Author: kannadanewsnow57

ಬೆಂಗಳೂರು : ಅಲೆಮಾರಿ ಸಮುದಾಯಗಳಿಗೆ ಸಾಮಾಜಿಕ ನ್ಯಾಯ ಕಲ್ಪಿಸಲು ಸರ್ಕಾರ ಬದ್ಧವಾಗಿದ್ದು, ಶೇಕಡ 1ರಷ್ಟು ಮೀಸಲಾತಿಯನ್ನು ಯಾವ ರೀತಿಯಲ್ಲಿ ಕಲ್ಪಿಸಬಹುದು ಎಂಬ ಬಗ್ಗೆ ಪರಿಶೀಲಿಸಿ ಕ್ರಮ ತೆಗೆದುಕೊಳ್ಳಲಾಗುವುದು ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದ್ದಾರೆ. ಒಳ‌ಮೀಸಲಾತಿಗೆ ಸಂಬಂಧಿಸಿದಂತೆ ಅಲೆಮಾರಿ ಒಕ್ಕೂಟದ ಪದಾಧಿಕಾರಿಗಳ ನಿಯೋಗದ ಜೊತೆಗಿನ ಸಭೆಯ ಬಳಿಕ ಮಾತನಾಡಿದ ಸಿಎಂ ಸಿದ್ದರಾಮಯ್ಯ, ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಸುಧಾರಣೆಗೆ ಎಸ್‌ಸಿಪಿ /ಟಿಎಸ್‌ಪಿ ಕಾರ್ಯ ಕ್ರಮಗಳನ್ನು ಜಾರಿಗೊಳಿಸಿದ್ದೇ ನಮ್ಮ ಸರ್ಕಾರ. ಪ್ರತಿಯೊಬ್ಬರಿಗೂ ನ್ಯಾಯ ಸಿಗಲಿ ಎನ್ನುವುದೇ ಸರ್ಕಾರದ ಉದ್ದೇಶ. ಯಾವುದೇ ಜಾತಿಯೊಳಗೆ ಇನ್ನೊಂದನ್ನು ಸೇರಿಸುವ, ಯಾವುದೇ ಸಮುದಾಯಕ್ಕೆ ಅನ್ಯಾಯ ಮಾಡುವ ಉದ್ದೇಶ ಸರ್ಕಾರಕ್ಕಿಲ್ಲ. ಇದಕ್ಕೊಂದು ಪರಿಹಾರ ಹುಡುಕಿ, ನ್ಯಾಯ ಒದಗಿಸುತ್ತೇವೆ ಎಂದರು. ಒಳಮೀಸಲಾತಿ ಕಲ್ಪಿಸಲು ಸರ್ಕಾರ ಪ್ರಾಮಾಣಿಕ ಪ್ರಯತ್ನ ಮಾಡಿದೆ. ಈಗ ಉಂಟಾಗಿರುವ ಗೊಂದಲಗಳಿಗೂ ಆದ್ಯತೆ ಮೇರೆಗೆ ಪರಿಹಾರ ಕಂಡುಕೊಳ್ಳಲು ಸರ್ಕಾರ ಬದ್ಧವಾಗಿದೆ ಎಂದು ಹೇಳಿದ್ದಾರೆ. https://twitter.com/CMofKarnataka/status/1984191659416989947

