Subscribe to Updates
Get the latest creative news from FooBar about art, design and business.
Author: kannadanewsnow57
ಬೆಳಗಾವಿ : ಹಣಕ್ಕಾಗಿ ಅನಗತ್ಯ ಸಿಸೇರಿಯನ್ ಹೆರಿಗೆ ಮಾಡುವ ಖಾಸಗಿ ಆಸ್ಪತ್ರೆಗಳ ವಿರುದ್ಧ ಕ್ರಮಕೈಗೊಳ್ಳಲಾಗುವುದು ಎಂದು ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ದಿನೇಶ್ ಗುಂಡೂರಾವ್ ಹೇಳಿದ್ದಾರೆ. ಜೆಡಿಎಸ್ ಸದಸ್ಯ ಗೋವಿಂದರಾಜು ಅವರ ಪ್ರಶ್ನೆಗೆ ಉತ್ತರಿಸಿದ ಅವರು, ಕಳೆದ ಐದು ವರ್ಷಗಳಲ್ಲಿ ಸರ್ಕಾರಿ ಆಸ್ಪತ್ರೆಗಳಲ್ಲಿ ಶೇ. 34-38, ಖಾಸಗಿ ಆಸ್ಪತ್ರೆಗಳಲ್ಲಿ ಶೇ.62ರಷ್ಟು ಹೆರಿಗೆ ನಡೆಯುತ್ತಿದೆ. ದೊಡ್ಡ ನಗರಗಳಲ್ಲಿ ಸಿಸೇರಿಯನ್ ಸಂಖ್ಯೆ ಜಾಸ್ತಿಯಾಗಿದೆ. ಯಾಕೆ ಸಿಸೇರಿಯನ್ ಹೆರಿಗೆ ಜಾಸ್ತಿಯಾಗುತ್ತಿದೆ ಎಂಬುದನ್ನು ತಿಳಿಯಲು ಪ್ರಾಯೋಗಿಕವಾಗಿ ತುಮಕೂರು ಜಿಲ್ಲೆಯಲ್ಲಿ ಆಡಿಟ್ ಮಾಡಲಾಗುತ್ತದೆ ಎಂದರು. ಇತ್ತೀಚಿನ ವರ್ಷಗಳಲ್ಲಿ ಸಿಸೇರಿಯನ್ ಹೆರಿಗೆ ಹೆಚ್ಚಳವಾಗಲು ಗರ್ಭಿಣಿ ಮಹಿಳೆಯರ ಭಯ, ಆತಂಕ ಸೇರಿದಂತೆ ಕುಟುಂಬದ ಸದಸ್ಯರೂ ಕಾರಣರಾಗಿದ್ದಾರೆ.ಈಬಗ್ಗೆ ಅವರಿಗೆ ಅರಿವು ಮೂಡಿಸುವ ಕೆಲಸ ಆಗಬೇಕು ಎಂದು ಹೇಳಿದ್ದಾರೆ. https://twitter.com/KarnatakaVarthe/status/1998040172005658706?s=20
ಬೆಳಗಾವಿ ಸುವರ್ಣಸೌಧ : ರಾಜ್ಯದಲ್ಲಿನ ಸರ್ಕಾರಿ ಮತ್ತು ಅನುದಾನಿತ ಶಾಲೆಗಳ ಮಕ್ಕಳಿಗೆ ಶೂ ಸಾಕ್ಸ್ ವಿತರಣೆ ಮಾಡಲು ರೂ. 