Subscribe to Updates
Get the latest creative news from FooBar about art, design and business.
Author: kannadanewsnow57
ನವದೆಹಲಿ : 2025 ರ ಕೊನೆಯ ತಿಂಗಳಲ್ಲಿ, ಹಲವಾರು ಪ್ರಮುಖ ಹಣಕಾಸು ಮತ್ತು ಆದಾಯ ತೆರಿಗೆಗೆ ಸಂಬಂಧಿಸಿದ ಗಡುವುಗಳು ಸಮೀಪಿಸುತ್ತಿವೆ. ಇವುಗಳನ್ನು ನಿರ್ಲಕ್ಷಿಸುವುದರಿಂದ ಮುಂಬರುವ ತಿಂಗಳುಗಳಲ್ಲಿ ಹೆಚ್ಚಿನ ತೊಂದರೆಗಳು ಉಂಟಾಗಬಹುದು. ಡಿಸೆಂಬರ್ 2025 ಕ್ಕೆ 5 ಪ್ರಮುಖ ಗಡುವುಗಳು ಮತ್ತು ಪ್ರಮುಖ ಬದಲಾವಣೆಗಳನ್ನು ತಿಳಿಯಿರಿ 1. ತೆರಿಗೆ ಲೆಕ್ಕಪರಿಶೋಧನೆಯೊಂದಿಗೆ ತೆರಿಗೆದಾರರಿಗೆ ಹೊಸ ಐಟಿಆರ್ ಸಲ್ಲಿಕೆ ದಿನಾಂಕ ನೇರ ತೆರಿಗೆಗಳ ಕೇಂದ್ರ ಮಂಡಳಿ (ಸಿಬಿಡಿಟಿ) ತೆರಿಗೆ ಲೆಕ್ಕಪರಿಶೋಧನೆ ಪ್ರಕರಣಗಳೊಂದಿಗೆ ತೆರಿಗೆದಾರರಿಗೆ ಐಟಿಆರ್ ಸಲ್ಲಿಕೆ ಗಡುವನ್ನು ಅಕ್ಟೋಬರ್ 31, 2025 ರಿಂದ ಡಿಸೆಂಬರ್ 10, 2025 ರವರೆಗೆ ವಿಸ್ತರಿಸಿದೆ. ಇದು ಆಡಿಟ್ ವರದಿಗಳು, ಹಣಕಾಸು ಹೇಳಿಕೆಗಳು ಮತ್ತು ಇತರ ದಾಖಲೆಗಳನ್ನು ಒಳಗೊಂಡಿರುವ ತೆರಿಗೆದಾರರಿಗೆ ಪರಿಹಾರವಾಗಿದೆ. 2. ಆಧಾರ್-ಪ್ಯಾನ್ ಲಿಂಕ್ ಮಾಡಲು ಕೊನೆಯ ದಿನಾಂಕ: ಡಿಸೆಂಬರ್ 31, 2025 ಅಕ್ಟೋಬರ್ 1, 2024 ರಂದು ಅಥವಾ ಅದಕ್ಕೂ ಮೊದಲು ಆಧಾರ್ ರಚಿಸಲಾದವರು, ಡಿಸೆಂಬರ್ 31, 2025 ರೊಳಗೆ ಅದನ್ನು ತಮ್ಮ ಪ್ಯಾನ್ ಕಾರ್ಡ್ಗೆ ಲಿಂಕ್ ಮಾಡಬೇಕು.…
