Subscribe to Updates
Get the latest creative news from FooBar about art, design and business.
Author: kannadanewsnow57
ಬೆಂಗಳೂರು: ನವೆಂಬರ್ 1 ರ ಇಂದು ರಾಜ್ಯಾದ್ಯಂತ 70ನೇ ಕನ್ನಡ ರಾಜ್ಯೋತ್ಸವವನ್ನು ಸಂಭ್ರಮದಿಂದ ಆಚರಿಸಲಾಗುತ್ತಿದ್ದು, ಕಂಠೀರವ ಕ್ರೀಡಾಂಗಣದಲ್ಲಿ ಸಿಎಂ ಸಿದ್ದರಾಮಯ್ಯ ಧ್ವಜಾರೋಹಣ ನೆರವೇರಿಸಿದ್ದಾರೆ. 70ನೇ ಕನ್ನಡ ರಾಜ್ಯೋತ್ಸವ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಧ್ವಜಾರೋಹಣ ನೆರವೇರಿಸಿದರು. ಕನ್ನಡ ರಾಜ್ಯೋತ್ಸವ ಎನ್ನುವುದು ಕೇವಲ ಉತ್ಸವ ಅಲ್ಲ. ವಿವಿಧ ಪ್ರಾಂತ್ಯಗಳಲ್ಲಿ ಹರಿದು ಹಂಚಿಹೋಗಿರುವ ಕನ್ನಡಿಗರು ಕನ್ನಡದ ಕರುಳಬಳ್ಳಿಯ ಮೂಲಕ ಒಗ್ಗೂಡಿದ ಪವಿತ್ರ ದಿನ. ಇಂತಹದ್ದೊಂದು ಕನ್ನಡದ ಕನಸು ಸಾಕಾರಗೊಳ್ಳಲು ನಿಸ್ವಾರ್ಥದಿಂದ ಶ್ರಮಿಸಿದ ಲಕ್ಷಾಂತರ ಕನ್ನಡಾಭಿಮಾನಿಗಳ ಶ್ರಮ, ತ್ಯಾಗ, ಬಲಿದಾನಗಳನ್ನು ಈ ದಿನ ಹೆಮ್ಮೆಯಿಂದ ಸ್ಮರಿಸೋಣ ಎಂದು ಹೇಳಿದ್ದಾರೆ. ಹೊರ ರಾಜ್ಯಗಳಿಂದ, ಹೊರ ದೇಶಗಳಿಂದ ಶಿಕ್ಷಣ, ಉದ್ಯೋಗ ಇನ್ನಿತರೆ ಕಾರಣಗಳಿಗಾಗಿ ಇಲ್ಲಿ ನೆಲೆಸಿರುವ, ಬದುಕು ಕಟ್ಟಿಕೊಂಡಿರುವ ಎಲ್ಲರೂ ಕನ್ನಡಿಗರೇ, ನಮ್ಮವರೇ. ನಾವು – ನೀವು ಎಲ್ಲರೂ ಸೇರಿ ಕನ್ನಡವನ್ನು ಬಳಸುವ, ಬೆಳೆಸುವ ಸಂಕಲ್ಪವನ್ನು ಈ ದಿನ ಸ್ವೀಕರಿಸೋಣ. ನೆಲದ ಭಾಷೆ ಮನದ ಭಾಷೆಯಾಗಲಿ, ಕನ್ನಡದ ಚಿಗುರು ಎಲ್ಲರೆದೆಯೊಳಗೆ ಮೊಳಕೆಯೊಡೆಯಲಿ ಎಂದು ಹೇಳಿದ್ದಾರೆ. ಕನ್ನಡ ಮಣ್ಣಿನಲ್ಲೇ ಹುಟ್ಟಿ ಬೆಳೆದವರು,…
