Subscribe to Updates
Get the latest creative news from FooBar about art, design and business.
Author: kannadanewsnow57
ನವದೆಹಲಿ : ಎಲೆಕ್ಟ್ರಿಕ್ ದ್ವಿಚಕ್ರ ವಾಹನ ಖರೀದಿಸುವವರಿಗೆ ಕೇಂದ್ರ ಸರ್ಕಾರವು ಭರ್ಜರಿ ಸಿಹಿಸುದ್ದಿ ನೀಡಿದ್ದು, ಪ್ರಧಾನಮಂತ್ರಿ ಇ-ಡ್ರೈವ್ ಯೋಜನೆಯಡಿ ಮೊದಲ ವರ್ಷದಲ್ಲಿ ಎಲೆಕ್ಟ್ರಿಕ್ ದ್ವಿಚಕ್ರ ವಾಹನದ ಮೇಲೆ ರೂ 10,000 ವರೆಗೆ ಸಬ್ಸಿಡಿ, ಯೋಜನೆ ಶೀಘ್ರದಲ್ಲೇ ಪ್ರಾರಂಭವಾಗಲಿದೆ. ಪ್ರಧಾನಮಂತ್ರಿ ಇ-ಡ್ರೈವ್ ಯೋಜನೆಯಡಿ ಎಲೆಕ್ಟ್ರಿಕ್ ದ್ವಿಚಕ್ರ ವಾಹನಗಳನ್ನು ಖರೀದಿಸುವವರಿಗೆ ಮೊದಲ ವರ್ಷದಲ್ಲಿ 10,000 ರೂ.ವರೆಗೆ ಸಬ್ಸಿಡಿ ಸಿಗಲಿದೆ ಎಂದು ಕೇಂದ್ರ ಭಾರೀ ಕೈಗಾರಿಕೆ ಸಚಿವ ಎಚ್.ಡಿ.ಕುಮಾರಸ್ವಾಮಿ ಘೋಷಿಸಿದ್ದಾರೆ. ಈ ಯೋಜನೆಯು ಶೀಘ್ರದಲ್ಲೇ ಪ್ರಾರಂಭವಾಗಲಿದೆ ಮತ್ತು ಇದು ಅನೇಕ ಪ್ರಮುಖ ವಿಷಯಗಳನ್ನು ಒಳಗೊಂಡಿದೆ. ಸಬ್ಸಿಡಿ ಮಾಹಿತಿ ಮೊದಲ ವರ್ಷ ಸಬ್ಸಿಡಿ: ಎಲೆಕ್ಟ್ರಿಕ್ ದ್ವಿಚಕ್ರ ವಾಹನಕ್ಕೆ ಬ್ಯಾಟರಿ ಸಾಮರ್ಥ್ಯದ ಆಧಾರದ ಮೇಲೆ ಪ್ರತಿ ಕಿಲೋವ್ಯಾಟ್ ಗಂಟೆಗೆ 5,000 ರೂ. ಆದರೆ, ಮೊದಲ ವರ್ಷದಲ್ಲಿ ಒಟ್ಟು ಸಬ್ಸಿಡಿ ರೂ 10,000 ಮೀರುವುದಿಲ್ಲ. ಎರಡನೇ ವರ್ಷ ಸಬ್ಸಿಡಿ: ಎರಡನೇ ವರ್ಷದಲ್ಲಿ ಸಬ್ಸಿಡಿ ಪ್ರತಿ ಕಿಲೋವ್ಯಾಟ್ ಗಂಟೆಗೆ 2,500 ರೂ. ಈ ವರ್ಷದ ಒಟ್ಟು ಸಬ್ಸಿಡಿ 5,000 ರೂ.ಗೆ ಸೀಮಿತವಾಗಿರುತ್ತದೆ.…
