Author: kannadanewsnow57

ಬೆಂಗಳೂರು: ವಾಹನವನ್ನು ಮತ್ತೊಬ್ಬರಿಗೆ ಮಾರಾಟ ಮಾಡಿದ್ದರೂ ಸಹ, ಅಧಿಕೃತವಾಗಿ ನೋಂದಣಿ ಪ್ರಮಾಣಪತ್ರದಲ್ಲಿ (RC) ಮಾಲೀಕತ್ವ ವರ್ಗಾವಣೆಯಾಗುವವರೆಗೆ ಅಪಘಾತಕ್ಕೆ ಸಂಬಂಧಿಸಿದ ಎಲ್ಲಾ ಕಾನೂನು ಹೊಣೆಗಾರಿಕೆಗಳು ನೋಂದಾಯಿತ ಮಾಲೀಕರದ್ದೇ ಆಗಿರುತ್ತದೆ ಎಂದು ಕರ್ನಾಟಕ ಹೈಕೋರ್ಟ್ ಸ್ಪಷ್ಟಪಡಿಸಿದೆ. ಪ್ರಕರಣದ ಹಿನ್ನೆಲೆ: ಮಾರತಹಳ್ಳಿಯ ಸುನಿಲ್ ಕುಮಾರ್ ಎಂಬುವವರು ತಮ್ಮ ಬೈಕನ್ನು ಶಬ್ರೇಜ್ ಎಂಬುವವರಿಗೆ ಮಾರಾಟ ಮಾಡಿದ್ದರು. ಈ ಬೈಕ್ 2020ರ ಜೂನ್ 18ರಂದು ಹನುಮಂತ ಎಂಬುವವರಿಗೆ ಡಿಕ್ಕಿ ಹೊಡೆದ ಪರಿಣಾಮ ಅವರು ಮೃತಪಟ್ಟಿದ್ದರು. ಮೃತರ ಕುಟುಂಬದವರು ಪರಿಹಾರ ಕೋರಿ ಮೋಟಾರು ಅಪಘಾತ ನ್ಯಾಯಮಂಡಳಿಗೆ ಅರ್ಜಿ ಸಲ್ಲಿಸಿದ್ದರು. ನ್ಯಾಯಾಲಯದ ಆದೇಶ: ವಿಮಾ ದಾಖಲೆಗಳಲ್ಲಿನ ಸಮಸ್ಯೆಯಿಂದಾಗಿ, ನೋಂದಾಯಿತ ಮಾಲೀಕರೇ ಪರಿಹಾರ ನೀಡಬೇಕು ಎಂದು ನ್ಯಾಯಮಂಡಳಿ ಈ ಹಿಂದೆ 33 ಲಕ್ಷ ರೂ. ಪರಿಹಾರ ನಿಗದಿಪಡಿಸಿತ್ತು. ಇದನ್ನೂ ಓದಿ : ಬದಲಾದ ಹವಾಮಾನ: ಇಂದು ರಾಜ್ಯದ ಈ 3 ಜಿಲ್ಲೆಗಳಲ್ಲಿ ಭಾರೀ ಮಳೆ ಮುನ್ಸೂಚನೆ ‘ಯೆಲ್ಲೋ ಅಲರ್ಟ್’ ಘೋಷಣೆ! ಪರಿಹಾರ ಹೆಚ್ಚಳ: ಇದನ್ನು ಪ್ರಶ್ನಿಸಿ ಹೈಕೋರ್ಟ್ ಮೆಟ್ಟಿಲೇರಿದ್ದ ಅರ್ಜಿಯನ್ನು ವಿಚಾರಣೆ ನಡೆಸಿದ…

