Author: kannadanewsnow57

ಬೆಂಗಳೂರು : ರಾಜ್ಯದಲ್ಲಿ 2026-27ನೇ ಶೈಕ್ಷಣಿಕ ಸಾಲಿನ ವಸತಿ ಶಾಲೆಗಳ 6ನೇ ತರಗತಿ ಪ್ರವೇಶಾತಿ ಅಧಿಸೂಚನೆ ಹೊರಡಿಸಲಾಗಿದ್ದು, ವಸತಿ ಶಾಲೆಗಳ 6ನೇ ತರಗತಿ ಪ್ರವೇಶಕ್ಕೆ ಅರ್ಜಿಯನ್ನು ಸಲ್ಲಿಸಬಹುದಾಗಿರುತ್ತದೆ. ಮೇಲ್ಕಂಡ ವಿಷಯಕ್ಕೆ ಸಂಬಂಧಿಸಿದಂತೆ, ಅಲ್ಪಸಂಖ್ಯಾತರ ನಿರ್ದೇಶನಾಲಯದ ಅಧೀನದ ಡಾ|| ಎ.ಪಿ.ಜೆ ಅಬ್ದುಲ್ ಕಲಾಂ ವಸತಿ ಶಾಲೆಗಳು, ಮೊರಾರ್ಜಿ ದೇಸಾಯಿ ವಸತಿ ಶಾಲೆಗಳು ಮತ್ತು ಸರ್ಕಾರಿ ಮುಸ್ಲಿಂ ವಸತಿ ಶಾಲೆಗಳು ಸೇರಿದಂತೆ ಒಟ್ಟು 173 ವಸತಿ ಶಾಲೆಗಳು ಕಾರ್ಯನಿರ್ವಹಿಸುತ್ತಿವೆ. ಪ್ರಸ್ತುತ 2026-27ನೇ ಶೈಕ್ಷಣಿಕ ಸಾಲಿನಲ್ಲಿ 6ನೇ ತರಗತಿ ಪ್ರವೇಶ ಪ್ರಕ್ರಿಯೆಯನ್ನು ಪ್ರಾರಂಭಿಸಲು ಉದ್ದೇಶಿಸಲಾಗಿದೆ. 2026-27ನೇ ಸಾಲಿನಲ್ಲಿ ಪ್ರವೇಶ ಪ್ರಕ್ರಿಯೆಗಾಗಿ ಅರ್ಹವಿರುವ ವಿದ್ಯಾರ್ಥಿಗಳು ಆನ್‌ಲೈನಲ್ಲಿ ಸೇವಾ ಸಿಂಧು ಪೋರ್ಟಲ್ ಮೂಲಕ ಅಲ್ಪಸಂಖ್ಯಾತರ ನಿರ್ದೇಶನಾಲಯದ ವಿವಿಧ ಮಾದರಿಯ ವಸತಿ ಶಾಲೆಗಳ 6ನೇ ತರಗತಿ ಪ್ರವೇಶಕ್ಕೆ ಅರ್ಜಿಯನ್ನು ಸಲ್ಲಿಸಬಹುದಾಗಿರುತ್ತದೆ. ಎಲ್ಲಾ ಜಿಲ್ಲೆಗಳ ಜಿಲ್ಲಾ ಅಧಿಕಾರಿಗಳು, ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ, ಇವರು ತಮ್ಮ ಅಧೀನದ ವಿವಿಧ ಮಾದರಿಯ ವಸತಿ ಶಾಲೆಗಳಲ್ಲಿ ಶೇ.100 ರಷ್ಟು ದಾಖಲಾತಿಯನ್ನು ಹೊಂದಲು ಜಿಲ್ಲಾ ಹಂತದಲ್ಲಿಯೇ ಪ್ರತ್ಯೇಕ…

Read More

ಬೆಂಗಳೂರು : ದ್ವಿತೀಯ ಪಿಯುಸಿಯಲ್ಲಿ ಡಿಜಿಟಲ್ ಪರೀಕ್ಷೆಗೆ ಅವಕಾಶ ನೀಡುವ ಮೂಲಕ ರಾಜ್ಯ ಸರ್ಕಾರ ಮಹತ್ವದ ಹೆಜ್ಜೆ ಇಟ್ಟಿದೆ.ವಿಶೇಷಚೇತನ ವಿದ್ಯಾರ್ಥಿಗಳಿಗೆ ಅನುಕೂಲವಾಗುವಂತೆ ಲ್ಯಾಪ್ ಟಾಪ್ ಹಾಗೂ ಕಂಪ್ಯೂಟರ್ ಬಳಸಿ ಪರೀಕ್ಷೆ ಬರೆಯಲು ಅವಕಾಶ ಕಲ್ಪಿಸಲಾಗಿದೆ. ದೃಷ್ಟಿದೋಷವುಳ್ಳ/ದೃಷ್ಟಿಮಾಂದ್ಯ (Visually Impaired) ವಿದ್ಯಾರ್ಥಿಗಳಿಗೆ 2025-26 ನೇ ಸಾಲಿನಿಂದ ದ್ವಿತೀಯ ಪಿಯುಸಿ ಪರೀಕ್ಷೆಯನ್ನು ಡಿಜಿಟಲ್ ರೂಪದಲ್ಲಿ ಪರೀಕ್ಷೆ ಬರೆಯಲು ಅವಕಾಶ ಕಲ್ಪಿಸಿ ಮಹತ್ವದ ಆದೇಶ ಹೊರಡಿಸಿದೆ. ದೃಷ್ಟಿದೋಷವುಳ್ಳ/ದೃಷ್ಟಿಮಾಂದ್ಯ (Visually Impaired) ವಿದ್ಯಾರ್ಥಿಗಳಿಗೆ ಸಿ.ಬಿ.ಎಸ್.ಇ ಮಂಡಳಿಯಲ್ಲಿ ಕಂಪ್ಯೂಟರ್ಗಳನ್ನು ಬಳಸಿ 12ನೇ ತರಗತಿಯ ಬೋರ್ಡ್ ಪರೀಕ್ಷೆ ಬರೆಯಲು ಅವಕಾಶವಿದ್ದು, ಅದೇ ರೀತಿ ರಾಜ್ಯ ಪಠ್ಯಕ್ರಮದ ದ್ವಿತೀಯ ಪಿಯುಸಿ ಪರೀಕ್ಷೆಗೆ ಹಾಜರಾಗುವ ದೃಷ್ಟಿದೋಷವುಳ್ಳ/ದೃಷ್ಟಿಮಾಂದ್ಯ (Visually Impaired) ವಿದ್ಯಾರ್ಥಿಗಳಿಗೆ 2025-26ನೇ ಸಾಲಿನಿಂದ ಅವಕಾಶ ಕಲ್ಪಿಸಲಾಗಿದೆ. ಈ ಹಿನ್ನೆಲೆಯಲ್ಲಿ ಸದರಿ ವಿದ್ಯಾರ್ಥಿಗಳಿರುವ ಕಾಲೇಜುಗಳ ಪ್ರಾಂಶುಪಾಲರು ಹಾಗೂ ಪರೀಕ್ಷಾ ಕೇಂದ್ರದ ಮುಖ್ಯ ಅಧಿಕ್ಷಕರು ಪರೀಕ್ಷಾ ಪೂರ್ವ ಹಾಗೂ ಪರೀಕ್ಷಾ ದಿನಗಳಂದು ಕೆಳಕಂಡಂತೆ ಕ್ರಮವಹಿಸಲು ತಿಳಿಸಿದೆ. 1. ಪರೀಕ್ಷಾ ಕೇಂದ್ರದಲ್ಲಿ ದೃಷ್ಟಿದೋಷವುಳ್ಳ/ದೃಷ್ಟಿಮಾಂದ್ಯ (Visually Impaired) ವಿದ್ಯಾರ್ಥಿಗಳು…