Read More

ಕಲಬುರಗಿ : ಕಲಬುರಗಿ, ವಿಜಯಪುರ ಜಿಲ್ಲೆಗಳಲ್ಲಿ ಭೂಕಂಪನವಾಗಿದ್ದು ಜನರು ಬೆಚ್ಚಿ ಬಿದ್ದಿದ್ದಾರೆ. ಕಲಬುರಗಿ ಜಿಲ್ಲೆಯಲ್ಲಿ ಒಂದೇ ದಿನ ನಾಲ್ಕು ಬಾರಿ ಭೂಕಂಪನವಾಗಿದ್ದು, ಚಿಂಚೋಳಿ ತಾಲೂಕಿನ ಐನಾಪುರ, ಗಡಿನಿಂಗದಹಳ್ಳಿ, ಸೊಂತ, ಪಟವಾದ ಗ್ರಾಮದಲ್ಲಿ ನಾಲ್ಕು ಬಾರಿ ಭೂಮಿ ಕಂಪಿಸಿದೆ. ನಸುಕಿನ ಜಾವ, ಮಧ್ಯಾಹ್ನ, ಸಂಜೆ ಭೂಮಿ ಕಂಪಿಸಿದೆ. ಪದೇ ಪದೇ ಭೂಕಂಪನ ಹಿನ್ನೆಲೆಯಲ್ಲಿ ಗ್ರಾಮಸ್ಥರಲ್ಲಿ ಆತಂಕ ಹೆಚ್ಚಾಗಿದೆ. ವಿಜಯಪುರ ಜಿಲ್ಲೆಯಲ್ಲೂ ಭೂಕಂಪನದ ಅನುಭವವಾಗಿದೆ. ವಿಜಯಪುರ ಸುತ್ತಮುತ್ತ ರಾತ್ರಿ 10 ಗಂಟೆ 5 ನಿಮಿಷದ ಸುಮಾರಿಗೆ ಎರಡು ಬಾರಿ ಭೂಮಿ ಕಂಪಿಸಿದೆ. ಎರಡು ತಿಂಗಳಲ್ಲಿ ಬರೋಬ್ಬರಿ 12 ಬಾರಿ ಭೂಮಿ ಕಂಪಿಸಿದೆ. ಭೂಕಂಪನಕ್ಕೆ ಜನರಲ್ಲಿ ಆತಂಕ ಮನೆ ಮಾಡಿದೆ.

Read More

ನವದೆಹಲಿ: ಅಂತರರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕಚ್ಚಾ ತೈಲ ಬೆಲೆಗಳು ಪ್ರಸ್ತುತ ಕಡಿಮೆಯಾಗಿದೆ. ಪರಿಣಾಮವಾಗಿ, ಅದರ ಉಪ ಉತ್ಪನ್ನವಾದ ದ್ರವೀಕೃತ ಪೆಟ್ರೋಲಿಯಂ ಅನಿಲದ (LPG) ಬೆಲೆಗಳು ಸಹ ಕಡಿಮೆಯಾಗುತ್ತಿವೆ. ಇದಕ್ಕಾಗಿಯೇ ಭಾರತದ ಸರ್ಕಾರಿ ಸ್ವಾಮ್ಯದ ತೈಲ ಮಾರುಕಟ್ಟೆ ಕಂಪನಿಗಳು (IOC, HPCL, ಮತ್ತು BPCL) LPG ಸಿಲಿಂಡರ್‌ಗಳ ಬೆಲೆಗಳನ್ನು ಸ್ವಲ್ಪ ಕಡಿಮೆ ಮಾಡಿವೆ. ಹೌದು, ಈ ಕಂಪನಿಗಳು 19 ಕೆಜಿ ವಾಣಿಜ್ಯ LPG ಸಿಲಿಂಡರ್‌ನ ಬೆಲೆಯನ್ನು ಕೇವಲ ಐದು ರೂಪಾಯಿಗಳಷ್ಟು ಕಡಿಮೆ ಮಾಡಿವೆ. ಹೊಸ ಬೆಲೆ ಇಂದು, ನವೆಂಬರ್ 1, 2025 ರಂದು ಜಾರಿಗೆ ಬಂದಿದೆ. ಇದಕ್ಕೂ ಮೊದಲು, ಅಕ್ಟೋಬರ್‌ನಲ್ಲಿ, ಬೆಲೆಯನ್ನು 15.50 ರೂಪಾಯಿಗಳಷ್ಟು ಹೆಚ್ಚಿಸಲಾಗಿತ್ತು. ಈ ಕಂಪನಿಗಳು ಪ್ರತಿ ತಿಂಗಳ ಮೊದಲ ದಿನದಂದು LPG ಸಿಲಿಂಡರ್‌ಗಳ ಬೆಲೆಗಳನ್ನು ಪರಿಶೀಲಿಸುತ್ತವೆ ಎಂಬುದು ಗಮನಿಸಬೇಕಾದ ಸಂಗತಿ. ಸರ್ಕಾರಿ ಸ್ವಾಮ್ಯದ ಇಂಡಿಯನ್ ಆಯಿಲ್ ಕಾರ್ಪೊರೇಷನ್ (IOC) ವೆಬ್‌ಸೈಟ್‌ನ ಮಾಹಿತಿಯ ಪ್ರಕಾರ, ದೆಹಲಿಯಲ್ಲಿ 19 ಕೆಜಿ ವಾಣಿಜ್ಯ LPG ಸಿಲಿಂಡರ್‌ನ ಬೆಲೆಯನ್ನು 5 ರೂಪಾಯಿಗಳಷ್ಟು ಕಡಿಮೆ ಮಾಡಲಾಗಿದೆ. ದೆಹಲಿಯಲ್ಲಿ…

