Subscribe to Updates
Get the latest creative news from FooBar about art, design and business.
Author: kannadanewsnow57
ಬೆಂಗಳೂರು : ರಾಜ್ಯದ ಶಾಲೆಗಳಲ್ಲಿ 1 ನೇ ತರಗತಿ ಪ್ರವೇಶಕ್ಕೆ ಮುಂದಿನ ಶೈಕ್ಷಣಿಕ ಸಾಲಿನಿಂದ ಅನ್ವಯವಾಗುವಂತೆ ನಿಗದಿಪಡಿಸಿರುವ ವಯೋಮಿತಿ ಅವೈಜ್ಞಾನಿಕವಾಗಿದ್ದು, ಇದನ್ನು ಬದಲಾವಣೆ ಮಾಡಬೇಕೆಂದು ಪೋಷಕರು ಆಗ್ರಹಿಸಿದ್ದಾರೆ. ಎಲ್ ಕೆಜಿ ದಾಖಲಾತಿಗೆ ಆಯಾ ಶೈಕ್ಷಣಿಕ ವರ್ಷದ ಜೂನ್ 1 ಕ್ಕೆ ಕಡ್ಡಾಯವಾಗಿ 4 ವರ್ಷ ಪೂರ್ಣಗೊಂಡಿರಬೇಕೆಂದು 2023-24 ನೇ ಸಾಲಿನಿಂದ ಜಾರಿಗೊಳಿಸಲಾಗಿದೆ. 1 ನೇ ತರಗತಿ ಪ್ರವೇಶಕ್ಕೆ 2024-25 ನೇ ಸಾಲಿನಿಂದ ಆಯಾ ಸಾಲಿನ ಜೂನ್ 1 ಕ್ಕೆ 6 ವರ್ಷ ಪೂರ್ಣಗೊಂಡಿರಬೇಕೆಂದು ಆದೇಶಿಸಲಾಗಿದೆ. ಆದರೆ ನಿಗದಿತ ವಯೋಮಿತಿಗೆ ಒಂದು ದಿನ ಕಡಿಮೆ ಆದರೂ ಮಕ್ಕಳೂ ದಾಖಲಾತಿ ವಂಚಿತರಾಗುತ್ತಿದ್ದಾರೆ. ಹೀಗಾಗಿ ಒಂದು ವರ್ಷ ಶಾಲಾ ಪ್ರವೇಶದಿಂದ ಮಕ್ಕಳು ವಂಚಿತರಾಗುವುದನ್ನು ತಡೆಯಲು ನಿಗದಿತ ವಯೋಮಿತಿಯಲ್ಲಿ ಕೆಲ ತಿಂಗಳ ಸಡಿಲ ಅಥವಾ ವಿನಾಯಿತಿ ನೀಡಬೇಕೆಂದು ರಾಜ್ಯ ಸರ್ಕಾರಕ್ಕೆ ಪೋಷಕರು ಒತ್ತಾಯಿಸಿದ್ದಾರೆ.