ಬೆಂಗಳೂರು : ಕರ್ನಾಟಕ ರಾಜ್ಯದ ಸಾರಿಗೆ ಇಲಾಖೆಯಲ್ಲಿ 1991-92 ರಿಂದ 2019-20ರ ಅವಧಿಯಲ್ಲಿ ಮೋಟಾರು ವಾಹನ ಕಾಯಿದೆ / ನಿಯಮಗಳ ಉಲ್ಲಂಘನೆ ಸಂಬಂಧ ದಾಖಲಾಗಿ ಬಾಕಿ ಇರುವ ಡಿ.ಎಸ್.ಎ (ಇಲಾಖಾ ಶಾಸನ) ಪ್ರಕರಣಗಳ ದಂಡದ ಮೊತ್ತದಲ್ಲಿ 50% (ಶೇ.ಐವತ್ತರಷ್ಟು ಮಾತ್ರ) ರಷ್ಟು ರಿಯಾಯಿತಿ ನೀಡಿ ನವೆಂಬರ್ 21,2025 ರಿಂದ ಡಿಸೆಂಬರ್ 12, 2025ರ ವರೆಗೆ ಪ್ರಕರಣಗಳನ್ನು ಇತ್ಯರ್ಥ ಪಡಿಸಿಕೊಳ್ಳಲು ಕಲಾವಕಾಶ ನೀಡಲಾಗಿದೆ. ವಾಹನದ ಮಾಲೀಕರು ಈ ಅವಧಿಯಲ್ಲಿ ದಾಖಲಾದ ಪ್ರಕರಣಗಳಿಗೆ ಸಂಬಂಧಿಸಿದ ದಾಖಲೆಗಳೊಂದಿಗೆ ದಂಡದ ಶೇ. 50ರಷ್ಟು ಮೊತ್ತವನ್ನು ಹತ್ತಿರದ ಹಿರಿಯ ಪ್ರಾದೇಶಿಕ ಸಾರಿಗೆ / ಪ್ರಾದೇಶಿಕ ಸಾರಿಗೆ / ಸಹಾಯಕ ಪ್ರಾದೇಶಿಕ ಸಾರಿಗೆ ಕಚೇರಿಗಳಿಗೆ ಪಾವತಿಸಬಹುದಾಗಿದೆ. ಸಾರ್ವಜನಿಕರು ಈ ಅವಕಾಶವನ್ನು ಸದುಪಯೋಗ ಪಡೆದುಕೊಳ್ಳಬೇಕೆಂದು ಸಾರಿಗೆ ಮತ್ತು ರಸ್ತೆ ಸುರಕ್ಷತೆ ಆಯುಕ್ತರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ರಿಯಾಯಿತಿಯೊಂದಿಗೆ ಪಾವತಿ ಮಾಡುವ ವಿಧಾನ: 1.ಈ ಕೆಳಗಿನ ಮೊಬೈಲ್ ಆಪ್ಗಳನ್ನು ಬಳಸಿ (ಪ್ಲೇ ಸ್ಟೋರ್ ಮತ್ತು ಅಪಲ್ ಸ್ಟೋರ್ನಲ್ಲಿ ಲಭ್ಯ): ಕರ್ನಾಟಕ ರಾಜ್ಯ ಪೊಲೀಸ್ ಆಪ್…
ಬೆಳಗಾವಿ: ನಿಜಲಿಂಗಪ್ಪನವರು ಒಬ್ಬ ದಕ್ಷ ,ಪ್ರಾಮಾಣಿಕ ವ್ಯಕ್ತಿ. ಕರ್ನಾಟಕ ಕಂಡ ಅಪರೂಪದ ರಾಜಕಾರಣಿಯಾಗಿದ್ದು ಕೊನೆಯವರೆಗೂ ಪ್ರಾಮಾಣಿಕವಾಗಿ ಇದ್ದವರು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಅವರು ಇಂದು ಮಾಜಿ ಮುಖ್ಯಮಂತ್ರಿ ದಿ. ಎಸ್. ನಿಜಲಿಂಗಪ್ಪರವರ ಜನ್ಮ ದಿನದ ಅಂಗವಾಗಿ ಸುವರ್ಣಸೌಧದಲ್ಲಿರುವ ಅವರ ಭಾವಚಿತ್ರಕ್ಕೆ ಮಾಲಾರ್ಪಣೆ, ಪುಷ್ಪಾರ್ಚನೆ ಮಾಡಿ ಮಾತನಾಡಿದರು. ನಿಜಲಿಂಗಪ್ಪನವರು ಕರ್ನಾಟಕ ರಾಜ್ಯದ ಮುಖ್ಯಮಂತ್ರಿ ಹಾಗೂ ಅವಿಭಜಿತ ಕಾಂಗ್ರೆಸ್ ಪಕ್ಷದ ಎಐಸಿಸಿ ಅಧ್ಯಕ್ಷರಾಗಿದ್ದರು. ಪ್ರಧಾನಿ ಇಂದಿರಾ ಗಾಂಧಿ ಯವರೊಂದಿಗೆ ರಾಜಕೀಯ ಭಿನ್ನಾಭಿಪ್ರಾಯ ಬೆಳೆದು ಬೇರೆ ಬೇರೆ ಪಕ್ಷ ರಚಿಸಿದ್ದರು. ಭ್ರಷ್ಟಾಚಾರದ ವಿರುದ್ಧವಾಗಿದ್ದ ರಾಜಕಾರಣಿಯಾಗಿದ್ದರು ಎಂದರು. ಕರ್ನಾಟಕದ ಏಕೀಕರಣಕ್ಕೂ ಅವರು ದುಡಿದಿದವರು. ಪ್ರಾಮಾಣಿಕ, ಧೀಮಂತ ನಾಯಕನ ಆದರ್ಶಗಳು ನಮಗೆ ಮಾರ್ಗದರ್ಶಕವಾಗಿವೆ. ಮಾಜಿ ಮುಖ್ಯಮಂತ್ರಿ ಎಸ್.ನಿಜಲಿಂಗಪ್ಪನವರ ಹುಟ್ಟುಹಬ್ಬದಂದು ಸರ್ಕಾರ ಅವರನ್ನು ಸ್ಮರಿಸಿ ಗೌರವಿಸುತ್ತದೆ ಎಂದರು. ಗ್ಯಾರಂಟಿಗಳ ಬಗ್ಗೆ ಸಿ ಎಲ್. ಪಿ ಯಲ್ಲಿ ಚರ್ಚೆಯೇ ಆಗಿಲ್ಲ ಗ್ಯಾರಂಟಿ ಯೋಜನೆಗಳ ಪರಿಷ್ಕರಣೆಗೆ ಶಾಸಕರು ಮನವಿ ಮಾಡಿದರೆ ಎಂಬ ಪ್ರಶ್ನೆಗೆ ಉತ್ತರಿಸ ಗ್ಯಾರಂಟಿಗಳ ಬಗ್ಗೆ ಸಿ ಎಲ್. ಪಿ…
ಬೆಂಗಳೂರು : ಡಿಸೆಂಬರ್ 5 ರಂದು ಭಾರತೀಯ ರಿಸರ್ವ್ ಬ್ಯಾಂಕ್ ರೆಪೊ ದರವನ್ನು 25 ಬೇಸಿಸ್ ಪಾಯಿಂಟ್ಗಳಿಂದ 5.25 ಪ್ರತಿಶತಕ್ಕೆ ಇಳಿಸಿದ ನಂತರ ದೇಶದಲ್ಲಿ ಗೃಹ ಸಾಲದ ಬಡ್ಡಿದರಗಳು ಮತ್ತಷ್ಟು ಕಡಿಮೆಯಾಗುತ್ತಿವೆ. ಪ್ರಸ್ತುತ ಕಡಿಮೆ ದರ ಶೇ. 7.35. ಬ್ಯಾಂಕ್ ಆಫ್ ಮಹಾರಾಷ್ಟ್ರ, ಯೂನಿಯನ್ ಬ್ಯಾಂಕ್ ಆಫ್ ಇಂಡಿಯಾ, ಬ್ಯಾಂಕ್ ಆಫ್ ಇಂಡಿಯಾ, ಸೆಂಟ್ರಲ್ ಬ್ಯಾಂಕ್ ಆಫ್ ಇಂಡಿಯಾ, ಇಂಡಿಯನ್ ಓವರ್ಸೀಸ್ ಬ್ಯಾಂಕ್ – ಈ ಐದು ಬ್ಯಾಂಕುಗಳು ಶೇ. 