Subscribe to Updates
Get the latest creative news from FooBar about art, design and business.
Author: kannadanewsnow57
ಧಾರವಾಡ: ಚಳಿಗಾಲದ ಅಧಿವೇಶನಕ್ಕೆ ಮುಹೂರ್ತ ಫಿಕ್ಸ್ ಆಗಿದ್ದು, ಬೆಳಗಾವಿಯಲ್ಲಿ ಡಿ.8ರಿಂದ ಚಳಿಗಾಲದ ವಿಧಾನ ಮಂಡಲ ಅಧಿವೇಶನ ನಡೆಸಲು ನಿರ್ಧರಿಸಲಾಗಿದೆ ಎಂದು ವಿಧಾನ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ ತಿಳಿಸಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಚಳಿಗಾಲದ ವಿಧಾನ ಮಂಡಲ ಅಧಿವೇಶನ ನಡೆಸುವ ಕುರಿತು ಮುಂದಿನ ವಾರ ಬೆಳಗಾವಿ ಜಿಲ್ಲಾಧಿಕಾರಿ ಜತೆ ಸಭೆ ನಡೆಸಲಿದ್ದೇವೆ. ಸಿಎಂ ಸಿದ್ದರಾಮಯ್ಯ ಜತೆಗೆ ಈ ವಿಚಾರವಾಗಿ ಈಗಾಗಲೇ ಚರ್ಚೆ ಮಾಡಿದ್ದೇನೆ. ಅವರು ಕೂಡ ಒಪ್ಪಿಕೊಂಡಿದ್ದಾರೆ ಎಂದರು. ಉತ್ತರ ಕರ್ನಾಟಕದ ಶಾಸಕರು ಅಭಿವೃದ್ಧಿ ಬಗ್ಗೆ ಮಾತನಾಡುವುದಿಲ್ಲ. ಆದರೆ, ದಕ್ಷಿಣ ಕರ್ನಾಟಕದವರು ಮಾತನಾಡುತ್ತಾರೆ. ಪ್ರತಿ ಬುಧವಾರ, ಗುರುವಾರ ಉತ್ತರ ಕರ್ನಾಟಕದ ಸಮಸ್ಯೆಗಳ ಬಗ್ಗೆ ಮಾತನಾಡಲು ಸಮಯ ನಿಗದಿ ಮಾಡಲಾಗಿದೆ. ಆದರೂ ಯಾವೊಬ್ಬ ಶಾಸಕರೂ ಉತ್ತರ ಕರ್ನಾಟಕದ ಬಗ್ಗೆ ಮಾತನಾಡುವುದಿಲ್ಲ. ಈ ಭಾರಿ ಉತ್ತರ ಕರ್ನಾಟಕದ ಚರ್ಚೆ ಬಗ್ಗೆ ನಿರ್ಲಕ್ಷ್ಯಆಗದಂತೆ ನೋಡಿಕೊಳ್ಳುತ್ತೇವೆ ಎಂದು ತಿಳಿಸಿದ್ದಾರೆ.