111.88 ಕೋಟಿ ಅನುದಾನ ಬಿಡುಗಡೆ ಮಾಡಲಾಗಿದೆ ಎಂದು ಎಂದು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವ ಮಧು ಬಂಗಾರಪ್ಪ ತಿಳಿಸಿದರು. ಅವರು ವಿಧಾನ ಪರಿಷತ್ ನಲ್ಲಿ ಸದಸ್ಯ ಜಗದೇವ್ ಗುತ್ತೇದಾರ್ ಮತ್ತು ಕೇಶವ ಪ್ರಸಾದ್ ಅವರ ಚುಕ್ಕೆ ಗುರುತಿನ ಪ್ರಶ್ನೆ ಗೆ ಉತ್ತರಿಸಿ ಮಾತನಾಡಿದರು. ರಾಜ್ಯದಲ್ಲಿನ ಎಲ್ಲಾ ಜಿಲ್ಲೆಗಳ 44525 ಶಾಲೆಗಳಿಗೆ ಶೂ ಸಾಕ್ಸ್ ವಿತರಣೆ ಮಾಡಲು ಅನುದಾನ ಬಿಡುಗಡೆ ಮಾಡಲಾಗಿದೆ ಎಂದರು. ನಮ್ಮ ರಕ್ತದಲ್ಲಿ ಕನ್ನಡವಿದೆ. ಕನ್ನಡ ಮಾಧ್ಯಮದ ಯಾವುದೇ ಶಾಲೆಗಳನ್ನು ಮುಚ್ಚುವುದಿಲ್ಲ. 2025 – 26ನೇ ಸಾಲಿನಲ್ಲಿ 900 ಸರ್ಕಾರಿ ಶಾಲೆಗಳನ್ನು ಕೆಪಿಎಸ್ ಶಾಲೆಗಳನ್ನಾಗಿ ಉನ್ನತೀಕರಿಸಲಾಗುತ್ತಿದೆ. ಮುಂದಿನ ದಿನಗಳಲ್ಲಿ ಎಲ್ಲಾ ಗ್ರಾಮ ಪಂಚಾಯಿತಿಗಳಲ್ಲಿ ಒಂದು ಕೆಪಿಎಸ್ ಶಾಲೆಯನ್ನು ಹಂತ ಹಂತವಾಗಿ ಪ್ರಾರಂಭಿಸಲು ಕ್ರಮವಹಿಸಲಾಗುವುದು ಎಂದು ತಿಳಿಸಿದ್ದಾರೆ. https://twitter.com/KarnatakaVarthe/status/1998042145949716617?s=20 https://twitter.com/KarnatakaVarthe/status/1998040964615852467?s=20
ಬೆಳಗಾವಿ ಸುವರ್ಣಸೌಧ : ಖಾಸಗಿ ಅನುದಾನಿತ ಹಾಗೂ ಅನುದಾನ ರಹಿತ ಶಾಲೆಗಳ ಪ್ರಥಮ ಮಾನ್ಯತೆ ಹಾಗೂ ಮಾನ್ಯತೆ ನವೀಕರಣಕ್ಕೆ ಸಂಬಂಧಿಸಿದ ನಿಯಮಗಳ ಸಡಿಲಿಕೆ ಕುರಿತು ಸದಸ್ಯರ ಮನವಿಗೆ ಸ್ಪಂದಿಸಿದ ಸರಕಾರ ಸದನ ಸಮಿತಿ ರಚಿಸಲು ನಿರ್ಧರಿಸಿದೆ. ನವೀಕರಣ ನಿಯಮಗಳ ಸಡಿಲಿಕೆ ಕುರಿತಂತೆ ಸದರಿ ಸದನ ಸಮಿತಿ ನೀಡುವ ವರದಿ ಆಧರಿಸಿ ಶೀಘ್ರ ತಿರ್ಮಾನ ಕೈಗೊಳ್ಳಲಾಗುವುದು ಎಂದು ಶಾಲಾ ಶಿಕ್ಷಣ ಸಚಿವರಾದ ಎಸ್ ಮಧು ಬಂಗಾರಪ್ಪ ಅವರು ಹೇಳಿದರು. ಸರ್ಕಾರವು ಹೊರಡಿಸಿರುವ ಆದೇಶದಲ್ಲಿ ಉಲ್ಲೇಖಿಸಲಾಗಿರುವ ಶಾಲೆಗಳ ಮಾನ್ಯತೆ ನವೀಕರಣದ ನಿಯಮಗಳನ್ನು ಸಡಿಲಗೊಳಿಸುವ ವಿಷಯದ ಬಗ್ಗೆ ಸಮಗ್ರವಾಗಿ ಚರ್ಚಿಸಿ ನಿರ್ಣಯ ಕೈಗೊಳ್ಳಲು ಸದನ ಸಮಿತಿ ರಚಿಸಲಾಗುತ್ತಿದೆ ಎಂದು ಅವರು ವಿವರಿಸಿದರು. ವಿಧಾನ ಪರಿಷತ್ತಿನಲ್ಲಿ ಸದಸ್ಯರಾದ ಪುಟ್ಟಣ್ಣ, ಶಶೀಲ್ ಜಿ. ನಮೋಶಿ, ಎಸ್.ವಿ. ಸಂಕನೂರ ಮತ್ತು ಎಸ್.ಎಲ್. ಭೋಜೇಗೌಡ ಅವರು ನಿಯಮ 330ರ ಮೇರೆಗೆ ಪ್ರಸ್ತಾಪಿಸಿದ ಖಾಸಗಿ ಅನುದಾನಿತ, ಅನುದಾನ ರಹಿತ ಶಾಲೆಗಳ ಪ್ರಥಮ ಮಾನ್ಯತೆ ಹಾಗೂ ಮಾನ್ಯತೆ ನವೀಕರಣಕ್ಕೆ ಸಂಬಂಧಿಸಿದಂತೆ ಸರ್ಕಾರವು ಹೊರಡಿಸಿರುವ ಆದೇಶದಲ್ಲಿ…
ಬೆಂಗಳೂರು : ಸರಕಾರದ ಮಾರ್ಗಸೂಚಿಗಳನುಸಾರ ವೈದ್ಯ ವೃತ್ತಿ ನಡೆಸುತ್ತಿರುವವರು ಕೆಎಯುಪಿ ಮಂಡಳಿ ನೋಂದಣಿ ಪ್ರಮಾಣ ಪತ್ರ ಹೊಂದಿರುವುದು ಮತ್ತು ಕ್ಲಿನಿಕ್ ಗಳಿಗೆ ಕೆಪಿಎಮ್ಇ ನೋಂದಣಿ ಹೊಂದಿರುವುದು ಕಡ್ಡಾಯವಾಗಿದೆ. ಅನಧೀಕೃತ ವೈದ್ಯ ವೃತ್ತಿ ನಡೆಸುತ್ತಿರುವುದು, ಅನಧೀಕೃತವಾಗಿ ಟೆಂಟ್ ಹಾಕಿಕೊಂಡು ನಕಲಿ ಔಷಧಿಗಳನ್ನು ಸಾರ್ವಜನಿಕರಿಗೆ ನೀಡುತ್ತಿರುವವರು ಕಂಡು ಬಂದಲ್ಲಿ ತಕ್ಷಣವೇ ನಿಯಮಾನುಸಾರ ಕಾನೂನು ಕ್ರಮ ಕೈಗೊಳ್ಳಲಾಗುವುದು. ಎಲ್ಲಾ ಸಾರ್ವಜನಿಕರು ನಕಲಿ ವೈದ್ಯರಿಂದ ದೂರವಿರಲು ಮತ್ತು ಅರ್ಹ ನೋಂದಾಯಿತ ವೈದ್ಯರಿಂದಲೇ ವೈದ್ಯಕೀಯ ಸೇವೆಯನ್ನು ಪಡೆಯಬೇಕೆಂದು ಅಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಜಪಾನ್ ಕರಾವಳಿಯಲ್ಲಿ 7.6 ತೀವ್ರತೆಯ ಭೂಕಂಪ ಸಂಭವಿಸಿದ್ದು, ಮೂರು ಮೀಟರ್ ಎತ್ತರದ ಅಲೆಗಳು ಎದ್ದಿದ್ದು, ಸುನಾಮಿ ಎಚ್ಚರಿಕೆ ನೀಡಲಾಗಿದೆ ಎಂದು ಜಪಾನ್ ಹವಾಮಾನ ಸಂಸ್ಥೆ (ಜೆಎಂಎ) ತಿಳಿಸಿದೆ. ಜಪಾನ್ ಉತ್ತರ ಮತ್ತು ಪೂರ್ವದ ಹೆಚ್ಚಿನ ಭಾಗದಲ್ಲಿ ರಾತ್ರಿ 11:15 ಕ್ಕೆ (ಸ್ಥಳೀಯ ಸಮಯ) ಭೂಕಂಪ ಸಂಭವಿಸಿದ ನಂತರ, ಹೊಕ್ಕೈಡೊ, ಅಮೋರಿ ಮತ್ತು ಇವಾಟೆ ಪ್ರಾಂತ್ಯಗಳಿಗೆ ಸುನಾಮಿ ಎಚ್ಚರಿಕೆ ನೀಡಲಾಗಿದೆ ಎಂದು ವರದಿಯಾಗಿದೆ. ಹಲವಾರು ಬಳಕೆದಾರರು ಸಾಮಾಜಿಕ ಮಾಧ್ಯಮದಲ್ಲಿ ವೀಡಿಯೊಗಳನ್ನು ಹಂಚಿಕೊಂಡಿದ್ದಾರೆ, ಅದರಲ್ಲಿ ಗೊಂಚಲು ದೀಪಗಳು ಮತ್ತು ವಾಹನಗಳು ಅಲುಗಾಡುತ್ತಿರುವುದನ್ನು ತೋರಿಸಲಾಗಿದೆ. ಅಕ್ಟೋಬರ್ ಆರಂಭದಲ್ಲಿ, ಹೊನ್ಶುವಿನ ಪೂರ್ವ ಕರಾವಳಿಯ ಬಳಿ ರಿಕ್ಟರ್ ಮಾಪಕದಲ್ಲಿ 6.0 ತೀವ್ರತೆಯ ಪ್ರಬಲ ಭೂಕಂಪ ಸಂಭವಿಸಿದೆ ಎಂದು ರಾಷ್ಟ್ರೀಯ ಭೂಕಂಪಶಾಸ್ತ್ರ ಕೇಂದ್ರ (NCS) ತಿಳಿಸಿದೆ. ಯಾವುದೇ ಹಾನಿ ಅಥವಾ ಸಾವುನೋವುಗಳ ವರದಿಯಾಗಿಲ್ಲ. ಸೋಮವಾರ ಸಂಜೆ ಜಪಾನ್ನಲ್ಲಿ 7.6 ತೀವ್ರತೆಯ ಭೂಕಂಪ ಸಂಭವಿಸಿದ್ದು, ಪೆಸಿಫಿಕ್ ಕರಾವಳಿ ಸಮುದಾಯಗಳಲ್ಲಿ 50 ಸೆಂಟಿಮೀಟರ್ಗಳವರೆಗೆ ಸುನಾಮಿಯ ಅಲೆಗಳು ಅಲೆಗಳ ಅಲೆಗಳ ಅಲೆಗಳು ಹೆಚ್ಚಾಗುವ ಸಾಧ್ಯತೆ…
ಬೆಳಗಾವಿ : ರಾಜ್ಯ ಸರ್ಕಾರವು ರೈತರಿಗೆ ಸಿಹಿಸುದ್ದಿ ನೀಡಿದ್ದು, ಮೆಕ್ಕೆಜೋಳ ಪ್ರೋತ್ಸಾಹಧನ ಯೋಜನೆ ಅಡಿಯಲ್ಲಿ ನ.30ರಿಂದ ರಾಜ್ಯದಲ್ಲಿ ಕೆಎಂಎಫ್ ಮೂಲಕ ಮೆಕ್ಕೆಜೋಳ ರೈತರ ನೋಂದಣಿ ಮತ್ತು ಖರೀದಿ ಪ್ರಕ್ರಿಯೆ ಆರಂಭಿಸಲಾಗಿದೆ. ರಾಜ್ಯದಲ್ಲಿ ಈವರೆಗೆ 17,873 ರೈತರು ನೋಂದಣಿ ಮಾಡಿದ್ದು, 7,094 ಕ್ವಿಂಟಲ್ ಮೆಕ್ಕೆಜೋಳ ಖರೀದಿ ಮಾಡಲಾಗಿದೆ. ಮೆಕ್ಕೆಜೋಳ ಬೆಲೆ ಕುಸಿತದಿಂದ ಕಂಗಾಲಾಗಿರುವ ರೈತರ ಅನುಕೂಲಕ್ಕಾಗಿ ರಾಜ್ಯ ಸರ್ಕಾರದ ಸೂಚನೆ ಮೇರೆಗೆ ಕೆಎಂಎಫ್ನಿಂದ ಪಶು ಆಹಾರ ಉತ್ಪಾದನೆಗಾಗಿ ರೈತರಿಂದ ಮೆಕ್ಕೆಜೋಳ ಖರೀದಿ ಪ್ರಕ್ರಿಯೆ ಆರಂಭಿಸಲಾಗಿದೆ. ಕೆಎಂಎಫ್ ನ 5 ಪಶು ಆಹಾರ ಉತ್ಪಾದನಾ ಘಟಕಗಳ ವ್ಯಾಪ್ತಿಯಲ್ಲಿ ನಿಗದಿತ ಪೋರ್ಟಲ್ಗಳಲ್ಲಿ ರೈತರ ನೋಂದಣಿ ಮತ್ತು ಖರೀದಿ ಪ್ರಕ್ರಿಯೆಗೆ ಚಾಲನೆ ನೀಡಲಾಗಿದೆ. ಪ್ರತಿ ರೈತರಿಂದ ತಲಾ 50 ಕ್ವಿಂಟಲ್ ಮೆಕ್ಕೆಜೋಳ ಖರೀದಿ ಮಾಡಲಾಗುತ್ತದೆ ಎಂದು ರಾಜ್ಯ ಸರ್ಕಾರ ಮಾಹಿತಿ ನೀಡಿದೆ.
ಬೆಳಗಾವಿ : ರಾಜ್ಯ ಸರ್ಕಾರವು ಕೇಬಲ್ ಆಪರೇಟರ್ ಗಳಿಗೆ ಸಿಹಿಸುದ್ದಿ ನೀಡಿದ್ದು, ಪ್ರತಿ ಕಂಬಕ್ಕೆ ವಿಧಿಸುವ ಶುಲ್ಕವನ್ನು 150 ರೂ.ನಿಂದ 75 ರೂ.ಗೆ ಇಳಿಸಲಾಗುವುದು ಎಂದು ಸಚಿವ ಕೆ.ಜೆ.ಜಾರ್ಜ್ ತಿಳಿಸಿದ್ದಾರೆ. ಸೋಮವಾರ ಸದನದಲ್ಲಿ ಕಾಂಗ್ರೆಸ್ ಸದಸ್ಯ ಬಸ್ ಬಾನು ಅವರ ಪ್ರಶ್ನೆಗೆ ಸಚಿವರು, ರಾಜ್ಯದ ಕೇಬಲ್ ಆಪರೇಟರ್ಗಳಿಗೆ ಪ್ರತಿ ಕಂಬಕ್ಕೆ ವಿಧಿಸುವ ಶುಲ್ಕವನ್ನು 150 ರೂ.ನಿಂದ 75 ರೂ.ಗೆ ಇಳಿಸಲಾಗುವುದು ಎಂದು ಇಂಧನ ಸಚಿವ ಕೆ.ಜೆ.ಜಾರ್ಜ್ ತಿಳಿಸಿದರು. ರಾಜ್ಯದಲ್ಲಿ ಕೇಬಲ್ ಆಪರೇಟರುಗಳು ತಮ್ಮ ಕೆಲಸಕ್ಕೆ ಪರವಾನಗಿ ಸೇರಿ ವಿವಿಧ ಶುಲ್ಕ ಪಾವತಿಸಬೇಕಿದೆ. ಇತ್ತೀಚೆಗೆ ಬ್ರಾಂಡ್ಬ್ಯಾಂಡ್ ಬಳಿಕ ಕೇಬಲ್ ಬಳಕೆ ಕಡಿಮೆಯಾಗಿದೆ. ಅಲ್ಲದೇ ಗ್ರಾಮೀಣ, ಮಲೆನಾಡು ಕಡೆ ಸಂಪರ್ಕ ನೀಡಲು ಹೆಚ್ಚಿನ ವಿದ್ಯುತ್ ಕಂಬ ಬಳಸಬೇಕಿದೆ. ಹೀಗಾ ಗಿ ಮೊದಲಿನಂತೆ ಆದಾಯ ಕೇಬಲ್ ಆಪರೇಟರುಗಳಿಗಿಲ್ಲ. ಪ್ರತಿ ಕಂಬಕ್ಕೆ ಹಾಲಿ ವಿಧಿಸುತ್ತಿರುವ 150 ಶುಲ್ಕವನ್ನು ಕಡಿಮೆ ಮಾಡಬೇಕು ಎಂದು ಆಗ್ರಹಿಸಿದರು.
