಚಿವ ಹೆಚ್.ಕೆ ಪಾಟೀಲ್ ಅವರು ಸಭೆ ನಡೆಸಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದರು. ಈ ಸಭೆಯಲ್ಲಿ ಪ್ರಜ್ವಲ್ ರಿತ್ತಿಗೆ ಸಿಕ್ಕ ನಿಧಿ ಬಗ್ಗೆಯೂ ವಿಶೇಷವಾಗಿ ಚರ್ಚೆ ನಡೆಸಲಾಯಿತು. ಆ ಕುಟುಂಬಕ್ಕೆ ಏನೆಲ್ಲಾ ಸಹಾಯ ಮಾಡಬೇಕೆಂದು ಚರ್ಚೆ ನಡೆಸಲಾಗಿದೆ. ಲಕ್ಕುಂಡಿಯಲ್ಲಿನ ಬಯಲು ವಸ್ತು ಸಂಗ್ರಹಾಲಯ ಅಭಿವೃದ್ಧಿಗೆ 165 ಲಕ್ಷ ಬಿಡುಗಡೆ ಮಾಡಲಾಗಿದೆ. ಮೂರು ಎಕರೆ ಭೂಮಿ ಪಡೆದುಕೊಳ್ಳಲು ನಿರ್ಧಾರ ಮಾಡಲಾಗಿದೆ ಎಂಬುದಾಗಿ ಸಚಿವ ಹೆಚ್.ಕೆ ಪಾಟೀಲ್ ತಿಳಿಸಿದರು. ರಾಜ್ಯ ಸಂರಕ್ಷಿತ ಸ್ಮಾರಕಗಳು ಎಂದು ಘೋಷಣೆ ಮಾಡಲಾಗಿದೆ. ಅದರ ಜತೆಗೆ ಇನ್ನು 28 ದೇವಸ್ಥಾನ, ಬಾವಿಗಳನ್ನು ಸಂರಕ್ಷಿತ ಸ್ಮಾರಕಗಳಾಗಿ ಘೋಷಿಸುತ್ತೇವೆ. ಇದರಿಂದಾಗಿ ಒಟ್ಟು 44 ತಾಣಗಳು ಸರ್ಕಾರದ ನೇರ ಉಸ್ತುವಾರಿಗೆ ಒಳಪಡಲಿದ್ದು, ಇವುಗಳ…
ಶಿವಮೊಗ್ಗ : ರಾಜ್ಯದಲ್ಲಿ ಘೋರ ದುರಂತವೊಂದು ಸಂಭವಿಸಿದ್ದು, ಬಟ್ಟೆ ಒಗೆಯಲು ಹೋದ ಒಂದೇ ಕುಟುಂಬದ ನಾಲ್ವರು ಭದ್ರಾ ನಾಲೆಗೆ ಬಿದ್ದು ಸಾವನ್ನಪ್ಪಿರುವ ಘಟನೆ ಶಿವಮೊಗ್ಗ ಜಿಲ್ಲೆಯಲ್ಲಿ ನಡೆದಿದೆ. ಶಿವಮೊಗ್ಗ ಜಿಲ್ಲೆ ಹೊಳೆಹೊನ್ನೂರು ಸಮೀಪದ ಅರಬಿಳಚಿ ಗ್ರಾಮದಲ್ಲಿ ಬಟ್ಟೆ ಒಗೆಯುವ ಸಂದರ್ಭದಲ್ಲಿ ಕಾಲು ಜಾರಿ ಭದ್ರಾ ನಾಲೆಗೆ ಬಿದ್ದು, ಒಂದೇ ಕುಟುಂಬದ ನಾಲ್ವರು ಮೃತಪಟ್ಟಿದ್ದಾರೆ. ಈವರೆಗೂ ಶವ ಪತ್ತೆಯಾಗಿಲ್ಲ. ಅರೆಬಳಚಿ ಗ್ರಾಮದ ನೀಲಾಬಾಯಿ (50), ಮಗ ರವಿಕುಮಾರ್ (23), ಮಗಳು ಶ್ವೇತಾ (24),ಅಳಿಯ ಪರಶುರಾಮ (28) ನೀರು ಪಾಲಾದವರು. ಬಟ್ಟೆ ತೊಳೆಯುವಾಗ ನೀಲಾಬಾಯಿ,ಶ್ವೇತಾ ಕಾಲು ಜಾರಿ ನಾಲೆಗೆ ಬಿದ್ದರು. ತಕ್ಷಣವೇ ರಕ್ಷಿಸಲು ಮಗ ರವಿಕುಮಾರ್ ಮತ್ತು ಅಳಿಯ ಪರಶುರಾಮ್ ನಾಲೆಗೆ ಧುಮುಕಿದ್ದಾರೆ.
ಪ್ರಾದೇಶಿಕ ಸಾರಿಗೆ ಕಚೇರಿಯಲ್ಲಿ ನೋಂದಾಯಿಸಲಾಗಿರುವ ಮೋಟಾರು ಸೈಕಲ್, ಆಟೋ, ಕಾರು, ಸರಕು ವಾಹನಗಳು, ಟ್ರ್ಯಾಕ್ಟರ್ ಅಥವಾ ಟ್ರೈಲರ್ ಲಾರಿ, ಬಸ್ಸು, ಅಂಬುಲೇನ್ಸ್, ಶಾಲಾ ವಾಹನ ಮುಂತಾದ ವರ್ಗದ ವಾಹನಗಳ ಮಾಲೀಕರು ನೋಂದಣಿ ಅರ್ಹತಾ ಪತ್ರದ ಅವಧಿ ಮುಗಿದಿರುವ ತಮ್ಮ ವಾಹನಗಳ ನೋಂದಣಿ ಪತ್ರ, ಅರ್ಹತಾ ಪತ್ರ, ವಿಮಾ ಪತ್ರ, ವಾಯು ಮಾಲಿನ್ಯ ನಿಯಂತ್ರಣ ಪ್ರಮಾಣ ಪತ್ರಗಳನ್ನು ನವೀಕರಿಸಿಕೊಳ್ಳಲು ಮತ್ತು ಬಾಕಿ ಇರುವ ಮೋಟಾರು ವಾಹನ ರಸ್ತೆ ತೆರಿಗೆಯನ್ನು ಕೂಡಲೇ ಪಾವತಿಸಬೇಕೆಂದು ಕೊಪ್ಪಳ ಪ್ರಾದೇಶಿಕ ಸಾರಿಗೆ ಅಧಿಕಾರಿ ಪ್ರಭುಸ್ವಾಮಿ ಹಿರೇಮಠ ಅವರು ತಿಳಿಸಿದ್ದಾರೆ. 15 ವರ್ಷ ತುಂಬಿದ ಸ್ವಂತ ಬಳಕೆಯ ಮೋಟಾರು ಸೈಕಲ್, ಕಾರು, ಟ್ರ್ಯಾಕ್ಟರ್ ಅಥವಾ ಟ್ರೈಲರ್ ಮುಂತಾದ ವಾಹನಗಳಿಗೆ ಕೂಡಲೇ ನೋಂದಣಿ ಪತ್ರ ನವೀಕರಿಸಿಕೊಳ್ಳಬೇಕು. ಎಲ್ಲಾ ಆಂಬುಲೇನ್ಸ್ ವಾಹನದ ಮಾಲೀಕರು ಕಡ್ಡಾಯವಾಗಿ ಜಿ.ಪಿ.ಎಸ್ ಸಾಧನಗಳನ್ನು ಅಳವಡಿಸಿಕೊಂಡು ಕೂಡಲೇ ಅರ್ಹತಾ ಪತ್ರ ನವೀಕರಿಸಿಕೊಳ್ಳಬೇಕು. ಹಾಗೆಯೇ ಎಲ್ಲಾ ಶಾಲಾ, ಕಾಲೇಜು ವಾಹನಗಳು ಸಹ ನಿಯಮಾನುಸಾರ ಅಗತ್ಯವಿರುವ ಎಲ್ಲಾ ಸುರಕ್ಷಿತ ಮಾನದಂಡಗಳನ್ನು ಅಳವಡಿಸಿಕೊಂಡು ಕೂಡಲೇ…
ಹೆಚ್ಚುತ್ತಿರುವ ವಿದ್ಯುತ್ ಬಿಲ್ಗಳು ಮತ್ತು ಆಗಾಗ್ಗೆ ವಿದ್ಯುತ್ ಕಡಿತವು ಇಂದು ಸಾಮಾನ್ಯ ಜನರಿಗೆ ದೊಡ್ಡ ತಲೆನೋವಾಗಿ ಪರಿಣಮಿಸಿದೆ. ಬೇಸಿಗೆ ಅಥವಾ ಚಳಿಗಾಲವಾಗಿರಲಿ, ಮನೆಯ ಅಗತ್ಯಗಳಿಗಾಗಿ ವಿದ್ಯುತ್ ಅವಲಂಬನೆ ನಿರಂತರವಾಗಿ ಹೆಚ್ಚುತ್ತಿದೆ. ಪರಿಣಾಮವಾಗಿ, ಬೃಹತ್ ಮಾಸಿಕ ವಿದ್ಯುತ್ ಬಿಲ್ ಮಧ್ಯಮ ವರ್ಗದ ಮತ್ತು ಕಡಿಮೆ ಆದಾಯದ ಕುಟುಂಬಗಳ ಬಜೆಟ್ ಮೇಲೆ ತೀವ್ರವಾಗಿ ಪರಿಣಾಮ ಬೀರುತ್ತದೆ. ಆದರೆ ಈಗ ಸರ್ಕಾರವು ವಿಶೇಷ ಯೋಜನೆಯ ಮೂಲಕ ಈ ಸಮಸ್ಯೆಯನ್ನು ಪರಿಹರಿಸಲು ಸಾಧ್ಯವಾಗಿಸಿದೆ. ಇದರಿಂದಾಗಿ, 2026 ರ ವೇಳೆಗೆ ನಿಮ್ಮ ವಿದ್ಯುತ್ ಬಿಲ್ ಕೂಡ ಶೂನ್ಯವಾಗಿರುತ್ತದೆ. ಪ್ರಧಾನ ಮಂತ್ರಿ ಸೂರ್ಯ ಘರ್: ಫೆಬ್ರವರಿ 2024 ರಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಪ್ರಾರಂಭಿಸಿದ ಉಚಿತ ವಿದ್ಯುತ್ ಯೋಜನೆ. ದೇಶಾದ್ಯಂತ ಮನೆಗಳನ್ನು ಸೌರಶಕ್ತಿಯೊಂದಿಗೆ ಸಂಪರ್ಕಿಸುವ ಮಹತ್ವಾಕಾಂಕ್ಷೆಯ ಗುರಿ. ಈ ಯೋಜನೆಯಡಿಯಲ್ಲಿ, ಮನೆಯ ಛಾವಣಿಯ ಮೇಲೆ ಸೌರ ಫಲಕಗಳನ್ನು ಅಳವಡಿಸಲಾಗುವುದು. ಇದರ ಮೂಲಕ, ಜನರು ತಮ್ಮದೇ ಆದ ವಿದ್ಯುತ್ ಉತ್ಪಾದಿಸಬಹುದು. ವಿದ್ಯುತ್ ವೆಚ್ಚವನ್ನು ಕಡಿಮೆ ಮಾಡುವುದು ಮತ್ತು ದೇಶವನ್ನು ಶುದ್ಧ…
ಭಾರತೀಯ ಸಂಪ್ರದಾಯದಲ್ಲಿ, ಚಿನ್ನವು ಕೇವಲ ಅಮೂಲ್ಯ ಲೋಹವಲ್ಲ. ಅದನ್ನು ಸಂಪತ್ತು, ಗೌರವ, ಅದೃಷ್ಟ ಮತ್ತು ಲಕ್ಷ್ಮಿ ದೇವಿಯ ಅನುಗ್ರಹದ ಸಂಕೇತವೆಂದು ಪರಿಗಣಿಸಲಾಗುತ್ತದೆ. ಕೆಲವು ಗ್ರಹಗಳ ನಕಾರಾತ್ಮಕ ಮತ್ತು ಸಕಾರಾತ್ಮಕ ಪರಿಣಾಮಗಳು ಅಂತಹ ಚಿನ್ನವನ್ನು ಕಳೆದುಕೊಳ್ಳುವುದರ ಹಿಂದೆ ಅಥವಾ ಅದು ರಸ್ತೆಯಲ್ಲಿ ಪತ್ತೆಯಾಗುವುದರ ಹಿಂದೆ ಇರುತ್ತವೆ ಎಂದು ಜ್ಯೋತಿಷ್ಯ ಹೇಳುತ್ತದೆ. ಜ್ಯೋತಿಷ್ಯವು ಹೇಳುವಂತೆ ಒಬ್ಬ ವ್ಯಕ್ತಿಯು ಚಿನ್ನವನ್ನು ಕಳೆದುಕೊಳ್ಳುವುದು ಅವನ ಜಾತಕದಲ್ಲಿ ಕೇತು, ಶನಿ ಮತ್ತು ರಾಹು ಎಂಬ ಮೂರು ಗ್ರಹಗಳ ಕೆಟ್ಟ ಪ್ರಭಾವದಿಂದಾಗಿ ಎಂದು ಹೇಳುತ್ತದೆ. ಈ ಮೂರು ಗ್ರಹಗಳು ಕೆಲವೊಮ್ಮೆ ಕಷ್ಟಗಳು, ಆರ್ಥಿಕ ನಷ್ಟಗಳು ಮತ್ತು ಆರೋಗ್ಯ ಸಮಸ್ಯೆಗಳನ್ನು ತರುತ್ತವೆ ಎಂದು ನಂಬಲಾಗಿದೆ. ಚಿನ್ನವನ್ನು ಕಳೆದುಕೊಳ್ಳುವುದು ಆ ವ್ಯಕ್ತಿಗೆ ದುರದೃಷ್ಟದ ಸಂಕೇತವೆಂದು