ಹರಪನಹಳ್ಳಿ: ವಿಜಯನಗರ ಜಿಲ್ಲೆಯ ಹರಪನಹಳ್ಳಿ ತಾಲೂಕಿನ ತುಂಬೀಗೆರೆಯಲ್ಲಿ ಶಂಕಿತ ಡೆಂಫ್ ಜ್ವರಕ್ಕೆ ಮಹಿಳೆಯೊಬ್ಬರು ಬಲಿಯಾಗಿದ್ದಾರೆ. ಎಸ್.ಟಿ. ಸೌಭಾಗ್ಯಮ್ಮ (35) ಎಂಬುವರು ಶುಕ್ರವಾರ ತಡರಾತ್ರಿ ಸಾವನ್ನಪ್ಪಿದ್ದಾರೆ. ಸೌಭಾಗ್ಯಮ್ಮ ಎರಡು ದಿನದಿಂದ ಉಸಿರಾಟ ತೊಂದರೆ ಹಾಗೂ ವೈರಸ್ ಸೋಂಕಿನಿಂದ ಬಳಲುತ್ತಿದ್ದು, ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಇವರು ವಾಸವಿರುವ ಕಾಲನಿಯಲ್ಲಿ ಕಲುಷಿತ ವಾತಾವರಣವಿದ್ದು, ಅತಿಯಾದ ಮಳೆ ಪರಿಣಾಮ ಸೊಳ್ಳೆಗಳು ಕಚ್ಚಿ ಡೆಂಘ ಬಂದಿರಬಹುದು. ಎರಡು ದಿನದಲ್ಲಿ ಮಾಹಿತಿ ಲಭ್ಯವಾಗಲಿದೆ ಎಂದು ಟಿಎಚ್ ಒ ಡಾ.ಪೃಥ್ವಿ ತಿಳಿಸಿದ್ದಾರೆ. ಮಳೆಗಾಲದ ದಿನಗಳಲ್ಲಿ ಡೆಂಗಿ ಹರಡುವ ಸಾಧ್ಯತೆ ಹೆಚ್ಚಿರುತ್ತದೆ. ಮಳೆ ಬಂದು ಮನೆ ಸುತ್ತಮುತ್ತ ನೀರು ಶೇಖರಣೆಯಾದಲ್ಲಿ ಸೊಳ್ಳೆಗಳ ಸಂತಾನೋತ್ಪತ್ತಿಯಾಗಿ ಡೆಂಗಿ ಹರಡಲು ಸಹಾಯಕವಾಗುತ್ತದೆ ಹಾಗೂ ವಾತಾವರಣದ ಉಷ್ಣಾಂಶವು ಕೂಡ ವೈರಾಣುಗಳ ಬೆಳವಣಿಗೆಗೆ ಹಾಗೂ ಡೆಂಗ್ಯೂ ಸೊಳ್ಳೆಗಳ ಸಂತಾನೋತ್ಪತ್ತಿಗೆ ಪೂರಕವಾಗಿರುವುದರಿಂದ ಮಳೆಗಾಲದಲ್ಲಿ ಡೆಂಗಿ ಪ್ರಕರಣಗಳು ಹೆಚ್ಚಾಗಿ ಕಂಡುಬರುತ್ತವೆ. ಆದ ಕಾರಣ ಸಾರ್ವಜನಿಕರು ತಮ್ಮ ಪರಿಸರದಲ್ಲಿ ಎಲ್ಲಿಯೂ ನೀರು ನಿಲ್ಲದಂತೆ ನೋಡಿಕೊಳ್ಳಬೇಕು. ಮನೆಯ ಒಳಗಡೆಯೂ ನೀರನ್ನು ಸಂಗ್ರಹಿಸುವುದಾದರೆ ಅದರ ಮುಚ್ಚಳವನ್ನು ಮುಚ್ಚಿಟ್ಟಿರಬೇಕು.…
ಬೆಂಗಳೂರು : ರಾಜ್ಯ ಸರ್ಕಾರವು ಗ್ರಾಮೀಣ ಜನತೆಗೆ ಭರ್ಜರಿ ಸಿಹಿಸುದ್ದಿ ನೀಡಿದ್ದು, ಇ-ಸ್ವತ್ತು ಯೋಜನೆಯಡಿ ಗ್ರಾಮೀಣ ಆಸ್ತಿಗಳಿಗೆ ಇ-ಖಾತಾ ವಿತರಣೆ ಮಾಡಲು ನಿರ್ಧರಿಸಿದೆ. ಗ್ರಾಮೀಣ ಭಾಗಗಳಲ್ಲಿ ಆಸ್ತಿ ಪ್ರಮಾಣ ಪತ್ರ ಪಡೆಯಲು ಸುಲಭವಾಗುವಂತೆ ಕರ್ನಾಟಕ ಗ್ರಾಮ ಸ್ವರಾಜ್ ಮತ್ತು ಪಂಚಾಯತ್ ರಾಜ್ (ಗ್ರಾಮ ಪಂಚಾಯಿತಿಗಳ ತೆರಿಗೆ, ದರ ಮತ್ತು ಶುಲ್ಕಗಳು) ನಿಯಮಗಳು, 2025 