Author: kannadanewsnow57

ಕೊಚ್ಚಿ : ಸಾರ್ವಜನಿಕ ಕಾರ್ಯಕ್ರಮವೊಂದರಲ್ಲಿ ಭಾಗವಹಿಸುತ್ತಿದ್ದಾಗ ಕುಸಿದು ಬಿದ್ದ ಮಲಯಾಳಂ ನಟ ಮತ್ತು ದೂರದರ್ಶನ ನಿರೂಪಕ ರಾಜೇಶ್ ಕೇಶವ್ (47) ಕೊಚ್ಚಿಯ ಆಸ್ಪತ್ರೆಯಲ್ಲಿ ಗಂಭೀರ ಸ್ಥಿತಿಯಲ್ಲಿದ್ದಾರೆ. ಅವರನ್ನು ತಕ್ಷಣ ಆಸ್ಪತ್ರೆಗೆ ಕರೆದೊಯ್ಯಲಾಯಿತು, ಅಲ್ಲಿ ಅವರಿಗೆ ಹೃದಯಾಘಾತವಾಗಿದೆ ಎಂದು ವೈದ್ಯರು ದೃಢಪಡಿಸಿದರು. ಕೇಶವ್ಗೆ ಆಂಜಿಯೋಪ್ಲ್ಯಾಸ್ಟಿ ಮಾಡಲಾಯಿತು ಮತ್ತು ಅಂದಿನಿಂದ ಐಸಿಯುನಲ್ಲಿ ವೆಂಟಿಲೇಟರ್ ಬೆಂಬಲದಲ್ಲಿದ್ದಾರೆ. ಕಾರ್ಯಕ್ರಮವೊಂದರ ವೇದಿಕೆಯಲ್ಲಿ ನಟ ಪ್ರಜ್ಞೆ ತಪ್ಪಿ ಬಿದ್ದು ನಂತರ ಅವರನ್ನು ಆಸ್ಪತ್ರೆಗೆ ಕರೆದೊಯ್ಯಲಾಯಿತು ಮತ್ತು ಅವರ ಸ್ಥಿತಿ ಗಂಭೀರವಾಗಿದೆ ಎಂದು ಹೇಳಲಾಗಿದೆ. ನಟನನ್ನು ಆಸ್ಪತ್ರೆಗೆ ಕರೆದೊಯ್ಯುವಾಗ, ಅವರಿಗೆ ಹೃದಯಾಘಾತವಾಗಿದೆ ಎಂದು ವೈದ್ಯರು ದೃಢಪಡಿಸಿದರು. ಈ ಸುದ್ದಿಯನ್ನು ಚಲನಚಿತ್ರ ನಿರ್ಮಾಪಕ ಪ್ರತಾಪ್ ಜಯಲಕ್ಷ್ಮಿ ಅವರು ಫೇಸ್ಬುಕ್ನಲ್ಲಿ ಹಂಚಿಕೊಂಡಿದ್ದಾರೆ, ಅಲ್ಲಿ ರಾಜೇಶ್ಗೆ ಆಂಜಿಯೋಪ್ಲ್ಯಾಸ್ಟಿ ಮಾಡಲಾಯಿತು ಮತ್ತು ನಂತರ ವೆಂಟಿಲೇಟರ್ ಸಹಾಯದಿಂದ ಜೀವ ಬೆಂಬಲದಲ್ಲಿದ್ದಾರೆ ಎಂದು ಅವರು ಬಹಿರಂಗಪಡಿಸಿದ್ದಾರೆ. ಅವರು ಬರೆದಿದ್ದಾರೆ, “ಅಂದಿನಿಂದ, ವೆಂಟಿಲೇಟರ್ ಸಹಾಯದಿಂದ ಅವರನ್ನು ಜೀವಂತವಾಗಿಡಲಾಗಿದೆ. ಅವರು ಇನ್ನೂ ಪ್ರತಿಕ್ರಿಯಿಸಿಲ್ಲ – ಆಗೊಮ್ಮೆ ಈಗೊಮ್ಮೆ ಕೆಲವು ಸಣ್ಣ ಚಲನೆಗಳನ್ನು ಹೊರತುಪಡಿಸಿ.…