ಬೆಂಗಳೂರು: ನವೆಂಬರ್ 1 ರ ಇಂದು ರಾಜ್ಯಾದ್ಯಂತ 70ನೇ ಕನ್ನಡ ರಾಜ್ಯೋತ್ಸವವನ್ನು ಸಂಭ್ರಮದಿಂದ ಆಚರಿಸಲಾಗುತ್ತಿದ್ದು, ಕಂಠೀರವ ಕ್ರೀಡಾಂಗಣದಲ್ಲಿ ಸಿಎಂ ಸಿದ್ದರಾಮಯ್ಯ ಧ್ವಜಾರೋಹಣ ನೆರವೇರಿಸಿದ್ದಾರೆ. 70ನೇ ಕನ್ನಡ ರಾಜ್ಯೋತ್ಸವ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಧ್ವಜಾರೋಹಣ ನೆರವೇರಿಸಿದರು. ಕನ್ನಡ ರಾಜ್ಯೋತ್ಸವ ಎನ್ನುವುದು ಕೇವಲ ಉತ್ಸವ ಅಲ್ಲ. ವಿವಿಧ ಪ್ರಾಂತ್ಯಗಳಲ್ಲಿ ಹರಿದು ಹಂಚಿಹೋಗಿರುವ ಕನ್ನಡಿಗರು ಕನ್ನಡದ ಕರುಳಬಳ್ಳಿಯ ಮೂಲಕ ಒಗ್ಗೂಡಿದ ಪವಿತ್ರ ದಿನ. ಇಂತಹದ್ದೊಂದು ಕನ್ನಡದ ಕನಸು ಸಾಕಾರಗೊಳ್ಳಲು ನಿಸ್ವಾರ್ಥದಿಂದ ಶ್ರಮಿಸಿದ ಲಕ್ಷಾಂತರ ಕನ್ನಡಾಭಿಮಾನಿಗಳ ಶ್ರಮ, ತ್ಯಾಗ, ಬಲಿದಾನಗಳನ್ನು ಈ ದಿನ ಹೆಮ್ಮೆಯಿಂದ ಸ್ಮರಿಸೋಣ ಎಂದು ಹೇಳಿದ್ದಾರೆ. ಹೊರ ರಾಜ್ಯಗಳಿಂದ, ಹೊರ ದೇಶಗಳಿಂದ ಶಿಕ್ಷಣ, ಉದ್ಯೋಗ ಇನ್ನಿತರೆ ಕಾರಣಗಳಿಗಾಗಿ ಇಲ್ಲಿ ನೆಲೆಸಿರುವ, ಬದುಕು ಕಟ್ಟಿಕೊಂಡಿರುವ ಎಲ್ಲರೂ ಕನ್ನಡಿಗರೇ, ನಮ್ಮವರೇ. ನಾವು – ನೀವು ಎಲ್ಲರೂ ಸೇರಿ ಕನ್ನಡವನ್ನು ಬಳಸುವ, ಬೆಳೆಸುವ ಸಂಕಲ್ಪವನ್ನು ಈ ದಿನ ಸ್ವೀಕರಿಸೋಣ. ನೆಲದ ಭಾಷೆ ಮನದ ಭಾಷೆಯಾಗಲಿ, ಕನ್ನಡದ ಚಿಗುರು ಎಲ್ಲರೆದೆಯೊಳಗೆ ಮೊಳಕೆಯೊಡೆಯಲಿ ಎಂದು ಹೇಳಿದ್ದಾರೆ.