7.35 ರಿಂದ ಪ್ರಾರಂಭವಾಗುವ ಗೃಹ ಸಾಲವನ್ನು ನೀಡುತ್ತಿವೆ. ಆದಾಗ್ಯೂ, ಸಿಬಿಲ್ ಸ್ಕೋರ್ 800 ಕ್ಕಿಂತ ಹೆಚ್ಚು ಹೊಂದಿರುವ ಉದ್ಯೋಗಿಗಳು, ಮಹಿಳೆಯರು ಮತ್ತು ಸರ್ಕಾರಿ ಉದ್ಯೋಗಿಗಳಿಗೆ ಇದು ಅನ್ವಯಿಸುತ್ತದೆ. ಮಹಿಳೆಯರಿಗೆ ಹೆಚ್ಚುವರಿಯಾಗಿ ಶೇ. 0.05 ರಷ್ಟು ರಿಯಾಯಿತಿ ಸಿಗುತ್ತದೆ. ಖಾಸಗಿ ವಲಯದಲ್ಲಿ, ಬಜಾಜ್ ಹೌಸಿಂಗ್ ಫೈನಾನ್ಸ್ ಶೇ. 7.40 ರಷ್ಟು ಸಾಲವನ್ನು ನೀಡುತ್ತಿದೆ. ಕೆನರಾ ಬ್ಯಾಂಕ್ ಶೇ. 7.40 ರಷ್ಟು, ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ಶೇ. 7.50 ರಷ್ಟು ಮತ್ತು…
ಚಿತ್ರದುರ್ಗ : ಚಿತ್ರದುರ್ಗದಲ್ಲಿ ರೇಣುಕಾಸ್ವಾಮಿ ಸಮಾಧಿಯನ್ನು ಧ್ವಂಸ ಮಾಡಲಾಗಿದೆ ಎಂದು ವರದಿಯಾಗಿದೆ. ಚಿತ್ರದುರ್ಗದಲ್ಲಿ ರೇಣುಕಾಸ್ವಾಮಿ ನಾಮಫಲಕ ಧ್ವಂಸ ಮಾಡಲಾಗಿದೆ. ಲೇಔಟ್ ನಿರ್ಮಾಣ ವೇಳೆ ಸಮಾಧಿಗೆ ಧಕ್ಕೆಯಾಗಿರುವ ಶಂಕೆ ವ್ಯಕ್ತವಾಗಿದೆ. ಪವಿತ್ರ ಗೌಡಗೆ ಅಶ್ಲೀಲ ಮೆಸೇಜ್ ಮಾಡಿದ್ದಾನೆ ಎಂದು ನಟ ದರ್ಶನ್ ಸೇರಿದಂತೆ ಹಲವು ಆರೋಪಿಗಳು ಬೆಂಗಳೂರಿನ ಪಟ್ಟಣಗೆರೆ ಶೆಡ್ ಗೆ ರೇಣುಕಾಸ್ವಾಮಿ ಕರೆತಂದುಕೊಲೆ ಮಾಡಿದ ಪ್ರಕರಣಕ್ಕೆ ಸಂಬಂಧಪಟ್ಟಂತೆ ಇದೀಗ ರೇಣುಕಾ ಸ್ವಾಮೀ ಸಮಾಜವನ್ನು ಧ್ವಂಸಗೊಳಿಸಲಾಗಿದೆ. ಚಿತ್ರದುರ್ಗದಲ್ಲಿ ಸಮಾಧಿಯನ್ನು ಧ್ವಂಸಗೊಳಿಸಲಾಗಿದೆ ಜೋಗಿ ಮಟ್ಟಿ ರಸ್ತೆಯಲ್ಲಿರುವ ರುದ್ರ ಭೂಮಿಯಲ್ಲಿ ರೇಣುಕಾ ಸ್ವಾಮಿ ಶವ ಸಂಸ್ಕಾರ ಮಾಡಲಾಗಿತ್ತು ಸಮಾಧಿಯ ಮೇಲೆ ನಾಮಫಲಕ ಕೂಡ ಹಾಕಲಾಗಿತ್ತು. ಜೂನ್ 8 2024 ಎಂದು ದಿನಾಂಕ ಸಹ ಹಾಕಲಾಗಿತ್ತು ಆದರೆ ಇಂದು ಬೆಳಿಗ್ಗೆ ರೇಣುಕಾ ಸ್ವಾಮಿ ಸಮಾಧಿ ಧ್ವಂಸಗೊಳಿಸಲಾಗಿದೆ ಇದಕ್ಕೆ ಕಾರಣ ಇನ್ನಷ್ಟೆ ತಿಳಿದು ಬರಬೇಕಿದೆ
ಪುರುಷರು ಮತ್ತು ಮಹಿಳೆಯರು ಇಬ್ಬರೂ ಕಾಲಿಗೆ ಕಪ್ಪು ದಾರವನ್ನು ಧರಿಸುವುದು ಬಹಳ ಹಿಂದಿನಿಂದಲೂ ಇರುವ ಪ್ರವೃತ್ತಿಯಾಗಿದೆ. ಇದನ್ನು ಫ್ಯಾಶನ್ ಎಂದು ಪರಿಗಣಿಸಲಾಗಿದೆ. ನವಜಾತ ಶಿಶುವಿನ ಕಾಲುಗಳ ಸುತ್ತ ಕಪ್ಪು ದಾರವನ್ನು ಕಟ್ಟುವ ತಾಯಂದಿರು ಮತ್ತು ಅಜ್ಜಿಯರನ್ನು ನೀವು ನೋಡಿರಬಹುದು. ಆದರೆ ಅವರು ಅದನ್ನು ಫ್ಯಾಷನ್ಗಾಗಿ ಮಾಡುವುದಿಲ್ಲ. ಕಾಲಿನ ಮೇಲಿನ ಕಪ್ಪು ದಾರವು ಮಗುವನ್ನು ನಕಾರಾತ್ಮಕತೆ ಮತ್ತು ದುಷ್ಟ ಕಣ್ಣಿನಿಂದ ರಕ್ಷಿಸುತ್ತದೆ ಎಂದು ಅವರು ನಂಬುತ್ತಾರೆ. ಕಪ್ಪು ದಾರವು ರಕ್ಷಣೆಯಾಗಿ ಕಾರ್ಯನಿರ್ವಹಿಸುತ್ತದೆ ಎಂದು ನಂಬುವವರು ಮಾತ್ರವಲ್ಲ. ಜ್ಯೋತಿಷ್ಯಶಾಸ್ತ್ರವು ಕಪ್ಪು ದಾರವನ್ನು ಪಾದದ ಮೇಲೆ ಧರಿಸುವುದರಿಂದ ಅನೇಕ ಪ್ರಯೋಜನಗಳಿವೆ ಎಂದು ನಂಬುತ್ತದೆ. ಇದಲ್ಲದೆ, ಪ್ರಾಚೀನ ಕಾಲದಿಂದಲೂ ಜನರು ತಮ್ಮ ಕಣಕಾಲುಗಳ ಮೇಲೆ ಕಪ್ಪು ದಾರಗಳನ್ನು ಧರಿಸುತ್ತಾರೆ. ವೈದಿಕ ಜ್ಯೋತಿಷ್ಯದ ಪ್ರಕಾರ, ಕಪ್ಪು ದಾರವು ಒಂದು ಪ್ರಮುಖ ಅರ್ಥವನ್ನು ಹೊಂದಿದೆ. ಕಪ್ಪು ಬಣ್ಣವು ಶನಿ ಗ್ರಹವನ್ನು ಪ್ರತಿನಿಧಿಸುತ್ತದೆ ಎಂದು ನಂಬಲಾಗಿದೆ. ನಿಮ್ಮ ಪಾದದ ಸುತ್ತ ಕಪ್ಪು ದಾರವನ್ನು ಧರಿಸುವುದರಿಂದ, ಶನಿ ದೇವರು ನಿಮ್ಮ ಜೀವಮಾನದ ಮಾರ್ಗದರ್ಶಕ…