Read More

ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆಯಡಿ ಜಾರಿಯಲ್ಲಿರುವ ಫಲಾನುಭವಿ ಆಧಾರಿತ ಯೋಜನೆಗಳು/ಕಾರ್ಯಕ್ರಮಗಳಡಿ ಸೌಲಭ್ಯ ಪಡೆಯಲು 2025-26ನೇ ಸಾಲಿನಲ್ಲಿ ವೆಬ್ಸೈಟ್ ವಿಳಾಸ https://sevasindhu.karnataka.gov.in/Sevasindhu/Kannada ಆನ್ಲೈನ್ ಮೂಲಕ ಅರ್ಜಿಗಳನ್ನು ಅಹ್ವಾನಿಸಲಾಗಿದೆ. ಜಿಲ್ಲೆಯ ಅರ್ಹ ವಿಕಲಚೇತನರು ಸೇವಾಸಿಂಧು ಪೋರ್ಟಲ್ ಮೂಲಕ ಆನ್ಲೈನ್ನಲ್ಲಿ ಸೆ.30 ರೊಳಗೆ ಈ ಕೆಳಕಂಡ ಯೋಜನೆ/ಕಾರ್ಯಕ್ರಮಗಳಿಗೆ ಅರ್ಜಿ ಸಲ್ಲಿಸಬಹುದಾಗಿದೆ. ಪ್ರತಿಭಾ ವಿಕಲಚೇತನ ವಿದ್ಯಾರ್ಥಿಗಳಿಗಾಗಿ ಪ್ರೋತ್ಸಾಹಧನ ಯೋಜನೆ, ಅಂಧ ಮಹಿಳೆಯರಿಗೆ ಜನಿಸಿದ ಮಗುವಿನ ಲಾಲನೆ, ಪೋಷಣೆಗಾಗಿ ಶಿಶುಪಾಲನಾ ಭತ್ಯೆ ನೀಡುವ ಯೋಜನೆ, ಸ್ವಯಂ ಉದ್ಯೋಗ ಕೈಗೊಳ್ಳಲು ಆಧಾರ ಯೋಜನೆಯಡಿ ಸಾಲಸೌಲಭ್ಯ ನೀಡುವುದು. ನಿರುದ್ಯೋಗಿ ವಿಕಲಚೇತನರಿಗೆ ನಿರುದ್ಯೋಗ ಭತ್ಯೆ, ಅಂಗವಿಕಲತೆ ನಿವಾರಣಗಾಗಿ ವೈದ್ಯಕೀಯ ವೆಚ್ಚ ಭರಿಸಿದ ಬಾಬ್ತುನ್ನು ವೈದ್ಯಕೀಯ ಪರಿಹಾರ ನಿಧಿಯಡಿ ಮರುಪಾವತಿಸುವ ಯೋಜನೆ, ಗ್ರಾಮೀಣ ಪುನರ್ವಸತಿ ಯೋಜನೆಯಡಿ ಮರಣ ಪರಿಹಾರ ನಿಧಿ, ಪ್ರತಿಭೆ ಯೋಜನೆಯಡಿ ಸಹಾಯಧನ ನೀಡಲಾಗುವುದು. ತೀವ್ರತರ ದೈಹಿಕ ವಿಕಲಚೇತನ ವ್ಯಕ್ತಿಗಳಿಗೆ ಬ್ಯಾಟರಿ ಚಾಲಿತ ವೀಲ್ಚೇರ್ಗಳನ್ನು ನೀಡಲಾಗುವುದು. ತೀವ್ರತರ ದೈಹಿಕ ವಿಕಲಚೇತನ ವ್ಯಕ್ತಿಗಳಿಗೆ ಯಂತ್ರಚಾಲಿತ ದ್ವಿಚಕ್ರ ವಾಹನವನ್ನು ನೀಡಲಾಗುವುದು. ಸ್ವಯಂ ಉದ್ಯೋಗ…

