Subscribe to Updates
Get the latest creative news from FooBar about art, design and business.
Author: kannadanewsnow57
ಬೀದರ್ : ಗುಜರಾತ್, ದೆಹಲಿಯ ಎರಡು ಕಡೆ ಭೀಕರ ಅಗ್ನಿ ಅವಘಡ ದುರಂತದ ಬೆನ್ನಲ್ಲೆ ರಾಜ್ಯದಲ್ಲಿ ಅಗ್ನಿ ಅವಘಡ ಸಂಭವಿಸಿದೆ. ಬೀದರ್ ನಗರದ ಜೆಸ್ಕಾಂ ಕಚೇರಿಯಲ್ಲಿ ಭಾರಿ ಅಗ್ನಿ ದುರಂತ ಸಂಭವಿಸಿದೆ. ಬೀದರ್ ನ ಜ್ಯೋತಿ ನಗರದಲ್ಲಿರುವ ಜೆಸ್ಕಾಂ ಕಚೇರಿಯಲ್ಲಿ ಬೆಂಕಿ ಅವಘಡ ಸಂಭವಿಸಿದ್ದು, ಕಚೇರಿಯ ಪೀಟೋಪಕರಣ ಹಾಗೂ ಟಿಸಿಗಳು ಸುಟ್ಟುಭಸ್ಮವಾಗಿದೆ. ಸ್ಥಳಕ್ಕೆ ಅಗ್ನಿಶಾಮಕ ದಳದ ಸಿಬ್ಬಂದಿ ಆಗಮಿಸಿದ್ದು, ಬೆಂಕಿ ನಂದಿಸುವ ಕೆಲಸ ಮಾಡುತ್ತಿದ್ದಾರೆ.
ಬೆಂಗಳೂರು : ಬೆಳೆ ಪರಿಹಾರದ ಹಣ ಖಾತೆಗೆ ಜಮಾ ಆಗದ ರೈತರಿಗೆ ಸರ್ಕಾರ ಮಹತ್ವದ ಮಾಹಿತಿ ನೀಡಿದ್ದು, ಬೆಳೆ ಹಾನಿ, ಬೆಳೆ ಪರಿಹಾರ ಜಮೆ ಅಗದೆ ಇರುವ ರೈತರು ತಾವು ಖಾತೆ ಹೊಂದಿರುವ ಬ್ಯಾಂಕಗೆ ಭೇಟಿ ನೀಡಿ, ಖಾತೆ ಚಾಲ್ತಿ ಇರುವ ಬಗ್ಗೆ, ಕೆವೈಸಿ ಅಪಡೆಟ್ ಆಗಿರುವ ಬಗ್ಗೆ ಮತ್ತು ಪ್ರೂಟ್ಸ್ ಸಂಖ್ಯೆ ಹೊಂದಿರುವ ಬಗ್ಗೆ ಪರಿಶೀಲಿಸಿ, ಖಾತರಿ ಮಾಡಿಕೊಳ್ಳಬೇಕೆಂದು ಸೂಚನೆ ನೀಡಲಾಗಿದೆ. ಈ ಕುರಿತು ಪ್ರಕಟಣೆ ಹೊರಡಿಸಲಾಗಿದ್ದು, ಅಕೌಂಟ್ಗಳನ್ನು ನಿರ್ಬಂಧಿಸಿರುವುದು ಅಥವಾ ಫ್ರೀಜ್ ಮಾಡಿರುವುದು ಹಾಗೂ ಯಾವ ರೈತರ ಖಾತೆಯನ್ನು ಮುಚ್ಚಲಾಗಿದೆಯೋ ಅಂತಹ ಫಲಾನುಭವಿಗಳು ಬ್ಯಾಂಕ್ಗೆ ಹೋಗಿ ಕೌಂಟ್ ರಿ ಓಪನ್ ಮಾಡಿಸಬೇಕು. ಫ್ರೂಟ್ಸ್ ಅಪ್ಡೇಟ್ನಲ್ಲಿ ಆಧಾರ್ ಹೆಸರು ಹೊಂದಿಕೆಯಾಗುತ್ತಿಲ್ಲ ಆ ರೈತರು ಫ್ರೂಟ್ಸ್ ತಂತ್ರಾಂಶದಲ್ಲಿ ಹೆಸರು ಅಪ್ಡೇಟ ಮಾಡಿಸಬೇಕು. ಆಧಾರ್ ಅನ್ನು ಬ್ಯಾಂಕ್ನೊಂದಿಗೆ ಸೀಡ್, ಖಾತೆಗೆ ಆಧಾರ್ ಮ್ಯಾಪ್, ಕುಸಿದ ಪಾವತಿ ಹಾಗೂ ಎನ್.