Read More

ಬೆಂಗಳೂರು: ರಾಜ್ಯಾಧ್ಯಂತ ಎಲ್ಲಾ ಸರ್ಕಾರಿ ಸಭೆ, ಸಮಾರಂಭ, ಕಾರ್ಯಕ್ರಮಗಳಲ್ಲಿ ಪ್ಲಾಸ್ಟಿಕ್ ನೀರಿನ ಬಾಟಲ್ ಬಳಸದಂತೆ ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರು ಖಡಕ್ ಆದೇಶ ಹೊರಡಿಸಿದ್ದಾರೆ. ಈ ಕುರಿತಂತೆ ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿಯವರಿಗೆ ಟಿಪ್ಪಣಿ ಆದೇಶ ಹೊರಡಿಸಿರುವಂತ ಅವರು, ರಾಜ್ಯಾದ್ಯಂತ ಎಲ್ಲಾ ಸರ್ಕಾರಿ ಕಛೇರಿಗಳಲ್ಲಿ ಹಾಗೂ ಸರ್ಕಾರಿ ಸಭೆ ಸಮಾರಂಭಗಳಲ್ಲಿ ಕುಡಿಯುವ ನೀರಿನ ಪ್ಲಾಸ್ಟಿಕ್‌ ಬಾಟಲ್‌ಗಳ ಬದಲಾಗಿ ಪರಿಸರ ಸ್ನೇಹಿ ವಸ್ತುಗಳಿಂದ ತಯಾರಿಸಿದ ಪರಿಕರಗಳನ್ನು ಬಳಕೆ ಮಾಡುವಂತೆ ಸೂಚನೆಗಳನ್ನು ನೀಡಲಾಗಿತ್ತು. ಈ ಕ್ರಮವನ್ನು ಕಟ್ಟುನಿಟ್ಟಾಗಿ ಪಾಲಿಸಲು ಅಗತ್ಯ ಕ್ರಮ ಕೈಗೊಳ್ಳುವುದು ಎಂದು ಸೂಚಿಸಿದ್ದಾರೆ. ಮಾನ್ಯ ಮುಖ್ಯಮಂತ್ರಿಗಳು ಮತ್ತು ಇಲಾಖಾ ಸಚಿವರುಗಳ ಸಭೆಗಳಲ್ಲಿ ಸಚಿವಾಲಯವೂ ಸೇರಿದಂತೆ ರಾಜ್ಯಾದ್ಯಂತ ಎಲ್ಲಾ ಸರ್ಕಾರಿ ಕಚೇರಿಗಳ ಸಭೆ/ಕಾರ್ಯಕ್ರಮಗಳಲ್ಲಿ ಸರ್ಕಾರಿ ಸ್ವಾಮ್ಯದ ಕೆ.ಎಂ.ಎಫ್. ನ ‘ನಂದಿನಿ’ ತಿನಿಸುಗಳನ್ನು ಕಡ್ಡಾಯವಾಗಿ ಬಳಸುವಂತೆ ಎಲ್ಲಾ ಇಲಾಖಾ ಮುಖ್ಯಸ್ಥರುಗಳಿಗೆ ಅಗತ್ಯ ಸೂಚನೆಗಳನ್ನು ನೀಡಲು ಮುಖ್ಯಮಂತ್ರಿ ಸಿದ್ಧರಾಮಯ್ಯ ತಿಳಿಸಿದ್ದಾರೆ.