Read More

ಬೆಂಗಳೂರು: ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಳಿಯು ಈ ವರ್ಷದ ದ್ವಿತೀಯ ಪಿಯುಸಿ ಫಲಿತಾಂಶವನ್ನು ಉಪಚುನಾವಣೆಯ ಮತದಾನ ಪ್ರಕ್ರಿಯೆ ಪೂರ್ಣಗೊಂಡ ನಂತರ ಬಿಡುಗಡೆ ಮಾಡಲು ನಿರ್ಧರಿಸಿದೆ. ಗಲಕೋಟೆ ಹಾಗೂ ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆಯ ಮತದಾನವು ಏಪ್ರಿಲ್ 9, ಗುರುವಾರ ನಡೆಯಲಿದೆ. ಚುನಾವಣಾ ನೀತಿ ಸಂಹಿತೆ ಜಾರಿಯಲ್ಲಿರುವ ಕಾರಣ, ಫಲಿತಾಂಶ ಪ್ರಕಟಿಸಲು ಅನುಮತಿ ಕೋರಿ ಮಂಡಳಿಯು ಚುನಾವಣಾ ಆಯೋಗಕ್ಕೆ ಪತ್ರ ಬರೆದಿತ್ತು. ಚುನಾವಣಾ ಆಯೋಗದಿಂದ ಈವರೆಗೆ ಯಾವುದೇ ಅಧಿಕೃತ ಉತ್ತರ ಬಂದಿಲ್ಲ. ಈ ಹಿನ್ನೆಲೆಯಲ್ಲಿ, ನೀತಿ ಸಂಹಿತೆಯ ಅಡ್ಡಿ ಉಂಟಾಗದಂತೆ ಮತದಾನ ಮುಗಿದ ನಂತರವಷ್ಟೇ ಫಲಿತಾಂಶ ಪ್ರಕಟಿಸುವುದು ಸೂಕ್ತ ಎಂಬ ತೀರ್ಮಾನಕ್ಕೆ ಬರಲಾಗಿದೆ. ಗುರುವಾರ ಸಂಜೆ ಮತದಾನ ಮುಗಿದ ಕೂಡಲೇ ಫಲಿತಾಂಶ ನೀಡಲು ಅವಕಾಶವಿದ್ದರೂ, ಸಂಜೆಯ ವೇಳೆಗೆ ಫಲಿತಾಂಶ ಪ್ರಕಟಿಸಿದರೆ ಶಾಲೆ-ಕಾಲೇಜುಗಳಿಗೆ ಹಾಗೂ ವಿದ್ಯಾರ್ಥಿಗಳಿಗೆ ತಾಂತ್ರಿಕವಾಗಿ ತೊಂದರೆಯಾಗಬಹುದು ಎಂದು ಅಂದಾಜಿಸಲಾಗಿದೆ. ಈ ಎಲ್ಲಾ ಕಾರಣಗಳಿಂದಾಗಿ ಏಪ್ರಿಲ್ 10, ಶುಕ್ರವಾರದಂದು ಫಲಿತಾಂಶ ಪ್ರಕಟಿಸುವುದು ಸೂಕ್ತ ಎಂದು ಮಂಡಳಿಯು ಸರ್ಕಾರಕ್ಕೆ ಮಾಹಿತಿ…