ಧಾರವಾಡ : ಈಗ ರೈತರು ಸಂಕಷ್ಟದಲ್ಲಿದ್ದೂ ಅನಗತ್ಯವಾಗಿ ಕೆಲವು ಬ್ಯಾಂಕ್ ಗಳು ಬೆಳೆಸಾಲ ನೀಡಲು ರೈತರಿಗೆ ಸಿಬಿಲ್ ರೇಟ್ ಕಡ್ಡಾಯ ಮಾಡುತ್ತಿವೆ. ಇದರಿಂದ ರೈತರಿಗೆ ಮತ್ತು ರೈತರು ಉತ್ಪಾದಿಸುವ ಆಹಾರದ ಮೇಲೆ ನೇರ ಪ್ರಭಾವ ಬೀರುತ್ತದೆ. ಬ್ಯಾಂಕರ್ಸ್ ಗಳು ಅನ್ವಯವಾಗದ ಕಾಯ್ದೆ, ನಿಯಮಗಳನ್ನು ಹೇಳಿ ರೈತರಿಗೆ ಬೆಳೆ ಸಾಲ ನೀಡುವಲ್ಲಿ ವಿನಾಕಾರಣ ತೊಂದರೆ ಕೊಡಬಾರದು. ಯಾವುದೇ ತಕರಾರು ಇಲ್ಲದೆ ರೈತರಿಗೆ ರೂ.10 ಲಕ್ಷ ವರೆಗೆ ಬೆಳೆಸಾಲ ನೀಡಲು ಆರ್.ಬಿ.ಐ ಮಾರ್ಗಸೂಚಿಗಳಿವೆ. ಇದನ್ನು ಬ್ಯಾಕರ್ಸ್ ಗಳು ಪಾಲನೆ ಮಾಡಬೇಕು ಎಂದು ಕೇಂದ್ರ ಗ್ರಾಹಕ ವ್ಯವಹಾರಗಳ, ಆಹಾರ ಮತ್ತು ಸಾರ್ವಜನಿಕ ವಿರಣೆ ಮತ್ತು ಹೊಸ ಹಾಗೂ ನವೀಕರಿಸಬಹುದಾದ ಇಂಧನ ಸಚಿವರಾದ ಪ್ರಲ್ಹಾದ ಜೋಶಿ ಅವರು ಹೇಳಿದರು. ಅವರು ಜಿಲ್ಲಾಧಿಕಾರಿಗಳ ಕಚೇರಿ ನೂತನ ಸಭಾಂಗಣದಲ್ಲಿ ಜಿಲ್ಲಾ ಮಟ್ಟದ ಪ್ರಗತಿ ಪರಿಶೀಲನಾ ಸಮತಿ ಸಭೆ ಹಾಗೂ ಜಿಲ್ಲಾ ಸಲಹಾ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ, ಮಾತನಾಡಿದರು. ಕೇಂದ್ರ ಸರಕಾರದಿಂದ ಸಮುದಾಯ ಮತ್ತು ವ್ಯಕ್ತಿಗತ ಯೋಜನೆಗಳನ್ನು ಸರಿಯಾಗಿ ಅನುಷ್ಠಾನಗೊಳಿಸಬೇಕು.…
ನವದೆಹಲಿ : ಭಾರತದಲ್ಲಿ ಹಬ್ಬದ ಸೀಸನ್ ಶುರುವಾಗಿದೆ. ಈ ಸಮಯದಲ್ಲಿ, ತಮ್ಮ ಗ್ರಾಹಕರಿಗೆ ಉತ್ತಮ ಸೇವೆಗಳನ್ನು ಒದಗಿಸುವ ಉದ್ದೇಶದಿಂದ.. ಈ ವಾಣಿಜ್ಯ ಕಂಪನಿಗಳು ದೊಡ್ಡ ಉದ್ಯೋಗಗಳನ್ನು ಸೃಷ್ಟಿಸುತ್ತಿವೆ. ವರದಿಯ ಪ್ರಕಾರ, ಅಮೆಜಾನ್ ಇಂಡಿಯಾ 1.1 ಲಕ್ಷಕ್ಕೂ ಹೆಚ್ಚು ಕಾಲೋಚಿತ ಉದ್ಯೋಗಗಳನ್ನು ಸೃಷ್ಟಿಸುವುದಾಗಿ ಘೋಷಿಸಿತು. ಮುಂಬೈ, ದೆಹಲಿ, ಪುಣೆ, ಬೆಂಗಳೂರು, ಹೈದರಾಬಾದ್, ಕೋಲ್ಕತ್ತಾ, ಲಕ್ನೋ ಮತ್ತು ಚೆನ್ನೈನಂತಹ ನಗರಗಳಲ್ಲಿ ನೇರ ಮತ್ತು ಪರೋಕ್ಷ ಉದ್ಯೋಗಗಳು ಸೃಷ್ಟಿಯಾಗಲಿವೆ ಎಂದು ವರದಿಯಾಗಿದೆ. ಮಹಿಳೆಯರು ಮತ್ತು ಅಂಗವಿಕಲರ ಸಂಖ್ಯೆ ದೊಡ್ಡದಾಗಿದೆ ಎಂದು ತೋರುತ್ತದೆ. ದೇಶದ ಎಲ್ಲಾ ಭಾಗಗಳ ಗ್ರಾಹಕರ ಅಗತ್ಯಗಳನ್ನು ಸಮಯೋಚಿತವಾಗಿ ಪೂರೈಸಲು ಅಮೆಜಾನ್ ಈ ಉದ್ಯೋಗಗಳನ್ನು ಸೃಷ್ಟಿಸಿದೆ. ಹಬ್ಬದ ಸಮಯದಲ್ಲಿ ಭಾರತದಾದ್ಯಂತ 1 ಲಕ್ಷಕ್ಕೂ ಹೆಚ್ಚು ಉದ್ಯೋಗಾವಕಾಶಗಳನ್ನು ಸೃಷ್ಟಿಸುವ ಅಮೆಜಾನ್ ನ ಕ್ರಮ ಶ್ಲಾಘನೀಯ ಎಂದು ಕೇಂದ್ರ ಕಾರ್ಮಿಕ ಮತ್ತು ಉದ್ಯೋಗ ಸಚಿವ ‘ಮನ್ಸುಖ್ ಮಾಂಡವಿಯಾ’ ಹೇಳಿದ್ದಾರೆ. ಪ್ರಾಜೆಕ್ಟ್ ಆಶ್ರಯ್ ಅಮೆಜಾನ್ ಇಂಡಿಯಾ ಕೂಡ ಪ್ರಾಜೆಕ್ಟ್ ಆಶ್ರೇಯಂತಹ ಉಪಕ್ರಮಗಳನ್ನು ಪರಿಚಯಿಸಿದೆ. ಇದು ನಗರಗಳಲ್ಲಿ ಡೆಲಿವರಿ ಅಸೋಸಿಯೇಟ್ಗಳಿಗಾಗಿ…
ಬೆಂಗಳೂರು : ಕಾಲಕಾಲಕ್ಕೆ ಉದ್ಯೋಗ ಮೇಳವನ್ನು ಆಯೋಜಿಸುವ ಮೂಲಕ 2025 ರ ಅಕ್ಟೋಬರ್ 02 ರೊಳಗೆ ಜಿಲ್ಲೆಯ ಪ್ರತಿಯೊಂದು ಕುಟುಂಬದ ಒಬ್ಬರಿಗೆ ಉದ್ಯೋಗ ಸಿಗುವಂತೆ ಮಾಡುವುದು ನನ್ನ ಗುರಿ ಎಂದು ಆಹಾರ ನಾಗರಿಕ ಸರಬರಾಜು ಹಾಗೂ ಗ್ರಾಹಕರ ವ್ಯವಹಾರಗಳ ಸಚಿವರು ಮತ್ತು ಬೆಂಗಳೂರು ಗ್ರಾಮಾಂತರ ಜಿಲ್ಲಾ ಉಸ್ತುವಾರಿ ಸಚಿವರಾದ ಕೆ.ಎಚ್ ಮುನಿಯಪ್ಪ ಅವರು ಹೇಳಿದರು. ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಕೌಶಲ್ಯ ಮಿಷನ್, ಜಿಲ್ಲಾ ಕೈಗಾರಿಕೆ ಕೇಂದ್ರ ಸಹಯೋಗದಲ್ಲಿ ದೇವನಹಳ್ಳಿ ಟೌನ್ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಆಯೋಜಿಸಲಾಗಿದ್ದ, ಜಿಲ್ಲಾ ಮಟ್ಟದ ಬೃಹತ್ ಉದ್ಯೋಗ ಮೇಳವನ್ನು ಉದ್ದೇಶಿಸಿ ಅವರು ಮಾತನಾಡಿದರು. ಜಿಲ್ಲೆಯಲ್ಲಿ 101 ಗ್ರಾಮ ಪಂಚಾಯಿತಿಗಳಿದ್ದು, ಸುಮಾರು 2 ಲಕ್ಷ ಕುಟುಂಬಗಳಿವೆ. ಪ್ರತಿ ಕುಟುಂಬದ ಒಬ್ಬರಿಗೆ ಉದ್ಯೋಗ ಕಲ್ಪಿಸಿಕೊಡುವ ಗುರಿ ಹೊಂದಲಾಗಿದೆ. ಈ ನಿಟ್ಟಿನಲ್ಲಿ ಉದ್ಯೋಗ ಮೇಳ ಅಯೋಜಿಸಲಾಗಿದ್ದು, ಇಂದು ಆರಂಭ, ಮುಂದಿನ ದಿನಗಳಲ್ಲಿ ಕಾಲಕಾಲಕ್ಕೆ ಉದ್ಯೋಗ ಮೇಳ ಆಯೋಜಿಸಿ ಮನೆ ಮನೆಗೆ ಉದ್ಯೋಗ ಕಲ್ಪಿಸಿಕೊಡಲಾಗುವುದು ಎಂದು ಸಚಿವರು ಹೇಳಿದರು. ಕಂಪನಿಗಳು…
ಬೆಂಗಳೂರು: ರಾಜ್ಯದಲ್ಲಿ ಎಚ್ಎಸ್ಆರ್ಪಿ ಅಳವಡಿಸಲು ಸೆಪ್ಟೆಂಬರ್ 15ರವರೆಗೆ ಅವಕಾಶ ನೀಡಲಾಗಿದೆ. HSRP ಗಳನ್ನು ಪಡೆಯದ ವಾಹನ ಮಾಲೀಕರು ಸೆ.16 ರಿಂದ ದಂಡವನ್ನು ಪಾವತಿಸಬೇಕಾಗಬಹುದು ಅಥವಾ ಇತರ ದಂಡದ ಕ್ರಮವನ್ನು ಎದುರಿಸಬೇಕಾಗುತ್ತದೆ. 2019ರ ಏಪ್ರಿಲ್ 1ರ ಮೊದಲು ರಾಜ್ಯದಲ್ಲಿ ನೋಂದಣಿಯಾಗಿರುವ ಎಲ್ಲ ವಾಹನಗಳಿಗೆ ಎಚ್ಎಸ್ಆರ್ಪಿ ಅಳವಡಿಸುವುದನ್ನು ಕಡ್ಡಾಯಗೊಳಿಸಿ ಸಾರಿಗೆ ಇಲಾಖೆ ಕಳೆದ ವರ್ಷ ಆಗಸ್ಟ್ನಲ್ಲಿ ಅಧಿಸೂಚನೆ ಹೊರಡಿಸಿತ್ತು. ಹಳೇ ವಾಹನಗಳಿಗೆ ಅತಿ ಸುರಕ್ಷಿತ ನೋಂದಣಿ ಫಲಕ (ಎಚ್ಎಸ್ಆರ್ಪಿ) ಅಳವಡಿಸಲು ಸೆಪ್ಟೆಂಬರ್ 15ರ ವರೆಗೆ ಗಡುವು ನೀಡಲಾಗಿದೆ. 2019ರ ಏಪ್ರಿಲ್ 1ಕ್ಕಿಂತ ಹಿಂದಿನ ವಾಹನಗಳು ಎಚ್ಎಸ್ಆರ್ಪಿ ಅಳವಡಿಸಿಕೊಳ್ಳಬಹುದು. https://transport.karnataka.gov.in/english ಆನ್ಲೈನ್ ಮೂಲಕವೂ ನೋಂದಣಿಗೆ ಅವಕಾಶ ನೀಡಲಾಗಿದೆ. ಪೊಲೀಸ್ ಇಲಾಖೆ ಜೊತೆಗೂಡಿ ಎಚ್ ಎಸ್ ಆರ್ ಪಿ ನಂಬರ್ ಪ್ಲೇಟ್ ಇಲ್ಲದ ವಾಹನಗಳಿಗೆ ದಂಡ ವಿಧಿಸಲು ನಿರ್ಧರಿಸಲಾಗಿದೆ. ಅವಧಿಯೊಳಗೆ ಎಚ್ ಎಸ್ ಆರ್ ಪಿ ನಂಬರ್ ಪ್ಲೇಟ್ ಅಳವಡಿಸದಿದ್ದರೆ 500 ರೂ.ನಿಂದ 1,000 ರೂ.ವರೆಗೆ ದಂಡ ವಿಧಿಸಲಿದೆ ಎಂದು ಹೇಳಲಾಗಿದೆ. ಆನ್ಲೈನ್ ಮೂಲಕ ಅಳವಡಿಕೆ ಹೇಗೆ?…
ಬೆಂಗಳೂರು : ಉಚಿತ ಹೊಲಿಗೆ ಯಂತ್ರ ಸೇರಿದಂತೆ ವಿವಿಧ ಅಭಿವೃದ್ಧಿ ನಿಗಮದ ಸಾಲ ಸೌಲಭ್ಯಗಳ ಅರ್ಜಿಗಳನ್ನು ಸಲ್ಲಿಸಲು ಸೆಪ್ಟೆಂಬರ್ 15 ರ ನಾಳೆ ಕೊನೆಯ ದಿನವಾಗಿದ್ದು, ಆಸಕ್ತರು ಅರ್ಜಿ ಸಲ್ಲಿಸಿ ಸರ್ಕಾರದ ಸೌಲಭ್ಯಗಳನ್ನು ಪಡೆಯಬಹುದು. ಸ್ವಯಂ ಉದ್ಯೋಗ ವೈಯಕ್ತಿಕ ಸಾಲ ಯೋಜನೆ, ಗಂಗಾ ಕಲ್ಯಾಣ ನೀರಾವರಿ ಯೋಜನೆ, ಅರಿವು-ಶೈಕ್ಷಣಿಕ ಸಾಲ ಯೋಜನೆ, ವಿದೇಶಿ ವಿಶ್ವವಿದ್ಯಾಲಯಗಳಲ್ಲಿ ಉನ್ನತ ವ್ಯಾಸಂಗಕ್ಕೆ ಸಾಲ ಯೋಜನೆ, ಸ್ವಾವಲಂಬಿ ಸಾರಥಿ ಯೋಜನೆ, ಸ್ವಯಂ ಉದ್ಯೋಗ ಸಾಲ ಯೋಜನೆ (ವಾಣಿಜ್ಯ ಬ್ಯಾಂಕುಗಳ ಸಹಯೋಗದೊಂದಿಗೆ), ಸ್ವಾತಂತ್ರ್ಯ ಅಮೃತ ಮಹೋತ್ಸವದ ಮುನ್ನಡೆ ಯೋಜನೆ, ಹೊಲಿಗೆ ಯಂತ್ರ ವಿತರಣೆ ಯೋಜನೆ ಈ ಯೋಜನೆಗಳಿಗೆ ಸೇವಾ ಸಿಂಧು ತಂತ್ರಾಂಶದ ಮುಖಾಂತರ ಆನ್ಲೈನ್ ಮೂಲಕ ಅಜರ್ಿ ಆಹ್ವಾನಿಸಲಾಗಿದೆ. ಈ ಎಲ್ಲಾ ಯೋಜನೆಗಳು ಅಲ್ಪಸಂಖ್ಯಾತರು, ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ, ವಿಶ್ವಕರ್ಮ, ಉಪ್ಪಾರ, ಅಂಬಿಗ, ಸವಿತಾ, ಮಡಿವಾಳ, ಅಲೆಮಾರಿ ಮತ್ತು ಅರೆ ಅಲೆಮಾರಿ ಸಮುದಾಯ, ಒಕ್ಕಲಿಗ, ಲಿಂಗಾಯತ, ಕಾಡುಗೊಲ್ಲ, ಹಟ್ಟಿಗೊಲ್ಲ, ಮರಾಠ, ಮತ್ತು ಇದರ ಉಪ ಸಮುದಾಯಗಳು ಹೊರತುಪಡಿಸಿ…
ಬೆಂಗಳೂರು : ರೈತರಿಗೆ ಸರ್ಕಾರವು ಸಿಹಿಸುದ್ದಿಯೊಂದನ್ನು ನೀಡಿದ್ದು, ಕಿಸಾನ್ ಕ್ರೆಡಿಟ್ ಕಾರ್ಡ್ ವಿತರಣಾ ಕಾರ್ಯಕ್ರಮದಡಿ ದನ, ಎಮ್ಮೆ, ಕುರಿ, ಮೇಕೆ ಹಾಗೂ ಕೋಳಿ ಸಾಕಾಣಿಕೆ ನಿರ್ವಹಣೆಗೆ ಕಡಿಮೆ ಬಡ್ಡಿ ದರದಲ್ಲಿ ಸಾಲ ಸೌಲಭ್ಯಕ್ಕೆ ಅರ್ಜಿ ಆಹ್ವಾನಿಸಲಾಗಿದೆ. ಪಶು ಪಾಲನಾ ಮತ್ತು ಪಶು ವೈದ್ಯಕೀಯ ಸೇವಾ ಇಲಾಖೆ ವತಿಯಿಂದ 2024-25ನೇ ಸಾಲಿನ ಕಿಸಾನ್ ಕ್ರೆಡಿಟ್ ಕಾರ್ಡ್ ವಿತರಣಾ ಕಾರ್ಯಕ್ರಮದಡಿ ದನ, ಎಮ್ಮೆ, ಕುರಿ, ಮೇಕೆ, ಹಂದಿ ಹಾಗೂ ಕೋಳಿ ಸಾಕಾಣಿಕೆ ನಿರ್ವಹಣೆಗೆ ಕಡಿಮೆ ಬಡ್ಡಿ ದರದಲ್ಲಿ ಸಾಲ ಸೌಲಭ್ಯ ಪಡೆಯಲು ಆಸಕ್ತಿ ಹೊಂದಿರುವ ರೈತರಿಂದ ಅರ್ಜಿ ಆಹ್ವಾನಿಸಲಾಗಿದೆ. ಈ ಕಾರ್ಯಕ್ರಮದಡಿ ಸಾಲ ಸೌಲಭ್ಯವು 2024 ಸೆಪ್ಟಂಬರ್ 15 ರಿಂದ 2025 ಮಾರ್ಚ್ 31 ರವರಗೆ ಮುಂದುವರೆಸಲಾಗುವುದು. ಆಸಕ್ತ ರೈತರು ತಮ್ಮ ಹತ್ತಿರದ ಪಶು ವೈದ್ಯಕೀಯ ಸಂಸ್ಥೆಗಳಿAದ ಅರ್ಜಿಗಳನ್ನು ಪಡೆದು ಭರ್ತಿಮಾಡಿ ಸಲ್ಲಿಸಲು ಸೂಚಿಸಲಾಗಿದೆ. ಹೆಚ್ಚಿನ ಮಾಹಿತಿಗಾಗಿ ಚಿತ್ರದುರ್ಗ-9482943111, ಚಳ್ಳಕೆರೆ-9448816499, ಹೊಳಲ್ಕೆರೆ- 9972965479, ಹೊಸದುರ್ಗ- 9945298407, ಹಿರಿಯೂರು-9483451044, ಮೊಳಕಾಲ್ಮೂರು- 9900964820 ಗೆ ಸಂಪರ್ಕಿಸಬಹುದು ಎಂದು…
ಬೆಂಗಳೂರು : 2024-25ನೇ ಸಾಲಿನಲ್ಲಿ ರಾಜ್ಯ ಸರಕಾರವು ಮಧ್ಯಾಹ್ನ ಉಪಹಾರ ಯೋಜನೆಯಡಿ ಅಜಿಂ ಪ್ರೇಮ್ಜಿ ಫೌಂಡೇಶನ್, ಬೆಂಗಳೂರು ಇವರ ಅನುದಾನದ ಸಹಭಾಗಿತ್ವದಲ್ಲಿ ರಾಜ್ಯದ ಎಲ್ಲಾ ಸರ್ಕಾರಿ ಮತ್ತು ಅನುದಾನಿತ 1 ರಿಂದ 10ನೇ ತರಗತಿಗಳಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳಿಗೆ (ಈಗಾಗಲೇ ವಾರದಲ್ಲಿ ಎರಡು ದಿನ ನೀಡಲಾಗುತ್ತಿರುವ ಪೂರಕ ಪೌಷ್ಠಿಕ ಆಹಾರದ ಹೊರತಾಗಿ) ವಾರದ ಎಲ್ಲಾ ಆರು ದಿನಗಳಲ್ಲಿ ಪೂರಕ ಪೌಷ್ಠಿಕ ಆಹಾರವನ್ನು ವಿತರಿಸುವ ಕಾರ್ಯಕ್ರಮವನ್ನು ಅನುಷ್ಠಾನ ಮಾಡುವ ಸಂಬಂಧ ಮಾರ್ಗಸೂಚಿ ಪ್ರಕಟಿಸಲಾಗಿದೆ. ರಾಜ್ಯ ಸರ್ಕಾರದ ಶೇಕಡಾ 100ರ ಆರ್ಥಿಕ ಅನುದಾನದ ನೆರವಿನಿಂದ ರಾಜ್ಯದಲ್ಲಿ ಎಲ್ಲಾ ಸರ್ಕಾರಿ ಮತ್ತು ಅನುದಾನಿತ ಪ್ರಾಥಮಿಕ ಮತ್ತು ಪ್ರೌಢಶಾಲೆಗಳಲ್ಲಿ 1 ರಿಂದ 10ನೇ ತರಗತಿಗಳಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳಿಗೆ ಅಪೌಷ್ಟಿಕತೆ ಮತ್ತು ರಕ್ತ ಹೀನತೆ ನಿವಾರಿಸಲು ಮಧ್ಯಾಹ್ನದ ಬಿಸಿಯೂಟದೊಂದಿಗೆ ವಾರಕ್ಕೆ 2 ದಿನಗಳಂದು ಪೂರಕ ಪೌಷ್ಠಿಕ ಆಹಾರವಾಗಿ ಮೊಟ್ಟೆ, ಮೊಟ್ಟೆಯನ್ನು ಸ್ವೀಕರಿಸದೇ ಇರುವ ವಿದ್ಯಾರ್ಥಿಗಳಿಗೆ ಬಾಳೆಹಣ್ಣು ಅಥವಾ ಶೇಂಗಾ ಚಿಕ್ಕಿಯನ್ನು ವಿತರಿಸುವ ಕಾರ್ಯಕ್ರಮವನ್ನು ಯಶಸ್ವಿಯಾಗಿ ಉಲ್ಲೇಖ-1 ಮತ್ತು…
ಬೆಂಗಳೂರು : ರಾಷ್ಟ್ರೀಯ ಕಾನೂನು ಸೇವೆಗಳ ಪ್ರಾಧಿಕಾರ ಮತ್ತು ಕರ್ನಾಟಕ ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರದ ನಿರ್ದೇಶನದಂತೆ ಸೆಪ್ಟೆಂಬರ್, 14 ರ ಇಂದು ರಾಜ್ಯದಾದ್ಯಂತ ರಾಷ್ಟ್ರೀಯ ಲೋಕ ಅದಾಲತ್ ನಡೆಯಲಿದೆ. ಅದರಂತೆ ಪಿರ್ಯಾದಿದಾರರು ಮತ್ತು ಆರೋಪಿತರು ನ್ಯಾಯಾಲಯದಲ್ಲಿ ಬಾಕಿ ಇರುವ ತಮ್ಮ ನಡುವಿನ ಸಿವಿಲ್ ಪ್ರಕರಣಗಳು, ರಾಜಿ ಆಗಬಹುದಾದ ಅಪರಾಧಿಕ ಪ್ರಕರಣ, ವ್ಯಾಜ್ಯ ಪೂರ್ವ ಪ್ರಕರಣವನ್ನು ರಾಜಿ ಸಂಧಾನದ ಮೂಲಕ ಇತ್ಯರ್ಥಪಡಿಸಿಕೊಳ್ಳಬಹುದು. ವ್ಯಾಜ್ಯ ಪೂರ್ವ ಪ್ರಕರಣಗಳು ಚೆಕ್ ಅಮಾನ್ಯದ ಪ್ರಕರಣಗಳು, ಬ್ಯಾಂಕ್ ವಸೂಲಾತಿ ಪ್ರಕರಣಗಳು, ಉದ್ಯೋಗದಲ್ಲಿ ಪುನರ್ ಸ್ಥಾಪಿಸಲ್ಪಡುವ ಪ್ರಕರಣಗಳು, ವಿದ್ಯುತ್ ಹಾಗೂ ನೀರಿನ ಶುಲ್ಕಗಳು, ಇತರೆ ಪ್ರಕರಣಗಳು (ರಾಜೀಯಾಗಬಲ್ಲ ಅಪರಾಧಿಕ ಪ್ರಕರಣಗಳು, ವೈವಾಹಿಕ ಪ್ರಕರಣಗಳು ಮತ್ತು ಇತರೆ ಸಿವಿಲ್ ಪ್ರಕರಣಗಳು ಮತ್ತಿತರ), ಕರ್ನಾಟಕ ರಿಯಲ್ ಎಸ್ಟೇಟ್ ಪ್ರಾಧಿಕಾರಕ್ಕೆ ಸಂಬಂಧಪಟ್ಟ ಪ್ರಕರಣಗಳು, ಜಿಲ್ಲಾ ಗ್ರಾಹಕರ ವೇದಿಕೆಯಲ್ಲಿನ ಪ್ರಕರಣಗಳು, ಸಾಲ ವಸೂಲಾತಿ ನ್ಯಾಯಾಧೀಕರಣದ ಪ್ರಕರಣಗಳು, ಕರ್ನಾಟಕ ವಿದ್ಯುತ್ ನಿಯಂತ್ರಣ ಆಯೋಗ, ಖಾಯಂ ಜನತಾ ನ್ಯಾಯಾಲಯದಲ್ಲಿನ ಪ್ರಕರಣಗಳು. ನ್ಯಾಯಾಲಯದಲ್ಲಿ ಬಾಕಿ ಇರುವ ಪ್ರಕರಣಗಳು ರಾಜಿಯಾಗಬಲ್ಲ…