Read More

ಬೆಂಗಳೂರು : ಅನುಕಂಪದ ಆಧಾರದ ಮೇಲೆ ನೇಮಕಾತಿಗೆ ಪರಿಗಣಿಸುವ ಸಂದರ್ಭದಲ್ಲಿ ಸಿಂಧುತ್ವ ಪ್ರಮಾಣ ಪತ್ರದ ಅವಶ್ಯಕತೆಯ ಕುರಿತು ರಾಜ್ಯ ಸರ್ಕಾರ ಮಹತ್ವದ ಆದೇಶ ಹೊರಡಿಸಿದೆ. ಮಾನ್ಯ ಸರ್ವೋಚ್ಛ ನ್ಯಾಯಾಲಯವು ಉಮೇಶ್ ಕುಮಾರ್ ನಾಗಪಾಲ್ ವಿರುದ್ಧ ಹರಿಯಾಣ ರಾಜ್ಯ ಮತ್ತು ಇತರರು (1994) 4 SCC 138) ಪ್ರಕರಣದಲ್ಲಿ ನೀಡಿದ ತೀರ್ಪಿನ ಹಿನ್ನೆಲೆಯಲ್ಲಿ, ಕರ್ನಾಟಕ ಸಿವಿಲ್ ಸೇವಾ (ಅನುಕಂಪದ ಆಧಾರದ ಮೇಲೆ ನೇಮಕಾತಿ) ನಿಯಮಗಳು, 1996 ನ್ನು ರಚಿಸಲಾಗಿದ್ದು, ಈ ನಿಯಮಗಳು ದಿನಾಂಕ:13.09.1996ರಿಂದ ಜಾರಿಗೆ ಬಂದಿರುತ್ತವೆ. ಈ ನಿಯಮಗಳನ್ನು ಕಾಲ ಕಾಲಕ್ಕೆ ತಿದ್ದುಪಡಿ ಮಾಡಲಾಗಿರುತ್ತದೆ. ದಿನಾಂಕ: 09.04.2021ರ ಅಧಿಸೂಚನೆ ಸಂಖ್ಯೆ: ಸಿಆಸುಇ 26 ಸೇಅನೇ 2018ರಲ್ಲಿ 1996ರ ಸದರಿ ನಿಯಮಗಳಿಗೆ ವ್ಯಾಪಕವಾದ ತಿದ್ದುಪಡಿಗಳನ್ನು ಮಾಡಲಾಗಿರುತ್ತದೆ. ಈ ನಿಯಮಗಳನ್ನು ಅನುಷ್ಠಾನಗೊಳಿಸುವುದಕ್ಕೆ ಸಂಬಂಧಿಸಿದಂತೆ ದಿನಾಂಕ:12.11.2024ರ ಉಲ್ಲೇಖ (1) ರ ಸುತ್ತೋಲೆಯಲ್ಲಿ ಮತ್ತು ದಿನಾಂಕ:13.01.2025ರ ಉಲ್ಲೇಖ (2)8 ಸುತ್ತೋಲೆಯಲ್ಲಿ ಎಲ್ಲಾ ನೇಮಕಾತಿ ಪ್ರಾಧಿಕಾರಗಳಿಗೆ ಸೂಚನೆಗಳನ್ನು ನೀಡಲಾಗಿರುತ್ತದೆ. ಕರ್ನಾಟಕ ಸಿವಿಲ್ ಸೇವಾ (ಸಾಮಾನ್ಯ ನೇಮಕಾತಿ) ನಿಯಮಗಳು, 1977 ರ…

