Author: kannadanewsnow57

ಚಾಮರಾಜನಗರ : ಬಂಡೀಪುರ, ಮೈಸೂರು ಜಿಲ್ಲೆಯಲ್ಲಿ ಮಾನವ-ವನ್ಯಜೀವಿ ಸಂಘರ್ಷ ಹೆಚ್ಚುತ್ತಿದ್ದು, ಇದು ತಹಬಂದಿಗೆ ಬಾರದಿದ್ದರೆ ಸಫಾರಿಯನ್ನು ಸಂಪೂರ್ಣ ಬಂದ್ ಮಾಡುವುದಾಗಿ ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಬಿ ಖಂಡ್ರೆ ಎಚ್ಚರಿಕೆ ನೀಡಿದ್ದಾರೆ. ಚಾಮರಾಜನಗರದ ಜಿಲ್ಲಾ ಪಂಚಾಯ್ತಿ ಸಭಾಂಗಣದಲ್ಲಿ ನಡೆದ ಅರಣ್ಯ, ಕಂದಾಯ ಮತ್ತು ಪೊಲೀಸ್ ಇಲಾಖೆಯ ಅಧಿಕಾರಿಗಳ ಸಭೆಯಲ್ಲಿ ಮಾತನಾಡಿದ ಅವರು, ವನ್ಯಜೀವಿ- ಮಾನವ ಸಂಘರ್ಷ ಇರುವ ಸ್ಥಳದಲ್ಲಿ ಹೆಚ್ಚಿನ ಸಿಬ್ಬಂದಿ ನಿಯೋಜಿಸಲು ಸಿಬ್ಬಂದಿ ಕೊರತೆ ಎನ್ನುತ್ತೀರಿ. ಹಾಗಾದರೆ ಸಫಾರಿಗೆ ನಿಯೋಜಿಸಿರುವ ಸಿಬ್ಬಂದಿಯನ್ನೇ ಅಲ್ಲಿಗೆ ನಿಯೋಜಿಸಬೇಕಾಗುತ್ತದೆ ಎಂದು ಹೇಳಿದರು. ಮಾನವ-ವನ್ಯಜೀವಿ ಸಂಘರ್ಷ ತಪ್ಪಿಸಲು ಅರಣ್ಯ ಇಲಾಖೆ ಕಂದಾಯ ಮತ್ತು ಪೊಲೀಸ್ ಇಲಾಖೆಯೊಂದಿಗೆ ಸಮನ್ವಯದಿಂದ ಕಾರ್ಯ ನಿರ್ವಹಿಸಬೇಕು. ಸಮನ್ವಯದ ಕೊರತೆ, ಪರಸ್ಪರ ದೋಷಾರೋಪವನ್ನು ಸರ್ಕಾರ ಕ್ಷಮಿಸುವುದಿಲ್ಲ ಸಬೂಬುಗಳಿಗೆ ಅವಕಾಶವಿಲ್ಲ. ಎಲ್ಲ ಇಲಾಖೆಗಳೂ ಜೊತೆಗೂಡಿ ಮಾನವ- ವನ್ಯಜೀವಿ ಸಂಘರ್ಷ ನಿಯಂತ್ರಿಸಬೇಕು ಎಂದು ಸೂಚಿಸಿದರು. ಆನೆ, ಹುಲಿಗಳ ಸಂಖ್ಯೆಯಲ್ಲಿ ಹೆಚ್ಚಳವಾಗುತ್ತಿದೆ. ಇದು ನಿಮಗೂ ತಿಳಿದಿದೆ. ಹೆಚ್ಚುತ್ತಿರುವ ಪ್ರಾಣಿಗಳಿಗೆ ಅನುಗುಣವಾಗಿ ಅರಣ್ಯ ಪ್ರದೇಶ ಹೆಚ್ಚಳ…