ನ್ನು ಜಾರಿಗೊಳಿಸಿದೆ. ಈ ನಿಯಮಗಳ ಜಾರಿಯಿಂದ ಇ-ಸ್ವತ್ತು ಅಭಿಯಾನಕ್ಕೆ ರೆಕ್ಕೆ ಬಂದಿದ್ದು, ಒಂದು ಕೋಟಿ ಗ್ರಾಮೀಣ ಆಸ್ತಿಗಳಿಗೆ ಡಿಜಿಟಲ್ ಆಸ್ತಿ ಪ್ರಮಾಣ ಪತ್ರ ವಿತರಿಸುವ ನಮ್ಮ ಗುರಿ ಸಾಧ್ಯವಾಗಲಿದೆ. ಗ್ರಾಮೀಣ ಭಾಗದ ಜನರಿಗೆ ವ್ಯವಸ್ಥಿತವಾಗಿ ಎಲ್ಲಾ ಸೇವೆಗಳನ್ನು ನೀಡುವ ನಮ್ಮ ಸಂಕಲ್ಪ ನೆರವೇರಲಿದ್ದು, ನಮ್ಮ ಇ-ಸ್ವತ್ತು ಅಭಿಯಾನ ಯಶಸ್ವಿಯಾಗಲಿದೆ. ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯಿಂದ ಪ್ರಕಟಣೆಯಾಗಿದೆ ಇನ್ನೇನು ಕೆಲವೇ ದಿನಗಳಲ್ಲಿ ಈ ಸ್ವತ್ತು ಅಭಿಯಾನ ಪ್ರಾರಂಭವಾಗಲಿದೆ.
ಬೆಂಗಳೂರು: ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತದ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ಇನ್ನೂ 3 ದಿನ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಕರ್ನಾಟಕದ ಕರಾವಳಿ, ಉತ್ತರ ಮತ್ತು ದಕ್ಷಿಣ ಒಳನಾಡು ಹಾಗೂ ಘಟ್ಟ ಪ್ರದೇಶಗಳಲ್ಲಿ ಅ. 27ರವರೆಗೂ ಮಳೆಯ ಆರ್ಭಟ ಮುಂದುವರಿಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಅ.26ರಂದು ಕರಾವಳಿ ಮತ್ತು ದಕ್ಷಿಣ, ಉತ್ತರ ಒಳನಾಡಿನ ಜಿಲ್ಲೆಗಳಲ್ಲಿ ವ್ಯಾಪಕ ಮಳೆಯಾಗಲಿದೆ. ಬೆಳಗಾವಿ, ಧಾರವಾಡ, ಬಾಗಲಕೋಟೆ, ಯಾದಗಿರಿ, ಕಲಬುರಗಿ, ವಿಜಯಪುರ, ಚಿತ್ರದುರ್ಗ, ದಾವಣಗೆರೆ ಜಿಲ್ಲೆಗಳಿಗೆ ಯೆಲ್ಲೊ ಅಲರ್ಟ್ ಹಾಗೂ ಚಾಮರಾಜನಗರ, ಹಾಸನ, ಕೊಡಗು, ಕೋಲಾರ ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ನೀಡಲಾಗಿದೆ. ರಾಜ್ಯದ ಹಲವು ಜಿಲ್ಲೆಗಳಲ್ಲಿ ಅ.26 ಮತ್ತು 27ರಂದು ಗುಡುಗು ಸಿಡಿಲಿನೊಂದಿಗೆ ಭಾರೀ ಗಾಳಿ ಸಮೇತ ಮಳೆಯಾಗುವ ಸಾಧ್ಯತೆಯಿದೆ ಎಂದು ಭಾರತೀಯ ಹವಾಮಾನ ಇಲಾಖೆ ಹಾಗೂ ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರ ಸೂಚಿಸಿದೆ.