Read More

ನವದೆಹಲಿ: ಪಶ್ಚಿಮ ಏಷ್ಯಾದಲ್ಲಿ (ಮಧ್ಯಪ್ರಾಚ್ಯ) ಹೆಚ್ಚುತ್ತಿರುವ ಉದ್ವಿಗ್ನತೆಯಿಂದಾಗಿ ಭಾರತೀಯ ಉದ್ಯಮಗಳು ಮತ್ತು ರಫ್ತುದಾರರ ಮೇಲಾಗುತ್ತಿರುವ ಆರ್ಥಿಕ ಒತ್ತಡವನ್ನು ಕಡಿಮೆ ಮಾಡಲು ಕೇಂದ್ರ ಸರ್ಕಾರವು ದೊಡ್ಡ ಹೆಜ್ಜೆಯನ್ನಿಟ್ಟಿದೆ. ಮುಂಬರುವ ಕೆಲವೇ ದಿನಗಳಲ್ಲಿ ಸುಮಾರು 2.5 ಲಕ್ಷ ಕೋಟಿ ರೂಪಾಯಿಗಳ ಬೃಹತ್ ‘ಕ್ರೆಡಿಟ್ ಗ್ಯಾರಂಟಿ ಯೋಜನೆ’ಯನ್ನು (Credit Guarantee Scheme) ಸರ್ಕಾರ ಬಿಡುಗಡೆ ಮಾಡುವ ಸಾಧ್ಯತೆಯಿದೆ ಎಂದು ಮೂಲಗಳು ತಿಳಿಸಿವೆ. ಇಸ್ರೇಲ್-ಹಮಾಸ್ ಮತ್ತು ಇಸ್ರೇಲ್-ಇರಾನ್ ನಡುವಿನ ಸಂಘರ್ಷದಿಂದಾಗಿ ಜಾಗತಿಕ ಪೂರೈಕೆ ಸರಪಳಿಯಲ್ಲಿ ವ್ಯತ್ಯಯ ಉಂಟಾಗಿದೆ. ಇದರಿಂದ ತೊಂದರೆಗೀಡಾಗಿರುವ ಸಣ್ಣ ಮತ್ತು ಮಧ್ಯಮ ಗಾತ್ರದ ಉದ್ದಿಮೆಗಳಿಗೆ (MSME) ಈ ಯೋಜನೆ ಮರುಜೀವ ನೀಡುವ ಗುರಿ ಹೊಂದಿದೆ. ಹಣಕಾಸಿನ ನೆರವು: ಈ ಯೋಜನೆಯಡಿ, ಬ್ಯಾಂಕುಗಳು ಮತ್ತು ಹಣಕಾಸು ಸಂಸ್ಥೆಗಳು ನೀಡುವ ಸಾಲಕ್ಕೆ ಸರ್ಕಾರವು ಗ್ಯಾರಂಟಿ ನೀಡಲಿದೆ. ಇದರಿಂದಾಗಿ ಉದ್ಯಮಿಗಳು ಸುಲಭವಾಗಿ ಮತ್ತು ಕಡಿಮೆ ಬಡ್ಡಿದರದಲ್ಲಿ ಸಾಲ ಪಡೆಯಲು ಸಾಧ್ಯವಾಗುತ್ತದೆ. ರಫ್ತುದಾರರಿಗೆ ಅನುಕೂಲ: ಸರಕು ಸಾಗಣೆ ವೆಚ್ಚ ಹೆಚ್ಚಳ ಮತ್ತು ಆರ್ಡರ್‌ಗಳ ವಿಳಂಬದಿಂದ ಕಂಗಾಲಾಗಿರುವ ರಫ್ತುದಾರರಿಗೆ ಕಾರ್ಯವಾಹಿ ಬಂಡವಾಳದ…

Read More

ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ (NHAI) ಹೆದ್ದಾರಿ ಪ್ರಯಾಣವನ್ನು ಸಂಪೂರ್ಣವಾಗಿ ಡಿಜಿಟಲೀಕರಣಗೊಳಿಸಲು ಮುಂದಾಗಿದೆ. ಈ ನಿಟ್ಟಿನಲ್ಲಿ ಏಪ್ರಿಲ್ 10, 2026 ರಿಂದ ಟೋಲ್ ಪ್ಲಾಜಾಗಳಲ್ಲಿ ನಗದು ಹಣ ಪಡೆಯುವುದನ್ನು ನಿಲ್ಲಿಸಲಾಗುವುದು ಎಂದು ಘೋಷಿಸಿದೆ. ಏಪ್ರಿಲ್ 10 ರಿಂದ ಟೋಲ್ ಕೇಂದ್ರಗಳಲ್ಲಿ ಹಣದ ಮೂಲಕ ಪಾವತಿ ಮಾಡಲು ಅವಕಾಶವಿರುವುದಿಲ್ಲ. ಫಾಸ್ಟ್‌ಟ್ಯಾಗ್ (FASTag) ಪ್ರಾಥಮಿಕ ಪಾವತಿ ವಿಧಾನವಾಗಿರುತ್ತದೆ. UPI ಮೂಲಕ ಪಾವತಿಗೆ ಅವಕಾಶ: ಫಾಸ್ಟ್‌ಟ್ಯಾಗ್ ಇಲ್ಲದವರಿಗೆ ಯುಪಿಐ (UPI) ಮೂಲಕ ಹಣ ಪಾವತಿಸಲು ಅವಕಾಶವಿದೆ. ಆದರೆ, ಫಾಸ್ಟ್‌ಟ್ಯಾಗ್ ಇಲ್ಲದೆ ಯುಪಿಐ ಮೂಲಕ ಪಾವತಿಸುವವರು ಸಾಮಾನ್ಯ ದರಕ್ಕಿಂತ ಶೇ. 25ರಷ್ಟು ಹೆಚ್ಚಿನ ದಂಡ ಅಥವಾ ಶುಲ್ಕ ಪಾವತಿಸಬೇಕಾಗುತ್ತದೆ. ಪ್ರವೇಶ ನಿರಾಕರಣೆ: ಫಾಸ್ಟ್‌ಟ್ಯಾಗ್ ಅಥವಾ ಯುಪಿಐ ಮೂಲಕ ಪಾವತಿಸಲು ನಿರಾಕರಿಸುವ ವಾಹನಗಳಿಗೆ ಟೋಲ್ ರಸ್ತೆಗೆ ಪ್ರವೇಶ ನೀಡಲಾಗುವುದಿಲ್ಲ. ಒಂದು ವೇಳೆ ಶುಲ್ಕ ಪಾವತಿಸದೆ ಮುಂದೆ ಹೋದರೆ, ಅಂತಹ ವಾಹನ ಮಾಲೀಕರಿಗೆ ನೋಟಿಸ್ ನೀಡುವುದರ ಜೊತೆಗೆ ದುಪ್ಪಟ್ಟು ದಂಡ ವಿಧಿಸಲಾಗುತ್ತದೆ. ಗುರುತಿನ ಚೀಟಿಗಳಿಗೆ ರಿಯಾಯಿತಿ ಇಲ್ಲ: ಈ ಮೊದಲು ಸರ್ಕಾರಿ…