Read More

ಬೆಂಗಳೂರು: ರಾಜ್ಯ ಸರ್ಕಾರದಿಂದ ನಿಯಮ ಉಲ್ಲಂಘಿಸಿ ಕಟ್ಟಡ ಕಟ್ಟಿದವರಿಗೆ ಗುಡ್ ನ್ಯೂಸ್ ನೀಡಿದೆ. ಅದೇ ನಗರ ಪಾಲಿಕೆ, ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿ ಪರವಾನಗಿ ಉಲ್ಲಂಘನೆ ಮಾಡಿ ಕಟ್ಟಡ ಕಟ್ಟಿದ್ದರೂ ದಂಡವನ್ನು ಕಟ್ಟಿಸಿಕೊಂಡು ವಿನಾಯ್ತಿ ನೀಡುವುದಕ್ಕೆ ಅಸ್ತು ಎಂದಿದೆ. ಹೌದು.. ರಾಜ್ಯದ ನಗರ ಪಾಲಿಕೆ, ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿ ಪರವಾನಗಿ ಉಲ್ಲಂಘನೆ ಮಾಡಿದ ಕಟ್ಟಡಗಳಿಗೆ ವಿನಾಯ್ತಿ ನೀಡಿ ದಂಡ ಕಟ್ಟಿ, ಪರಿಷ್ಕೃತ ನಕ್ಷೆ ಪಡೆಯಲು ಸರ್ಕಾರ ಅವಕಾಶವನ್ನು ನೀಡಿದೆ. ಆದರೇ ಅದಕ್ಕಾಗಿ ನಿಯಮ ಉಲ್ಲಂಘಿಸಿ ಕಟ್ಟಡ ಕಟ್ಟಿದಂತ ಮಾಲೀಕರು ಶೇ.15ರಷ್ಟು ಮಿತಿಯೊಳಗೆ ನಿಯಮ ಉಲ್ಲಂಘಿಸಿದ್ದರೇ ಮಾತ್ರ ಈ ಆದೇಶವು ಅನ್ವಯ ಆಗಲಿದೆ. ಯಾರು ನಿಯಮ ಉಲ್ಲಂಘಿಸಿ ಸೆಟ್ ಬ್ಯಾಕ್, ಕಾರ್ ಪಾರ್ಕಿಂಗ್ ಉಲ್ಲಂಘನೆ ಮಾಡಿ ಕಟ್ಟಡ ಕಟ್ಟಿರುತ್ತಾರೋ ಅವರಿಗೆಲ್ಲ ಅನುಕೂಲ ಆಗಲಿದೆ. ಈ ಪರವಾನಿಗೆ ಉಲ್ಲಂಘಿಸಿದ ಕಟ್ಟಡಗಳಿಗೆ ವಿನಾಯಿತಿ ನೀಡಲು ಪಟ್ಟಣ ಪಂಚಾಯ್ತಿ, ಪುರಸಭೆ, ನಗರಸಭೆ ಮತ್ತು ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ಈ ಕೆಳಕಿನಂತೆ ದಂಡ ನಿಗದಿಪಡಿಸಿದೆ. ಈ ಆದೇಶವು ಶೇ.15ರಷ್ಟು ಮಿತಿಯೊಳಗೆ…

Read More

ಕನ್ನಡ ರಾಜ್ಯೋತ್ಸವದ ಅಂಗವಾಗಿ ಜಿಲ್ಲೆಯ ಎಲ್ಲಾ ಖಾಯಂ, ಅರೆ ಖಾಯಂ, ತಾತ್ಕಾಲಿಕ ಚಿತ್ರಮಂದಿರಗಳಲ್ಲಿ ಮತ್ತು ವಿಡೀಯೋ ಚಿತ್ರಮಂದಿರಗಳಲ್ಲಿ ಕಡ್ಡಾಯವಾಗಿ ನ.01 ರಿಂದ 07 ರ ವರೆಗೆ ಒಂದು ವಾರಗಳ ಕಾಲ ಕನ್ನಡ ಚಲನಚಿತ್ರಗಳನ್ನು ಜಿಲ್ಲೆಯ ಎಲ್ಲಾ ಚಲನಚಿತ್ರ ಮಂದಿರಗಳ ಮಾಲೀಕರು ಪ್ರದರ್ಶಿಸಬೇಕು ಎಂದು ಅಪರ ಜಿಲ್ಲಾಧಿಕಾರಿ ಮಹಮ್ಮದ್ ಎನ್.ಝುಬೇರ್ ಅವರು ತಿಳಿಸಿದ್ದಾರೆ. ಒಂದು ವೇಳೆ ಕನ್ನಡ ಚಲನಚಿತ್ರಗಳನ್ನು ಪ್ರದರ್ಶಿಸದೇ ಇದ್ದಲ್ಲಿ ಚಲನಚಿತ್ರ ಮಂದಿರಗಳ ಪರವಾನಿಗೆಯನ್ನು ನವೀಕರಿಸುವುದಿಲ್ಲ. ಅ.31 ಮತ್ತು ನ.01 ರಂದು ಚಿತ್ರಮಂದಿರಗಳ ಮೇಲೆ ಕಡ್ಡಾಯವಾಗಿ ದೀಪಾಂಲಕಾರ ಮಾಡಬೇಕು ಎಂದು ಅವರು ತಿಳಿಸಿದ್ದಾರೆ.

Read More

ನವದೆಹಲಿ : ನವೆಂಬರ್ 1, 2025 ರಿಂದ ದೇಶಾದ್ಯಂತ ಹಲವಾರು ಪ್ರಮುಖ ನಿಯಮಗಳು ಬದಲಾಗಲಿವೆ, ಇದು ನಿಮ್ಮ ದೈನಂದಿನ ಜೀವನದ ಮೇಲೆ ನೇರವಾಗಿ ಪರಿಣಾಮ ಬೀರುತ್ತದೆ. ಈ ಬದಲಾವಣೆಗಳಲ್ಲಿ ಆಧಾರ್ ಕಾರ್ಡ್‌ಗಳಿಂದ ಹಿಡಿದು ಬ್ಯಾಂಕಿಂಗ್, ಗ್ಯಾಸ್ ಸಿಲಿಂಡರ್‌ಗಳು ಮತ್ತು ಮ್ಯೂಚುವಲ್ ಫಂಡ್‌ಗಳವರೆಗೆ ಎಲ್ಲವೂ ಸೇರಿವೆ. ನವೆಂಬರ್‌ 1 ರಿಂದ ಬದಲಾಗಲಿವೆ ಈ ಎಲ್ಲಾ ನಿಯಮಗಳು `LPG’ ಸಿಲಿಂಡರ್ ಗಳ ಬೆಲೆ ಪ್ರತಿ ತಿಂಗಳಂತೆ, ನವೆಂಬರ್ 1 ರಂದು LPG, CNG ಮತ್ತು PNG ಬೆಲೆಗಳು ಬದಲಾಗಬಹುದು. ಅದೇ ರೀತಿ, CNG ಮತ್ತು PNG ಅನಿಲ ಬೆಲೆಗಳಿಗೂ ಹೊಂದಾಣಿಕೆಗಳನ್ನು ಮಾಡಬಹುದು. ಆಧಾರ್ ಕಾರ್ಡ್ ನವೀಕರಣ ನವೆಂಬರ್ 1 ರಿಂದ, UIDAI ಆಧಾರ್ ಕಾರ್ಡ್ ನವೀಕರಣ ನಿಯಮಗಳಲ್ಲಿ ಗಮನಾರ್ಹ ಬದಲಾವಣೆಗಳನ್ನು ಮಾಡಿದೆ. ನೀವು ಈಗ ಆಧಾರ್ ಕೇಂದ್ರಕ್ಕೆ ಭೇಟಿ ನೀಡದೆಯೇ ನಿಮ್ಮ ಹೆಸರು, ವಿಳಾಸ, ಜನ್ಮ ದಿನಾಂಕ ಮತ್ತು ಮೊಬೈಲ್ ಸಂಖ್ಯೆಯಂತಹ ಪ್ರಮುಖ ಮಾಹಿತಿಯನ್ನು ಆನ್‌ಲೈನ್‌ನಲ್ಲಿ ನವೀಕರಿಸಬಹುದು. ಫಿಂಗರ್‌ಪ್ರಿಂಟ್‌ಗಳು ಅಥವಾ ಐರಿಸ್ ಸ್ಕ್ಯಾನ್‌ಗಳಂತಹ ಬಯೋಮೆಟ್ರಿಕ್…