ಕಲಬುರಗಿ : ಕಲಬುರಗಿಯಲ್ಲಿ ಭೀಮ್ ಆರ್ಮಿ ಮುಖಂಡನ ಕಾರಿಗೆ ಬೆಂಕಿ ಹಚ್ಚಿ ಕಿಡಿಗೇಡಿಗಳು ಪರಾರಿಯಾಗಿದ್ದಾರೆ. ಕಲಬುರಗಿ ನಗರದ ಶಹಾಬಾದ್ ರಿಂಗ್ ರಸ್ತೆ ಬಳಿ ತಡರಾತ್ರಿ ಮನೆಮುಂದೆ ನಿಲ್ಲಿಸಿದ್ದ ಕಾರಿಗೆ ಬೆಂಕಿ ಹಚ್ಚಿ ಕಿಡಿಗೇಡಿಗಳು ಪರಾರಿಯಾಗಿದ್ದಾರೆ. ಭೀಮ್ ಆರ್ಮಿ ಪ್ರಧಾನ ಕಾರ್ಯದರ್ಶಿ ಸತೀಶ್ ಹುಗ್ಗಿ ಕಾರಿಗೆ ಕಿಡಿಗೇಡಿಗಳು ಬೆಂಕಿ ಹಚ್ಚಿದ್ದಾರೆ. Rss ಪಥ ಸಂಚಲನದ ವಿರುದ್ಧ ಹೋರಾಟ ಮುಂದಾಳತ್ವ ವಹಿಸಿದ್ದ ಸತೀಶ್ ಕಾರಿಗೆ ಬೆಂಕಿ ಹಚ್ಚಲಾಗಿದೆ. ಗುಲಬರ್ಗಾ ವಿಶ್ವವಿದ್ಯಾಲಯ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ನವದೆಹಲಿ : ಇಂದು ರಾಜ್ಯಾದ್ಯಂತ ಕನ್ನಡ ರಾಜ್ಯೋತ್ಸವವನ್ನು ಆಚರಿಸಲಾಗುತ್ತಿದ್ದು, ನಾಡಿನ ಜನತೆಗೆ ಪ್ರಧಾನಿ ನರೇಂದ್ರ ಮೋದಿ ಅವರು ಕನ್ನಡ ರಾಜ್ಯೋತ್ಸವದ ಶುಭಾಶಯ ತಿಳಿಸಿದ್ದಾರೆ. ಈ ಕುರಿತು ಟ್ವೀಟ್ ಮಾಡಿರುವ ಪ್ರಧಾನಿ ಮೋದಿ,ಇಂದು, ನಾವು ಕನ್ನಡ ರಾಜ್ಯೋತ್ಸವವನ್ನು ಆಚರಿಸುತ್ತಿರುವಾಗ, ಕರ್ನಾಟಕದ ಜನರಿಗೆ ಪ್ರತೀಕವಾಗಿರುವ ಶ್ರೇಷ್ಠತೆ ಮತ್ತು ಶ್ರಮಶೀಲ ಸ್ವಭಾವವನ್ನು ನಾವು ಆಚರಿಸುತ್ತೇವೆ. ಸಾಹಿತ್ಯ, ಕಲೆ, ಸಂಗೀತ ಮತ್ತಿತರ ಕ್ಷೇತ್ರಗಳಲ್ಲಿ ಪ್ರತಿಫಲಿಸುವ ಕರ್ನಾಟಕದ ಶ್ರೀಮಂತ ಸಂಸ್ಕೃತಿಯನ್ನು ಸಹ ನಾವು ಆಚರಿಸುತ್ತೇವೆ. ಈ ರಾಜ್ಯವು ಜ್ಞಾನದಲ್ಲಿ ಅಡಗಿರುವ ಪ್ರಗತಿಯ ಮನೋಭಾವವನ್ನು ಪ್ರತಿಬಿಂಬಿಸುತ್ತದೆ. ರಾಜ್ಯದ ಜನರು ಸಂತೋಷ ಮತ್ತು ಆರೋಗ್ಯದಿಂದ ಇರಲಿ ಎಂದು ನಾನು ಪ್ರಾರ್ಥಿಸುತ್ತೇನೆ ಎಂದು