ಬೆಂಗಳೂರು: ರಾಜ್ಯದಲ್ಲಿ ದ್ವೇಷ ಭಾಷಣಕ್ಕೆ ಬ್ರೇಕ್ ಹಾಕುವ ನಿಟ್ಟಿನಲ್ಲಿ ದ್ವೇಷ ಭಾಷಣ ಪ್ರತಿಬಂಧಕ ವಿಧೇಯಕ ಸೇರಿದಂತೆ 12 ವಿಧೇಯಕಗಳನ್ನು ವಿಧಾನಸಭೆಯಲ್ಲಿ ಸಚಿವ ಹೆಚ್.ಕೆ.ಪಾಟೀಲ್ ಮಂಡಿಸಿದ್ದಾರೆ. ಕಾನೂನು ಸಚಿವ ಹೆಚ್ ಕೆ ಪಾಟೀಲ್ ದ್ವೇಷ ಭಾಷಣ ಪ್ರತಿಬಂಧಕ ವಿಧೇಯಕವನ್ನು ವಿಧಾನಸಭೆಯಲ್ಲಿ ಮಂಡಿಸಿದ್ದಾರೆ. ದ್ವೇಷ ಭಾಷಣ ಪ್ರತಿಬಂಧಕ ವಿಧೇಯಕ್ಕೆ ಸಚಿವ ಸಂಪುಟ ಸಭೆಯಲ್ಲಿ ಒಪ್ಪಿಗೆಯನ್ನು ನೀಡಲಾಗಿದೆ ಎಂದರು. ಇನ್ನು ದ್ವೇಷ ಭಾಷಣ ಪ್ರತಿಬಂಧನ ಬಿಲ್ ಗೆ ವಿಧಾನಸಭೆಯಲ್ಲಿ ವಿಪಕ್ಷ ಬಿಜೆಪಿ ವಿರೋಧ ವ್ಯಕ್ತಪಡಿಸಿದೆ. ಮಂಡನೆ ವೇಳೆ ಒಪ್ಪಿಗೆ ಇಲ್ಲ ಎಂದು ಬಿಜೆಪಿ ಶಾಸಕರು ಕೂಗಿದ್ದಾರೆ. ವಿಧೇಯಕದಲ್ಲೇನಿದೆ? ಧಾರ್ಮಿಕ, ಜನಾಂಗೀಯ, ಜಾತಿ ಅಥವಾ ಸಮುದಾಯ, ಲಿಂಗ, ಲೈಂಗಿಕ ದೃಷ್ಟಿಕೋನ, ಜನ್ಮಸ್ಥಳ, ಭಾಷೆ, ರೆಸಿಡೆನ್ಸ್, ಅಂಗವೈಕಲ್ಯ ಬುಡಕಟ್ಟು ಕುರಿತು ಯಾವುದೇ ವ್ಯಕ್ತಿಗೆ ಹಾನಿ ಮಾಡುವ ಅಥವಾ ದ್ವೇಷವನ್ನು ಉತ್ತೇಜಿಸುವುದು ಅಪರಾಧ ಮೂರು ವರ್ಷಗಳ ಕಾಲ ಶಿಕ್ಷೆಗೆ ಗುರಿಪಡಿಸಲು ಅವಕಾಶ ಅಥವಾ 5 ಸಾವಿರ ರೂಪಾಯಿವರೆಗೆ ದಂಡ, ಮೂರು ವರ್ಷ ಶಿಕ್ಷೆ, 5 ಸಾವಿರ ದಂಡ ಎರಡನ್ನೂ ವಿಧಿಸಲು…
ಬೆಂಗಳೂರು: ರಾಜ್ಯದಲ್ಲಿ ದ್ವೇಷ ಭಾಷಣಕ್ಕೆ ಬ್ರೇಕ್ ಹಾಕುವ ನಿಟ್ಟಿನಲ್ಲಿ ದ್ವೇಷ ಭಾಷಣ ಪ್ರತಿಬಂಧಕ ವಿಧೇಯಕ ಸೇರಿದಂತೆ 12 ವಿಧೇಯಕಗಳನ್ನು ವಿಧಾನಸಭೆಯಲ್ಲಿ ಸಚಿವ ಹೆಚ್.ಕೆ.