Read More

ಉಡುಪಿ: ಉಡುಪಿಯಲ್ಲಿ ಘೋರ ಘಟನೆಯೊಂದು ನಡೆದಿದ್ದು, ಕಾರ್ಯಕ್ರಮವೊಂದರಲ್ಲಿ ಹಾಡು ಹಾಡುತ್ತಿದ್ದಾಗಲೇ ಕುಸಿದು ಬಿದ್ದು ಎಎಸ್ ಐಯೊಬ್ಬರು ಮೃತಪಟ್ಟಿದ್ದಾರೆ.  ಪೊಲೀಸ್ ಸಿಬ್ಬಂದಿಯೊಬ್ಬರಿಗೆ ಬೀಳ್ಕೊಡುಗೆ ಕಾರ್ಯಕ್ರಮದಲ್ಲಿ  ಹಾಡುತ್ತಿದ್ದ ವೇಳೆ ಕುಸಿದು ಬಿದ್ದು ಉಡುಪಿ ಜಿಲ್ಲೆ ಮಲ್ಪೆ ಪೊಲೀಸ್ ಠಾಣೆಯ ಎಎಸ್ಐ ವಿಶ್ವನಾಥ್(58) ಸಾವನ್ನಪ್ಪಿದ್ದಾರೆ. ಎಎಸ್ಐ ವಿಶ್ವನಾಥ್ ವೇದಿಕೆಯಲ್ಲಿ ಹಾಡುತ್ತಿದ್ದಾಗ ಕುಸಿದುಬಿದ್ದಿದ್ದಾರೆ. ಕೂಡಲೇ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಆದರೆ ಹೃದಯಾಘಾತದಿಂದ ವಿಶ್ವನಾಥ್ ಮೃತಪಟ್ಟಿದ್ದಾರೆಂದು ವೈದ್ಯರು ಘೋಷಿಸಿದ್ದಾರೆ. ಉಡುಪಿ ಜಿಲ್ಲೆಯ ಪೊಲೀಸ್ ಘಟಕದಲ್ಲಿ ಕಳೆದ 32 ವರ್ಷಗಳಿಂದ ಕರ್ತವ್ಯ ನಿರ್ವಹಿಸುತ್ತಿದ್ದು, ಮಲ್ಪೆ ಪೊಲೀಸ್ ಠಾಣೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ವಿಶ್ವನಾಥ್ ಅವರು ಹೃದಯಾಘಾತದಿಂದ ಮೃತಪಟ್ಟಿದ್ದಾರೆ.

Read More

 ಕುಬೇರನಿಂದ ಸಂಪತ್ತು ಪಡೆಯಲು ಪೂಜೆ ಮಾಡಿ  ಪ್ರಧಾನ ಗುರುಗಳು ಹಾಗೂ ದೈವಿಕ ಅರ್ಚಕ ಮನೆತನದವರು ವಿದ್ವಾನ್ ವಿದ್ಯಾಧರ್ ತಂತ್ರಿ ಜ್ಯೋತಿಷ್ಯರ ಮೊಬೈಲ್ ಸಂಖ್ಯೆ 9686268564 ಇವರು ಚೌಡಿ ಉಪಾಸನಾ ಮತ್ತು ಕೇರಳದ ವಿಶಿಷ್ಟ ಅನುಷ್ಠಾನ ಪೂಜೆಗಳಿಂದ ತಮ್ಮಲ್ಲಿ ಉಲ್ಬಣಿಸುವ ಸಕಲ ಸಮಸ್ಯೆಗಳಿಗೆ ಪರಿಹಾರ ಮತ್ತು ಮಾರ್ಗದರ್ಶನ ತಿಳಿಸಿಕೊಡುತ್ತಾರೆ.  ಸಂಪತ್ತು ಮತ್ತು ಸಮೃದ್ಧಿಯ ಅಧಿಪತಿ ಮಹಾಲಕ್ಷ್ಮಿ ದೇವಿಯಾದರೂ, ಆ ಸಂಪತ್ತಿನ ಲೆಕ್ಕಪತ್ರವನ್ನು ಸರಿಯಾಗಿ ನಿರ್ವಹಿಸುವ ಮತ್ತು ಯಾರಿಗೆ ಸಂಪತ್ತನ್ನು ನೀಡಬೇಕು ಮತ್ತು ಯಾರಿಗೆ ಸಂಪತ್ತನ್ನು ನೀಡಬಾರದು ಎಂದು ನಿರ್ಧರಿಸುವವನು ಭಗವಾನ್ ಕುಬೇರ. ಭಗವಾನ್ ಕುಬೇರನಿಗೆ ಈ ಸ್ಥಾನಮಾನ ಸಿಗಲು ಶಿವನೇ ಮುಖ್ಯ ಕಾರಣ. ಭಗವಾನ್ ಶಿವನ ಕಟ್ಟಾ ಭಕ್ತ ಕುಬೇರ, ಮತ್ತು ಕುಬೇರನ ತಪಸ್ಸು ಮತ್ತು ಪೂಜೆಯಿಂದಾಗಿ ಕುಬೇರನಿಗೆ ಈ ಸ್ಥಾನಮಾನ ಸಿಕ್ಕಿತು ಎಂದು ಪುರಾಣಗಳು ಹೇಳುತ್ತವೆ. ಭಗವಾನ್ ಕುಬೇರನಿಗೆ ಅರ್ಪಿತವಾದ ಈ ವಿಶೇಷ ನವೆಂಬರ್ ತಿಂಗಳಲ್ಲಿ, ಕುಬೇರನ ಅನುಗ್ರಹವನ್ನು ಪಡೆಯಲು ಮಾಡಬೇಕಾದ ಪೂಜಾ ವಿಧಾನದ ಬಗ್ಗೆ ನಾವು ಈ ಆಧ್ಯಾತ್ಮಿಕ ಪೋಸ್ಟ್‌ನಲ್ಲಿ…