ಬೆಂಗಳೂರು : 2024-25 ನೇ ಸಾಲಿನಲ್ಲಿ ಸೇತುಬಂಧ ಕಾರ್ಯಕ್ರಮವನ್ನು ಅನುಷ್ಠಾನಗೊಳಿಸುವ ಕುರಿತಂತೆ ಶಾಲಾ ಶಿಕ್ಷಣ ಇಲಾಖೆ ಆದೇಶ ಹೊರಡಿಸಿದೆ. ವಿಷಯಕ್ಕೆ ಸಂಬಂಧಿಸಿದಂತೆ, ಮಕ್ಕಳ ವಯೋಮಾನ ಮತ್ತು ತರಗತಿಗೆ ಅನುಗುಣವಾಗಿ ಕಲಿಕಾಮಟ್ಟ ಮತ್ತು ಸಾಮರ್ಥ್ಯಗಳನ್ನು ಗುರುತಿಸಿ ಮುಂದಿನ ಕಲಿಕೆಗೆ ಸಿದ್ಧಗೊಳಿಸಲು ಕಲಿತಿರುವ ಮತ್ತು ಕಲಿಯುತ್ತಿರುವ ಪರಿಕಲ್ಪನೆಗಳ ಅಂತರದ ನಡುವೆ ಸಹ ಸಂಬಂಧ ಕಲ್ಪಿಸುವುದು ಸೇತುಬಂಧ ಶಿಕ್ಷಣದ ಮೂಲ ಉದ್ದೇಶವಾಗಿದೆ. 2024-25ನೇ ಸಾಲಿಗೆ ಸೇತುಬಂಧ ಕಾರ್ಯಕ್ರಮವನ್ನು ಅನುಷ್ಠಾನ ಮಾಡಲು 1 ರಿಂದ 3 ನೇ ತರಗತಿಗಳಿಗೆ (ಕಲಿ-ನಲಿ) ಶಾಲಾ ಪ್ರಾರಂಭದ ಮೊದಲ 30 ದಿನಗಳು ಹಾಗೂ 4 ರಿಂದ 10 ನೇ ತರಗತಿಗಳಿಗೆ ಮೊದಲ 15 ದಿನಗಳನ್ನು ನಿಗದಿಪಡಿಸಲಾಗಿದೆ. ಈ ಹಿನ್ನೆಲೆಯಲ್ಲಿ 1 ರಿಂದ 10 ನೇ ತರಗತಿವರೆಗೆ ತರಗತಿವಾರು ಮತ್ತು ವಿಷಯವಾರು ಕನ್ನಡ ಮತ್ತು ಆಂಗ್ಲ ಮಾಧ್ಯಮದಲ್ಲಿ ಹಾಗೂ ಪ್ರಥಮ ಭಾಷೆಗಳಾದ ಉರ್ದು, ಮರಾಠಿ, ತೆಲುಗು ಮತ್ತು ತಮಿಳಿಗೆ ಸಂಬಂಧಿಸಿದ ಕಲಿಕಾ ಸಾಮಗ್ರಿಯು DSERT website ನಲ್ಲಿ ಲಭ್ಯವಿದ್ದು, ಇವುಗಳನ್ನು ಬಳಸಿಕೊಂಡು ಈ…
ಬೆಂಗಳೂರು : 2024-25ನೇ ಶೈಕ್ಷಣಿಕ ಸಾಲಿಗೆ ಖಾಸಗಿ ಅನುದಾನರಹಿತ ಶಾಲೆಗಳಲ್ಲಿ ನಿಗದಿಪಡಿಸಿರುವ ಶುಲ್ಕದ ವಿವರ ಪ್ರಕಟಿಸುವಂತೆ ರಾಜ್ಯ ಸರ್ಕಾರವು ಮಹತ್ವದ ಆದೇಶ ಹೊರಡಿಸಿದೆ. ಖಾಸಗಿ ಅನುದಾನರಹಿತ ಶಾಲೆಗಳಲ್ಲಿ 2024-25ನೇ ಶೈಕ್ಷಣಿಕ ಸಾಲಿಗೆ ವಿದ್ಯಾರ್ಥಿಗಳ ದಾಖಲಾತಿ ಮತ್ತು ಶುಲ್ಕ ವಸೂಲಾತಿ ಪ್ರಕ್ರಿಯೆ ಪ್ರಾರಂಭವಾಗಿರುತ್ತದೆ. ದಾಖಲಾತಿ ಪ್ರಕ್ರಿಯೆ, ದಾಖಲಾತಿ ಶುಲ್ಕ ಮತ್ತು ಇನ್ನಿತರೆ ಶುಲ್ಕವನ್ನು ಪಡೆಯುವ ಸಂಬಂಧ ಉಲ್ಲೇಖದ ಶಿಕ್ಷಣ ಹಕ್ಕು ಕಾಯಿದೆ -2009 ರನ್ವಯ ಈ ಕೆಳಕಂಡಂತೆ ತಿಳಿಸಲಾಗಿದೆ. Section 2(b) capitaton fee” means any kind of donation or contribution or payment other than the fee notified by the school; Section 13 No capitation fee and screening procedure for admission.- (1) No school or person shall, while admitting a child, collect any capitation fee and subject the child or his or…
ಬೆಂಗಳೂರು : ಬೆಳೆ ಹಾನಿ, ಬೆಳೆ ಪರಿಹಾರ ಜಮೆ ಅಗದೆ ಇರುವ ರೈತರು ತಾವು ಖಾತೆ ಹೊಂದಿರುವ ಬ್ಯಾಂಕಗೆ ಭೇಟಿ ನೀಡಿ, ಖಾತೆ ಚಾಲ್ತಿ ಇರುವ ಬಗ್ಗೆ, ಕೆವೈಸಿ ಅಪಡೆಟ್ ಆಗಿರುವ ಬಗ್ಗೆ ಮತ್ತು ಪ್ರೂಟ್ಸ್ ಸಂಖ್ಯೆ ಹೊಂದಿರುವ ಬಗ್ಗೆ ಪರಿಶೀಲಿಸಿ, ಖಾತರಿ ಮಾಡಿಕೊಳ್ಳಬೇಕೆಂದು ಸೂಚನೆ ನೀಡಲಾಗಿದೆ. ಈ ಕುರಿತು ಪ್ರಕಟಣೆ ಹೊರಡಿಸಲಾಗಿದ್ದು, ಅಕೌಂಟ್ಗಳನ್ನು ನಿರ್ಬಂಧಿಸಿರುವುದು ಅಥವಾ ಫ್ರೀಜ್ ಮಾಡಿರುವುದು ಹಾಗೂ ಯಾವ ರೈತರ ಖಾತೆಯನ್ನು ಮುಚ್ಚಲಾಗಿದೆಯೋ ಅಂತಹ ಫಲಾನುಭವಿಗಳು ಬ್ಯಾಂಕ್ಗೆ ಹೋಗಿ ಕೌಂಟ್ ರಿ ಓಪನ್ ಮಾಡಿಸಬೇಕು. ಫ್ರೂಟ್ಸ್ ಅಪ್ಡೇಟ್ನಲ್ಲಿ ಆಧಾರ್ ಹೆಸರು ಹೊಂದಿಕೆಯಾಗುತ್ತಿಲ್ಲ ಆ ರೈತರು ಫ್ರೂಟ್ಸ್ ತಂತ್ರಾಂಶದಲ್ಲಿ ಹೆಸರು ಅಪ್ಡೇಟ ಮಾಡಿಸಬೇಕು. ಆಧಾರ್ ಅನ್ನು ಬ್ಯಾಂಕ್ನೊಂದಿಗೆ ಸೀಡ್, ಖಾತೆಗೆ ಆಧಾರ್ ಮ್ಯಾಪ್, ಕುಸಿದ ಪಾವತಿ ಹಾಗೂ ಎನ್.