Read More

ಬೆಂಗಳೂರು : ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಗೆ ಬಿಗ್ ರಿಲೀಫ್ ಸಿಕ್ಕಿದ್ದು, ಮತಗಳ ಮರುಎಣಿಕೆ ಕೋರಿದ್ದ ಚುನಾವಣಾ ಆಯೋಗದ ತಕರಾರು ಅರ್ಜಿ ವಜಾ ಮಾಡಿ ಹೈಕೋರ್ಟ್ ಆದೇಶ ಹೊರಡಿಸಿದೆ. ಮತಗಳ ಮರುಎಣಿಕೆ ಕೋರಿದ್ದ ಚುನಾವಣಾ ಆಯೋಗದ ತಕರಾರು ಅರ್ಜಿಯ ವಿಚಾರಣೆ ನಡೆಸಿದ ನ್ಯಾ.ಕೆ.ಎಸ್. ಹೇಮಲೇಖಾ ಅವರಿದ್ದ ಹೈಕೋರ್ಟ್ ಪೀಠ ಚುನಾವಣಾ ಆಯೋಗದ ತಕರಾರು ಅರ್ಜಿಯನ್ನು ವಜಾ ಮಾಡಿ ಆದೇಶ ಹೊರಡಿಸಿದೆ. ದಿನೇಶ್ ಗುಂಡೂರಾವ್ ಗಾಂಧಿನಗರ ಕ್ಷೇತ್ರದಲ್ಲಿ ಕೇವಲ 105 ಮತಗಳಿಂದ ಆಯ್ಕೆಯಾಗಿದ್ದರು. ಕ್ಷೇತ್ರದ ಮತದಾರರು ಮರು ಮತ ಎಣಿಕೆಗೆ ಕೋರಿ ಅರ್ಜಿ ಸಲ್ಲಿಸಿದ್ದರು.

Read More

ಪಡಿತರ ಚೀಟಿ ಲಕ್ಷಾಂತರ ಭಾರತೀಯ ಕುಟುಂಬಗಳಿಗೆ ನಿರ್ಣಾಯಕ ದಾಖಲೆಯಾಗಿ ಉಳಿದಿದೆ. ಇದು ರಾಷ್ಟ್ರೀಯ ಆಹಾರ ಭದ್ರತಾ ಕಾಯ್ದೆ (NFSA) ಅಡಿಯಲ್ಲಿ ಗೋಧಿ ಮತ್ತು ಅಕ್ಕಿಯಂತಹ ಸಬ್ಸಿಡಿ ಧಾನ್ಯಗಳನ್ನು ಪಡೆಯಲು ಅವಕಾಶವನ್ನು ಖಚಿತಪಡಿಸುವುದಲ್ಲದೆ, ಫಲಾನುಭವಿಗಳು ವಿವಿಧ ಕಲ್ಯಾಣ ಯೋಜನೆಗಳನ್ನು ಪಡೆಯಲು ಅನುವು ಮಾಡಿಕೊಡುತ್ತದೆ. ಆದಾಗ್ಯೂ, 2025 ರಲ್ಲಿ, ಒಂದು ಸಣ್ಣ ತಪ್ಪು ಅಥವಾ ನಿರ್ಲಕ್ಷ್ಯವು ನಿಮ್ಮ ಪಡಿತರ ಚೀಟಿಯನ್ನು ರದ್ದುಗೊಳಿಸಲು ಕಾರಣವಾಗಬಹುದು, ಇದರ ಪರಿಣಾಮವಾಗಿ ಅಗತ್ಯ ಸರ್ಕಾರಿ ಸವಲತ್ತುಗಳೂ ಬಂದ್ ಆಗಬಹುದು. ಪಡಿತರ ಚೀಟಿ ರದ್ದತಿಗೆ ಸಾಮಾನ್ಯ ಕಾರಣಗಳು 1.ಇ-ಕೆವೈಸಿ ಪೂರ್ಣಗೊಳಿಸಲು ವಿಫಲತೆ ನಿಮ್ಮ ಇ-ಕೆವೈಸಿ (ನಿಮ್ಮ ಗ್ರಾಹಕರನ್ನು ಎಲೆಕ್ಟ್ರಾನಿಕ್ ತಿಳಿದುಕೊಳ್ಳಿ) ಪೂರ್ಣವಾಗಿಲ್ಲದಿದ್ದರೆ, ನಿಮ್ಮ ಪಡಿತರ ಚೀಟಿಯನ್ನು ನಿಷ್ಕ್ರಿಯಗೊಳಿಸಬಹುದು ಅಥವಾ ಶಾಶ್ವತವಾಗಿ ರದ್ದುಗೊಳಿಸಬಹುದು. ನಕಲಿ ಮತ್ತು ನಕಲಿ ಫಲಾನುಭವಿಗಳನ್ನು ತೆಗೆದುಹಾಕಲು ಸರ್ಕಾರ ಡಿಜಿಟಲ್ ಪರಿಶೀಲನೆಯನ್ನು ಬಳಸುತ್ತಿದೆ. 2. ಆಧಾರ್ ಪಡಿತರ ಕಾರ್ಡ್ ಲಿಂಕ್ ಆಧಾರ್ ಸೀಡಿಂಗ್ ಕಡ್ಡಾಯವಾಗಿದೆ. ನಿಮ್ಮ ಪಡಿತರ ಕಾರ್ಡ್ ಅನ್ನು ಆಧಾರ್ಗೆ ಲಿಂಕ್ ಮಾಡದಿದ್ದರೆ, ಅದನ್ನು ಗುರುತಿಸಬಹುದು ಮತ್ತು ರದ್ದುಗೊಳಿಸಬಹುದು.…