Read More

ನವದೆಹಲಿ: ಶಾಲಾ ವಿದ್ಯಾರ್ಥಿನಿಯರ ಆರೋಗ್ಯ ಮತ್ತು ಘನತೆಯನ್ನು ಕಾಪಾಡುವ ನಿಟ್ಟಿನಲ್ಲಿ ಕೇಂದ್ರ ಪ್ರೌಢಶಿಕ್ಷಣ ಮಂಡಳಿ (CBSE) ಮಹತ್ವದ ಹೆಜ್ಜೆ ಇರಿಸಿದೆ. ದೇಶದಾದ್ಯಂತ ಇರುವ ತನ್ನೆಲ್ಲಾ ಸಂಯೋಜಿತ ಶಾಲೆಗಳಲ್ಲಿ ವಿದ್ಯಾರ್ಥಿನಿಯರಿಗೆ ಸ್ಯಾನಿಟರಿ ನ್ಯಾಪ್ಕಿನ್ ಲಭ್ಯತೆ ಮತ್ತು ಋತುಸ್ರಾವ ನೈರ್ಮಲ್ಯ ಕೇಂದ್ರಗಳನ್ನು (Menstrual Hygiene Hubs) ಸ್ಥಾಪಿಸುವುದನ್ನು ಕಡ್ಡಾಯಗೊಳಿಸಿ ಮಂಡಳಿಯು ಸೂಚನೆ ನೀಡಿದೆ. ಸುಪ್ರೀಂ ಕೋರ್ಟ್ ಆದೇಶದ ಅನ್ವಯ ಕ್ರಮ ಶಿಕ್ಷಣ ಸಚಿವಾಲಯದ ಮೂಲಕ ಬಂದ ಸುಪ್ರೀಂ ಕೋರ್ಟ್‌ನ ಜನವರಿ 20ರ ತೀರ್ಪನ್ನು ಉಲ್ಲೇಖಿಸಿರುವ ಸಿಬಿಎಸ್‌ಇ, ಈ ವ್ಯವಸ್ಥೆಗಳನ್ನು ಜಾರಿಗೊಳಿಸುವುದು ಕಡ್ಡಾಯ ಎಂದು ತಿಳಿಸಿದೆ. ಶಾಲೆಗಳು ‘ಋತುಸ್ರಾವ ನೈರ್ಮಲ್ಯ ನಿರ್ವಹಣೆ’ (MHM) ಮಾರ್ಗಸೂಚಿಗಳನ್ನು ಕಟ್ಟುನಿಟ್ಟಾಗಿ ಪಾಲಿಸಬೇಕು ಎಂದು ಪತ್ರದಲ್ಲಿ ಸ್ಪಷ್ಟಪಡಿಸಲಾಗಿದೆ. ಶಾಲೆಗಳಿಗೆ ನೀಡಿರುವ ಪ್ರಮುಖ ನಿರ್ದೇಶನಗಳು: ಸುರಕ್ಷಿತ ಶೌಚಾಲಯ: ವಿದ್ಯಾರ್ಥಿನಿಯರಿಗಾಗಿ ಪ್ರತ್ಯೇಕ, ಸುರಕ್ಷಿತ ಮತ್ತು ಸ್ವಚ್ಛವಾದ ಶೌಚಾಲಯಗಳ ವ್ಯವಸ್ಥೆ ಇರಬೇಕು. ಸ್ಯಾನಿಟರಿ ನ್ಯಾಪ್ಕಿನ್ ಲಭ್ಯತೆ: ಶಾಲೆಗಳಲ್ಲಿ ಸುಲಭವಾಗಿ ಕರಗಬಲ್ಲ (Biodegradable) ಸ್ಯಾನಿಟರಿ ನ್ಯಾಪ್ಕಿನ್‌ಗಳನ್ನು ಒದಗಿಸಬೇಕು. ನೈರ್ಮಲ್ಯ ಕೇಂದ್ರಗಳು: ಶಾಲಾ ಆವರಣದಲ್ಲಿ ಅಗತ್ಯ ಸೌಲಭ್ಯವುಳ್ಳ ಋತುಸ್ರಾವ…