ಪಿ.ಸಿ.ಐ ಸೀಡಿಂಗ್ ಸಮಸ್ಯೆ ಇರುವಂತ ಫಲಾನುಭವಿಗಳು ಬ್ಯಾಂಕ್ಗೆ ಹೋಗಿ ಎನ್.ಪಿ.ಸಿ.ಐ (ಓPಅI) ಮಾಡಿಸಬೇಕು. ಅಮಾನ್ಯ…
ಬಾಗಲಕೋಟೆ : ಪೆನ್ ಡ್ರೈವ್ ಪ್ರಕರಣ ಇಡೀ ರಾಜ್ಯವೇ ತಲೆತಗಿಸುವ ಕೇಸ್ ಆಗಿದ್ದು, ಸಿಎಂ ಸಿದ್ದರಾಮಯ್ಯ, ಗೃಹ ಸಚಿವ ಡಾ.ಜಿ. ಪರಮೇಶ್ವರ್ ಪ್ರಕರಣವನ್ನು ಹಗುರವಾಗಿ ತೆಗೆದುಕೊಂಡಿದ್ದಾರೆ ಎಂದು ಮಾಜಿ ಸಚಿವ ಕೆ.ಎಸ್. ಈಶ್ವರಪ್ಪ ಹೇಳಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯ ಸರ್ಕಾರ ಪೆನ್ ಡ್ರೈವ್ ಪ್ರಕರಣವನ್ನು ಏಕೆ ಸಿಬಿಐಗೆ ಕೊಡುತ್ತಿಲ್ಲ. ಬರೀ ಕೇಂದ್ರ ಸರ್ಕಾರದ ಕಡೆಗೆ ಬೊಟ್ಟು ಮಾಡುತ್ತಿದ್ದಾರೆ. ಸರ್ಕಾರ ನಿರ್ದೋಷಿ ಆಗಬೇಕಾದ್ರೆ ಪ್ರಕರಣವನ್ನು ಸಿಬಿಐಗೆ ಕೊಡಲಿ. ರಾಜ್ಯದಲ್ಲಿ ರಾಷ್ಟ್ರಪತಿ ಆಡಳಿತ ತರಲು ಅವಕಾಶ ಕೊಡಬಾರದು, ಜನರಿಂದ ಆಯ್ಕೆಯಾದ ಚುನಾಯಿತ ಸರ್ಕಾರ ಇದೆ ಎಂದರು. ಚನ್ನಗಿರಿ ಲಾಕಪ್ ಡೆತ್ ಆರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯೆ ನೀಡಿದ ಅವರು, ರಾಜ್ಯ ಸರ್ಕಾರ ಒಂದು ಕಣ್ಣಿಗೆ ಸುಣ್ಣ, ಒಂದು ಕಣ್ಣಿಗೆ ಬೆಣ್ಣೆ ಹಚ್ಚುತ್ತಿದೆ, ಮೃತ ಆದೀಲ್ ತಂದೆಯೇ ಎರಡೆರಡು ಹೇಳಿಕೆ ನೀಡಿದ್ದಾರೆ. ಒಮ್ಮೆ ಲೋಬಿಪಿಯಿಂದ ಮಗ ಸತ್ತಿದ್ದಾನೆ ಅಂತಾರೆ, ಮತ್ತೊಮ್ಮೆ ಲಾಕಪ್ ಡೆತ್ ಅಂತಾ ಹೇಳ್ತಾರೆ. ಮುಸ್ಲಿಂ ಅಂದೋಡಣೆ ಪರಿಹಾರ ಘೋಷಣೆ ಮಾಡಬೇಕಿತ್ತು. ರಾಜ್ಯ…