ಹಲವು ಮನೆಗಳಲ್ಲಿ ಇನ್ವರ್ಟರ್ಗಳಿವೆ. ವಿದ್ಯುತ್ ಕಡಿತದ ಸಮಯದಲ್ಲಿ ಅವು ತುಂಬಾ ಉಪಯುಕ್ತವಾಗಿವೆ. ಆದಾಗ್ಯೂ, ಇನ್ವರ್ಟರ್ಗಳನ್ನು ಬಳಸುವವರು ಕೆಲವು ತಪ್ಪುಗಳನ್ನು ಮಾಡಬಾರದು. ಇದು ಗಂಭೀರ ಸಮಸ್ಯೆಗಳಿಗೆ ಕಾರಣವಾಗಬಹುದು. ಯಾವ ತಪ್ಪುಗಳನ್ನು ಮಾಡಬಾರದು ಎಂಬುದನ್ನು ತಿಳಿಯಿರಿ. ಇನ್ವರ್ಟರ್ ಓವರ್ಚಾರ್ಜಿಂಗ್: ನಿಗದಿತ ಸಮಯಕ್ಕಿಂತ ಹೆಚ್ಚಿನ ಇನ್ವರ್ಟರ್ ಬ್ಯಾಟರಿಯನ್ನು ಚಾರ್ಜ್ ಮಾಡುವುದು ಅಪಾಯಕಾರಿ. ಇದನ್ನು ತಪ್ಪಿಸಲು, ಯಾವಾಗಲೂ ಬ್ಯಾಟರಿ ತಯಾರಕರ ಚಾರ್ಜಿಂಗ್ ಸೂಚನೆಗಳನ್ನು ಅನುಸರಿಸಿ. ಉತ್ತಮ ಚಾರ್ಜ್ ನಿಯಂತ್ರಕವನ್ನು ಬಳಸಿ. ಅಲ್ಲದೆ, ನಿಮ್ಮ ಬ್ಯಾಟರಿ ನೀರಿನಲ್ಲಿ ಚಲಿಸುತ್ತಿದ್ದರೆ, ಅದು ಸಾಕಾಗಿದೆಯೇ ಎಂದು ಖಚಿತಪಡಿಸಿಕೊಳ್ಳಲು ಬ್ಯಾಟರಿ ನೀರಿನ ಮಟ್ಟವನ್ನು ನಿಯಮಿತವಾಗಿ ಪರಿಶೀಲಿಸಿ. ನೀರು ಎಂದರೆ ಬ್ಯಾಟರಿಯಲ್ಲಿ ಹಾಕಲಾದ ನೀರು. ಈ ಬ್ಯಾಟರಿ ನೀರಿನ ಮಟ್ಟ ಕಡಿಮೆಯಿದ್ದರೆ, ಬ್ಯಾಟರಿ ಪ್ಲೇಟ್ಗಳು ಬಹಿರಂಗಗೊಳ್ಳಬಹುದು, ಇದು ಬ್ಯಾಟರಿಯೊಳಗೆ ಶಾಖವನ್ನು ನಿರ್ಮಿಸಲು ಮತ್ತು ಸ್ಫೋಟಕ್ಕೆ ಕಾರಣವಾಗಬಹುದು. ಅದಕ್ಕಾಗಿಯೇ ಕಾಲಕಾಲಕ್ಕೆ ಬ್ಯಾಟರಿಯಲ್ಲಿನ ನೀರನ್ನು ಪರಿಶೀಲಿಸುವುದು ಅಗತ್ಯ ಎಂದು ಅನೇಕ ತಜ್ಞರು ಹೇಳುತ್ತಾರೆ. ಬ್ಯಾಟರಿಯನ್ನು ಹೆಚ್ಚಿನ ತಾಪಮಾನದಲ್ಲಿ ಇಡುವುದು: ಮನೆಯಲ್ಲಿ ಎಲ್ಲಿಯೂ ಇನ್ವರ್ಟರ್ ಬ್ಯಾಟರಿಯನ್ನು ಸ್ಥಾಪಿಸಬಾರದು ಎಂದು…
ALERT : ಚಳಿಗಾಲದಲ್ಲಿ ಹೆಚ್ಚು `ಟೀ’ ಕುಡಿಯುವುದರಿಂದ ಕೀಲು ನೋವು, ಬಿಗಿತ ಹೆಚ್ಚಾಗಬಹುದು : ಏಮ್ಸ್ ತಜ್ಞರ ಎಚ್ಚರಿಕೆ.!
