Subscribe to Updates
Get the latest creative news from FooBar about art, design and business.
Author: kannadanewsnow57
ಬೆಂಗಳೂರು : ಕಳೆದ ವಿಧಾನಸಭೆ ಚುನಾವಣೆಯ ಸಂದರ್ಭದಲ್ಲಿ ಬಿಜೆಪಿ ವಿರುದ್ಧ 40% ಕಮಿಷನ್ ಆರೋಪ ಮಾಡಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಇಂದು ಬೆಂಗಳೂರಿನ ಕೋರ್ಟ್ ಗೆ ರಾಹುಲ್ ಗಾಂಧಿ ಹಾಜರಾಗಲಿದ್ದಾರೆ. ಕಳೆದ ವಿಧಾನಸಭೆ ಚುನಾವಣೆಯ ಸಂದರ್ಭದಲ್ಲಿ ಸಾರ್ವಜನಿಕವಾಗಿ ಮಾತನಾಡುವ ಸಂದರ್ಭದಲ್ಲಿ ಬಿಜೆಪಿ ವಿರುದ್ಧ 40% ಕಮಿಷನ್ ಆರೋಪ ಮಾಡಿದ್ದರು. ಈ ಹಿನ್ನೆಲೆಯಲ್ಲಿ ಕಳೆದ ವಾರವಷ್ಟೇ ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ಕೋರ್ಟ್ ಹಾಜರಾಗಿದ್ದರು. ಬಳಿಕ ಜಾಮೀನು ಪಡೆದಿದ್ದು, ಇದೀಗ ರಾಹುಲ್ ಗಾಂಧಿ ಅವರು ಇಂದು ಬೆಂಗಳೂರಿನ ವಿಶೇಷ ಜನಪ್ರತಿನಿಧಿಗಳ ಕೋರ್ಟ್ ಗೆ ಹಾಜರಾಗಲಿದ್ದಾರೆ. ಭಾರತೀಯ ಜನತಾ ವಕ್ಷದ ರಾಜ್ಯ ಪ್ರಧಾನ ಕಾರ್ಯದರ್ಶಿಗಳಾದ ಎಸ್. ಕೇಶವ ಪ್ರಸಾದ್ ರವರು ದಿನಾಂಕ: 08.05.2023 ರಂದು 42ನೇ ವಿಶೇಷ ನ್ಯಾಯಾಲಯಕ್ಕೆ ಖಾಸಗಿ ದೂರನ್ನು ನೀಡಿದ್ದರು. ಕರ್ನಾಟಕ ರಾಜ್ಯ ಸಾರ್ವತ್ರಿಕ ಚುನಾವಣೆ-2023 ವೇಳೆ ಕಾಂಗ್ರೆಸ್ ಪಕ್ಷದ ಮುಖಂಡರುಗಳಾದ ಡಿ.ಕೆ.ಶಿವಕುಮಾರ್, ಸಿದ್ದರಾಮಯ್ಯ ಮತ್ತು ರಾಹುಲ್ ಗಾಂಧಿ ರವರುಗಳು ರಾಜ್ಯದಲ್ಲಿ ಬಿಜೆಪಿ ಸರ್ಕಾರವು 2019 ರಿಂದ 2023…