ಪಿ.ಸಿ.ಐ ಸೀಡಿಂಗ್ ಸಮಸ್ಯೆ ಇರುವಂತ ಫಲಾನುಭವಿಗಳು ಬ್ಯಾಂಕ್ಗೆ ಹೋಗಿ ಎನ್.ಪಿ.ಸಿ.ಐ (ಓPಅI) ಮಾಡಿಸಬೇಕು. ಅಮಾನ್ಯ ಸ್ವೀಕೃತ ಐ.ಎಫ್.ಎಸ್.ಸಿ ಕೋಡ್ ಹೊಂದಿರುವ ಫಲಾನುಭವಿಗಳು ಬ್ಯಾಂಕ್ಗೆ ಹೋಗಿ ಐ.ಎಫ್.ಎಸ್.ಸಿ ಕೋಡ್ ಅಪ್ಡೇಟ್ ಮಾಡಿಸಿ…
ಬೆಂಗಳೂರು : ಸಿಎಂ ಸಿದ್ದರಾಮಯ್ಯ ಇಂದು ಬೆಂಗಳೂರು ಸಿಟಿ ರೌಂಡ್ಸ್ ಕೈಗೊಂಡಿದ್ದು, ಸಾರ್ವಜನಿಕರ ಸಮಸ್ಯೆಗಳಿಗೆ ಸ್ಥಳದಲ್ಲೇ ಪರಿಹಾರ ನೀಡುವ ಕೆಲಸ ಮಾಡಿದ್ದಾರೆ. ಬೆಂಗಳೂರು ನಗರದಲ್ಲಿ ಮಳೆ ಬಂದಾಗ ಉದ್ಭವಿಸುವ ಸಮಸ್ಯೆಗಳು, ರಸ್ತೆ ಅಭಿವೃದ್ಧಿ ಹಾಗೂ ಮೆಟ್ರೋ ಕಾಮಗಾರಿ ಕಾರಣದಿಂದ ಸಂಚಾರಕ್ಕೆ ಎದುರಾಗುತ್ತಿರುವ ತೊಡಕು ಸೇರಿದಂತೆ ಸಾರ್ವಜನಿಕರ ವಿವಿಧ ಸಮಸ್ಯೆಗಳಿಗೆ ಸೂಕ್ತ ಹಾಗೂ ಶೀಘ್ರ ಪರಿಹಾರ ಒದಗಿಸಲು ಖುದ್ದಾಗಿ ನಗರ ಪ್ರದಕ್ಷಿಣೆ ಮಾಡಿ, ಸ್ಥಳದಲ್ಲೇ ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ. ಇನ್ನು ವಿಜಯನಗರ ವಿಧಾನಸಭಾ ಕ್ಷೇತ್ರದ ಗಾಳಿ ಆಂಜನೇಯ ಸ್ವಾಮಿ ದೇವಸ್ಥಾನ ಸಮೀಪದ ರಾಜಕಾಲುವೆಯಲ್ಲಿ ಮಳೆಗಾಲದಲ್ಲಿ ಪ್ರವಾಹ ಉಂಟಾಗುತ್ತಿತ್ತು. ಇದರಿಂದ ಸಾರ್ವಜನಿಕರಿಗೆ ಮಳೆ ಬಂದರೆ ಸೆಮಸ್ಯೆ ಉಂಟಾಗುತ್ತಿತ್ತು. ಇದಕ್ಕೆ ಸಮಾನಾಂತರವಾಗಿ ಇನ್ನೊಂದು ಕಾಲುವೆ ನಿರ್ಮಿಸುವುದರಿಂದ ಪ್ರವಾಹ ತಗ್ಗಿಸಬಹುದಾಗಿದೆ. ಪ್ರವಾಹ ನಿಯಂತ್ರಣ ಕಾಮಗಾರಿಗೆ 11.5 ಕೋಟಿ ರೂ. ಅಂದಾಜು ವೆಚ್ಚದ ಯೋಜನೆ ರೂಪಿಸಲಾಗಿದ್ದು, ಈ ಕಾಮಗಾರಿಯನ್ನು ಕೂಡಲೇ ಅನುಷ್ಠಾನⓇ ಮಾಡಬೇಕು ಹಾಗೂ ರಾಜಕಾಲುವೆಗೆ ಸಾರ್ವಜನಿಕರು ಕಸ ಎಸೆಯುವುದನ್ನು ತಡೆಗಟ್ಟಲು ಅಗತ್ಯ ಕ್ರಮ ವಹಿಸಬೇಕು. ರಾಜಕಾಲುವೆಯ…
ನವದೆಹಲಿ : ಜವಾಹರಲಾಲ್ ನೆಹರು ವಿಶ್ವವಿದ್ಯಾಲಯದ (ಜೆಎನ್ಯು) ವಿಜ್ಞಾನಿಗಳ ತಂಡವು ಮಲೇರಿಯಾ ವಿರುದ್ಧ ಹೆಚ್ಚು ಪರಿಣಾಮಕಾರಿ ತಡೆಗಟ್ಟುವಿಕೆ ಮತ್ತು ಚಿಕಿತ್ಸಾ ತಂತ್ರಗಳಿಗೆ ದಾರಿ ಮಾಡಿಕೊಡುವ ಭರವಸೆಯ ಲಸಿಕೆಯನ್ನು ಗುರುತಿಸಿದೆ. ಸೆಲ್ ಪ್ರೆಸ್ನ ಐಸೈನ್ಸ್ ಜರ್ನಲ್ನಲ್ಲಿ ಪ್ರಕಟವಾದ ಅವರ ಸಂಶೋಧನೆಯು ಪರಾವಲಂಬಿಯ ನಿಷೇಧಿತ ಪ್ರೋಟೀನ್ ಅನ್ನು ಲಸಿಕೆ ಅಭಿವೃದ್ಧಿಗೆ ಹೊಸ ಗುರಿಯಾಗಿ ಪ್ರಸ್ತಾಪಿಸುತ್ತದೆ. ಮಲೇರಿಯಾ ವಿರೋಧಿ ಔಷಧಿಗಳ ವಿರುದ್ಧ ಪ್ರತಿರೋಧವನ್ನು ಅಭಿವೃದ್ಧಿಪಡಿಸುವ ಪರಾವಲಂಬಿಯ ಸಾಮರ್ಥ್ಯ, ಪರಿಣಾಮಕಾರಿ ಲಸಿಕೆಯ ಅನುಪಸ್ಥಿತಿಯು ಈ ಮಾರಣಾಂತಿಕ ಸಾಂಕ್ರಾಮಿಕ ರೋಗವನ್ನು ಎದುರಿಸುವಲ್ಲಿ ಪ್ರಗತಿಗೆ ಅಡ್ಡಿಯಾಗಿದೆ. ನೂರಾರು ವರ್ಷಗಳಿಂದ, ಈ ಮಾರಣಾಂತಿಕ ಪರಾವಲಂಬಿ ಲಕ್ಷಾಂತರ ಜೀವಗಳನ್ನು ತೆಗೆದುಕೊಳ್ಳಲು ಕಾರಣವಾಗಿದೆ. ಹೆಣ್ಣು ಅನಾಫಿಲಿಸ್ ಸೊಳ್ಳೆಯಿಂದ ಹರಡುವ ರೋಗವಾದ ಮಲೇರಿಯಾ ಶತಮಾನಗಳಿಂದ ಲಕ್ಷಾಂತರ ಜೀವಗಳನ್ನು ಬಲಿ ತೆಗೆದುಕೊಂಡಿದೆ ಮತ್ತು ಭಾರತದಲ್ಲಿ ಹೊರೆಯಾಗಿ ಉಳಿದಿದೆ. ನಿರಂತರ ಪ್ರಯತ್ನಗಳ ಹೊರತಾಗಿಯೂ, ವಿಶ್ವ ಆರೋಗ್ಯ ಸಂಸ್ಥೆಯ 2022 ರ ವರದಿಯು ವಿಶ್ವಾದ್ಯಂತ 249 ಮಿಲಿಯನ್ ಪ್ರಕರಣಗಳು ಮತ್ತು 60,800 ಸಾವುಗಳೊಂದಿಗೆ ಕಠೋರ ಚಿತ್ರವನ್ನು ಚಿತ್ರಿಸುತ್ತದೆ. ಜೆಎನ್ಯುನ ಸ್ಪೆಷಲ್…