ಪಾಟೀಲ್ ಮಂಡಿಸಿದ್ದಾರೆ. ಕಾನೂನು ಸಚಿವ ಹೆಚ್ ಕೆ ಪಾಟೀಲ್ ದ್ವೇಷ ಭಾಷಣ ಪ್ರತಿಬಂಧಕ ವಿಧೇಯಕವನ್ನು ವಿಧಾನಸಭೆಯಲ್ಲಿ ಮಂಡಿಸಿದ್ದಾರೆ. ದ್ವೇಷ ಭಾಷಣ ಪ್ರತಿಬಂಧಕ ವಿಧೇಯಕ್ಕೆ ಸಚಿವ ಸಂಪುಟ ಸಭೆಯಲ್ಲಿ ಒಪ್ಪಿಗೆಯನ್ನು ನೀಡಲಾಗಿದೆ ಎಂದರು. ಇನ್ನು ದ್ವೇಷ ಭಾಷಣ ಪ್ರತಿಬಂಧನ ಬಿಲ್ ಗೆ ವಿಧಾನಸಭೆಯಲ್ಲಿ ವಿಪಕ್ಷ ಬಿಜೆಪಿ ವಿರೋಧ ವ್ಯಕ್ತಪಡಿಸಿದೆ. ಮಂಡನೆ ವೇಳೆ ಒಪ್ಪಿಗೆ ಇಲ್ಲ ಎಂದು ಬಿಜೆಪಿ ಶಾಸಕರು ಕೂಗಿದ್ದಾರೆ. ವಿಧೇಯಕದಲ್ಲೇನಿದೆ? ಧಾರ್ಮಿಕ, ಜನಾಂಗೀಯ, ಜಾತಿ ಅಥವಾ ಸಮುದಾಯ, ಲಿಂಗ, ಲೈಂಗಿಕ ದೃಷ್ಟಿಕೋನ, ಜನ್ಮಸ್ಥಳ, ಭಾಷೆ, ರೆಸಿಡೆನ್ಸ್, ಅಂಗವೈಕಲ್ಯ ಬುಡಕಟ್ಟು ಕುರಿತು ಯಾವುದೇ ವ್ಯಕ್ತಿಗೆ ಹಾನಿ ಮಾಡುವ ಅಥವಾ ದ್ವೇಷವನ್ನು ಉತ್ತೇಜಿಸುವುದು ಅಪರಾಧ ಮೂರು ವರ್ಷಗಳ ಕಾಲ ಶಿಕ್ಷೆಗೆ ಗುರಿಪಡಿಸಲು ಅವಕಾಶ ಅಥವಾ 5 ಸಾವಿರ ರೂಪಾಯಿವರೆಗೆ ದಂಡ, ಮೂರು ವರ್ಷ ಶಿಕ್ಷೆ, 5 ಸಾವಿರ ದಂಡ ಎರಡನ್ನೂ ವಿಧಿಸಲು…
ಬೆಂಗಳೂರು: ರಾಜ್ಯದಲ್ಲಿ ದ್ವೇಷ ಭಾಷಣಕ್ಕೆ ಬ್ರೇಕ್ ಹಾಕುವ ನಿಟ್ಟಿನಲ್ಲಿ ದ್ವೇಷ ಭಾಷಣ ಪ್ರತಿಬಂಧಕ ವಿಧೇಯಕ ಸೇರಿದಂತೆ 12 ವಿಧೇಯಕಗಳನ್ನು ವಿಧಾನಸಭೆಯಲ್ಲಿ ಸಚಿವ ಹೆಚ್.ಕೆ.ಪಾಟೀಲ್ ಮಂಡಿಸಿದ್ದಾರೆ. ಕಾನೂನು ಸಚಿವ ಹೆಚ್ ಕೆ ಪಾಟೀಲ್ ದ್ವೇಷ ಭಾಷಣ ಪ್ರತಿಬಂಧಕ ವಿಧೇಯಕವನ್ನು ವಿಧಾನಸಭೆಯಲ್ಲಿ ಮಂಡಿಸಿದ್ದಾರೆ. ದ್ವೇಷ ಭಾಷಣ ಪ್ರತಿಬಂಧಕ ವಿಧೇಯಕ್ಕೆ ಸಚಿವ ಸಂಪುಟ ಸಭೆಯಲ್ಲಿ ಒಪ್ಪಿಗೆಯನ್ನು ನೀಡಲಾಗಿದೆ ಎಂದರು. ಇನ್ನು