ಬೆಂಗಳೂರು : ಬಹುಕೋಟಿ ಬಿಟ್ ಕಾಯಿನ್ ಹಗರಣ ಸಂಬಂಧ ತನಿಖೆ ನಡಸುತ್ತಿರುವ ಎಸ್ ಐಟಿ ಅಧಿಕಾರಿಗಳು ಇದೀಗ ಶ್ರೀಕಿ ಗರ್ಲ್ ಫ್ರೆಂಡ್ ಪೂಜಾ ಭಟ್ ಗೆ ನೋಟಿಸ್ ನೀಡಿದೆ. ಬಹುಕೋಟಿ ಬಿಟ್ ಕಾಯಿನ್ ಹಗರಣ ಸಂಬಂಧ ವಿಚಾರಣೆಗೆ ಹಾಜರಾಗುವಂತೆ ಬಿಟ್ ಕಾಯಿನ್ ಹಗರಣದ ಶ್ರೀಕಿ ಗರ್ಲ್ ಫ್ರೆಂಡ್ ಪೂಜಾ ಭಟ್ ಗೆ ಎಸ್ ಐಟಿ ಅಧಿಕಾರಿಗಳು ನೋಡಿಸ್ ನೀಡಿದ್ದಾರೆ. ಸದ್ಯ ರಾಜಸ್ಥಾನದಲ್ಲಿರುವ ಪೂಜಾ ಭಟ್ ಗೆ ವಿಚಾರಣೆಗೆ ಹಾಜರಾಗುವಂತೆ ನೋಡಿಸ್ ನೀಡಲಾಗಿದೆ. ಬಿಟ್ ಕಾಯಿನ್ ವಹಿವಾಟು, ಕಾರು, ಮನೆ ಪಡೆದ ಹಿನ್ನೆಲೆಯಲ್ಲಿ ಪೂಜಾ ಭಟ್ ಗೆ ಎಸ್ ಐಟಿ ನೋಡಿಸ್ ನೀಡಿದೆ.
ಕೆಎನ್ ಎನ್ ಡಿಜಿಟಲ್ ಡೆಸ್ಕ್ : ಮೊಬೈಲ್ ಬಳಕೆದಾರರಿಗೆ ಸಿಹಿಸುದ್ದಿಯೊಂದು ಸಿಕ್ಕಿದೆ. ಇನ್ಮುಂದೆ ಮೊಬೈಲ್ ಫೋನ್ ಗಳನ್ನು ಗಂಟೆಗಳ ಕಾಲ ಚಾರ್ಜ್ ಇಡುವ ಅಗತ್ಯವಿಲ್ಲ. ಕೇವಲ 60 ಸೆಕೆಂಡುಗಳಲ್ಲಿ ನಿಮ್ಮ ಸ್ಮಾರ್ಟ್ ಫೋನ್ ಅನ್ನು ಚಾರ್ಜ್ ಮಾಡಬಹುದು. ಹೌದು, ಪ್ರೊಸೀಡಿಂಗ್ಸ್ ಆಫ್ ದಿ ನ್ಯಾಷನಲ್ ಅಕಾಡೆಮಿ ಆಫ್ ಸೈನ್ಸಸ್ ನಲ್ಲಿ ಪ್ರಕಟವಾದ ಇತ್ತೀಚಿನ ಅಧ್ಯಯನವು ಮುಂದಿನ ತಲೆಮಾರಿನ ಚಾರ್ಜರ್ ಗಳನ್ನು ಉತ್ಪಾದಿಸಲು ಪ್ರಮುಖವಾದ ಪ್ರಗತಿಯನ್ನು ಕಂಡುಹಿಡಿದಿದೆ! ಇದಲ್ಲದೆ, ತನ್ನ ತಂಡದೊಂದಿಗೆ ಅದನ್ನು ಸಾಧಿಸಿದ ಭಾರತೀಯ ಟೆಕ್ ಇದೆ. ಈ ಮಿಂಚಿನ ವೇಗದ ಚಾರ್ಜರ್ ಬಗ್ಗೆ ನೀವು ತಿಳಿದುಕೊಳ್ಳಬೇಕಾದದ್ದು ಇಲ್ಲಿದೆ! ಅಯಾನು ಚಲನೆಯ ಬಗ್ಗೆ ಅದ್ಭುತ ಸಂಶೋಧನೆ ಕೊಲೊರಾಡೊ ಬೌಲ್ಡರ್ ವಿಶ್ವವಿದ್ಯಾಲಯದ ಭಾರತೀಯ ಸಂಶೋಧಕ ಅಂಕುರ್ ಗುಪ್ತಾ ಮತ್ತು ಅವರ ತಂಡವು ಸೂಪರ್ ಕೆಪಾಸಿಟರ್ ಗಳ ಮೂಲಕ ಅಯಾನುಗಳು ಹೇಗೆ ಚಲಿಸುತ್ತವೆ ಎಂಬುದರ ಕುರಿತು ಅತ್ಯಾಧುನಿಕ ವೈಜ್ಞಾನಿಕ ಆವಿಷ್ಕಾರವನ್ನು ಕಂಡುಹಿಡಿದಿದೆ. ಈ ಕ್ರಾಂತಿಕಾರಿ ತಂತ್ರವನ್ನು ಸ್ಮಾರ್ಟ್ಫೋನ್ಗಳಿಗೆ ತಕ್ಷಣವೇ ಇಂಧನ ನೀಡಬಲ್ಲ ಚಾರ್ಜರ್ಗಳನ್ನು ನಿರ್ಮಿಸಲು…