Read More

ಬೆಂಗಳೂರು : ರಾಜ್ಯದ ರೈತರೇ ಗಮನಿಸಿ, ಕೃಷಿ ಇಲಾಖೆಯಿಂದ ನಿಮಗೆ ಕೃಷಿ ಯಂತ್ರೋಪಕರಣ, ಬೆಳೆ ವಿಮೆ, ನೀರಾವರಿ, ಮಣ್ಣು ಪರೀಕ್ಷೆ, ಆದಾಯ ಬೆಂಬಲ ಮತ್ತು ಮಾರುಕಟ್ಟೆ ಸಂಪರ್ಕದಂತಹ ವಿವಿಧ 21 ಸೌಲಭ್ಯಗಳು ಸಿಗಲಿವೆ. ರಾಜ್ಯದ ರೈತರಿಗೆ ಕೃಷಿ ಇಲಾಖೆಯಿಂದ ಸಿಗುವ ಸೌಲಭ್ಯಗಳೇನು? ಇಲ್ಲಿದೆ ಸಂಪೂರ್ಣ ಮಾಹಿತಿ 1. ಬೀಜಗಳ ಪೂರೈಕೆ: ಕೃಷಿ ಇಲಾಖೆಯ ಬೀಜಗಳ ಪೂರೈಕೆ ಮತ್ತು ಇತರೆ ಹೂಡುವಳಿ ಯೋಜನೆಯಡಿ ರಾಜ್ಯದ ಎಲ್ಲಾ ವರ್ಗದ ರೈತರಿಗೆ ವಿವಿಧ ಕೃಷಿ ಬೆಳೆಗಳ (ಭತ್ತ, ರಾಗಿ, ಜೋಳ, ಮುಸುಕಿನ ಜೋಳ, ಸಜ್ಜೆ, ತೊಗರಿ, ಕಡಲೆ, ಹೆಸರು, ಉದ್ದು, ಅಲಸಂದೆ, ನೆಲಗಡಲೆ, ಸೂರ್ಯಕಾಂತಿ, ಸೋಯಾ ಅವರೆ, ಹತ್ತಿ ಇತ್ಯಾದಿ) ಪ್ರಮಾಣಿತ/ ನಿಜ ಚೀಟಿ ಬಿತ್ತನೆ ಬೀಜಗಳನ್ನು ಸಾಮಾನ್ಯ ವರ್ಗದ ರೈತರಿಗೆ ಶೇ. 50 ಹಾಗೂ ಪರಿಶಿಷ್ಟ ಜಾತಿ/ ಪಂಗಡದ ರೈತರಿಗೆ ಶೇ.75 ರ ರಿಯಾಯಿತಿ ದರದಲ್ಲಿ ವಿತರಣೆ ಮಾಡಲಾಗುತ್ತಿದೆ. ಒಟ್ಟಾರೆ ಗರಿಷ್ಟ 2.00 ಹೆಕ್ಟೇರ್ ಅಥವಾ ಅವರ ವಾಸ್ತವಿಕ ಹಿಡುವಳಿ (Actual holding) ಯಾವುದು…

Read More

ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ ವತಿಯಿಂದ 2025-26ನೆ ಸಾಲಿನ ಸಾಧನೆ ಯೋಜನೆಯ ಸೌಲಭ್ಯ ಪಡೆಯಲು ಅರ್ಹ ವಿಕಲಚೇತರಿಂದ ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಲು ಜನವರಿ 31, 2026 ರವರೆಗೆ ಅವಧಿಯನ್ನು ವಿಸ್ತರಿಸಲಾಗಿದೆ. ಆಸಕ್ತ ವಿಕಲೇಚತನ ಫಲಾನುಭವಿಗಳು ಗ್ರಾಮ್ ಒನ್, ಕರ್ನಾಟಕ ಒನ್, ಬೆಂಗಳೂರು ಒನ್, ಮತ್ತು ಸೇವಾ ಸಿಂಧು ಪೋರ್ಟಲ್ (https://sevasindhu.karnataka.gov.in/sevasindhu/DepartmentServices) ನಲ್ಲಿ ಅಗತ್ಯ ದಾಖಲೆಗಳೊಂದಿಗೆ ಅರ್ಜಿಗಳನ್ನು ಸಲ್ಲಿಸಬಹುದು. ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಅಂಗವಿಕಲರ ಕಲ್ಯಾಣಾಧಿಕಾರಿಗಳ ಕಛೇರಿ, ಸುಧಾರಣಾ ಸಂಸ್ಥೆಗಳ ಸಂಕೀರ್ಣ ಹೊಸೂರು ರಸ್ತೆ, ಬೆಂಗಳೂರು ನಗರ ಜಿಲ್ಲೆ-560029 ಅಥವಾ ದೂರವಾಣಿ ಸಂಖ್ಯೆ-080-29752324 ಗೆ ಸಂಪರ್ಕಿಸಬಹುದು ಎಂದು ಬೆಂಗಳೂರು ನಗರ ಜಿಲ್ಲಾ ಅಂಗವಿಕಲರ ಕಲ್ಯಾಣಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Read More