Read More

ಬೆಂಗಳೂರು : ಲಕ್ಷಾಧಿಪತಿ ತೆರಿಗೆ ಪಾವತಿದಾರರ ಸಂಖ್ಯೆಯಲ್ಲಿ ನಮ್ಮ ರಾಜ್ಯ ದೇಶದ ಮುಂಚೂಣಿಯಲ್ಲಿ ನಿಂತಿದೆ ಎಂದು ಕಾಂಗ್ರೆಸ್ ಟ್ವಿಟರ್ ನಲ್ಲಿ ಪೋಸ್ಟ್ ಹಂಚಿಕೊಂಡಿದೆ. ಭರವಸೆಯ ಪಥದಲ್ಲಿ ಕರ್ನಾಟಕ ಲಕ್ಷಾಧಿಪತಿ ತೆರಿಗೆ ಪಾವತಿದಾರರ ಸಂಖ್ಯೆಯಲ್ಲಿ ನಮ್ಮ ರಾಜ್ಯ ದೇಶದ ಮುಂಚೂಣಿಯಲ್ಲಿ ನಿಂತಿದೆ. ಇದು ಕೇವಲ ಆರ್ಥಿಕ ಸಾಧನೆಯಷ್ಟೇ ಅಲ್ಲ, ಜನರ ಶ್ರಮಕ್ಕೆ ನ್ಯಾಯ ನೀಡುವ ಕಾಂಗ್ರೆಸ್ ಸರ್ಕಾರದ ಜನಪರ ನೀತಿಗಳ ಪ್ರತಿಫಲ. ಜನರ ವಿಶ್ವಾಸ, ಪಾರದರ್ಶಕ ಆಡಳಿತ ಮತ್ತು ಅಭಿವೃದ್ಧಿಯ ಸಂಕಲ್ಪವೇ ಕರ್ನಾಟಕವನ್ನು ಸಮೃದ್ಧಿಯ ದಾರಿಗೆ ಮುನ್ನಡೆಸುತ್ತಿದೆ ಎಂದು ಕಾಂಗ್ರೆಸ್ ಟ್ವೀಟ್ ಮಾಡಿದೆ. https://twitter.com/INCKarnataka/status/1960582562205851927?ref_src=twsrc%5Etfw%7Ctwcamp%5Etweetembed%7Ctwterm%5E1960582562205851927%7Ctwgr%5E64fc8355553731882bf8e8041caaa361d5d9cc71%7Ctwcon%5Es1_&ref_url=https%3A%2F%2Fkannadadunia.com%2Fkarnataka-no-1-in-number-of-millionaire-tax-payers-congress%2F

Read More

ಕಾಬೂಲ್ : ಇಂದು ಬೆಳಿಗ್ಗೆ ಅಫ್ಘಾನಿಸ್ತಾನದ ರಾಜಧಾನಿ ಕಾಬೂಲ್ನ ಪಶ್ಚಿಮಕ್ಕೆ ಪ್ರಯಾಣಿಕರ ಬಸ್ ಉರುಳಿಬಿದ್ದ ಪರಿಣಾಮ ಕನಿಷ್ಠ 25 ಜನರು ಸಾವನ್ನಪ್ಪಿದ್ದು, 27 ಜನರು ಗಾಯಗೊಂಡಿದ್ದಾರೆ. ಈ ಮಾಹಿತಿಯನ್ನು ತಾಲಿಬಾನ್ನ ಆಂತರಿಕ ವ್ಯವಹಾರಗಳ ಸಚಿವಾಲಯದ ಅಧಿಕಾರಿಯೊಬ್ಬರು ನೀಡಿದ್ದಾರೆ. ದಕ್ಷಿಣ ಕಂದಹಾರ್ ಅನ್ನು ಕಾಬೂಲ್ಗೆ ಸಂಪರ್ಕಿಸುವ ಹೆದ್ದಾರಿಯಲ್ಲಿರುವ ಅರ್ಘಂಡಿ ಪ್ರದೇಶದಲ್ಲಿ ಈ ಘಟನೆ ನಡೆದಿದ್ದು, ನಿರ್ಲಕ್ಷ್ಯದ ಚಾಲನೆಯಿಂದ ಈ ಘಟನೆ ಸಂಭವಿಸಿದೆ ಎಂದು ಸಚಿವಾಲಯದ ವಕ್ತಾರ ಅಬ್ದುಲ್ ಮತೀನ್ ಕಾನಿ ಸುದ್ದಿ ಸಂಸ್ಥೆ ಕ್ಸಿನ್ಹುವಾಗೆ ತಿಳಿಸಿದ್ದಾರೆ. ಪೊಲೀಸರು ಮತ್ತು ತುರ್ತು ಸೇವೆಗಳು ತಕ್ಷಣ ಗಮನ ಹರಿಸಿ ಗಾಯಾಳುಗಳನ್ನು ಚಿಕಿತ್ಸೆಗಾಗಿ ಹತ್ತಿರದ ಆರೋಗ್ಯ ಕೇಂದ್ರಗಳಿಗೆ ಕರೆದೊಯ್ದವು ಎಂದು ಕಾನಿ ಹೇಳಿದರು. ಈ ವಾರ ಅಫ್ಘಾನಿಸ್ತಾನದಲ್ಲಿ ರಸ್ತೆ ಸುರಕ್ಷತೆಯ ವಿಷಯದಲ್ಲಿ ಬಹಳ ಹಾನಿಕಾರಕವಾಗಿದ್ದು, ಸುಮಾರು 100 ಜನರು ಪ್ರಾಣ ಕಳೆದುಕೊಂಡಿದ್ದಾರೆ. ಕಾಬೂಲ್ ಅಪಘಾತಕ್ಕೂ ಮುನ್ನ, ಪಶ್ಚಿಮ ಹೆರಾತ್ ಪ್ರಾಂತ್ಯದ ಗುಜಾರಾ ಜಿಲ್ಲೆಯಲ್ಲಿ ಮತ್ತೊಂದು ಭೀಕರ ಅಪಘಾತ ಸಂಭವಿಸಿದೆ. ಈ ಅಪಘಾತದಲ್ಲಿ, ಇರಾನ್ನಿಂದ ಕಾಬೂಲ್ಗೆ ಗಡೀಪಾರು ಮಾಡಲಾದ…