ಉತ್ತರ ಪ್ರದೇಶದಲ್ಲಿ ಘೋರ ಘಟನೆಯೊಂದು ನಡೆದಿದ್ದು, ಸರ್ಕಾರಿ ಕೆಲಸಕ್ಕಾಗಿ ತನ್ನ ಹೆತ್ತ ತಾಯಿಯನ್ನೇ ಮಗನೊಬ್ಬ ಬರ್ಬರವಾಗಿ ಕೊಲೆ ಮಾಡಿರುವ ಘಟನೆ ನಡೆದಿದೆ. ಉತ್ತರ ಪ್ರದೇಶದ ಗೊಂಡಾದಲ್ಲಿ ಒಬ್ಬ ವ್ಯಕ್ತಿ ತನ್ನ ತಾಯಿಯನ್ನು ಕಲ್ಲಿನಿಂದ ಹೊಡೆದು ಕೊಂದಿದ್ದಾನೆ. ಆ ಮಹಿಳೆ ತನ್ನ ಮೃತ ಗಂಡನ ಸರ್ಕಾರಿ ಕೆಲಸವನ್ನು ತನ್ನ ಕಿರಿಯ ಮಗನಿಗೆ ಪಡೆದುಕೊಂಡಿದ್ದಳು. ಈ ಬಗ್ಗೆ ಹಿರಿಯ ಮಗ ತನ್ನ ತಾಯಿಯ ಮೇಲೆ ಕೋಪಗೊಂಡಿದ್ದ. ಅವರ ನಡುವಿನ ಜಗಳವು ಮಗ ತನ್ನ ತಾಯಿಯ ಜೀವವನ್ನು ತೆಗೆದುಕೊಳ್ಳುವ ಹಂತಕ್ಕೆ ತಲುಪಿತು. ಮೃತ ಕಾಂತಿ ದೇವಿ (58) ಗೊಂಡಾ ನಗರ ಪಾಲಿಕೆಯಲ್ಲಿ ನೈರ್ಮಲ್ಯ ಕಾರ್ಮಿಕರಾಗಿದ್ದರು. ಅವರು ತಮ್ಮ ಹಿರಿಯ ಮಗ ಸಂದೀಪ್ ವಾಲ್ಮೀಕಿ ಅವರೊಂದಿಗೆ ಪಂಡಿತ್ ಪೂರ್ವ ಗ್ರಾಮದಲ್ಲಿ ವಾಸಿಸುತ್ತಿದ್ದರು. ಅವರ ಪತಿ ಕೂಡ ಪುರಸಭೆಯಲ್ಲಿ ಕೆಲಸ ಮಾಡುತ್ತಿದ್ದರು. ಅವರ ಮರಣದ ನಂತರ, ಕಾಂತಿ ದೇವಿ ತಮ್ಮ ಕಿರಿಯ ಮಗನಿಗೆ ಅನುಕಂಪದ ಕೆಲಸವನ್ನು ಪಡೆದುಕೊಂಡರು. ಇದು ಅವರ ಹಿರಿಯ ಮಗನೊಂದಿಗಿನ ವಿವಾದಗಳಿಗೆ ಕಾರಣವಾಯಿತು. ಗೊಂಡಾ ಎಸ್ಎಸ್ಪಿ…
ಲಕ್ನೋ: ದೇಶದಲ್ಲಿ ಮತ್ತೊಂದು ಪೈಶಾಚಿಕ ಕೃತ್ಯವೊಂದು ಬೆಳಕಿಗೆ ಬಂದಿದ್ದು, ಉತ್ತರ ಪ್ರದೇಶದ ಮಂಡಿಯಾವ್ ಪ್ರದೇಶದಲ್ಲಿ ಲಿಫ್ಟ್ ಕೊಡುವ ನೆಪದಲ್ಲಿ ವಿದ್ಯಾರ್ಥಿನಿಯನ್ನು ಅಪಹರಿಸಿ ಮೂವರು ಕಾಮುಕರು ಸಾಮೂಹಿಕ ಅತ್ಯಾಚಾರ ಎಸಗಿರುವ ಘಟನೆ ನಡೆದಿದೆ. 