Read More

ಚಿಕ್ಕಮಗಳೂರು: ಕೊಡಗಿನ ತಡಿಯಂಡಮೋಲ್ ಬೆಟ್ಟದಲ್ಲಿ ಚಾರಣಕ್ಕೆ ಹೋಗಿದ್ದ ಕೇರಳದ ಶರಣ್ಯ ಎಂಬುವವರು ನಾಪತ್ತೆಯಾಗಿ ಸಿಕ್ಕ ಬೆನ್ನಲ್ಲೇ, ಇದೀಗ ಚಿಕ್ಕಮಗಳೂರಿನಲ್ಲಿ ಮತ್ತೊಬ್ಬ ಕೇರಳ ಮೂಲದ ಯುವತಿ ನಾಪತ್ತೆಯಾಗಿರುವ ಘಟನೆ ವರದಿಯಾಗಿದೆ. ನಾಪತ್ತೆಯಾದ ಯುವತಿ ನಂದನ, ಕೇರಳದ ಪಾಲಕ್ಕಾಡ್ ಮೂಲದವರು. ಚಿಕ್ಕಮಗಳೂರಿನ ಚಂದ್ರದ್ರೋಣ ಪರ್ವತ ಶ್ರೇಣಿ. ಕೇರಳದಿಂದ ಬಂದಿದ್ದ 40 ಜನರ ಪ್ರವಾಸಿಗರ ತಂಡ ಹಾಗೂ ಕುಟುಂಬದೊಂದಿಗೆ ನಂದನ ಅವರು ಚಿಕ್ಕಮಗಳೂರಿಗೆ ಬಂದಿದ್ದರು. ಪರ್ವತದ ಸುಂದರ ತಾಣಗಳನ್ನು ವೀಕ್ಷಿಸುತ್ತಿದ್ದ ಸಂದರ್ಭದಲ್ಲಿ ಇವರು ನಿಗೂಢವಾಗಿ ನಾಪತ್ತೆಯಾಗಿದ್ದಾರೆ. ಶೋಧ ಕಾರ್ಯ: ಯುವತಿಯ ನಾಪತ್ತೆಯ ಸುದ್ದಿ ತಿಳಿಯುತ್ತಿದ್ದಂತೆಯೇ ಪೊಲೀಸ್ ಇಲಾಖೆ ಹಾಗೂ ಅರಣ್ಯ ಇಲಾಖೆಯ ಸಿಬ್ಬಂದಿ ಜಂಟಿಯಾಗಿ ತೀವ್ರ ಶೋಧ ಕಾರ್ಯ ಆರಂಭಿಸಿದ್ದಾರೆ. ಸ್ಥಳಕ್ಕೆ ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಜಯಕುಮಾರ್ ಅವರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