Read More

ಸಿಡ್ನಿ : ಆಸ್ಟ್ರೇಲಿಯಾದ ದಂತಕಥೆ ಬ್ಯಾಟ್ಸ್ಮನ್ಗಳಲ್ಲಿ ಒಬ್ಬರಾದ ಮೈಕೆಲ್ ಕ್ಲಾರ್ಕ್ ಅವರಿಗೆ ಚರ್ಮದ ಕ್ಯಾನ್ಸರ್ ಇರುವುದು ಪತ್ತೆಯಾಗಿದೆ. 44 ವರ್ಷದ ಕ್ಲಾರ್ಕ್ ಸಾಮಾಜಿಕ ಮಾಧ್ಯಮದ ಮೂಲಕ ತಮ್ಮ ಆರೋಗ್ಯದ ಬಗ್ಗೆ ಮಾಹಿತಿಯನ್ನು ಹಂಚಿಕೊಂಡರು ಮತ್ತು ನಿಯಮಿತವಾಗಿ ಆರೋಗ್ಯ ತಪಾಸಣೆ ಮಾಡಿಸಿಕೊಳ್ಳುವಂತೆ ಜನರಿಗೆ ಮನವಿ ಮಾಡಿದರು. ಕ್ಲಾರ್ಕ್ ಇನ್ಸ್ಟಾಗ್ರಾಮ್ನಲ್ಲಿ ಈ ಕುರಿತು ಪೋಸ್ಟ್ ಮಾಡಿದ್ದು,’ಚರ್ಮದ ಕ್ಯಾನ್ಸರ್ ನಿಜ! ವಿಶೇಷವಾಗಿ ಆಸ್ಟ್ರೇಲಿಯಾದಲ್ಲಿ. ಇಂದು ನನ್ನ ಮೂಗಿನಿಂದ ಮತ್ತೊಂದು ಕ್ಯಾನ್ಸರ್ ಗಡ್ಡೆಯನ್ನು ತೆಗೆದುಹಾಕಲಾಗಿದೆ. ನಿಮ್ಮ ಚರ್ಮವನ್ನು ಪರೀಕ್ಷಿಸುವುದನ್ನು ಮುಂದುವರಿಸಲು ಇದು ಸ್ನೇಹಪರ ಜ್ಞಾಪನೆಯಾಗಿದೆ. ತಡೆಗಟ್ಟುವಿಕೆ ಗುಣಪಡಿಸುವುದಕ್ಕಿಂತ ಉತ್ತಮವಾಗಿದೆ, ಆದರೆ ನನ್ನ ಸಂದರ್ಭದಲ್ಲಿ ನಿಯಮಿತ ತಪಾಸಣೆ ಮತ್ತು ಆರಂಭಿಕ ಪತ್ತೆ ಅತ್ಯಂತ ಮುಖ್ಯ. ಡಾ. ಬಿಶ್ ಸೊಲಿಮನ್ ಅದನ್ನು ಸಮಯಕ್ಕೆ ಸರಿಯಾಗಿ ಪತ್ತೆಹಚ್ಚಿದ್ದಕ್ಕಾಗಿ ಧನ್ಯವಾದಗಳು.’ ಮೈಕೆಲ್ ಕ್ಲಾರ್ಕ್ ಅವರ ಚರ್ಮದ ಕ್ಯಾನ್ಸರ್ ಹೊಸದಲ್ಲ. ಅವರಿಗೆ ಮೊದಲು 2006 ರಲ್ಲಿ ಚರ್ಮದ ಕ್ಯಾನ್ಸರ್ ಇರುವುದು ಪತ್ತೆಯಾಯಿತು. ಇದರ ನಂತರ, 2019 ರಲ್ಲಿ ಮೂರು ಮೆಲನೋಮವಲ್ಲದ ಗಾಯಗಳನ್ನು ಸಹ ಗುರುತಿಸಲಾಯಿತು.…