Read More

ಚಾಮರಾಜನಗರ : ವೀರಪ್ಪನ್ ಇದ್ದಾಗಲೇ ಕಾಡು ಚನ್ನಾಗಿತ್ತು. ಅಧಿಕಾರಿಗಳಿಗಿಂತ ವೀರಪ್ಪನ್ ವಾಸಿ ಎಂದು ರೈತರು ಅರಣ್ಯ ಸಚಿವ ಈಶ್ವರ್ ಖಂಡ್ರೆ ಮುಂದೆಯೇ ಆಕ್ರೋಶ ವ್ಯಕ್ತಪಡಿಸಿರುವ ಘಟನೆ ನಡೆದಿದೆ.  ಅರಣ್ಯ ಸಚಿವ ಈಶ್ವರ್ ಬಿ.ಖಂಡ್ರೆ ಅವರ ಅಧ್ಯಕ್ಷತೆಯಲ್ಲಿ ಭಾನುವಾರ ನಡೆದ ಪ್ರಾಣಿ-ಮಾನವ ಸಂಘರ್ಷ ಸಂಬಂಧಿತ ಸಮಸ್ಯೆಗಳು, ಪರಿಹಾರೋಪಾಯಗಳ ಬಗೆಗಿನ ಸಭೆಯಲ್ಲಿ  ಅಧಿಕಾರಿಗಳ ವಿರುದ್ಧ ರೈತರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ.ಹುಲಿ ಸಂರಕ್ಷಿತ ಪ್ರದೇಶದಲ್ಲಿ ಸಾಕಷ್ಟು ಅಕ್ರಮ ರೆಸಾರ್ಟ್ ಗಳಿವೆ. ವೀರಪ್ಪನ್ ಇದ್ದಾಗಲೇ ಕಾಡು ಚೆನ್ನಾಗಿತ್ತು. ಅಕ್ರಮ ಗಣಿಗಾರಿಕೆ, ರೆಸಾರ್ಟ್ ಗಳು ಇರಲಿಲ್ಲ. ಅಧಿಕಾರಿಗಳಿಗಿಂತ ವೀರಪ್ಪನ್ ವಾಸಿ ಎಂದು ಎಂದು ರೈತರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ರೈತರು ಹಾಗೂ ಸಾರ್ವಜನಿಕರ ಸಂವಾದ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಅರಣ್ಯ ಪ್ರದೇಶದಲ್ಲಿ ಅಕ್ರಮ ಗಣಿಗಾರಿಕೆ, ಹೋಂಸ್ಟೇ, ರೆಸಾರ್ಟ್ ನಡೆಯುತ್ತಿದ್ದರೆ ಸ್ಪಷ್ಟ ದೂರು ಬಂದರೆ ನಿರ್ದಾಕ್ಷಿಣ್ಯವಾಗಿ ಕ್ರಮ ಜರುಗಿಸುವ ಭರವಸೆ ನೀಡಿದರು. ಮಾನವ ವನ್ಯಜೀವಿ ಸಂಘರ್ಷ ಇಂದು ನಿನ್ನೆಯದಲ್ಲ ನೂರಾರು, ಸಾವಿರಾರು ವರ್ಷದಿಂದ ಇದೆ. ಈಗ ವನ್ಯಜೀವಿಗಳ ಸಂಖ್ಯೆಯಲ್ಲೂ ಹೆಚ್ಚಳವಾಗಿದೆ. ಇದರಿಂದ…