ಬೆಂಗಳೂರು : ರಾಜ್ಯ ಸರ್ಕಾರದಿಂದ ಪರಿಶಿಷ್ಟ ಪಂಗಡದ ಉದ್ಯಮಿಗಳಿಗೆ ಸಿಹಿಸುದ್ದಿ ಸಿಕ್ಕಿದ್ದು, ವ್ಯಾಪಾರಕ್ಕಾಗಿ ಬಡ್ಡಿ ಸಹಾಯಧನ ಕಾರ್ಯಕ್ರಮ ಅನುಷ್ಠಾನಗೊಳಿಸಲಾಗಿದೆ. ಪರಿಶಿಷ್ಟ ಪಂಗಡದ ಉದ್ಯಮಿಗಳು ಎಂ.ಎಸ್.ಎಂ.ಇ (ಸೂಕ್ಷ್ಮ ಸಣ್ಣ ಮತ್ತು ಮಧ್ಯಮ ಉದ್ಯಮಗಳು) ಘಟಕಗಳನ್ನು ಸ್ಥಾಪಿಸಲು ಕರ್ನಾಟಕ ರಾಜ್ಯ ಹಣಕಾಸು ಸಂಸ್ಥೆ ಹಾಗೂ ರಾಷ್ಟ್ರೀಕೃತ / ಜಿಲ್ಲಾ ಸಹಕಾರಿ ಬ್ಯಾಂಕ್ / ಅಪೆಕ್ಸ್ ಸಹಕಾರಿ ಬ್ಯಾಂಕ್ಗಳಿಂದ ಪಡೆಯುವ ಸಾಲಕ್ಕೆ 4% ಬಡ್ಡಿ ಸಹಾಯಧನ ಸೌಲಭ್ಯ ಒದಗಿಸುವ ಯೋಜನೆ. 2021-22ನೇ ಸಾಲಿನಿಂದ ವಾಣಿಜ್ಯ ಮತ್ತು ವ್ಯಾಪಾರ ಚಟುವಟಿಕೆಗಳಾದ ಮಳಿಗೆ / ಡೀಲರ್ಶಿಪ್ / ಫ್ರಾಂಚೈಸಿ / ಹೋಟೆಲ್ ಉದ್ಯಮಗಳಿಗೂ ಈ ಯೋಜನೆ ವಿಸ್ತರಿಸಲಾಗಿದೆ. ಈ ಯೋಜನೆಯಡಿ ಗರಿಷ್ಟ ರೂ. 1.00 ಕೋಟಿ ವರೆಗೆ ರಾಷ್ಟ್ರೀಕೃತ ಮತ್ತು ವಾಣಿಜ್ಯ ಶೆಡ್ಯೂಲ್ಡ್ ಬ್ಯಾಂಕ್ಗಳಿಂದ ಸಾಲ ಪಡೆಯಲು ಅವಕಾಶ ಒದಗಿಸಲಾಗಿದೆ. ಸಾಲದ ಮರುಪಾವತಿ ಅವಧಿ : 5 ವರ್ಷಗಳ ಅವಧಿಗೆ ನಿಗದಿಪಡಿಸಲಾಗಿದೆ.

Read More

ನದದೆಹಲಿ : NEET UG 2026 ನೋಂದಣಿ ಪ್ರಕ್ರಿಯೆಗೆ ಸಂಬಂಧಿಸಿದಂತೆ ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (NTA) ಅಭ್ಯರ್ಥಿಗಳಿಗೆ ಒಂದು ಪ್ರಮುಖ ಸಲಹೆಯನ್ನು ನೀಡಿದೆ. 2026 ರ ರಾಷ್ಟ್ರೀಯ ಅರ್ಹತಾ ಮತ್ತು ಪ್ರವೇಶ ಪರೀಕ್ಷೆಗೆ ಹಾಜರಾಗಲು ಬಯಸುವ ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಮೊದಲು ಕೆಲವು ಅಗತ್ಯ ದಾಖಲೆಗಳನ್ನು ನವೀಕರಿಸಲು ಸೂಚಿಸಲಾಗಿದೆ. ಅಭ್ಯರ್ಥಿಗಳ ಆಧಾರ್ ಕಾರ್ಡ್‌ಗಳು ಸಂಪೂರ್ಣವಾಗಿ ಸರಿಯಾಗಿರಬೇಕು, ಮಾನ್ಯವಾಗಿರಬೇಕು ಮತ್ತು ನವೀಕರಿಸಿರಬೇಕು ಎಂದು NTA ಸ್ಪಷ್ಟಪಡಿಸಿದೆ. ಈ ವಿವರಗಳು ಆಧಾರ್ ಕಾರ್ಡ್‌ನಲ್ಲಿ ಸರಿಯಾಗಿರಬೇಕು. NTA ಪ್ರಕಾರ, NEET UG 2026 ಗೆ ಅರ್ಜಿ ಸಲ್ಲಿಸುವ ಎಲ್ಲಾ ಅಭ್ಯರ್ಥಿಗಳು ತಮ್ಮ ಆಧಾರ್ ಕಾರ್ಡ್‌ನಲ್ಲಿ ಈ ಕೆಳಗಿನ ವಿವರಗಳು ಸರಿಯಾಗಿವೆಯೇ ಎಂದು ಖಚಿತಪಡಿಸಿಕೊಳ್ಳಬೇಕು: ಅಭ್ಯರ್ಥಿಯ ಪೂರ್ಣ ಹೆಸರು ಜನ್ಮ ದಿನಾಂಕ ಲಿಂಗ ಛಾಯಾಚಿತ್ರ ವಿಳಾಸ ಬಯೋಮೆಟ್ರಿಕ್ ಮಾಹಿತಿ (ಅನ್ವಯವಾಗುವಲ್ಲಿ) ಈ ವಿವರಗಳಲ್ಲಿ ಯಾವುದಾದರೂ ತಪ್ಪಾಗಿದ್ದರೆ, ಅಭ್ಯರ್ಥಿಗಳು ತಮ್ಮ ಆಧಾರ್ ಅನ್ನು ತಕ್ಷಣವೇ ನವೀಕರಿಸಲು ಸೂಚಿಸಲಾಗಿದೆ. UDID ಕಾರ್ಡ್ ಮತ್ತು ವರ್ಗ ಪ್ರಮಾಣಪತ್ರವೂ ಸಹ ಅಗತ್ಯವಿದೆ. NTA…

Read More

ಉತ್ತರ ಪ್ರದೇಶ : ಕೋತಿ ಗ್ಯಾಂಗ್ ದಾಳಿಗೆ ಮಹಿಳೆಯೊಬ್ಬರು ಬಲಿಯಾಗಿರುವ ಘಟನೆ ಉತ್ತರ ಪ್ರದೇಶದ  ಶಹಜಹಾನ್‌ಪುರ ಜಿಲ್ಲೆಯಲ್ಲಿ ನಡೆದಿದೆ. ಕಲಾನ್ ಪ್ರದೇಶದ ಜಮುನಾ ದೇವಿ (45) ತನ್ನ ಮನೆಯ ಎರಡನೇ ಮಹಡಿಯ ಟೆರೇಸ್‌ನಲ್ಲಿ ನೇತಾಡುತ್ತಿದ್ದ ಬಟ್ಟೆಗಳನ್ನು ತೆಗೆದುಕೊಳ್ಳಲು ಹೋದಾಗ ಅನಿರೀಕ್ಷಿತ ಅಪಘಾತಕ್ಕೀಡಾಗಿದ್ದರು. ಇದ್ದಕ್ಕಿದ್ದಂತೆ, ಕೋತಿಗಳ ಗುಂಪು ಅವಳನ್ನು ಸುತ್ತುವರೆದಿತ್ತು. ಅವಳು ಕೆಳಗೆ ಇಳಿಯಲು ಪ್ರಯತ್ನಿಸಿದಾಗ, ಕೋತಿಗಳು ಅವಳ ಮೇಲೆ ತೀವ್ರವಾಗಿ ದಾಳಿ ಮಾಡಿದವು. ಈ ಪ್ರಕ್ರಿಯೆಯಲ್ಲಿ, ಅವಳು ನಿಯಂತ್ರಣ ಕಳೆದುಕೊಂಡು ಮೇಲಿನ ಮಹಡಿಯಿಂದ ಬಿದ್ದಳು. ಗಂಭೀರ ಗಾಯಗಳಿಂದಾಗಿ ಅವಳು ಸ್ಥಳದಲ್ಲೇ ಸಾವನ್ನಪ್ಪಿದಳು. ಈ ದುರಂತ ಘಟನೆಯಿಂದ ಅವಳ ನಾಲ್ವರು ಗಂಡು ಮಕ್ಕಳು ಮತ್ತು ಇಬ್ಬರು ಹೆಣ್ಣು ಮಕ್ಕಳು ಅನಾಥರಾದರು. ಜಿಲ್ಲಾಡಳಿತದ ನಿರ್ಲಕ್ಷ್ಯದಿಂದಾಗಿ ಇಂತಹ ಸಾವುಗಳು ಸಂಭವಿಸುತ್ತಿವೆ ಎಂದು ಸ್ಥಳೀಯ ಜನರು ಆಕ್ರೋಶಗೊಂಡಿದ್ದಾರೆ. ಜಿಲ್ಲೆಯಲ್ಲಿ ಮಂಗಗಳ ಕಾಟ ದಿನದಿಂದ ದಿನಕ್ಕೆ ಹೆಚ್ಚುತ್ತಿದೆ. ಅಂಕಿಅಂಶಗಳ ಪ್ರಕಾರ, ಜನವರಿ 2025 ರಿಂದ ಜಿಲ್ಲೆಯಲ್ಲಿ ಮಂಗಗಳ ದಾಳಿಯಿಂದ 13 ಕ್ಕೂ ಹೆಚ್ಚು ಜನರು ಪ್ರಾಣ ಕಳೆದುಕೊಂಡಿದ್ದಾರೆ. ವಸತಿ…

Read More

ವೈಯಕ್ತಿಕ ಸಾಲ ಪಡೆಯುವಲ್ಲಿ ನಿಮ್ಮ ಆದಾಯವು ಪ್ರಮುಖ ಪಾತ್ರ ವಹಿಸುತ್ತದೆಯಾದರೂ, ಸಾಲದಾತರು ಪರಿಗಣಿಸುವ ಏಕೈಕ ಅಂಶ ಇದಲ್ಲ. ನಿಮ್ಮ CIBIL ಸ್ಕೋರ್, ಕ್ರೆಡಿಟ್ ಇತಿಹಾಸ, ಉದ್ಯೋಗ ಸ್ಥಿತಿ, ವಾಸಸ್ಥಳ ಮತ್ತು ಮಾಸಿಕ ಗಳಿಕೆಯಂತಹ ಇತರ ಅಂಶಗಳು ಸಹ ಪ್ರಮುಖ ಪಾತ್ರವಹಿಸುತ್ತವೆ. ಈಗ ವೈಯಕ್ತಿಕ ಸಾಲವನ್ನು ಪಡೆಯಲು ಅರ್ಹತಾ ಮಾನದಂಡಗಳು ಯಾವುವು ಮತ್ತು ಸಾಲ ಅನುಮೋದನೆಯನ್ನು ಹೇಗೆ ಪಡೆಯುವುದು ಎಂದು ನೋಡೋಣ. ವೈಯಕ್ತಿಕ ಸಾಲ ಎಂದರೇನು? ಇದು ಬ್ಯಾಂಕುಗಳು ಅಥವಾ ಇತರ ಹಣಕಾಸು ಸಂಸ್ಥೆಗಳು ನೀಡುವ ಅಸುರಕ್ಷಿತ ಸಾಲವಾಗಿದೆ. ಅಂದರೆ, ನಿಮ್ಮ ಮನೆ ಅಥವಾ ಕಾರಿನಂತಹ ಯಾವುದೇ ಸ್ವತ್ತುಗಳನ್ನು ಇದಕ್ಕಾಗಿ ನೀವು ಮೇಲಾಧಾರವಾಗಿ ಒತ್ತೆ ಇಡುವ ಅಗತ್ಯವಿಲ್ಲ. ತುರ್ತು ವೆಚ್ಚಗಳು, ಸಾಲ ಮರುಪಾವತಿ, ಶಿಕ್ಷಣ, ವಾಹನ ಖರೀದಿ, ಮನೆ ದುರಸ್ತಿ, ಮದುವೆ ಮತ್ತು ವೈದ್ಯಕೀಯ ವೆಚ್ಚಗಳಂತಹ ವಿವಿಧ ಅಗತ್ಯಗಳಿಗೆ ವೈಯಕ್ತಿಕ ಸಾಲಗಳು ಉಪಯುಕ್ತವಾಗಿವೆ. ಅವು ಸಾಮಾನ್ಯವಾಗಿ ಸ್ಥಿರ ಬಡ್ಡಿದರವನ್ನು ಹೊಂದಿರುತ್ತವೆ, ಆದ್ದರಿಂದ ನೀವು ಪ್ರತಿ ತಿಂಗಳು ಅದೇ ಮೊತ್ತವನ್ನು ಪಾವತಿಸಬೇಕಾಗುತ್ತದೆ. ವೈಯಕ್ತಿಕ ಸಾಲಕ್ಕೆ…