Read More

ಜಮ್ಮು ಮತ್ತು ಕಾಶ್ಮೀರದ ಕತ್ರಾದ ಅರ್ಧಕುಮಾರಿ ಬಳಿಯ ಮಾತಾ ವೈಷ್ಣೋ ದೇವಿ ಯಾತ್ರಾ ಟ್ರ್ಯಾಕ್ನಲ್ಲಿ ಬುಧವಾರ ಭಾರಿ ಭೂಕುಸಿತ ಸಂಭವಿಸಿದ್ದು, ಕನಿಷ್ಠ 36 ಜನರು ಸಾವನ್ನಪ್ಪಿದ್ದಾರೆ ಮತ್ತು 23 ಜನರು ಗಾಯಗೊಂಡಿದ್ದಾರೆ. ಇನ್ನೂ ಹೆಚ್ಚಿನ ವ್ಯಕ್ತಿಗಳು ಸಿಕ್ಕಿಬಿದ್ದಿರಬಹುದು ಎಂಬ ಭಯದ ನಡುವೆ ರಕ್ಷಣಾ ತಂಡಗಳು ಅವಶೇಷಗಳ ಶೋಧವನ್ನು ಮುಂದುವರಿಸಿವೆ. ಎಡೆಬಿಡದೆ ಸುರಿಯುತ್ತಿರುವ ಮಳೆಯಿಂದಾಗಿ ಜಮ್ಮು ಮತ್ತು ಕಾಶ್ಮೀರದಾದ್ಯಂತ ಪ್ರವಾಹ ಮತ್ತು ಭೂಕುಸಿತ ಉಂಟಾಗಿದೆ. ಜಮ್ಮುವಿನಲ್ಲಿ, ಸೇತುವೆಗಳು ಕುಸಿದಿವೆ ಮತ್ತು ವಿದ್ಯುತ್ ಮಾರ್ಗಗಳು ಮತ್ತು ಮೊಬೈಲ್ ಟವರ್ಗಳು ತೀವ್ರವಾಗಿ ಹಾನಿಗೊಳಗಾಗಿವೆ. ನಿರಂತರ ಭಾರಿ ಮಳೆಯಿಂದಾಗಿ ಜಿಲ್ಲೆಯಾದ್ಯಂತ ಪ್ರವಾಹ ಮತ್ತು ಜಲಾವೃತಗೊಂಡ ನಂತರ ಮಂಗಳವಾರದವರೆಗೆ 3,500 ಕ್ಕೂ ಹೆಚ್ಚು ನಿವಾಸಿಗಳನ್ನು ಸ್ಥಳಾಂತರಿಸಲಾಗಿದೆ. ಮಂಗಳವಾರ ಮಧ್ಯಾಹ್ನ ಯಾತ್ರಾ ಮಾರ್ಗದಲ್ಲಿ ಸಂಭವಿಸಿದ ಭಾರಿ ಭೂಕುಸಿತದಲ್ಲಿ ಸಾವನ್ನಪ್ಪಿದ 32 ಮಾತಾ ವೈಷ್ಣೋದೇವಿ ಯಾತ್ರಿಕರು ಸಾವನ್ನಪ್ಪಿದ್ದಾರೆ. ಕಳೆದ 24 ಗಂಟೆಗಳಲ್ಲಿ, ಜಮ್ಮುವಿನಲ್ಲಿ 380 ಮಿಮೀ ಮಳೆಯಾಗಿದೆ ಎಂದು ವರದಿಯಾಗಿದೆ. ಜಮ್ಮುವಿನಲ್ಲಿ ಧಾರಾಕಾರ ಮಳೆ: ಪ್ರಮುಖ ಅಂಶಗಳು: ಜಮ್ಮುವಿನಲ್ಲಿ ಮಂಗಳವಾರ ಬೆಳಿಗ್ಗೆ…

Read More

ಬೆಂಗಳೂರು : ನಾಡ ಹಬ್ಬ ದಸರಾವನ್ನು ಕಣ್ತುಂಬಿಕೊಳ್ಳಲು ದೇಶ ವಿದೇಶಗಳಿಂದ ಜನ ಬರುತ್ತಾರೆ. ಇದಕ್ಕೆ ನಮ್ಮ ರಾಜ ವಂಶಸ್ಥರೇ ಅನುಮತಿ ನೀಡಿ ಸಾಕ್ಷಿಯಾಗಿದ್ದಾರೆ. ನಾಡ ಹಬ್ಬ ದಸರಾ ಎಲ್ಲ ಧರ್ಮದವರಿಗೂ ಸೇರಿದ್ದು ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಹೇಳಿದ್ದಾರೆ. ನಮ್ಮ ನಾಡ ಹಬ್ಬ – ದಸರಾ , ನಮ್ಮ ನಾಡ ದೇವತೆ – ಚಾಮುಂಡೇಶ್ವರಿ. ಚಾಮುಂಡೇಶ್ವರಿ ತಾಯಿ ನಮ್ಮ ನಾಡಿನ ಅಧಿದೇವತೆ. ಈ ತಾಯಿಯನ್ನು ಆರಾಧಿಸುವವರು, ನಂಬುವವರು, ಗೌರವಿಸುವವರು ಎಲ್ಲ ಜಾತಿ, ಧರ್ಮಗಳಲ್ಲೂ ಇದ್ದಾರೆ. ಆಕೆಯ ದರ್ಶನ ಎಲ್ಲರ ಹಕ್ಕು. ತಾಯಿ ಎಲ್ಲ ಭಕ್ತರ, ನಾಡಿನ ಎಲ್ಲ ಮಕ್ಕಳ ಆಸ್ತಿ, ಯಾರೊಬ್ಬರಿಗೂ ಸೀಮಿತ ಅಲ್ಲ. ತಾಯಿಯನ್ನು ಪೂಜಿಸಿದರೆ ಯಾರೂ ಬೇಡ ಅನ್ನಲು ಆಗುವುದಿಲ್ಲ. ಇದೇ ನನ್ನ ಮಾತಿನ ಸತ್ವ. ವಿವಾದ ಮಾಡೋದು ಬಿಜೆಪಿ ತತ್ವ ಎಂದಿದ್ದಾರೆ. ಚಾಮುಂಡಿ ಬೆಟ್ಟಕ್ಕೆ ಎಲ್ಲ ಧರ್ಮ, ಸಮಾಜದವರಿಗೂ ಪ್ರವೇಶವಿದೆ. ಎಲ್ಲರೂ ಬೆಟ್ಟಕ್ಕೆ ಹೋಗುತ್ತಾರೆ. ದೇವಿಯ ಪ್ರಾರ್ಥನೆ ಮಾಡುತ್ತಾರೆ. ಎಲ್ಲರ ನೋವನ್ನು ದೂರ ಮಾಡುವಳು ನಮ್ಮ ದುರ್ಗಾ ದೇವಿ.…

Read More

ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯಿಂದ ಅಲೆಮಾರಿ/ಅರೆಅಲೆಮಾರಿ ಜನಾಂಗದವರಿಗೆ ಸರ್ಕಾರದಿಂದ ವಿವಿಧ ಸೌಲಭ್ಯಗಳನ್ನು ನೀಡಲಾಗುತ್ತಿದ್ದು, ಅರ್ಹ ಫಲಾನುಭವಿಗಳು ಇದರ ಸದುಪಯೋಗ ಪಡೆದುಕೊಳ್ಳಬೇಕು ಎಂದು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಕೊಪ್ಪಳ ಜಿಲ್ಲಾ ಅಧಿಕಾರಿಗಳು ತಿಳಿಸಿದ್ದಾರೆ. ಇಲಾಖೆಯಿಂದ ಮೆಟ್ರಿಕ್ ಪೂರ್ವ ವಿದ್ಯಾರ್ಥಿಗಳಿಗೆ ವಿಶೇಷ ಪ್ರೋತ್ಸಾಹಧನ ಯೋಜನೆಯಡಿ ಅಲೆಮಾರಿ/ಅಲೆಮಾರಿ ಪಂಗಡಕ್ಕೆ ಸೇರಿದ ವಿದ್ಯಾರ್ಥಿಗಳ ಪ್ರಾಥಮಿಕ, ಮಾಧ್ಯಮಿಕ ಹಾಗೂ ಪ್ರೌಢಶಿಕ್ಷಣಕ್ಕೆ ಆರ್ಥಿಕ ನೆರವು ನೀಡಲು, ಸರ್ಕಾರಿ ಅಥವಾ ಸರ್ಕಾರದಿಂದ ಮಾನ್ಯತೆ ಪಡೆದ ಖಾಸಗಿ ಶಿಕ್ಷಣ ಸಂಸ್ಥೆಯಲ್ಲಿ ವ್ಯಾಸಂಗ ಮಾಡುವ 1 ರಿಂದ 8ನೇ ತರಗತಿ ವಿದ್ಯಾರ್ಥಿಗಳಿಗೆ ಮಾಹೆಯಾಣ ರೂ.200 ರಂತೆ 10 ತಿಂಗಳ ಅವಧಿಗೆ ರೂ.2000/- ಗಳನ್ನು ಹಾಗೂ 9 ರಿಂದ 10 ನೇ ತರಗತಿ ವಿದ್ಯಾರ್ಥಿಗಳಿಗೆ ಮಾಹೆಯಾನ ರೂ.400 ರಂತೆ 10 ತಿಂಗಳ ಅವಧಿಗೆ ರೂ.4000/- ಗಳ ಪ್ರೋತ್ಸಾಹಧನ ಮಂಜೂರು ಮಾಡಲಾಗುತ್ತದೆ. ಮೆಟ್ರಿಕ್ ನಂತರದ ವಿದ್ಯಾರ್ಥಿಗಳಿಗೆ ಅರ್ಹತಾ ವಿದ್ಯಾರ್ಥಿ ವೇತನ ಯೋಜನೆಯಡಿ ಅಲೆಮಾರಿ/ಅಲೆಮಾರಿ ಪಂಗಡಕ್ಕೆ ಸೇರಿದ ಮೆಟ್ರಿಕ್ ನಂತರದ ಶಿಕ್ಷಣ ಸಂಸ್ಥೆಗಳಲ್ಲಿ ವ್ಯಾಸಂಗ ಮಾಡುವ ಕಾಲೇಜು…