Read More

ಮುಂಬೈ : ಭಾರತೀಯ ಮಹಿಳಾ ಕ್ರಿಕೆಟ್ ತಂಡ ಪವಾಡವನ್ನೇ ಸೃಷ್ಟಿಸಿದೆ. ದಕ್ಷಿಣ ಆಫ್ರಿಕಾ ವಿರುದ್ಧ ಗೆದ್ದ ನಂತರ ಚೊಚ್ಚಲ ಬಾರಿಗೆ ವಿಶ್ವಕಪ್ ಗೆದ್ದರು. ಇದೇ ವೇಳೆ ಅಮಾನ್ ಜೋತ್ ಕೌರ್ ಹಿಡಿದ ಕ್ಯಾಚ್ ಟೀಂ ಇಂಡಿಯಾ ಗೆಲುವಿನಲ್ಲಿ ಪ್ರಮುಖ ಪಾತ್ರ ವಹಿಸಿತು. ನವಿ ಮುಂಬೈನ ಡಿವೈ ಪಾಟೀಲ್ ಸ್ಟೇಡಿಯಂನಲ್ಲಿ ಭಾರತ ಮಹಿಳಾ ತಂಡ ಇತಿಹಾಸ ನಿರ್ಮಿಸಿದೆ. ಮಹಿಳಾ ವಿಶ್ವಕಪ್ ಫೈನಲ್ನಲ್ಲಿ ದಕ್ಷಿಣ ಆಫ್ರಿಕಾವನ್ನು 52 ರನ್ಗಳಿಂದ ಸೋಲಿಸಿ ಚೊಚ್ಚಲ ಬಾರಿಗೆ ವಿಶ್ವಕಪ್ ಟ್ರೋಫಿ ಎತ್ತಿ ಹಿಡಿದರು. ಸಾವಿರಾರು ಅಭಿಮಾನಿಗಳ ಜಯಘೋಷದ ನಡುವೆ ತಂಡ ಜಯದ ಸಂಭ್ರಮದಲ್ಲಿ ಮುಳುಗಿತು. ಭಾರತ ನೀಡಿದ್ದ 299 ರನ್ಗಳ ಗುರಿ ಬೆನ್ನತ್ತಲು ಅಖಾಡಕ್ಕಿಳಿದ ದಕ್ಷಿಣ ಆಫ್ರಿಕಾ ಆರಂಭದಲ್ಲೇ ಬಲಿಷ್ಠವಾಗಿತ್ತು. ನಾಯಕಿ ಲಾರಾ ವೊಲ್ವಾರ್ಟ್ ತಮ್ಮ ಅದ್ಭುತ ಬ್ಯಾಟಿಂಗ್ ನಿಂದ ಶತಕ ಗಳಿಸಿದರು. ಈ ಹಂತದಲ್ಲಿ ತಂಡದ ಗೆಲುವಿಗೆ ಇನ್ನೂ 54 ಎಸೆತಗಳಲ್ಲಿ 79 ರನ್ಗಳ ಅಗತ್ಯವಿತ್ತು. ಈ ಹಂತದಲ್ಲಿ ದೀಪ್ತಿ ಶರ್ಮಾ ಎಸೆದ 42ನೇ ಓವರ್ ನಲ್ಲಿ…