ನವದೆಹಲಿ : ʻNCERTʼ ಪಠ್ಯಪುಸ್ತಕಗಳಲ್ಲಿ ಮಾಡಿದ ಬದಲಾವಣೆಗಳು ಮತ್ತು ಪರೀಕ್ಷಾ ಕೇಂದ್ರಗಳಲ್ಲಿ ಸಮಯ ಕಳೆದುಕೊಳ್ಳುವ ವಿದ್ಯಾರ್ಥಿಗಳಿಗೆ ಗ್ರೇಸ್ ಅಂಕಗಳು ವಿದ್ಯಾರ್ಥಿಗಳು ಹೆಚ್ಚಿನ ಅಂಕಗಳನ್ನು ಪಡೆಯಲು ಕೆಲವು ಕಾರಣಗಳಾಗಿವೆ ಎಂದು ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (ಎನ್ಟಿಎ) ಅಧಿಕಾರಿಗಳು ಗುರುವಾರ ತಿಳಿಸಿದ್ದಾರೆ. ರಾಷ್ಟ್ರೀಯ ಅರ್ಹತಾ ಮತ್ತು ಪ್ರವೇಶ ಪರೀಕ್ಷೆ (ನೀಟ್-ಯುಜಿ) 2024 ರ ಫಲಿತಾಂಶವನ್ನು ಎನ್ಟಿಎ ಘೋಷಿಸಿದ ಎರಡು ದಿನಗಳ ನಂತರ ಈ ಬೆಳವಣಿಗೆ ಸಂಭವಿಸಿದೆ, ಇದರಲ್ಲಿ 67 ವಿದ್ಯಾರ್ಥಿಗಳು ಸೇರಿದಂತೆ ವಿದ್ಯಾರ್ಥಿಗಳು ಅಖಿಲ ಭಾರತ ರ್ಯಾಂಕ್ ಒಂದನ್ನು ಹಂಚಿಕೊಂಡಿದ್ದಾರೆ. ವೈದ್ಯಕೀಯ ಕಾಲೇಜುಗಳಿಗೆ ಪದವಿಪೂರ್ವ ಪ್ರವೇಶಕ್ಕಾಗಿ ನಡೆಸುವ ನೀಟ್-ಯುಜಿ ಫಲಿತಾಂಶಗಳನ್ನು ಎನ್ಟಿಎ ಘೋಷಿಸಿದಾಗಿನಿಂದ, ಪೋಷಕರು ಮತ್ತು ವಿದ್ಯಾರ್ಥಿಗಳು ಇದಕ್ಕೆ ಆಕ್ಷೇಪ ವ್ಯಕ್ತಪಡಿಸಿದ್ದಾರೆ. ಕಳೆದ ವರ್ಷಕ್ಕಿಂತ ಹೆಚ್ಚಿನ ಅಂಕಗಳನ್ನು ಪಡೆದ ವಿದ್ಯಾರ್ಥಿಗಳು, 67 ವಿದ್ಯಾರ್ಥಿಗಳು ಮೊದಲ ರ್ಯಾಂಕ್ ಹಂಚಿಕೊಂಡಿದ್ದಾರೆ ಮತ್ತು ಈ 67 ವಿದ್ಯಾರ್ಥಿಗಳಲ್ಲಿ ಆರು ಮಂದಿ ಹರಿಯಾಣದ ಒಂದೇ ಪರೀಕ್ಷಾ ಕೇಂದ್ರದವರು. “ನೀಟ್ ಫಲಿತಾಂಶಗಳ ಸಾಮಾನ್ಯೀಕರಣ ಮಾನದಂಡಗಳ ಬಗ್ಗೆ ನಮಗೆ ವಿವರಣೆ ಬೇಕು. ಮತ್ತು…