ಪರಿಗಣಿಸಲಾಗುತ್ತದೆ. ಇದು ಕೇವಲ ಚಿನ್ನವಲ್ಲ. ಇದು ಇತರ ಅಮೂಲ್ಯ ವಸ್ತುಗಳನ್ನು ಕಳೆದುಕೊಳ್ಳುವ ಸಂಕೇತವಾಗಿರಬಹುದು. ಇದು ಆರ್ಥಿಕ ತೊಂದರೆಗಳು, ರೋಗಗಳು ಮತ್ತು ವಿಪತ್ತುಗಳಿಗೆ ಕಾರಣವಾಗಬಹುದು. ಚಿನ್ನವನ್ನು ಕಳೆದುಕೊಳ್ಳುವುದು ಎಂದರೆ ಯಾವ ಗ್ರಹಗಳ ಪ್ರಭಾವ? ಜ್ಯೋತಿಷ್ಯದ ಪ್ರಕಾರ, ಮೂರು ಗ್ರಹಗಳಾದ…
ಎಲ್ ಪಿಜಿ ಅಡುಗೆ ಅನಿಲ ಬಳಕೆದಾರರೇ ಗಮನಿಸಿ, ಇನ್ನು ಮುಂದೆ ಅಡುಗೆ ಅನಿಲ ಪಡೆಯಲು eKYC ಪೂರ್ಣಗೊಳಿಸುವುದು ಕಡ್ಡಾಯ. ಇಲ್ಲದಿದ್ದರೆ, ಗ್ಯಾಸ್ ಸಿಲಿಂಡರ್ಗಳನ್ನು ಸ್ವೀಕರಿಸುವಲ್ಲಿ ಅಡ್ಡಿ ಉಂಟಾಗುತ್ತದೆ ಮತ್ತು ಸರ್ಕಾರದಿಂದ ಗ್ಯಾಸ್ ಸಬ್ಸಿಡಿಗಳು ಕಡಿತಗೊಳ್ಳುತ್ತವೆ. ಕೇಂದ್ರ ಸರ್ಕಾರವು ಪ್ರಧಾನ ಮಂತ್ರಿ ಉಜ್ವಲ ಯೋಜನಾ ಯೋಜನೆಯಡಿಯಲ್ಲಿ ಗ್ಯಾಸ್ ಸಿಲಿಂಡರ್ಗಳಿಗೆ ನೀಡುವ ಸಬ್ಸಿಡಿ ಮತ್ತು ತೆಲಂಗಾಣ ಸರ್ಕಾರವು ನೀಡುವ 500 ರೂ. ಸಬ್ಸಿಡಿ ಕೂಡ ನಿಲ್ಲುತ್ತದೆ. ಇದರೊಂದಿಗೆ, ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಸಾಮಾನ್ಯ ಗ್ರಾಹಕರು eKYC ಪೂರ್ಣಗೊಳಿಸುವುದನ್ನು ಕಡ್ಡಾಯಗೊಳಿಸಲು ನಿರ್ಧರಿಸಿವೆ. ಈ ಪ್ರಕ್ರಿಯೆಯು ಬಹಳ ಸಮಯದಿಂದ ನಡೆಯುತ್ತಿದ್ದರೂ.. ಗಡುವನ್ನು ಜನವರಿ 31 ರವರೆಗೆ ವಿಸ್ತರಿಸಲಾಗಿದೆ. ಇದರೊಂದಿಗೆ, ಎಲ್ಲಾ ಅಡುಗೆ ಅನಿಲ ಸಿಲಿಂಡರ್ ಬಳಕೆದಾರರು ಆ ಗಡುವಿನ ಮೊದಲು eKYC ಅನ್ನು ಪೂರ್ಣಗೊಳಿಸಬೇಕು. ಇ-ಕೆವೈಸಿ ಹೇಗೆ ಮಾಡುವುದು..? ನಿಮಗೆ ಅನಿಲ ತಲುಪಿಸಲು ಬರುವ ವಿತರಣಾ ಹುಡುಗನಿಗೆ ಬಯೋಮೆಟ್ರಿಕ್ ಯಂತ್ರವಿರುತ್ತದೆ. ಅದರಲ್ಲಿ ನಿಮ್ಮ ಬಯೋಮೆಟ್ರಿಕ್ ವಿವರಗಳನ್ನು ನೀಡಿದರೆ ಸಾಕು. ಅಥವಾ ನೀವು ಗ್ಯಾಸ್ ತೆಗೆದುಕೊಂಡಲ್ಲೆಲ್ಲಾ ಗ್ಯಾಸ್…