Read More

ನವದೆಹಲಿ: ಇತ್ತೀಚಿನ ದಿನಗಳಲ್ಲಿ ಆನ್ ಲೈನ್ ವಂಚನೆ ಪ್ರಕರಣಗಳು ನಿರಂತರವಾಗಿ ಹೆಚ್ಚುತ್ತಿವೆ. ಆದ್ದರಿಂದ, ನಿಮ್ಮ ದಾಖಲೆಗಳನ್ನು ದುರುಪಯೋಗಪಡಿಸಿಕೊಳ್ಳದಂತೆ ನೀವು ಜಾಗರೂಕರಾಗಿರಬೇಕು. ಐಡಿ ಹೊಂದಿರುವವರಿಗೆ ತಿಳಿದಿಲ್ಲದೆ ಬೇರೊಬ್ಬರ ಐಡಿಯನ್ನು ಬಳಸಿಕೊಂಡು ಬೇರೊಬ್ಬರು ಸಿಮ್ ಕಾರ್ಡ್ ಅನ್ನು ಬಳಸುತ್ತಿದ್ದಾರೆ ಎಂದು ಆಗಾಗ್ಗೆ ಕಂಡುಬರುತ್ತದೆ. ಅಂತಹ ಸಂದರ್ಭಗಳಲ್ಲಿ, ಇತರ ವ್ಯಕ್ತಿಯು ಸಿಮ್ ಕಾರ್ಡ್ ಅನ್ನು ದುರುಪಯೋಗಪಡಿಸಿಕೊಂಡಾಗ ಮುಗ್ಧ ವ್ಯಕ್ತಿಯು ತೊಂದರೆಯನ್ನು ಎದುರಿಸುತ್ತಾನೆ. ನಿಮ್ಮ ಹೆಸರಿನಲ್ಲಿ ನಕಲಿ ಸಿಮ್ ಕಾರ್ಡ್ ಇದೆಯೇ ಎಂದು ಕೇವಲ 1 ನಿಮಿಷದಲ್ಲಿ ಕಂಡುಹಿಡಿಯಿರಿ ನಿಮ್ಮ ಐಡಿಯಲ್ಲಿ ಎಷ್ಟು ಸಿಮ್ ಕಾರ್ಡ್ ಗಳು ಸಕ್ರಿಯವಾಗಿವೆ ಎಂದು ತಿಳಿದುಕೊಳ್ಳುವುದು ಮುಖ್ಯ. ನಿಮ್ಮ ಮನೆಯ ಸೌಕರ್ಯದಿಂದಲೇ ನಿಮ್ಮ ಹೆಸರಿನಲ್ಲಿ ಎಷ್ಟು ಸಿಮ್ ಕಾರ್ಡ್ ಗಳು ಸಕ್ರಿಯವಾಗಿವೆ ಮತ್ತು ಯಾವ ಸಂಖ್ಯೆಗಳೊಂದಿಗೆ ನೀವು ಕೇವಲ 1 ನಿಮಿಷದಲ್ಲಿ ಕಂಡುಹಿಡಿಯಬಹುದು. ಇದಕ್ಕಾಗಿ ನೀವು ಯಾವುದೇ ಶುಲ್ಕವನ್ನು ಪಾವತಿಸಬೇಕಾಗಿಲ್ಲ. ಈ ಹಂತ ಹಂತದ ಪ್ರಕ್ರಿಯೆಯನ್ನು ಅನುಸರಿಸಿ ಮೊದಲಿಗೆ, https://tafcop.sancharsaathi.gov.in/telecomUser/ ಪೋರ್ಟಲ್ ಗೆ ಭೇಟಿ ನೀಡಿ. ಪೆಟ್ಟಿಗೆಯಲ್ಲಿ ನಿಮ್ಮ ಮೊಬೈಲ್ ಸಂಖ್ಯೆ…