ನವದೆಹಲಿ : ಅಪರೂಪದ ಲೈಂಗಿಕವಾಗಿ ಹರಡುವ ಶಿಲೀಂಧ್ರ ಸೋಂಕುಗಳು ನ್ಯೂಯಾರ್ಕ್ನಲ್ಲಿ ಮೊದಲ ಬಾರಿಗೆ ಪತ್ತೆಯಾಗಿವೆ. ಈ ವರದಿಯನ್ನು ಜಾಮಾ ಚರ್ಮರೋಗ ತಜ್ಞರು ಬಿಡುಗಡೆ ಮಾಡಿದ್ದಾರೆ. ಇಂಗ್ಲೆಂಡ್, ಗ್ರೀಸ್ ಮತ್ತು ಕ್ಯಾಲಿಫೋರ್ನಿಯಾ ಪ್ರವಾಸದ ವೇಳೆ 30 ವರ್ಷದ ವ್ಯಕ್ತಿಯೊಬ್ಬ ಅನೇಕರೊಂದಿಗೆ ಲೈಂಗಿಕ ಕ್ರಿಯೆ ನಡೆಸಿದ್ದಾನೆ ಎಂದು ವರದಿಯಾಗಿದೆ. ಅವನು ಮನೆಗೆ ಹಿಂದಿರುಗಿದಾಗ, ಅವನ ಕಾಲುಗಳು ಮತ್ತು ಸೊಂಟದ ಸುತ್ತಲೂ ಕೆಂಪು ದದ್ದುಗಳು ಕಾಣಿಸಿಕೊಳ್ಳಲು ಪ್ರಾರಂಭಿಸಿದವು. ತನಿಖೆಯ ನಂತರ, ಲೈಂಗಿಕ ಸಂಭೋಗದ ಸಮಯದಲ್ಲಿ ವ್ಯಕ್ತಿಗೆ ಶಿಲೀಂಧ್ರಗಳ ಸೋಂಕು ಇರುವುದು ಕಂಡುಬಂದಿದೆ. ಈ ರೀತಿಯ ಪ್ರಕರಣ ಅಮೆರಿಕದಲ್ಲಿ ಮೊದಲ ಬಾರಿಗೆ ಕಂಡುಬಂದಿದೆ. ಅದೇ ಸಮಯದಲ್ಲಿ, ಫ್ರೆಂಚ್ ವೈದ್ಯರು ಕಳೆದ ವರ್ಷ ಅಂತಹ 13 ಪ್ರಕರಣಗಳು ಅಲ್ಲಿ ವರದಿಯಾಗಿವೆ ಎಂದು ಹೇಳಿದ್ದರು. ವೈದ್ಯರು ಸೋಂಕನ್ನು ತೆಗೆದುಹಾಕಲು ವ್ಯಕ್ತಿಗೆ ಶಿಲೀಂಧ್ರ ವಿರೋಧಿ ಔಷಧಿಗಳನ್ನು ನೀಡಿದರು. ಔಷಧಿಗಳು ತಡವಾಗಿದ್ದವು ಮತ್ತು ವ್ಯಕ್ತಿಯು ಚೇತರಿಸಿಕೊಳ್ಳಲು ಸುಮಾರು 4 ತಿಂಗಳು ಬೇಕಾಯಿತು. ಅಪರೂಪದ ಸೋಂಕು ಶಾಶ್ವತವಾಗಿ ಕಲೆಗಳನ್ನು ನೀಡುತ್ತದೆ ಅಪರೂಪದ ಲೈಂಗಿಕವಾಗಿ ಹರಡುವ…
ನವದೆಹಲಿ : 2024 ರ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿಗೆ ಸಂಪೂರ್ಣ ಬಹುಮತ ಸಿಕ್ಕಿಲ್ಲ. ಈ ಕಾರಣದಿಂದಾಗಿ, ನರೇಂದ್ರ ಮೋದಿ ಈಗ ನಿತೀಶ್ ಕುಮಾರ್ ಮತ್ತು ಚಂದ್ರಬಾಬು ನಾಯ್ಡು ಅವರ ಪಕ್ಷಗಳ ಬೆಂಬಲದೊಂದಿಗೆ ಸರ್ಕಾರವನ್ನು ನಡೆಸಬೇಕಾಗುತ್ತದೆ. ಇಲ್ಲಿಯವರೆಗೆ, ಸರ್ಕಾರ ರಚನೆಗೆ ಯಾವುದೇ ಮಾರ್ಗಸೂಚಿಯನ್ನು ನಿಗದಿಪಡಿಸಲಾಗಿಲ್ಲ, ಆದರೆ ನಿತೀಶ್ ಕುಮಾರ್ ಅವರ ಪಕ್ಷವು ಈಗಾಗಲೇ ಹಲವು ಬೇಡಿಕೆಗಳನ್ನು ಇಟ್ಟಿದೆ. ಸೇನೆಯಲ್ಲಿ ಸೈನಿಕರ ನೇಮಕಾತಿಗಾಗಿ ಅಗ್ನಿವೀರ್ ಯೋಜನೆಯಲ್ಲಿ ಬದಲಾವಣೆ ತರಬೇಕೆಂದು ಜೆಡಿಯು ವಕ್ತಾರ ಕೆ.ಸಿ.ತ್ಯಾಗಿ ಗುರುವಾರ ಒತ್ತಾಯಿಸಿದ್ದಾರೆ. “ಅಗ್ನಿವೀರ್ ಯೋಜನೆಗೆ ಸಾಕಷ್ಟು ವಿರೋಧವಿತ್ತು ಮತ್ತು ಅದರ ಪರಿಣಾಮವು ಚುನಾವಣೆಯಲ್ಲಿಯೂ ಕಂಡುಬಂದಿದೆ. ಆದ್ದರಿಂದ, ಅಗ್ನಿವೀರ್ ಯೋಜನೆಯನ್ನು ಮರುಪರಿಶೀಲಿಸುವ ಅವಶ್ಯಕತೆಯಿದೆ ಎಂದು ತಿಳಿಸಿದ್ದಾರೆ. ಈ ಕುರಿತು ಮಾತನಾಡಿರುವ ಕೆ.ಸಿ.ತ್ಯಾಗಿ ಅವರು, ಈ ಯೋಜನೆ ಬಂದಾಗ, ಜನರು ಸಾಕಷ್ಟು ವಿರೋಧಿಸಿದ್ದರು ಎಂದು ಹೇಳಿದರು. ಸೇನೆಯಲ್ಲಿ ನೇಮಕಗೊಂಡವರ ಕುಟುಂಬ ಸದಸ್ಯರು ಸಹ ಇದರಿಂದ ಕೋಪಗೊಂಡಿದ್ದರು. ಆದ್ದರಿಂದ, ಇದು ಬದಲಾಗಬೇಕು. ಏಕರೂಪ ನಾಗರಿಕ ಸಂಹಿತೆಯ ವಿಷಯದ ಬಗ್ಗೆ ಕೇಳಿದಾಗ, ನಿತೀಶ್ ಕುಮಾರ್ ಅವರ…
ನವದೆಹಲಿ : ಲೋಕಸಭೆ ಚುನಾವಣೆಯಲ್ಲಿ 293 ಸ್ಥಾನ ಗೆದ್ದಿರುವ ಎನ್ ಡಿಎ ಮೈತ್ರಿಕೂಟದ ನಾಯಕರಾಗಿ ಪ್ರಧಾನಿ ನರೇಂದ್ರ ಮೋದಿ ಅವರನ್ನು ಸರ್ವಾನುಮತದಿಂದ ಆಯ್ಕೆ ಮಾಡಲಾಗಿದ್ದು, ಜೂನ್.7ರ ರ ನಾಳೆ ಎನ್ ಡಿ ಎ ನಾಯಕರಿಂದ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರನ್ನು ಭೇಟಿಯಾಗಲಿದ್ದಾರೆ. ಈ ಮೂಲಕ ಕೇಂದ್ರದಲ್ಲಿ ಮೋದಿ ನೇತೃತ್ವದಲ್ಲಿ 3ನೇ ಬಾರಿಗೆ ಸರ್ಕಾರ ರಚಿಸೋದಕ್ಕೆ ಹಕ್ಕು