Read More

ಇತ್ತೀಚಿನ ದಿನಗಳಲ್ಲಿ ಮೂತ್ರಪಿಂಡದ ಕಲ್ಲುಗಳಿಂದ ಬಳಲುತ್ತಿರುವವರ ಸಂಖ್ಯೆ ಹೆಚ್ಚುತ್ತಿದೆ. ಹೊಟ್ಟೆ ನೋವು ಮತ್ತು ಮೂತ್ರ ವಿಸರ್ಜನೆಯ ಸಮಯದಲ್ಲಿ ಉರಿಯಂತಹ ಲಕ್ಷಣಗಳು ಕಂಡುಬಂದಾಗ ಅನೇಕ ಜನರು ವಿವಿಧ ಸಲಹೆಗಳನ್ನು ಅನುಸರಿಸುತ್ತಾರೆ. ವಿಶೇಷವಾಗಿ, ಅನೇಕ ಮೂಢನಂಬಿಕೆಗಳನ್ನು ಅನುಸರಿಸಿ ಮತ್ತು ಬಿಯರ್ ಕುಡಿಯುವುದರಿಂದ ಮೂತ್ರಪಿಂಡದ ಕಲ್ಲುಗಳು ಕರಗುತ್ತವೆ ಎಂಬ ಕಥೆಯನ್ನು ನಂಬುತ್ತಾರೆ.. ಅದು ಎಷ್ಟು ನಿಜ? ಬಿಯರ್ ಕುಡಿಯುವುದರಿಂದ ಮೂತ್ರಪಿಂಡದ ಕಲ್ಲುಗಳು ಕರಗುತ್ತವೆಯೇ? ಇದರ ಬಗ್ಗೆ ಆರೋಗ್ಯ ತಜ್ಞರು ಏನು ಹೇಳುತ್ತಾರೆಂದು ತಿಳಿಯಿರಿ. ವಾಸ್ತವವಾಗಿ, ಮದ್ಯಪಾನ ಮಾಡುವುದು ಆರೋಗ್ಯಕ್ಕೆ ಹಾನಿಕಾರಕ.. ಬಿಯರ್ ಕುಡಿಯುವುದರಿಂದ ಮೂತ್ರಪಿಂಡದ ಕಲ್ಲುಗಳು ಕರಗುತ್ತವೆ ಎಂಬ ಅಂಶವನ್ನು ಬದಿಗಿಟ್ಟು. ವೈದ್ಯಕೀಯ ವಿಜ್ಞಾನದ ಪ್ರಕಾರ, ತಜ್ಞರು ಎಚ್ಚರಿಸುವಂತೆ ಮೂತ್ರಪಿಂಡದ ಕಲ್ಲುಗಳನ್ನು ಕರಗಿಸುವ ಬದಲು, ಬಿಯರ್ ಕುಡಿಯುವುದರಿಂದ ಮೂತ್ರಪಿಂಡಗಳು ಇನ್ನಷ್ಟು ಹಾನಿಗೊಳಗಾಗಬಹುದು. ಬಿಯರ್ ಕುಡಿಯುವುದರಿಂದ ಕೆಲವು ಮೂತ್ರಪಿಂಡದ ಸಮಸ್ಯೆಗಳು ಬರುವ ಸಾಧ್ಯತೆ ಹೆಚ್ಚು. ಬಿಯರ್ ಮೂತ್ರ ವಿಸರ್ಜನೆಗೆ ಕಾರಣವಾಗುತ್ತದೆ. ಅಂದರೆ, ನೀವು ಅದನ್ನು ಕುಡಿದಾಗ, ನೀವು ಹೆಚ್ಚು ಮೂತ್ರ ವಿಸರ್ಜಿಸುತ್ತೀರಿ. ಇದು ದೇಹದಿಂದ ನೀರು ವೇಗವಾಗಿ…

Read More