18 ವರ್ಷದ ಇಂಟರ್ಮೀಡಿಯೇಟ್ ವಿದ್ಯಾರ್ಥಿನಿಯ ಮೇಲೆ ಲಿಫ್ಟ್ ನೆಪದಲ್ಲಿ ಕಾರಿನಲ್ಲಿ ಫ್ಲಾಟ್ಗೆ ಕರೆದೊಯ್ದು ನಂತರ ಕಾರಿನಲ್ಲಿ ಸಾಮೂಹಿಕ ಅತ್ಯಾಚಾರ ಎಸಗಲಾಗಿದೆ. ಪೊಲೀಸರು ಇಬ್ಬರು ಆರೋಪಿಗಳಾದ ಅಂಶುಮಾನ್ ಮತ್ತು ಜುನೈದ್ ನನ್ನು ಬಂಧಿಸಿದ್ದಾರೆ, ಆದರೆ ಒಬ್ಬನಿಗಾಗಿ ಹುಡುಕಾಟ ಮುಂದುವರೆದಿದೆ. ಆರೋಪಿಗಳಲ್ಲಿ ಒಬ್ಬ ಎಲ್ಎಲ್ಬಿ ವಿದ್ಯಾರ್ಥಿಯಾಗಿದ್ದು, ಇನ್ನೊಬ್ಬರು ಬಡಗಿ ಕೆಲಸ ಮಾಡುತ್ತಿದ್ದಾನೆ. ವರದಿಗಳ ಪ್ರಕಾರ, ಅಕ್ಟೋಬರ್ 15 ರ ರಾತ್ರಿ ವಿದ್ಯಾರ್ಥಿನಿ ಕೋಪದಿಂದ ಮನೆಯಿಂದ ಹೊರಟುಹೋದಳು. ಕಾರಿನಲ್ಲಿ ಇಬ್ಬರು ಯುವಕರು ಮತ್ತು ಯುವತಿಯೊಬ್ಬಳು ಲಿಫ್ಟ್ ನೀಡಿದ್ದಳು. ಸ್ವಲ್ಪ ದೂರ ಹೋದ ನಂತರ, ಮಹಿಳೆ ಕಾರಿನಿಂದ ಇಳಿದಳು, ನಂತರ ಇಬ್ಬರು ಪುರುಷರು ಆಕೆಯನ್ನು ಫ್ಲಾಟ್ಗೆ ಕರೆದೊಯ್ದು ಆಕೆಯ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿದರು. ವಿದ್ಯಾರ್ಥಿನಿಯ ಪ್ರಕಾರ, ಮೂವರು ಆರೋಪಿಗಳು ಪರಸ್ಪರ ಅಂಶುಮಾನ್, ಜುನೈದ್…
ಬೆಂಗಳೂರು: ಕೆಪಿಟಿಸಿಎಲ್ ವತಿಯಿಂದ ತುರ್ತು ನಿರ್ವಹಣಾ ಕಾಮಗಾರಿ ಹಿನ್ನೆಲೆಯಲ್ಲಿ 66/11 ಕೆವಿ “ಕಂಠೀರವ” ಉಪಕೇಂದ್ರ ವ್ಯಾಪ್ತಿಯಲ್ಲಿ ದಿನಾಂಕ 25.10.2025 (ಶನಿವಾರ) ರಂದು ಬೆಳಗ್ಗೆ 10:00 ಗಂಟೆಯಿಂದ ಸಂಜೆ 05:00 ಗಂಟೆವರೆಗೆ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ ಉಂಟಾಗಲಿದೆ. “ಕಬ್ಬನ್ಪೇಟೆ 5ನೇ ಅಡ್ಡರಸ್ತೆ, 6ನೇ ಅಡ್ಡರಸ್ತೆ, 3ನೇ ಅಡ್ಡರಸ್ತೆ, 4ನೇ ಅಡ್ಡರಸ್ತೆ, ಚೌಳಗಳ್ಳಿ ಎ, ಬಿ, ಸಿ, ಡಿ ಗಲ್ಲಿ, ಆರ್ಬಿಐ, ನೃಪತುಂಗ ರಸ್ತೆ, ಯುವಿಸಿಇ, ಕೃಷಿ ಕಚೇರಿ, ಸರ್ಕಾರಿ ಕಲಾ ಕಾಲೇಜು, ಮಾರ್ಥಾಸ್ ಆಸ್ಪತ್ರೆ, ಸುಂಕಲ್ಪೇಟೆ, ನಗರ್ತ್ಪೇಟೆ ಮುಖ್ಯರಸ್ತೆ, ಕೆಎಎಸ್ ಲೇನ್, ‘ಸಿ’ ಲೇನ್ ‘ಎ’ ಲೇನ್ ‘ಡಿ’ ಲೇನ್ ಪಿಆರ್ಎಸ್ ಲೇನ್, 13ನೇ ಅಡ್ಡರಸ್ತೆ, 14ನೇ ಅಡ್ಡರಸ್ತೆ, ಕಬ್ಬನ್ಪೇಟೆಯ 15ನೇ ಅಡ್ಡರಸ್ತೆ, ಕೆಜಿ ರಸ್ತೆಯ ಒಂದು ಭಾಗ, ಒಟಿಸಿ ರಸ್ತೆ, ಶಾರದಾ ರಂಗಮಂದಿರದ ಹಿಂಭಾಗ, ಎಸ್ಪಿ ರಸ್ತೆ, ಎಸ್ಜೆಪಿ ರಸ್ತೆ, ಧರ್ಮರಾಯ ಸ್ವಾಮಿ ದೇವಸ್ಥಾನ ರಸ್ತೆ, ಆದರ್ಶ ಶಂಗ್ರಿಲ್ಲಾ ಮತ್ತು ಸುತ್ತಮುತ್ತಲಿನ ಪ್ರದೇಶಗಳು. 66/11kV NGEF MUSS ಉಪಕೇಂದ್ರ ವ್ಯಾಪ್ತಿಯಲ್ಲಿ ದಿನಾಂಕ…
ನವದೆಹಲಿ : ದೇಶದ ಲಕ್ಷಾಂತರ ಬ್ಯಾಂಕ್ ಗ್ರಾಹಕರಿಗೆ ಅತ್ಯಂತ ಮುಖ್ಯವಾದ ಬ್ಯಾಂಕಿಂಗ್ ವಲಯಕ್ಕೆ ಸಂಬಂಧಿಸಿದಂತೆ ಹಣಕಾಸು ಸಚಿವಾಲಯವು ಒಂದು ಪ್ರಮುಖ ಘೋಷಣೆಯನ್ನು ಮಾಡಿದೆ. ನವೆಂಬರ್ 1, 2025 ರಿಂದ ಜಾರಿಗೆ ಬರಲಿರುವ ಬ್ಯಾಂಕಿಂಗ್ ಕಾನೂನು (ತಿದ್ದುಪಡಿ) ಕಾಯ್ದೆ, 2025 ರ ಅಡಿಯಲ್ಲಿ ಹೊಸ ನಿಯಮಗಳನ್ನು ಜಾರಿಗೆ ತರುವುದಾಗಿ ಸಚಿವಾಲಯ ಘೋಷಿಸಿದೆ. ಈ ಹೊಸ ನಿಬಂಧನೆಗಳು ನಿಮ್ಮ ಬ್ಯಾಂಕ್ ಖಾತೆಗಳು, ಲಾಕರ್ಗಳು ಮತ್ತು ಸುರಕ್ಷಿತ ಕಸ್ಟಡಿಯಲ್ಲಿರುವ ಸ್ವತ್ತುಗಳ ಮೇಲೆ ನೇರವಾಗಿ ಪರಿಣಾಮ ಬೀರುತ್ತವೆ. ಈಗ, ಗ್ರಾಹಕರು ತಮ್ಮ ಹಣ ಮತ್ತು ಸ್ವತ್ತುಗಳ ಮೇಲೆ ಹೆಚ್ಚಿನ ನಿಯಂತ್ರಣ ಮತ್ತು ನಮ್ಯತೆಯನ್ನು ಹೊಂದಿರುತ್ತಾರೆ. ನವೆಂಬರ್ 1 ರಿಂದ ಏನು ಬದಲಾಗಲಿದೆ? ಇಲ್ಲಿಯವರೆಗೆ, ಬ್ಯಾಂಕ್ ಖಾತೆಗಳು ಅಥವಾ ಲಾಕರ್ಗಳು ಒಂದು ಅಥವಾ ಎರಡು ನಾಮಿನಿಗಳ ಆಯ್ಕೆಯನ್ನು ಮಾತ್ರ ಹೊಂದಿದ್ದವು. ಆದಾಗ್ಯೂ, ಹೊಸ ನಿಯಮಗಳ ಅಡಿಯಲ್ಲಿ, ಗ್ರಾಹಕರು ಈಗ ಏಕಕಾಲದಲ್ಲಿ ಅಥವಾ ಅನುಕ್ರಮವಾಗಿ ನಾಲ್ಕು ನಾಮಿನಿಗಳನ್ನು ನಾಮನಿರ್ದೇಶನ ಮಾಡಲು ಸಾಧ್ಯವಾಗುತ್ತದೆ. ಇದರರ್ಥ ನಿಮ್ಮ ಬ್ಯಾಂಕ್ ಖಾತೆ ಅಥವಾ ಲಾಕರ್ನಲ್ಲಿ…
ಬೆಂಗಳೂರು : ಪೊಲೀಸ್ ಹುದ್ದೆ ಆಕಾಂಕ್ಷಿಗಳಿಗೆ ಗೃಹ ಸಚಿವ ಡಾ.ಜಿ.ಪರಮೇಶ್ವರ್ ಭರ್ಜರಿ ಸಿಹಿಸುದ್ದಿ ನೀಡಿದ್ದು, ಪೊಲೀಸ್ ಇಲಾಖೆಯಲ್ಲಿ 4600 ಪೊಲೀಸ್ ಕಾನ್ ಸ್ಟೆಬಲ್ ನೇಮಕಾತಿಗೆ ಶೀಘ್ರ ಅಧಿಸೂಚನೆ ಹೊರಡಿಸಲಾಗುವುದು ಎಂದು ಹೇಳಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯಪೊಲೀಸ್ ಇಲಾಖೆಯಲ್ಲಿ 4600 ಪೊಲೀಸ್ ಕಾನ್ ಸ್ಟೆಬಲ್ ನೇಮಕಾತಿಗೆ 2-3 ದಿನದಲ್ಲಿ ಅಧಿಸೂಚನೆ ಹೊರಡಿಸಲಾಗುವುದು.ಈ ಕುರಿತಾದ ಕಡತವನ್ನು ಮುಖ್ಯಮಂತ್ರಿಗಳಿಗೆ ಕಳುಹಿಸಲಾಗಿದೆ. ಒಂದೇ ಬಾರಿ ನೇಮಕ ಮಾಡಿಕೊಂಡರೆ ಪೂರಕ ತರಬೇತಿ ಕಷ್ಟವಾಗುತ್ತದೆ ಎನ್ನುವ ಕಾರಣಕ್ಕೆ ಖಾಲಿ ಇರುವ 15000 ಪೊಲೀಸ್ ಕಾನ್ ಸ್ಟೆಬಲ್ ಹುದ್ದೆಗಳನ್ನು ಒಂದು ಬಾರಿಗೆ 5 ಸಾವಿರದಂತೆ ನೇಮಕ ಮಾಡಿಕೊಳ್ಳಲಾಗುವುದು ಎಂದು ತಿಳಿಸಿದ್ದಾರೆ. ಈ ಮೂಲಕ ಪೊಲೀಸ್ ಹುದ್ದೆ ಆಕಾಂಕ್ಷಿಗಳಿಗೆ ಸಿಹಿಸುದ್ದಿ ನೀಡಿದ್ದಾರೆ. ರಾಜ್ಯದಲ್ಲಿ ಈಗಾಗಲೇ 545 ಸಬ್ ಇನ್ಸ್ಪೆಕ್ಟರ್ ನೇಮಕಾತಿ ನಡೆಯುತ್ತಿದ್ದು, ತರಬೇತಿ ನೀಡಲಾಗುತ್ತಿದೆ. ಮುಂದಿನ 4 ತಿಂಗಳಲ್ಲಿ ಎಲ್ಲರೂ ಇಲಾಖೆಗೆ ಸೇರಲಿದ್ದಾರೆ. 402 ಸಬ್ ಇನ್ಸ್ಪೆಕ್ಟರ್ ನೇಮಕಾತಿಗೆ ಆದೇಶ ನೀಡಲಾಗಿದ್ದು, ಇನ್ನು 2-3 ದಿನಗಳಲ್ಲಿ 4600 ಪೊಲೀಸ್ ಕಾನ್ ಸ್ಟೆಬಲ್…