Read More

ಬೆಂಗಳೂರು: ರಾಜ್ಯದ ಎಲ್ಲಾ ತಾಲೂಕುಗಳಲ್ಲಿಯೂ ಅಭಿಯಾನ ಮಾದರಿಯಲ್ಲಿ ಪೌತಿ ಖಾತೆ ಮಾಡಿಕೊಡಬೇಕು ಎಂದು ಕಂದಾಯ ಸಚಿವ ಕೃಷ್ಣ ಬೈರೇಗೌಡ ತಿಳಿಸಿದ್ದಾರೆ. ಸೋಮವಾರ ವಿಕಾಸಸೌಧದಿಂದ ವಿಡಿಯೋ ಕಾನ್ಫರೆನ್ಸ್ ಮೂಲಕ ರಾಜ್ಯದ ಎಲ್ಲಾ ತಹಶೀಲ್ದಾರರುಗಳ ಜೊತೆ ಪ್ರಗತಿ ಪರಿಶೀಲನಾ ಸಭೆ ನಡೆಸಿ ಮಾತನಾಡಿದ ಅವರು, “ಕಳೆದ ಎರಡು ವರ್ಷಗಳಿಂದ ತಹಶೀಲ್ದಾರ್ ನ್ಯಾಯಾಲಯಗಳ ತಕರಾರು ಅರ್ಜಿಗಳ ವಿಲೇ ಕೆಲಸ ಗಮನಾರ್ಹ ರೀತಿಯಲ್ಲಿ ಪ್ರಗತಿ ಕಂಡಿತ್ತು. ಈ ಮೊದಲು ಒಂದು ಪ್ರಕರಣದ ಇತ್ಯರ್ಥಕ್ಕೆ 212 ದಿನ ತೆಗೆದುಕೊಳ್ಳುತ್ತಿದ್ದರೆ, ಪ್ರಸ್ತುತ 82 ದಿನಕ್ಕೆ ಇಳಿಸಲಾಗಿತ್ತು. ಆದರೆ, ಬರುಬರುತ್ತಾ ತಕರಾರು ಅರ್ಜಿಗಳ ವಿಲೇ ಕೆಲಸ ಮತ್ತೆ ವೇಗ ಕಳೆದುಕೊಳ್ಳುತ್ತಿರುವುದನ್ನು ಒಪ್ಪಲು ಸಾಧ್ಯವಿಲ್ಲ” ಎಂದು ಬೇಸರ ಹೊರಹಾಕಿದರು. ರಾಜ್ಯದಲ್ಲಿ 52 ಲಕ್ಷ ಜಮೀನುಗಳು ಮೃತರ ಹೆಸರಿನಲ್ಲಿದೆ. ಈ ಪೈಕಿ ಫೌತಿ ಖಾತೆ ಆಂದೋಲನದ ಮೂಲಕ 3,35,727 ಪ್ರಕರಣಗಳಲ್ಲಿ ಮೃತರ ಹೆಸರಿನಿಂದ ಅವರ ವಾರಸುದಾರರ ಹೆಸರಿಗೆ ಜಮೀನು ವರ್ಗಾವಣೆ ಮಾಡಲಾಗಿದೆ. ಆದರೆ, ಈ ಸಾಧನೆ ತೃಪ್ತಿಕರವಾಗಿಲ್ಲ. ಹೀಗಾಗಿ ಶೀಘ್ರದಲ್ಲಿ ಎಲ್ಲಾ ತಾಲೂಕುಗಳಲ್ಲೂ ಅಭಿಯಾನ…