Read More

ಮುಂಬೈ : ದಕ್ಷಿಣ ಆಫ್ರಿಕಾ ವಿರುದ್ಧ 52 ರನ್ಗಳ ಜಯದೊಂದಿಗೆ ಮೊದಲ ವಿಶ್ವಕಪ್ ಪ್ರಶಸ್ತಿಯನ್ನು ಗೆದ್ದ ಭಾರತೀಯ ಮಹಿಳಾ ಕ್ರಿಕೆಟ್ ತಂಡವನ್ನು ಟೀಂ ಇಂಡಿಯಾದ ಮಾಜಿ ನಾಯಕ ರೋಹಿತ್ ಶರ್ಮಾ ಅಭಿನಂದಿಸಿದ್ದಾರೆ. ಹರ್ಮನ್ಪ್ರೀತ್ ಕೌರ್ ನೇತೃತ್ವದ ಭಾರತೀಯ ಮಹಿಳಾ ಕ್ರಿಕೆಟ್ ತಂಡ ಭಾನುವಾರ ದಕ್ಷಿಣ ಆಫ್ರಿಕಾವನ್ನು ODI ವಿಶ್ವಕಪ್ ಫೈನಲ್ನಲ್ಲಿ 52 ರನ್ಗಳಿಂದ ಸೋಲಿಸುವ ಮೂಲಕ ಇತಿಹಾಸ ನಿರ್ಮಿಸಿತು. ಭಾರತದ ವಿಶ್ವಕಪ್ ಗೆಲುವಿನ ನಂತರ ಭಾರತದ ಮಾಜಿ ನಾಯಕ ರೋಹಿತ್ ಶರ್ಮಾ ನೀಡಿದ ಪ್ರತಿಕ್ರಿಯೆ ವೈರಲ್ ಆಗಿತ್ತು. ಫೈನಲ್ ಪಂದ್ಯ ನಡೆದ ನವಿ ಮುಂಬೈನಲ್ಲಿರುವ ಡಾ. ಡಿ.ವೈ. ಪಾಟೀಲ್ ಸ್ಪೋರ್ಟ್ಸ್ ಅಕಾಡೆಮಿಯಲ್ಲಿ ರೋಹಿತ್ ಹಾಜರಿದ್ದರು. ಎಕ್ಸ್‌ಟ್ರಾ-ಕವರ್‌ನಲ್ಲಿ ನಾಡಿನ್ ಡಿ ಕ್ಲರ್ಕ್ ಅವರನ್ನು ಹರ್ಮನ್ಪ್ರೀತ್ ಕೌರ್ ಕ್ಯಾಚ್ ಔಟ್ ಮಾಡಿದ ತಕ್ಷಣ, ಭಾರತ ತನ್ನ ಐತಿಹಾಸಿಕ ವಿಶ್ವಕಪ್ ವಿಜಯವನ್ನು ಪೂರ್ಣಗೊಳಿಸಿತು. ಭಾರತೀಯ ತಂಡವು ತಮ್ಮ ಸಂಭ್ರಮಾಚರಣೆಯನ್ನು ಪ್ರಾರಂಭಿಸುತ್ತಿದ್ದಂತೆ, ರೋಹಿತ್ ನೋಡುತ್ತಾ ಚಪ್ಪಾಳೆ ತಟ್ಟಿದರು. ಫೈನಲ್ ವೀಕ್ಷಿಸಲು ಸ್ಥಳದಲ್ಲಿದ್ದ ಇತರ ದಿಗ್ಗಜರಲ್ಲಿ ರೋಹಿತ್ ಕೂಡ…

Read More

ಬೆಂಗಳೂರು : 2025-26ನೇ ಸಾಲಿನ ಆಯವ್ಯಯ ಭಾಷಣ ಕಂಡಿಕೆ-144 ರನ್ವಯ ರಾಜ್ಯದಲ್ಲಿ ಆರೋಗ್ಯ ಕವಚ ಸೇವೆಯನ್ನು ಬಲಪಡಿಸುವ ಕಾರ್ಯಕ್ರಮವನ್ನು ಅನುಷ್ಠಾನಗೊಳಿಸಲು 3691 ಹುದ್ದೆಗಳನ್ನು ಸೃಜಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಮೇಲೆ ಓದಲಾದ ಕ್ರಮಾಂಕ (1) ರ ಆಯವ್ಯಯ ಭಾಷಣೆ ಕಂಡಿಕೆಯಲ್ಲಿ ರಾಜ್ಯದಲ್ಲಿ 108 ಆಂಬುಲೆನ್ಸ್ ಸೇವೆಯನ್ನು ಉತ್ತಮಗೊಳಿಸುವ ಉದ್ದೇಶದಿಂದ, ಈ ಸೇವೆಯನ್ನು ನಿಯಂತ್ರಣ ಮಾಡುವ ಕಮಾಂಡ್ ಕಂಟ್ರೋಲ್ ಕೇಂದ್ರವನ್ನು ಆರೋಗ್ಯ ಇಲಾಖೆಯ ಅಧೀನಕ್ಕೆ ಒಳಪಡಿಸುವ ಮೂಲಕ ‘ಆರೋಗ್ಯ ಕವಚ’ ಸೇವೆಯನ್ನು ಬಲಪಡಿಸಲಾಗುವುದು ಎಂದು ಘೋಷಿಸಲಾಗಿರುತ್ತದೆ. ಮೇಲೆ ಓದಲಾದ ಕ್ರಮಾಂಕ (2) ರ ಏಕ-ಕಡತದಲ್ಲಿ 108 ಆರೋಗ್ಯ ಕವಚ ಹಾಗೂ 104- ಆರೋಗ್ಯ ಸಹಾಯವಾಣಿ ಕಮಾಂಡ್ ಮತ್ತು ಕಂಟ್ರೋಲ್ ಸೆಂಟರ್ ಅನ್ನು ನಿರ್ವಹಿಸಲು ಈ ಕೆಳಕಂಡ ಹುದ್ದೆಗಳ ಸೃಜನೆಗೆ ಪ್ರಸ್ತಾವನೆ ಸಲ್ಲಿಸಿರುತ್ತಾರೆ. ಮೇಲೆ ಓದಲಾದ ಕ್ರಮಾಂಕ (3) ರ ಆದೇಶದಲ್ಲಿ 2025-26ನೇ ಸಾಲಿನ ಆಯವ್ಯಯ ಭಾಷಣೆ ಕಂಡಿಕೆ – 144 ರ ಘೋಷಣೆಯನ್ವಯ ಕಾರ್ಯಕ್ರಮವನ್ನು ಅನುಷ್ಠಾನಗೊಳಿಸಲು ರಾಜ್ಯದಲ್ಲಿ 108 ಆಂಬುಲೆನ್ಸ್ ಸೇವೆಯನ್ನು…