ನವದೆಹಲಿ : ದೆಹಲಿಯ ಬೇಬಿ ಕೇರ್ ಸೆಂಟರ್ ನಲ್ಲಿ ಸಿಲಿಂಡರ್ ಸ್ಪೋಟಗೊಂಡು ಏಳು ಶಿಶುಗಳು ಸಾವನ್ನಪ್ಪಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಆಸ್ಪತ್ರೆ ಮಾಲೀಕ ನವೀನ್ ಕಿಚಿ ವಿರುದ್ಧ ಪ್ರಕರಣ ದಾಖಲಿಸಲಾಗಿದೆ. ದೆಹಲಿಯ ಮಕ್ಕಳ ಆಸ್ಪತ್ರೆಯಲ್ಲಿ ನಿನ್ನೆ ತಡರಾತ್ರಿ ಸಂಭವಿಸಿದ ಅಗ್ನಿದುರಂತ ಪ್ರಕರಣದ ಹಿನ್ನೆಲೆಯಲ್ಲಿ ಆಸ್ಪತ್ರೆ ಮಾಲೀಕ ನವೀನ್ ಕಿಚಿ ವಿರುದ್ಧ ದೆಹಲಿ ಪೊಲೀಸರು ದೂರು ದಾಖಲಿಸಿಕೊಂಡಿದ್ದಾರೆ. ದೆಹಲಿಯ ಮಕ್ಕಳ ಆಸ್ಪತ್ರೆಯಲ್ಲಿ ಶನಿವಾರ ತಡರಾತ್ರಿ ಸಂಭವಿಸಿದ ಭಾರಿ ಬೆಂಕಿಯಲ್ಲಿ ಕನಿಷ್ಠ ಏಳು ನವಜಾತ ಶಿಶುಗಳು ಸಾವನ್ನಪ್ಪಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಪೂರ್ವ ದೆಹಲಿಯ ವಿವೇಕ್ ವಿಹಾರ್ ಪ್ರದೇಶದ ಶಿಶು ಆರೈಕೆ ಕೇಂದ್ರದಲ್ಲಿ ರಾತ್ರಿ 11.32 ಕ್ಕೆ ಬೆಂಕಿಯ ಬಗ್ಗೆ ಕರೆ ಬಂದಿದ್ದು, ನಂತರ 16 ಅಗ್ನಿಶಾಮಕ ಟೆಂಡರ್ಗಳನ್ನು ಸ್ಥಳಕ್ಕೆ ರವಾನಿಸಲಾಗಿದೆ ಎಂದು ದೆಹಲಿ ಅಗ್ನಿಶಾಮಕ ಸೇವೆಗಳು ತಿಳಿಸಿವೆ. https://twitter.com/i/status/1794469483148714058 ಕಟ್ಟಡದಿಂದ 12 ನವಜಾತ ಶಿಶುಗಳನ್ನು ರಕ್ಷಿಸಲಾಗಿದೆ ಆದರೆ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುವಾಗ ಏಳು ಮಂದಿ ಸಾವನ್ನಪ್ಪಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಇತರ ಐದು ಮಕ್ಕಳು…
ಬೆಂಗಳೂರು : ಬೆಂಗಳೂರು: ತುಮಕೂರು ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ದಿನೇ ದಿನೇ ಬೈಕ್ನಲ್ಲಿ ವ್ಹೀಲಿಂಗ್ ಮಾಡುವ ಪುಂಡರ ಹಾವಳಿ ಹೆಚ್ಚುತ್ತಿದೆ. ಬೆಂಗಳೂರು ಹೊರವಲಯ ನೆಲಮಂಗಲ ರಸ್ತೆಯಲ್ಲಿ ಬೈಕ್ ವ್ಹೀಲಿಂಗ್ ಮಾಡುವವರ ಶೋಕಿ ಜಾಸ್ತಿಯಾಗಿದೆ. ಇವರ ಭಯಾನಕ ಡೆಡ್ಲಿ ವ್ಹೀಲಿಂಗ್ಗೆ ವಾಹನ ಸವಾರರಿಗೆ ಆತಂಕ ಶುರುವಾಗಿದೆ. ಬೆಂಗಳೂರಿನ ನೆಲಮಂಗಲ ಟೌನ್ ಬಳಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಪುಂಡರು ರೀಲ್ಸ್ ಹುಚ್ಚಿಗಾಗಿ ವ್ಹೀಲಿಂಗ್ ಮಾಡುವ ಹುಚ್ಚಾಟ ಹೆಚ್ಚಾಗಿದ್ದು, ಸಾರ್ವಜನಿಕರು ಜೀವ ಕೈಯಲ್ಲಿ ಹಿಡಿದು ಓಡಾಡುವಂತಾಗಿದೆ. ಪ್ರತಿನಿತ್ಯ ರಾತ್ರಿಯಾಯ್ತು ಅಂದರೆ ಬೆಂಗಳೂರು ನಗರದಿಂದ ಬೈಕ್ ಹಾವಳಿ ಪುಂಡರು ಬರುತ್ತಾರೆ. ಈ ಪುಂಡರು ಒಂದೇ ಚಕ್ರದಲ್ಲಿ ಭಯಾನಕ ಡೆಡ್ಲಿ ವ್ಹೀಲಿಂಗ್ ಮಾಡುತ್ತಾರೆ. ಇಂತಹ ಪುಂಡರ ಹಾವಳಿ ತಪ್ಪಿಸುವಂತೆ ಸಾರ್ವಜನಿಕರು ಒತ್ತಾಯಿಸಿದ್ದಾರೆ.
ಬೆಂಗಳೂರು: ಎಲೆಕ್ಟ್ರಾನಿಕ್ ಸಿಟಿ ಸಮೀಪದ ಜಿ.ಆರ್.ಫಾರ್ಮ್ ಹೌಸ್ನಲ್ಲಿ ನಡೆದ ರೇವ್ ಪಾರ್ಟಿ ಪ್ರಕರಣದ ತನಿಖೆ ನಡೆಸುತ್ತಿರುವ ಸಿಸಿಬಿ ಪೊಲೀಸರು ಈಗಾಗಲೇ ವಿಚಾರಣೆಗೆ ಹಾಜರಾಗುವಂತೆ ಹಲವರಿಗೆ ನೋಟಿಸ್ ನೀಡಿದೆ. ರೇವ್ ಪಾರ್ಟಿ ಪ್ರಕರಣದ ತನಿಖೆ ನಡೆಸುತ್ತಿರುವ ಸಿಸಿಬಿಗೆ ಮತ್ತೊಷ್ಟು ಸ್ಪೋಟಕ ಸಂಗತಿಗಳ ಮಾಹಿತಿ ಸಿಕ್ಕಿದ್ದು, ರೇವ್ ಪಾರ್ಟಿಯಲ್ಲಿ ಕೇವಲ ಡ್ರಗ್ಸ್ ದಂಧೆ ಮಾತ್ರವಲ್ಲ, ಬೆಟ್ಟಿಂಗ್ ಹಾಗೂ ಸೆಕ್ಸ್ ದಂಧೆಯೂ ನಡೆದಿದೆ ಎನ್ನುವ ಮಾಹಿತಿ ಲಭ್ಯವಾಗಿದೆ. ಜೊತೆಗೆ ಹಲವರು ರೇವ್ ಪಾರ್ಟಿಯಲಿ ಬೆಟ್ಟಿಂಗ್ ನಲ್ಲಿ ಭಾಗಿಯಾಗಿದ್ದರು ಎಂದು ತಿಳಿದುಬಂದಿದೆ. ಪಾರ್ಟಿಯಲ್ಲಿ ಡ್ರಗ್ಸ್ ಸೇವನೆ ದೃಧಿಢಪಟ್ಟಿರುವ ಹಿನ್ನೆಲೆಯಲ್ಲಿ ನಟಿ ಹೇಮಾ ಸೇರಿದಂತೆ 86 ಮಂದಿಗೆ ನೋಟಿಸ್ ನೀಡಿ ವಿಚಾರಣೆ ನಡೆಸಲು ತೀರ್ಮಾನಿಸಲಾಗಿದ್ದು, ಹೆಚ್ಚಿನ ತನಿಖೆ ಮುಂದುವರಿದಿದೆ ಎಂದು ಮೂಲಗಳು ಹೇಳಿವೆ.
ನವದೆಹಲಿ: ಗುಜರಾತ್ನ ರಾಜ್ಕೋಟ್ ನಗರದ ಗೇಮಿಂಗ್ ವಲಯವನ್ನು ಮೇ 25 ರಂದು ಸಂಜೆ ಆವರಿಸಿದ ಭಾರಿ ಬೆಂಕಿಯಲ್ಲಿ 27 ಕ್ಕೂ ಹೆಚ್ಚು ಜನರು ಸಾವನ್ನಪ್ಪಿದ್ದಾರೆ ಎಂದು ವರದಿಯಾಗಿದೆ. ರಕ್ಷಣಾ ಕಾರ್ಯಾಚರಣೆ ಇನ್ನೂ ಮುಂದುವರೆದಿದೆ ಮತ್ತು ಸಾವುನೋವುಗಳ ಸಂಖ್ಯೆ ಹೆಚ್ಚಾಗಬಹುದು ಎಂದು ಅಧಿಕಾರಿಗಳು ಆತಂಕ ವ್ಯಕ್ತಪಡಿಸಿದ್ದಾರೆ. ಗುಜರಾತ್ ಮುಖ್ಯಮಂತ್ರಿ ಭೂಪೇಂದ್ರ ಪಟೇಲ್ ಅವರು ಘಟನೆಯ ಕಾರಣಗಳನ್ನು ಕಂಡುಹಿಡಿಯಲು ಮತ್ತು ಜವಾಬ್ದಾರಿಯುತ ಜನರನ್ನು ಗುರುತಿಸಲು ವಿಶೇಷ ತನಿಖಾ ತಂಡವನ್ನು (ಎಸ್ಐಟಿ) ರಚಿಸಿದ್ದಾರೆ. ಐವರು ಸದಸ್ಯರ ಎಸ್ಐಟಿಯ ನೇತೃತ್ವವನ್ನು ಹೆಚ್ಚುವರಿ ಡಿಜಿ (ಸಿಐಡಿ, ಅಪರಾಧ) ಸುಭಾಷ್ ತ್ರಿವೇದಿ ವಹಿಸಲಿದ್ದಾರೆ. ಗುಜರಾತ್ ಮುಖ್ಯಮಂತ್ರಿ ಭೂಪೇಂದ್ರ ಪಟೇಲ್ ಮೃತರ ಕುಟುಂಬಗಳಿಗೆ 4 ಲಕ್ಷ ರೂ., ಗಾಯಗೊಂಡವರಿಗೆ 50 ಸಾವಿರ ರೂ.ಪರಿಹಾರ ಘೋಷಣೆ ಮಾಡಿದ್ದಾರೆ. ಘಟನೆಯ ಬಗ್ಗೆ ಕೇಂದ್ರ ಆರೋಗ್ಯ ಸಚಿವ ಮನ್ಸುಖ್ ಮಾಂಡವಿಯಾ ದುಃಖ ವ್ಯಕ್ತಪಡಿಸಿದ್ದು, ಗಾಯಗೊಂಡವರಿಗೆ ಚಿಕಿತ್ಸೆ ನೀಡಲು ರಾಜ್ಕೋಟ್ ಏಮ್ಸ್ನಲ್ಲಿ 30 ಕ್ಕೂ ಹೆಚ್ಚು ಐಸಿಯು ಹಾಸಿಗೆಗಳನ್ನು ಸಿದ್ಧಪಡಿಸಲಾಗಿದೆ ಎಂದು ಹೇಳಿದರು ಎಸ್ಐಟಿ ಸದಸ್ಯರು ಮುಂಜಾನೆ…
ನವದೆಹಲಿ : ಪ್ಯಾಲೆಸ್ಟೈನ್ ನ ಉಗ್ರಗಾಮಿ ಸಂಘಟನೆ ಹಮಾಸ್ ನೊಂದಿಗೆ ನಡೆಯುತ್ತಿರುವ ಯುದ್ಧದಿಂದಾಗಿ ಕಾರ್ಮಿಕರ ಕೊರತೆಯನ್ನು ನೀಗಿಸಲು ತೆಲಂಗಾಣದ ಅನೇಕ ಕಾರ್ಮಿಕರು ಇಸ್ರೇಲ್ ಗೆ ತೆರಳುತ್ತಿದ್ದಾರೆ. ಹೈದರಾಬಾದ್ನಲ್ಲಿ ಶುಕ್ರವಾರ ಮುಕ್ತಾಯಗೊಂಡ ನಾಲ್ಕು ದಿನಗಳ ಕಾರ್ಯಕ್ರಮದ ನಂತರ, 2,209 ಕಾರ್ಮಿಕರು