Read More

ಬೆಂಗಳೂರು: ಉಪಚುನಾವಣೆಯ ಅಬ್ಬರದ ನಡುವೆಯೇ ರಾಜ್ಯ ಸರ್ಕಾರಕ್ಕೆ ಕೇಂದ್ರ ಚುನಾವಣಾ ಆಯೋಗದಿಂದ ನೋಟಿಸ್ ಜಾರಿಯಾಗಿದೆ. ಮಾದರಿ ನೀತಿ ಸಂಹಿತೆ ಜಾರಿಯಲ್ಲಿರುವಾಗ ಗ್ಯಾರಂಟಿ ಯೋಜನೆಗಳಿಗೆ ಹಣ ಬಿಡುಗಡೆ ಮಾಡುವ ಮೂಲಕ ನಿಯಮ ಉಲ್ಲಂಘಿಸಲಾಗಿದೆ ಎಂದು ಆಯೋಗ ಆಕ್ಷೇಪ ವ್ಯಕ್ತಪಡಿಸಿದೆ. ದಾವಣಗೆರೆ ದಕ್ಷಿಣ ಮತ್ತು ಬಾಗಲಕೋಟೆ ಜಿಲ್ಲೆಗಳಲ್ಲಿ ಉಪಚುನಾವಣೆಯ ನೀತಿ ಸಂಹಿತೆ ಜಾರಿಯಲ್ಲಿದ್ದರೂ, ಸರ್ಕಾರದ ಪ್ರಮುಖ ಗ್ಯಾರಂಟಿ ಯೋಜನೆಗಳಾದ ಶಕ್ತಿ, ಗೃಹಜ್ಯೋತಿ, ಅನ್ನಭಾಗ್ಯ ಹಾಗೂ ಯುವನಿಧಿ ಫಲಾನುಭವಿಗಳಿಗೆ ಹಣ ಬಿಡುಗಡೆ ಮಾಡಲಾಗಿದೆ ಎಂಬ ಆರೋಪ ಕೇಳಿಬಂದಿದೆ. ಕೇಂದ್ರ ಚುನಾವಣಾ ಆಯೋಗದ ಕಾರ್ಯದರ್ಶಿ ಪವನ್ ದಿವಾನ್ ಅವರು ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿಗೆ ಈ ಕುರಿತು ಪತ್ರ ಬರೆದಿದ್ದು, ವಿವರಣೆ ಕೇಳಿದ್ದಾರೆ.ಚುನಾವಣಾ ನೀತಿ ಸಂಹಿತೆ ಜಾರಿಯಲ್ಲಿರುವ ಸಂದರ್ಭದಲ್ಲಿ ಆಯೋಗದ ಪೂರ್ವಾನುಮತಿ ಇಲ್ಲದೆ ಯಾವುದೇ ಕಲ್ಯಾಣ ಯೋಜನೆಗಳ ಹಣವನ್ನು ಬಿಡುಗಡೆ ಮಾಡುವಂತಿಲ್ಲ” ಎಂದು ಆಯೋಗವು ತನ್ನ ಪತ್ರದಲ್ಲಿ ಸ್ಪಷ್ಟಪಡಿಸಿದೆ. ಈ ಎರಡು ಜಿಲ್ಲೆಗಳಲ್ಲಿ ಐದು ಗ್ಯಾರಂಟಿ ಯೋಜನೆಗಳಿಗೆ ಹಣ ಬಿಡುಗಡೆ ಮಾಡಿದ ಅಧಿಕಾರಿಯ ಹೆಸರನ್ನು ತಕ್ಷಣ ಹಂಚಿಕೊಳ್ಳಬೇಕು.…