ಮಂಡಿಸಲಿದ್ದಾರೆ. ಮೋದಿ ನೇತೃತ್ವದಲ್ಲಿ ಬುಧವಾರ ಎನ್ ಡಿಎ ಸಂಸದರ ಸಭೆ ನಡೆಯಿತು. ಈ ಸಭೆಯಲ್ಲಿ ಎನ್ ಡಿಎಗೆ ನಿತೀಶ್ ಕುಮಾರ್, ಚಂದ್ರಬಾಬು ನಾಯ್ಡು ಅವರು ಬೆಂಬಲ ಘೋಷಿಸಿ, ಪತ್ರವನ್ನು ನೀಡಿದ್ದಾರೆ. ಅಲ್ಲದೇ ಜೂನ್.7ರಂದು ರಾಷ್ಟ್ರಪತಿ ಭೇಟಿಯಾಗಿ, ಸರ್ಕಾರ ರಚಿಸಲು ಹಕ್ಕು ಮಂಡಿಸೋದಕ್ಕೆ ನಿರ್ಧಾರ ಕೈಗೊಳ್ಳಲಾಗಿದೆ. https://twitter.com/ANI/status/1798340118438346858 ಜೂನ್.7ರಂದು ಸಂಜೆ 5 ಗಂಟೆಗೆ ಎನ್ ಡಿಎ ಮೈತ್ರಿ ಕೂಟದ ಸಂಸದರೊಂದಿಗೆ ಪ್ರಧಾನಿ ನರೇಂದ್ರ ಮೋದಿಯವರು ರಾಷ್ಟ್ರಪತಿ ದ್ರೌಪದಿ ಮುರ್ಮು ಅವರನ್ನು ಭೇಟಿಯಾಗಲಿದ್ದಾರೆ. ರಾಷ್ಟ್ರಪತಿಯನ್ನು ಭೇಟಿಯಾಗಿ ಸರ್ಕಾರ ರಚಿಸೋದಕ್ಕೆ ಹಕ್ಕು ಮಂಡನೆ ಮಾಡಲಿದ್ದಾರೆ. ಜೂನ್.8ರಂದು ನರೇಂದ್ರ ಮೋದಿಯವರು…
ಬೆಂಗಳೂರು : ಉತ್ತರಾಖಂಡದ ಸಹಸ್ರತಲ್ಗೆ ಚಾರಣಕ್ಕೆ ತೆರಳಿದ ವೇಳೆ ಹವಾಮಾನ ವೈಪರಿತ್ಯದಿಂದಾಗಿ ಸಂಕಷ್ಟಕ್ಕೆ ಸಿಲುಕಿರುವವರನ್ನು ರಕ್ಷಣೆ ಮಾಡಲಾಗಿದೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ. ಈ ಕುರಿತು ಸಿಎಂ ಸಿದ್ದರಾಮಯ್ಯ ಮಾಹಿತಿ ನೀಡಿದ್ದು, ಉತ್ತರಾಖಂಡದ ಸಹಸ್ರತಲ್ಗೆ ಚಾರಣಕ್ಕೆ ತೆರಳಿದ ವೇಳೆ ಹವಾಮಾನ ವೈಪರಿತ್ಯದಿಂದಾಗಿ ಸಂಕಷ್ಟಕ್ಕೆ ಸಿಲುಕಿರುವವರ ರಕ್ಷಣಾಕಾರ್ಯ ಮತ್ತು ಅವಘಡದಲ್ಲಿ ಮೃತಪಟ್ಟವರ ಶವಗಳನ್ನು ಮರಳಿ ತರಲು ನಮ್ಮ ಸರ್ಕಾರವು ಪ್ರಾಮಾಣಿಕ ಪ್ರಯತ್ನ ನಡೆಸಿದೆ ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದ್ದಾರೆ. ರಕ್ಷಣಾ ಕಾರ್ಯಕ್ಕೆ ಪ್ರತಿಕೂಲ ಹವಾಮಾನವು ಸವಾಲೊಡ್ಡಿದರೂ ಅದನ್ನು ಮೆಟ್ಟಿನಿಂತು ಪ್ರಾಣಾಪಾಯದಲ್ಲಿದ್ದ ಚಾರಣಿಗರನ್ನು ರಕ್ಷಿಸುವಲ್ಲಿ ಯಶಸ್ವಿಯಾಗಿದ್ದೇವೆ ಎಂದು ಹೇಳಿದ್ದಾರೆ. ಉತ್ತರಾಖಂಡದ ಸಹಸ್ರತಲ್ಗೆ ಚಾರಣಕ್ಕೆ ತೆರಳಿದ್ದ ಕರ್ನಾಟಕದ ೯ ಮಂದಿ ಹವಾಮಾನ ವೈಪರಿತ್ಯದಿಂದಾಗಿ ಸಾವನ್ನಪ್ಪಿದ್ದು, ಇಂದು ಸಂಜೆ ವೇಳೆಗೆ ಮೃತದೇಹಗಳನ್ನು ಬೆಂಗಳೂರಿಗೆ ಏರ್ ಲಿಫ್ಟ್ ಮಾಡಲು ಸಿದ್ದತೆ ನಡೆಸಲಾಗಿದೆ ಎಂದು ಸಚಿವ ಕೃಷ್ಣಬೈರೇಗೌಡ ಹೇಳಿದ್ದಾರೆ.
ಬೆಂಗಳೂರು : ವಾಲ್ಮೀಕಿ ಅಭಿವೃದ್ದಿ ನಿಗಮದಲ್ಲಿ ಅವ್ಯವಹಾರ ಆರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ ಸಚಿವ ಬಿ.ನಾಗೇಂದ್ರ ರಾಜೀನಾಮೆಗೆ ಒತ್ತಾಯಿಸಿ ರಾಜ್ಯ ಬಿಜೆಪಿ ಘಟಕ ರಾಜ್ಯಪಾಲರನ್ನು ಭೇಟಿಯಾಗಿ ದೂರು ನೀಡಿದೆ. ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿ ಕೋಟ್ಯಾಂತರ ಅವ್ಯವಹಾರ ಆರೋಪದ ಪ್ರಕರಣಕ್ಕೆ ಸಂಬಂಧಿಸಿದಂತೆ ಸಚಿವ ಸ್ಥಾನಕ್ಕೆ ನಾಗೇಂದ್ರ ಅವರು ರಾಜೀನಾಮೆ ನೀಡಬೇಕು ಎಂದು ವಿಪಕ್ಷ ನಾಯಕ ಆರ್. ಅಶೋಕ್ ನೇತೃತ್ವದಲ್ಲಿ ಪಾದಯಾತ್ರೆ ನಡೆಸಿದ ರಾಜಭವನಕ್ಕೆ ತೆರಳಿ ರಾಜ್ಯಪಾಲರಿಗೆ ಭೇಟಿಯಾಗಿ ದೂರು ನೀಡಿದೆ. ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದ ಹಣ ಅಕ್ರಮ ವರ್ಗಾವಣೆ ಪ್ರಕರಣದಲ್ಲಿ ಸಿಬಿಐ ತನಿಖೆ ಆರಂಭಿಸಿದ ಬೆನ್ನಲ್ಲೇ ರಾಜೀನಾಮೆ ನೀಡುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸಚಿವ ನಾಗೇಂದ್ರ ಅವರಿಗೆ ಸೂಚನೆ ನೀಡಿದ್ದಾರೆ ಎನ್ನಲಾಗಿತ್ತು. ಆದರೆ ಸಿಎಂ ಸಿದ್ದರಾಮಯ್ಯ ನಾನು ಸಚಿವ ನಾಗೇಂದ್ರರ ಬಳಿ ರಾಜೀನಾಮೆ ಕೇಳಿಲ್ಲ, ಕರೆದು ಮಾತನಾಡಿದ್ದೇನೆ ಎಂದು ಸ್ಪಷ್ಟನೆ ನೀಡಿದ್ದಾರೆ.