ಬೆಂಗಳೂರು : 2024 ನೇ ಸಾಲಿನ ಎಸ್ ಎಸ್ ಎಲ್ ಸಿ ಸಂಕಲನಾತ್ಮಕ ಮೌಲ್ಯಮಾಪನ-1 ಪರೀಕ್ಷೆಯನ್ನು ಸೆ.24 ರಿಂದ ಅ.1 ರವರೆಗೆ ನಡೆಸಲು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ವೇಳಾಪಟ್ಟಿ ಪ್ರಕಟಿಸಿದೆ. 2024-25ನೇ ಸಾಲಿನಲ್ಲಿ ರಾಜ್ಯ ಪಠ್ಯಕ್ರಮದಲ್ಲಿ ಹತ್ತನೇ ತರಗತಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳಿಗೆ ಸಂಕಲನಾತ್ಮಕ ಮೌಲ್ಯಮಾಪನ-ಅನ್ನು ನಡೆಸಲು ಮಂಡಲಿಯಿಂದ ಪ್ರಶ್ನೆಪತ್ರಿಕೆಗಳನ್ನು ಸಿದ್ಧಪಡಿಸಿ ನೀಡುವಂತೆ ಉಲ್ಲೇಖಿತ ಸುತ್ತೋಲೆಯಲ್ಲಿ ಸರ್ಕಾರದಿಂದ ಆದೇಶವಾಗಿರುತ್ತದೆ. ಅದರಂತೆ ಎಲ್ಲಾ ವಿಷಯಗಳಿಗೆ ಮಂಡಲಿ ಹಂತದಲ್ಲಿ ಪ್ರಶ್ನೆಪತ್ರಿಕೆಗಳನ್ನು ಸಿದ್ಧಪಡಿಸಲಾಗಿದ್ದು, ಪ್ರಶ್ನೆಪತ್ರಿಕೆಗಳ ಸಾಫ್ಟ್ ಪ್ರತಿಯನ್ನು ಕ್ಷೇತ್ರ ಶಿಕ್ಷಣಾಧಿಕಾರಿಗಳ ಲಾಗಿನ್ಗೆ ಲಭ್ಯಗೊಳಿಸಲಾಗುವುದು. ಅದರಂತೆ 2024-25ನೇ ಸಾಲಿನ ಎಸ್.ಎಸ್.ಎಲ್.ಸಿ. ಸಂಕಲನಾತ್ಮಕ ಮೌಲ್ಯಮಾಪನ-1ನ್ನು ದಿನಾಂಕ: 24.09.2024 ರಿಂದ 01.10.2024 ರವರೆಗೆ ನಡೆಸಲು ವೇಳಾಪಟ್ಟಿಯನ್ನು ಪ್ರಕಟಿಸಿದೆ. ಸದರಿ ಪರೀಕ್ಷೆಯನ್ನು ಆಯಾ ಶಾಲಾ ಹಂತದಲ್ಲಿ ವ್ಯವಸ್ಥಿತವಾಗಿ ನಡೆಸಲು ಸೂಕ್ತ ಕ್ರಮವಹಿಸಲು ತಿಳಿಸಿದೆ. ಇಲ್ಲಿದೆ `ಸಂಕಲನಾತ್ಮಕ ಮೌಲ್ಯಮಾಪನ-1 ಪರೀಕ್ಷೆ’ ವೇಳಾಪಟ್ಟಿ ಸೆ.24- ಪ್ರಥಮ ಭಾಷ (ಕನ್ನಡ, ಹಿಂದಿ, ಇಂಗ್ಲಿಷ್) ಸೆ.25- ದ್ವಿತೀಯ ಭಾಷ (ಇಂಗ್ಲಿಷ್, ಹಿಂದಿ) ಜೊತೆಗೆ…