Read More

ಬೆಂಗಳೂರು : ಬೆಂಗಳೂರು : ರಾಜ್ಯ ಸರ್ಕಾರವು ಜನತೆಗೆ ಮತ್ತೊಂದು ಸಿಹಿಸುದ್ದಿ ನೀಡಿದ್ದು, ಇನ್ಮಂದೆ ರೋಗಿಗಳಿಗೆ ಸರ್ಕಾರದಿಂದಲೇ ಸಿಟಿ, ಎಂಆರ್ ಐ ಸ್ಕ್ಯಾನ್ ಮಾಡಲಾಗುವುದು. ರಾಜ್ಯದ ಪ್ರಮುಖ 5 ಆಸ್ಪತ್ರೆಗಳಲ್ಲಿ ಸಿಟಿ ಸ್ಕ್ಯಾನ್, 15 ಆಸ್ಪತ್ರೆಗಳಲ್ಲಿ ಎಂಆರ್ಐ ಸ್ಕ್ಯಾನ್ ಸೇವೆ ಆರಂಭಿಸಲು ಸರ್ಕಾರ ಅನುಮೋದನೆ ನೀಡಿದೆ. ಹೌದು, ಆರೋಗ್ಯ ಇಲಾಖೆ ವತಿಯಿಂದ ಸಾರ್ವಜನಿಕ ಆರೋಗ್ಯ ವ್ಯವಸ್ಥೆ ಬಲಪಡಿಸಿ ಗುಣಮಟ್ಟದ ಸೇವೆ ನೀಡಲು, ರೋಗಪತ್ತೆಯಲ್ಲಿ ಪ್ರಮುಖ ಪಾತ್ರ ವಹಿಸುವ ಸಿಟಿ ಸ್ಕ್ಯಾನ್ ಮತ್ತು ಎಂ.ಆರ್.ಐ. ಸ್ಕ್ಯಾನ್ ಗಳನ್ನು ಅಳವಡಿಸಲಾಗುವುದು. ಸಾರ್ವಜನಿಕ ಖಾಸಗಿ ಸಹಭಾಗಿತ್ವದಲ್ಲಿ 5 ಆಸ್ಪತ್ರೆಗಳಲ್ಲಿ ಸಿಟಿ ಸ್ಕ್ಯಾನ್ ಮತ್ತು 15 ಆಸ್ಪತ್ರೆಗಳಲ್ಲಿ ಎಂಆರ್ಐ ಸ್ಕ್ಯಾನ್ ಆರಂಭಿಸಲಾಗಿದೆ. ಎರಡನೇ ಹಂತದಲ್ಲಿ 222.28 ಕೋಟಿ ರೂ.ವೆಚ್ಚದಲ್ಲಿ ಯೋಜನೆ ಜಾರಿಗೊಳಿಸಲಾಗುತ್ತಿದೆ. ರಾಷ್ಟ್ರೀಯ ಆರೋಗ್ಯ ಅಭಿಯಾನದ ಉಚಿತ ರೋಗ ನಿರ್ಣಯ ಸೇವೆಗಳಡಿ ಇದನ್ನು ಜಾರಿ ಮಾಡಲಾಗುತ್ತಿದೆ. ಮೈಸೂರು, ಚಿತ್ರದುರ್ಗ ಜಿಲ್ಲಾಸ್ಪತ್ರೆ, ಮಂಗಳೂರಿನ ವೆನ್ ಲಾಕ್, ಬೆಂಗಳೂರಿನ ಸಿ.ವಿ. ರಾಮನ್, ಕೆ.ಸಿ. ಜನರಲ್ ಆಸ್ಪತ್ರೆಗಳಲ್ಲಿ ಸಿಟಿ ಸ್ಕ್ಯಾನ್ ಸೌಲಭ್ಯ…

Read More