Read More

ಬೆಂಗಳೂರು: ವಿಶ್ವವಿದ್ಯಾನಿಲಯಗಳು ಗೌರವ ಡಾಕ್ಟರೇಟ್ ಅಥವಾ ಇತರ ಪದವಿಗಳನ್ನು ನೀಡುವ ವಿಚಾರದಲ್ಲಿ ಸ್ವತಂತ್ರವಾಗಿದ್ದು, ಅಂತಹ ವಿಷಯಗಳಲ್ಲಿ ನ್ಯಾಯಾಲಯವು ಪ್ರವೇಶಿಸುವುದಿಲ್ಲ ಎಂದು ಹೈಕೋರ್ಟ್ ಸ್ಪಷ್ಟಪಡಿಸಿದೆ. ಈ ಮೂಲಕ ಡಾ. ಎಚ್. ಸಿ. ಸತ್ಯನ್ ಅವರಿಗೆ ‘ನಾಡೋಜ’ ಪದವಿ ನೀಡಿರುವುದನ್ನು ಪ್ರಶ್ನಿಸಿ ಸಲ್ಲಿಸಲಾಗಿದ್ದ ಅರ್ಜಿಯನ್ನು ನ್ಯಾಯಾಲಯ ವಜಾಗೊಳಿಸಿದೆ. ಕರ್ನಾಟಕ ರಾಜ್ಯ ಮಾಹಿತಿ ಆಯೋಗದ ನಿವೃತ್ತ ಮುಖ್ಯ ಮಾಹಿತಿ ಆಯುಕ್ತ ಡಾ. ಎಚ್. ಸಿ. ಸತ್ಯನ್ ಅವರಿಗೆ ಹಂಪಿ ಕನ್ನಡ ವಿಶ್ವವಿದ್ಯಾನಿಲಯವು ‘ನಾಡೋಜ’ ಪದವಿ ನೀಡಿತ್ತು. ಈ ಪದವಿ ಪ್ರದಾನವನ್ನು ಪ್ರಶ್ನಿಸಿ ‘ಕಮಿಟಿ ಫಾರ್ ಪಬ್ಲಿಕ್ ಅಕೌಂಟಬಿಲಿಟಿ’ ಸಂಸ್ಥೆಯ ಅಧ್ಯಕ್ಷರಾದ ಎಸ್. ಶಿವಕುಮಾರ್ ಅವರು ಸಾರ್ವಜನಿಕ ಹಿತಾಸಕ್ತಿ ಅರ್ಜಿ (PIL) ಸಲ್ಲಿಸಿದ್ದರು. ಮುಖ್ಯ ನ್ಯಾಯಮೂರ್ತಿ ವಿಭು ಬಖ್ರು ಮತ್ತು ನ್ಯಾಯಮೂರ್ತಿ ಸಿ. ಎಂ. ಪೂಣಚ್ಚ ಅವರನ್ನೊಳಗೊಂಡ ಪೀಠವು ಈ ಅರ್ಜಿಯ ವಿಚಾರಣೆ ನಡೆಸಿತು. ಯಾರಿಗೆ ಯಾವ ಪದವಿ ಕೊಡಬೇಕು ಎಂಬುದು ವಿಶ್ವವಿದ್ಯಾನಿಲಯದ ವಿವೇಚನೆಗೆ ಬಿಟ್ಟಿದ್ದು. ಇಂತಹ ಶೈಕ್ಷಣಿಕ ಅಥವಾ ಗೌರವದ ವಿಷಯಗಳಲ್ಲಿ ಹಸ್ತಕ್ಷೇಪ ಮಾಡಲು ನ್ಯಾಯಾಲಯ…

Read More

ಬೆಂಗಳೂರು/ನವದೆಹಲಿ: ದೇಶದ 22 ರಾಜ್ಯಗಳಲ್ಲಿ ಮತದಾರರ ಪಟ್ಟಿ ಪರಿಷ್ಕರಣೆ ಪ್ರಕ್ರಿಯೆಗೆ ಕೇಂದ್ರ ಚುನಾವಣಾ ಆಯೋಗ ಚಾಲನೆ ನೀಡಿದೆ. ಕರ್ನಾಟಕವೂ ಸೇರಿದಂತೆ ಉಳಿದ ರಾಜ್ಯಗಳಲ್ಲಿ ಮೇ ತಿಂಗಳಿನಿಂದ ಈ ಪ್ರಕ್ರಿಯೆ ಆರಂಭವಾಗಲಿದೆ ಎಂದು ಆಯೋಗ ತಿಳಿಸಿದೆ. ಈ ತಿಂಗಳ 29ಕ್ಕೆ ಐದು ರಾಜ್ಯಗಳ ಚುನಾವಣೆ ಮುಗಿದ ನಂತರ, ಕರ್ನಾಟಕ ಸೇರಿದಂತೆ ಬಾಕಿ ಉಳಿದಿರುವ 22 ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಲ್ಲಿ ವಿಶೇಷ ತೀವ್ರ ಮತದಾರರ ಪಟ್ಟಿ ಪರಿಷ್ಕರಣೆ (SVR) ಆರಂಭವಾಗಲಿದೆ. ದಾಖಲೆಗಳ ಪರಿಶೀಲನೆ: ಪ್ರತಿಯೊಬ್ಬ ಮತದಾರರ ದಾಖಲೆಗಳನ್ನು ಸಿಬ್ಬಂದಿ ಮನೆಮನೆಗೆ ಭೇಟಿ ನೀಡಿ ಪರಿಶೀಲಿಸಲಿದ್ದಾರೆ. ಅರ್ಹ ಮತದಾರರ ಹೆಸರುಗಳನ್ನು ಸೇರಿಸುವುದು ಮತ್ತು ಮೃತಪಟ್ಟವರ ಅಥವಾ ವಿಳಾಸ ಬದಲಿಸಿದವರ ಹೆಸರುಗಳನ್ನು ಕೈಬಿಡುವ ಕಾರ್ಯ ನಡೆಯಲಿದೆ. ಸನ್ನದ್ಧತೆಗೆ ಸೂಚನೆ: ಮೇ ಮೊದಲ ವಾರದಿಂದಲೇ ಪ್ರಕ್ರಿಯೆ ಆರಂಭವಾಗಲಿರುವುದರಿಂದ ಅಗತ್ಯ ಸಿದ್ಧತೆಗಳನ್ನು ಡಿಕೊಳ್ಳುವಂತೆ ಚುನಾವಣಾ ಆಯೋಗವು ರಾಜ್ಯ ಸರ್ಕಾರಗಳಿಗೆ ಸೂಚನೆ ನೀಡಿದೆ. ಈಗಾಗಲೇ 11 ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಲ್ಲಿ ಮತದಾರರ ಪಟ್ಟಿ ಪರಿಷ್ಕರಣೆ ಕಾರ್ಯ ಯಶಸ್ವಿಯಾಗಿ ಪೂರ್ಣಗೊಂಡಿದೆ.…