ತಾಪಮಾನ ಕಡಿಮೆಯಾದಂತೆ ಹೆಚ್ಚಿನ ಜನರು ತಮ್ಮ ದೇಹವನ್ನು ಬೆಚ್ಚಗಿಡಲು ಹೆಚ್ಚು ಚಹಾ ಮತ್ತು ಕಾಫಿ ಕುಡಿಯಲು ಆಶ್ರಯಿಸುತ್ತಾರೆ, ಏಕೆಂದರೆ ಇದು ಶೀತಗಳ ವಿರುದ್ಧ ರೋಗನಿರೋಧಕ ಶಕ್ತಿಯನ್ನು ಹೆಚ್ಚಿಸುತ್ತದೆ ಮತ್ತು ಚಳಿಗಾಲದ ಬ್ಲೂಸ್ ವಿರುದ್ಧ ಮಾನಸಿಕ ಶಾಂತತೆಯನ್ನು ನೀಡುತ್ತದೆ ಮತ್ತು ಆರಾಮದಾಯಕ ಸುವಾಸನೆಯೊಂದಿಗೆ. ಆದಾಗ್ಯೂ, ನಿಮ್ಮ ಮೂಳೆಗಳು ಮತ್ತು ಕೀಲುಗಳ ಮೇಲೆ ಅದರ ಪರಿಣಾಮಗಳ ಬಗ್ಗೆ ಎಚ್ಚರದಿಂದಿರಿ. AIIMS ರಾಯ್ಪುರದ ಮೂಳೆಚಿಕಿತ್ಸಕ ಮತ್ತು ಕ್ರೀಡಾ ಗಾಯದ ಶಸ್ತ್ರಚಿಕಿತ್ಸಕ ಡಾ. ದುಷ್ಯಂತ್ ಚೌಹಾಣ್ ಅವರ ಪ್ರಕಾರ, ಹೆಚ್ಚು ಚಹಾವು ಕೀಲು ನೋವನ್ನು ಹೆಚ್ಚಿಸುತ್ತದೆ. ತಮ್ಮ ಇನ್ಸ್ಟಾಗ್ರಾಮ್ನಲ್ಲಿ, ಡಾ. ಚೌಹಾಣ್ ಜನಪ್ರಿಯ ಕೆಫೀನ್-ಲೋಡ್ ಮಾಡಿದ ಬಿಸಿ ಪಾನೀಯಗಳು ಮತ್ತು ಮೂಳೆಯ ಆರೋಗ್ಯದ ನಡುವಿನ ಆಶ್ಚರ್ಯಕರ ಸಂಬಂಧವನ್ನು ಎತ್ತಿ ತೋರಿಸಿದ್ದಾರೆ. “ಚಹಾ ಬಿಸಿಯಾಗಿರುತ್ತದೆ, ಆದರೆ ಅದು ನಿಮ್ಮ ಮೂಳೆಗಳನ್ನು ‘ತಂಪಾಗಿಸಬಹುದು’. ಇದು ಸ್ವಲ್ಪ ವಿಚಿತ್ರವೆನಿಸಬಹುದು, ಆದರೆ ಅದರ ಹಿಂದಿನ ಸತ್ಯವನ್ನು ನಾನು ವಿವರಿಸುತ್ತೇನೆ” ಎಂದು ಅವರು ಹೇಳಿದರು. ಶೀತ ಹವಾಮಾನವು ನಿಮ್ಮ ಮೊಣಕಾಲುಗಳೊಳಗಿನ ಕಾರ್ಟಿಲೆಜ್ ಅನ್ನು ಅತ್ಯಂತ…