Read More

ಕಾನ್ಪುರ: ಉತ್ತರ ಪ್ರದೇಶದ ಕಾನ್ಪುರದಲ್ಲಿ ಒಂದು ವಿಚಿತ್ರ ಘಟನೆ ನಡೆದಿದೆ. ಕನಸಿಗೆ ಹೆದರಿಗೆ 11 ನೇ ತರಗತಿಯ ವಿದ್ಯಾರ್ಥಿ ನೇಣು ಬಿಗಿದುಕೊಂಡು ಸಾವನ್ನಪ್ಪಿದ್ದಾನೆ. ಕೊಹ್ನಾ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದ್ದು, ಆರವ್ ರಾಜ್ ಮಿಶ್ರಾ (16) ಎಂಬ ವಿದ್ಯಾರ್ಥಿ ಮನೆಯಲ್ಲಿ ಒಬ್ಬಂಟಿಯಾಗಿದ್ದ ಎಂದು ಪೊಲೀಸರು ತಿಳಿಸಿದ್ದಾರೆ.ಬಾಲಕನ ಕುಟುಂಬದ ಪ್ರಕಾರ, ಅವನಿಗೆ ತಿಂಗಳುಗಳಿಂದ ಪದೇ ಪದೇ ದುಃಸ್ವಪ್ನಗಳು ಬರುತ್ತಿದ್ದವು ಮತ್ತು ಅವುಗಳಿಂದಾಗಿ ಅವನು ತೊಂದರೆಗೊಳಗಾಗಿದ್ದನು. 16 ವರ್ಷದ ಆರವ್ ಕಾನ್ಪುರದ ಮನೆಯಲ್ಲಿ ಒಬ್ಬಂಟಿಯಾಗಿದ್ದ. ಆರವ್ ಆಗಾಗ್ಗೆ ವಿಚಿತ್ರ ಕನಸುಗಳು ಬೀಳುತ್ತಿದ್ದವು. ಅವನ ಕನಸಿನಲ್ಲಿ, ಅವನು ನಾಲ್ಕು ಮುಖಗಳನ್ನು ನೋಡುತ್ತಿದ್ದನು. ಈ ಮುಖಗಳು ಅವನೊಂದಿಗೆ ಮಾತನಾಡುತ್ತಿದ್ದವು. ಅವು ಅವನ ಕುಟುಂಬವನ್ನು ಕೊಲ್ಲುವಂತೆ ಎಂದು ಹೇಳುತ್ತಿದ್ದವು ಎಂದು ಡೆತ್ ನೋಟ್ ನಲ್ಲಿ ಬರೆದಿದ್ದಾನೆ. ಕಾನ್ಪುರದಲ್ಲಿ ವಾಸಿಸುತ್ತಿದ್ದ ಆರವ್ ಪೋಷಕರು ಬಿಹಾರದ ಭಾಗಲ್ಪುರಕ್ಕೆ ಪ್ರಾರ್ಥನೆ ಸಲ್ಲಿಸಲು ಹೋಗಿದ್ದರು. ಆರವ್ ಅವರ ಅಕ್ಕ ವಿಶ್ವವಿದ್ಯಾಲಯಕ್ಕೆ ಹೋಗಿದ್ದರು. ಮನೆಯಲ್ಲಿ ಒಬ್ಬಂಟಿಯಾಗಿದ್ದ ಆರವ್ ಎಲ್ಲರಿಗೂ ಆಘಾತ ನೀಡುವ ಹೆಜ್ಜೆ…

Read More