ಇಸ್ರೇಲ್ನಲ್ಲಿ ನಿರ್ಮಾಣ ಉದ್ಯೋಗಗಳಿಗೆ ಸಹಿ ಹಾಕಿದರು. ತಮ್ಮ ಕೌಶಲ್ಯಗಳನ್ನು ತೋರಿಸಲು ಪರೀಕ್ಷೆಗಳಲ್ಲಿ ಉತ್ತೀರ್ಣರಾದ ನಂತರ, 905 ಕಾರ್ಮಿಕರನ್ನು ಇಸ್ರೇಲ್ನಲ್ಲಿ ಕೆಲಸ ಮಾಡಲು ಆಯ್ಕೆ ಮಾಡಲಾಯಿತು ಮತ್ತು ಅವರನ್ನು ಪಶ್ಚಿಮ ಏಷ್ಯಾದ ದೇಶದ ವಿದೇಶಿ ಕಾರ್ಮಿಕ ಪಡೆಗೆ ಸೇರಿಸಲಾಗುವುದು ಎಂದು ವರದಿಯಾಗಿದೆ. ತೆಲಂಗಾಣದಲ್ಲಿ ನೇಮಕಗೊಂಡ ಕಾರ್ಮಿಕರಲ್ಲಿ ಬಡಗಿಗಳು, ಸೆರಾಮಿಕ್ ಟೈಲರ್ ಗಳು, ಪ್ಲಾಸ್ಟರ್ ಗಳು ಮತ್ತು ಕಬ್ಬಿಣದ ಬೆಂಡರ್ ಗಳು ಸೇರಿದ್ದಾರೆ. ಅನೇಕ ಭಾರತೀಯರು ಯುದ್ಧ ಪೀಡಿತ ಪ್ರದೇಶದಲ್ಲಿ ಕೆಲಸ ಮಾಡಲು ಸಿದ್ಧರಿದ್ದಾರೆ ಏಕೆಂದರೆ ಇಸ್ರೇಲ್ನ ನಿರ್ಮಾಣ ಉದ್ಯಮವು ಅವರಿಗೆ ಸಾಕಷ್ಟು ಪಾವತಿಸುತ್ತದೆ ಎಂದು ಇಂಡಿಯನ್ ಎಕ್ಸ್ಪ್ರೆಸ್ ವರದಿ ಮಾಡಿದೆ. ಪ್ರತಿ ಕಾರ್ಮಿಕನು ತಿಂಗಳಿಗೆ 1.2 ಲಕ್ಷದಿಂದ 1.38 ಲಕ್ಷ ರೂ.ಗಳವರೆಗೆ ಗಳಿಸುತ್ತಾನೆ…
ನವದೆಹಲಿ : ದೆಹಲಿಯ ಬೇಬಿ ಕೇರ್ ಸೆಂಟರ್ ನಲ್ಲಿ ಅಗ್ನಿದುರಂತದ ಬೆನ್ನಲ್ಲೇ ದೆಹಲಿಯಲ್ಲಿ ಅಗ್ನಿ ಅವಘಡ ಸಂಭವಿಸಿದ್ದು, ಮೂವರು ಸಜೀವ ದಹನವಾಗಿರುವ ಘಟನೆ ನಡೆದಿದೆ. ದೆಹಲಿಯ ಕೃಷ್ಣಾನಗರದ ಕಟ್ಟಡದಲ್ಲಿ ಅಗ್ನಿ ದುರಂತ ಸಂಭವಿಸಿದ್ದು, ಕಟ್ಟಡದಲ್ಲಿದ್ದ ಮೂವರು ಸುಟ್ಟು ಕರಕಲಾಗಿದ್ದಾರೆ. ಉಳಿದ ಏಳು ಮಂದಿಯನ್ನು ರಕ್ಷಣೆ ಮಾಡಲಾಗಿದ್ದು, ಸ್ಥಳೀಯ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಇದಕ್ಕೂ ಮುನ್ನ ದೆಹಲಿಯ ಬೇಬೀ ಕೇರ್ ಆಸ್ಪತ್ರೆಯಲ್ಲಿ ಸಿಲಿಂಡರ್ ಸ್ಪೋಟಗೊಂಡು ಏಳು ನವಜಾತ ಶಿಶುಗಳು ಸಾವನ್ನಪ್ಪಿದ್ದು, ಹಲವು ಶಿಶುಗಳಿಗೆ ಗಂಭೀರ ಗಾಯವಾಗಿದೆ.