ನವದೆಹಲಿ: ಮೇ 18 ರಿಂದ ಭಾರತದಲ್ಲಿ ನಾಪತ್ತೆಯಾಗಿದ್ದ ಬಾಂಗ್ಲಾದೇಶದ ಆಡಳಿತ ಪಕ್ಷ ಅವಾಮಿ ಲೀಗ್ ನ ಸಂಸತ್ ಸದಸ್ಯರ ಶವ ಪತ್ತೆಯಾಗಿದೆ. ಸಂಸದ ಮೊಹಮ್ಮದ್ ಅನ್ವರುಲ್ ಅಜೀಮ್ ಅವರ ಶವ ಬುಧವಾರ ಬೆಳಗ್ಗೆ ಕೋಲ್ಕತ್ತಾದ ವಸತಿ ಸಂಕೀರ್ಣದ ಅಪಾರ್ಟ್ ಮೆಂಟ್ ನಲ್ಲಿ ಅನುಮಾನಾಸ್ಪದವಾಗಿ ಪತ್ತೆ ಆಗಿದೆ. ಕಾಣೆಯಾದ ಸಂಸದ ಅನ್ವರುಲ್ ಅಜೀಮ್ ಮೇ 12 ರಂದು ಭಾರತಕ್ಕೆ ಪ್ರವೇಶಿಸಿದ್ದರು ಮತ್ತು ಮೇ 13 ರ ಮಧ್ಯಾಹ್ನ ಸ್ನೇಹಿತರೊಂದಿಗೆ ವೈದ್ಯಕೀಯ ತಪಾಸಣೆಗಾಗಿ ಕೋಲ್ಕತ್ತಾ ಬಳಿಯ ಬಿಧಾನ್ನಗರದಲ್ಲಿರುವ ಮನೆಗೆ ಹೋದಾಗ ಕೊನೆಯದಾಗಿ ಕಾಣಿಸಿಕೊಂಡರು. ಕೋಲ್ಕತಾದ ಬಿಧಾನ್ನಗರದ ಕುಟುಂಬದ ಸ್ನೇಹಿತರೊಬ್ಬರ ಪ್ರಕಾರ, ಸಂಸದರು ದೆಹಲಿಗೆ ಪ್ರಯಾಣಿಸುವುದಾಗಿ ಹೇಳಿದ್ದಾರೆ, ಆದರೆ ಮೇ 13 ರಿಂದ ಅವರೊಂದಿಗೆ ಯಾವುದೇ ದೈಹಿಕ ಉಪಸ್ಥಿತಿ ಅಥವಾ ನೇರ ಸಂಪರ್ಕವಿಲ್ಲ. ಢಾಕಾದಲ್ಲಿರುವ ಅವರ ಕುಟುಂಬ ಮತ್ತು ಬಿಧಾನ್ನಗರದಲ್ಲಿರುವ ಅವರ ಸ್ನೇಹಿತನೊಂದಿಗೆ ಮೊಬೈಲ್ ಸಂದೇಶಗಳನ್ನು ಮಾತ್ರ ವಿನಿಮಯ ಮಾಡಿಕೊಳ್ಳಲಾಗಿದೆ, ಇದು ದೆಹಲಿಗೆ ಅವರ ಉದ್ದೇಶಿತ ಪ್ರಯಾಣವನ್ನು ಸೂಚಿಸುತ್ತದೆ. ಸಂವಹನದ ಕೊರತೆ ಮತ್ತು ಹಠಾತ್ ಕಣ್ಮರೆಯಿಂದ…
ಬೆಂಗಳೂರು : ವಿಡಿಯೋ ಮಾಡು ಅಂತ ಪ್ರಜ್ವಲ್ ರೇವಣ್ಣಂಗೆ ಡಿ.ಕೆ. ಶಿವಕುಮಾರ್ ಫೋನ್ ಮಾಡಿ ಹೇಳಿದ್ರಾ..? ಇಲ್ಲ, ನಾವು ಅವನ ರೂಮಲ್ಲಿ ನಿಂತು ವಿಡಿಯೋ ಮಾಡಿದ್ವಾ? ಎಂದು ಶಾಸಕ ಹೆಚ್. ಸಿ. ಬಾಲಕೃಷ್ಣ ಕಿಡಿಕಾರಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪ್ರಜ್ವಲ್ ತಾತನಿಗೆ (ದೇವೇಗೌಡ) ತಕ್ಕ ಮೊಮ್ಮಗ ಆಗಲಿಲ್ಲ. ತಂದೆಗೆ ತಕ್ಕ ಮಗ ಆದ. ಎಷ್ಟೇ ಆಗಲಿ ನೂಲಿನಂತೆ ಸೀರೆಯಲ್ಲವೇ..? ಕುಮಾರಸ್ವಾಮಿ ತಲೆ ಕೆಟ್ಟವರಂತೆ ಮಾತಾಡುತ್ತಿದ್ದಾರೆ. ಅವರು ಯಾವಾಗ ತಾನೇ ಸತ್ಯ ಮಾತಾಡಿದ್ದಾರೆ? ಒಂದೇ ಒಂದು ಉದಾಹರಣೆ ಕೊಡಿ. ಸಿದ್ದರಾಮಯ್ಯ, ಡಿ ಕೆ ಶಿವಕುಮಾರ್ ಅವರ ವಿರುದ್ಧ ಮಾತಾಡುವುದೇ ಅವರ ಕೆಲಸ ಎಂದು ಹೇಳಿದ್ದಾರೆ. ತಪ್ಪು ಮಾಡಿದ ಪ್ರಜ್ವಲ್ ರೇವಣ್ಣ ಜೆಡಿಎಸ್ ಪಕ್ಷದವನು,ಪೆನ್ ಡ್ರೈವ್ ಹಿಡಿದುಕೊಂಡು ತಿರುಗಾಡಿದವನು, ಹೊರಬಿಟ್ಟವನು ದೇವರಾಜೇಗೌಡ ಬಿಜೆಪಿಯವನು,ಇಬ್ಬರೂ ಸೇರಿ ಗೂಬೆ ಹಿಡಿದು ತಂದು ಕೂರಿಸುತ್ತಿರುವುದು ಕಾಂಗ್ರೆಸ್ ಮೇಲೆ, ಡಿ. ಕೆ ಶಿವಕುಮಾರ್ ಅವರ ಮೇಲೆ ಎಂದು ವಾಗ್ದಾಳಿ ನಡೆಸಿದ್ದಾರೆ.
ಮೈಸೂರು : ಮೈಸೂರಿನಲ್ಲಿ ಇಂದು ಘೋರ ದುರಂತವೊಂದು ಸಂಭವಿಸಿದ್ದು, ಅನಿಲ ಸೋರಿಕೆಯಿಂದ ಒಂದೇ ಕುಟುಂಬದ ನಾಲ್ವರು ಸಾವನ್ನಪ್ಪಿರುವ ಘಟನೆ ನಡೆದಿದೆ. ಮೈಸೂರು ಜಿಲ್ಲೆಯ ಯರೆಗನಹಳ್ಳಿಯಲ್ಲಿ ಒಂದೇ ಕುಟುಂಬದ ನಾಲ್ವರು ಅನುಮಾನಸ್ಪದವಾಗಿ ಸಾವನ್ನಪ್ಪಿದ್ದಾರೆ ಎಂದು ವರದಿಯಾಗಿದ್ದು, ಬಟ್ಟೆ ಐರನ್ ಮಾಡುತ್ತಿದ್ದ ಮಂಜುಳ (39), ಕುಮಾರಸ್ವಾಮಿ (45) ಹಾಗೂ ಅರ್ಚನಾ (19), ಸ್ವಾತಿ (17) ಎಂಬುವರ ಶವಗಳು ಪತ್ತೆಯಾಗಿವೆ. ಘಟನೆ ಕುರಿತು ಸ್ನೇಹಿತರು ಮಾಹಿತಿ ನೀಡಿದ್ದು, ಎರಡು ದಿನದ ಹಿಂದೆಯೇ ಇವರು ಸಾವನ್ನಪ್ಪಿದ್ದಾರೆ. ಮೃತರು ಚಿಕ್ಕಮಗಳೂರು ಜಿಲ್ಲೆಯ ಸಖರಾಯಪಟ್ಟಣದವರು, ಕಳೆದ ೩೦ ವರ್ಷಗಳಿಂದ ಇಲ್ಲೇ ವಾಸವಾಗಿದ್ದಾರೆ. ಸೋಮವಾರ ರಾತ್ರಿಯಿಂದ ಬಾಗಿಲು ತೆರೆಯದೇ ಇದ್ದಾಗ ಅನುಮಾನ ಬಂದು ನೋಡಿದಾಗ ನಾಲ್ವರ ಶವಗಳು ಪತ್ತೆಯಾಗಿವೆ ಎಂದು ತಿಳಿಸಿದ್ದಾರೆ.