Read More

ಬೆಂಗಳೂರು : 2025-26ನೇ ಸಾಲಿನಲ್ಲಿ KMERC ಇಲಾಖೆಯ CEPMIZ Project ಆರ್ಥಿಕ ಅನುದಾನದಡಿ ರಾಜ್ಯದ ನಾಲ್ಕು ಜಿಲ್ಲೆಗಳ 10 ಗಣಿಬಾಧಿತ ತಾಲ್ಲೂಕುಗಳ ವ್ಯಾಪ್ತಿಯಲ್ಲಿರುವ ಸರ್ಕಾರಿ ಪ್ರಾಥಮಿಕ ಮತ್ತು ಪ್ರೌಢ ಶಾಲೆಗಳ 1-10ನೇ ತರಗತಿ ವಿದ್ಯಾರ್ಥಿಗಳಿಗೆ ಪೂರಕ ಪೌಷ್ಠಿಕ ಆಹಾರ ವಿತರಿಸುವ ಕಾರ್ಯಕ್ರಮವನ್ನು ಸುಗಮವಾಗಿ ಅನುಷ್ಠಾನಗೊಳಿಸಲು SOP ನೀಡುವ ಬಗ್ಗೆ ರಾಜ್ಯ ಸರ್ಕಾರ ಮಹತ್ವದ ಆದೇಶ ಹೊರಡಿಸಿದೆ. ಮೇಲ್ಕಂಡ ವಿಷಯ ಮತ್ತು ಉಲ್ಲೇಖಗಳಿಗೆ ಸಂಬಂಧಿಸಿದಂತೆ, 2025-26 ನೇ ಸಾಲಿನಲ್ಲಿ, ರಾಜ್ಯದ 4 ಜಿಲ್ಲೆಗಳ ಒಟ್ಟು 10 ಗಣಿಬಾಧಿತ ತಾಲ್ಲೂಕುಗಳ ವ್ಯಾಪ್ತಿಯ ಸರ್ಕಾರಿ ಪ್ರಾಥಮಿಕ ಮತ್ತು ಪ್ರೌಢ ಶಾಲೆಗಳಲ್ಲಿ 1 ರಿಂದ 10 ನೇ ತರಗತಿಯ ವಿದ್ಯಾರ್ಥಿಗಳಿಗೆ ಅಪೌಷ್ಠಿಕತೆ, ರಕ್ತಹೀನತೆ ಮತ್ತು ಬಹು ಪೋಷಕಾಂಶಗಳ ನ್ಯೂನ್ಯತೆಗಳಿಂದ ಉಂಟಾಗುತ್ತಿರುವ ಅನಾರೋಗ್ಯಕರ ಪರಿಸ್ಥಿತಿಯನ್ನು ನಿವಾರಿಸಿ ಗಣಿಬಾಧಿತ ಪ್ರದೇಶದ ವಿದ್ಯಾರ್ಥಿಗಳ ಆರೋಗ್ಯ ಮತ್ತು ಬೆಳವಣಿಗೆಯ ಗುಣಮಟ್ಟವನ್ನು ಸುಧಾರಿಸಿ, ಶೈಕ್ಷಣಿವಾಗಿ ಅಭಿವೃದ್ಧಿ ಹೊಂದಲು KMERC ಇಲಾಖೆಯ CEPMIZ ಯೋಜನೆಯಡಿ ಪೂರಕ ಪೌಷ್ಠಿಕ ಆಹಾರವನ್ನು (SNF) ಒದಗಿಸಲು ಯೋಜಿಸಲಾಗಿದೆ. 2025-26ನೇ ಸಾಲಿನಲ್ಲಿ…