Read More

ವಾಷಿಂಗ್ಟನ್: ಜಗತ್ತು ಮತ್ತೊಂದು ಯುದ್ಧದ ಭೀತಿಯಲ್ಲಿದ್ದಾಗ, ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಇರಾನ್ ವಿರುದ್ಧದ ಮಿಲಿಟರಿ ಕಾರ್ಯಾಚರಣೆಯಿಂದ ಹಿಂದೆ ಸರಿಯುವ ಮೂಲಕ ಅಚ್ಚರಿಯ ನಿರ್ಧಾರ ಕೈಗೊಂಡಿದ್ದಾರೆ. ನಿಗದಿತ ಗಡುವು ಮುಕ್ತಾಯಕ್ಕೆ ಕೇವಲ ಒಂದು ಗಂಟೆ ಬಾಕಿ ಇರುವಾಗ ಈ ಬೆಳವಣಿಗೆ ನಡೆದಿದ್ದು, ಮುಂದಿನ 15 ದಿನಗಳ ಕಾಲ ಯಾವುದೇ ದಾಳಿ-ಪ್ರತಿದಾಳಿ ನಡೆಸದಿರಲು ಉಭಯ ದೇಶಗಳು ತೀರ್ಮಾನಿಸಿವೆ. ಪಾಕಿಸ್ತಾನದ ಪ್ರಧಾನಿ ಶೆಹಬಾಜ್ ಷರೀಫ್ ಮತ್ತು ಸೇನಾ ಮುಖ್ಯಸ್ಥ ಫೀಲ್ಡ್ ಮಾರ್ಷಲ್ ಅಸಿಮ್ ಮುನೀರ್ ಅವರು ಇರಾನ್ ಮೇಲಿನ ಕ್ಷಿಪಣಿ ದಾಳಿಯನ್ನು ತಡೆಹಿಡಿಯುವಂತೆ ಟ್ರಂಪ್ ಅವರಿಗೆ ನೇರ ಮನವಿ ಮಾಡಿದ್ದರು. ಈ ಮನವಿಯನ್ನು ಪುರಸ್ಕರಿಸಿರುವ ಟ್ರಂಪ್, ಎರಡು ವಾರಗಳ ‘ದ್ವಿಪಕ್ಷೀಯ ಕದನ ವಿರಾಮ’ಕ್ಕೆ ಹಸಿರು ನಿಶಾನೆ ತೋರಿದ್ದಾರೆ. ತಮ್ಮ ಅಧಿಕೃತ ‘ಟ್ರೂತ್ ಸೋಶಿಯಲ್’ ವೇದಿಕೆಯಲ್ಲಿ ಮಾಹಿತಿ ಹಂಚಿಕೊಂಡಿರುವ ಅಧ್ಯಕ್ಷ ಟ್ರಂಪ್, ಈ ಕದನ ವಿರಾಮದ ಹಿಂದಿನ ಷರತ್ತುಗಳನ್ನು ಸ್ಪಷ್ಟಪಡಿಸಿದ್ದಾರೆ. ಹಾರ್ಮುಜ್ ಜಲಸಂಧಿ ಮುಕ್ತಕ್ಕೆ ಷರತ್ತು: ಇರಾನ್ ತನ್ನ ಅಧೀನದಲ್ಲಿರುವ ಆಯಕಟ್ಟಿನ ಪ್ರದೇಶವಾದ ‘ಹಾರ್ಮುಜ್ ಜಲಸಂಧಿ’ಯನ್ನು…

Read More