ಬೆಂಗಳೂರು : ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿ ಅವ್ಯವಹಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಸಚಿವ ಬಿ.ನಾಗೇಂದ್ರಗೆ ಮತ್ತೊಂದು ಸಂಕಷ್ಟ ಎದುರಾಗಿದ್ದು, ಅಕ್ರಮ ಹಣ ವರ್ಗಾವಣೆ ಕುರಿತು ಬಿಬಿಎಂಪಿ ಮಾಜಿ ಆಡಳಿತ ಪಕ್ಷದ ನಾಯಕ ಹಾಗೂ ಬಿಜೆಪಿ ಮುಖಂಡ ರಮೇಶ್ ಎನ್ ಆರ್ ಅವರು ಜಾರಿ ನಿರ್ದೇಶನಾಲಯಕ್ಕೆ ದೂರು ನೀಡಿದ್ದಾರೆ. ಕರ್ನಾಟಕ ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮ ನಿಯಮಿತದಲ್ಲಿ 187 ಕೋಟಿ ರೂ.ಗೂ ಅಧಿಕ ಅವ್ಯವಹಾರದ ನಡೆದಿದ್ದು, ಜಾರಿನಿರ್ದೇಶನಾಲಯಕ್ಕೆ ದೂರು ದಾಖಲಾಗಿದೆ. ಕರ್ನಾಟಕ ರಾಜ್ಯ ಸರ್ಕಾರಿ ಸ್ವಾಮ್ಯದ “ಕರ್ನಾಟಕ ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮ ನಿಯಮಿತ”ದಲ್ಲಿ 187 ಕೋಟಿ ರೂ.ಗಿಂತ ಹೆಚ್ಚಿನ ಅಕ್ರಮ / ದುರುಪಯೋಗವಾಗಿದೆ. 26/05/2024 ರಂದು ಸದರಿ ನಿಗಮದಲ್ಲಿ ಅಕೌಂಟ್ಸ್ ಸೂಪರಿಂಟೆಂಡೆಂಟ್ ಆಗಿ ಕೆಲಸ ಮಾಡುತ್ತಿದ್ದ ಶ್ರೀ ಚಂದ್ರಶೇಖರನ್ ಪಿ ಅವರು ಶಿವಮೊಗ್ಗದ ತಮ್ಮ ನಿವಾಸದಲ್ಲಿ ಡೆತ್ ನೋಟ್ ಬರೆದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಕರ್ನಾಟಕ ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮ ನಿಯಮಿತದ ವ್ಯವಸ್ಥಾಪಕ ನಿರ್ದೇಶಕ…