ದ್ವೇಷ ಭಾಷಣ ಪ್ರತಿಬಂಧನ ಬಿಲ್ ಗೆ ವಿಧಾನಸಭೆಯಲ್ಲಿ ವಿಪಕ್ಷ ಬಿಜೆಪಿ ವಿರೋಧ ವ್ಯಕ್ತಪಡಿಸಿದೆ. ಮಂಡನೆ ವೇಳೆ ಒಪ್ಪಿಗೆ ಇಲ್ಲ ಎಂದು ಬಿಜೆಪಿ ಶಾಸಕರು ಕೂಗಿದ್ದಾರೆ. ವಿಧಾನಸಭೆಯಲ್ಲಿ 12 ಪ್ರಮುಖ ವಿಧೇಯಕಗಳ ಮಂಡನೆ ದ್ವೇಷ ಭಾಷಣ ಮತ್ತು ದ್ವೇಷ ಅಪರಾಧಗಳ ವಿಧೇಯಕ ಚಾಮುಂಡೇಶ್ವರಿ ಕ್ಷೇತ್ರ ಅಭಿವೃದ್ಧಿ ಪ್ರಾಧಿಕಾರ ಮತ್ತು ಇತರೆ ಕಾನೂನು ವಿಧೇಯಕ (ತಿದ್ದುಪಡಿ) ಔಷಧ ಮತ್ತು ಪ್ರಸಾಧನಾ ಸಾಮಾಗ್ರಿ ವಿಧೇಯಕ (ಕರ್ನಾಟಕ ತಿದ್ದುಪಡಿ) ಕರ್ನಾಟಕ ಬಾಡಿಗೆ (ತಿದ್ದುಪಡಿ) ವಿಧೇಯಕ ಕರ್ನಾಟಕ ಕಾರ್ಮಿಕ ಕಲ್ಯಾಣ ನಿಧಿ (ತಿದ್ದುಪಡಿ) ವಿಧೇಯಕ ಕರ್ನಾಟಕ ಸಿನಿ ಮತ್ತು ಸಾಂಸ್ಕೃತಿ ಕಾರ್ಯಕರ್ತರ…
ಬೆಳಗಾವಿ : ರಾಜ್ಯ ಸರ್ಕಾರವು ಮೂರು ತಿಂಗಳಿಗೊಮ್ಮೆ ಗೃಹ ಲಕ್ಷ್ಮೀ ಹಣ ಕೊಡುತ್ತೇವೆ ಎಂದು ಸಿಎಂ ಆರ್ಥಿಕ ಸಲಹೆಗಾರ ಬಸವರಾಜ ರಾಯರೆಡ್ಡಿ ತಿಳಿಸಿದ್ದಾರೆ. ಬೆಳಗಾವಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮೂರು ತಿಂಗಳಿಗೊಮ್ಮೆ ರಾಜ್ಯ ಸರ್ಕಾರದ ಗ್ಯಾರಂಟಿ ಯೋಜನೆಗಳಲ್ಲೊಂದಾದ ಗೃಹಲಕ್ಷ್ಮಿ ಹಣವನ್ನು ನೀಡುತ್ತೇವೆ ಎಂದು ಹೇಳಿದ್ದಾರೆ. ನಾವು ಆರ್ಥಿಕವಾಗಿ ಸ್ಟ್ರಾಂಗ್ ಇದ್ದೇವೆ. ಜಿಎಸ್ ಟಿ ಕಲೆಕ್ಷನ್ ಆದ್ರೆ ಕೇಂದ್ರದವರು ಅರ್ಧ ಹಣ ಕೊಡಬೇಕು. ಅವರು ಕೋಡುದು 1 ತಿಂಗಳು, ಎರಡು ತಿಂಗಳು ತಡವಾಗುತ್ತೆ. ಮೂರು ತಿಂಗಳಿಗೊಮ್ಮೆ ಗೃಹ ಲಕ್ಷ್ಮೀ ಹಣ ಕೊಡ್ತೇವಿ ಎಂದು ತಿಳಿಸಿದ್ದಾರೆ.