ನವದೆಹಲಿ : ಕೇಂದ್ರ ಲೋಕಸೇವಾ ಆಯೋಗ (ಯುಪಿಎಸ್ಸಿ) 2024ನೇ ಸಾಲಿನ ಇಂಡಿಯನ್ ಎಕನಾಮಿಕ್ ಸರ್ವಿಸ್ (ಐಇಎಸ್) / ಇಂಡಿಯನ್ ಸ್ಟ್ಯಾಟಿಸ್ಟಿಕಲ್ ಸರ್ವಿಸ್ ಎಕ್ಸಾಮಿನೇಷನ್ (ಐಎಸ್ಎಸ್ಇ) 2024ರ ವೇಳಾಪಟ್ಟಿಯನ್ನು ಅಧಿಕೃತ ವೆಬ್ಸೈಟ್ನಲ್ಲಿ ಪ್ರಕಟಿಸಿದೆ. ಪರೀಕ್ಷೆಗೆ ಹಾಜರಾಗುವ ಅಭ್ಯರ್ಥಿಗಳು ಬಿಡುಗಡೆಯಾದ ವೇಳಾಪಟ್ಟಿಯ ಪ್ರಕಾರ ಅದಕ್ಕೆ ಅನುಗುಣವಾಗಿ ತಯಾರಿ ಪ್ರಾರಂಭಿಸಬಹುದು. ವಿದ್ಯಾರ್ಥಿಗಳು ಅಧಿಕೃತ ವೆಬ್ಸೈಟ್ಗೆ ಭೇಟಿ ನೀಡುವ ಮೂಲಕ ವಿವರವಾದ ವೇಳಾಪಟ್ಟಿಯನ್ನು ಪರಿಶೀಲಿಸಬಹುದು. ಯುಪಿಎಸ್ಸಿ ಐಇಎಸ್ / ಐಎಸ್ಎಸ್ಇ 2024 ಗೆ ಸಂಬಂಧಿಸಿದ ಹೆಚ್ಚಿನ ನವೀಕರಣಗಳು ಮತ್ತು ಮಾಹಿತಿಗಾಗಿ ಅರ್ಜಿದಾರರು ಇಲ್ಲಿ ಅಥವಾ ಅಧಿಕೃತ ವೆಬ್ಸೈಟ್ನಲ್ಲಿ https://upsc.gov.in/ ಪರಿಶೀಲಿಸಬೇಕು. ಪರೀಕ್ಷೆ ವಿವರಗಳು ಯುಪಿಎಸ್ಸಿ ಐಇಎಸ್ / ಐಎಸ್ಎಸ್ಇ 2024 ಪರೀಕ್ಷೆಗಳು ಜೂನ್ 26 ರಿಂದ ನಡೆಯಲಿದ್ದು, ಸಾಮಾನ್ಯ ಇಂಗ್ಲಿಷ್, ಸಾಮಾನ್ಯ ಅಧ್ಯಯನ, ಸಾಮಾನ್ಯ ಅರ್ಥಶಾಸ್ತ್ರ, ಸಂಖ್ಯಾಶಾಸ್ತ್ರ ಮತ್ತು ಭಾರತೀಯ ಅರ್ಥಶಾಸ್ತ್ರ ಸೇರಿದಂತೆ ಹಲವಾರು ವಿಷಯಗಳನ್ನು ಒಳಗೊಂಡಿದೆ. ಆರ್ಥಿಕ ಮತ್ತು ಸಂಖ್ಯಾಶಾಸ್ತ್ರೀಯ ಕ್ಷೇತ್ರಗಳಲ್ಲಿ ವೃತ್ತಿಜೀವನದ ಪ್ರಗತಿಗೆ ಅಗತ್ಯವಾದ ಈ ಪ್ರತಿಷ್ಠಿತ ಪರೀಕ್ಷೆಗಳಿಗೆ ಅಭ್ಯರ್ಥಿಗಳು ವೇಳಾಪಟ್ಟಿಯನ್ನು ಎಚ್ಚರಿಕೆಯಿಂದ ಗಮನಿಸಲು…