ಹೇಳಿದ್ದಾರೆ. https://twitter.com/narendramodi/status/1984458915870822909?ref_src=twsrc%5Etfw%7Ctwcamp%5Etweetembed%7Ctwterm%5E1984458915870822909%7Ctwgr%5Ef25725e12dc1067bba2c51a1654c767a08f6417f%7Ctwcon%5Es1_&ref_url=https%3A%2F%2Fkannadadunia.com%2Fbreaking-pm-modi-wishes-kannada-on-kannada-rajyotsava-cm-siddaramaiah-dcm-dk-also-extend-greetings-to-the-nation%2F
ಬೆಂಗಳೂರು : ಇಂದು ರಾಜ್ಯಾದ್ಯಂತ 70ನೇ ಕನ್ನಡ ರಾಜ್ಯೋತ್ಸವ ಆಚರಿಸಲಾಗುತ್ತಿದ್ದು, ಸಿಎಂ ಸಿದ್ದರಾಮಯ್ಯ ನಾಡಿನ ಜನತೆಗೆ ಕನ್ನಡ ರಾಜ್ಯೋತ್ಸವದ ಶುಭಾಶಯಗಳನ್ನು ತಿಳಿಸಿದ್ದಾರೆ. ಈ ಕುರಿತು ಎಕ್ಸ್ ನಲ್ಲಿ ಪೋಸ್ಟ್ ಮಾಡಿರುವ ಸಿಎಂ ಸಿದ್ದರಾಮಯ್ಯ, ಕನ್ನಡ ರಾಜ್ಯೋತ್ಸವ ಎನ್ನುವುದು ಕೇವಲ ಉತ್ಸವ ಅಲ್ಲ. ವಿವಿಧ ಪ್ರಾಂತ್ಯಗಳಲ್ಲಿ ಹರಿದು ಹಂಚಿಹೋಗಿರುವ ಕನ್ನಡಿಗರು ಕನ್ನಡದ ಕರುಳಬಳ್ಳಿಯ ಮೂಲಕ ಒಗ್ಗೂಡಿದ ಪವಿತ್ರ ದಿನ. ಇಂತಹದ್ದೊಂದು ಕನ್ನಡದ ಕನಸು ಸಾಕಾರಗೊಳ್ಳಲು ನಿಸ್ವಾರ್ಥದಿಂದ ಶ್ರಮಿಸಿದ ಲಕ್ಷಾಂತರ ಕನ್ನಡಾಭಿಮಾನಿಗಳ ಶ್ರಮ, ತ್ಯಾಗ, ಬಲಿದಾನಗಳನ್ನು ಈ ದಿನ ಹೆಮ್ಮೆಯಿಂದ ಸ್ಮರಿಸೋಣ. ಹೊರ ರಾಜ್ಯಗಳಿಂದ, ಹೊರ ದೇಶಗಳಿಂದ ಶಿಕ್ಷಣ, ಉದ್ಯೋಗ ಇನ್ನಿತರೆ ಕಾರಣಗಳಿಗಾಗಿ ಇಲ್ಲಿ ನೆಲೆಸಿರುವ, ಬದುಕು ಕಟ್ಟಿಕೊಂಡಿರುವ ಎಲ್ಲರೂ ಕನ್ನಡಿಗರೇ, ನಮ್ಮವರೇ. ನಾವು – ನೀವು ಎಲ್ಲರೂ ಸೇರಿ ಕನ್ನಡವನ್ನು ಬಳಸುವ, ಬೆಳೆಸುವ ಸಂಕಲ್ಪವನ್ನು ಈ ದಿನ ಸ್ವೀಕರಿಸೋಣ. ನೆಲದ ಭಾಷೆ ಮನದ ಭಾಷೆಯಾಗಲಿ, ಕನ್ನಡದ ಚಿಗುರು ಎಲ್ಲರೆದೆಯೊಳಗೆ ಮೊಳಕೆಯೊಡೆಯಲಿ. ನಾಡಬಂಧುಗಳಿಗೆ ಕನ್ನಡ ರಾಜ್ಯೋತ್ಸವದ ಶುಭಾಶಯಗಳು.ಜೈ ಭುವನೇಶ್ವರಿ, ಜೈ ಕರ್ನಾಟಕ. https://twitter.com/CMofKarnataka/status/1984468976269967720
ನವದೆಹಲಿ : ಇಂದು ರಾಜ್ಯಾದ್ಯಂತ ಕನ್ನಡ ರಾಜ್ಯೋತ್ಸವವನ್ನು ಆಚರಿಸಲಾಗುತ್ತಿದ್ದು, ನಾಡಿನ ಜನತೆಗೆ ಪ್ರಧಾನಿ ನರೇಂದ್ರ ಮೋದಿ ಅವರು ಕನ್ನಡ ರಾಜ್ಯೋತ್ಸವದ ಶುಭಾಶಯ ತಿಳಿಸಿದ್ದಾರೆ. ಈ ಕುರಿತು ಟ್ವೀಟ್ ಮಾಡಿರುವ ಪ್ರಧಾನಿ ಮೋದಿ, ಇಂದು, ನಾವು ಕನ್ನಡ ರಾಜ್ಯೋತ್ಸವವನ್ನು ಆಚರಿಸುವಾಗ, ಕರ್ನಾಟಕದ ಜನರು ಸಮಾನಾರ್ಥಕವಾಗಿರುವ ಶ್ರೇಷ್ಠತೆ ಮತ್ತು ಶ್ರಮಶೀಲ ಸ್ವಭಾವವನ್ನು ಆಚರಿಸುತ್ತೇವೆ. ಕರ್ನಾಟಕದ ಅತ್ಯುತ್ತಮ ಸಂಸ್ಕೃತಿಯನ್ನು ಸಹ ನಾವು ಆಚರಿಸುತ್ತೇವೆ, ಅದು ಅದರ ಸಾಹಿತ್ಯ, ಕಲೆ, ಸಂಗೀತ ಮತ್ತು ಇತರವುಗಳಲ್ಲಿ ಪ್ರತಿಫಲಿಸುತ್ತದೆ. ರಾಜ್ಯವು ಬುದ್ಧಿವಂತಿಕೆಯಲ್ಲಿ ಬೇರೂರಿರುವ ಪ್ರಗತಿಯ ಮನೋಭಾವವನ್ನು ಸಾಕಾರಗೊಳಿಸುತ್ತದೆ. ರಾಜ್ಯದ ಜನರು ಸಂತೋಷ ಮತ್ತು ಆರೋಗ್ಯವಾಗಿರಲಿ ಎಂದು ನಾನು ಪ್ರಾರ್ಥಿಸುತ್ತೇನೆ ಎಂದು ಹೇಳಿದ್ದಾರೆ. https://twitter.com/narendramodi/status/1984458428282978408?ref_src=twsrc%5Egoogle%7Ctwcamp%5Eserp%7Ctwgr%5Etweet
ಬೆಂಗಳೂರು : ಕುಡಚಿ ಶಾಸಕ ಮಹೇಂದ್ರ ತಮ್ಮಣ್ಣನವರ್ ಅವರು ಡಿಸಿಎಂ ಡಿ.ಕೆ. ಶಿವಕುಮಾರ್ ಅವರ ಮೇಲಿನ ಅಭಿಮಾನ ಪ್ರದರ್ಶಿಸಿದ್ದು. ತಮ್ಮ ಪುತ್ರನಿಗೆ ‘ಶಿವಕುಮಾರ್’ ಎಂದು ಡಿ.ಕೆ. ಶಿವಕುಮಾರ್ ಅವರ ಮೂಲಕವೇ ನಾಮಕರಣ ಮಾಡಿಸಿದ್ದಾರೆ. ಈ ಕುರಿತು ಡಿಸಿಎಂ ಡಿ.ಕೆ. ಶಿವಕುಮಾರ್ ಟ್ವೀಟ್ ಮಾಡಿದ್ದು, ಇದು ಭಾಗ್ಯ, ಇದು ಭಾಗ್ಯ, ಇದು ಭಾಗ್ಯವಯ್ಯ!ನನ್ನ ಗೃಹಕಚೇರಿಯಲ್ಲಿಂದು ಕುಡಚಿ ಶಾಸಕರಾದ ಮಹೇಂದ್ರ ತಮ್ಮಣ್ಣನವರ್ ಅವರ ಮಗನಿಗೆ “ಶಿವಕುಮಾರ್” ಎಂದು ನಾಮಕರಣ ಮಾಡುವ ಭಾಗ್ಯ ನನ್ನದಾಯಿತು. ನನ್ನ ಹೆಸರನ್ನು ಮಗುವಿಗೆ ಇಡಲು ನಿರ್ಧರಿಸಿದ ಶಾಸಕರ ಈ ನಡೆಗೆ ನಾನು ಧನ್ಯ ಎಂದು ಹೇಳಿದ್ದಾರೆ. ಮುಂದಿನ ದಿನಗಳಲ್ಲಿ ಈ ಮುದ್ದಾದ ಮಗು ನನಗಿಂತಲೂ ಎತ್ತರಕ್ಕೆ ಬೆಳೆಯಲಿ, ತಂದೆ-ತಾಯಿಗಳಿಗೆ ಒಳ್ಳೆಯ ಹೆಸರು ತರುವಂತಾಗಲಿ ಎಂದು ಶುಭಹಾರೈಸಿದೆ. ಕನ್ನಡ ರಾಜ್ಯೋತ್ಸವದ ಶುಭ ಸಂದರ್ಭದಲ್ಲಿ, ಈ “ಶಿವಕುಮಾರ” ಕರುನಾಡ ಬೆಳಗುವ ಕುವರನಾಗಲಿ ಎಂದು ಮನತುಂಬಿ ಹಾರೈಸಿದ್ದಾರೆ. https://twitter.com/DKShivakumar/status/1984267950153711929?ref_src=twsrc%5Etfw%7Ctwcamp%5Etweetembed%7Ctwterm%5E1984267950153711929%7Ctwgr%5Ea5da2598b2ae9232ff95a545f3bf9079fb162a7b%7Ctwcon%5Es1_&ref_url=https%3A%2F%2Fkannadadunia.com%2Fcongress-mlas-son-named-shivakumar-for-showing-admiration-for-dcm-dk%2F
ನೈಸರ್ಗಿಕ ಹೆನ್ನಾ – ನಿಮ್ಮ ಚರ್ಮ ಮತ್ತು ಬಟ್ಟೆಗಳ ಬಣ್ಣವನ್ನು ಬದಲಾಯಿಸಲು ಹೆಸರುವಾಸಿಯಾಗಿದೆ, ಈಗ ಅಪಾಯಕಾರಿ ಮತ್ತು ಮಾರಕ ಯಕೃತ್ತಿನ ಕಾಯಿಲೆಗಳಿಗೆ ಸಹ ಚಿಕಿತ್ಸೆ ನೀಡಬಹುದು. ಹೌದು, ಒಸಾಕಾ ಮೆಟ್ರೋಪಾಲಿಟನ್ ವಿಶ್ವವಿದ್ಯಾಲಯದ ವಿಜ್ಞಾನಿಗಳ ಪ್ರಕಾರ, ಲಾಸೋನಿಯಾ ಇನರ್ಮಿಸ್ ಎಂದೂ ಕರೆಯಲ್ಪಡುವ ಡೈಯಿಂದ ಹೊರತೆಗೆಯಲಾದ ವರ್ಣದ್ರವ್ಯಗಳು ನಿರ್ದಿಷ್ಟವಾಗಿ ಯಕೃತ್ತಿನ ಫೈಬ್ರೋಸಿಸ್ ಅನ್ನು ಚಿಕಿತ್ಸೆ ನೀಡಬಹುದು – ಅತಿಯಾದ ಮದ್ಯಪಾನದಂತಹ ಜೀವನಶೈಲಿಯ ಆಯ್ಕೆಗಳಿಂದ ಉಂಟಾಗುವ ದೀರ್ಘಕಾಲದ ಯಕೃತ್ತಿನ ಗಾಯದ ಪರಿಣಾಮವಾಗಿ ಯಕೃತ್ತಿನಲ್ಲಿ ಹೆಚ್ಚುವರಿ ನಾರಿನ ಗಾಯದ ಅಂಗಾಂಶವನ್ನು ನಿರ್ಮಿಸುವ ಕಾಯಿಲೆ. ಲಿವರ್ ಫೈಬ್ರೋಸಿಸ್ ಇರುವವರು ಸಿರೋಸಿಸ್, ಲಿವರ್ ವೈಫಲ್ಯ ಮತ್ತು ಕ್ಯಾನ್ಸರ್ ಅಪಾಯವನ್ನು ಹೆಚ್ಚಿಸಿದ್ದಾರೆ ಎಂದು ವಿಜ್ಞಾನಿಗಳು ಹೇಳುತ್ತಾರೆ. ಜನಸಂಖ್ಯೆಯ ಶೇಕಡಾ 3 ರಿಂದ 4 ರಷ್ಟು ಜನರು ರೋಗದ ಮುಂದುವರಿದ ರೂಪವನ್ನು ಹೊಂದಿದ್ದರೂ, ಚಿಕಿತ್ಸೆಯ ಆಯ್ಕೆಗಳು ಯಾವಾಗಲೂ ಸೀಮಿತವಾಗಿವೆ. ಅಧ್ಯಯನವನ್ನು ಹೇಗೆ ನಡೆಸಲಾಯಿತು? ವಿಶ್ವವಿದ್ಯಾನಿಲಯವು ನಿಮ್ಮ ಯಕೃತ್ತಿನಲ್ಲಿ ಸಮತೋಲನವನ್ನು ಕಾಯ್ದುಕೊಳ್ಳುವ ಸಕ್ರಿಯ ಯಕೃತ್ತಿನ ನಕ್ಷತ್ರ ಕೋಶಗಳು ಅಥವಾ HSC ಗಳ ಮೇಲೆ ನೇರವಾಗಿ…
ಕಲಬುರಗಿ : ನವೆಂಬರ್ 1 ರ ಇಂದು ರಾಜ್ಯಾದ್ಯಂತ ಸಂಭ್ರಮದಿಂದ ಕನ್ನಡ ರಾಜ್ಯೋತ್ಸವ ಆಚರಿಸಲಾಗುತ್ತಿದ್ದು, ಕಲಬುರಗಿಯಲ್ಲಿ ಪ್ರತ್ಯೇಕ ರಾಜ್ಯದ ಕೂಗು ಮೊಳಗಿದೆ. ಹೌದು, ರಾಜ್ಯೋತ್ಸವದ ದಿನ ಕಲಬುರಗಿಯಲ್ಲಿ ಕಲ್ಯಾಣ ಕರ್ನಾಟಕ ಪ್ರತ್ಯೇಕ ರಾಜ್ಯಕ್ಕೆ ಆಗ್ರಹಿಸಿ ಪ್ರತಿಭಟನೆ ನಡೆಸಲಾಗಿದೆ. ಕಲಬುರಗಿಯ ಜಗತ್ ವೃತ್ತದಲ್ಲಿ ಹೋರಾಟಗಾರರು ಧರಣಿ ನಡೆಸಿದ್ದಾರೆ. ಕಲ್ಯಾಣ ಕರ್ನಾಟಕ ಪ್ರತ್ಯೇಕ ರಾಜ್ಯ ಜಾಗೃತಿ ಸಮಿತಿ ಪ್ರತ್ಯೇಕ ರಾಜ್ಯಕ್ಕೆ ಆಗ್ರಹಿಸಿ ಪ್ರತಿಭಟನೆ ನಡೆಸುತ್ತಿದೆ. ಈ ವೇಳೆ ಪ್ರತ್ಯೇಕ ಧ್ವಜಾರೋಹಣಕ್ಕೆ ಹೋರಾಟಗಾರರು ಮುಂದಾಗಿದ್ದಾರೆ. 20 ಕ್ಕೂ ಅಧಿಕ ಹೋರಾಟಗಾರರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.
ಬೆಂಗಳೂರು : ಬೆಂಗಳೂರಿನಲ್ಲಿ ಪೊಲೀಸರು ರೇವ್ ಪಾರ್ಟಿ ಅಡ್ಡೆ ಮೇಲೆ ದಾಳಿ ನಡೆಸಿದ್ದು, 35 ಯುವತಿಯರು ಸೇರಿದಂತೆ 115 ಜನರನ್ನು ವಶಕ್ಕೆ ಪಡೆಯಲಾಗಿದೆ. ಬೆಂಗಳೂರು ದಕ್ಷಿಣ ತಾಲೂಕಿನ ದೇವಿಗೆರೆ ಕ್ರಾಸ್ ಬಳಿ ಇರುವ ಅಯಾನಾ ರೆಸಾರ್ಟ್ ನಲ್ಲಿ ರೇವ್ ಪಾರ್ಟಿ ನಡೆಯುತ್ತಿದ್ದಾಗ ಪೊಲೀಸರು ದಾಳಿ ನಡೆಸಿದ್ದಾರೆ. ಬೆಂಗಳೂರು ದಕ್ಷಿಣ ಎಸ್ ಪಿ ಶ್ರೀನಿವಾಸ್ ಗೌಡ ನೇತೃತ್ವದಲ್ಲಿ ದಾಳಿ ನಡೆಸಲಾಗಿದೆ. ದಾಳಿ ವೇಳೆ 35 ಯುವತಿಯರು ಸೇರಿದಂತೆ 115 ಜನರನ್ನು ವಶಕ್ಕೆ ಪಡೆಯಲಾಗಿದೆ. 115 ಜರಿಗೂ ಬೆಂಗಳೂರು ದಕ್ಷಿಣ ಜಿಲ್ಲಾಸ್ಪತ್ರೆಯಲ್ಲಿ ಮೆಡಿಕಲ್ ಟೆಸ್ಟ್ ನಡೆಸಲಾಗಿದೆ.