Read More

ಬೆಂಗಳೂರು: ಎಂಬಿಎ, ಎಂಸಿಎ, ಎಂಇ, ಎಂ.ಟೆಕ್, ಎಂ.ಆರ್ಕ್ ಕೋರ್ಸ್ ಗಳ ಪ್ರವೇಶಕ್ಕೆ ಮೂರನೇ ಸುತ್ತಿನ ಸೀಟು ಹಂಚಿಕೆಗೆ ಇಚ್ಛೆ/ಆಯ್ಕೆಗಳನ್ನು ದಾಖಲಿಸಲು ನ.4ರಿಂದ 6ರವರೆಗೆ ಅವಕಾಶ ನೀಡಲಾಗಿದೆ ಎಂದು ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ಕಾರ್ಯನಿರ್ವಾಹಕ ನಿರ್ದೇಶಕ ಎಚ್.ಪ್ರಸನ್ನ ತಿಳಿಸಿದ್ದಾರೆ. 3ನೇ ಸುತ್ತಿನಲ್ಲಿ ಲಭ್ಯವಿರುವ ಸೀಟುಗಳ ವಿವರಗಳನ್ನು ನ.4ರಂದು KEA ವೆಬ್ ಸೈಟ್ ನಲ್ಲಿ ಪ್ರಕಟಿಸಲಾಗುತ್ತದೆ. ಆಸಕ್ತರು ₹25,000 ಕಾಷನ್ ಡೆಪಾಸಿಟ್ ಕಟ್ಟಿ ಇಚ್ಛೆ/ಆಯ್ಕೆಗಳನ್ನು ದಾಖಲಿಸಬಹುದು ಎಂದು ಅವರು ಪತ್ರಿಕಾ ಹೇಳಿಕೆಯಲ್ಲಿ ತಿಳಿಸಿದ್ದಾರೆ. ನ.7ರಂದು ಮಧ್ಯಾಹ್ನ 2ಗಂಟೆಗೆ ತಾತ್ಕಾಲಿಕ ಫಲಿತಾಂಶ ಪ್ರಕಟ. ನ.8ರಂದು ಮಧ್ಯಾಹ್ನ 2 ಗಂಟೆಗೆ ಅಂತಿಮ ಫಲಿತಾಂಶ ಪ್ರಕಟಿಸಲಾಗುತ್ತದೆ. ಸೀಟು ಹಂಚಿಕೆಯಾದವರು ನ.10ರಿಂದ 12ರವರೆಗೆ ಶುಲ್ಕ ಕಟ್ಟಿ ಸೀಟು ಖಾತರಿ ಚೀಟಿ ಡೌನ್‌ಲೋಡ್ ಮಾಡಿಕೊಂಡು ನ.13ರೊಳಗೆ ಕಾಲೇಜುಗಳಿಗೆ ವರದಿ ಮಾಡಿಕೊಳ್ಳಬೇಕು ಎಂದು ಅವರು ಸಲಹೆ ನೀಡಿದ್ದಾರೆ. ಮೊದಲ ಮತ್ತು ಎರಡನೇ ಸುತ್ತಿನಲ್ಲಿ ಸಿಕ್ಕಿರುವ ಸೀಟು ರದ್ದುಪಡಿಸಿಕೊಳ್ಳಲು ನ.6ರವರೆಗೆ ಅವಕಾಶ ನೀಡಲಾಗಿದೆ. ಸೀಟು ರದ್ದುಪಡಿಸಿಕೊಂಡವರಿಗೆ 3ನೇ ಸುತ್ತಿನಲ್ಲಿ ಭಾಗವಹಿಸಲು ಅವಕಾಶ ಇರುವುದಿಲ್ಲ ಎಂದು ಅವರು…

Read More