ಬೆಂಗಳೂರು : ರಾಜ್ಯದ ಗ್ರಾಮೀಣ ಜನತೆಗೆ ರಾಜ್ಯ ಸರ್ಕಾರವು ಸಿಹಿಸುದ್ದಿ ನೀಡಿದ್ದು, ಗ್ರಾ.ಪಂ ವ್ಯಾಪ್ತಿಯ ಸ್ವತ್ತುಗಳಿಗೆ ಇ-ಖಾತಾ ಪಡೆಯಲು ಕಾಲಾವಧಿ ನಿಗದಿ ಮಾಡಿಲ್ಲ ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ರಾಜ್ ಇಲಾಖೆ ಸಚಿವ ಪ್ರಿಯಾಂಕ್ ಖರ್ಗೆ ತಿಳಿಸಿದ್ದಾರೆ. ಇ-ಸ್ವತ್ತು ಪ್ರಕ್ರಿಯೆ ಮತ್ತು ತಂತ್ರಾಂಶವನ್ನು ಹೆಚ್ಚು ನಾಗರಿಕ ಸ್ನೇಹಿಯಾಗಿ ಅನುಷ್ಠಾನಗೊಳಿಸಲು ಇಲಾಖೆ ಬದ್ಧವಾಗಿದೆ. ಈವರೆಗೆ ಆನ್ಲೈನ್ನಲ್ಲಿ 365 ಆರ್ಜಿಗಳನ್ನು ಸ್ವೀಕರಿಸಲಾಗಿದೆ ಎಂದು ಮಾಹಿತಿ ಹಂಚಿಕೊಂಡಿದ್ದಾರೆ. ವ್ಯವಸ್ಥೆಯನ್ನು ಮತ್ತಷ್ಟು ಸರಳೀಕರಿಸಲು ಕ್ರಮವಹಿಸಲಾಗುತ್ತಿದೆ. ಸಾರ್ವಜನಿಕರು ಆತಂಕಪಡುವ ಅವಶ್ಯಕತೆ ಇಲ್ಲ. ಸಾರ್ವಜನಿಕರಿಗೆ ಅರ್ಜಿ ಸಲ್ಲಿಸಲು ಕಾಲಾವಧಿ ನಿಗದಿಪಡಿಸಿಲ್ಲ. ತಾವು ಇರುವಲ್ಲಿಯೇ ಆಸ್ತಿಗೆ ಸಂಬಂಧಿಸಿದಂತೆ ನಮೂನೆಗಳನ್ನು ಇ-ಸ್ವತ್ತು ತಂತ್ರಾಂಶದ ಮೂಲಕ ಪಡೆಯಲು ಅವಕಾಶ ಕಲ್ಪಿಸಲಾಗಿದೆ. ಕರ್ನಾಟಕ ಗ್ರಾಮ ಸ್ವರಾಜ್ ಮತ್ತು ಪಂಚಾಯತ್ರಾಜ್ (ಗ್ರಾಮ ಪಂಚಾಯಿತಿಗಳ ತೆರಿಗೆ, ದರ ಮತ್ತು ಶುಲ್ಕಗಳು) ನಿಯಮಗಳು, 2025ಅನ್ನು ಅಧಿಸೂಚನೆ ಹೊರಡಿಸಿದೆ. ಈ ಹಿಂದೆ ಇದ್ದ ಇ-ಸ್ವತ್ತು ತಂತ್ರಾಂಶವನ್ನು ನಾಗರಿಕ ಸ್ನೇಹಿಯಾಗಿ ಮಾರ್ಪಡಿಸಲಾಗಿದೆ. ನಿಯಮಗಳಿಗೆ ಹಾಗೂ ಇ-ಸ್ವತ್ತು ತಂತ್ರಾಂಶದ ಬಳಕೆಗೆ ಸಂಬಂಧಿಸಿದಂತೆ ಇಲಾಖೆಯಿಂದ ಸಹಾಯವಾಣಿ (94834-76000)…