ಬೆಂಗಳೂರು : ವೈಶಾಖ ಮಾಸದ ಕೃಷ್ಣ ಪಕ್ಷದಲ್ಲಿ ಬರುವ ಚತುರ್ದಶಿಯನ್ನು ಏಕದಂತ ಸಂಕಷ್ಟಿ ಚತುರ್ಥಿ ಎಂದು ಕರೆಯಲಾಗುತ್ತದೆ. ತಾಯಂದಿರು ತಮ್ಮ ಮಕ್ಕಳ ಸಲುವಾಗಿ ಮತ್ತು ಮಕ್ಕಳನ್ನು ಹೊಂದುವ ಸಲುವಾಗಿ ಈ ಉಪವಾಸವನ್ನು ಆಚರಿಸುತ್ತಾರೆ. ಈ ವರ್ಷ, ಏಕದಂತ ಸಂಕಷ್ಟ ಚತುರ್ಥಿ ಮೇ 26 ರಂದು ಬರುತ್ತದೆ. ಈ ದಿನ ವಿನಾಯಕ ಮತ್ತು ಚಂದ್ರ ದೇವತೆಯನ್ನು ಪೂಜಿಸಲಾಗುತ್ತದೆ. ಏಕಾದಂತ ಸಂಕಷ್ಟ ಚತುರ್ಥಿ ಪೂಜಾ ವಿಧಾನ, ಶುಭ ಸಮಯ ಮತ್ತು ಮಹತ್ವದಂತಹ ಸಂಪೂರ್ಣ ವಿವರಗಳನ್ನು ತಿಳಿದುಕೊಳ್ಳೋಣ. ಒಳ್ಳೆಯ ಮುಹೂರ್ತ ಏಕ್ದಂತ ಸಂಕಷ್ಟ ಚತುರ್ಥಿ ತಿಥಿ ಮೇ 26 ರಂದು ಸಂಜೆ 6.06 ಕ್ಕೆ ಪ್ರಾರಂಭವಾಗುತ್ತದೆ ಮತ್ತು ಮೇ 27 ರಂದು ಸಂಜೆ 4:53 ಕ್ಕೆ ಕೊನೆಗೊಳ್ಳುತ್ತದೆ. ಪ್ರದೋಷದ ಅವಧಿಯಲ್ಲಿ ಈ ವ್ರತವನ್ನು ಮಾಡಿದರೆ, ಗಣೇಶನ ಆಶೀರ್ವಾದವು ಹೇರಳವಾಗಿರುತ್ತದೆ. ಈ ದಿನ ವಿನಾಯಕನನ್ನು ಪೂಜಿಸಲಾಗುತ್ತದೆ. ಯಾವುದೇ ಶುಭ ಕಾರ್ಯವು ಗಣೇಶನ ಆರಾಧನೆಯೊಂದಿಗೆ ಪ್ರಾರಂಭವಾಗುತ್ತದೆ. ಅಂತಹ ಶುಭ ಚತುರ್ಥಿ ದಿನದಂದು ಗಣೇಶನನ್ನು ಮೆಚ್ಚಿಸುವುದು ತುಂಬಾ ಸುಲಭ. ಪೂಜಾ…