ಕ್ರಿಶ್ಚಿಯನ್ ಅಭಿವೃದ್ಧಿ ನಿಗಮದ ಮೂಲಕ ವಿವಿಧ ಯೋಜನೆಗಳಯಡಿ ಸಾಲ ಸೌಲಭ್ಯ ಪಡೆಯಲು ಆನ್ಲೈಾನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಕ್ರಿಶ್ಚಿಯನ್ ಸಮುದಾಯದ ಮಹಿಳಾ ಸ್ವಸಹಾಯ ಗುಂಪುಗಳಿಗೆ ಸ್ವಯಂ ಉದ್ಯೋಗಕ್ಕಾಗಿ ಸಹಾಯಧನ ಯೋಜನೆ, ವಿದೇಶಿ ವಿದ್ಯಾಭ್ಯಾಸ ಸಾಲ ಯೋಜನೆ, ಶ್ರಮಶಕ್ತಿ ಯೊಜನೆ, ಸ್ವಾವಲಂಬಿ ಸಾರಥಿ ಯೋಜನೆ, ವೃತ್ತಿ ಪ್ರೋತ್ಸಾಹ ಯೋಜನೆ, ನೇರ ಸಾಲ ಯೋಜನೆ, ಶ್ರಮಶಕ್ತಿ (ವಿಶೇಷ ಮಹಿಳಾ) ಯೋಜನೆ, ಗಂಗಾ ಕಲ್ಯಾಣ ಯೋಜನೆ, ಅರಿವು ಸಾಲ ಯೋಜನೆ, ಹಾಗೂ ಸಮುದಾಯ ಆಧಾರಿತ ಕೌಶಲ್ಯ ತರಬೇತಿ ಯೋಜನೆಗಳಿಗೆ ವೆಬ್ಸೈಶಟ್ https://kccdclonline.karnataka.gov.in ಅರ್ಜಿ ಸಲ್ಲಿಸಬಹುದು. ಅರ್ಜಿ ಸಲ್ಲಿಸಲು ಇರಬೇಕಾದ ಅರ್ಹತೆಗಳು: ಅರ್ಜಿದಾರರು ಕರ್ನಾಟಕ ರಾಜ್ಯಕ್ಕೆ ಸೇರಿದ ಕ್ರಿಶ್ಚಿಯನ್ ಸಮುದಾಯದ ಖಾಯಂ ನಿವಾಸಿಗಳಾಗಿರಬೇಕು. ಚಾಲ್ತಿಯಲ್ಲಿರುವ ಜಾತಿ ಮತ್ತು ಆದಾಯ ಪ್ರಮಾಣ ಹೊಂದಿರಬೇಕು. ಸರ್ಕಾರಿ ಸೌಲಭ್ಯವನ್ನು (ಸಾಲ ಅಹಾಯಧನ) ಪಡೆಯುವ ಅರ್ಜಿದಾರರು ತಮ್ಮ ಬ್ಯಾಂಕ್ ಖಾತೆಗೆ ಆಧಾರ್ ಸಂಖ್ಯೆಯನ್ನು ಸೀಡ್ ಮಾಡಿಸಿರಬೇಕು. ಕುಟುಂಬದ ಯಾವುದೇ ಸದಸ್ಯರು ರಾಜ್ಯ ಅಥವಾ ಕೇಂದ್ರ ಪಿ.ಎಸ್.ಯು ಸರ್ಕಾರದ ಉದ್ಯೋಗಿಯಾಗಿರಬಾರದು. ವಿವಿಧ ಯೋಜನೆಗಳಿಗೆ ಅನುಗುಣವಾಗಿ…














